Connect with us

ದಿನದ ಸುದ್ದಿ

ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ | ಯುವ‌ ಮುಖಂಡ ರಾಘು ದೊಡ್ಡಮನಿ ಬಿಡುಗಡೆ

Published

on

ಸುದ್ದಿದಿನ, ದಾವಣಗೆರೆ : ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ಮೋದಿ ವಿರುದ್ಧ ಪೋಸ್ಟ್ ಹಾಕಿದ್ದಾರೆಂಬ ಆರೋಪದ ಮೇಲೆ ಮಂಗಳವಾರ ಬಂಧನಕ್ಕೆ ಒಳಗಾಗಿದ್ದ ಕರ್ನಾಟಕ ವಾಲ್ಮೀಕಿ ಯುವ ವೇದಿಕೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ರಣಧೀರ ಪಡೆಯ ದಾವಣಗೆರೆ ಜಿಲ್ಲಾ ಘಟಕದ ಅಧ್ಯಕ್ಷ ರಾಘು ದೊಡ್ಡಮನಿ ಬುಧವಾರ ಜಾಮೀನಿನ ಮೂಲಕ ಬಿಡುಗಡೆಯಾದರು.

ಘಟನೆ ಹಿನ್ನೆಲೆ

ಗುಜರಾತ್ ವೈರಸ್, ಮೋದಿ ವೈರಸ್ ಎಂಬ ಪೋಸ್ಟ್  ಮಾಡಿ ಪ್ರಧಾನಿ ಮೋದಿಯವರನ್ನುಸಾಮಾಜಿಕ ಜಾಲತಾಣದಲ್ಲಿ ಅವಮಾನಿಸಿದ್ದಾರೆಂದು ಮಂಗಳವಾರ ಕರ್ನಾಟಕ ವಾಲ್ಮೀಕಿ ಯುವ ವೇದಿಕೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ರಣಧೀರ ಪಡೆಯ ದಾವಣಗೆರೆ ಜಿಲ್ಲಾ ಘಟಕದ ಅಧ್ಯಕ್ಷ ರಾಘು ದೊಡ್ಡಮನಿ ಅವರನ್ನು ವಿದ್ಯಾನಗರ ಪೊಲೀಸ್ ಠಾಣೆಯ ವಿನಯ್ ಎಂಬ ಪೊಲೀಸ್ ಇನ್ಸ್‍ಪೆಕ್ಟರ್ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಸುಮೋಟೋ ಪ್ರಕರಣ ಹಾಗೂ ಯುವ ಬಿಜೆಪಿಯ ಸಹ ದೂರಿನನ್ವಯ ಬಂದಿಸಲಾಗಿತ್ತು.

ಶಿವಮೊಗ್ಗದಲ್ಲಿ ಪತ್ತೆಯಾದ ಎಂಟು ಮಂದಿ ಕೊರೋನಾ ಪಾಸಿಟಿವ್ ಸೊಂಕಿತರು ಗುಜರಾತಿನ ‘ನಮೋ ಟ್ರಂಪ್’ ಕಾರ್ಯಕ್ರಮದಲ್ಲಿ ಭಾಗಿಯಾದ ಬಿಜೆಪಿ ಕಾರ್ಯಕರ್ತರು!! ಇವಾಗ ಇದಕ್ಕೆ ಏನೆಂದು ಹೆಸರಿಡೋಣ? ‘ನಮೋ ವೈರಸ್’? ‘ಬಿಜೆಪಿ ವೈರಸ್’? ‘ಗುಜರಾತ್ ನಂಜು’? ಎಂದು ಫೇಸ್ಬುಕ್ಕಿನಲ್ಲಿ ಬರೆದುಕೊಂಡಿದ್ದರು.

ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಜಾಲತಾಣದಲ್ಲಿ ರಾಜಕೀಯ ದುರುದ್ದೇಶದಿಂದ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿ ತಪ್ಪು ಮಾಹಿತಿ ಹಾರಾಡುತ್ತಿದ್ದ ಈ ವ್ಯಕ್ತಿಯ ಮೇಲೆ ಸೂಕ್ತ ಕಾನೂನು ರೀತಿ ಕ್ರಮ ಕೈಗೊಳ್ಳುವಂತೆ ದಾವಣಗೆರೆಯ ಜಿಲ್ಲಾಧಿಕಾರಿಗಳಾದ ಮಹಾಂತೇಶ ಬೀಳಗಿ ಸರ್ ಹಾಗೂ ದಾವಣಗೆರೆಯ ಪೊಲೀಸ್ ವರಿಷ್ಠಾಧಿಕಾರಿಗಳಾದ ಹನುಮಂತರಾಯ ಇವರಿಗೆ ಬಿಜೆಪಿ ಜಿಲ್ಲಾ ಯುವ ಮೋರ್ಚಾ ವತಿಯಿಂದ ಈ ವ್ಯಕ್ತಿಯ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿಯನ್ನು ಮಾಡಿದ್ದರು.

ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

ರಾಘು ದೊಡ್ಡಮನಿ ಅವರನ್ನು ಬಂಧಿಸಿದ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಕ್ರಮದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಕೊರೋನಾ ಸೋಂಕನ್ನು ಒಂದು ಧರ್ಮವೊಂದಕ್ಕೆ ಕಟ್ಟುವ ಹಲವು ಪ್ರಯತ್ನಗಳು ಸಾಮಾಜಿಕ ಜಾಲತಾಣದಲ್ಲಿ ನಡೆದಿದ್ದಾವೆ. ಮಾದ್ಯಮಗಳು ತಬ್ಲಿಕ್ ವೈರಸ್, ಗರ್ಭಿಣಿ ಕಂಠಕ, ನರ್ಸ್ ನಂಜು ಅಂತೆಲ್ಲಾ ಸುದ್ದಿ ಮಾಡಿದ್ದವು. ಆಗ ಪೊಲೀಸ್ ಇಲಾಖೆ ಯಾಕೆ ಅವರ ಕ್ರಮ ಕೈಗೊಂಡಿಲ್ಲ ಎಂದು ಹಲವರು ಕಮೆಂಟ್ ಮಾಡುವುದರ ಮೂಲಕ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಫೇಸ್ ಬುಕ್ ಪೋಸ್ಟ್ ಗಳು

ರಾಘು ದೊಡ್ಡಮನಿ ಬಂಧನ ವಿರೋಧಿಸಿ ಹಲವು ಸಂಘಟನೆಗಳು ಫೇಸ್ ಬುಕ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿದ ಪೋಸ್ಟ್ ಗಳು ಹೀಗಿವೆ.

1.       “ಕರ್ನಾಟಕ ವಾಲ್ಮೀಕಿ ಯುವ ವೇದಿಕೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ದಾವಣಗೆರೆಯ ಕನ್ನಡಪರ ಹೋರಾಟಗಾರ ರಾಘು ದೊಡ್ಡಮನಿ ಅವರ ವಿರುದ್ಧ ದಾಖಲಿಸಿರುವ ಪ್ರಕರಣವನ್ನು ಕೈಬಿಡಿ.‌ ಕೊರೊನಾ ವೈರಸ್ ಹರಡದಂತೆ ಜವಾಬ್ದಾರಿ ನಿರ್ವಹಿಸುತ್ತಿರುವ ಜಿಲ್ಲಾಡಳಿತದ ಕೆಲಸವನ್ನು ನಿರಂತರವಾಗಿ ರಾಘು ದೊಡಮಣಿ ಬೆಂಬಲಿಸುತ್ತಾ ಬಂದಿದ್ದಾರೆ.

ಈ ಸೋಂಕಿಗೆ ಧರ್ಮದ ಲೇಪನ ಹಚ್ಚುತ್ತಿದ್ದವರನ್ನು ಪ್ರಶ್ನೆ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಬರೆದರು’ ಎಂಬ ಕಾರಣಕ್ಕೆ ಕೇಸ್ ದಾಖಲಿಸಿರುವುದು ಘನತೆಯ ಕೆಲಸವಂತೂ ಅಲ್ಲ. ಪ್ರಕರಣವನ್ನು ಕೈ ಬಿಡಬೇಕೆಂದು ದಾವಣಗೆರೆ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಕರ್ನಾಟಕ ವಾಲ್ಮೀಕಿ ಯುವ ವೇದಿಕೆ ವತಿಯಿಂದ ಆಗ್ರಹಿಸುತ್ತೇವೆ ಎಂದು ರಾಜ್ಯಾಧ್ಯಕ್ಷರಾದ ವಿಜಯ್ ತಳವಾರ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

