Connect with us

ದಿನದ ಸುದ್ದಿ

ಸತ್ತವರಲ್ಲಿ ನಮ್ಮವರು ಯಾರು ?

Published

on

ಎಲ್ಲಿ ನೋಡಿದರಲ್ಲಿ ಚಿಂದಿಯಾದ ಶವಗಳು. ಕಾಲಿಟ್ಟಲೆಲ್ಲ ರಕ್ತವೋ ರಕ್ತ. ಲೆಕ್ಕವಿಲ್ಲದಷ್ಟು ಮೃತದೇಹಗಳ ಅವಶೇಷಗಳು. ಮುಂಡವಿಲ್ಲದ ರುಂಡಗಳು, ರುಂಡವಿಲ್ಲದ ಮುಂಡಗಳು. ಕೈ ಕಾಲುಗಳಿಲ್ಲದ ದೇಹಗಳು. ಗಾಯಗೊಂಡು ಒದ್ದಾಡುತ್ತಿದ್ದ ಹಲವರ ದೇಹಗಳಲ್ಲಿ ಚೂಪಾದ ಗಾಜಿನ ಚೂರುಗಳು ಹೊಕ್ಕಿದ್ದವು. ತಮ್ಮವರ ಪತ್ತೆಗಾಗಿ ಸಾವಿರಾರು ಮಂದಿ ಅಲ್ಲಿ ಸೇರಿದ್ದರು. ಶವಗಳನ್ನು ಗುರುತಿಸಲಾಗದೆ ಅವರು ರೋಧಿಸುತ್ತಿದ್ದರು. ಅವರ ಆಕ್ರಂದನ ಮುಗಿಲು ಮುಟ್ಟಿತ್ತು.” ಇದು ಈಸ್ಟರ್ ಭಾನುವಾರ ದ್ವೀಪರಾಷ್ಟ್ರ ಶ್ರೀಲಂಕಾದ ಕೊಲೊಂಬೋ ನಗರದಲ್ಲಿನ 3 ಚರ್ಚ್ಗಳಲ್ಲಿ ಮತ್ತು 3 ಪಂಚತಾರಾ ಹೊಟೇಲುಗಳಲ್ಲಿ ಸಂಭವಿಸಿದ ಭೀಕರ ಸರಣಿ ಬಾಂಬ್ ಸ್ಟೋಟದ ನಂತರ ಕಂಡುಬಂದ ಮನಕಲಕುವ ದೃಶ್ಯ.

ಚರ್ಚ್ಗಳಲ್ಲಿ ಪ್ರಾರ್ಥನೆಯಲ್ಲಿ ನಿರತರಾಗಿದ್ದವರ ಮೇಲೆ ಮತ್ತು ವಿಲಾಸಿ ಹೊಟೇಲುಗಳಲ್ಲಿ ತಂಗಿದ್ದ ವಿದೇಶಿ ಪ್ರವಾಶಿಗರನ್ನು ಗುರಿಯಾಗಿಸಿಕೊಂಡು ನಡೆದ ಎರಡು ಆತ್ಮಹತ್ಯಾ ದಾಳಿ ಮತ್ತು ಬಾಂಬ್ ಸ್ಪೋಟಗಳಿಂದಾಗಿ 300 ಕ್ಕೂ ಅಧಿಕ ಮಂದಿ ಅಮಾಯಕರು ಅಸುನೀಗಿ, 500 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಭಾರತ, ಪಾಕಿಸ್ತಾನ, ಅಮೇರಿಕ, ಡೆನ್ಮಾರ್ಕ್, ಬ್ರಿಟನ್, ಟರ್ಕಿ, ಪೋರ್ಚುಗಲ್, ಚೀನಾ ಮೊದಲಾದ ದೇಶಗಳ 35 ಪ್ರಜೆಗಳು ಮೃತಪಟ್ಟಿದ್ದಾರೆ. ಶ್ರೀಲಂಕಾದ ಇತಿಹಾಸದಲ್ಲೇ ಅತ್ಯಂತ ಬೀಭತ್ಸವಾದ ಈ ದಾಳಿಯನ್ನು ಭಾರತವೂ ಸೇರಿದಂತೆ ವಿಶ್ವದ ಅನೇಕ ದೇಶಗಳ ಗಣ್ಯರು ಬಲವಾಗಿ ಖಂಡಿಸಿದ್ದಾರೆ.

ಅಲ್ಲಿ ಮಕ್ಕಳನ್ನು ಕಳೆದುಕೊಂಡ ಹೆತ್ತವರು, ಅಪ್ಪ-ಅಮ್ಮನನ್ನು ಕಳೆದುಕೊಂಡ ಮಕ್ಕಳು, ಪತಿಯನ್ನು ಕಳೆದುಕೊಂಡ ಮಹಿಳೆಯರು, ಪತ್ನಿಯನ್ನು ಕಳೆದುಕೊಂಡ ಪುರುಷರು ತಮ್ಮವರನ್ನು ಹುಡುಕುತ್ತಿದ್ದರು. ಛಿಧ್ರ, ಛಿಧ್ರವಾದ ಮಾನವ ದೇಹದ ತುಂಡುಗಳಲ್ಲಿ ತಮ್ಮವರನ್ನು ಗುರುತಿಸುವುದು ಹೇಗೆ? ಸತ್ತವರಲ್ಲಿ ನಮ್ಮವರು ಯಾರು?

ಅದೇ ರಕ್ತ! ಅದೇ ಅಂಗಾಂಗಗಳು! ಇವರು ನಮ್ಮವರಾ? ಅವರು ನಮ್ಮವರಾ? ಒಂದರ ಮೇಲೊಂದು ಎಂಬಂತೆ ಬಿದ್ದಿರುವ ಮೃತದೇಹಗಳಲ್ಲಿ ನಮ್ಮವರು ಯಾರು ಎಂದು ಗುರುತಿಸುವುದು ಹೇಗೆ? ಇಂತಹ ಪ್ರಕರಣಗಳಲ್ಲಿ ಮೃತದೇಹಗಳನ್ನು ಗುರುತಿಸಲಾಗದೆ. ತಮಗೆ ಸಂಬಂಧವಿಲ್ಲದ ಮೃತ ದೇಹವನ್ನು ಹಸ್ತಾಂತರಿಸಿಕೊಂಡು ಅಂತ್ಯಸಂಸ್ಕಾರ ಮಾಡಿದ ಉದಾರಣೆಗಳಿವೆ. ಶ್ರೀಲಂಕಾ ಸ್ಪೋಟದಲ್ಲಿ ಮಡಿದ 7 ಜನ ಕನ್ನಡಿಗರು ಸೇರಿದಂತೆ 10 ಜನ ಭಾರತೀಯರು ನಮ್ಮವರೇ. ಮೃತಪಟ್ಟ ಇನ್ನುಳಿದವರೆಲ್ಲರೂ ನಮ್ಮವರೇ. “ಇವ ನಮ್ಮವ, ಇವ ನಮ್ಮವ” ಎನ್ನುವವನಿಗೆ ತಮ್ಮವರು ಸಿಗುತ್ತಾರೆ.ಆತನಿಗೆ ಎಲ್ಲರೂ ತನ್ನವರೇ ಆಗಿರುತ್ತಾರೆ. ಆತ ಮಾನವ ರಕ್ತದಲ್ಲಿ ಬೇಧ ಕಾಣುವುದಿಲ್ಲ.

ಹುಟ್ಟಿನಿಂದಲೇ ಕೆಲವರು ಕೀಳು ಜಾತಿಯವರಾಗಿರುತ್ತಾರೆ ಎಂಬುವುದನ್ನು ಆತ ಒಪ್ಪುವುದಿಲ್ಲ. ಮತ ಧರ್ಮಗಳ ಖಾಸಗಿ ನಂಬಿಕೆಗಳನ್ನು ಆತ ವಿವಾದಾಸ್ಪದಗೊಳಿಸುವುದಿಲ್ಲ. ಪುಲ್ವಾಮಾ ದಾಳಿಯಲ್ಲಿ ಸಾವನ್ನಪ್ಪಿದ ಯೋಧರನ್ನು ಆತ ‘ತನ್ನವರು’ ಎಂದು ದುಃಖಿಸುತ್ತಾನೆ. ಕಳೆದ ಮಾರ್ಚ್ 15 ರಂದು ನ್ಯೂಜಿಲ್ಯಾಂಡ್ನ ಮಸೀದಿಯಲ್ಲಿ ನಡೆದ ಶೂಟೌಟ್ಗೆ ಬಲಿಯಾದ 50 ಮಂದಿ ಪ್ರಾರ್ಥನಾ ನಿರತರನ್ನು ಆತ ‘ತನ್ನವರು’ ಎಂದು ಗುರುತಿಸುತ್ತಾನೆ. ಈಗ ಶ್ರೀಲಂಕಾದ ಚರ್ಚುಗಳಲ್ಲಿ ಬಾಂಬ್ ಸ್ಪೋಟಿಸಿ ಸಾಯಿಸಿದ ನೂರಾರು ಮಂದಿ ಭಕ್ತರನ್ನು ಆತ ‘ತನ್ನವರು’ ಎಂದು ಕಣ್ಣೀರು ಹಾಕುತ್ತಾನೆ. ಆತನಿಗೆ ‘ತನ್ನವರು’ ಸಿಕ್ಕೇ ಸಿಗುತ್ತಾರೆ.

‘ತನ್ನವರು’ ಚೆನ್ನಾಗಿರಬೇಕು. ತನ್ನವರು ನೆಮ್ಮದಿಯಿಂದ ಇರಬೇಕು. ಅವರಿಗೆ ಕಷ್ಟಗಳು ಬರಬಾರದು. ಹೀಗೆ ‘ಇವ ನಮ್ಮವ ಇವ ನಮ್ಮವ’ ಎನ್ನುವವನಿಗೆ ಎಲ್ಲರೂ ಚೆನ್ನಾಗಿರಬೇಕೆಂಬ ಮಹದಾಸೆ! ಆತನಿಗೆ ಯುದ್ಧ ಬೇಡ, ಶಾಂತಿ ಬೇಕು. ಆತನಿಗೆ ಪ್ರೀತಿ ಬೇಕು, ಹಿಂಸೆ ಬೇಡ, ಆತ ಹಂಚಿಕೊಂಡು ಬದುಕು ಬಯಸುತ್ತಾನೆ. ಎಲ್ಲರನ್ನೂ ಒಳಗೊಳ್ಳಲು ಶ್ರಮಿಸುತ್ತಾನೆ. ಆತ ವೈವಿಧ್ಯತೆಯಲ್ಲಿ ಏಕತೆ ಕಾಣುತ್ತಾನೆ. ಆತ ಗಡಿಗಳಿಲ್ಲದ, ಗಡಿ ಘರ್ಷಣೆಗಳಿಲ್ಲದ ವಿಶ್ವದ ಕನಸು ಕಾಣುತ್ತಾನೆ. ಆತ ವಿಶ್ವಮಾನವ. ಸರ್ವಜನಾಂಗ ಪ್ರೇಮಿ, ವಿಶ್ವದ ಕರಿಯರಲ್ಲಿ, ಬಿಳಿಯರಲ್ಲಿ ಆತ ಭೇಧ ಕಾಣುವುದಿಲ್ಲ. ಆಫ್ರಿಕಾದವರು, ಅಮೆರಿಕದವರು ಆತನಿಗೆ ಬೇರೆ ಬೇರೆ ಅಲ್ಲ. ಅವರ ಭಾಷೆ ಯಾವುದೇ ಇರಲಿ. ಅವರ ಆಹಾರ ವಿಹಾರ ಹೇಗೂ ಇರಲಿ, ಆತನಿಗೆ ಅವರೆಲ್ಲರೂ ‘ತನ್ನವರು’.

ಎಲ್ಲಾದರೂ ಸರಿಯೇ, ಭೂಕಂಪದಂತಹ, ಪ್ರವಾಹದಂತಹ, ಬರಗಾಲದಂತಹ ನೈಸರ್ಗಿಕ ವಿಕೋಪ ಸಂಭವಿಸಿ ಸಾವು ನೋವುಗಳಾದಾಗ ಆತ ಮರಗುತ್ತಾನೆ. ತನ್ನ ಕೈಲಾದಷ್ಟು ನೆರವು ನೀಡುತ್ತಾನೆ. ಆತನಿಗೆ ಪಾಕಿಸ್ತಾನ, ಹಿಂದುಸ್ಥಾನ ಎಂಬ ಭೇದವಿಲ್ಲ. ಹಿಂದು-ಮುಸ್ಲಿಂ ಎಂಬ ದ್ವೇಷವಿಲ್ಲ. ಅವನು ಚರ್ಚ್ಗಳನ್ನು ಧ್ವಂಸ ಮಾಡುವುದಿಲ್ಲ. ಮಸೀದಿಯನ್ನು ಕೆಡವಿ ಹೆಮ್ಮೆ ಪಟ್ಟುಕೊಳ್ಳುವುದಿಲ್ಲ. ಆತ ತನ್ನ ನಂಬಿಕೆಗಳನ್ನು ಇತರರ ಮೇಲೆ ಹೇರುವುದಿಲ್ಲ. ದಲಿತರನ್ನು ಆತ ನಿಂದಿಸುವುದಿಲ್ಲ.

ಮಹಿಳೆಯರ ದೇವಸ್ಥಾನ ಪ್ರವೇಶವನ್ನು ಆತ ವಿರೋಧಿಸುವುದಿಲ್ಲ. ಎಲ್ಲರ ಸ್ವಾತಂತ್ರ್ಯವನ್ನು ಆತ ಗೌರವಿಸುತ್ತಾನೆ. ಎಲ್ಲೆಲ್ಲ್ಲೂ ತನ್ನವರಿದ್ದಾರೆ. ಎಲ್ಲಾ ದೇಶಗಳಲ್ಲಿದ್ದಾರೆ. ಎಲ್ಲಾ ಭಾಷೆಗಳನ್ನಾಡುವವರಲ್ಲಿದ್ದಾರೆ. ಎಲ್ಲಾ ಮತಧರ್ಮಗಳ ಅನುಯಾಯಿಗಳಲ್ಲಿದ್ದಾರೆ. ಯಾವುದೇ ಮತವನ್ನು ಪ್ರತಿಪಾದಿಸದಿರುವವರ ನಡುವೆಯೂ ಇದ್ದಾರೆ. ಎಲ್ಲಾ ತರಹದ ಆಹಾರ ಸೇವಿಸುವವರ, ವಿಭಿನ್ನ ಉಡುಪುಗಳನ್ನು ತೊಡುವವರ, ಎಲ್ಲರ ನಡುವೆಯೂ ಆ ವಿಶ್ವ ಮಾನವನಿಗೆ ‘ತನ್ನವರು’ ಇದ್ದಾರೆ.

( ಜನಶಕ್ತಿ ವಾರಪತ್ರಿಕೆಯಲ್ಲಿ ಪ್ರಕಟವಾದ ಲೇಖನ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಮಹಿಳೆಯರ ಪುನರ್ ವಸತಿ ಯೋಜನೆ | ಅರ್ಜಿ ಆಹ್ವಾನ ; ಅವಧಿ ವಿಸ್ತರಣೆ

Published

on

ಸುದ್ದಿದಿನ,ದಾವಣಗೆರೆ: ಪ್ರಸಕ್ತ ಸಾಲಿಗೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಉದ್ಯೋಗಿನಿ, ಚೇತನಾ, ಧನಶ್ರೀ, ಲಿಂಗತ್ವ ಅಲ್ಪ ಸಂಖ್ಯಾತರ ಪುನರ್ವಸತಿ ಯೋಜನೆ ಹಾಗೂ ಮಾಜಿ ದೇವದಾಸಿ ಮಹಿಳೆಯರ ಪುನರ್ ವಸತಿ ಯೋಜನೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು 15 ಜನವರಿ 2026 ರವರೆಗೆ ವಿಸ್ತರಿಸಲಾಗಿದೆ ಎಂದು ಇಲಾಖೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಅಂಚೆ ಇಲಾಖೆಯಿಂದ ಸೆಲ್ಪ್ ಬುಕ್ಕಿಂಗ್ ಸೌಲಭ್ಯ

