Connect with us

ಲೈಫ್ ಸ್ಟೈಲ್

ಸ್ಟಿರಾಯ್ಡುಗಳು : ಜೀವರಕ್ಷಕಗಳೋ ? ಜೀವ ನಾಶಕಗಳೋ ?

Published

on

  • ಡಾ: ಎನ್.ಬಿ.ಶ್ರೀಧರ

ಘಟನೆ 1

“ಸಾರ್.. ಇಲ್ಲೊಂದು ಬೆಲೆಬಾಳುವ ಎತ್ತಿಗೆ ಸಿಕ್ಕ ಪಟ್ಟೆ ಜೇನುನೊಣ ಕಚ್ಚಿ ಎತ್ತು ಸಾಯುವ ಸ್ಥಿತಿಯಲ್ಲಿದೆ. ಇದನ್ನು ಬದುಕಿಸಲು ಚಿಕಿತ್ಸೆ ಸೂಚಿಸಿ”. ಇದು ಉತ್ತರ ಕರ್ನಾಟಕ ಭಾಗದಲ್ಲಿನ ನನ್ನ ವಿದ್ಯಾರ್ಥಿ ಪಶುವೈದ್ಯರ ಕೋರಿಕೆ. ಅದಕ್ಕೆ ಸ್ಟಿರಾಯ್ಡ್ ಅವಶ್ಯಕತೆ ಇದೆ. ಇಂತಿಷ್ಟು ಪ್ರಮಾಣದಲ್ಲಿ ಚುಚ್ಚುಮದ್ದಿನ ರೂಪದಲ್ಲಿ ನೀಡಿ ಹಾಗೂ ಉಳಿದಂತೆ ಇತರ ಚಿಕಿತ್ಸೆ ನೀಡಿ ಎಂದು ಸಲಹೆ ನೀಡಿದೆ. ಮರು ದಿನ ಎತ್ತು ಚೇತರಿಸಿಕೊಂಡಿತು ಸಾರ್.. ಧನ್ಯವಾದ ಅಂದು ಅನುಸರಣಾ ವರದಿ ಬಂತು.

ಘಟನೆ 2

ನಮ್ಮ ಸ್ನೇಹಿತರನ್ನು ಅವರ ಕಾಯಿಲೆಯೊಂದಕ್ಕೆ ಚಿಕಿತ್ಸೆಗಾಗಿ ತಜ್ಞರೊಬ್ಬರ ಬಳಿ ಕರೆದೊಯ್ದಿದ್ದೆ. ಎಲ್ಲಾ ಪರೀಕ್ಷೆಗಳಾದ ಮೇಲೆ ಚಿಕಿತ್ಸಾ ಚೀಟಿಯನ್ನು ವೈದ್ಯರು ವಿವರಿಸಿದರು. ನೀಡಿ… ಇವರೆ.. ನಿಮ್ಮ ಕಾಯಿಲೆ ಇಂತಹದು. ಇದರ ಚಿಕಿತ್ಸೆಗಾಗಿ ಸಣ್ಣ ಪ್ರಮಾಣದಲ್ಲಿ ಸ್ಟಿರಾಯ್ಡ್ ಒಂದನ್ನು ಬರೆದಿದ್ದೇನೆ. ಇದು ನಿಮ್ಮ ಕಾಯಿಲೆಯಲ್ಲಿ ಬಹಳ ಅನಿವಾರ್ಯ.

ಇಂತಿಷ್ಟು ದಿನ ತೆಗೆದುಕೊಳ್ಳಿ ಎನ್ನುತ್ತಿದ್ದಂತೆ ನನ್ನ ಸ್ನೇಹಿತರು ಪಕ್ಕದಲ್ಲಿ ಹಾವು ಹಾದು ಹೋದಂತೆ ಹಾರಿಬಿದ್ದರು. ಛೆ.. ಛೆ.. ಸ್ಟಿರಾಯ್ಡುಗಳೇ? ನಾನು ತೆಗೆದುಕೊಳ್ಳಲು ಸಾಧ್ಯವೇ ಇಲ್ಲ !!. ಈ ಡಾಕ್ಟ್ರೇ ಸರಿ ಇಲ್ಲ. ಸ್ಟಿರಾಯ್ಡುಗಳನ್ನು ಬರ್ದು ಕೊಡ್ತಾರೆ. ಇವರಿಗೆ ಅವರ ಕಾಯಿಲೆಗಳಲ್ಲಿ ಸ್ಟಿರಾಯ್ಡುಗಳ ಬಗ್ಗೆ ಅವರ ಕಾಯಿಲೆಯಲ್ಲಿ ಅನಿವಾರ್ಯತೆಯನ್ನು ವಿವರಿಸಿ ಅವರು ಅದನ್ನು ಸ್ವಲ್ಪ ದಿನ ತೆಗೆದುಕೊಳ್ಳುವಂತೆ ಮಾಡಲು ಸಾಕು ಸಾಕಾಯಿತು!!

