ಸಿನಿ ಸುದ್ದಿ
ಸದ್ಯ ಎಲ್ಲರ ಗಮನವೂ ದಕ್ಷಿಣದತ್ತ..!
- ಚೇತನ್ ನಾಡಿಗೇರ್
ಕಳೆದ ಐದು ತಿಂಗಳಲ್ಲಿ ದಕ್ಷಿಣದ ಮೂರು ಚಿತ್ರಗಳು ಜಗತ್ತಿನಾದ್ಯಂತ ಸುದ್ದಿ ಮಾಡಿದ್ದೇ ಮಾಡಿದ್ದು, ಹಿಂದಿ ಮತ್ತು ದಕ್ಷಿಣ ಭಾರತದ ಚಿತ್ರರಂಗಗಳ ಕುರಿತು ದೊಡ್ಡ ಚರ್ಚೆ ನಡೆಯುತ್ತಿದೆ. ಬಾಲಿವುಡ್ನವರಿಗೆ ಚಿತ್ರ ಮಾಡುವುದಕ್ಕೆ ಬರುವುದಿಲ್ಲ, ಅಲ್ಲಿನ ಸ್ಟಾರ್ಗಳಿಗೆ ಅಹಂಕಾರ ಹೆಚ್ಚಿದೆ.
ಹಿಂದಿ ಚಿತ್ರಗಳು ಬಹಳ intellectual ಅಥವಾ class ಆಗುತ್ತಿರುವುದರಿಂದ ಎಲ್ಲರಿಗೂ ತಲುಪುತ್ತಿಲ್ಲ, ಅಲ್ಲಿ family values ಕಡಿಮೆಯಾಗಿ ಸಮಸ್ಯೆಗಳನ್ನು ಹೆಚ್ಚು ಬಿಂಬಿಸುತ್ತಿರುವುದರಿಂದ ಜನರಿಗೆ ಇಷ್ಟವಾಗುತ್ತಿಲ್ಲ, ಮಾಸ್ ಸಿನಿಮಾಗಳನ್ನು ಮಾಡುವುದಕ್ಕೆ ದಕ್ಷಿಣದವರೇ ಬೆಸ್ಟು, ಒಳ್ಳೆಯ ಸಿನಿಮಾಗಳನ್ನು ಕೊಡಲಿಕ್ಕಾಗದೇ ಬಾಲಿವುಡ್ ಮಂದಿ ದಕ್ಷಿಣದವರನ್ನು ಕಾಪಿ ಮಾಡುತ್ತಿದ್ದಾರೆ, ಹಿಂದಿಯಲ್ಲಿ ರೀಮೇಕ್ ಚಿತ್ರಗಳ ಸಂಖ್ಯೆ ಹೆಚ್ಚುತ್ತಿವೆ … ಹೀಗೆ ನಾನಾ ರೀತಿಯ ಅಭಿಪ್ರಾಯಗಳು ಕೇಳಿಬರುತ್ತಿವೆ. ಹಾಗಾದರೆ, ಬಾಲಿವುಡ್ ಅಥವಾ ಹಿಂದಿ ಚಿತ್ರರಂಗಕ್ಕೆ ಇನ್ನು ಉಳಿಗಾಲವಿಲ್ಲವಾ?
ಎರಡು ವರ್ಷಗಳ ಹಿಂದೆ ಮೊದಲ ಲಾಕ್ಡೌನ್ ಎದುರಾದಾಗ, ಎಲ್ಲ ಕಡೆ ಮಲಯಾಳಂ ಚಿತ್ರಗಳ ಚರ್ಚೆ ನಡೆಯಿತು. ಅಲ್ಲೆಷ್ಟು ಒಳ್ಳೆಯ ಚಿತ್ರಗಳು ಬರುತ್ತಿವೆ, ಅಲ್ಲಿನ ಸ್ಟಾರ್ ನಟರು ಎಂಥೆಂಥಾ ಸಿನಿಮಾಗಳನ್ನು ಮಾಡುತ್ತಿದ್ದಾರೆ, ಮಲಯಾಳಂನಲ್ಲಿ ಎಂತೆಂಥಾ ವೈವಿಧ್ಯಮಯ ಕಥೆಗಳು ಬರುತ್ತಿವೆ ಎಂದೆಲ್ಲಾ ಜನ ಮಾತಾಡಿಕೊಳ್ಳ ತೊಡಗಿದರು.
ಹಾಗೆ ನೋಡಿದರೆ, ಅದು ದಿಢೀರನೇ ಆದ ಬೆಳವಣಿಗೆಯಲ್ಲ. ಮಲಯಾಳಂನಲ್ಲಿ ಎಷ್ಟೋ ವರ್ಷಗಳಿಂದ ಒಳ್ಳೆಯ ಚಿತ್ರಗಳು ಬರುತ್ತಲೇ ಇವೆ. ಅದು ನಮಗೆ ಗೊತ್ತಿರಲಿಲ್ಲ ಅಷ್ಟೇ. ಯಾವುದೇ ಒಂದು ಚಿತ್ರರಂಗದಲ್ಲಿ ರಾತ್ರೋರಾತ್ರಿ ಬದಲಾವಣೆಗಳಾಗುವುದಿಲ್ಲ. ಅದಕ್ಕೆ ಸಾಕಷ್ಟು ವರ್ಷಗಳು ಬೇಕು. ನಿರಂತರ ಪ್ರಯತ್ನಗಳಾಗುತ್ತಲೇ ಇರಬೇಕು. ಯಾವತ್ತೋ, ಯಾವುದೋ ಒಂದು ಕಾರಣದಿಂದ ಅದು ಸುದ್ದಿಯಾಗುತ್ತದೆ ಅಷ್ಟೇ.
ಮಲಯಾಳಂ ಚಿತ್ರರಂಗಕ್ಕೆ ಆಗಿದ್ದೂ ಅದೇ. ಬಹುಶಃ ಅದಕ್ಕೊಂದು ವೇದಿಕೆ ಕಲ್ಪಿಸಿಕೊಟ್ಟಿದ್ದು ಕರೊನಾ ಸಮಯ. ಆಗ ಎಲ್ಲರೂ ಮನೆಯಲ್ಲಿದ್ದರು. ಓಟಿಟಿಗಳಲ್ಲಿ ಮಲಯಾಳಂ ಚಿತ್ರಗಳು ಸಿಗುತ್ತಿದ್ದವು. ಅದನ್ನು ನೋಡಿ ಮಲಯಾಳಂನಲ್ಲಿ ಅದ್ಭುತ ಚಿತ್ರಗಳು ಬರುತ್ತಿವೆ ಎಂದು ಆ ಚಿತ್ರಗಳ ಬಗ್ಗೆ ಗೌರವ ಹೆಚ್ಚಾಯಿತು. ಒಂದಿಷ್ಟು ಸಮಯ ಅದೊಂದು ಸಮೂಹ ಸನ್ನಿಯೇ ಆಗಿ ಹೋಯಿತು.