2.     ಹಾಗೆಯೇ ದಾವಣಗೆರೆಯ ಕನ್ನಡಪರ ಹೋರಾಟಗಾರ ರಾಘು ದೊಡ್ಡಮನಿ ಅವರ ವಿರುದ್ಧ ದಾಖಲಿಸಿರುವ ಪ್ರಕರಣವನ್ನು ಕೈಬಿಡಿ.‌ ಕೊರೊನಾ ವೈರಸ್ ಹರಡದಂತೆ ಜವಾಬ್ದಾರಿ ನಿರ್ವಹಿಸುತ್ತಿರುವ ದಾವಣಗೆರೆ ಜಿಲ್ಲಾಡಳಿತದ ಕೆಲಸವನ್ನು ನಿರಂತರವಾಗಿ ರಾಘು ದೊಡ್ಡಮನಿ ಬೆಂಬಲಿಸುತ್ತಾ ಬಂದಿದ್ದಾರೆ.

ಕೊರೊನಾ ಸೋಂಕಿಗೆ ಧರ್ಮದ ಲೇಪನ ಹಚ್ಚುತ್ತಿದ್ದವರನ್ನು ಪ್ರಶ್ನೆ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಬರೆದರು’ ಎಂಬ ಕಾರಣಕ್ಕೆ ಕೇಸ್ ದಾಖಲಿಸಿರುವುದು ಘನತೆಯ ಕೆಲಸವಂತೂ ಅಲ್ಲ. ಬಂಧನ ಮತ್ತಿತರ ಅನಗತ್ಯ ಕ್ರಮವನ್ನು ಕೈಬಿಡಬೇಕೆಂದು ಒತ್ತಾಯಿಸುತ್ತೇವೆ.

ಈಗ ಕರ್ನಾಟಕ ರಣಧೀರ ಪಡೆಯ ದಾವಣಗೆರೆ ಜಿಲ್ಲಾ ಘಟಕದ ಅಧ್ಯಕ್ಷರಾಗಿರುವ ರಾಘು ದೊಡ್ಡಮನಿ ಮಾನವ ಬಂಧುತ್ವ ವೇದಿಕೆಯ ಸಕ್ರಿಯರಾಗಿ ಕೆಲಸ ಮಾಡಿದವರು. ದುರುದ್ದೇಶಿತ ಈ ಪ್ರಕರಣ ಅಭಿವ್ಯಕ್ತಿಯ ಮೇಲಿನ ಹಲ್ಲೆ. ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿದಿನ ಧರ್ಮದ್ವೇಷದ ಹೇಳಿಕೆ ನೀಡುವವರನ್ನು ಬಂಧಿಸುವ ಬದಲು, ಧರ್ಮದ ದುರ್ಬಳಕೆ ಖಂಡಿಸಿದವರ ಮೇಲೆ ದೂರು ದಾಖಲಿಸಿರುವುದು ಪೋಲಿಸರ ಪಕ್ಷಪಾತದ ಧೋರಣೆ ಯನ್ನು ‘ಮಾನವ ಬಂಧುತ್ವ ವೇದಿಕೆ- ಕರ್ನಾಟಕ’ ರಾಜ್ಯ ಸಮಿತಿ ಖಂಡಿಸುತ್ತದೆ ಎಂದು ರಾಜ್ಯ ಸಂಚಾಲಕರಾದ ರವೀಂದ್ರ ನಾಯ್ಕರ್ ಪೋಸ್ಟ್ ಮಾಡಿದ್ದಾರೆ.


ಹತ್ತು ವರ್ಷಗಳಿಂದ ನಾನು ಜನಪರ ಕಾಳಜಿಯುಳ್ಳ ಕೆಲಸಗಳನ್ನು ಸಂಘಟನೆಗಳ ಮೂಲಕ ಮಾಡುತ್ತಾ ಬಂದಿದ್ದೇನೆ. ಆಳುವ ಸರ್ಕಾರಗಳ ಲೋಪದೋಷಗಳನ್ನು ಟೀಕಿಸುತ್ತಲೂ ಇರುತ್ತೇನೆ. ಇದು ನಮ್ಮ ಸಂವಿಧಾನ ನಮಗೆ ನೀಡಿರುವ ಅಭಿವ್ಯಕ್ತಿ ಸ್ವಾತಂತ್ರ್ಯ. ನನ್ನ ಬಂಧನಕ್ಕೆ ಸಂಬಂಧಿಸಿದಂತೆ, ಹೋರಾಟದ ದನಿಗಳನ್ನು, ತಪ್ಪನ್ನು ಪ್ರಶ್ನಿಸುವ ಹಕ್ಕನ್ನು ಕಾನೂನಿನ ಮೂಲಕ ಹತ್ತಿಕ್ಕುವ ಪ್ರಯತ್ನ ನಡೆದಿದೆ. ಈ ಘಟನೆ ನನಗೆ ಇನ್ನೂ ಹೆಚ್ಚು ಹೆಚ್ಚು ಸಾಮಾಜಿಕ‌ ಬದಲಾವಣೆಯ ಕಾರ್ಯಗಳಲ್ಲಿ ನನ್ನನ್ನು ತೊಡಗಿಸಿ ಕೊಳ್ಳುವಂತೆ ಮಾಡಿದೆ”‌.