ಘಟನೆ 3

ಸುಮಾರು ವರ್ಷಗಳ ಹಿಂದಿನ ಕಥೆ. ನಮ್ಮ ಪ್ರಯೋಗಶಾಲೆಯಲ್ಲಿರುವ ಒಬ್ಬರಿಗೆ ” ಸೋರಿಯಾಸಿಸ್” ಕಾಯಿಲೆ ಇತ್ತು. ಈ ಕಾಯಿಲೆಗೆ ಉತ್ತಮ ಔಷಧಿ ಇಲ್ಲ. ಇದಕ್ಕೆ ಅಲೋಪತಿಯಲ್ಲಿ ಇರುವ ಔಷಧಗಳನ್ನು ತೆಗೆದುಕೊಳ್ಳುತ್ತಾ ದಿನ ದೂಡುತ್ತಿದ್ದರು. ಕೈ ಮೇಲೆ ತುರಿಕೆಯ ಕಲೆಗಳು ಎದ್ದು ಕಾಣುತ್ತಿದ್ದವು.

ಸ್ವಲ್ಪ ದಿನ ಬಿಟ್ಟು ನೋಡಿದರೆ ಏನಾಶ್ಚರ್ಯ !! ಕಲೆಗಳೆಲ್ಲಾ ಮಾಯ !! ಔಷಧಶಾಸ್ತ್ರ ತಜ್ಞರೆಂದು ಹೇಳಿಕೊಳ್ಳುವ ನಮಗೇ ಗೊತ್ತಾಗದ ಹಾಗೇ ಹೊಸ ಔಷಧಿ ಬಂದು ಬಿಟ್ಟಿತೇ ಎಂದು ಆಶ್ಚರ್ಯ ಪಟ್ಟೆ!. ಕೇಳಿದರೂ ನಿಮಗೆ ಆ ಔಷಧದ ವಿಷಯ ಬೇಡ ಸಾರ್. ನೀವು ಅದನ್ನೆಲ್ಲಾ ನಂಬಲ್ಲ ಎಂದು ನುಣುಚಿಕೊಂಡು ಬಿಟ್ಟರು. ವಿಷಯ ಮರೆತು ಹೋಯಿತು.

ಸ್ವಲ್ಪ ದಿನದ ನಂತರ ಅವರಿಂದ ದೂರವಾಣಿ ಕರೆ!. ಸಾರ್. ಸ್ವಲ್ಪ ಮೈಗೆ ಹುಶಾರಿಲ್ಲ.. ನಾಲ್ಕು ದಿನ ರಜೆ ಬೇಕು.. ಸರಿ. ರಜೆ ಮುಗಿಸಿ ಬಂದ ನಂತರ ಅವರಲ್ಲಿ ಏನೋ ಬದಲಾವಣೆ ಗಮನಿಸಿದೆ. ಮುಖವೆಲ್ಲಾ ಸ್ವಲ್ಪ ದಪ್ಪವಾಗಿತ್ತು. ದೇಹದ ತೂಕವೂ ಜಾಸ್ತಿಯಾದ ಹಾಗೇ ಕಾಣಿಸಿತು. ಅಲ್ರೀ… ಯಾಕೋ ದಪ್ಪ ಆದ ಹಾಗೇ ಕಾಣ್ತೀರಲ್ಲ!! ಯಾಕೆ ? ಅಂದೆ. ಇಲ್ಲ ಸಾರ್. ಒಂದು ಹತ್ತು ದಿನದಿಂದ ಆಲಸ್ಯ. ಬೆಳಿಗ್ಗೆ ವಾಕ್ ನಿಲ್ಲಿಸಿ ಬಿಟ್ಟೆ. ಅದಕ್ಕೆ ತೂಕ ಜಾಸ್ತಿಯಾಗಿ ಬಿಟ್ಟಿದೆ ಅಂದರು.

ನನಗೆ ಸಂಶಯವಾಗಿ ಏನಾದ್ರೂ ಔಷಧ ತೆಗೆದುಕೊಳ್ತಾ ಇದ್ದೀರೇನ್ರಿ ?? ಅಂದೆ. ಹೌದು ಸಾರ್. ಈ ಸೋರಿಯಾಸಿಸ್” ಗೆ ಹಳ್ಳಿ ಔಷಧಿ ತಗೋಳ್ತಾ ಇದ್ದೀನಿ ಸಾರ್. ಅದ್ರಿಂದ್ಲೇ ನನಗೆ ಹುಶಾರಾಗಾದೆ. ಅದೇನೂ ತೊಂದ್ರೆ ಇಲ್ಲ ಸಾರ್. ಅಯುರ್ವೇದಿಕ್ ಔಷಧಿ. ಸೈಡ್ ಇಫೆಕ್ಟ್ ಇಲ್ವಂತೆ ಸಾರ್.. ಅಂದ್ರು.

“ಸರಿ. ಔಷಧಿ ತಗೊಂಡು ಬನ್ನಿ ನೋಡೋಣ” ಅಂದೆ. ಕಾಗದದ ಪೊಟ್ಟಣದಲ್ಲಿ ಕಟ್ಟಿದ ಕಂದು ಬಣ್ಣದ ಪುಡಿಯಂತಹ ವಸ್ತುವೊಂದನ್ನು ತಂದು ಕೊಟ್ಟರು. ಅದನ್ನು ನಮ್ಮ ಪ್ರಯೋಗಾಲಯದಲ್ಲಿ ತಪಾಸಣೆಗೆ ಒಳಪಡಿಸಿದೆ. ಅದರಲ್ಲಿ ಸ್ಟಿರೋಯ್ಡ್ ಇರುವುದು ಪತ್ತೆ ಆಯ್ತು.

