Connect with us

ದಿನದ ಸುದ್ದಿ

ಸತ್ತವರಲ್ಲಿ ನಮ್ಮವರು ಯಾರು ?

Published

on

ಎಲ್ಲಿ ನೋಡಿದರಲ್ಲಿ ಚಿಂದಿಯಾದ ಶವಗಳು. ಕಾಲಿಟ್ಟಲೆಲ್ಲ ರಕ್ತವೋ ರಕ್ತ. ಲೆಕ್ಕವಿಲ್ಲದಷ್ಟು ಮೃತದೇಹಗಳ ಅವಶೇಷಗಳು. ಮುಂಡವಿಲ್ಲದ ರುಂಡಗಳು, ರುಂಡವಿಲ್ಲದ ಮುಂಡಗಳು. ಕೈ ಕಾಲುಗಳಿಲ್ಲದ ದೇಹಗಳು. ಗಾಯಗೊಂಡು ಒದ್ದಾಡುತ್ತಿದ್ದ ಹಲವರ ದೇಹಗಳಲ್ಲಿ ಚೂಪಾದ ಗಾಜಿನ ಚೂರುಗಳು ಹೊಕ್ಕಿದ್ದವು. ತಮ್ಮವರ ಪತ್ತೆಗಾಗಿ ಸಾವಿರಾರು ಮಂದಿ ಅಲ್ಲಿ ಸೇರಿದ್ದರು. ಶವಗಳನ್ನು ಗುರುತಿಸಲಾಗದೆ ಅವರು ರೋಧಿಸುತ್ತಿದ್ದರು. ಅವರ ಆಕ್ರಂದನ ಮುಗಿಲು ಮುಟ್ಟಿತ್ತು.” ಇದು ಈಸ್ಟರ್ ಭಾನುವಾರ ದ್ವೀಪರಾಷ್ಟ್ರ ಶ್ರೀಲಂಕಾದ ಕೊಲೊಂಬೋ ನಗರದಲ್ಲಿನ 3 ಚರ್ಚ್ಗಳಲ್ಲಿ ಮತ್ತು 3 ಪಂಚತಾರಾ ಹೊಟೇಲುಗಳಲ್ಲಿ ಸಂಭವಿಸಿದ ಭೀಕರ ಸರಣಿ ಬಾಂಬ್ ಸ್ಟೋಟದ ನಂತರ ಕಂಡುಬಂದ ಮನಕಲಕುವ ದೃಶ್ಯ.

ಚರ್ಚ್ಗಳಲ್ಲಿ ಪ್ರಾರ್ಥನೆಯಲ್ಲಿ ನಿರತರಾಗಿದ್ದವರ ಮೇಲೆ ಮತ್ತು ವಿಲಾಸಿ ಹೊಟೇಲುಗಳಲ್ಲಿ ತಂಗಿದ್ದ ವಿದೇಶಿ ಪ್ರವಾಶಿಗರನ್ನು ಗುರಿಯಾಗಿಸಿಕೊಂಡು ನಡೆದ ಎರಡು ಆತ್ಮಹತ್ಯಾ ದಾಳಿ ಮತ್ತು ಬಾಂಬ್ ಸ್ಪೋಟಗಳಿಂದಾಗಿ 300 ಕ್ಕೂ ಅಧಿಕ ಮಂದಿ ಅಮಾಯಕರು ಅಸುನೀಗಿ, 500 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಭಾರತ, ಪಾಕಿಸ್ತಾನ, ಅಮೇರಿಕ, ಡೆನ್ಮಾರ್ಕ್, ಬ್ರಿಟನ್, ಟರ್ಕಿ, ಪೋರ್ಚುಗಲ್, ಚೀನಾ ಮೊದಲಾದ ದೇಶಗಳ 35 ಪ್ರಜೆಗಳು ಮೃತಪಟ್ಟಿದ್ದಾರೆ. ಶ್ರೀಲಂಕಾದ ಇತಿಹಾಸದಲ್ಲೇ ಅತ್ಯಂತ ಬೀಭತ್ಸವಾದ ಈ ದಾಳಿಯನ್ನು ಭಾರತವೂ ಸೇರಿದಂತೆ ವಿಶ್ವದ ಅನೇಕ ದೇಶಗಳ ಗಣ್ಯರು ಬಲವಾಗಿ ಖಂಡಿಸಿದ್ದಾರೆ.

ಅಲ್ಲಿ ಮಕ್ಕಳನ್ನು ಕಳೆದುಕೊಂಡ ಹೆತ್ತವರು, ಅಪ್ಪ-ಅಮ್ಮನನ್ನು ಕಳೆದುಕೊಂಡ ಮಕ್ಕಳು, ಪತಿಯನ್ನು ಕಳೆದುಕೊಂಡ ಮಹಿಳೆಯರು, ಪತ್ನಿಯನ್ನು ಕಳೆದುಕೊಂಡ ಪುರುಷರು ತಮ್ಮವರನ್ನು ಹುಡುಕುತ್ತಿದ್ದರು. ಛಿಧ್ರ, ಛಿಧ್ರವಾದ ಮಾನವ ದೇಹದ ತುಂಡುಗಳಲ್ಲಿ ತಮ್ಮವರನ್ನು ಗುರುತಿಸುವುದು ಹೇಗೆ? ಸತ್ತವರಲ್ಲಿ ನಮ್ಮವರು ಯಾರು?

ಅದೇ ರಕ್ತ! ಅದೇ ಅಂಗಾಂಗಗಳು! ಇವರು ನಮ್ಮವರಾ? ಅವರು ನಮ್ಮವರಾ? ಒಂದರ ಮೇಲೊಂದು ಎಂಬಂತೆ ಬಿದ್ದಿರುವ ಮೃತದೇಹಗಳಲ್ಲಿ ನಮ್ಮವರು ಯಾರು ಎಂದು ಗುರುತಿಸುವುದು ಹೇಗೆ? ಇಂತಹ ಪ್ರಕರಣಗಳಲ್ಲಿ ಮೃತದೇಹಗಳನ್ನು ಗುರುತಿಸಲಾಗದೆ. ತಮಗೆ ಸಂಬಂಧವಿಲ್ಲದ ಮೃತ ದೇಹವನ್ನು ಹಸ್ತಾಂತರಿಸಿಕೊಂಡು ಅಂತ್ಯಸಂಸ್ಕಾರ ಮಾಡಿದ ಉದಾರಣೆಗಳಿವೆ. ಶ್ರೀಲಂಕಾ ಸ್ಪೋಟದಲ್ಲಿ ಮಡಿದ 7 ಜನ ಕನ್ನಡಿಗರು ಸೇರಿದಂತೆ 10 ಜನ ಭಾರತೀಯರು ನಮ್ಮವರೇ. ಮೃತಪಟ್ಟ ಇನ್ನುಳಿದವರೆಲ್ಲರೂ ನಮ್ಮವರೇ. “ಇವ ನಮ್ಮವ, ಇವ ನಮ್ಮವ” ಎನ್ನುವವನಿಗೆ ತಮ್ಮವರು ಸಿಗುತ್ತಾರೆ.ಆತನಿಗೆ ಎಲ್ಲರೂ ತನ್ನವರೇ ಆಗಿರುತ್ತಾರೆ. ಆತ ಮಾನವ ರಕ್ತದಲ್ಲಿ ಬೇಧ ಕಾಣುವುದಿಲ್ಲ.

ಹುಟ್ಟಿನಿಂದಲೇ ಕೆಲವರು ಕೀಳು ಜಾತಿಯವರಾಗಿರುತ್ತಾರೆ ಎಂಬುವುದನ್ನು ಆತ ಒಪ್ಪುವುದಿಲ್ಲ. ಮತ ಧರ್ಮಗಳ ಖಾಸಗಿ ನಂಬಿಕೆಗಳನ್ನು ಆತ ವಿವಾದಾಸ್ಪದಗೊಳಿಸುವುದಿಲ್ಲ. ಪುಲ್ವಾಮಾ ದಾಳಿಯಲ್ಲಿ ಸಾವನ್ನಪ್ಪಿದ ಯೋಧರನ್ನು ಆತ ‘ತನ್ನವರು’ ಎಂದು ದುಃಖಿಸುತ್ತಾನೆ. ಕಳೆದ ಮಾರ್ಚ್ 15 ರಂದು ನ್ಯೂಜಿಲ್ಯಾಂಡ್ನ ಮಸೀದಿಯಲ್ಲಿ ನಡೆದ ಶೂಟೌಟ್ಗೆ ಬಲಿಯಾದ 50 ಮಂದಿ ಪ್ರಾರ್ಥನಾ ನಿರತರನ್ನು ಆತ ‘ತನ್ನವರು’ ಎಂದು ಗುರುತಿಸುತ್ತಾನೆ. ಈಗ ಶ್ರೀಲಂಕಾದ ಚರ್ಚುಗಳಲ್ಲಿ ಬಾಂಬ್ ಸ್ಪೋಟಿಸಿ ಸಾಯಿಸಿದ ನೂರಾರು ಮಂದಿ ಭಕ್ತರನ್ನು ಆತ ‘ತನ್ನವರು’ ಎಂದು ಕಣ್ಣೀರು ಹಾಕುತ್ತಾನೆ. ಆತನಿಗೆ ‘ತನ್ನವರು’ ಸಿಕ್ಕೇ ಸಿಗುತ್ತಾರೆ.

‘ತನ್ನವರು’ ಚೆನ್ನಾಗಿರಬೇಕು. ತನ್ನವರು ನೆಮ್ಮದಿಯಿಂದ ಇರಬೇಕು. ಅವರಿಗೆ ಕಷ್ಟಗಳು ಬರಬಾರದು. ಹೀಗೆ ‘ಇವ ನಮ್ಮವ ಇವ ನಮ್ಮವ’ ಎನ್ನುವವನಿಗೆ ಎಲ್ಲರೂ ಚೆನ್ನಾಗಿರಬೇಕೆಂಬ ಮಹದಾಸೆ! ಆತನಿಗೆ ಯುದ್ಧ ಬೇಡ, ಶಾಂತಿ ಬೇಕು. ಆತನಿಗೆ ಪ್ರೀತಿ ಬೇಕು, ಹಿಂಸೆ ಬೇಡ, ಆತ ಹಂಚಿಕೊಂಡು ಬದುಕು ಬಯಸುತ್ತಾನೆ. ಎಲ್ಲರನ್ನೂ ಒಳಗೊಳ್ಳಲು ಶ್ರಮಿಸುತ್ತಾನೆ. ಆತ ವೈವಿಧ್ಯತೆಯಲ್ಲಿ ಏಕತೆ ಕಾಣುತ್ತಾನೆ. ಆತ ಗಡಿಗಳಿಲ್ಲದ, ಗಡಿ ಘರ್ಷಣೆಗಳಿಲ್ಲದ ವಿಶ್ವದ ಕನಸು ಕಾಣುತ್ತಾನೆ. ಆತ ವಿಶ್ವಮಾನವ. ಸರ್ವಜನಾಂಗ ಪ್ರೇಮಿ, ವಿಶ್ವದ ಕರಿಯರಲ್ಲಿ, ಬಿಳಿಯರಲ್ಲಿ ಆತ ಭೇಧ ಕಾಣುವುದಿಲ್ಲ. ಆಫ್ರಿಕಾದವರು, ಅಮೆರಿಕದವರು ಆತನಿಗೆ ಬೇರೆ ಬೇರೆ ಅಲ್ಲ. ಅವರ ಭಾಷೆ ಯಾವುದೇ ಇರಲಿ. ಅವರ ಆಹಾರ ವಿಹಾರ ಹೇಗೂ ಇರಲಿ, ಆತನಿಗೆ ಅವರೆಲ್ಲರೂ ‘ತನ್ನವರು’.

ಎಲ್ಲಾದರೂ ಸರಿಯೇ, ಭೂಕಂಪದಂತಹ, ಪ್ರವಾಹದಂತಹ, ಬರಗಾಲದಂತಹ ನೈಸರ್ಗಿಕ ವಿಕೋಪ ಸಂಭವಿಸಿ ಸಾವು ನೋವುಗಳಾದಾಗ ಆತ ಮರಗುತ್ತಾನೆ. ತನ್ನ ಕೈಲಾದಷ್ಟು ನೆರವು ನೀಡುತ್ತಾನೆ. ಆತನಿಗೆ ಪಾಕಿಸ್ತಾನ, ಹಿಂದುಸ್ಥಾನ ಎಂಬ ಭೇದವಿಲ್ಲ. ಹಿಂದು-ಮುಸ್ಲಿಂ ಎಂಬ ದ್ವೇಷವಿಲ್ಲ. ಅವನು ಚರ್ಚ್ಗಳನ್ನು ಧ್ವಂಸ ಮಾಡುವುದಿಲ್ಲ. ಮಸೀದಿಯನ್ನು ಕೆಡವಿ ಹೆಮ್ಮೆ ಪಟ್ಟುಕೊಳ್ಳುವುದಿಲ್ಲ. ಆತ ತನ್ನ ನಂಬಿಕೆಗಳನ್ನು ಇತರರ ಮೇಲೆ ಹೇರುವುದಿಲ್ಲ. ದಲಿತರನ್ನು ಆತ ನಿಂದಿಸುವುದಿಲ್ಲ.

ಮಹಿಳೆಯರ ದೇವಸ್ಥಾನ ಪ್ರವೇಶವನ್ನು ಆತ ವಿರೋಧಿಸುವುದಿಲ್ಲ. ಎಲ್ಲರ ಸ್ವಾತಂತ್ರ್ಯವನ್ನು ಆತ ಗೌರವಿಸುತ್ತಾನೆ. ಎಲ್ಲೆಲ್ಲ್ಲೂ ತನ್ನವರಿದ್ದಾರೆ. ಎಲ್ಲಾ ದೇಶಗಳಲ್ಲಿದ್ದಾರೆ. ಎಲ್ಲಾ ಭಾಷೆಗಳನ್ನಾಡುವವರಲ್ಲಿದ್ದಾರೆ. ಎಲ್ಲಾ ಮತಧರ್ಮಗಳ ಅನುಯಾಯಿಗಳಲ್ಲಿದ್ದಾರೆ. ಯಾವುದೇ ಮತವನ್ನು ಪ್ರತಿಪಾದಿಸದಿರುವವರ ನಡುವೆಯೂ ಇದ್ದಾರೆ. ಎಲ್ಲಾ ತರಹದ ಆಹಾರ ಸೇವಿಸುವವರ, ವಿಭಿನ್ನ ಉಡುಪುಗಳನ್ನು ತೊಡುವವರ, ಎಲ್ಲರ ನಡುವೆಯೂ ಆ ವಿಶ್ವ ಮಾನವನಿಗೆ ‘ತನ್ನವರು’ ಇದ್ದಾರೆ.

( ಜನಶಕ್ತಿ ವಾರಪತ್ರಿಕೆಯಲ್ಲಿ ಪ್ರಕಟವಾದ ಲೇಖನ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸ್ಟಾರ್ ಹೆಲ್ತ್ ಉಚಿತ ವೈದ್ಯಕೀಯ ಸಲಹೆ

Published

on

ಸುದ್ದಿದಿನ,ದಾವಣಗೆರೆ: ದೇಶದ ಪ್ರಮುಖ ಆರೋಗ್ಯ ವಿಮೆ ಸಂಸ್ಥೆಗಳಲ್ಲಿ ಒಂದಾಗಿರುವ ಸ್ಟಾರ್ ಹೆಲ್ತ್ ಅಂಡ್ ಅಲೈಡ್ ಇನ್ಶುರನ್ಸ್ ಕಂಪನಿ ಲಿಮಿಟೆಡ್, ಕರ್ನಾಟಕದಲ್ಲಿ ಮಳೆಗಾಲದಲ್ಲಿ ಜನರನ್ನು ಕಾಡುವ ವಿವಿಧ ಬಗೆಯ ಕಾಯಿಲೆಗಳ ಚಿಕಿತ್ಸಾ ಸೌಲಭ್ಯವನ್ನು ವಿಸ್ತರಿಸಿದೆ.

ಈ ಉಪಕ್ರಮದ ಮೂಲಕ, ಪಾಲಿಸಿದಾರರಿಗೆ ‘ಟಾಕ್ ಟು ಸ್ಟಾರ್’ ಸೇವೆ ಹಾಗೂ ಮನೆ ಬಾಗಿಲಿನ ಆರೋಗ್ಯ ಸೇವೆ ಕಲ್ಪಿಸಿಕೊಡಲಾಗುತ್ತಿದೆ. ಇದರ ನೆರವಿನಿಂದ ಆರಂಭಿಕ ಹಂತದಲ್ಲೇ ಅಗತ್ಯ ವೈದ್ಯಕೀಯ ಸಲಹೆ ಮತ್ತು ಪರೀಕ್ಷೆಗಳ ನೆರವು ಒದಗಿಸಲಾಗುತ್ತಿದೆ. ಜೊತೆಗೆ, ಸಾರ್ವಜನಿಕರು ಸ್ಟಾರ್ ಹೆಲ್ತ್ ಕಸ್ಟಮರ್ ಆ್ಯಪ್ ಮೂಲಕ 24*7 ಉಚಿತ ವರ್ಚುವಲ್ ವೈದ್ಯರ ಸಮಾಲೋಚನೆ ಪಡೆಯುವ ಅವಕಾಶವನ್ನೂ ಕಲ್ಪಿಸಲಾಗಿದೆ ಎಂದು ಸ್ಟಾರ್ ಹೆಲ್ತ್ ಇನ್ಶುರನ್ಸ್ ಕರ್ನಾಟಕ ವಹಿವಾಟು ವಿಭಾಗದ ಮುಖ್ಯಸ್ಥ ಆದಿತ್ಯ ಓಂಪ್ರಕಾಶ್ ಬಿಯಾನಿ ಹೇಳಿದ್ದಾರೆ.

ಪಾಲಿಸಿದಾರರಿಗೆ ಅನಿಯಮಿತ ಟೆಲಿ ಸಮಾಲೋಚನೆಯಡಿ ಪಾಲಿಸಿ ಅವಧಿಯಲ್ಲಿ ಎಷ್ಟೇ ಬಾರಿ ಬೇಕಾದರೂ ದೂರವಾಣಿ ಅಥವಾ ಆನ್‍ಲೈನ್ ಮೂಲಕ ವೈದ್ಯರ ಸಲಹೆ ಪಡೆಯಬಹುದು. ಜ್ವರ ಅಥವಾ ಸೋಂಕಿನ ಆರಂಭಿಕ ಲಕ್ಷಣಗಳು ಕಂಡುಬಂದ ಕೂಡಲೇ ವೈದ್ಯಕೀಯ ಸಲಹೆ ಪಡೆಯಲು ಇದು ನೆರವಾಗುತ್ತದೆ. ಸಾರ್ವಜನಿಕರಿಗೆ ಉಚಿತ ವರ್ಚುವಲ್ ವೈದ್ಯರ ಸಮಾಲೋಚನೆಯೂ ಇರುತ್ತದೆ.

ಅಂತೆಯೇ ಪಾಲಿಸಿದಾರರು ‘ಟಾಕ್ ಟು ಸ್ಟಾರ್’ ಸೇವೆಯಡಿ 7200 222 333 ಸಂಖ್ಯೆಗೆ ಕರೆ ಮಾಡಿ ಮಾರ್ಗದರ್ಶನ ಪಡೆಯಬಹುದು. ನಗದುರಹಿತ ಮನೆ ಬಾಗಿಲಿನ ಆರೋಗ್ಯ ಸೇವೆಯಡಿ ಅರ್ಹ ಪಾಲಿಸಿದಾರರಿಗೆ ಸ್ಟಾರ್ ಹೆಲ್ತ್ ಕ್ಯಾಷ್‍ಲೆಸ್- ಸೌಲಭ್ಯದ ಮೂಲಕ ಮನೆ ಬಾಗಿಲಿಗೇ ಆರೋಗ್ಯ ಸೇವೆ ಒದಗಿಸಲಾಗುತ್ತದೆ. ವೈದ್ಯರ ಸಲಹೆಯಂತೆ ನಸಿರ್ಂಗ್ ಸೇವೆ, ರಕ್ತ ಪರೀಕ್ಷೆ, ಆರೋಗ್ಯ ಮೇಲ್ವಿಚಾರಣೆ, ಐವಿ ಫ್ಲೂಯಿಡ್ಸ್ ಹಾಗೂ ಚುಚ್ಚುಮದ್ದು ಸೇರಿದಂತೆ ಅಗತ್ಯ ಚಿಕಿತ್ಸೆಗಳನ್ನು ಮನೆಯಲ್ಲೇ ನೀಡಲಾಗುತ್ತದೆ ಎಂದು ಪ್ರಕಟಣೆ ಹೇಳಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಎಸ್.ಐ.ಆರ್ ಮತದಾರರ ಪಟ್ಟಿಯ ಡಿಜಿಟಲೀಕರಣ ಶೇ. 56 ರಷ್ಟು ಪೂರ್ಣ

Published

on

ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಶೇ. 56 ರಷ್ಟು ಗಣತಿ ನಮೂನೆಗಳನ್ನು ಡಿಜಿಟಲ್ ರೂಪದಲ್ಲಿ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಅವರು ತಿಳಿಸಿದರು.

ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಎಸ್.ಐ.ಆರ್.ಕುರಿತು ಮಾಹಿತಿ ನೀಡಲು ಏರ್ಪಡಿಸಿದ್ದ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ಜಿಲ್ಲೆಯ ಎಲ್ಲಾ ಬಿಎಲ್‌ಒಗಳು ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆ ಮನೆಗೆ ತೆರಳಿ ಅರ್ಜಿಗಳನ್ನು ವಿತರಿಸಿ, ಸ್ವೀಕರಿಸುತ್ತಿದ್ದಾರೆ. ಶೇ. 91 ರಷ್ಟು ಜನರಿಗೆ ಫಾರಂ ಭರ್ತಿ ಮಾಡಲು ತಿಳಿಯದ ಕಾರಣ ಬಿಎಲ್‌ಒಗಳೇ ಸಾರ್ವಜನಿಕರಿಗೆ ಸಹಾಯ ಮಾಡುತ್ತಿದ್ದಾರೆ ಎಂದರು.

ಸಾರ್ವಜನಿಕರ ಅನುಕೂಲಕ್ಕಾಗಿ ದಾವಣಗೆರೆ ನಗರದಲ್ಲಿ 45 ಕೇಂದ್ರಗಳು ಸೇರಿದಂತೆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಹಾಗೂ ತಾಲೂಕು ಕಚೇರಿಗಳಲ್ಲಿ ಸಹಾಯ ಕೇಂದ್ರಗಳನ್ನು ತೆರೆಯಲಾಗಿದೆ. ಯಾವುದೇ ಅನುಮಾನಗಳಿದ್ದಲ್ಲಿ ಸಾರ್ವಜನಿಕರು ಬಿಎಲ್‌ಒಗಳನ್ನು ಅಥವಾ ಚುನಾವಣಾ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ನೋಡಲ್ ಅಧಿಕಾರಿಗಳು ಮತ್ತು ಸೂಪರ್‌ವೈಸರ್‌ಗಳನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.

ಸದ್ಯಕ್ಕೆ ಸಾರ್ವಜನಿಕರಿಂದ ಯಾವುದೇ ದಾಖಲೆಗಳನ್ನು ಸಂಗ್ರಹಿಸುತ್ತಿಲ್ಲ. ಆಗಸ್ಟ್ 7 ರ ನಂತರ ಯಾರು ಯಾವ ದಾಖಲೆಗಳನ್ನು ನೀಡಬೇಕು ಎಂಬುದನ್ನು ಸ್ಪಷ್ಟಪಡಿಸಲಾಗುವುದು. ಅಲ್ಲಿಯವರೆಗೆ ಸಾರ್ವಜನಿಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದರು.

ವಿವಿಧ ತಾಂತ್ರಿಕ ಹಾಗೂ ನೈಜ ಕಾರಣಗಳಿಂದಾಗಿ ಒಟ್ಟು 17,499 ಮತದಾರರ ಗಣತಿ ನಮೂನೆಗಳು ವಾಪಸ್ ಬಂದಿಲ್ಲ. ಇದರಲ್ಲಿ ಪ್ರಮುಖವಾಗಿ 7,487 ಮರಣ ಪ್ರಕರಣಗಳು , 263 ವಿಳಾಸ ಪತ್ತೆಯಾಗದವರು , 6,677 ಶಾಶ್ವತವಾಗಿ ಸ್ಥಳಾಂತರಗೊಂಡವರು , 2,994 ದ್ವಿಪ್ರತಿ ದಾಖಲಾತಿ (Double Entry) ಹಾಗೂ 78 ಇತರೆ ಕಾರಣ ಎಂದು ತಿಳಿಸಿದರು.

1,200 ಕ್ಕಿಂತ ಹೆಚ್ಚು ಮತದಾರರಿರುವ ಮತಗಟ್ಟೆಗಳನ್ನು ಗುರುತಿಸಿ, ಅಲ್ಲಿ ಹೊಸ ಮತಗಟ್ಟೆಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಮತದಾರರ ಪರಿಷ್ಕರಣೆಯ ಕಾರ್ಯವಿಧಾನದ ಕುರಿತು ವಿವಿಧ ರಾಜಕೀಯ ಪಕ್ಷಗಳೊಂದಿಗೆ ನಡೆದ ಸಭೆ ಯಲ್ಲಿ ಚರ್ಚಿಸಿದ್ದು, ಮುಂದಿನ ದಿನಗಳಲ್ಲಿ ಹೊಸ ಮತಗಟ್ಟೆಗಳನ್ನು ಸ್ಥಾಪಿಸುವ ಕುರಿತು ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು.

ಜುಲೈ 29ರ ವರೆಗೆ ಮಾತ್ರ ಕಾಲಾವಕಾಶ ಇರುವುದರಿಂದ ಬಿಎಲ್‌ಒಗಳು ಸಾಕಷ್ಟು ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ. ಆದ್ದರಿಂದ ಸಾರ್ವಜನಿಕರು ಅವರೊಂದಿಗೆ ಶಾಂತಿಯುತವಾಗಿ ವರ್ತಿಸಿ, ಸೂಕ್ತ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಒಂದು ವೇಳೆ ದ್ವಿಪ್ರತಿ (Double Entry) ಸೇರಿದಂತೆ ಯಾವುದೇ ತಪ್ಪು ಮಾಹಿತಿಗಳನ್ನು ಉದ್ದೇಶಪೂರ್ವಕವಾಗಿ ನೀಡಿದಲ್ಲಿ, ಅಂತವರ ವಿರುದ್ಧ ಎಫ್‌ಐಆರ್ ದಾಖಲಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್‌, ಮಹಾನಗರ ಪಾಲಿಕೆ ಆಯುಕ್ತ ಡಾ.ಮಹಾಂತೇಶ್‌ ಚುನಾವಣಾ ಶಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕ ರಾಜೇಶ್‌ಗೌಡ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ, ವಿಭಾಗ-2ರ ವ್ಯಾಪ್ತಿಗೆ 2023-24 ರಿಂದ 2025-26 ರವರೆಗೆ ಸ್ಥಳೀಯ ಶಾಸಕರ ಅನುದಾನದ ಅಡಿಯಲ್ಲಿ ಬಿಡುಗಡೆಯಾದ ಅನುದಾನಗಳ ಖರ್ಚು-ವೆಚ್ಚವನ್ನು ಇಲಾಖಾ ತನಿಖೆ ನಡೆಸುವಂತೆ ದೂರು ನೀಡಿ 5 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ (ಕೆ.ಆರ್.ಐ.ಡಿ.ಎಲ್) ಇದರ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್ ಗೌಡ ಎಂ.ಬಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿ, ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಯುಕ್ತಾಗೆ ದೂರು ಸಲ್ಲಿಸಿದ್ದಾರೆ.

ದಾವಣಗೆರೆ ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ (ಕೆ.ಆರ್.ಐ.ಡಿ.ಎಲ್) ವಿಭಾಗ-2 ರ ವ್ಯಾಪ್ತಿಗೆ ಒಳಪಡುವ ಮಾಯಕೊಂಡ, ಹೊನ್ನಾಳಿ, ಚನ್ನಗಿರಿ ಉಪ ವಿಭಾಗಗಳು ಹಾಗೂ ವಿಭಾಗ-2ರ ಕಛೇರಿಯ ವ್ಯಾಪ್ತಿಗೆ 2023-24 ರಿಂದ 2025-26ನೇ ಸಾಲಿನ ಅವಧಿಯಲ್ಲಿ ಬಿಡುಗಡೆಯಾಗಿರುವ ಸ್ಥಳೀಯ ಶಾಸಕರ ಅನುದಾನದಲ್ಲಿ ಪ್ರತಿ ತಿಂಗಳು ಲಕ್ಷಾಂತರ ರೂಪಾಯಿ ಹಣವನ್ನು ಇಲಾಖೆಯ ವಾಹನಗಳ ಇಂಧನ ವೆಚ್ಚಕ್ಕೆಂದು ನಿಯಮಬಾಹಿರವಾಗಿ ದುರ್ಬಳಕೆ ಮಾಡಿಕೊಂಡಿರುವುದು ಮಾತ್ರವಲ್ಲದೆ, ಬಹುತೇಕ ಕಡೆಗಳಲ್ಲಿ ಯಾವುದೇ ಕಾಮಗಾರಿ ನಡೆಸದೆ ನಕಲಿ ಕಡತ ಸೃಷ್ಟಿಸಿ ಸ್ಥಳೀಯ ಶಾಸಕರ ಅನುದಾನವನ್ನು ದುರುಪಯೋಗಪಡಿಸಿಕೊಂಡಿರುವ ವಿಷಯವು ಅಧಿಕೃತ ಮೂಲಗಳಿಂದ ತಿಳಿದು ಬಂದ ಕಾರಣ ಮಾಹಿತಿಹಕ್ಕು ಅಡಿಯಲ್ಲಿ ಹಲವಾರು ಭಾರಿ ಅರ್ಜಿ ಸಲ್ಲಿಸಿ, ಮಾಹಿತಿ ಕೋರಿದಾಗಲೂ ನಿಯಮಬಾಹಿರವಾಗಿ ಹಿಂಬರಹ ನೀಡುತ್ತ ಬಂದಿರುತ್ತಾರೆ.

ಆದ ಕಾರಣ ದಾವಣಗೆರೆ ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ, ವಿಭಾಗ-2ರ ವ್ಯಾಪ್ತಿಗೆ 2023-24 ರಿಂದ 2025-26 ರವರೆಗೆ ಸ್ಥಳೀಯ ಶಾಸಕರ ಅನುದಾನದ ಅಡಿಯಲ್ಲಿ ಬಿಡುಗಡೆಯಾದ ಅನುದಾನಗಳ ಖರ್ಚು-ವೆಚ್ಚವನ್ನು ಇಲಾಖಾ ತನಿಖೆಗೆ ಒಳಪಡಿಸಿ, ಕೈಗೊಂಡ ಕ್ರಮದ ವರದಿಯನ್ನು ನೀಡುವಂತೆ ವ್ಯವಸ್ಥಾಪಕ ನಿರ್ದೇಶಕರು, ಕೆ.ಆರ್.ಐ.ಡಿ.ಎಲ್, ಬೆಂಗಳೂರು ಇವರಿಗೆ ದಿನಾಂಕ: 06-02-2026 ರಂದು ದೂರು ನೀಡಲಾಗಿತ್ತು. ಆದರೆ ದೂರು ನೀಡಿ 2 ತಿಂಗಳು ಕಳೆದರೂ ಯಾವುದೇ ತನಿಖಾ ವರದಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದ ಕಾರಣ ದಿನಾಂಕ: 21-04-2026 ರಂದು ಜ್ಞಾಪನ ನೀಡಲಾಗಿತ್ತು. ಆದರೆ ಜ್ಞಾಪನ ನೀಡಿ 2 ತಿಂಗಳು ಕಳೆದರೂ ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್‌ಗೌಡ ಎಂ.ಬಿ ಇವರು ಇದುವರೆಗೂ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ.

ಆದ ಕಾರಣ ನಿರ್ಲಕ್ಷö್ಯ ತೋರಿದ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ ಇದರ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್‌ಗೌಡ ಎಂ.ಬಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತ ಕಾಯ್ದೆಯ ಅನುಸಾರ ಪ್ರಕರಣ ದಾಖಲಿಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ದೂರು ಸಲ್ಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ14 hours ago

ಸ್ಟಾರ್ ಹೆಲ್ತ್ ಉಚಿತ ವೈದ್ಯಕೀಯ ಸಲಹೆ

ಸುದ್ದಿದಿನ,ದಾವಣಗೆರೆ: ದೇಶದ ಪ್ರಮುಖ ಆರೋಗ್ಯ ವಿಮೆ ಸಂಸ್ಥೆಗಳಲ್ಲಿ ಒಂದಾಗಿರುವ ಸ್ಟಾರ್ ಹೆಲ್ತ್ ಅಂಡ್ ಅಲೈಡ್ ಇನ್ಶುರನ್ಸ್ ಕಂಪನಿ ಲಿಮಿಟೆಡ್, ಕರ್ನಾಟಕದಲ್ಲಿ ಮಳೆಗಾಲದಲ್ಲಿ ಜನರನ್ನು ಕಾಡುವ ವಿವಿಧ ಬಗೆಯ...

ದಿನದ ಸುದ್ದಿ3 days ago

ಎಸ್.ಐ.ಆರ್ ಮತದಾರರ ಪಟ್ಟಿಯ ಡಿಜಿಟಲೀಕರಣ ಶೇ. 56 ರಷ್ಟು ಪೂರ್ಣ

ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಶೇ. 56 ರಷ್ಟು ಗಣತಿ ನಮೂನೆಗಳನ್ನು ಡಿಜಿಟಲ್ ರೂಪದಲ್ಲಿ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗಂಗಾಧರಸ್ವಾಮಿ...

ದಿನದ ಸುದ್ದಿ3 days ago

ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕ ರಾಜೇಶ್‌ಗೌಡ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ: ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ, ವಿಭಾಗ-2ರ ವ್ಯಾಪ್ತಿಗೆ 2023-24 ರಿಂದ 2025-26 ರವರೆಗೆ ಸ್ಥಳೀಯ ಶಾಸಕರ ಅನುದಾನದ ಅಡಿಯಲ್ಲಿ ಬಿಡುಗಡೆಯಾದ ಅನುದಾನಗಳ...

ದಿನದ ಸುದ್ದಿ5 days ago

ಮಾಜಿ ರಾಜ್ಯಸಭಾ ಸದಸ್ಯ ಹೆಚ್ ಹನುಮಂತಪ್ಪ ನಿಧನ

ಸುದ್ದಿದಿನ,ಚಿತ್ರದುರ್ಗ:ಮಾಜಿ ರಾಜ್ಯಸಭಾ ಸದಸ್ಯರು ಹೆಚ್ ಹನುಮಂತಪ್ಪನವರು (95ವರ್ಷ) ವಯೋಸಹಜ ಅನಾರೋಗ್ಯದಿಂದ ದೈವಧೀನರಾಗಿದ್ದಾರೆ ಎಂದು ಪುತ್ರ ಜಿಲ್ಲಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಹೆಚ್ ಮೋಹನ್ ಅವರು  ತಿಳಿಸಿದ್ದಾರೆ. ಅಂತ್ಯಕ್ರಿಯೆಯನ್ನು...

ಅಂಕಣ6 days ago

ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ

ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ...

ದಿನದ ಸುದ್ದಿ7 days ago

ಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ

ಸುದ್ದಿದಿನ,ಚಿತ್ರದುರ್ಗ: ಹರಳಯ್ಯ ಮಠದ ಸ್ವಾಮೀಜಿ ಮೇಲೆ ಮಾರಾಣಾಂತಿಕ ಹಲ್ಲೆಯನ್ನು ನಿರ್ಲಕ್ಷ್ಯ ವಹಿಸಿದರೆ ಮುಂದಿನ ದಿನಗಳಲ್ಲಿ ಮಠಾಧೀಶರ ಮೇಲೆ ಇಂತಹ ದುಷ್ಕೃತ್ಯ ಹೆಚ್ಚಾಗಬಹುದು ಎಂದು ಮಾಜಿ ಸಚಿವ ಎಚ್.ಆಂಜನೇಯ...

ದಿನದ ಸುದ್ದಿ1 week ago

ದಾವಣಗೆರೆ | ತಾಪಂ ಅನುದಾನ ದುರುಪಯೋಗ: ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ಚುರುಕು

ಮುಖ್ಯಾಂಶಗಳು ​ ಟೆಂಡರ್ ಇಲ್ಲದೆ ಸಾಮಗ್ರಿ ಖರೀದಿ ಆರೋಪ ​ಜುಲೈ 10ರ ವರೆಗೆ ಸ್ಥಳ ಪರಿಶೀಲನೆ, ದಾಖಲೆಗಳ ತಪಾಸಣೆ ತನಿಖಾಧಿಕಾರಿಗಳ ಮುಂದೆ ಹಾಜರಾಗಲು ದೂರುದಾರರಿಗೆ ನೋಟಿಸ್ ಸುದ್ದಿದಿನ,​ದಾವಣಗೆರೆ:...

ದಿನದ ಸುದ್ದಿ1 week ago

ಮತದಾರರ ಪಟ್ಟಿ ಪರಿಷ್ಕರಣೆ | ಪ್ರತಿಯೊಬ್ಬರ ಮನೆಬಾಗಿಲಿಗೆ ತಲುಪಲಿವೆ ಫಾರಂಗಳು ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ 

ಸುದ್ದಿದಿನ,ದಾವಣಗೆರೆ: ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ ಮತ್ತು ವ್ಯವಸ್ಥಿತವಾಗಿ ನಡೆಸಲಾಗುತ್ತಿದ್ದು, ಸಾರ್ವಜನಿಕರು ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ...

ದಿನದ ಸುದ್ದಿ2 weeks ago

ಚನ್ನಗಿರಿ | ಲವ್ ಮ್ಯಾರೇಜ್ ; ಪೊಲೀಸ್ ಠಾಣೆ ಆವರಣದಲ್ಲೇ ಯುವಕನಿಗೆ ಚಾಕು ಇರಿತ

ಸುದ್ದಿದಿನ,ದಾವಣಗೆರೆ: ಪ್ರೀತಿಸಿ ವಿವಾಹವಾಗಿದ್ದ ದಂಪತಿ ಜೀವಭಯದಿಂದ ಪೊಲೀಸ್ ರಕ್ಷಣೆ ಕೋರಿ ಠಾಣೆಗೆ ಬಂದಿದ್ದ ವೇಳೆ, ಯುವಕನ ಮೇಲೆ ಚಾಕುವಿನಿಂದ ಹಲ್ಲೆ ನಡೆದ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ...

ಅಂಕಣ2 weeks ago

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ....

Trending