| ರಾಘು ದೊಡ್ಡಮನಿ, ಅಧ್ಯಕ್ಷರು
ಕರ್ನಾಟಕ ರಣಧೀರ ಪಡೆ
ದಾವಣಗೆರೆ ಜಿಲ್ಲಾ ಘಟಕ


ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ಕಿಸಿ ಅಭಿಪ್ರಾಯಗಳನ್ನು ಓದಿ

https://www.facebook.com/raghu.doddamani.948

ಮಿತ್ರ ರಾಘು ದೊಡ್ಡಮನಿ ಸಮಾಜಿಕ ಕಳಕಳಿ ಇರುವ ನಾಯಕ ಇವರ ಮೇಲೆ ದಾಖಲಾದ ಪ್ರಕರಣ ವನ್ನು ಕೈ ಬಿಡಬೇಕು ಒಂದು ವೇಳೆ ಅವರು" ಯಾವ ನಂಜು' ಎಂಬ ಬಗ್ಗೆ…

Posted by Shaik Abidali Bavikatte on Wednesday, 20 May 2020

https://m.facebook.com/story.php?story_fbid=1174728689533045&id=100009877756258

https://m.facebook.com/story.php?story_fbid=3307387082613038&id=100000253368436

https://m.facebook.com/story.php?story_fbid=3221777811218777&id=100001597687948

https://m.facebook.com/story.php?story_fbid=2692513617520342&id=100002851899686

https://m.facebook.com/photo.php?fbid=2677375149214971&id=100008275358091&set=a.1788597198092775

https://m.facebook.com/story.php?story_fbid=1410836952434351&id=100005241791811

https://m.facebook.com/story.php?story_fbid=1410836952434351&id=100005241791811

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

Published

on

ಸುದ್ದಿದಿನ,ದಾವಣಗೆರೆ:ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಏಪ್ರಿಲ್ 24 ಮತ್ತು 25 ರಂದು ಆಯೋಜಿಸಲಾಗಿದೆ.

ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ. ತರಬೇತಿಯು ದಾವಣಗೆರೆ ಜಿಲ್ಲೆಯ ರೈತಿಗೆ ಮಾತ್ರ ಇರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಆಸ್ತಿ ಕಲಹವೇ ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆಗೆ ಕಾರಣವಾಯ್ತಾ..?

Published

on

ಸುದ್ದಿದಿನಡೆಸ್ಕ್:ಭಾನುವಾರ ಹತ್ಯೆಯಾದ ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆ ಹಿಂದೆ ಆಸ್ತಿ ಕಲಹವಿರಬಹುದು ಎಂಬ ಆರೋಪಗಳು ಕೇಳಿ ಬರುತ್ತಿವೆ.

ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಕೋಟ್ಯಂತರ ಮೌಲ್ಯದ ಭೂಮಿಯನ್ನು ಖರೀದಿ ಮಾಡಿದ್ದ ಅವರು ಅದನ್ನು ತಮ್ಮ ಸಹೋದರಿಯರ ಹೆಸರಿನಲ್ಲಿ ನೋಂದಾಯಿಸಿದ್ದರು. ಇದಕ್ಕೆ ಪತ್ನಿ ಪಲ್ಲವಿಯವರ ಆಕ್ಷೇಪ ಇತ್ತು ಎನ್ನಲಾಗುತ್ತಿದೆ.