ನಂತರ ಗೊತ್ತಾಗಿರುವುದು ಆ ಪಂಡಿತ ಆಯುರ್ವೇದದ ಹೆಸರಿನಲ್ಲಿ ಸ್ಟಿರೋಯ್ಡ್ಗಳನ್ನು ಪುಡಿಯಲ್ಲಿ ಬೆರೆಸಿ ಜನರಿಗೆ ನೀಡಿ ಮಂಕು ಬೂದಿ ಎರಚಿ ಹಣ ಕೀಳುತ್ತಿದ್ದ. ಈ ಸ್ಟಿರೋಯ್ಡ್ ಗಳು ಶರೀರದ ರೋಗ ನಿರೋಧಕ ಕಣಗಳನ್ನು ಹತ್ತಿಕ್ಕಿ ತಾತ್ಕಾಲಿಕ ಉಪಶಮನ ನೀಡಿದರೂ ಅವುಗಳ ಅಡ್ಡಪರಿಣಾಮದಿಂದ ಶರೀರದಲ್ಲಿ ನೀರು ತುಂಬಿಕೊಂಡು ದೇಹದ ತೂಕ ಹೆಚ್ಚಿಸಿ ಆಲಸ್ಯವನ್ನುಂಟು ಮಾಡಿದೆ ಅಂತ ಗೊತ್ತಾಯ್ತು. ಔಷಧ ನಿಲ್ಲಿಸಿದ ಮೇಲೆ ಅವರ ಆರೋಗ್ಯ ಸುಧಾರಿಸಿತು.

ಘಟನೆ 4

ಕುದುರೆಗಳು ಚೆನ್ನಾಗಿ ಓಡಲು ಮತ್ತು ಜಾನುವಾರುಗಳು ಚೆನ್ನಾಗಿ ಕೊಬ್ಬಲು ಸ್ಟಿರಾಯ್ಡುಗಳ ಬಳಕೆ ಅತಿಯಾಗಿ ಅವುಗಳಿಗೆ “ಡೋಪಿಂಗ್ ಪರೀಕ್ಷೆ” ಈಗ ಕಡ್ಡಾಯವಾಗಿದೆ. ದೇಹ ಹುರಿಗೊಳಿಸುವ ಸಲುವಾಗಿ ತನ್ನ ಜಿಮ್ ಗ್ರಾಹಕರಿಗೆ ಸ್ಟಿರಾಯ್ಡ್ ಸಹಿತ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಬೆಂಗಳೂರಿನಲ್ಲಿ ಜಿಮ್ ತರಬೇತುದಾರನನ್ನು ಬಂಧಿಸಲಾಗಿದೆ ಮತ್ತು ಬಾಕ್ಸಿಂಗ್ ಚಾಂಪಿಯನ್ ಮೈಕ್ ಟೈಸನ್ ಸ್ಟಿರಾಯ್ಡ್ಸ್ ಉಪಯೋಗಿಸುತ್ತಿದ್ದ ಮತ್ತು ಸಿಕ್ಕಿ ಬಿದ್ದು ಕಂಬಿ ಎಣಿಸಿದ ಇತ್ಯಾದಿ.. ಸುದ್ಧಿಗಳು ಮಾಧ್ಯಮಗಳಲ್ಲಿ ಹರಿದಾಡಿ ಜನರಲ್ಲಿ ಸ್ಟಿರಾಯ್ಡುಗಳ ಬಗ್ಗೆ ಭಯನ್ನು ಹುಟ್ಟಿಸಿದವು. ಇವುಗಳಿಗೆ “ಉದ್ಧೀಪನ ಔಷಧಿಗಳು” ಎಂದೂ ಕರೆಯುತ್ತಾರೆ.

ಈ ಘಟನೆಗಳು ಸ್ಟಿರಾಯ್ಡುಗಳ ಉಪಯುಕ್ತತೆ ಮತ್ತು ಅವುಗಳ ದುಷ್ಪರಿಣಾಮ ಇವುಗಳ ಕುರಿತು ನನ್ನ ಗಮನಕ್ಕೆ ಬಂದ ಚಿಕ್ಕ ಪುಟ್ಟ ಉದಾಹರಣೆಗಳು ಅಷ್ಟೆ.. ಇಂತಹ ಸಹಸ್ರಾರು ಜನರು ಈ ತರಹದ ಸುಳ್ಳು ಔಷಧಗಳಿಗೆ ಬಲಿಯಾಗಿರಬಹುದೇನೋ?

ಹಾಗಿದ್ದರೆ ಏನಿದು ಸ್ಟಿರೋಯ್ಡ್? ಯಾಕೆ ಇದನ್ನು ಬಳಸುತ್ತಾರೆ? ಏನಿದರ ಪರಿಣಾಮ ಮತ್ತು ಅಡ್ಡಪರಿಣಾಮ? ಅನ್ನುವ ಬಗ್ಗೆ ತಿಳಿಯೋಣವೇ?

ಮೆದುಳಿನಿಂದ ಸ್ರವಿಸಲ್ಪಡುವ ಎಸಿಟಿಹೆಚ್ ಹಾರ್ಮೋನಿನಿಂದ ಪ್ರಚೋದಿತವಾಗಿ ಅಡ್ರಿನಲ್ ಗ್ರಂಥಿಯ ಕಾರ್ಟೆಕ್ಸ್ ಭಾಗದಿಂದ “ಕಾರ್ಟಿಕೋಸ್ಟಿರೋಯ್ಡ್” ರಕ್ತದಲ್ಲಿ ಸ್ರವಿಸಲ್ಪಡುತ್ತದೆ. ಪ್ರಸಕ್ತ ಮಾರುಕಟ್ಟೆಯಲ್ಲಿ ಇರುವ ಅನೇಕ ಸ್ಟಿರಾಯ್ಡುಗಳಿಗೆ ಇದೇ ಮೂಲ ಸೌಧ. ಇದರ ಪರಿಣಾಮವನ್ನು ಎರಡು ಮುಖ್ಯ ಘಟ್ಟದಲ್ಲಿ ವಿಭಜಿಸಬಹುದು.

