Connect with us

ದಿನದ ಸುದ್ದಿ

ಸತ್ತವರಲ್ಲಿ ನಮ್ಮವರು ಯಾರು ?

Published

on

ಎಲ್ಲಿ ನೋಡಿದರಲ್ಲಿ ಚಿಂದಿಯಾದ ಶವಗಳು. ಕಾಲಿಟ್ಟಲೆಲ್ಲ ರಕ್ತವೋ ರಕ್ತ. ಲೆಕ್ಕವಿಲ್ಲದಷ್ಟು ಮೃತದೇಹಗಳ ಅವಶೇಷಗಳು. ಮುಂಡವಿಲ್ಲದ ರುಂಡಗಳು, ರುಂಡವಿಲ್ಲದ ಮುಂಡಗಳು. ಕೈ ಕಾಲುಗಳಿಲ್ಲದ ದೇಹಗಳು. ಗಾಯಗೊಂಡು ಒದ್ದಾಡುತ್ತಿದ್ದ ಹಲವರ ದೇಹಗಳಲ್ಲಿ ಚೂಪಾದ ಗಾಜಿನ ಚೂರುಗಳು ಹೊಕ್ಕಿದ್ದವು. ತಮ್ಮವರ ಪತ್ತೆಗಾಗಿ ಸಾವಿರಾರು ಮಂದಿ ಅಲ್ಲಿ ಸೇರಿದ್ದರು. ಶವಗಳನ್ನು ಗುರುತಿಸಲಾಗದೆ ಅವರು ರೋಧಿಸುತ್ತಿದ್ದರು. ಅವರ ಆಕ್ರಂದನ ಮುಗಿಲು ಮುಟ್ಟಿತ್ತು.” ಇದು ಈಸ್ಟರ್ ಭಾನುವಾರ ದ್ವೀಪರಾಷ್ಟ್ರ ಶ್ರೀಲಂಕಾದ ಕೊಲೊಂಬೋ ನಗರದಲ್ಲಿನ 3 ಚರ್ಚ್ಗಳಲ್ಲಿ ಮತ್ತು 3 ಪಂಚತಾರಾ ಹೊಟೇಲುಗಳಲ್ಲಿ ಸಂಭವಿಸಿದ ಭೀಕರ ಸರಣಿ ಬಾಂಬ್ ಸ್ಟೋಟದ ನಂತರ ಕಂಡುಬಂದ ಮನಕಲಕುವ ದೃಶ್ಯ.

ಚರ್ಚ್ಗಳಲ್ಲಿ ಪ್ರಾರ್ಥನೆಯಲ್ಲಿ ನಿರತರಾಗಿದ್ದವರ ಮೇಲೆ ಮತ್ತು ವಿಲಾಸಿ ಹೊಟೇಲುಗಳಲ್ಲಿ ತಂಗಿದ್ದ ವಿದೇಶಿ ಪ್ರವಾಶಿಗರನ್ನು ಗುರಿಯಾಗಿಸಿಕೊಂಡು ನಡೆದ ಎರಡು ಆತ್ಮಹತ್ಯಾ ದಾಳಿ ಮತ್ತು ಬಾಂಬ್ ಸ್ಪೋಟಗಳಿಂದಾಗಿ 300 ಕ್ಕೂ ಅಧಿಕ ಮಂದಿ ಅಮಾಯಕರು ಅಸುನೀಗಿ, 500 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಭಾರತ, ಪಾಕಿಸ್ತಾನ, ಅಮೇರಿಕ, ಡೆನ್ಮಾರ್ಕ್, ಬ್ರಿಟನ್, ಟರ್ಕಿ, ಪೋರ್ಚುಗಲ್, ಚೀನಾ ಮೊದಲಾದ ದೇಶಗಳ 35 ಪ್ರಜೆಗಳು ಮೃತಪಟ್ಟಿದ್ದಾರೆ. ಶ್ರೀಲಂಕಾದ ಇತಿಹಾಸದಲ್ಲೇ ಅತ್ಯಂತ ಬೀಭತ್ಸವಾದ ಈ ದಾಳಿಯನ್ನು ಭಾರತವೂ ಸೇರಿದಂತೆ ವಿಶ್ವದ ಅನೇಕ ದೇಶಗಳ ಗಣ್ಯರು ಬಲವಾಗಿ ಖಂಡಿಸಿದ್ದಾರೆ.

