ದಿನದ ಸುದ್ದಿ

ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ | ಯುವ‌ ಮುಖಂಡ ರಾಘು ದೊಡ್ಡಮನಿ ಬಿಡುಗಡೆ

Published

on

ಸುದ್ದಿದಿನ, ದಾವಣಗೆರೆ : ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ಮೋದಿ ವಿರುದ್ಧ ಪೋಸ್ಟ್ ಹಾಕಿದ್ದಾರೆಂಬ ಆರೋಪದ ಮೇಲೆ ಮಂಗಳವಾರ ಬಂಧನಕ್ಕೆ ಒಳಗಾಗಿದ್ದ ಕರ್ನಾಟಕ ವಾಲ್ಮೀಕಿ ಯುವ ವೇದಿಕೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ರಣಧೀರ ಪಡೆಯ ದಾವಣಗೆರೆ ಜಿಲ್ಲಾ ಘಟಕದ ಅಧ್ಯಕ್ಷ ರಾಘು ದೊಡ್ಡಮನಿ ಬುಧವಾರ ಜಾಮೀನಿನ ಮೂಲಕ ಬಿಡುಗಡೆಯಾದರು.

ಘಟನೆ ಹಿನ್ನೆಲೆ

ಗುಜರಾತ್ ವೈರಸ್, ಮೋದಿ ವೈರಸ್ ಎಂಬ ಪೋಸ್ಟ್  ಮಾಡಿ ಪ್ರಧಾನಿ ಮೋದಿಯವರನ್ನುಸಾಮಾಜಿಕ ಜಾಲತಾಣದಲ್ಲಿ ಅವಮಾನಿಸಿದ್ದಾರೆಂದು ಮಂಗಳವಾರ ಕರ್ನಾಟಕ ವಾಲ್ಮೀಕಿ ಯುವ ವೇದಿಕೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ರಣಧೀರ ಪಡೆಯ ದಾವಣಗೆರೆ ಜಿಲ್ಲಾ ಘಟಕದ ಅಧ್ಯಕ್ಷ ರಾಘು ದೊಡ್ಡಮನಿ ಅವರನ್ನು ವಿದ್ಯಾನಗರ ಪೊಲೀಸ್ ಠಾಣೆಯ ವಿನಯ್ ಎಂಬ ಪೊಲೀಸ್ ಇನ್ಸ್‍ಪೆಕ್ಟರ್ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಸುಮೋಟೋ ಪ್ರಕರಣ ಹಾಗೂ ಯುವ ಬಿಜೆಪಿಯ ಸಹ ದೂರಿನನ್ವಯ ಬಂದಿಸಲಾಗಿತ್ತು.

ಶಿವಮೊಗ್ಗದಲ್ಲಿ ಪತ್ತೆಯಾದ ಎಂಟು ಮಂದಿ ಕೊರೋನಾ ಪಾಸಿಟಿವ್ ಸೊಂಕಿತರು ಗುಜರಾತಿನ ‘ನಮೋ ಟ್ರಂಪ್’ ಕಾರ್ಯಕ್ರಮದಲ್ಲಿ ಭಾಗಿಯಾದ ಬಿಜೆಪಿ ಕಾರ್ಯಕರ್ತರು!! ಇವಾಗ ಇದಕ್ಕೆ ಏನೆಂದು ಹೆಸರಿಡೋಣ? ‘ನಮೋ ವೈರಸ್’? ‘ಬಿಜೆಪಿ ವೈರಸ್’? ‘ಗುಜರಾತ್ ನಂಜು’? ಎಂದು ಫೇಸ್ಬುಕ್ಕಿನಲ್ಲಿ ಬರೆದುಕೊಂಡಿದ್ದರು.

ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಜಾಲತಾಣದಲ್ಲಿ ರಾಜಕೀಯ ದುರುದ್ದೇಶದಿಂದ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿ ತಪ್ಪು ಮಾಹಿತಿ ಹಾರಾಡುತ್ತಿದ್ದ ಈ ವ್ಯಕ್ತಿಯ ಮೇಲೆ ಸೂಕ್ತ ಕಾನೂನು ರೀತಿ ಕ್ರಮ ಕೈಗೊಳ್ಳುವಂತೆ ದಾವಣಗೆರೆಯ ಜಿಲ್ಲಾಧಿಕಾರಿಗಳಾದ ಮಹಾಂತೇಶ ಬೀಳಗಿ ಸರ್ ಹಾಗೂ ದಾವಣಗೆರೆಯ ಪೊಲೀಸ್ ವರಿಷ್ಠಾಧಿಕಾರಿಗಳಾದ ಹನುಮಂತರಾಯ ಇವರಿಗೆ ಬಿಜೆಪಿ ಜಿಲ್ಲಾ ಯುವ ಮೋರ್ಚಾ ವತಿಯಿಂದ ಈ ವ್ಯಕ್ತಿಯ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿಯನ್ನು ಮಾಡಿದ್ದರು.

ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

ರಾಘು ದೊಡ್ಡಮನಿ ಅವರನ್ನು ಬಂಧಿಸಿದ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಕ್ರಮದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಕೊರೋನಾ ಸೋಂಕನ್ನು ಒಂದು ಧರ್ಮವೊಂದಕ್ಕೆ ಕಟ್ಟುವ ಹಲವು ಪ್ರಯತ್ನಗಳು ಸಾಮಾಜಿಕ ಜಾಲತಾಣದಲ್ಲಿ ನಡೆದಿದ್ದಾವೆ. ಮಾದ್ಯಮಗಳು ತಬ್ಲಿಕ್ ವೈರಸ್, ಗರ್ಭಿಣಿ ಕಂಠಕ, ನರ್ಸ್ ನಂಜು ಅಂತೆಲ್ಲಾ ಸುದ್ದಿ ಮಾಡಿದ್ದವು. ಆಗ ಪೊಲೀಸ್ ಇಲಾಖೆ ಯಾಕೆ ಅವರ ಕ್ರಮ ಕೈಗೊಂಡಿಲ್ಲ ಎಂದು ಹಲವರು ಕಮೆಂಟ್ ಮಾಡುವುದರ ಮೂಲಕ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಫೇಸ್ ಬುಕ್ ಪೋಸ್ಟ್ ಗಳು

ರಾಘು ದೊಡ್ಡಮನಿ ಬಂಧನ ವಿರೋಧಿಸಿ ಹಲವು ಸಂಘಟನೆಗಳು ಫೇಸ್ ಬುಕ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿದ ಪೋಸ್ಟ್ ಗಳು ಹೀಗಿವೆ.

1.       “ಕರ್ನಾಟಕ ವಾಲ್ಮೀಕಿ ಯುವ ವೇದಿಕೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ದಾವಣಗೆರೆಯ ಕನ್ನಡಪರ ಹೋರಾಟಗಾರ ರಾಘು ದೊಡ್ಡಮನಿ ಅವರ ವಿರುದ್ಧ ದಾಖಲಿಸಿರುವ ಪ್ರಕರಣವನ್ನು ಕೈಬಿಡಿ.‌ ಕೊರೊನಾ ವೈರಸ್ ಹರಡದಂತೆ ಜವಾಬ್ದಾರಿ ನಿರ್ವಹಿಸುತ್ತಿರುವ ಜಿಲ್ಲಾಡಳಿತದ ಕೆಲಸವನ್ನು ನಿರಂತರವಾಗಿ ರಾಘು ದೊಡಮಣಿ ಬೆಂಬಲಿಸುತ್ತಾ ಬಂದಿದ್ದಾರೆ.

ಈ ಸೋಂಕಿಗೆ ಧರ್ಮದ ಲೇಪನ ಹಚ್ಚುತ್ತಿದ್ದವರನ್ನು ಪ್ರಶ್ನೆ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಬರೆದರು’ ಎಂಬ ಕಾರಣಕ್ಕೆ ಕೇಸ್ ದಾಖಲಿಸಿರುವುದು ಘನತೆಯ ಕೆಲಸವಂತೂ ಅಲ್ಲ. ಪ್ರಕರಣವನ್ನು ಕೈ ಬಿಡಬೇಕೆಂದು ದಾವಣಗೆರೆ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಕರ್ನಾಟಕ ವಾಲ್ಮೀಕಿ ಯುವ ವೇದಿಕೆ ವತಿಯಿಂದ ಆಗ್ರಹಿಸುತ್ತೇವೆ ಎಂದು ರಾಜ್ಯಾಧ್ಯಕ್ಷರಾದ ವಿಜಯ್ ತಳವಾರ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

2.     ಹಾಗೆಯೇ ದಾವಣಗೆರೆಯ ಕನ್ನಡಪರ ಹೋರಾಟಗಾರ ರಾಘು ದೊಡ್ಡಮನಿ ಅವರ ವಿರುದ್ಧ ದಾಖಲಿಸಿರುವ ಪ್ರಕರಣವನ್ನು ಕೈಬಿಡಿ.‌ ಕೊರೊನಾ ವೈರಸ್ ಹರಡದಂತೆ ಜವಾಬ್ದಾರಿ ನಿರ್ವಹಿಸುತ್ತಿರುವ ದಾವಣಗೆರೆ ಜಿಲ್ಲಾಡಳಿತದ ಕೆಲಸವನ್ನು ನಿರಂತರವಾಗಿ ರಾಘು ದೊಡ್ಡಮನಿ ಬೆಂಬಲಿಸುತ್ತಾ ಬಂದಿದ್ದಾರೆ.

ಕೊರೊನಾ ಸೋಂಕಿಗೆ ಧರ್ಮದ ಲೇಪನ ಹಚ್ಚುತ್ತಿದ್ದವರನ್ನು ಪ್ರಶ್ನೆ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಬರೆದರು’ ಎಂಬ ಕಾರಣಕ್ಕೆ ಕೇಸ್ ದಾಖಲಿಸಿರುವುದು ಘನತೆಯ ಕೆಲಸವಂತೂ ಅಲ್ಲ. ಬಂಧನ ಮತ್ತಿತರ ಅನಗತ್ಯ ಕ್ರಮವನ್ನು ಕೈಬಿಡಬೇಕೆಂದು ಒತ್ತಾಯಿಸುತ್ತೇವೆ.