ಆದರೆ ಆಸ್ತಿ ವಿವಾದವೇ ಎಲ್ಲದಕ್ಕೂ ಕಾರಣವಾಯ್ತಾ? ಎಂಬ ಅನುಮಾನ ವ್ಯಕ್ತವಾಗುತ್ತಿದೆ. ಓಂ ಪ್ರಕಾಶ್ ಅವರು 2017 ರಲ್ಲಿ ನಿವೃತ್ತಿಗೊಂಡಿದ್ದರು. ನಿವೃತ್ತಿಗೂ ಮೊದಲು ಹಾಗೂ ನಂತರದಲ್ಲಿ ಅವರು ಬೆಂಗಳೂರು ನಗರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಆಸ್ತಿ ಖರೀದಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಳ್ಳಾರಿ ಪೊಲೀಸ್ ಅಧಿಕಾರಿಗಳ ಪಡಿತರ ಅಕ್ಕಿ ಕಳ್ಳಾಟ : ಠಾಣೆ ಮುಂದೆ ಇದ್ದ ಲಾರಿ ಮಾಯ ; ಈ ಸ್ಟೋರಿ ಓದಿ..!

Published

on

  • ಗಿರೀಶ್ ಕುಮಾರ್ ಗೌಡ,ಬಳ್ಳಾರಿ

ಸುದ್ದಿದಿನಡೆಸ್ಕ್:ಗಣಿನಾಡು ಬಳ್ಳಾರಿ ಜಿಲ್ಲೆಯ ವಿವಿಧ ತಾಲೂಕಿನಲ್ಲಿ ಅಕ್ರಮ ಪಡಿತರ ಅಕ್ಕಿ ರಾತ್ರಿ ವೇಳೆ ಜಿಲ್ಲೆಯಿಂದ ಬೇರೆ ಬೇರೆ ರಾಜ್ಯಗಳಿಗೆ ಲಾರಿಗಳಲ್ಲಿ ಕಳ್ಳತನದ ಮೂಲಕ ಸಾಗಾಟ ಮಾಡುತ್ತಿರುವ ಅಂಶಗಳು ಬೆಳಕಿಗೆ ಬಂದಿವೆ.
ಅದರಲ್ಲಿ 10 ಲಕ್ಷ ಮೌಲ್ಯದ ಅನುಮಾನ ಪಡಿತರ ಅಕ್ಕಿ ಲಾರಿ, ಮದ್ಯ ರಾತ್ರಿಯಿಂದ ಬೆಳಿಗ್ಗೆ 9ಗಂಟೆವರೆಗೆ ಇದ್ದ ಲಾರಿ ನಂತರ ಇಲ್ಲದೆ ಇರೋದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.

ಬಳ್ಳಾರಿ ನಗರದಲ್ಲಿ ಕೆಲ ದಿನಗಳ ಹಿಂದೆ ( ರಾತ್ರಿ 2.30 ಗಂಟೆ) ಸಮಯದಲ್ಲಿ 10 ಲಕ್ಷ ರೂಪಾಯಿ ಮೌಲ್ಯದ ಪಡಿತರ ಅಕ್ಕಿ ವಾಹನವನ್ನು ಬಳ್ಳಾರಿ ಕೃಷಿ ಉತ್ಪನ್ನ ಮಾರುಕಟ್ಟೆಯ ಪೊಲೀಸ ಅಧಿಕಾರಿಗಳು ತಪಾಸಣೆ ಮಾಡಿ ಠಾಣೆಗೆ ತಂದು ನಿಲ್ಲಿಸಿಕೊಂಡಿದ್ದರು.

ರಾಯಚೂರುನಿಂದ ಛತ್ತೀಸ್ಗಢದ ವರೆಗೆ ಪಡಿತರ ಅಕ್ಕಿ ಸಾಗಾಟ

ರಾಯಚೂರದಿಂದ ಛತ್ತೀಸ್ಗಢಕ್ಕೆ ಸಾಗಣೆಯ ಮಾಡುತ್ತಿದ್ದ ವಾಹನವಾಗಿತ್ತು ವಾಹನಕ್ಕೆ ಆರ್.ಕೆ ಎಂಟರ್ಪ್ರೈಸಸ್ ರಾಯಚೂರು,ಬಳ್ಳಾರಿ ಎಂದು ಬಿಲ್ ಹಾಕಿ ರಾಯಚೂರುದಿಂದ ಛತ್ತೀಸ್ ಗಡಿಗೆ ಅಕ್ಕಿ ಸರಬರಾಜು ಮಾಡುತ್ತಿದ್ದ ಮತ್ತೊಂದು ಬಿಲ್ ಹಾಕಿ ಕಳಿಸಲಾಗಿತ್ತು. ಈ ವಾಹನಕ್ಕೆ ಬಳ್ಳಾರಿಯ ಹವಂಬಾವಿ ಪ್ರದೇಶದಲ್ಲಿ ಕಳಸಾಗಣಿಕೆ ಪಡಿತರ ಅಕ್ಕಿಯನ್ನು ತುಂಬಿದ್ದಾರೆ. ಇದಕ್ಕೆ ಸ್ಥಳೀಯ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಕೆಲ ಸಿಬ್ಬಂದಿಗಳು ಮಾತ್ರ ಇದೆ ಎನ್ನುವ ಆರೋಪ ಇದೆ.