ಅಲ್ಲಿ ಮಕ್ಕಳನ್ನು ಕಳೆದುಕೊಂಡ ಹೆತ್ತವರು, ಅಪ್ಪ-ಅಮ್ಮನನ್ನು ಕಳೆದುಕೊಂಡ ಮಕ್ಕಳು, ಪತಿಯನ್ನು ಕಳೆದುಕೊಂಡ ಮಹಿಳೆಯರು, ಪತ್ನಿಯನ್ನು ಕಳೆದುಕೊಂಡ ಪುರುಷರು ತಮ್ಮವರನ್ನು ಹುಡುಕುತ್ತಿದ್ದರು. ಛಿಧ್ರ, ಛಿಧ್ರವಾದ ಮಾನವ ದೇಹದ ತುಂಡುಗಳಲ್ಲಿ ತಮ್ಮವರನ್ನು ಗುರುತಿಸುವುದು ಹೇಗೆ? ಸತ್ತವರಲ್ಲಿ ನಮ್ಮವರು ಯಾರು?

ಅದೇ ರಕ್ತ! ಅದೇ ಅಂಗಾಂಗಗಳು! ಇವರು ನಮ್ಮವರಾ? ಅವರು ನಮ್ಮವರಾ? ಒಂದರ ಮೇಲೊಂದು ಎಂಬಂತೆ ಬಿದ್ದಿರುವ ಮೃತದೇಹಗಳಲ್ಲಿ ನಮ್ಮವರು ಯಾರು ಎಂದು ಗುರುತಿಸುವುದು ಹೇಗೆ? ಇಂತಹ ಪ್ರಕರಣಗಳಲ್ಲಿ ಮೃತದೇಹಗಳನ್ನು ಗುರುತಿಸಲಾಗದೆ. ತಮಗೆ ಸಂಬಂಧವಿಲ್ಲದ ಮೃತ ದೇಹವನ್ನು ಹಸ್ತಾಂತರಿಸಿಕೊಂಡು ಅಂತ್ಯಸಂಸ್ಕಾರ ಮಾಡಿದ ಉದಾರಣೆಗಳಿವೆ. ಶ್ರೀಲಂಕಾ ಸ್ಪೋಟದಲ್ಲಿ ಮಡಿದ 7 ಜನ ಕನ್ನಡಿಗರು ಸೇರಿದಂತೆ 10 ಜನ ಭಾರತೀಯರು ನಮ್ಮವರೇ. ಮೃತಪಟ್ಟ ಇನ್ನುಳಿದವರೆಲ್ಲರೂ ನಮ್ಮವರೇ. “ಇವ ನಮ್ಮವ, ಇವ ನಮ್ಮವ” ಎನ್ನುವವನಿಗೆ ತಮ್ಮವರು ಸಿಗುತ್ತಾರೆ.ಆತನಿಗೆ ಎಲ್ಲರೂ ತನ್ನವರೇ ಆಗಿರುತ್ತಾರೆ. ಆತ ಮಾನವ ರಕ್ತದಲ್ಲಿ ಬೇಧ ಕಾಣುವುದಿಲ್ಲ.

ಹುಟ್ಟಿನಿಂದಲೇ ಕೆಲವರು ಕೀಳು ಜಾತಿಯವರಾಗಿರುತ್ತಾರೆ ಎಂಬುವುದನ್ನು ಆತ ಒಪ್ಪುವುದಿಲ್ಲ. ಮತ ಧರ್ಮಗಳ ಖಾಸಗಿ ನಂಬಿಕೆಗಳನ್ನು ಆತ ವಿವಾದಾಸ್ಪದಗೊಳಿಸುವುದಿಲ್ಲ. ಪುಲ್ವಾಮಾ ದಾಳಿಯಲ್ಲಿ ಸಾವನ್ನಪ್ಪಿದ ಯೋಧರನ್ನು ಆತ ‘ತನ್ನವರು’ ಎಂದು ದುಃಖಿಸುತ್ತಾನೆ. ಕಳೆದ ಮಾರ್ಚ್ 15 ರಂದು ನ್ಯೂಜಿಲ್ಯಾಂಡ್ನ ಮಸೀದಿಯಲ್ಲಿ ನಡೆದ ಶೂಟೌಟ್ಗೆ ಬಲಿಯಾದ 50 ಮಂದಿ ಪ್ರಾರ್ಥನಾ ನಿರತರನ್ನು ಆತ ‘ತನ್ನವರು’ ಎಂದು ಗುರುತಿಸುತ್ತಾನೆ. ಈಗ ಶ್ರೀಲಂಕಾದ ಚರ್ಚುಗಳಲ್ಲಿ ಬಾಂಬ್ ಸ್ಪೋಟಿಸಿ ಸಾಯಿಸಿದ ನೂರಾರು ಮಂದಿ ಭಕ್ತರನ್ನು ಆತ ‘ತನ್ನವರು’ ಎಂದು ಕಣ್ಣೀರು ಹಾಕುತ್ತಾನೆ. ಆತನಿಗೆ ‘ತನ್ನವರು’ ಸಿಕ್ಕೇ ಸಿಗುತ್ತಾರೆ.

‘ತನ್ನವರು’ ಚೆನ್ನಾಗಿರಬೇಕು. ತನ್ನವರು ನೆಮ್ಮದಿಯಿಂದ ಇರಬೇಕು. ಅವರಿಗೆ ಕಷ್ಟಗಳು ಬರಬಾರದು. ಹೀಗೆ ‘ಇವ ನಮ್ಮವ ಇವ ನಮ್ಮವ’ ಎನ್ನುವವನಿಗೆ ಎಲ್ಲರೂ ಚೆನ್ನಾಗಿರಬೇಕೆಂಬ ಮಹದಾಸೆ! ಆತನಿಗೆ ಯುದ್ಧ ಬೇಡ, ಶಾಂತಿ ಬೇಕು. ಆತನಿಗೆ ಪ್ರೀತಿ ಬೇಕು, ಹಿಂಸೆ ಬೇಡ, ಆತ ಹಂಚಿಕೊಂಡು ಬದುಕು ಬಯಸುತ್ತಾನೆ. ಎಲ್ಲರನ್ನೂ ಒಳಗೊಳ್ಳಲು ಶ್ರಮಿಸುತ್ತಾನೆ. ಆತ ವೈವಿಧ್ಯತೆಯಲ್ಲಿ ಏಕತೆ ಕಾಣುತ್ತಾನೆ. ಆತ ಗಡಿಗಳಿಲ್ಲದ, ಗಡಿ ಘರ್ಷಣೆಗಳಿಲ್ಲದ ವಿಶ್ವದ ಕನಸು ಕಾಣುತ್ತಾನೆ. ಆತ ವಿಶ್ವಮಾನವ. ಸರ್ವಜನಾಂಗ ಪ್ರೇಮಿ, ವಿಶ್ವದ ಕರಿಯರಲ್ಲಿ, ಬಿಳಿಯರಲ್ಲಿ ಆತ ಭೇಧ ಕಾಣುವುದಿಲ್ಲ. ಆಫ್ರಿಕಾದವರು, ಅಮೆರಿಕದವರು ಆತನಿಗೆ ಬೇರೆ ಬೇರೆ ಅಲ್ಲ. ಅವರ ಭಾಷೆ ಯಾವುದೇ ಇರಲಿ. ಅವರ ಆಹಾರ ವಿಹಾರ ಹೇಗೂ ಇರಲಿ, ಆತನಿಗೆ ಅವರೆಲ್ಲರೂ ‘ತನ್ನವರು’.

ಎಲ್ಲಾದರೂ ಸರಿಯೇ, ಭೂಕಂಪದಂತಹ, ಪ್ರವಾಹದಂತಹ, ಬರಗಾಲದಂತಹ ನೈಸರ್ಗಿಕ ವಿಕೋಪ ಸಂಭವಿಸಿ ಸಾವು ನೋವುಗಳಾದಾಗ ಆತ ಮರಗುತ್ತಾನೆ. ತನ್ನ ಕೈಲಾದಷ್ಟು ನೆರವು ನೀಡುತ್ತಾನೆ. ಆತನಿಗೆ ಪಾಕಿಸ್ತಾನ, ಹಿಂದುಸ್ಥಾನ ಎಂಬ ಭೇದವಿಲ್ಲ. ಹಿಂದು-ಮುಸ್ಲಿಂ ಎಂಬ ದ್ವೇಷವಿಲ್ಲ. ಅವನು ಚರ್ಚ್ಗಳನ್ನು ಧ್ವಂಸ ಮಾಡುವುದಿಲ್ಲ. ಮಸೀದಿಯನ್ನು ಕೆಡವಿ ಹೆಮ್ಮೆ ಪಟ್ಟುಕೊಳ್ಳುವುದಿಲ್ಲ. ಆತ ತನ್ನ ನಂಬಿಕೆಗಳನ್ನು ಇತರರ ಮೇಲೆ ಹೇರುವುದಿಲ್ಲ. ದಲಿತರನ್ನು ಆತ ನಿಂದಿಸುವುದಿಲ್ಲ.

ಮಹಿಳೆಯರ ದೇವಸ್ಥಾನ ಪ್ರವೇಶವನ್ನು ಆತ ವಿರೋಧಿಸುವುದಿಲ್ಲ. ಎಲ್ಲರ ಸ್ವಾತಂತ್ರ್ಯವನ್ನು ಆತ ಗೌರವಿಸುತ್ತಾನೆ. ಎಲ್ಲೆಲ್ಲ್ಲೂ ತನ್ನವರಿದ್ದಾರೆ. ಎಲ್ಲಾ ದೇಶಗಳಲ್ಲಿದ್ದಾರೆ. ಎಲ್ಲಾ ಭಾಷೆಗಳನ್ನಾಡುವವರಲ್ಲಿದ್ದಾರೆ. ಎಲ್ಲಾ ಮತಧರ್ಮಗಳ ಅನುಯಾಯಿಗಳಲ್ಲಿದ್ದಾರೆ. ಯಾವುದೇ ಮತವನ್ನು ಪ್ರತಿಪಾದಿಸದಿರುವವರ ನಡುವೆಯೂ ಇದ್ದಾರೆ. ಎಲ್ಲಾ ತರಹದ ಆಹಾರ ಸೇವಿಸುವವರ, ವಿಭಿನ್ನ ಉಡುಪುಗಳನ್ನು ತೊಡುವವರ, ಎಲ್ಲರ ನಡುವೆಯೂ ಆ ವಿಶ್ವ ಮಾನವನಿಗೆ ‘ತನ್ನವರು’ ಇದ್ದಾರೆ.

( ಜನಶಕ್ತಿ ವಾರಪತ್ರಿಕೆಯಲ್ಲಿ ಪ್ರಕಟವಾದ ಲೇಖನ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್ಶಿಪ್ ಅವಕಾಶ : ಅರ್ಜಿ ಆಹ್ವಾನ

Published

on

ಸುದ್ದಿದಿನ,ಬಳ್ಳಾರಿ:ಕರ್ನಾಟಕ ಮಾಧ್ಯಮ ಅಕಾಡೆಮಿಯು ಮಹಿಳಾ ಆಯವ್ಯಯ ಹಾಗೂ ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಗಳಡಿ ಪತ್ರಿಕೋದ್ಯಮದಲ್ಲಿ ಆಸಕ್ತಿ ಇರುವ ಸ್ನಾತಕೋತ್ತರ ಪದವೀಧರರಿಗೆ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್ಶಿಪ್ ಅವಕಾಶ ಕಲ್ಪಿಸಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದವರಿಗೆ ಆದ್ಯತೆ ನೀಡಲಾಗುವುದು. ಬರವಣಿಗೆಯಲ್ಲಿ ಪರಿಣತಿ ಹೊಂದಿರುವ, ಪತ್ರಿಕೋದ್ಯಮದಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

2022-23 ಹಾಗೂ 2023-24 ನೇ ಶೈಕ್ಷಣಿಕ ವರ್ಷದಲ್ಲಿ ಯಾವುದೇ ವಿಷಯದಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಪ್ರವೇಶ ಪರೀಕ್ಷೆಯ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ವಿವರ