ಅದೆ ಗ್ಲುಕೋಕಾರ್ಟಿಕಾಯ್ಡ್ ಪರಿಣಾಮ ಮತ್ತು ಮಿನೆರಲೋ ಕಾರ್ತಿಕಾಯ್ಡ್ ಪರಿಣಾಮಗಳು. ಶರೀರ ಹೆಚ್ಚಿನ ಕೆಲಸ ಮಾಡಬೇಕಾದರೆ ಅವಶ್ಯವಿರುವ ಗ್ಲುಕೋಸ್ ಬೇಕಾದಾಗ ಗ್ಲುಕೋಕಾರ್ಟಿಕಾಯ್ಡ್ ಪರಿಣಾಮವೆಂದರೆ ರಕ್ತದಲ್ಲಿನ ಗ್ಲುಕೋಸ್ ಪ್ರಮಾಣವನ್ನು ಪಿತ್ತಜನಕಾಂಗ, ಮಾಂಸಖಂಡಗಳು ಮತ್ತು ಕೊಬ್ಬಿನ ಕಣಗಳ ವಿಭಜನೆಯಿಂದ ಹೆಚ್ಚಿಸುವುದು.ಈ ವರ್ಗಕ್ಕೆ ಕೆಲವು ಉದಾಹರಣೆಗಳೆಂದರೆ ಕಾರ್ಟಿಸೊಲ್, ಪ್ರೆಡ್ನಿಸೋನ್, ಪ್ರೆಡ್ನಿಸೋಲೊನ್, ಮೆಥೈಲ್ ಪ್ರೆಡ್ನಿಸೋಲೊನ್,ಡೆಕ್ಸಾಮಿಥಸೋನ್, ಬೆಟಾಮಿಥಸೋನ್ ಇತ್ಯಾದಿ.

ಇನ್ನು ಮಿನೆರಲೋಕಾರ್ಟಿಕಾಯ್ಡ್ ಪರಿಣಾಮವೆಂದರೆ ಶರೀರದಲ್ಲಿ ಹೆಚ್ಚಿನ ಪೊಟ್ಯಾಸಿಯಂ ಅಂಶವನ್ನು ಅಲ್ಡೋಸ್ಟಿರೋನ್ ಅಂಶದ ಮೂಲಕ ಉಳಿಸಿಕೊಳ್ಳುವುದು. ಇದಕ್ಕೆ ಉದಾಹರಣೆಗಳೆಂದರೆ ಅಲ್ಡೋಸ್ಟಿರೋನ್ ಪ್ಲುಡ್ರೋಕಾರ್ಟಿಸೋನ್ ಇತ್ಯಾದಿ.

ಇದಲ್ಲದೇ “ಅನಾಬೋಲಿಕ್ ಸ್ಟಿರಾಯ್ಡ್” ಎಂಬ ಮತ್ತೊಂದು ವರ್ಗವಿದ್ದು ಇದನ್ನು ವಯಸ್ಸಾದ ವ್ಯಕ್ತಿಗಳಲ್ಲಿ ಮಾಂಸಖಂಡಗಳು ದುರ್ಬಲವಾದಾಗ ಉಪಯೋಗಿಸುತ್ತಾರೆ. ಆದರೆ ಬಹಳ ಸಲ ಇದನ್ನು ಕ್ರೀಡಾಪಟುಗಳು ದುರ್ಬಳಕೆ ಮಾಡಿ, ಹಿಂಬಾಗಿಲಿನಿಂದ ಕ್ರೀಡೆಯನ್ನು ಗೆಲ್ಲುವ ಹುನ್ನಾರ ಮಾಡುತ್ತಾರೆ.

“ಅನಾಬೋಲಿಕ್ ಸ್ಟಿರಾಯ್ಡ್” ಇವು ಗಂಡು ಹಾರ್ಮೊನಾದ ಟೆಸ್ಟೋಸ್ಟಿರಾನ್ ಇದರ ಪ್ರತಿರೂಪವಾಗಿದ್ದು ಮಾಂಸಖಂಡಗಳಲ್ಲಿ ಪ್ರೋಟೀನುಗಳ ಬಳಕೆ ಜಾಸ್ತಿ ಮಾಡುತ್ತವೆ. ಇದರಿಂದ ಮಾಂಸಖಂಡಗಳು ಹಿಗ್ಗಿ, ಕುಸ್ತಿ ಮತ್ತು ಬಾಕ್ಸಿಂಗ್ ಪಟುಗಳು ಮತ್ತು ಅನೇಕ ಕ್ರೀಡಾಪಟುಗಳು ಇದರ ದುರ್ಬಳಕೆ ಮಾಡಿ “ಉದ್ಧೀಪನ ಔಷಧಿ” ಪತ್ತೆಯ ಸಮಯದಲ್ಲಿ ಸಿಕ್ಕಿಹಾಕಿಕೊಳ್ಳುತ್ತಾರೆ. ಇದಕ್ಕೆ ಉದಾಹರಣೆಯೆಂದರೆ ಆಂಡ್ರೋಸ್ಟೆನೆಡಿಯೋನ್, ಸ್ಟಾನಜೋಲೋಲ್, ನಾಂಡ್ರೋಲೋನ್ ಇತ್ಯಾದಿ.