ಮಧ್ಯರಾತ್ರಿದಿಂದ ಬೆಳಿಗ್ಗೆ 9 ಗಂಟೆಗೆ ಠಾಣೆಯಲ್ಲಿ ಲಾರಿ ವಾಹನವನ್ನು ಇಟ್ಟುಕೊಂಡು ಎಲ್ಲವೂ ಸರಿ ಇದ್ದಾವೆ ಎಂದು ಗಾಡಿಯನ್ನು ಬಿಟ್ಟು ಕಳಿಸಿರುವುದು ಎಷ್ಟರ ಮಟ್ಟಿಗೆ ಸರಿ ಎನ್ನುವ ಸಾರ್ವಜನಿಕ‌ ಪ್ರಶ್ನೆ.

ಈ ಠಾಣೆಗೆ ನೂತನವಾಗಿ ಬಂದಿರುವ ಪೊಲೀಸ್ ಅಧಿಕಾರಿ ತೋರಣಗಲ್ಲು, ಸಂಡೂರು, ಲೋಕಾಯುಕ್ತದಲ್ಲಿ ಸೇವೆ ಸಲ್ಲಿಸಿ ಬಳ್ಳಾರಿ ಎಪಿಎಂಸಿ ಠಾಣಿಗೆ ವರ್ಗಾವಣೆ ಆಗಿರುವ ರಫೀಕ್ ಅವರ ಮೇಲೆ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ ಸಾರ್ವಜನಿಕರು.

ಈಗಾಗಲೇ ಪಡಿತರ ಕಳಸಾಗಾಣಿಕೆ ದಂದೆ ನಡೆಯುತ್ತಿದ್ದು ಕಣ್ಣಿಗೆ ಕಂಡು ಕಾಣದಂತೆ ನಡೆಯುತ್ತದೆ ಇಂತಹ ಸಂದರ್ಭದಲ್ಲಿ ರಾಯಚೂರಿನಿಂದ ಛತ್ತೀಸ್ಗಢ ಗೆ ಬಿಲ್, ಬಳ್ಳಾರಿಯಲ್ಲಿ ಅಕ್ಕಿ, ಪೊಲೀಸ್ ಠಾಣೆಯಲ್ಲಿ ಗಾಡಿ,ಯಾವುದೇ ಪ್ರಕರಣ ಇಲ್ಲದೆ ಬಿಟ್ಟು ಕಳಿಸಿರುವುದು ಆಶ್ಚರ್ಯವಾಗಿದೆ. ಇನ್ನು ಈ ವಿಚಾರವಾಗಿ ಅಧಿಕಾರಿಗಳಿಗೆ ಕೇಳಿದರೆ ಇಲ್ಲ ನಮಗೆ ಗೊತ್ತಿಲ್ಲ ಎನ್ನುವ ಬೇಜವಾಬ್ದಾರಿ ಮಾತನಾಡುತ್ತಾರೆ.

ಲಾರಿ ಬಿಲ್ ಚೆಕ್ ಮಾಡಿದ್ದು ಯಾರು ?