ಮಹಿಳಾ ಆಯವ್ಯಯದಡಿ 10 ಮಹಿಳೆಯರು, ಪರಿಶಿಷ್ಟ ಜಾತಿ ಉಪಯೋಜನೆಯಡಿ 10 ಪರಿಶಿಷ್ಟ ಜಾತಿಯ ಅಭ್ಯರ್ಥಿಗಳು ಹಾಗೂ ಪರಿಶಿಷ್ಟ ಪಂಗಡ ಉಪ ಯೋಜನೆಯಡಿ 4 ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಇಂಟರ್ನ್ಶಿಪ್ ಗೆ ಅವಕಾಶ ಕಲ್ಪಿಸಲಾಗುವುದು. ಒಟ್ಟು 24 ಅಭ್ಯರ್ಥಿಗಳಿಗೆ ಇಂಟರ್ನ್ಶಿಪ್ ಅವಕಾಶ ಒದಗಿಸಲಾಗುವುದು.

ಆಯ್ಕೆಯಾದ ಅಭ್ಯರ್ಥಿಗಳಿಗೆ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಎರಡು ತಂಡಗಳಲ್ಲಿ ಎರಡು ತಿಂಗಳ ಇಂಟರ್ನ್ಶಿಪ್ ಗೆ ಅವಕಾಶ ಕಲ್ಪಿಸಲಾಗುವುದು. ಇಂಟರ್ನ್ಶಿಪ್ ಗೆ ಸಂಸ್ಥೆ ಹಾಗೂ ಸ್ಥಳವನ್ನು ಅಕಾಡೆಮಿಯೇ ನಿಗದಿ ಪಡಿಸುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಅಕಾಡೆಮಿ ವತಿಯಿಂದ ಮಾಸಿಕ 20,000/- ರೂ. ಸ್ಟೆöÊಫಂಡ್ ನೀಡಲಾಗುವುದು.

ಅಭ್ಯರ್ಥಿಗಳು ತಮ್ಮ ಸ್ವವಿವರ (Curriculum Vitae) ದೊಂದಿಗೆ ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಪೂರಕ ದಾಖಲೆಗಳೊಂದಿಗೆ ಗೂಗಲ್ ಫಾರ್ಮ್ https://forms.gle/UgNqDcFs1v6akyAD9 ರಲ್ಲಿ ಅರ್ಜಿ ಸಲ್ಲಿಸಬೇಕು. ಅಭ್ಯರ್ಥಿಗಳ ಆಯ್ಕೆಯ ಅಂತಿಮ ತೀರ್ಮಾನ ಅಕಾಡೆಮಿಯ ಸಮಿತಿಯದ್ದೇ ಅಗಿರುತ್ತದೆ.

ಅರ್ಜಿ ಸಲ್ಲಿಸಲು ಜುಲೈ 25 ಕೊನೆಯ ದಿನವಾಗಿದ್ದು, ತಡವಾಗಿ ಬಂದ ಅರ್ಜಿಗಳನ್ನು ಪರಿಗಣಿಸುವುದಿಲ್ಲ ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷರಾದ ಆಯೇಶಾ ಖಾನಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕ್ರೀಡಾ ಸಾಮಾಗ್ರಿಗಳ ಸರಬರಾಜಿಗೆ ಯುವ ಸಂಘಗಳಿಂದ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ಯುವ ಚೈತನ್ಯ ಕಾರ್ಯಕ್ರಮದಡಿ ಕ್ರೀಡಾ ಕಿಟ್‍ಗಳನ್ನು ಸರಬರಾಜು ಮಾಡಲು ಯುವಕ, ಯುವತಿಯರ ಸಂಘಗಳಿಂದ ಸೇವಾ ಸಿಂಧೂ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು.

ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಜುಲೈ 22 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ ದಾವಣಗೆರೆ ದೂ.ಸಂ: 08192-237480 ನ್ನು ಸಂಪರ್ಕಿಸಲು ಸಹಾಯಕ ನಿರ್ದೇಶಕ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಎಂಪೈರ್ ಟ್ರೇಡಿಂಗ್ ಕಂಪನಿಯಲ್ಲಿ ಹಣವನ್ನು ತೊಡಗಿಸಿ ಮೋಸ : ದೂರು ದಾಖಲು

Published

on

ಸುದ್ದಿದಿನ,ದಾವಣಗೆರೆ:ದಾವಣಗೆರೆ ನಗರದ ಡಿಸಿಎಂ ಲೇಔಟಿನ ಎಂಎಸ್‍ಎಂ ಪ್ಲಾಜಾದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆನ್‍ಲೈನ್ ರಿಂಗ್ ವ್ಯವಹಾರ ನಡೆಸಲು ತೆರೆದಿರುವ ಎಂಪೈರ್ ಟ್ರೇಡಿಂಗ್ ಕಂಪನಿ ತೆರೆದುಕೊಂಡು ಸಾರ್ವಜನಿಕರಿಂದ ಹಣವನ್ನು ಆರೋಪಿತರಾದ ಗಜಾನನ ತಂದೆ ರಾಮಪೂಜಾರಪ್ಪ ಇವರು ತಮ್ಮ ಸ್ನೇಹಿತರೊಂದಿಗೆ ಪಡೆದುಕೊಂಡು ಪ್ರತಿ ತಿಂಗಳು ಶೇಕಡಾ 5 ರಷ್ಟು ಲಾಭಾಂಶವನ್ನು ಕೊಡುವುದಾಗಿ ಹೇಳಿ ಕೆಲವು ತಿಂಗಳು ಕೊಟ್ಟು ನಂತರದ ದಿನಗಳಲ್ಲಿ ಲಾಭಾಂಶವನ್ನು ಮತ್ತು ಅಸಲಿನ ಹಣವನ್ನು ಕೊಡದೇ ಒಟ್ಟು ಸಾರ್ವಜನಿಕರಿಂದ 31.50,000/- ರೂಗಳನ್ನು ಕಟ್ಟಿಸಿಕೊಂಡು 61.62.800/- ರೂ ಲಾಭಾಂಶದ ಹಣವನ್ನು ಜಮಾ ಮಾಡಿದ್ದು ರೂ.37,33,500ಗಳನ್ನು 6 ತಿಂಗಳ ಲಾಭಾಂಶದ ಹಣವನ್ನು ಮತ್ತು ಅಸಲಿನ ಹಣವನ್ನು ಕೊಡದೇ ಮೋಸ ಮಾಡಿರುತ್ತಾರೆ ಎಂದು ಹರೀಶ.ಕೆ ತಂದೆ ಉಮೇಶಪ್ಪ ಪೊಲೀಸ್ ಠಾಣೆಗೆ ದೂರು ಸಲ್ಲಿಸಿರುತ್ತಾರೆ.

ಠೇವಣಿದಾರರು ಎಂಪೈರ್ ಟ್ರೇಡಿಂಗ್ ಕಂಪನಿಯಲ್ಲಿ ಹಣವನ್ನು ತೊಡಗಿಸಿ ಮೋಸ ಹೋಗಿದ್ದಲ್ಲಿ ಸೂಕ್ತ ದಾಖಲಾತಿಗಳೊಂದಿಗೆ ದಾವಣಗೆರೆ ನಗರದ ಸಿಇಎನ್ ಪೊಲೀಸ್ ಠಾಣೆ, ಮೊದಲನೇ ಮಹಡಿ ವಿದ್ಯಾನಗರ ಪೊಲೀಸ್ ಇನ್ಸ್‍ಪೆಕ್ಟರ್ ರವರ ಬಳಿ ಹೋಗಿ ಮಾಹಿತಿ ನೀಡಬೇಕು. ದೂ.ಸಂ:08192-225119 ನ್ನು ಸಂಪರ್ಕಿಸಲು ಪೊಲೀಸ್ ನಿರೀಕ್ಷಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ2 days ago

ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್ಶಿಪ್ ಅವಕಾಶ : ಅರ್ಜಿ ಆಹ್ವಾನ

ಸುದ್ದಿದಿನ,ಬಳ್ಳಾರಿ:ಕರ್ನಾಟಕ ಮಾಧ್ಯಮ ಅಕಾಡೆಮಿಯು ಮಹಿಳಾ ಆಯವ್ಯಯ ಹಾಗೂ ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಗಳಡಿ ಪತ್ರಿಕೋದ್ಯಮದಲ್ಲಿ ಆಸಕ್ತಿ ಇರುವ ಸ್ನಾತಕೋತ್ತರ ಪದವೀಧರರಿಗೆ...