Published

on

ಸುದ್ದಿದಿನ,ದಾವಣಗೆರೆ:ಭಾರತೀಯ ಅಂಚೆ ಇಲಾಖೆಯಿಂದ ಸೆಲ್ಪ್ ಬುಕ್ಕಿಂಗ್ ಹೊಸ ಸೌಲಭ್ಯವನ್ನು ಆಯೋಜಿಸಲಾಗಿದೆ. ಈ ಸೌಲಭ್ಯದಿಂದ ನಾಗರಿಕರು ತಮ್ಮ ಮೊಬೈಲ್ ಅಥವಾ ಕಂಪ್ಯೂಟರ್ ಬಳಸಿ ಸ್ಪೀಡ್ ಪೊಸ್ಟ್ , ಪಾರ್ಸಲ್ ಸೇರಿದಂತೆ ವಿವಿಧ ಅಂಚೆ ಸೇವೆಗಳನ್ನು ಮನೆಯಿಂದಲೇ ಬುಕ್ ಮಾಡುವ ಅವಕಾಶವನ್ನು ಪಡೆಯಬಹುದು. ಇದರ ಮೂಲಕ ಅಂಚೆ ಕಚೇರಿಯಲ್ಲಿ ಸಾಲಿನಲ್ಲಿ ನಿಲುವ ಅನಿವಾರ್ಯತೆ ಕಡಿಮೆಯಾಗುತ್ತದೆ ಹಾಗೂ ಸಮಯದ ಉಳಿತಾಯವಾಗುತ್ತದೆ.

ಸೇವೆಯನ್ನು ಈ ಮೂಲಕ https://app.indiapost.gov.in/customer.selfservice/home ಪೂರ್ಣಗೊಳಿಸಿದ ನಂತರ ಸೃಷ್ಟಿಯಾಗುವ ಲೇಬಲ್, ಕ್ಯೂಆರ್ ಅನ್ನು ಮುದ್ರಿಸಿ ಹತ್ತಿರದ ಯಾವುದೇ ಅಂಚೆ ಕಚೇರಿಯಲ್ಲಿ ಸ್ಪೀಡ್ ಫೆÇೀಸ್ಟ್, ಪಾರ್ಸೆಲ್ ಅನ್ನು ಬುಕ್ಕಿಂಗ್ ಸಂಖ್ಯೆಯ ಮೂಲಕ ಹಸ್ತಾಂತರಿಸಬಹುದು. ಸಾರ್ವಜನಿಕರು ಈ ನವೀನ ಡಿಜಿಟಲ್ ಸೌಲಭ್ಯವನ್ನು ಹೆಚ್ಚಿನ ಸಂಖ್ಯೆಯಲ್ಲಿ ಬಳಸಿಕೊಳ್ಳಬೇಕೆಂದು ಅಂಚೆ ಅಧೀಕ್ಷಕರಾದ ಚಂದ್ರಶೇಖರ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಪತ್ರಿಕೋದ್ಯಮ ಪದವೀಧರರಿಗೆ ಸಿಹಿ ಸುದ್ದಿ | ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ತರಬೇತಿ ; ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ದಾವಣಗೆರೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಹಿರಿಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ಮಾಧ್ಯಮ ಕ್ಷೇತ್ರದಲ್ಲಿ ಮತ್ತು ಮಾಧ್ಯಮ ಚಟುವಟಿಕೆಗಳ ಕಾರ್ಯನಿರ್ವಹಣೆ ಕುರಿತು 12 ತಿಂಗಳ ಅವಧಿಯ ಅಪ್ರೆಂಟಿಸ್ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಡಿಸೆಂಬರ್ 26 ಕೊನೆಯ ದಿನವಾಗಿದೆ.

ವಿಶೇಷ ಘಟಕ ಯೋಜನೆಯಡಿ 12 ತಿಂಗಳ ಅಪ್ರೆಂಟಿಸ್ ತರಬೇತಿಗಾಗಿ ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತ್ತಕೋತ್ತರ ಪದವಿ ಪೂರ್ಣಗೊಳಿಸಿರುವ ಹಾಗೂ ಕಂಪ್ಯೂಟರ್ ಜ್ಞಾನವಿರುವ, ಕನ್ನಡ ಭಾಷೆ ಬಳಸಲು ಪ್ರಬುದ್ಧತೆ ಇರುವ ಪರಿಶಿಷ್ಟ ಜಾತಿಗೆ ಸೇರಿದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳಿಗೆ 35 ವರ್ಷ ಮೀರಿರಬಾರದು. ಅರ್ಜಿ ಲಕೋಟೆಯ ಮೇಲೆ ಕಡ್ಡಾಯವಾಗಿ ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ನೀಡುವ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಎಂದು ನಮೂದಿಸಬೇಕು. ಆಯ್ಕೆಯಾದ ಅಭ್ಯರ್ಥಿಗಳು ಸಂದರ್ಶನದ ವೇಳೆ ಮೂಲ ದಾಖಲೆಗಳನ್ನು ಕಡ್ಡಾಯವಾಗಿ ಸಲ್ಲಿಸುವುದು. ಆಯ್ಕೆಯಾಗಿ ತರಬೇತಿಗೆ ಹಾಜರಾಗುವ ಸಂದರ್ಭದಲ್ಲಿ ಮೂಲ ದಾಖಲಾತಿಗಳನ್ನು ಕಚೇರಿಗೆ ಸಲ್ಲಿಸಬೇಕು.

ಅರ್ಜಿ ಸಲ್ಲಿಸಿದ ಸಂದರ್ಭದಲ್ಲಿ ಅಭ್ಯರ್ಥಿಗಳು ಪದವಿಯ ಎಲ್ಲ ವರ್ಷಗಳ ಅಂಕಪಟ್ಟಿಗಳು, ಸ್ನಾತ್ತಕೋತ್ತರ ಪದವಿಯ ಎಲ್ಲ ಅಂಕಪಟ್ಟಿಯೊಂದಿಗೆ ಅರ್ಜಿ ಸಲ್ಲಿಸಬೇಕು. ಅಂಕಪಟ್ಟಿಯನ್ನು ನಿರೀಕ್ಷಿಸಿ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ. ತರಬೇತಿಯ ಅವಧಿ ವೇಳೆ ಮಾಹೆಯಾನ 15,000 ರೂಗಳ ಶಿಷ್ಯ ವೇತನ ನೀಡಲಾಗುವುದು. ತರಬೇತಿಯು 2026 ರ ಜನವರಿಯಿಂದ ಡಿಸೆಂಬರ್‍ವರೆಗೆ 12 ತಿಂಗಳ ಅವಧಿಯದಾಗಿದ್ದು, ತಾತ್ಕಾಲಿಕವಾಗಿರುತ್ತದೆ. ತರಬೇತಿ ಮುಗಿದ ನಂತರ ಮುಂದುವರೆಸಲು ಅಥವಾ ಖಾಯಂಗೊಳಿಸಲು ಯಾವುದೇ ಅವಕಾಶ ಇರುವುದಿಲ್ಲ.

ತರಬೇತಿಯ ಅವಧಿಯಲ್ಲಿ ತರಬೇತಾರ್ಥಿಗಳು ಬೇರೆ ಉದ್ಯೋಗ ಮಾಡುವಂತಿಲ್ಲ. ತರಬೇತಿಯ ಅವಧಿಯ ಮಧ್ಯದಲ್ಲಿ ಬಿಟ್ಟು ಹೋದರೆ, ಮೂಲ ದಾಖಲಾತಿಗಳನ್ನು ಅವಧಿಗೆ ಮುನ್ನ ಹಿಂದಿರುಗಿಸುವುದಿಲ್ಲ. ಒಮ್ಮೆ ಫಲಾನುಭವಿಯಾದವರನ್ನು ಈ ಯೋಜನೆಯಡಿ ಮತ್ತೊಂದು ಅವಧಿಗೆ ಆಯ್ಕೆ ಮಾಡಲು ಅವಕಾಶವಿರುವುದಿಲ್ಲ ಹಾಗೂ ಸುಳ್ಳು ಮಾಹಿತಿ ನೀಡಿ ಅರ್ಜಿ ಸಲ್ಲಿಸಿದ್ದಲ್ಲಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು.

ಆಸಕ್ತರು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಹಿರಿಯ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ದಾವಣಗೆರೆ ಇಲ್ಲಿ, ಮೊ.9480841218 ಗೆ ಸಂಪರ್ಕಿಸಬಹುದು ಎಂದು ಹಿರಿಯ ಸಹಾಯಕ ನಿರ್ದೇಶಕರಾದ ಧನಂಜಯ ಬಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ11 hours ago

ಮಹಿಳೆಯರ ಪುನರ್ ವಸತಿ ಯೋಜನೆ | ಅರ್ಜಿ ಆಹ್ವಾನ ; ಅವಧಿ ವಿಸ್ತರಣೆ

ಸುದ್ದಿದಿನ,ದಾವಣಗೆರೆ: ಪ್ರಸಕ್ತ ಸಾಲಿಗೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಉದ್ಯೋಗಿನಿ, ಚೇತನಾ, ಧನಶ್ರೀ, ಲಿಂಗತ್ವ ಅಲ್ಪ ಸಂಖ್ಯಾತರ ಪುನರ್ವಸತಿ ಯೋಜನೆ ಹಾಗೂ ಮಾಜಿ ದೇವದಾಸಿ ಮಹಿಳೆಯರ...

ದಿನದ ಸುದ್ದಿ19 hours ago

ಅಂಚೆ ಇಲಾಖೆಯಿಂದ ಸೆಲ್ಪ್ ಬುಕ್ಕಿಂಗ್ ಸೌಲಭ್ಯ

ಸುದ್ದಿದಿನ,ದಾವಣಗೆರೆ:ಭಾರತೀಯ ಅಂಚೆ ಇಲಾಖೆಯಿಂದ ಸೆಲ್ಪ್ ಬುಕ್ಕಿಂಗ್ ಹೊಸ ಸೌಲಭ್ಯವನ್ನು ಆಯೋಜಿಸಲಾಗಿದೆ. ಈ ಸೌಲಭ್ಯದಿಂದ ನಾಗರಿಕರು ತಮ್ಮ ಮೊಬೈಲ್ ಅಥವಾ ಕಂಪ್ಯೂಟರ್ ಬಳಸಿ ಸ್ಪೀಡ್ ಪೊಸ್ಟ್ , ಪಾರ್ಸಲ್...

ದಿನದ ಸುದ್ದಿ2 days ago

ಪತ್ರಿಕೋದ್ಯಮ ಪದವೀಧರರಿಗೆ ಸಿಹಿ ಸುದ್ದಿ | ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ತರಬೇತಿ ; ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ದಾವಣಗೆರೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಹಿರಿಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ಮಾಧ್ಯಮ ಕ್ಷೇತ್ರದಲ್ಲಿ ಮತ್ತು ಮಾಧ್ಯಮ ಚಟುವಟಿಕೆಗಳ...

ದಿನದ ಸುದ್ದಿ3 days ago

ಬೆಂಬಲ ಬೆಲೆ | ಮೆಕ್ಕೆಜೋಳ ಖರೀದಿ ಪ್ರಕ್ರಿಯೆ ಪ್ರಾರಂಭ: ಡಿಸಿ ಗಂಗಾಧರಸ್ವಾಮಿ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ರೈತರು ಬೆಳೆದ ಮೆಕ್ಕೆಜೋಳವನ್ನು ಬುಧುವಾರದಿಂದ ರೈತರಿಂದ ಖರೀದಿಸಲಾಗುವುದು ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ರವರು ತಿಳಿಸಿದರು. ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ...

ದಿನದ ಸುದ್ದಿ4 days ago

ಯಮ ಸ್ವರೂಪಿ ಗ್ಯಾಸ್ ಗೀಸರ್ ಬಳಸೋ ಮುನ್ನ ಎಚ್ಚರ ; ಇವಿಷ್ಟನ್ನು ಪಾಲಿಸಿ ಅಪಾಯ ತಡೆಗಟ್ಟಿ

~ಅನಿರೀಕ್ಷಿತ್ ನಾರಾಯಣ ಕೆಲ ಮುನ್ನೆಚ್ಚರಿಕೆಯ ಅಂಶಗಳನ್ನು ಪಾಲಿಸುವುದರಿಂದ ಗ್ಯಾಸ್ ಗೀಸರ್ ನಿಂದ ಆಗುವ ಅಪಾಯವನ್ನು ತಡೆಗಟ್ಟಬಹುದು. 1. ಮೊದಲಿಗೆ ಇದು ಎಲ್ಲರಿಗೂ ಗೊತ್ತಿರುವ ವಿಷಯ. ಗ್ಯಾಸ್ ಗೀಸರ್...

ದಿನದ ಸುದ್ದಿ7 days ago

ಮಾನವ ಸಂಪನ್ಮೂಲ ನೀತಿ ಗುತ್ತಿಗೆ ನೌಕರರಿಗೆ ಮಾರಕ | ನೀತಿ ರದ್ದುಗೊಳಿಸಲು ಶಾಸಕ ಜೆ.ಎಸ್.ಬಸವಂತಪ್ಪಗೆ ಮನವಿ

ಸುದ್ದಿದಿನ,ದಾವಣಗೆರೆ: ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಪ್ರಸ್ತಾವನೆ ಎನ್ಎಚ್ ಎಂ ಸಿಬ್ಬಂದಿಗಳಲ್ಲಿ ಆತಂಕ ಮೂಡಿಸಿದ್ದು, ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು ಮಧ್ಯಸ್ತಿಕೆ ವಹಿಸಿ ಸರಿಪಡಿಸಲು ಶಿಪಾರಸ್ಸು ಮಾಡಬೇಕು....

ದಿನದ ಸುದ್ದಿ7 days ago

ದಾವಣಗೆರೆ | ಕನ್ನಡ ಚಳವಳಿ ಸಮಿತಿಯಿಂದ ಇಮ್ಮಡಿ ಪುಲಕೇಶಿ ಜಯಂತಿ ಆಚರಣೆ

ಸುದ್ದಿದಿನ,ದಾವಣಗೆರೆ:ನಗರದ ಜಯದೇವ ವೃತ್ತದಲ್ಲಿರುವ ಅಖಿಲ ಕರ್ನಾಟಕ ಕನ್ನಡ ಚಳವಳಿ ಕೇಂದ್ರ ಸಮಿತಿಯಿಂದ ಗುರುವಾರ (ಡಿಸೆಂಬರ್.4) ಕನ್ನಡ ಚಳವಳಿಯ ಕಚೇರಿಯ ಆವರಣದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಟಿ...

ದಿನದ ಸುದ್ದಿ1 week ago

ದಾವಣಗೆರೆ | ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಕ್ರಮಿಸುತ್ತಿರುವ ಅರ್ಹ ಸಂಘ, ಸಂಸ್ಥೆಗಳಿಗೆ ಮತ್ತು ವ್ಯಕ್ತಿಗಳನ್ನೊಳಗೊಂಡಂತೆ ಕ್ರೀಡೆ, ಕಲೆ, ಸಾಹಿತ್ಯ...

ದಿನದ ಸುದ್ದಿ1 week ago

ದಾವಣಗೆರೆ | ಜಿಲ್ಲಾ ಪಂಚಾಯಿತಿ ಸಿ.ಇ.ಒ ಗಿತ್ತೆ ಮಾಧವ್ ವಿಠ್ಠಲ್ ರಾವ್ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ:2023-24ನೇ ಸಾಲಿನಲ್ಲಿ ಚನ್ನಗಿರಿ ತಾಲ್ಲೂಕಿನಲ್ಲಿ ಬರುವ ಸಮಸ್ಯಾತ್ಮಕ ಗ್ರಾಮಗಳಲ್ಲಿ ತುರ್ತು ಕುಡಿಯುವ ನೀರಿನ ಕಾಮಗಾರಿಯಲ್ಲಿ ನಡೆದಿರುವ ಅವ್ಯವಹಾರ ತನಿಖೆಗೆ ಒಳಪಡಿಸುವಂತೆ ಕೋರಿ ಅರ್ಜಿ ಸಲ್ಲಿಸಿ 5 ತಿಂಗಳು...

ದಿನದ ಸುದ್ದಿ1 week ago

ಜಿಎಂ ವಿಶ್ವವಿದ್ಯಾಲಯ ರಂಗೋತ್ಸವ -2025 | ವಿದ್ಯಾರ್ಥಿಗಳ ಪ್ರತಿಭೆ ಅನಾವರಣ : ಸ್ಪರ್ಧೆಯಲ್ಲಿ ರಂಗ ಪ್ರೇಮ, ನಟನಾ ಚತುರತೆ ಬೆರಗು

ಸುದ್ದಿದಿನ,ದಾವಣಗೆರೆ:ನಗರದ ಜಿಎಂ ವಿಶ್ವವಿದ್ಯಾನಿಲಯದ ಜಿಎಂ ಹಾಲಮ್ಮ ಸಭಾಂಗಣದಲ್ಲಿ 1.12 2025 ರಂದು ರಂಗೋತ್ಸವ -2025 ರ ಅಂತಿಮ ಸುತ್ತು ಗ್ರ್ಯಾಂಡ್ ಫಿನಾಲೆಯನ್ನು ಏರ್ಪಡಿಸಲಾಗಿತ್ತು. ಜಿಎಂ ವಿಶ್ವವಿದ್ಯಾಲಯದ ಎಲ್ಲಾ...

Trending