ಗಣಿನಾಡು ಬಳ್ಳಾರಿ ನಗರದಲ್ಲಿ ಪೊಲೀಸರು ಲಾರಿ ಬಿಲ್ ಗಳು ಮದ್ಯರಾತ್ರಿ ಚೆಕ್ ಮಾಡಿದ್ದು ಯಾರು, ಸಾಧಾರಣ ಟೈಮ್ ನಲ್ಲಿ ಬಂದು ನೋಡಲು ಬರದೇ ಇರುವ ಅಧಿಕಾರಿಗಳು ಮದ್ಯ ರಾತ್ರಿ ಬಂದು ನೋಡಿರಬಹುದಾ. ಈಗಲೇ ರಫೀಕ್ ಅವರ ಮೇಲೆ ಕೆಲ ಸಿಬ್ಬಂದಿ ಮೇಲೆ ಆರೋಪ ಇವೆ. ಅಕ್ರಮ ಚಟವಟೆಕೆಗಳಿಗೆ ನಿರ್ದೇಶಕ ಕೀರ್ತಿ ಇದೇ ಲೋಕಾಯುಕ್ತ ಸಮಯದಲ್ಲಿ ಬಹುತೇಕ ಬಹಳ ಸಮಸ್ಯೆಗಳನ್ನು ಮಾಡಿದ್ದನ್ನು ನೊಂದವರು ತಿಳಿಸಿದ್ದಾರೆ.

“ಸಚಿವ ಸಂತೋಷ ಲಾಡ್ ಹೆಸರು ಹೇಳುವ ರಫೀಕ್”
ಠಾಣೆಯ ಅಧಿಕಾರಿ ರಫೀಕ್ ಪದೇ ಪದೇ ಸಚಿವ ಸಂತೋಷ್ ಲಾಡ್ ಹೆಸರು ಹೇಳಿಕೊಂಡು ಬಂದಿದ್ದಾನೆ ಎನ್ನುವ ಆರೋಪ ಸಹ ಇದೆ. ಈ ಅಕ್ರಮ ಅಕ್ಕಿ ಪಡಿತರದಲ್ಲಿ ಪೊಲೀಸ್ ಠಾಣೆಗೆ ಮಾಮೂಲು ಸಹ ಇದೆ ಎನ್ನುವ ಮಾಹಿತಿ ಸಹ ಇದೆ.

ಎಸ್ಪಿ ಅವರ ಕ್ರಮ ಯಾವಾಗ ?

ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ.ಶೋಭಾರಾಣಿ ಅವರು ಯಾವ ? ರೀತಿಯಲ್ಲಿ ಕ್ರಮ ತೆಗೆದುಕೊಳ್ಳುತ್ತಾರೋ ಕಾದು ನೋಡಬೇಕಿದೆ. ಜಿಲ್ಲೆಗೆ ಬಳ್ಳಾರಿ ಪೊಲೀಸ್ ವರಿಷ್ಟಾಧಿಕಾರಿ ಅಧಿಕಾರ ಸ್ವೀಕರಿದ ನಂತರ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಬಿದ್ದಿದೆವೇ ಎನ್ನುವ ಅನುಮಾನ ಸಹ ಇದೆ ಎನ್ನುವ ಮಾತು ಸಾರ್ವಜನಿಕರಲ್ಲಿ ಕೇಳಿ ಬರುತ್ತಿದೆ.

ಒಟ್ಟಾರೆಯಾಗಿ ಸಿಎಂ ಸಿದ್ದರಾಮಯ್ಯ ಬಡವರಿಗೆ ನೀಡುವ ಪಡಿತರ ಅಕ್ಕಿ ಕಳ್ಳರ ಪಾಲಾಗುತ್ತಿದೆ, ಇನ್ನು ಪಡಿತರ ಅಕ್ಕಿಯ ವಿತರಕರು 1 ಕಿಲೋಗ್ರಾಂ ಗೆ 10 ರಿಂದ 12 ರೂಪಾಯಿ ಕೊಂಡುಕೊಳ್ಳುತ್ತಾರೆ ಎನ್ನುವ ಮಾಹಿತಿ ಸಹ ಇದೆ. ಇವರ ವಿರುದ್ಧ ಹಾಗೂ ಪಡಿತರ ಅಕ್ಕಿ ಮಾರಾಟ ಮಾಡುವ ಸಾರ್ವಜನಿಕರ ಮೇಲೆ ಕ್ರಮ ತೆಗೆದುಕೊಳ್ಳಬೇಕಿದೆ‌.

ಒಟ್ಟಾರೆಯಾಗಿ ಬಳ್ಳಾರಿ ಜಿಲ್ಲೆಯ ವಿವಿಧ ಠಾಣೆ ವ್ಯಾಪ್ತಿ ಅಧಿಕಾರಿಗಳಿಗೆ ಎಸ್ಪಿ ಅವರು ಯಾವ ರೀತಿ ಕ್ರಮ ತೆಗೆದುಕೊಳ್ಳುವರು ಕಾದು ನೋಡೊಣ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending