ದಿನದ ಸುದ್ದಿ
ಪರಿಶಿಷ್ಟ ಪಂಗಡದ ಪಟ್ಟಿಯಿಂದ ‘ನಾಯಕ’ ಪದ ಕೈಬಿಟ್ಟಿರುವುದನ್ನು ಖಂಡಿಸಿ ಚಿಗಟೇರಿಯಲ್ಲಿ ಪ್ರತಿಭಟನೆ
ಸುದ್ದಿದಿನ, ಹರಪನಹಳ್ಳಿ : ಪರಿಶಿಷ್ಟ ಪಂಗಡದ ಪಟ್ಟಿಯಿಂದ “ನಾಯಕ” ಪದ ಕೈಬಿಟ್ಟಿರುವುದನ್ನು ಕೂಡಲೇ ನಾಡ ಕಛೇರಿ (ಅಟಲ್ ಜೀ ಜನಸ್ನೇಹಿ) ಕೇಂದ್ರದ ಅಂತರ್ಜಾಲದಲ್ಲಿ ಸೇರಿಸಿ “ನಾಯಕ” (ಪರಿಶಿಷ್ಟ ಪಂಗಡ) ಪ್ರಮಾಣ ಪತ್ರ ನೀಡಲು ಒತ್ತಾಯಿಸಿ ಇಂದು ಹರಪನಹಳ್ಳಿ ತಾಲ್ಲೂಕಿನ,ಚಿಗಟೇರಿ ನಾಡ ಕಛೇರಿಯ ಉಪ-ತಹಶೀಲ್ದಾರರಿಗೆ ಪ್ರತಿಭಟನೆ ಮೂಲಕ ಸಲ್ಲಿಸುತ್ತಿರುವ ಮನವಿ ಸಲ್ಲಿಸಲಾಯಿತು.
ಕರ್ನಾಟಕದ ಬಳ್ಳಾರಿ, ವಿಜಯನಗರ, ಹಾಗೂ ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ನಾಯ್ಕಡ ಬುಡಕಟ್ಟಿಗೆ ಸೇರಿದ ನಾಯಕ ಅಥವಾ ನಾಯ್ಕ ಪಂಗಡದವರಾದ ಮ್ಯಾಸ ನಾಯಕ ಅಥವಾ ಮ್ಯಾಸ ಬೇಡರಿಗೆ 1976 ಮತ್ತು 1991 ನೇ ಸಾಲಿನಿಂದ 2021ನೇ ಸಾಲಿನವರೆಗೂ ಪರಿಶಿಷ್ಟ ಪಂಗಡದ “ನಾಯಕ” ಪ್ರಮಾಣ ಪತ್ರ ಕೋರಿ ಅರ್ಜಿ ಸಲ್ಲಿಸಿದರೆ ಪರಿಶಿಷ್ಟ ಪಂಗಡದ “ನಾಯಕ” ಪ್ರಮಾಣ ಪತ್ರವನ್ನು ನೀಡಲಾಗುತ್ತಿತ್ತು. ಆದರೆ ಈಗ್ಗೆ ಸುಮಾರು 5-6 ತಿಂಗಳಿಂದ ನಾಡ ಕಛೇರಿ (ಅಟಲ್ ಜಿ ಜನಸ್ನೇಹಿ) ಕೇಂದ್ರದ ಅಂತರ್ಜಾಲದಲ್ಲಿ ಪರಿಶಿಷ್ಟ ಪಂಗಡದ “ನಾಯಕ “ ಎಂಬ ಪದವನ್ನು ಕೈ ಬಿಡಲಾಗಿದೆ ಮತ್ತು ನಾಯಕ ಎಂದು ಎಸ್ ಟಿ ಪ್ರಮಾಣ ಪತ್ರವನ್ನು ನೀಡುತ್ತಿಲ್ಲ.
ನಾಯಕ Nayaka ಬದಲಾಗಿ (Nayaka (Including Parivara and Talawara)) (ನಾಯಕ(ಪರಿವಾರ ತಳವಾರ ಸೇರಿದಂತೆ)) ಅಥವಾ ನಾಯಕ(ಪರಿವಾರ) ಅಥವಾ ನಾಯಕ(ತಳವಾರ) ಎಂದು ನೀಡಲಾಗುತ್ತಿದೆ. ಸರ್ಕಾರದ ಈ ಸಂವಿಧಾನ ವಿರೋಧಿ ಕ್ರಮವು ನಿಜವಾದ ನಾಯ್ಕಡ-ನಾಯಕ ಪಂಗಡದವರಿಗೆ ಕಾನೂನಿನ ಹಾನಿಯುಂಟು ಮಾಡಿದೆ. 1976ನೇ ಸಾಲಿನಿಂದಲೂ ನಾಯ್ಕಡ,ನಾಯಕ ಎಂಬುದು ಪರಿಶಿಷ್ಟ ಪಂಗಡದ ಪಟ್ಟಿಯಲ್ಲಿ ಇರುತ್ತದೆ.
2020 ರಲ್ಲಿ ಭಾರತೀಯ ಸಂಸತ್ ಸೇರ್ಪಡೆ ಮಾಡಿರುವುದು ನಾಯಕ ಜೊತೆಯಲ್ಲಿ ಪರಿವಾರ ಮತ್ತು ತಳವಾರ ಸೇರಿರುತ್ತಾರೆ ಎಂದು ತಿದ್ದುಪಡಿ ಕಾಯ್ದೆ ಮಾಡಿರುತ್ತದೆ. ತಿದ್ದುಪಡಿ ಆದೇಶದ ಪ್ರಕಾರ ಸರ್ಕಾರ ಪರಿವಾರ ಮತ್ತು ತಳವಾರ ಎಂದು ನೀಡಬೇಕು. ನಾಯ್ಕಡ ನಾಯಕ ಪಂಗಡದ ಹೆಸರನ್ನು ಬದಲಾಯಿಸಲು ಸಂವಿಧಾನದಲ್ಲಿ ಅವಕಾಶವಿಲ್ಲ. 1991 ರಲ್ಲಿ ಭಾರತೀಯ ಸಂಸತ್ Naikda, Nayaka ಸಮಾನಾರ್ಥಕ ಪದಗಳಾಗಿ “Naik, Nayak, Beda, Bedar and Valmiki ಎಂಬ ಪದಗಳನ್ನು ಸೇರಿಸಿ ತಿದ್ದುಪಡಿ ಕಾಯ್ದೆಯನ್ನು ಮಾಡಿರುತ್ತದೆ. ಆ ಕಾಯ್ದೆ ಪ್ರಕಾರ ಮೂಲ ನಾಯ್ಕಡ,ನಾಯಕ ಎಂಬುದನ್ನು ಬದಲಾಯಿಸಿರುವುದಿಲ್ಲ.
ಆದರೆ ರಾಜ್ಯ ಸರ್ಕಾರವು ಕಾನೂನನ್ನು ತಪ್ಪಾಗಿ ಅರ್ಥೈಸಿ ತಳವಾರ ಮತ್ತು ಪರಿವಾರ ಜಾತಿಯವರಿಗೆ ನಾಯಕ ಎಂದು ಪ್ರಮಾಣ ಪತ್ರ ಕೊಡುತ್ತಿದ್ದಿರಿ ಇದು ಸಂವಿಧಾನ ಬಾಹಿರವಾಗಿರುತ್ತದೆ. ಮೂಲ ನಾಯಕ ಪಂಗಡದವರಾದ ನಮಗೆ ನಾಯಕ ಪ್ರಮಾಣ ಪತ್ರವನ್ನು ಕೊಡದೇ ಹೊಸ ಜಾತಿಯನ್ನು ಬರೆದುಕೊಳ್ಳುವಂತೆ ಮಾಡಿರುವುದನ್ನು ನಾವು ಉಗ್ರವಾಗಿ ಖಂಡಿಸುತ್ತೇವೆ ಎಂದರು.
ಕೂಡಲೇ ಸರ್ಕಾರ ನಾಯಕ (ಪರಿಶಿಷ್ಟ ಪಂಗಡ) ಎಂದು ಪ್ರಮಾಣ ಪತ್ರವನ್ನು ನೀಡುವಂತೆ ಕೋರುತ್ತೇವೆ. 1976 ರಿಂದ ಮ್ಯಾಸ ನಾಯಕರ ಬುಡಕಟ್ಟು ಲಕ್ಷಣಗಳನ್ನು ಆಧಾರಿಸಿ ಪರಿಶಿಷ್ಟ ಪಂಗಡಕ್ಕೆ ಸೇರಿದವರೆಂದು ಮ್ಯಾಸ ನಾಯಕರಿಗೆ “ನಾಯಕ” ಎಂದೇ ಎಸ್ ಟಿ ಪ್ರಮಾಣ ಪತ್ರ ಕೊಡಲಾಗುತ್ತಿತ್ತು. ಆದರೆ ನಮಗೆ ನಮ್ಮ ಪಂಗಡದ ಹೆಸರನ್ನೆ ಬದಲಾವಣೆ ಮಾಡಿ ನಾಯಕ (ಪರಿವಾರ ಮತ್ತು ತಳವಾರ) ಎಂದು ನಮೂದಿಸಿ ನಮ್ಮ ಬುಡಕಟ್ಟಿನ ಮೂಲ ಹೆಸರನ್ನೆ ಇಲ್ಲದಂತೆ ಮಾಡಿರುತ್ತೀರಿ ಎಂದು ಆರೋಪಿಸಿದರು.
ನಮಗೂ ಪರಿವಾರ ಮತ್ತು ತಳವಾರ ಜಾತಿಯವರಿಗೂ ಯಾವುದೇ ಸಂಬಂಧವಿರುವುದಿಲ್ಲ. ದುರುದ್ದೇಶದಿಂದ ಈ ರೀತಿ ಕಾನೂನನ್ನು ಮಾಡಿ ಮೂಲ ಬುಡಕಟ್ಟು ಜನರಿಗೆ ಕಾನೂನು ತೊಡಕನ್ನು ಉಂಟು ಮಾಡುತ್ತಿರುವುದಲ್ಲದೆ ನಮ್ಮ ಮೂಲ ಪಂಗಡದ ಹೆಸರನ್ನೆ ನಿರ್ನಾಮ ಮಾಡಲು ಹೊರಟಿರುತ್ತಿರಿ ಎಂದು ಕಿಡಿಕಾರಿದರು.
ಆದ್ದರಿಂದ ಮ್ಯಾಸ ನಾಯಕರಿಗೆ “ನಾಯಕ” ಎಂದೇ ಪರಿಶಿಷ್ಟ ಪಂಗಡದ ಪ್ರಮಾಣ ಪತ್ರವನ್ನು ಮಾತ್ರ ನೀಡಲು ಒತ್ತಾಯಪೂರ್ವಕವಾಗಿ ವಿನಂತಿಸುತ್ತಿದ್ದೇವೆ. ನಮ್ಮ ಪರಿಶಿಷ್ಟ ಪಂಗಡದ “ನಾಯಕ” ಪ್ರಮಾಣ ಪತ್ರಗಳಲ್ಲಿ ತಳವಾರ ಮತ್ತು ಪರಿವಾರ ಎಂಬ ಹೆಸರಗಳನ್ನು ನಮೂದಿಸುವಂತಿಲ್ಲ. ಇತ್ತೀಚೇಗೆ ಸಂಸತ್ ನಲ್ಲಿ ಮಾಡಿರುವ The Counstitution (Scheduled Tribes) Order (Amendment) Act,2020ರ ಪ್ರಕಾರ ನಮ್ಮ ಮೂಲ ನಾಯ್ಕಡ,ನಾಯಕ ಪಂಗಡದ ಹೆಸರನ್ನು ಬದಲಾವಣೆ ಮಾಡುವ ಬಗ್ಗೆ ಯಾವುದೇ ಕಾನೂನನ್ನು ಮಾಡಿರುವುದಿಲ್ಲ.
ಆದರೂ ಸಹ ತಪ್ಪು ತಪ್ಪಾಗಿ ಕಾನೂನನ್ನು ಅರ್ಥೈಸಿ ಬುಡಕಟ್ಟು ಜನರ ಅಸ್ತಿತ್ವವನ್ನು ನಿರ್ನಾಮ ಮಾಡುತ್ತಾ ಹಕ್ಕುಗಳನ್ನು ಅಪಹರಿಸಲು ಸಂಚನ್ನು ಮಾಡಲಾಗುತ್ತಿದೆ. ಆದ್ದರಿಂದ ಎಲ್ಲಾ ರೀತಿಯಿಂದ ರಾಜ್ಯ ಸರ್ಕಾರದ ಈ ನಡೆಯನ್ನು ಪರಿವಾರ ಮತ್ತು ತಳವಾರ ಜಾತಿಯವರ ಕುಯಿಕ್ತಿಯಂತೆ ಮಾಡುತ್ತಿರುವುದು ನಮ್ಮ ಮ್ಯಾಸ ನಾಯಕರಿಗೆ ಬಾರಿ ಅನ್ಯಾವಾಗುತ್ತಿದೆ. ಆದ್ದರಿಂದ ಈ ಕೂಡಲೇ ಮೊದಲಿನ ರೀತಿಯಲ್ಲಿ ನಾಯಕ (ಪರಿಶಿಷ್ಟ ಪಂಗಡ) ಎಂದು ಮಾತ್ರ ಪ್ರಮಾಣ ಪತ್ರ ನೀಡಬೇಕು ಎಂದು ಪ್ರತಿಭಟನೆಯ ಮೂಲಕ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸುತ್ತಿದ್ದೇವೆ ಎಂದರು.
ಬೇಡಿಕೆಗಳು
- ನಾಡ ಕಛೇರಿ ಅಂತರ್ಜಾಲದಲ್ಲಿ ಕೈಬಿಟ್ಟಿರುವ “ನಾಯಕ: ಪದವನ್ನು ಸೇರಿಸಿ ಈ ಕೂಡಲೇ ಮೊದಲಿನ ರೀತಿಯಲ್ಲಿ ನಾಯಕ (ಪರಿಶಿಷ್ಟ ಪಂಗಡ) ಎಂದು ಮಾತ್ರ ಪ್ರಮಾಣ ಪತ್ರ ನೀಡಬೇಕು.
- ಪರಿಶಿಷ್ಟ ಪಂಗಡದ ಪಟ್ಟಿಯಲ್ಲಿರುವ “ನಾಯ್ಕಡ” “ನಾಯಕ” ಸಮಾನಾರ್ಥಕ ಪದಗಳಾಗಿ “ಮ್ಯಾಸ ನಾಯ್ಕ”, “ಮ್ಯಾಸ ನಾಯಕ”, “ಮ್ಯಾಸ ಬೇಡ”, “ಮ್ಯಾಸ ಬ್ಯಾಡ್ರು”, “ಮ್ಯಾಸ ಬೇಡರ”, “ಮ್ಯಾಸರು” ಎಂಬ ಪದಗಳನ್ನು ಪರಿಶಿಷ್ಟ ಪಂಗಡದ ಪಟ್ಟಿಯಲ್ಲಿ ಸೇರ್ಪಡೆ ಮಾಡಲು ಈ ಕೂಡಲೇ ಕ್ರಮ ಕೈಗೊಳ್ಳಬೇಕು.
- “ನಾಯಕ” ಪಂಗಡದ ನಿಜವಾದ ಸಮಾನಾರ್ಥಕ “ಮ್ಯಾಸ ನಾಯಕ” ಪದವನ್ನು ಸಂವಿಧಾನ ಬಾಹಿರವಾಗಿ ಓಬಿಸಿಪಟ್ಟಿಗೆ ಸೇರ್ಪಡೆ ಮಾಡಿರುವುದನ್ನು ಈ ಕೂಡಲೇ ತೆಗೆದುಹಾಕಿ ಪರಿಶಿಷ್ಟ ಪಂಗಡದ ಪಟ್ಟಿಯಲ್ಲಿ ಸೇರ್ಪಡೆ ಮಾಡಬೇಕು.
- 1976 ನೇ ಸಾಲಿನಿಂದಲೂ “ನಾಯಕ” ಎಂಬುದು ಪರಿಶಿಷ್ಟ ಪಂಗಡದ ಪಟ್ಟಿಯಲ್ಲಿ ಇರುತ್ತದೆ. ಭಾರತೀಯ ಸಂಸತ್ ಸೇರ್ಪಡೆ ಮಾಡಿರುವುದು ನಾಯಕ ಜೊತೆಯಲ್ಲಿ ಪರಿವಾರ ಮತ್ತು ತಳವಾರ ಸೇರಿರುತ್ತಾರೆ ಎಂದು ತಿದ್ದುಪಡಿ ಕಾಯ್ದೆ ಮಾಡಿರುತ್ತದೆ. ತಿದ್ದುಪಡಿ ಆದೇಶದ ಪ್ರಕಾರ ರಾಜ್ಯ ಸರ್ಕಾರ ಪರಿವಾರ ಮತ್ತು ತಳವಾರ ಎಂದು ನೀಡಬೇಕು.
ನಾಯ್ಕಡ ನಾಯಕ ಪಂಗಡದ ಹೆಸರನ್ನು ಬದಲಾಯಿಸಲು ಸಂವಿಧಾನದಲ್ಲಿ ಅವಕಾಶವಿಲ್ಲ. ಆದರೆ ರಾಜ್ಯ ಸರ್ಕಾರವು ಕಾನೂನನ್ನು ತಪ್ಪಾಗಿ ಅರ್ಥೈಸಿ ತಳವಾರ ಮತ್ತು ಪರಿವಾರದವರಿಗೆ ನಾಯಕ ಎಂದು ಪ್ರಮಾಣ ಪತ್ರ ಕೊಡುತ್ತಿದ್ದಿರಿ ಇದು ಸಂವಿಧಾನ ಬಾಹಿರವಾಗಿರುತ್ತದೆ.
ಈ ಸಂದರ್ಭದಲ್ಲಿ ಮ್ಯಾಸ ನಾಯಕ ಬುಡಕಟ್ಟು ಸಂಸ್ಕೃತಿ ಸಂರಕ್ಷಣಾ ಸಮಿತಿ(ರಿ)ಯ ಸಂಚಾಲಕರುಗಳಾದ ಜಿ ನಾಗರಾಜ, ಗಾಮ ಪಂಚಾಯಿತಿ ಉಪಾಧ್ಯಕ್ಷರು, ಕೋಟೆ ನಾಗರಾಜ, ಎಂ ದ್ವಾರಕೇಶ,ವಕೀಲರಾದ ಬಿ.ಕರಿಯಪ್ಪ, ಡಿ.ನಾಗರಾಜ್ ಚಿಗಟೇರಿ ಗ್ರಾಮದ ಮುಖಂಡರುಗಳಾದ ಎಂ.ರಾಜಪ್ಪ, ಎಂ.ತಿಪ್ಪೇಸ್ವಾಮಿ, ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷರು, ಗ್ರಾಮ ಪಂಚಾಯತಿ ಸದಸ್ಯರುಗಳಾದ ಎ.ಬಸವರಾಜ್, ಎಂ.ದುರುಗಪ್ಪ, ಜಿ. ಅಡವಿಪ್ಪ, ಬಿ. ನಾಗರಾಜ, ಎಸ್ ನಾಗೇಂದ್ರಪ್ಪ, ಜಿ.ಬಸಪ್ಪ, ಶೇಖರಪ್ಪ, ಎಂ ಹಾಲಪ್ಪ, ದುರುಗಪ್ಪ,ಮಂಜುನಾಥ್, ಎಸ್ ದಿವಾಕರ, ಎಂ.ಹೇಮಪ್ಪ, ಎಂ.ಮಾರಪ್ಪ, ಸುಖವಪ್ಪ, ಎಂ.ಬಸವರಾಜ, ಬಿ. ಮನ್ನೇಪ್ಪ, ಎ.ದಾಸಪ್ಪ, ಭೀಮಪ್ಪ ನಿವೃತ್ತ ಶಿಕ್ಷಕರು, ಹೆಚ್.ಕಂಪಾಲೆಪ್ಪ, ಎಂ.ಹಳ್ಳೆಪ್ಪ, ಎಂ ಸೂರಪ್ಪ, ಎಸ್.ಬೊಮ್ಮಪ್ಪ, ಎಂ.ಡಿ.ನಾಗರಾಜಪ್ಪ ಇತರರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ
ಸುದ್ದಿದಿನ,ದಾವಣಗೆರೆ : 66/11 ಕೆ.ವಿ. ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಮತ್ತು ತುರ್ತು ನಿರ್ವಹಣಾ ಕಾಮಗಾರಿಗಳ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಜೂನ್ 23 ರಂದು ಬೆಳಿಗ್ಗೆ 10 ರಿಂದ ಸಂಜೆ 5.30 ರವರೆಗೆÉ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಮಾಮಾಸ್ ಜಾಯಿಂಟ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ಎಮ್.ಸಿ.ಸಿ.ಬಿ : ಶಾಬನೂರು ರಸ್ತೆ, ಎಸ್.ಎಸ್. ಲೇಔಟ್, ಎ ಬ್ಲಾಕ್, ಕುವೆಂಪು ನಗರ, ಬಾಟ್ಲಿ ಬಿಲ್ಡಿಂಗ್ ಸುತ್ತ ಮುತ್ತ, ಸಿದ್ದವೀರಪ್ಪ ಬಡಾವಣೆ, 1ನೇ ಅಡ್ಡ ರಸ್ತೆ ಯಿಂದ 7ನೇ ಅಡ್ಡರಸ್ತೆವರೆಗೆ, ಗ್ಲಾಸ್ ಹೌಸ್, ಬಾಪೂಜಿ ಬ್ಯಾಂಕ್ ಸಮುದಾಯ ಭವನದ ಹಿಂಭಾಗದ ಪ್ರದೇಶ , ಬಿ.ಐ.ಇ.ಟಿ. ಕಾಲೇಜು ಹಾಗೂ ಸುತ್ತ ಮುತ್ತ ಪ್ರದೇಶಗಳು.
ಮಂಡಿಪೇಟೆ, ಬೆನ್ನೆ ಕಂಪನಿ ರಸ್ತೆ, ಎಮ್ ಜಿ ರಸ್ತೆ, ಎನ್ ಆರ್ ರಸ್ತೆ, ಬೆಲ್ಲೌಡಿಹಲ್ಲಿ, ಮಹಾವೀರ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಬಿ.ಟಿ.: ಮಂಡಕ್ಕಿ ಬಟ್ಟಿ, 1 ರಿಂದ 10 ನೇ ಕ್ರಾಸ್, ಇಂದಿರಾ ನಗರ, ಸಿದ್ದರಾಮೇಶ್ವರ ಬಡಾವಣೆ, ಕಾರ್ಲ್ ಮಾರ್ಸ್ ನಗರ, ಕೋಳಿ ಚನ್ನಪ್ಪ ಬಡಾವಣೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳು, ಮೌನೇಶ್ವರ : ಹೆಚ್.ಕೆ. ಆರ್. ಸರ್ಕಲ್, ಕೆ.ಇ.ಬಿ ಕಾಲೋನಿ, ನಿಟುವಳ್ಳಿ ಹಾಗು ನಿಟುವಳ್ಳಿ ಹೊಸಬಡಾವಣೆ, ಮೌನೇಶ್ವರ ಬಡಾವಣೆ, ಸೈಯದ್ ಪೀರ್ ಬಡಾವಣೆ, ಐ.ಟಿ.ಐ. ರಿಂಗ್ ರಸ್ತೆ, ಜಯನಗರ, ದುರ್ಗಾಂಬಿಕ ದೇವಸ್ಥಾನ ಸುತ್ತಮುತ್ತ.
ಎಸ್.ಎಸ್. ಹೈಟೆಕ್ ಆಸ್ಪತ್ರೆ ರಸ್ತೆ, ಭಗೀರಥ ಸರ್ಕಲ್, ಕಾಳಿಕಾಂಬ ದೇವಸ್ಥಾನ, ಶಕ್ತಿನಗರ, ಹಾಗು ಇ.ಎಸ್.ಐ ಆಸ್ಪತ್ರೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳ, ಪಿ.ಬಿ. ರಸ್ತೆ., ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಕೆಟಿಜೆ: ಶ್ರೀ ಮುರಘ ರಾಜೇಂದ್ರ ಸ್ವಾಮಿಗಳ ಮಠ, ಜಾಧವ್ ಕ್ಲಿನಿಕ್ ಸುತ್ತ ಮುತ್ತ , ಶಿವಪ್ಪ ವೃತ್ತದಿಂದ ಜಯದೇವ ವೃತ್ತದವರೆಗೆ ಹಾಗು ಸುತ್ತಮುತ್ತ ಪ್ರದೇಶಗಳು, ಪಿಜೆ: ಪೋಲೀಸ್ ಕ್ವಾಟ್ರಸ್, ತುಂಗ, ಭದ್ರ, ಸರಸ್ವತಿ, ಕೃಷ್ಣ ಬ್ಲಾಕ್, ಅರುಣಾ ಸರ್ಕಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಸಿಜಿಹೆಚ್: ಎಮ್.ಸಿ.ಸಿ. ಎ ಬ್ಲಾಕ್, ನ್ಯಾಯಾಧೀಶರ ವಸತಿ ಗೃಹಗಳು, ತೊಗಟವೀರ ಕಲ್ಯಾಣ ಮಂದಿರ, ವಿನೋಬ ನಗರ 1ನೇ ಮುಖ್ಯ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಎಸ್.ಎಸ್. ಬಡಾವಣೆ, ಎ ಬ್ಲಾಕ್, ಶಾಂತಿ ನಗರ, ಕುಂದುವಾಡ ರಸ್ತೆ, ಮಹಾನಗರ ಪಾಲಿಕೆ ಕುಡಿಯುವ ನೀರಿನ ಸ್ಥಾವರ, ಬಸವೇಶ್ವರ ಬಡಾವಣೆ, ಮಹಾಲಕ್ಷ್ಮೀ ಬಡಾವಣೆ, ಬಾಲಾಜಿ ನಗರ, ಕುಂದುವಾಡ ಕೆರೆ ಹಾಗು ಸುತ್ತಮುತ್ತ ಪ್ರದೇಶಗಳು.
ಕರೂರು ಇಂಡಸ್ಟ್ರಿಯಲ್ ಏರಿಯಾ, ಡಿ.ಸಿ. ಕಛೇರಿ, ಜಿ.ಎಂ.ಐ.ಟಿ. ಬಸವೇಶ್ವರ ನಗರ, ರಶ್ಮೀ, ಹರಿಹರ ರಸ್ತೆ, ವಿಜಯ ನಗರ, ಅಶೋಕ ನಗರ, ಆರ್.ಟಿ.ಓ. ಕಛೇರಿ, ಎಸ್.ಪಿ. ಕಛೇರಿ, ರಿಂಗ್ ರಸ್ತೆ, ಶಿಬಾರ, ಎಸ್.ಎಂ.ಕೆ. ನಗರ, ಹಾಗೂ ಚಿತ್ತನಹಳ್ಳಿ, ಕಕ್ಕರಗೊಳ್ಳ, ಆವರಗೊಳ್ಳ, ನೀಲನಹಳ್ಳಿ, ದೇವರಹಟ್ಟಿ, ದೊಡ್ಡಬಾತಿ, ಹಳೆಬಾತಿ, ನಾರಾಯಣ ಕ್ಯಾಂಪ್, ಯರಗುಂಟಾ, ಕೋಡಿಹಳ್ಳಿ, ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು, ಮಾಗಾನಹಳ್ಳಿ, ಮಾಗಾನಹಳ್ಳಿ ಕ್ಯಾಂಪ್, ಓಬಜ್ಜಿಹಳ್ಳಿ, ಓಬಜ್ಜಿಹಳ್ಳಿ ಕ್ಯಾಂಪ್, ಕಡ್ಲೇಬಾಳು, ಹಳೆಕಡ್ಲೆಬಾಳು, ಮಾಳಗೊಂಡನಹಳ್ಳಿ, ಅರಸಾಪುರ, ಬದುನಾಯಕನತಾಂಡ, ಚಿಕ್ಕಓಬಜ್ಜೀಹಳ್ಳಿ, ದೊಡ್ಡಓಬಜ್ಜೀಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳು, ಮ್ಯಾಸರಹಳ್ಳಿ, ಗುಮ್ಮನೂರು, ಹುಣಸೆಕಟ್ಟೆ, ಮುಡೇನಹಳ್ಳಿ, ಕೆಂಚಮ್ಮನಹಳ್ಳಿ, ಹೊಸಹಳ್ಳಿ, ಕಾಟಿಹಳ್ಳಿ.
ಮಂಡಲೂರು ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಹನುಮನಹಳ್ಳಿ, ಕೊಗ್ಗÀನೂರು, ಹನುಮನಹಳ್ಳಿ, ಆನಗೋಡು, ಹೆಬ್ಬಾಳು, ನೀರ್ಥಡಿ, ಶಿವಪುರ, ಹಾಲುವರ್ತಿ, ಗಂಗನಕಟ್ಟೆ, ನೇರ್ಲಿಗಿ, ಚಿನ್ನಸಮುದ್ರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಮತ್ತು ಆರಾಧ್ಯಾ ಕೈಗಾರಿಕೆ, ಅತ್ತಿಗೆರೆ, ಕುರ್ಕಿ, ಬಾಡ, ಕಬ್ಬೂರು, ಹೀರೆತೊಗಲೇರಿ, ಗೊಪಾನಾಳು, ಕಂದ್ಗಲ್, ರಾಮಗೊಂಡನಹಳ್ಳಿ, ಕಾಶೀಪುರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಆರ್.ಎಂ.ಸಿ. ಲಿಂಕ್ ರಸ್ತೆ, ಬಿ.ಟಿ. ಲೇಔಟ್, ಗುಜರಿ ಲೈನ್, ಬಂಬೂ ಬಜಾರ್, ಮಟ್ಟಿಕಲ್, ಬಿಡಿಓ ಕಛೇರಿ, ಇಮಾಮ್ ನಗರ, ಅಮರಪ್ಪನ ತೋಟ.
ಆನೆಕೊಂಡ, ಎಲ್.ಬಿ.ಎಸ್. ನಗರ.ಟಿ.ಸಿ. ಲೇಔಟ್, ಬಿಟಿ ಲೇಔಟ್, ಕೆ.ಆರ್. ರಸ್ತೆ, ಇಮಾಮ್ ನಗರ, ಆನೆಕೊಂಡ, ಐನಳ್ಳಿ ಕಾಂಪೌಂಡ್, ಎಪಿಎಂಸಿ, ಭಾರತ್ ಕಾಲೋನಿ, ಶೇಖ್ರಪ್ಪ ನಗರ ಹೆಚ್.ಕೆ.ಆರ್. ನಗರ, ಕಬ್ಬೂರು ಬಸಾಪುರ ನಗರ, ಆಣ್ಣಾ ನಗರ, ಬಸಾಪುರ ರಸ್ತೆ, ಗೋಶಾಲೆ, ಪಿ.ಬಿ. ರಸ್ತೆ, ರವಿ ಮಿಲ್ ಹಾಗೂ ಆವರಗೆರೆ, ಹೊನ್ನೂರು, ಐಗೂರು, ಮಲ್ಲಶೆಟ್ಟಿಹಳ್ಳಿ, ತೊಳಹುಣಸೆ, ದಾವಣಗೆರೆ ವಿಶ್ವವಿದ್ಯಾಲಯ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಿದ್ಯಾರ್ಥಿಗಳು ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು: ಹೆಚ್ ಎನ್ ಶಿವಕುಮಾರ್
ಸುದ್ದಿದಿನ,ರಾಣೇಬೆನ್ನೂರ: ಸಾಮಾಜಿಕ ಹಾಗೂ ಶೈಕ್ಷಣಿಕ ಜವಾಬ್ದಾರಿಗಳ ಅಗತ್ಯವು ವಿದ್ಯಾರ್ಥಿಗಳಿಗೆ ಅವಶ್ಯಕವಾಗಿದೆ. ವಿದ್ಯಾರ್ಥಿಗಳು ತಮಗೆ ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು.ಸದಾಕಾಲ ಜ್ಞಾನವನ್ನು ಪಡೆಯುವ ತನಕ ಹೊಂದಿ ಜ್ಞಾನಿಗಳಾಗುವ ಗುರಿ ಹೊಂದಲು ಬಾಪೂಜಿ ಮಹಾವಿದ್ಯಾಲಯ ಉಪ ಪ್ರಾಚಾರ್ಯರಾದ ಎಚ್ ಎನ್ ಶಿವಕುಮಾರ್ ನುಡಿದರು.
ಅವರು ಸ್ಥಳೀಯ ಬಿಎಜೆಎಸ್ಎಸ್ ಪ್ರಥಮ ದರ್ಜೆ ಕಾಲೇಜಿನ ಪ್ರತಿಭಾ ಪುರಸ್ಕಾರ, ಬಿಳ್ಕೋಡಿಗೆ ಕಾರ್ಯಕ್ರಮ ಮತ್ತು ವಿದ್ಯಾರ್ಥಿ ಒಕ್ಕೂಟದ, ಎನ್ ಎಸ್ ಎಸ್ ಚಟುವಟಿಕೆ, ಯುವ ರೆಡ್ ಕ್ರಾಸ್ ಘಟಕದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ವಿಶೇಷ ಅತಿಥಿಗಳಾಗಿ ಉಪಸ್ಥಿತರಿದ್ದ ಬಿಎ ಜೆಎಸ್ಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಅಧಿಕಾರಿಗಳು ಡಾ.ಆರ್ ಎಂ ಕುಬೇರಪ್ಪ ಮಾತನಾಡಿ ವಿದ್ಯೆಯನ್ನು ವಿನಯದಿಂದ ವಿದ್ಯೆಕಲಿಯಬೇಕು ಸಂಸ್ಕಾರವಂತರಾಗ ಬೇಕು, ಸಂಸ್ಕಾರ ಹೊಂದಿರುವ ವ್ಯಕ್ತಿಗಳು ಪುರಸ್ಕಾರ ಪಡೆದರೆ ಸಂಸ್ಕಾರ ಇಲ್ಲದವರು ಸಮಾಜದಲ್ಲಿ ತಿರಸ್ಕಾರಕ್ಕೆ ಒಳಗಾಗುವರು.ನಿಮ್ಮ ಬದುಕನ್ನು ನೀವೆ ಕಟ್ಟಿಕೊಳ್ಳುವ ನೆಲೆಯಲ್ಲಿ ಪ್ರಯತ್ನಿಸಬೇಕು ಎಂದು ನುಡಿದರು.
ಪ್ರಾಚಾರ್ಯರಾದ ಪ್ರಕಾಶ್ ಬಸಪ್ಪನವರ್ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಎಚ್ ಎನ್ ಭೀಕ್ಷಾವರ್ತಿಮಠ ಹಾಗೂ ಕೆ ಕೆ ಹಾವಿನಾಳ ರವರು ವಿದ್ಯಾರ್ಥಿಗಳಿಗೆ ಹಿತವಚನ ನುಡಿದರು.ಆರಂಭದಲ್ಲಿಪ್ರೋ.ಎಂ ಡಿ ಹೊನ್ನಮ್ಮನವರ ಸ್ವಾಗತಿಸಿದರು.ಪ್ರೋ.ಶ್ರೀಕಾಂತ ಕುಂಚೂರ, ಪ್ರಾಸ್ತಾವಿಕ ಮಾತನಾಡಿ ವಾರ್ಷಿಕ ವರದಿ ವಾಚಿಸಿದರು.
ಕೊನೆಯಲ್ಲಿ ಪ್ರೋ.ಪುಷ್ಟಾ ಕಬ್ಬಿನಾಲೆ ವಂದಿಸಿದರು.ಇದೆ ಸಮಾರಂಭದಲ್ಲಿ ಕ್ರೀಡೆ, ಸಾಂಸ್ಕೃತಿಕ, ಸಾಮಾಜಿಕ ಸೇವೆಗಳಲ್ಲಿವಿದ್ಯಾರ್ಥಿಗಳ ಸಾಧನೆ ಗುರುತಿಸಿ ಪುರಸ್ಕಾರ ಮಾಡಲಾಯಿತು.ವರ್ಷದ ಮಹಾವಿದ್ಯಾಲಯ ಉತ್ತಮ ವಿದ್ಯಾರ್ಥಿಗಳನ್ನು ಗುರುತಿಸಿ ಪುರಸ್ಕಾರ ಪ್ರದಾನ ಮಾಡಲಾಯಿತು.ವಿವಿಧ ವಿಷಯದ ಉಪನ್ಯಾಸಕರು, ವಿದ್ಯಾರ್ಥಿಗಳು, ಸಿಬ್ಬಂದಿ ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಪಿಂಚಣಿ ದಾರರು ಸಕಾಲದಲ್ಲಿ ಜೀವಂತ ಪ್ರಮಾಣ ಪತ್ರ ಸಲ್ಲಿಸಿ
ಸುದ್ದಿದಿನ,ದಾವಣಗೆರೆ: ಪಿಂಚಣಿ ಪಡೆಯಲು ಜೀವಂತ ಸದಸ್ಯರ ಪ್ರಮಾಣ ಪತ್ರಗಳು ಕಡ್ಡಾಯವಾಗಿರುವುದರಿಂದ ಸಕಾಲಕ್ಕೆ ಸೂಕ್ತ ದಾಖಲಾತಿಗಳನ್ನು ನೀಡುವ ಮೂಲಕ ಸಹಕರಿಸಿ ಎಂದು ಉಪ ಮಹಾಲೇಖಪಾಲರಾದ ಸಚ್ಚಿನ್ ಕೃಷ್ಣ ಕೌಶಿಕ್ ತಿಳಿಸಿದರು.
ಶುಕ್ರವಾರ ಜೂನ್(19) ಬೆಂಗಳೂರಿನ ಮಹಾಲೇಖಪಾಲರು ದಾವಣಗೆರೆ ಜಿಲ್ಲಾ ಖಜಾನೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಾಮಾನ್ಯ ಭವಿಷ್ಯ ನಿಧಿ ಹಾಗೂ ಲೆಕ್ಕಪತ್ರ ಸಮಸ್ಯೆಗಳ ಕುರಿತು ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಪಿಂಚಣಿದಾರರು ತಮ್ಮ ಎಲ್ಲಾ ಬ್ಯಾಂಕ್ಗೆ 2ನೇ ವಾರ ಭೇಟಿ ನೀಡಿದರೆ ನಿಮ್ಮ ಸಮಸ್ಯೆಯನ್ನು ಶೀಘ್ರವಾಗಿ ಬಗೆಹರಿಸಲಾಗುವುದು. ಜೀವಂತ ಸದಸ್ಯರ ದೃಢೀಕರಣ ಪತ್ರವನ್ನು ಪಡೆಯಲು ಸೈಬರ್ಕೆಫೆ ಇನ್ನಿತರ ಕೇಂದ್ರಗಳಿಗೆ ಅಲೆಯುವ ಅವಶ್ಯಕತೆ ಇಲ್ಲ. ನೀವು ಮನೆಯಲ್ಲಿ ಮೊಬೈಲ್ನಲ್ಲಿ ಅಫ್ ಲೋಡ್ ಮಾಡಿ ಪಡೆಯಬಹುದು. ಮತ್ತು ನಿಮ್ಮ ಸಮಸ್ಯೆಗಳನ್ನು ತಿಳಿಸುವಾಗ ಅರ್ಜಿಯಲ್ಲಿ ಇ-ಮೇಲ್ ವಿಳಾಸ, ಮೊಬೈಲ್ ನಂಬರ್ನ್ನು ಕಡ್ಡಾಯವಾಗಿ ನಮೂದಿಸಿದರೆ, ಇದರಿಂದ ನಿಮಗೆ ಮಾಹಿತಿ ನೀಡಲು ಅನುಕೂಲವಾಗುತ್ತದೆ ಎಂದರು.
ಪಿಂಚಣಿ ಅದಾಲತ್ ಎನ್ನುವುದು ನಿವೃತ್ತ ನೌಕರರು ಮತ್ತು ಪಿಂಚಣಿದಾರರ ದೀರ್ಘಕಾಲದ ಬಾಕಿ ಉಳಿದಿರುವ ಸಮಸ್ಯೆಗಳನ್ನು ಅಥವಾ ಕುಂದುಕೊರತೆಗಳನ್ನು ಪರಿಹರಿಸಲು ವಿಶೇಷ ವೇದಿಕೆಯಾಗಿದೆ. ಸ್ಥಳದಲ್ಲೇ ಅರ್ಜಿಗಳನ್ನು ಪರಿಶೀಲಿಸಿ, ಬ್ಯಾಂಕ್ ಅಧಿಕಾರಿಗಳ ಸಮ್ಮುಖದಲ್ಲಿ ತ್ವರಿತವಾಗಿ ಸಮಸ್ಯೆಗಳನ್ನು ಬಗೆಹರಿಸುವುದು ಇದರ ಮುಖ್ಯ ಉದ್ದೇಶವಾಗಿದೆ.
ಮಹಾಲೇಖಪಾಲರ ಕಚೇರಿಯ ಹಿರಿಯ ಲೆಕ್ಕಪರಿಶೋಧನಾ ಅಧಿಕಾರಿ ನಾಗಸೇನಾ.ಟಿ.ವಿ, ಮತ್ತು ಪದ್ಮವತಿ, ಜಿಲ್ಲಾ ಖಜಾನೆಯ ಉಪನಿರ್ದೇಶಕರಾದ ರಮೇಶ್ ಅರೆಮಲ್ಲಾಪುರ, ಸಹಾಯಕ ಲೆಕ್ಕಪರಿಶೋಧನಾ ಆಧಿಕಾರಿ ಚಂದನ್ ಮತ್ತು ಜಾಬ್ಲೀನೋ, ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243