ಈಗ ಕರ್ನಾಟಕ ರಣಧೀರ ಪಡೆಯ ದಾವಣಗೆರೆ ಜಿಲ್ಲಾ ಘಟಕದ ಅಧ್ಯಕ್ಷರಾಗಿರುವ ರಾಘು ದೊಡ್ಡಮನಿ ಮಾನವ ಬಂಧುತ್ವ ವೇದಿಕೆಯ ಸಕ್ರಿಯರಾಗಿ ಕೆಲಸ ಮಾಡಿದವರು. ದುರುದ್ದೇಶಿತ ಈ ಪ್ರಕರಣ ಅಭಿವ್ಯಕ್ತಿಯ ಮೇಲಿನ ಹಲ್ಲೆ. ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿದಿನ ಧರ್ಮದ್ವೇಷದ ಹೇಳಿಕೆ ನೀಡುವವರನ್ನು ಬಂಧಿಸುವ ಬದಲು, ಧರ್ಮದ ದುರ್ಬಳಕೆ ಖಂಡಿಸಿದವರ ಮೇಲೆ ದೂರು ದಾಖಲಿಸಿರುವುದು ಪೋಲಿಸರ ಪಕ್ಷಪಾತದ ಧೋರಣೆ ಯನ್ನು ‘ಮಾನವ ಬಂಧುತ್ವ ವೇದಿಕೆ- ಕರ್ನಾಟಕ’ ರಾಜ್ಯ ಸಮಿತಿ ಖಂಡಿಸುತ್ತದೆ ಎಂದು ರಾಜ್ಯ ಸಂಚಾಲಕರಾದ ರವೀಂದ್ರ ನಾಯ್ಕರ್ ಪೋಸ್ಟ್ ಮಾಡಿದ್ದಾರೆ.


ಹತ್ತು ವರ್ಷಗಳಿಂದ ನಾನು ಜನಪರ ಕಾಳಜಿಯುಳ್ಳ ಕೆಲಸಗಳನ್ನು ಸಂಘಟನೆಗಳ ಮೂಲಕ ಮಾಡುತ್ತಾ ಬಂದಿದ್ದೇನೆ. ಆಳುವ ಸರ್ಕಾರಗಳ ಲೋಪದೋಷಗಳನ್ನು ಟೀಕಿಸುತ್ತಲೂ ಇರುತ್ತೇನೆ. ಇದು ನಮ್ಮ ಸಂವಿಧಾನ ನಮಗೆ ನೀಡಿರುವ ಅಭಿವ್ಯಕ್ತಿ ಸ್ವಾತಂತ್ರ್ಯ. ನನ್ನ ಬಂಧನಕ್ಕೆ ಸಂಬಂಧಿಸಿದಂತೆ, ಹೋರಾಟದ ದನಿಗಳನ್ನು, ತಪ್ಪನ್ನು ಪ್ರಶ್ನಿಸುವ ಹಕ್ಕನ್ನು ಕಾನೂನಿನ ಮೂಲಕ ಹತ್ತಿಕ್ಕುವ ಪ್ರಯತ್ನ ನಡೆದಿದೆ. ಈ ಘಟನೆ ನನಗೆ ಇನ್ನೂ ಹೆಚ್ಚು ಹೆಚ್ಚು ಸಾಮಾಜಿಕ‌ ಬದಲಾವಣೆಯ ಕಾರ್ಯಗಳಲ್ಲಿ ನನ್ನನ್ನು ತೊಡಗಿಸಿ ಕೊಳ್ಳುವಂತೆ ಮಾಡಿದೆ”‌.

| ರಾಘು ದೊಡ್ಡಮನಿ, ಅಧ್ಯಕ್ಷರು
ಕರ್ನಾಟಕ ರಣಧೀರ ಪಡೆ
ದಾವಣಗೆರೆ ಜಿಲ್ಲಾ ಘಟಕ


ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ಕಿಸಿ ಅಭಿಪ್ರಾಯಗಳನ್ನು ಓದಿ

https://www.facebook.com/raghu.doddamani.948

https://m.facebook.com/story.php?story_fbid=1174728689533045&id=100009877756258

https://m.facebook.com/story.php?story_fbid=3307387082613038&id=100000253368436

https://m.facebook.com/story.php?story_fbid=3221777811218777&id=100001597687948

https://m.facebook.com/story.php?story_fbid=2692513617520342&id=100002851899686

https://m.facebook.com/photo.php?fbid=2677375149214971&id=100008275358091&set=a.1788597198092775

https://m.facebook.com/story.php?story_fbid=1410836952434351&id=100005241791811

https://m.facebook.com/story.php?story_fbid=1410836952434351&id=100005241791811

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version