ಯಾರು ನೋಡಿದರೂ, ಮಲಯಾಳಂ ಚಿತ್ರಗಳ ಬಗ್ಗೆ ಮಾತನಾಡುವವರೇ. ಹಾಗಂತ ಈಗ ಮಲಯಾಳಂನಲ್ಲಿ ಚಿತ್ರಗಳು ಬರುತ್ತಿಲ್ಲವಾ? ‘ದೃಶ್ಯಂ 2’, ‘ಅಯ್ಯಪ್ಪನುಂ ಕೋಶಿಯುಂ’, ‘ಡ್ರೈವಿಂಗ್ ಲೈಸೆನ್ಸ್’ನ ಹೊರತಾಗಿ ಯಾವೊಂದು ಒಳ್ಳೆಯ ಚಿತ್ರ ಬಂದೇ ಇಲ್ಲವಾ? ಖಂಡಿತಾ ಬಂದಿದೆ. ಆದರೆ, ನಮ್ಮ ಗಮನ ಆ ಕಡೆ ಇಲ್ಲ ಅಷ್ಟೇ. ಏಕೆಂದರೆ, ಆಗೇನೋ ಎಲ್ಲರ ಬಳಿ ಸಮಯವಿತ್ತು. ಗಮನವೂ ಆ ಕಡೆ ಇದ್ದುದರಿಂದ, ಮಲಯಾಳಂ ಚಿತ್ರಗಳ ಬಗ್ಗೆ ಹೆಚ್ಚು ಚರ್ಚೆಯಾಯಿತು.
15 ವರ್ಷಗಳ ಹಿಂದೆ ಇರಾನ್ ಚಿತ್ರಗಳ ಬಗ್ಗೆಯೂ ಇದೇ ರೀತಿ ಚರ್ಚೆಯಾಗಿತ್ತು. ಎಲ್ಲರೂ ಇರಾನ್ ಚಿತ್ರಗಳ ಬಗ್ಗೆ ಮಾತನಾಡ ತೊಡಗಿದರು, ಅಲ್ಲಿನ ಚಿತ್ರಗಳು ಹೇಗೆ ವಿಭಿನ್ನವಾಗಿ ನಿಲ್ಲುತ್ತವೆ ಎಂದು ಚರ್ಚಿಸಿದರು, ಕಡಿಮೆ ಬಜೆಟ್ನಲ್ಲಿ ಅಂಥ ಸಿನಿಮಾಗಳನ್ನು ನಿರ್ಮಿಸುವುದಕ್ಕೆ ಹೇಗೆ ಸಾಧ್ಯ ಎಂದು ಎಲ್ಲರೂ ಅಚ್ಚರಿ ವ್ಯಕ್ತಪಡಿಸಿದರು. ಅಬ್ಬಾಸ್ ಕಿರೋಸ್ತಾಮಿ, ಮೊಹ್ಸನ್ ಮಕ್ಮಲ್ಬಫ್, ಜಾಫರ್ ಪನಾಹಿ, ಮಜಿದ್ ಮಜೀದಿ ಮುಂತಾದವರು ಭಾರತದಲ್ಲೂ ದೊಡ್ಡ ಹೆಸರು ಮಾಡಿದರು.
ಹಾಗೆ ನೋಡಿದರೆ, ಅವರು ಭಾರತದಲ್ಲಿ ಸುದ್ದಿಯಾಗುವುದಕ್ಕಿಂತ ಅದೆಷ್ಟೋ ವರ್ಷಗಳ ಮುಂಚೆಯೇ ಸಕ್ರಿಯವಾಗಿದ್ದರು. ಒಂದಿಷ್ಟು ಅದ್ಭುತ ಚಿತ್ರಗಳನ್ನು ನಿಡಿದ್ದರು ‘ವೇರ್ ಈಸ್ ಮೈ ಫ್ರೆಂಡ್ಸ್ ಹೌಸ್’, ‘ಚಿಲ್ಡ್ರನ್ ಆಫ್ ಹೆವೆನ್’, ‘ದಿ ವೈಟ್ ಬಲೂನ್’, ‘ದಿ ಕಲರ್ ಆಫ್ ಪ್ಯಾರಡೈಸ್’, ‘ದಿ ಸರ್ಕಲ್’, ‘ಟೆನ್’, ‘ಕ್ಲೋಸ್ ಅಪ್’ನಂತಹ ಅದ್ಭುತ ಚಿತ್ರಗಳು ಬಂದಿದ್ದವು. ಆದರೆ, ಅದು ನಮಗೆ ಗೊತ್ತಿರಲಿಲ್ಲ ಅಷ್ಟೇ. ಅದು ಗೊತ್ತಾಗಿದ್ದು ಸಿಡಿ ಕ್ರಾಂತಿಯಿಂದ. 20 ವರ್ಷಗಳ ಹಿಂದೆ, ಸಿಡಿ ಮತ್ತು ಡಿವಿಡಿ ಕ್ರಾಂತಿಯಿಂದ ಇರಾನಿ ಚಿತ್ರಗಳು ಮನೆಮನೆ ತಲುಪಿದವು.
ಬರೀ ಇರಾನಿ ಚಿತ್ರಗಳಷ್ಟೇ ಅಲ್ಲ, ಕೊರಿಯನ್ ಸೇರಿದಂತೆ ಬೇರೆಬೇರೆ ಭಾಷೆಗಳ ಚಿತ್ರಗಳು ಸಹ ಇಲ್ಲಿ ನೋಡುವಂತಾಯಿತು. ಹಾಗಂತ, ಅಲ್ಲಿ ಇದು ಹೊಸದಲ್ಲ. ಎಷ್ಟೋ ವರ್ಷಗಳಿಂದ ಅಂತಹ ಚಿತ್ರಗಳು ಅಲ್ಲಿ ನಿರ್ಮಾಣವಾಗುತ್ತಿತ್ತು. ಅದು ನಮಗೆ ತಡವಾಗಿ ಗೊತ್ತಾಯಿತು ಅಷ್ಟೇ. ಹಾಗಾದರೆ, ಈಗ ಇರಾನ್ನಲ್ಲೋ ಅಥವಾ ಕೊರಿಯಾದಲ್ಲೋ ಒಳ್ಳೆಯ ಚಿತ್ರಗಳು ಬರುತ್ತಿಲ್ಲವೇ? ಖಂಡಿತಾ ಬರುತ್ತಿರಬಹುದು. ಆದರೆ, ನಮ್ಮ ಫೋಕಸ್ ಅಲ್ಲಿಲ್ಲ ಅಷ್ಟೇ.
ಈಗ ಆಗುತ್ತಿರುವುದು ಸಹ ಅದೇ. ಉತ್ತರ ಭಾರತದ ಜನರಿಗೆ ದಕ್ಷಿಣ ಭಾರತದ ಚಿತ್ರಗಳು ಮುಂಚೆ ಇಷ್ಟು ಸುಲಭವಾಗಿ ಸಿಗುತ್ತಿರಲಿಲ್ಲ. ಹಿಂದಿ ಚಿತ್ರಗಳೇನೋ ದೇಶದ ಎಲ್ಲ ರಾಜ್ಯಗಳ ಎಲ್ಲ ನಗರಗಳಲ್ಲೂ ನೇರವಾಗಿ ಬಿಡುಗಡೆಯಾಗುತ್ತಿತ್ತು. ಆದರೆ, ಕನ್ನಡದ, ತೆಲುಗು-ತಮಿಳಿನ ಅಥವಾ ಮಲಯಾಳಂನ ಚಿತ್ರಗಳು ಅಲ್ಲಿ ಬಿಹಾರದಲ್ಲೋ, ಅಸ್ಸಾಂನಲ್ಲೋ ಅಥವಾ ಉತ್ತರ ಪ್ರದೇಶದಲ್ಲೋ ಬಿಡುಗಡೆಯಾಗುವುದು ಅಷ್ಟು ಸುಲಭವಾಗಿರಲಿಲ್ಲ.
ಡಬ್ಬಿಂಗ್ನಿಂದಾಗಿ, ಓಟಿಟಿಗಳಿಂದಾಗಿ ಇತ್ತೀಚಿನ ವರ್ಷಗಳಲ್ಲಿ ಆ ಅಂತರ ಕಡಿಮೆಯಾಗಿತ್ತು. ಈಗ ಅಲ್ಲಿನ ಚಿತ್ರಮಂದಿರಗಳಲ್ಲಿ, ಇಲ್ಲಿನ ಚಿತ್ರಗಳು ನೇರವಾಗಿ ಬಿಡುಗಡೆ ಆಗುತ್ತಿರುವುದರಿಂದ, ಇಲ್ಲಿನ ಚಿತ್ರಗಳ ಬಗ್ಗೆ ಅವರಿಗೆ ಗೊತ್ತಾಗುತ್ತಿದೆ. ಹಿಂದಿಯಲ್ಲಿ ಇತ್ತೀಚೆಗೆ ಗಂಭೀರ ಚಿತ್ರಗಳನ್ನು ನೋಡಿ ಸುಸ್ತಾಗಿದ್ದ ಅವರಿಗೆ, ಇಲ್ಲಿನ ಚಿತ್ರಗಳನ್ನು ನೋಡಿ ಇಲ್ಲೇನೋ ವಿಶೇಷವಾಗುತ್ತಿದೆ ಎಂದನಿಸತೊಡಗಿದೆ. ಈ ತರಹದ ಚಿತ್ರಗಳು ಅಲ್ಲೇಕೆ ಬರುತ್ತಿಲ್ಲ ಎಂದು ಚರ್ಚೆ ನಡೆಯುತ್ತಿವೆ.
ಹಾಗೆ ನೋಡಿದರೆ, ಇತ್ತೀಚೆಗೆ ದೊಡ್ಡ ಸುದ್ದಿಯಾಗುತ್ತಿರುವ (‘ಈಗ’, ‘ಬಾಹುಬಲಿ’, ‘ಎಂದಿರನ್’, ‘RRR’ನಂತಹ ಕೆಲವು ಚಿತ್ರಗಳನ್ನು ಹೊರತುಪಡಿಸಿ) ಚಿತ್ರಗಳ್ಯಾವುವೂ ನಮಗೆ ಹೊಸದಲ್ಲ. ಅವೆಲ್ಲವೂ ಉತ್ತರದವರಿಗೆ ವಿಶೇಷವಾಗಿ ಕಾಣಿಸುತ್ತಿವೆ. ಅದು ಬಜೆಟ್ ಇರಬಹುದು, ಮೇಕಿಂಗ್ ಇರಬಹುದು ಅಥವಾ ಕಾರಣ ಏನೇ ಇರಬಹುದು, ಇಲ್ಲಿನ ಚಿತ್ರಗಳು ಒಟ್ಟಾರೆ ಇಷ್ಟವಾಗುತ್ತಿವೆ ಅಷ್ಟೇ.
ಹಾಗಂತ ಮುಂದೆ ಸಹ ಇದೇ ಮುಂದುವರೆಯುತ್ತದಾ? ಹೇಳುವುದು ಕಷ್ಟ. ಈಗ ಇಷ್ಟವಾಗಿದ್ದು ಮುಂದೆಯೂ ಇಷ್ಟವಾಗುತ್ತದೆ ಎಂದು ಹೇಳುವುದು ಕಷ್ಟ. ಮೇಲಾಗಿ, ಮೇಲಿಂದ ಮೇಲೆ ಹೀಗೆ ಸದ್ದು ಮಾಡುವ ಚಿತ್ರಗಳು ಬಂದರೆ, ಆಗ ಗಮನ ಈ ಕಡೆಯೇ ಇರಬಹುದು. ಆದರೆ, ಮುಂದಿನ ದಿನಗಳಲ್ಲಿ ಬೆರಳಣಿಕೆಯಷ್ಟು ಚಿತ್ರಗಳನ್ನು ಹೊರತುಪಡಿಸಿದರೆ, ಇಡೀ ದೇಶವೇ ಕಾಯುವ ಚಿತ್ರಗಳ ಸಂಖ್ಯೆ ಕಡಿಮೆ ಎಂದು ಹೇಳಬಹುದು.
ಹಾಗಾಗಿ, ಮುಂದೆ ಸಹ ದಕ್ಷಿಣದ ಚಿತ್ರಗಳಿಗೆ ಇದೇ ರೀತಿಯ ಕ್ರೇಜ್ ಮುಂದುವರೆಯುತ್ತದೆ ಎಂದು ಹೇಳುವುದು ಕಷ್ಟ. ಅಷ್ಟರಲ್ಲಿ ಜನರ ಗಮನ ಬೇರೆ ಕಡೆ ಹೋಗಿದ್ದರೆ, ಆಗ ಎಷ್ಟೇ ದೊಡ್ಡ ಚಿತ್ರ ಬಿಡುಗಡೆಯಾದರೂ, ಆ ಬಗ್ಗೆ ಆಸಕ್ತಿ ಇಲ್ಲದಿರಬಹುದು. ಹಾಗಾಗಿ, ದಕ್ಷಿಣದಿಂದ ಬಾಲಿವುಡ್ಗೆ ಅಪಾಯ ಅಥವಾ ಹಿಂದಿ ಚಿತ್ರಗಳ ಕಥೆ ಮುಗಿಯಿತು ಎಂದೆಲ್ಲ ಹೇಳುವುದು ತಪ್ಪಾಗುತ್ತದೆ.
ಸದ್ಯ ಎಲ್ಲರ ಗಮನವೂ ದಕ್ಷಿಣದತ್ತ ಇದೆ. ಅದ್ಯಾವಾಗ ಬದಲಾಗುತ್ತದೋ?
ಮುಂದುವರೆಯುತ್ತದೆ …
(ಚೇತನ್ ನಾಡಿಗೇರ್ ಅವರ ಫೇಸ್ಬುಕ್ ನಿಂದ ಆಯ್ದುಕೊಂಡ ಬರಹ)
ಸುದ್ದಿದಿನ.ಕಾಂ|ವಾಟ್ಸಾಪ್|9980346243,

ಸಿನಿ ಸುದ್ದಿ
ಅಭಿಮಾನಿಗಳ ಸಂಭ್ರಮದಿಂದ ದೂರ ಕಿಚ್ಚನ ಬರ್ತ್ಡೇ; 53ನೇ ವಸಂತದಲ್ಲಿ ಸುದೀಪ್ ಸಿನಿಮಾ ಸರ್ಪ್ರೈಸ್ಗೆ ಕೌಂಟ್ಡೌನ್!
ಸುದ್ದಿದಿನ,ಬೆಂಗಳೂರು: ಕನ್ನಡ ಚಿತ್ರರಂಗದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ಇಂದು, ಸೆಪ್ಟೆಂಬರ್ 2, ವಿಶೇಷ ದಿನ. 53ನೇ ವಸಂತಕ್ಕೆ ಕಾಲಿಡುತ್ತಿರುವ ಸುದೀಪ್, ಈ ಬಾರಿ ತಮ್ಮ ಹುಟ್ಟುಹಬ್ಬವನ್ನು ಅಭಿಮಾನಿಗಳೊಂದಿಗೆ ಅದ್ಧೂರಿಯಾಗಿ ಆಚರಿಸಿಕೊಳ್ಳುತ್ತಿಲ್ಲ. ವೈಯಕ್ತಿಕ ಕಾರಣಗಳಿಂದಾಗಿ ಸೆ.2ರಂದು ಮನೆ ಬಳಿ ಅಭಿಮಾನಿಗಳು ಯಾರೂ ಬರಬಾರದು ಎಂದು ಸುದೀಪ್ ಈಗಾಗಲೇ ಮನವಿ ಮಾಡಿದ್ದರು. ಹೀಗಾಗಿ ಪ್ರತಿ ವರ್ಷ ಅಭಿಮಾನಿಗಳೊಂದಿಗೆ ಕೇಕ್ ಕತ್ತರಿಸಿ ಸಂಭ್ರಮಿಸುತ್ತಿದ್ದ ಕಿಚ್ಚನ ಬರ್ತ್ಡೇ ಈ ಬಾರಿ ವಿಭಿನ್ನವಾಗಿದೆ.
ಆದರೆ, ಅಭಿಮಾನಿಗಳಿಗೆ ನಿರಾಸೆಯಾಗದಂತೆ ಸಿನಿಮಾ ವಿಚಾರದಲ್ಲಿ ಭರ್ಜರಿ ಸರ್ಪ್ರೈಸ್ ಸಿಗುವ ನಿರೀಕ್ಷೆ ಮೂಡಿದೆ. ಹುಟ್ಟುಹಬ್ಬದ ಸಂದರ್ಭದಲ್ಲೇ ಕಿಚ್ಚನ ಮುಂಬರುವ ಸಿನಿಮಾಗಳ ಕುರಿತು ಮಹತ್ವದ ಅಪ್ಡೇಟ್ಗಳು ಹೊರಬರುವ ಸಾಧ್ಯತೆ ಅಭಿಮಾನಿಗಳ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದೆ.
http://Visit : www.suddidina.com
53ನೇ ವಸಂತ, 30 ವರ್ಷದ ಸಿನಿ ಪಯಣ
ಕಿಚ್ಚ ಸುದೀಪ್ ಕನ್ನಡ ಮಾತ್ರವಲ್ಲದೆ ಹಿಂದಿ, ತೆಲುಗು ಮತ್ತು ತಮಿಳು ಚಿತ್ರರಂಗದಲ್ಲೂ ತಮ್ಮದೇ ಛಾಪು ಮೂಡಿಸಿದ್ದಾರೆ. 60ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಅವರು, 1997ರಲ್ಲಿ ಬಿಡುಗಡೆಯಾದ ‘ತಾಯವ್ವ’ ಚಿತ್ರದ ಮೂಲಕ ಸಿನಿಮಾ ಪಯಣ ಆರಂಭಿಸಿದ್ದರು. ಇದೀಗ ಚಿತ್ರರಂಗದಲ್ಲಿ ಮೂರು ದಶಕಗಳ ಪಯಣ ಪೂರ್ಣಗೊಳಿಸಿರುವುದು ಈ ಹುಟ್ಟುಹಬ್ಬದ ಮತ್ತೊಂದು ವಿಶೇಷ.
ನಟನೆಯ ಜೊತೆಗೆ ನಿರ್ದೇಶನ, ನಿರ್ಮಾಣ ಹಾಗೂ ಕಿರುತೆರೆಯಲ್ಲಿಯೂ ಸುದೀಪ್ ತಮ್ಮದೇ ಗುರುತು ಮೂಡಿಸಿದ್ದಾರೆ. ‘ಬಿಗ್ ಬಾಸ್ ಕನ್ನಡ’ ಕಾರ್ಯಕ್ರಮದ ನಿರೂಪಕರಾಗಿ ಸತತವಾಗಿ ಮುಂದುವರಿದಿರುವುದು ಅವರ ಜನಪ್ರಿಯತೆಗೆ ಮತ್ತೊಂದು ಸಾಕ್ಷಿಯಾಗಿದೆ.
View this post on Instagram
‘ಬಿಲ್ಲ ರಂಗ ಭಾಷಾ’ ಮೇಲೆ ಹೆಚ್ಚಿದ ನಿರೀಕ್ಷೆ
‘ವಿಕ್ರಾಂತ್ ರೋಣ’ ಬಳಿಕ ನಿರ್ದೇಶಕ ಅನೂಪ್ ಭಂಡಾರಿ ಹಾಗೂ ಸುದೀಪ್ ಮತ್ತೊಮ್ಮೆ ‘ಬಿಲ್ಲ ರಂಗ ಭಾಷಾ’ ಮೂಲಕ ಒಂದಾಗಿದ್ದಾರೆ. ಈಗಾಗಲೇ ಚಿತ್ರದ ಲುಕ್ ಅಭಿಮಾನಿಗಳ ಗಮನ ಸೆಳೆದಿದ್ದು, ಮಾಸ್ ಅವತಾರದಲ್ಲಿ ಕಿಚ್ಚ ಕಾಣಿಸಿಕೊಂಡಿರುವುದು ನಿರೀಕ್ಷೆ ಹೆಚ್ಚಿಸಿದೆ.
ಚಿತ್ರದ ಬಗ್ಗೆ ನಿರ್ದೇಶಕ ಅನೂಪ್ ಭಂಡಾರಿ ಕೂಡ ಉತ್ಸಾಹ ವ್ಯಕ್ತಪಡಿಸಿದ್ದು, ಸುದೀಪ್ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಈ ಸಿನಿಮಾಗೆ ಸಂಬಂಧಿಸಿದ ಹೊಸ ಅಪ್ಡೇಟ್ ಸಿಗುವ ಸಾಧ್ಯತೆ ಇದೆ. ಸಿನಿಮಾ 2027ರಲ್ಲಿ ತೆರೆಗೆ ಬರುವ ನಿರೀಕ್ಷೆಯಿದೆ.
4 ಸಿನಿಮಾಗಳ ಸದ್ದು?
2024ರಲ್ಲಿ ‘ಮ್ಯಾಕ್ಸ್’ ಬಿಡುಗಡೆಯಾದ ಬಳಿಕ ಸುದೀಪ್ ಅವರ ಹೊಸ ಸಿನಿಮಾ ತೆರೆಗೆ ಬಂದಿಲ್ಲ. ಇದೀಗ ಒಂದೇ ಬಾರಿ ನಾಲ್ಕು ಸಿನಿಮಾಗಳ ಕುರಿತಂತೆ ಘೋಷಣೆ ಅಥವಾ ಅಪ್ಡೇಟ್ ಸಿಗಬಹುದು ಎಂಬ ಕುತೂಹಲ ಅಭಿಮಾನಿಗಳಲ್ಲಿದೆ. ಈ ಮೂಲಕ ಬರ್ತ್ಡೇ ಸಂಭ್ರಮದಿಂದ ದೂರವಿದ್ದರೂ, ಸಿನಿಮಾ ಸುದ್ದಿಗಳ ಮೂಲಕ ಕಿಚ್ಚ ಅಭಿಮಾನಿಗಳ ಜೊತೆ ಸಂಪರ್ಕದಲ್ಲಿರಲಿದ್ದಾರೆ.
ಸೆ.6ಕ್ಕೆ ಮತ್ತೆ ಟಿವಿ ಪರದೆ ಮೇಲೆ ಕಿಚ್ಚ
ಸಿನಿಮಾ ಮಾತ್ರವಲ್ಲದೆ ಕಿರುತೆರೆಯಲ್ಲೂ ಕಿಚ್ಚನ ಆಗಮನಕ್ಕೆ ಕ್ಷಣಗಣನೆ ಶುರುವಾಗಿದೆ. ‘ಬಿಗ್ ಬಾಸ್ ಕನ್ನಡ ಸೀಸನ್ 13’ ಗ್ರ್ಯಾಂಡ್ ಪ್ರೀಮಿಯರ್ ಸೆಪ್ಟೆಂಬರ್ 6ರಂದು ನಡೆಯಲಿದ್ದು, ಮತ್ತೊಮ್ಮೆ ಸುದೀಪ್ ನಿರೂಪಕರಾಗಿ ಪ್ರೇಕ್ಷಕರ ಮುಂದೆ ಬರಲಿದ್ದಾರೆ. ಹೀಗಾಗಿ 53ನೇ ಹುಟ್ಟುಹಬ್ಬ, 30 ವರ್ಷದ ಸಿನಿ ಪಯಣ, ಹೊಸ ಸಿನಿಮಾಗಳ ನಿರೀಕ್ಷೆ ಹಾಗೂ ‘ಬಿಗ್ ಬಾಸ್’ ಎಂಟ್ರಿ—ಈ ಬಾರಿ ಕಿಚ್ಚನ ಬರ್ತ್ಡೇಗೆ ವಿಶೇಷ ಅರ್ಥ ಸಿಕ್ಕಿದೆ.

ದಿನದ ಸುದ್ದಿ
Bigg Boss Kannada 13: ಹೊಸ ಥೀಮ್, ಹೊಸ ಸ್ಪರ್ಧಿಗಳು, 24×7 ಲೈವ್; ಕಿಚ್ಚ ಸುದೀಪ್ ಸಾರಥ್ಯದ ಬಿಗ್ಬಾಸ್ ಕನ್ನಡ 13ರ ವಿಶೇಷತೆಗಳೇನು?
ಸುದ್ದಿದಿನ,ಬೆಂಗಳೂರು: ಅಂತೂ ಇಂತೂ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ **‘ಬಿಗ್ಬಾಸ್ ಕನ್ನಡ ಸೀಸನ್ 13’**ಗೆ ಅಧಿಕೃತ ಚಾಲನೆ ಸಿಗುವ ಸಮಯ ಬಂದಿದೆ. ಈಗಾಗಲೇ ‘ಬಿಗ್ಬಾಸ್ ಅಗ್ನಿಪರೀಕ್ಷೆ’ ಮೂಲಕ ಕುತೂಹಲ ಹೆಚ್ಚಿಸಿರುವ ಕಾರ್ಯಕ್ರಮದ ಟಿವಿ ಸೀಸನ್ ಸೆಪ್ಟೆಂಬರ್ 6ರಿಂದ ಆರಂಭವಾಗಲಿದೆ. ಹೊಸ ಸೀಸನ್ನಲ್ಲಿ ಮನೆ, ಥೀಮ್, ಸ್ಪರ್ಧಿಗಳ ಆಯ್ಕೆ ಹಾಗೂ ವೀಕ್ಷಣಾ ಅನುಭವದಲ್ಲೂ ಹಲವು ವಿಶೇಷತೆಗಳನ್ನು ಪರಿಚಯಿಸಲಾಗುತ್ತಿದೆ.
ಕಳೆದ 12 ಸೀಸನ್ಗಳಂತೆ ಈ ಬಾರಿಯೂ ಕಿಚ್ಚ ಸುದೀಪ್ ಕಾರ್ಯಕ್ರಮದ ನಿರೂಪಕರಾಗಿ ಮುಂದುವರಿಯಲಿದ್ದಾರೆ. ಸತತ 13 ಸೀಸನ್ಗಳನ್ನು ನಿರೂಪಣೆ ಮಾಡುತ್ತಿರುವುದು ಬಿಗ್ಬಾಸ್ ಇತಿಹಾಸದಲ್ಲೇ ಗಮನಾರ್ಹ ದಾಖಲೆಯಾಗಿದೆ.
ಹೈಲೈಟ್ಸ್: ಸೆಪ್ಟೆಂಬರ್ 6ರಿಂದ ಬಿಗ್ಬಾಸ್ ಹವಾ |
|
http://Visit : www.suddidina.com
ಈ ಬಾರಿ ‘Flight’ ಥೀಮ್ ಏಕೆ ವಿಶೇಷ?
ಕಳೆದ ಸೀಸನ್ನಲ್ಲಿ ವೀಕ್ಷಕರು ಅರಮನೆ ಮಾದರಿಯ ಬಿಗ್ಬಾಸ್ ಮನೆಯನ್ನು ಕಂಡಿದ್ದರು. ಆದರೆ ಈ ಬಾರಿ ಇಡೀ ಕಾರ್ಯಕ್ರಮದ ಕಲ್ಪನೆಯೇ ಬದಲಾಗಿದೆ. ‘Flight’ ಥೀಮ್ ಆಧಾರಿತವಾಗಿ ಸೀಸನ್ 13 ರೂಪಿಸಲಾಗಿದ್ದು, ಈಗಾಗಲೇ ಬಿಡುಗಡೆಯಾಗಿರುವ ಪ್ರೋಮೋದಲ್ಲೂ ಇದರ ಝಲಕ್ ಕಾಣಿಸಿಕೊಂಡಿದೆ.
ವಿಶೇಷವೆಂದರೆ ಫ್ಲೈಟ್ ಥೀಮ್ ಕೇವಲ ಪ್ರೋಮೋಗೆ ಸೀಮಿತವಾಗಿಲ್ಲ. ಬಿಗ್ಬಾಸ್ ಮನೆಯ ವಿನ್ಯಾಸದಲ್ಲೂ ಇದೇ ಪರಿಕಲ್ಪನೆಯನ್ನು ಬಳಸಲಾಗಿದೆ. ಹೀಗಾಗಿ ಈ ಬಾರಿ ಮನೆ ಹೇಗೆ ಕಾಣಲಿದೆ ಎಂಬ ಕುತೂಹಲ ಅಭಿಮಾನಿಗಳಲ್ಲಿ ಹೆಚ್ಚಾಗಿದೆ.
ಸೆಲೆಬ್ರಿಟಿಗಳ ಜತೆಗೆ ಕಾಮನ್ ಮ್ಯಾನ್ ಎಂಟ್ರಿ
ಬಿಗ್ಬಾಸ್ ಕನ್ನಡದ ಪ್ರತಿ ಸೀಸನ್ನಲ್ಲೂ ಸ್ಪರ್ಧಿಗಳ ಆಯ್ಕೆ ಪ್ರಮುಖ ಆಕರ್ಷಣೆಯಾಗಿರುತ್ತದೆ. ಈ ಬಾರಿ ಸೆಲೆಬ್ರಿಟಿಗಳ ಜತೆಗೆ ಸಾಮಾನ್ಯ ಜನರಿಗೂ ಅವಕಾಶ ಕಲ್ಪಿಸಲಾಗುತ್ತಿದೆ.
‘ಬಿಗ್ಬಾಸ್ ಅಗ್ನಿಪರೀಕ್ಷೆ’ ಮೂಲಕ ಆಯ್ಕೆಯಾಗುವ ಮೂವರು ಸಾಮಾನ್ಯ ಸ್ಪರ್ಧಿಗಳು ಸೀಸನ್ 13ರ ಮನೆಗೆ ಪ್ರವೇಶಿಸಲಿದ್ದಾರೆ. ಇದರಿಂದ ಮನೆಯಲ್ಲಿ ವಿಭಿನ್ನ ಹಿನ್ನೆಲೆಯ ವ್ಯಕ್ತಿಗಳ ನಡುವಿನ ಸಂವಹನ, ಅಭಿಪ್ರಾಯ ಭೇದ ಹಾಗೂ ಹೊಸ ರೀತಿಯ ಸ್ಪರ್ಧೆ ಮೂಡುವ ನಿರೀಕ್ಷೆಯಿದೆ.
ಮನೆಯ ಪ್ರತಿಕ್ಷಣವೂ 24×7 ಲೈವ್
ಈ ಬಾರಿ ವೀಕ್ಷಕರಿಗೆ ಮತ್ತೊಂದು ದೊಡ್ಡ ಸೌಲಭ್ಯ ಸಿಗಲಿದೆ. ಟಿವಿ ಎಪಿಸೋಡ್ಗಳಿಗೆ ಮಾತ್ರ ಸೀಮಿತವಾಗದೆ, ಜಿಯೋಹಾಟ್ಸ್ಟಾರ್ನಲ್ಲಿ ಬಿಗ್ಬಾಸ್ ಮನೆಯ 24×7 ಲೈವ್ ವೀಕ್ಷಣೆ ಲಭ್ಯವಿರಲಿದೆ.
ಅಂದರೆ ದಿನದ ಎಪಿಸೋಡ್ನಲ್ಲಿ ಪ್ರಸಾರವಾಗದ ಮನೆಯೊಳಗಿನ ಹಲವು ಬೆಳವಣಿಗೆಗಳನ್ನೂ ವೀಕ್ಷಕರು ಗಮನಿಸಬಹುದು. ಸ್ಪರ್ಧಿಗಳ ನಡುವಿನ ಮಾತುಕತೆ, ಚಟುವಟಿಕೆಗಳು ಹಾಗೂ ಅನಿರೀಕ್ಷಿತ ಘಟನೆಗಳನ್ನು ಇನ್ನಷ್ಟು ಹತ್ತಿರದಿಂದ ನೋಡುವ ಅವಕಾಶ ಸಿಗಲಿದೆ.
ಪ್ರಸಾರದ ಸಮಯವೂ ಫಿಕ್ಸ್
ಸೆಪ್ಟೆಂಬರ್ 6ರಂದು ಸಂಜೆ 7 ಗಂಟೆಗೆ ಗ್ರ್ಯಾಂಡ್ ಪ್ರೀಮಿಯರ್ ಪ್ರಸಾರವಾಗಲಿದೆ. ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 9:30ಕ್ಕೆ ಹೊಸ ಸಂಚಿಕೆಗಳು ಪ್ರಸಾರವಾಗಲಿವೆ.
ಇನ್ನು ವಾರಾಂತ್ಯದಲ್ಲಿ ಕಿಚ್ಚ ಸುದೀಪ್ ನಡೆಸಿಕೊಡುವ ಶನಿವಾರ ಮತ್ತು ಭಾನುವಾರದ ವಿಶೇಷ ಸಂಚಿಕೆಗಳು ರಾತ್ರಿ 9 ಗಂಟೆಗೆ ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗಲಿವೆ.
ಬಿಗ್ಬಾಸ್ ಪ್ರಯಾಣ ಯಾವ ದಿಕ್ಕಿಗೆ?
ಫ್ಲೈಟ್ ಥೀಮ್, ಹೊಸ ಮುಖಗಳು, ಸಾಮಾನ್ಯ ಸ್ಪರ್ಧಿಗಳ ಪ್ರವೇಶ ಮತ್ತು 24×7 ಲೈವ್ ವೀಕ್ಷಣೆಯೊಂದಿಗೆ ಸೀಸನ್ 13 ಕುತೂಹಲ ಮೂಡಿಸಿದೆ. ಈ ‘ಫ್ಲೈಟ್’ನಲ್ಲಿ ಯಾರು ಟೇಕಾಫ್ ಆಗುತ್ತಾರೆ, ಯಾರು ಮಧ್ಯದಲ್ಲೇ ಎಲಿಮಿನೇಟ್ ಆಗುತ್ತಾರೆ ಮತ್ತು ಕೊನೆಯವರೆಗೂ ಯಾರು ಪ್ರಯಾಣ ಮುಂದುವರಿಸುತ್ತಾರೆ ಎಂಬುದೇ ಮುಂದಿನ ದಿನಗಳ ಪ್ರಮುಖ ಪ್ರಶ್ನೆ.

ದಿನದ ಸುದ್ದಿ
Bigg Boss Agniparikshé: ‘ಬಿಗ್ ಬಾಸ್ ಅಗ್ನಿಪರೀಕ್ಷೆ’ಯಿಂದ ಕುಮಾರಿ ಎಕ್ಸಿಟ್; ಆಟ ಮುಗಿದರೂ ಭವಿಷ್ಯಕ್ಕೆ ಸಿಕ್ಕಿತು ದೊಡ್ಡ ಗಿಫ್ಟ್
ಸುದ್ದಿದಿನ,ಬೆಂಗಳೂರು: ‘ಬಿಗ್ ಬಾಸ್ ಅಗ್ನಿಪರೀಕ್ಷೆ’ ರಿಯಾಲಿಟಿ ಶೋನಲ್ಲಿ ತಮ್ಮ ಸರಳತೆ, ಮುಗ್ಧತೆ ಹಾಗೂ ಸಹಜ ವರ್ತನೆಯಿಂದ ವೀಕ್ಷಕರ ಗಮನ ಸೆಳೆದಿದ್ದ ನಂಜನಗೂಡಿನ ಕುಮಾರಿ ಇದೀಗ ಅನಾರೋಗ್ಯದ ಕಾರಣದಿಂದ ಕಾರ್ಯಕ್ರಮದಿಂದ ಅರ್ಧಕ್ಕೆ ನಿರ್ಗಮಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕುಮಾರಿ, ವೈದ್ಯರ ಸಲಹೆಯಂತೆ ಆಟವನ್ನು ಮುಂದುವರಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಶೋನಿಂದ ಹೊರಬಂದಿದ್ದಾರೆ.
ಕಳೆದ ಕೆಲವು ಸಂಚಿಕೆಗಳಲ್ಲಿ ಕುಮಾರಿ ಕಾಣಿಸಿಕೊಳ್ಳದ ಹಿನ್ನೆಲೆಯಲ್ಲಿ ವೀಕ್ಷಕರಲ್ಲಿ ಸಾಕಷ್ಟು ಕುತೂಹಲ ಮೂಡಿತ್ತು. ಅವರು ಯಾಕೆ ಕಾರ್ಯಕ್ರಮದಲ್ಲಿ ಕಾಣಿಸುತ್ತಿಲ್ಲ ಎಂಬ ಪ್ರಶ್ನೆಯೂ ಚರ್ಚೆಗೆ ಬಂದಿತ್ತು. ಇದೇ ಸಂದರ್ಭದಲ್ಲಿ ಮತ್ತೊಬ್ಬ ಸ್ಪರ್ಧಿ ಪೂರ್ಣಿಮಾ, ತಮ್ಮನ್ನು ಕಳುಹಿಸಿ ಕುಮಾರಿಯನ್ನು ಕರೆತರಲಾಗುತ್ತಿದೆ ಎಂದು ಆರೋಪಿಸಿದ್ದರು. ಇದೀಗ ಕುಮಾರಿ ಶೋನಿಂದ ದೂರ ಉಳಿದಿರುವ ನಿಜವಾದ ಕಾರಣ ಅನಾರೋಗ್ಯ ಎಂಬುದು ಸ್ಪಷ್ಟವಾಗಿದೆ.
http://Visit : www.suddidina.com
ಆಟ ಅರ್ಧಕ್ಕೆ ನಿಂತರೂ ಸಿಕ್ಕಿತು ₹5 ಲಕ್ಷ!
ಕುಮಾರಿಯ ಬಿಗ್ ಬಾಸ್ ಪಯಣ ಅರ್ಧಕ್ಕೆ ಅಂತ್ಯಗೊಂಡಿದ್ದರೂ, ಕಾರ್ಯಕ್ರಮದ ವೇದಿಕೆ ಅವರಿಗೆ ನಿರೀಕ್ಷೆಗೂ ಮೀರಿದ ನೆರವು ನೀಡಿದೆ. ಕಾರ್ಯಕ್ರಮದ ಪ್ರಾಯೋಜಕರಾದ ಇಕೋ ಪ್ಲ್ಯಾನೆಟ್ ಎಲಿವೇಟರ್ ಸಂಸ್ಥೆ ಕುಮಾರಿಗೆ ಬರೋಬ್ಬರಿ ₹5 ಲಕ್ಷ ನಗದು ನೆರವು ನೀಡಿದೆ.
ಸಾಮಾನ್ಯ ಕುಟುಂಬದ ಹಿನ್ನೆಲೆಯಿಂದ ಬಂದಿರುವ ಕುಮಾರಿಗೆ ಈ ಹಣ ದೊಡ್ಡ ಆರ್ಥಿಕ ಆಸರೆಯಾಗುವ ನಿರೀಕ್ಷೆಯಿದೆ. ವಿಶೇಷವಾಗಿ ಕುಟುಂಬದಲ್ಲಿ ಅನಾರೋಗ್ಯದಿಂದ ಬಳಲುತ್ತಿರುವ ತಾಯಿಯ ಚಿಕಿತ್ಸೆಗೆ ಈ ಹಣ ನೆರವಾಗಬಹುದು ಎಂಬ ನಿರೀಕ್ಷೆಯೂ ಇದೆ.
ಶಿಕ್ಷಣದ ಬಳಿಕ ಉದ್ಯೋಗಕ್ಕೂ ಭರವಸೆ
₹5 ಲಕ್ಷ ನೆರವಿನ ಜತೆಗೆ ಕುಮಾರಿಗೆ ಮತ್ತೊಂದು ಮಹತ್ವದ ಅವಕಾಶವನ್ನು ಸಂಸ್ಥೆ ಘೋಷಿಸಿದೆ. ಅವರು ತಮ್ಮ ಶಿಕ್ಷಣವನ್ನು ಪೂರ್ಣಗೊಳಿಸಿದ ಬಳಿಕ ಕರ್ನಾಟಕದಲ್ಲಿರುವ ಸಂಸ್ಥೆಯ ಯಾವುದೇ ಶಾಖೆಯಲ್ಲಿ ಅಥವಾ ದುಬೈನಲ್ಲಿರುವ ಶಾಖೆಯಲ್ಲಿ ಉದ್ಯೋಗ ಪಡೆಯುವ ಅವಕಾಶ ನೀಡಲಾಗಿದೆ.