ಮತ್ತೊಂದು ಮುಖ್ಯವಾದ ಅಂಶವೆಂದರೆ ಕಾರ್ಟಿಕೋಸ್ಟಿರಾಯ್ಡುಗಳು ಶರೀರದಲ್ಲಿ ಉರಿಯೂತವನ್ನುಂಟು ಮಾಡಬಲ್ಲ ಸೈಟೊಕೈನ್ ಮತ್ತಿತರ ಪದಾರ್ಥಗಳ ಉತ್ಪಾದನೆ ಮತ್ತು ಅವುಗಳ ಕಾರ್ಯವನ್ನು ಕುಂಠಿತಗೊಳಿಸಿ ಉರಿಯೂತವನ್ನು ಕಡಿಮೆ ಮಾಡುತ್ತವೆ. ಕಾರಣ ಇವುಗಳನ್ನು “ ಜೀವ ರಕ್ಷಕ” ಔಷಧಗಳ ಪಟ್ಟಿಯಲ್ಲಿ ಸೇರಿಸುತ್ತಾರೆ.

ಈ ಔಷಧಿ ಇರದಿದ್ದರೆ ಅಪಘಾತ, ಹಾವು ಕಡಿತ, ಜೇನು ಹುಳ ಕಡಿತದಂತ ಅನೇಕ ಜೀವ ತೆಗೆಯುವ ಸ್ಥಿತಿಗಳಿಗೆ “ಜೀವ ರಕ್ಷಕ” ಔಷಧಗಳೇ ಇಲ್ಲವಾಗಿದ್ದವು. ನಮ್ಮ ದೇಹಕ್ಕೆ ಅತಿಯಾದ ಉರಿಯೂತವನ್ನುಂಟು ಮಾಡಬಲ್ಲ ಈ ಸ್ಥಿತಿಗಳಿಗೆ ಗ್ಲುಕೊಕಾರ್ಟಿ ಕಾಯ್ಡುಗಳು ರಾಮಬಾಣವಾಗಿ ಪರಿಣಮಿಸಿವೆ.

ಸ್ಟಿರಾಯ್ಡುಗಳು ಜನ ಹೆದರುವ ಹಾಗೇ “ಭಯಾನಕ” ಔಷಧಿಗಳೇನೂ ಅಲ್ಲ. ಸಾಕಷ್ಟು ಎಚ್ಚರ ವಹಿಸಿಯೇ ಅವುಗಳನ್ನು ಕಂಡು ಹಿಡಿಯಲಾಗಿದೆ. ಸ್ಟಿರಾಯ್ಡುಗಳು ಅಥವಾ ಅನಾಬೊಲಿಕ್ ಸ್ಟಿರಾಯ್ಡುಗಳ ದುರ್ಬಳಕೆಯಿಂದ ಕೆಟ್ಟ ಹೆಸರು ಪಡೆದಿವೆಯೇ ಹೊರತು ಇವುಗಳು ವೈದ್ಯರ ಸಲಹೆಯಂತೆ ಉಪಯೋಗಿಸಿದಲ್ಲಿ ಉತ್ತಮ ಪರಿಣಾಮ ಬೀರಬಲ್ಲ ಔಷಧಗಳು.

ಯಾವುದೇ ಔಷಧವನ್ನು ವೈದ್ಯರ ಸಲಹೆಯಂತೆ ನಿಯಮಿತ ಅವಧಿಗೆ ಬಳಸಿದರೆ ಏನೂ ತೊಂದರೆ ಇಲ್ಲ. ವೈದ್ಯರಿಗೆ ಪ್ರತಿ ಔಷಧಿಯ ಪರಿಣಾಮ ಮತ್ತು ಅಡ್ಡಪರಿಣಾಮ ತಿಳಿದಿರುತ್ತದೆ. ಅವಶ್ಯವಾಗಿದ್ದಾಗ ಮಾತ್ರ ಅವರು ಬಳಸುತ್ತಾರೆ. ಸುಮ್ಮನೆ ಪೂರ್ವಾಗೃಹ ಪೀಡೆಯಿಂದ ಒಂದು ಔಷಧಿಯನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸುವುದು ತರವಲ್ಲ. ಅಲ್ಲದೇ ಕೆಲವರು ಸ್ವಯಂ ವೈದ್ಯದಿಂದಲೂ ಹಾಗೂ ಕೆಲ ಹಣಬಾಕ ಕೊಟ್ಟಿ ವೈದ್ಯರುಗಳು ಸಹ ಈ ಔಷಧಿಗಳನ್ನು ದುರುಪಯೋಗ ಮಾಡುವುದನ್ನು ತಡೆಯುವುದು ಒಳ್ಳೆಯದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ

250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ

Published

on

250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು

ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ

ಬೆಂಗಳೂರು: ಮಧ್ಯಪ್ರದೇಶ ರಾಜ್ಯದ ಖಾರ್ಗೋನ್ ಜಿಲ್ಲೆಯಲ್ಲಿರುವ ನರ್ಮದಾ ನದಿ ತೀರದಲ್ಲಿ 250ಕ್ಕೂ ಹೆಚ್ಚು ಗಿಳಿಗಳು ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿರುವ ಪ್ರಕರಣ ಇಡೀ ದೇಶದಲ್ಲಿ ಇದೇ ಮೊದಲ ಬಾರಿಗೆ ನಡೆದ ದುರ್ಘಟನೆ ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ ಆತಂಕ ವ್ಯಕ್ತಪಡಿಸಿದ್ದಾರೆ.

ಕಳೆದ ಮೂರು ದಿನಗಳಲ್ಲಿ ನರ್ಮದಾ ನದಿ ತೀರದಲ್ಲಿ ಸುಮಾರು ಇನ್ನೂರಕ್ಕೂ ಅಧಿಕ ಗಿಳಿಗಳು ನಿಗೂಢವಾಗಿ ಸಾವನ್ನಪ್ಪಿದ್ದು ಆರಂಭದಲ್ಲಿ ಇದು ಹಕ್ಕಿ ಜ್ವರ ದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿತ್ತು ಆದರೆ ಪಶುವೈದ್ಯಕೀಯ ಅಧಿಕಾರಿ ಡಾ. ಸುರೇಶ್ ಬಫೇಲ್ ಅವರು ನೀಡಿದ ಮಾಹಿತಿ ಪ್ರಕಾರ ಹಕ್ಕಿಗಳ ಹೊಟ್ಟೆಯಲ್ಲಿ ಅಕ್ಕಿ ಕಾಳುಗಳು ಮತ್ತು ಸಣ್ಣ ಕಲ್ಲುಗಳು ಪತ್ತೆಯಾಗಿವೆ. ಅಲ್ಲದೆ ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ 200 ರಿಂದ 50 ಕ್ಕೂ ಅಧಿಕ ಮೃತಪಟ್ಟಿರುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಿದ್ದು ಇವರ ಮಾಹಿತಿಯನ್ನು ಆದರಿಸಿ ವಿಶೇಷ ತನಿಖೆ ಮಾಡಬೇಕು ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹಿಸಿದೆ.

ಖರ್ಗೋನ್‌ ಜಿಲ್ಲೆಯ ಬದ್ವಾ ಪ್ರದೇಶದ ನರ್ಮದಾ ನದಿ ತೀರದಲ್ಲಿರುವ ಅಕ್ವೆಡಕ್ಟ್ ಸೇತುವೆಯ ಸಮೀಪ ಈ ಘಟನೆ ಬೆಳಕಿಗೆ ಬಂದಿದ್ದು ಅರಣ್ಯ ಇಲಾಖೆಯು ಸೇತುವೆಯ ಸುತ್ತಮುತ್ತ ಹಕ್ಕಿಗಳಿಗೆ ಆಹಾರ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ. ಸದ್ಯ ಹಕ್ಕಿಗಳ ಸಾವಿಗೆ ನಿಖರ ಕರಣ ತಿಳಿಯಲು ಹಕ್ಕಿಗಳ ಅವಶೇಷಗಳನ್ನು ಜಬಲ್ಪುರಕ್ಕೆ ಕಳುಹಿಸಲಾಗಿದೆ. ಸದ್ಯ ಅರಣ್ಯ ಇಲಾಖೆ ಮತ್ತು ಪಶುವೈದ್ಯಕೀಯ ತಂಡಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ.

ಇನ್ನೊಂದು ಮುಖ್ಯ ವಿಚಾರ ಏನೆಂದರೆ ಪಕ್ಷಿಗಳಿಗೆ ಮನುಷ್ಯರು ಸೇವಿಸುವ ಎಣ್ಣೆ ಪದಾರ್ಥ ಅಥವಾ ಬೇಯಿಸಿದ ಆಹಾರ ನೀಡುವುದು ಅವುಗಳ ಜೀರ್ಣಾಂಗ ವ್ಯವಸ್ಥೆಯ ಮೇಲೆ ಮಾರಕ ಪರಿಣಾಮ ಬೀರುತ್ತದೆ ಎಂದು ಪಶುವೈದ್ಯಕೀಯ ಅಧಿಕಾರಿ ಡಾ. ಮನಿಷಾ ಚೌಹಾಣ್ ಹೇಳಿದ್ದಾರೆ. ಏನೇ ಆದರೂ ನೂರಾರು ಗಿಳಿಗಳು ಸಾವನ್ನಪಿರುವುದು ಮಾತ್ರ ದುರಂತ.

ಈ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ, ಹಿರಿಯ ಉಪಾಧ್ಯಕ್ಷರಾದ ಗುರುರಾಜ್ ಹೂಗಾರ್, ಉಪಾಧ್ಯಕ್ಷರಾದ ಯೋಗೀಶ್ ಕುಮಾರ್, ರುದ್ರಮುನಿ, ಡಾ.ಸಿದ್ದಲಿಂಗಪ್ಪ, ಮತ್ತು ಪದಾಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

Continue Reading

ಅಂಕಣ

Indian birthwort: ಪರಮಾತ್ಮನ ಹೆಸರಲ್ಲೇ ಇರುವ ದಿವ್ಯೌಷದ ಈಶ್ವರ ಬಳ್ಳಿ ಬಗ್ಗೆ ಗೊತ್ತೇ?

Published

on

indian birthwort, Aristolochia tagala

‘ಈಶ್ವರ’ ಎಂದ ಕೂಡಲೇ ಪರಮಾತ್ಮನನ್ನೆ ನೆನಪಿಸಿಕೊಳ್ಳೋ ನಮಗೆ ಅದೇ ಹೆಸರಿನಲ್ಲಿ ದಿವ್ಯೌಷಧಿ ಇದೆ ಎಂಬುದು ಎಷ್ಟು ಜನರಿಗೆ ತಿಳಿದೀತು? ಹೌದು! ಪರಮಾತ್ಮನ ಹೆಸರಿನಲ್ಲೇ ಒಂದು ಗಿಡಮೂಲಿಕೆ ಇದೆ (Indian birthwort). ಇದರ ವಿಶೇಷತೆ ಏನು? ಅದರಿಂದಾಗುವ ಪ್ರಯೋಜನಗಳೇನು? ಆರೋಗ್ಯದ ಮೇಲೆ ಬೀರುವ ಪ್ರಬಾವಗಳೇನು? ಎಂಬುದನ್ನು ಈ ಲೇಖನದಲ್ಲಿ ತಿಳಿಯೋಣ.

ಈ ಬಳ್ಳಿಯನ್ನು ಹೆಚ್ಚಾಗಿ ಭಾರತ, ನೇಪಾಳ, ಶ್ರೀಲಂಕಾ ಮತ್ತು ಬಾಂಗ್ಲಾದೇಶಗಳಲ್ಲಿ ಕಾಣಬಹುದಾಗಿದೆ. ಇದರ ವೈಜ್ಞಾನಿಕ ಹೆಸರು ಅರಿಸ್ಟೋಲೋಚಿಯ ಇಂಡಿಕಾ. ಸಾಮಾನ್ಯವಾಗಿ ಮೂಲಿಕೆ ಮರಕ್ಕೆ ಸುತ್ತಿಕೊಂಡು ಬೆಳೆಯುವ ಕಪ್ಪು ಬಳ್ಳಿಯಾಗಿದ್ದು, ಇದರ ಎಲೆಗಳು ಉದ್ದವಾಗಿ, ತಳದಲ್ಲಿ ಅಗಲವಾಗಿ, ತುದಿಯಲ್ಲಿ ಮೊನಚಾಗಿ, ಮೃದುವಾಗಿರುತ್ತದೆ. ಇನ್ನೂ ಇದರ ಬೀಜಗಳು ಚಪ್ಪಟೆಯಾಗಿ, ಅಂಡಕಾರವಾಗಿದ್ದು ಪುಕ್ಕಗಳನ್ನು ಹೊಂದಿದೆ ಹಾಗು ಇದರ ಬೇರುಗಳಲ್ಲಿ ಸುಗಂಧ ತೈಲವಿರುತ್ತದೆ.

ಈಶ್ವರ ಬಳ್ಳಿ (Indian birthwort)ಯ ಪೌರಾಣಿಕ ಹಿನ್ನೆಲೆ:

ನಮ್ಮೆಲ್ಲರಿಗೂ ತಿಳಿದಂತೆ ಶಿವ ಸಮುದ್ರ ಮಂಥನ ಮಾಡುವಾಗ ಹಾಲಾಹಲ (ವಿಷ) ಉತ್ಪತ್ತಿಯಾಯಿತು. ಆ ವಿಷ ಯಾರಿಗೂ ತೊಂದರೆಯಾಗಬಾರದೆಂದು ತಾನೇ ಅದನ್ನು ಕುಡಿದ. ಇದನ್ನು ನೋಡಿದ ಪಾರ್ವತಿ ದೇವಿ ಆ ವಿಷ ತನ್ನ ಪತಿಯ ಹೊಟ್ಟೆ ಸೇರಬಾರದೆಂದು ಆತನ ಕುತ್ತಿಗೆಯನ್ನು ಒತ್ತಿ ಹಿಡಿದಳು. ವಿಷ ಒಳ ಹೋಗಲಿಲ್ಲ. ವಿಷದ ಪ್ರಭಾವದಿಂದ ಕುತ್ತಿಗೆ ನೀಲ ವರ್ಣವಾಯಿತು. ಶಿವ ನೀಲಕಂಠನಾದ. ಶಿವ ವಿಷ ಕುಡಿದರೂ ಶಿವನಿಗೆ ಏನೂ ಆಗಲಿಲ್ಲ. ವಿಷವನ್ನು ನಿರ್ವಿಷ ಮಾಡುವ ಗುಣ ಶಿವನಿಗಿದ್ದಂತೆ ಈ ಗಿಡಕ್ಕೂ ಇರುವ ಕಾರಣ ‘ಈಶ್ವರ’ ಎಂಬ ಹೆಸರು ಈ ವನಸ್ಪತಿಗೆ ಇಟ್ಟಿದ್ದಾರೆ.

ಇದನ್ನೂ ಓದಿ: ಓಂಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ

‘ಈಶ್ವರ’ ಬಳ್ಳಿ ಮತ್ತು ಅದರ ಫಲ ನೋಡಲು ಹೇಗಿರುತ್ತದೆ?