ದಿನದ ಸುದ್ದಿ5 days ago

ಕ್ರೀಡಾ ಸಾಮಾಗ್ರಿಗಳ ಸರಬರಾಜಿಗೆ ಯುವ ಸಂಘಗಳಿಂದ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ಯುವ ಚೈತನ್ಯ ಕಾರ್ಯಕ್ರಮದಡಿ ಕ್ರೀಡಾ ಕಿಟ್‍ಗಳನ್ನು ಸರಬರಾಜು ಮಾಡಲು ಯುವಕ, ಯುವತಿಯರ ಸಂಘಗಳಿಂದ ಸೇವಾ ಸಿಂಧೂ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು. ಆನ್ ಲೈನ್...

ದಿನದ ಸುದ್ದಿ1 week ago

ಎಂಪೈರ್ ಟ್ರೇಡಿಂಗ್ ಕಂಪನಿಯಲ್ಲಿ ಹಣವನ್ನು ತೊಡಗಿಸಿ ಮೋಸ : ದೂರು ದಾಖಲು

ಸುದ್ದಿದಿನ,ದಾವಣಗೆರೆ:ದಾವಣಗೆರೆ ನಗರದ ಡಿಸಿಎಂ ಲೇಔಟಿನ ಎಂಎಸ್‍ಎಂ ಪ್ಲಾಜಾದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆನ್‍ಲೈನ್ ರಿಂಗ್ ವ್ಯವಹಾರ ನಡೆಸಲು ತೆರೆದಿರುವ ಎಂಪೈರ್ ಟ್ರೇಡಿಂಗ್ ಕಂಪನಿ ತೆರೆದುಕೊಂಡು ಸಾರ್ವಜನಿಕರಿಂದ ಹಣವನ್ನು ಆರೋಪಿತರಾದ...

ದಿನದ ಸುದ್ದಿ2 weeks ago

ಡ್ರಗ್ಸ್ ಕತ್ತಲೆ ಪ್ರಪಂಚ, ಈಗಿನ ಯುವ ಸಮೂಹ ಅರಿತು ದೂರವಿರಬೇಕು : ಐಜಿ ಡಾ: ರವಿಕಾಂತೇಗೌಡ

ಸುದ್ದಿದಿನ,ದಾವಣಗೆರೆ:ಡಗ್ಸ್ ಕತ್ತಲ ಪ್ರಪಂಚ, ಈ ಜಾಲದ ಬಗ್ಗೆ ಅರಿತು ಯುವ ಸಮೂಹ ದೂರವಿರಬೇಕೆಂದು ಪೂರ್ವ ವಲಯ ಪೊಲೀಸ್ ಮಹಾನಿರೀಕ್ಷಕರಾದ ಡಾ.ಬಿ.ಆರ್ ರವಿಕಾಂತೇಗೌಡ ವಿದ್ಯಾರ್ಥಿಗಳಿಗೆ ತಿಳಿಸಿದರು. ಗುರುವಾರ(ಜೂನ್.26) ರಂದು...

ದಿನದ ಸುದ್ದಿ2 weeks ago

ಮಾದಕ ವಸ್ತುಗಳ ಸಾಗಣೆ ತಡೆಗೆ ಸ್ಕ್ಯಾನರ್ ಅಳವಡಿಕೆಗೆ ಚಿಂತನೆ : ನ್ಯಾಯಾಧೀಶೆ ವೇಲಾ ಡಿ.ಕೆ

ಸುದ್ದಿದಿನ,ದಾವಣಗೆರೆ:ಜಾಗತಿಕವಾಗಿ ಅತೀ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ ನಮ್ಮದಾಗಿದ್ದು ಯುವ ಸಂಪತ್ತನ್ನು ಕಾಪಾಡಿಕೊಳ್ಳಲು ಮಾದಕ ವಸ್ತುಗಳಿಂದ ದೂರವಿರಲು ಇದರ ಸಾಗಾಟ ಮತ್ತು ಮಾರಾಟ ತಡೆಗೆ ಕಟ್ಟುನಿಟ್ಟಿನ ಕ್ರಮ...

ದಿನದ ಸುದ್ದಿ2 weeks ago

ಪೋನ್ – ಇನ್ ಕಾರ್ಯಕ್ರಮದಲ್ಲಿ‌ ಎಸ್ ಪಿ ಉಮಾ‌ ಪ್ರಶಾಂತ್ ; ನೇರ ಸಂವಾದಲ್ಲಿ ನೀವೂ ಪಾಲ್ಗೊಳ್ಳಿ

ಸುದ್ದಿದಿನ,ದಾವಣಗೆರೆ:ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್ ಅವರು ನಾಳೆ ಪೋನ್ –ಇನ್ ಕಾರ್ಯಕ್ರಮದ ಮೂಲಕ ನೇರಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ. ಅಂತರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆ ಅಂಗವಾಗಿ ದಾವಣಗೆರೆ ಜಿಲ್ಲೆಯನ್ನು...

ದಿನದ ಸುದ್ದಿ2 weeks ago

ಎಸ್.ಎಸ್.ಜನರಲ್ ಆಸ್ಪತ್ರೆಯಲ್ಲಿ ಒಳರೋಗಿಗಳ ಸೇವೆಗೆ ಡಾ|| ಶಾಮನೂರು ಶಿವಶಂಕರಪ್ಪ ಚಾಲನೆ

ಸುದ್ದಿದಿನ,ದಾವಣಗೆರೆ:ದಾವಣಗೆರೆಯ ಕೆ.ಆರ್. ರಸ್ತೆಯಲ್ಲಿರುವ ಎಸ್.ಎಸ್. ಜನರಲ್ ಆಸ್ಪತ್ರೆ, ದಾವಣಗೆರೆ ದಕ್ಷಿಣದ ಜನರಿಗೆ, ವಿಶೇಷವಾಗಿ ನಗರದ ಕೊಳೆಗೇರಿಗಳಲ್ಲಿ ವಾಸಿಸುವ ಜನರಿಗೆ ಕೈಗೆಟುಕುವ, ಸುಲಭವಾಗಿ ಸಿಗುವ ಆರೋಗ್ಯ ಸೇವೆಯನ್ನು ಒದಗಿಸಲು...

ಕ್ರೀಡೆ2 weeks ago

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು 1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು...

ದಿನದ ಸುದ್ದಿ2 weeks ago

ಶೀಘ್ರದಲ್ಲೇ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ : ಗೃಹ ಸಚಿವ ಜಿ. ಪರಮೇಶ್ವರ್

ಸುದ್ದಿದಿನಡೆಸ್ಕ್:ಪಿಎಸ್‌ಐ ಹಗರಣ ನಂತರ ಐದು ವರ್ಷಗಳಿಂದ ಇಲ್ಲಿವರೆಗೂ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿರಲಿಲ್ಲ. ಈಗ ಶೀಘ್ರದಲ್ಲಿಯೇ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಗೃಹ...

ದಿನದ ಸುದ್ದಿ2 weeks ago

ನಮ್ಮ ಆರೋಗ್ಯ, ನಮ್ಮ ಕೈಲಿ ; ಗ್ರಾಮ ಪಂಚಾಯಿತಿ ಸಿಬ್ಬಂದಿ‌ ಬಂದು ಚರಂಡಿ ಸ್ವಚ್ಚಗೊಳಿಸುತ್ತಾರೆಂದು ಕಾಯಬಾರದು : ಡಿಸಿ ಗಂಗಾಧರಸ್ವಾಮಿ ಜಿ.ಎಂ

ಸುದ್ದಿದಿನ,ದಾವಣಗೆರೆ:ಅತಿಸಾರ ಭೇದಿ ಸಾಮಾನ್ಯ ಖಾಯಿಲೆ ಅಲ್ಲ, ಇದು ತುಂಬಾ ಗಂಭೀರವಾದ ಖಾಯಿಲೆ. ಆದ್ದರಿಂದ ಅತಿಸಾರ ಭೇದಿ ತಡೆಯುವಲ್ಲಿ ಪ್ರತಿಯೊಬ್ಬರಲ್ಲಿ ಅರಿವು ಅಗತ್ಯ. ಅತಿಸಾರ ಭೇದಿಯ ನಿಯಂತ್ರಣ ಮತ್ತು...

Trending