ಇದು ಕುಮಾರಿಯ ಭವಿಷ್ಯಕ್ಕೆ ಹೊಸ ದಿಕ್ಕು ನೀಡುವ ಘೋಷಣೆಯಾಗಿದೆ. ರಿಯಾಲಿಟಿ ಶೋನಿಂದ ಸಿಕ್ಕ ಜನಪ್ರಿಯತೆಯ ಜತೆಗೆ ಇದೀಗ ಶಿಕ್ಷಣ ಮತ್ತು ಉದ್ಯೋಗದ ಮೂಲಕ ಸ್ವಾವಲಂಬನೆಯತ್ತ ಹೆಜ್ಜೆ ಇಡುವ ಅವಕಾಶವೂ ದೊರೆತಿದೆ.
ಭಾವುಕ ವಿದಾಯ, ಹೊಸ ಬದುಕಿನ ಭರವಸೆ
ಹಳ್ಳಿಯಿಂದ ಬಂದ ಕುಮಾರಿಗೆ ಬೆಂಗಳೂರನ್ನು ನೋಡುವ ಅವಕಾಶದಿಂದ ಹಿಡಿದು ದೊಡ್ಡ ರಿಯಾಲಿಟಿ ಶೋ ವೇದಿಕೆಯಲ್ಲಿ ಸ್ಪರ್ಧಿಸುವವರೆಗೆ ‘ಬಿಗ್ ಬಾಸ್ ಅಗ್ನಿಪರೀಕ್ಷೆ’ ಹಲವು ಹೊಸ ಅನುಭವಗಳನ್ನು ನೀಡಿದೆ. ಶೋನಿಂದ ನಿರ್ಗಮಿಸುವ ಸಂದರ್ಭದಲ್ಲಿ ಕುಮಾರಿ ಸೇರಿದಂತೆ ಇತರ ಸ್ಪರ್ಧಿಗಳು ಭಾವುಕರಾದರು.
ಸ್ಪರ್ಧೆಯಲ್ಲಿ ಮುಂದುವರಿಯಲು ಸಾಧ್ಯವಾಗದ ನೋವಿನ ನಡುವೆಯೂ, ಇಷ್ಟು ದೊಡ್ಡ ವೇದಿಕೆಯಲ್ಲಿ ಅವಕಾಶ ಸಿಕ್ಕಿದ್ದಕ್ಕೆ ಕುಮಾರಿ ಸಂತಸ ವ್ಯಕ್ತಪಡಿಸಿದ್ದಾರೆ. ಅನಾರೋಗ್ಯದಿಂದಾಗಿ ಅವರ ಆಟ ಅಂತ್ಯಗೊಂಡಿದ್ದರೂ, ₹5 ಲಕ್ಷ ನೆರವು ಮತ್ತು ಭವಿಷ್ಯದ ಉದ್ಯೋಗದ ಭರವಸೆ ಕುಮಾರಿಯ ಜೀವನದಲ್ಲಿ ಹೊಸ ಅಧ್ಯಾಯಕ್ಕೆ ಕಾರಣವಾಗುವ ಸಾಧ್ಯತೆಯಿದೆ.
ಹೀಗಾಗಿ ‘ಬಿಗ್ ಬಾಸ್ ಅಗ್ನಿಪರೀಕ್ಷೆ’ಯಲ್ಲಿ ಕುಮಾರಿಯ ಆಟ ಅರ್ಧಕ್ಕೆ ನಿಂತಿದ್ದರೂ, ಕಾರ್ಯಕ್ರಮದ ವೇದಿಕೆಯಿಂದ ಸಿಕ್ಕ ಬೆಂಬಲ ಅವರ ಮುಂದಿನ ಬದುಕಿಗೆ ಮಹತ್ವದ ತಿರುವು ನೀಡಿದೆ.

-
ದಿನದ ಸುದ್ದಿ22 hours agoಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಇನ್ಮುಂದೆ ಓಲಾ, ಉಬರ್ ಆ್ಯಪ್ನಲ್ಲೇ ಬಿಎಂಟಿಸಿ ಬಸ್ ಟ್ರ್ಯಾಕಿಂಗ್ ಮತ್ತು ಟಿಕೆಟ್ ಬುಕಿಂಗ್!
-
ದಿನದ ಸುದ್ದಿ22 hours ago5 ವರ್ಷದಿಂದ PFಗೆ ಹಣ ಜಮಾ ಮಾಡಿಲ್ಲ, ಬಡ್ಡಿ ಸಿಗುತ್ತಾ? ಇಲ್ಲಿದೆ EPFO ನಿಯಮದ ಸ್ಪಷ್ಟ ಮಾಹಿತಿ!
-
ದಿನದ ಸುದ್ದಿ22 hours agoಬರ ನಿರ್ವಹಣೆಗೆ ಸಚಿವ ಸಂಪುಟ ಉಪಸಮಿತಿ ಸಭೆ – ದಾವಣಗೆರೆಯಲ್ಲಿ ಕುಡಿಯುವ ನೀರು, ಮೇವು ಕೊರತೆ ಬಗ್ಗೆ ಸಚಿವ ಮಲ್ಲಿಕಾರ್ಜುನ್ ಪ್ರಸ್ತಾಪ
-
ದಿನದ ಸುದ್ದಿ22 hours agoಭದ್ರೆ ಆಗಮನದಿಂದ ರೈತರಲ್ಲಿ ಹೊಸ ಭರವಸೆ – ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ
-
ದಿನದ ಸುದ್ದಿ22 hours agoವಿಶೇಷ ಚೇತನ ಮಕ್ಕಳು ದೇವರ ಮಕ್ಕಳು – ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್
-
ದಿನದ ಸುದ್ದಿ23 hours agoಮೊದಲ ಬಾರಿಗೆ ಗೋನೂರು ಕೆರೆಗೆ ಹರಿದು ಬಂದ ಭದ್ರೆ – ರೈತರ ಸಂಭ್ರಮಾಚರಣೆ
-
ದಿನದ ಸುದ್ದಿ10 hours agoಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು
-
ದಿನದ ಸುದ್ದಿ1 day agoEV ನೋಂದಣಿಯಲ್ಲಿ ಕರ್ನಾಟಕದ ಸಾಧನೆ – ಶುದ್ಧ ಚಲನೆಗೆ ಬೆಸ್ಕಾಂ ಮುನ್ನಡೆ