ಕೆಲ ‘ಈಶ್ವರ’ ಬಳ್ಳಿಯು ಮರದಂತೆ ಉದ್ದಕ್ಕೆ ಏರುತ್ತದೆ. ಮತ್ತಷ್ಟು ಬಳ್ಳಿಯು ಪೊದೆಯಾಗಿ ಆವರಿಸಿಕೊಳ್ಳುತ್ತದೆ. ಸ್ವಲ್ಪ ಉದ್ದ ಆಯತಾಕಾರದ ಎಲೆಗಳು. ಎಲೆಗಳು ಅಲ್ಲಾಡಿದರೆ ಪರಿಮಳ ಸೂಸುತ್ತದೆ. ಎಲೆಯನ್ನು ಕಿವಿಚಿದರೂ ಪರಿಮಳ ಬರುತ್ತದೆ. ಹೂಗಳು ಬಾಯಿ ತೆರೆದ ಹಕ್ಕಿಗಳಂತೆ ಕಂಡುಬರುತ್ತದೆ. ಫಲಗಳು ಉದ್ದ ಹಾಗೂ ಸ್ವಲ್ಪ ದುಂಡಾಗಿ ಇರುತ್ತದೆ. ಫಲ ಬೆಳೆದು ಒಡೆದಾಗ ತಲೆ ಕೆಳಗಾಗಿ ಬಿಡಿಸಿದ ಪ್ಯಾರಾಚೂಟ್‌ನಂತೆ ಕಾಣುತ್ತದೆ. ಅದರೊಳಗೆ ತೆಳುವಾದ ತ್ರಿಕೋಣಾಕಾರದ ಬೀಜಗಳು ಇರುತ್ತದೆ.

‘ಈಶ್ವರ’ ಬಳ್ಳಿ (Indian birthwort)ಯಿಂದ ಆಗುವ ಪ್ರಯೋಜನಗಳೇನು?

ಭಾರತದ ಎಲ್ಲಾ ಕಡೆ ಕಂಡು ಬರುವ ಈಶ್ವರ ಬಳ್ಳಿಯ ಬೇರು, ಎಲೆಗಳು ಔಷಧಿಗಾಗಿ ಉಪಯೋಗಿಸಲ್ಪಡುತ್ತದೆ. ಕ್ರಿಮಿ ಬಾಧೆ, ಕಫ ಬಾಧೆ, ಸ್ತ್ರೀಯರ ಕೆಲವು ತೊಂದರೆಗಳಲ್ಲಿ, ವಿಷ ಚಿಕಿತ್ಸೆಯಲ್ಲಿ ವಿಶೇಷವಾಗಿ ಇದನ್ನು ಉಪಯೋಗಿಸಲ್ಪಡುತ್ತದೆ.

ಜೇಡ, ಚೇಳು, ಇಲಿ ಕಚ್ಚಿದರೆ: ಇದರ 3ಗ್ರಾಂ ಬೇರನ್ನು ಅಕ್ಕಿ ತೊಳೆದ ನೀರಲ್ಲಿ ಕಲಸಿ ಕುಡಿಸಬೇಕು ಹಾಗೂ ಅದರ ಎಲೆಯನ್ನು ನೀರಲ್ಲಿ ಅರೆದು ಕಚ್ಚಿದಲ್ಲಿಗೆ ಲೇಪಿಸಬೇಕು.
ತಲೆ ನೋವಿಗೆ ರಾಮಬಾಣ: ಈಶ್ವರ ಬಳ್ಳಿಯ ಎಲೆಯಲ್ಲಿ 10 ಗ್ರಾಂ ರಸ ತೆಗೆದು, 3ಗ್ರಾಂ ಅರಿಶಿನ ಪುಡಿ ಸೇರಿಸಿ ಕುಡಿಯುವುದರಿಂದ ತಲೆನೋವು ಶೀಘ್ರವಾಗಿ ಕಡಿಮೆಯಾಗುತ್ತದೆ.
ಗಂಟುನೋವು, ಬಿಳಿ ಮಚ್ಚೆಗಳು: ಈ ಎಲೆಯನ್ನು ನೀರಲ್ಲಿ ಅರೆದು ಗಂಟುನೋವು ಅಥವಾ ಬಿಳಿ ಮಚ್ಚೆಗಳ ಮೇಲೆ ಹಚ್ಚುತ್ತ ಬಂದರೆ ಕ್ರಮೇಣ ವಾಸಿಯಾಗುತ್ತದೆ.
ಕೆಮ್ಮು ಕಫಕ್ಕೆ ಔಷಧಿ: ಇದರ ಎಲೆಯ ಜ್ಯೂಸ್ ತೆಗೆದು 15 ಎಂಎಲ್ ನಷ್ಟು ಕುಡಿಸುವುದರಿಂದ ಕಡಿಮೆಯಾಗುವುದು. ಕೆಲವೊಮ್ಮೆ ಈ ಎಲೆಯ ಜ್ಯೂಸ್ ಕುಡಿದ ಸ್ವಲ್ಪ ಹೊತ್ತಿನಲ್ಲಿ ಕಫ ವಾಂತಿಯಾಗಿ ಕರಗಿ ಹೋಗುತ್ತದೆ. ಕಫ ಜಾಸ್ತಿ ಇರುವಾಗ ಸಾಮಾನ್ಯವಾಗಿ ಅಮೃತಾಂಜನ, ವಿಕ್ಸ್ ಎದೆಗೆ ಹಚ್ಚುತ್ತಾರೆ. ಅದೇ ರೀತಿ ಎಲೆಯನ್ನು ಅರೆದು ಎದೆಗೆ ಹಚ್ಚಬಹುದು.
ಮುಟ್ಟಿನ ದೋಷ ನಿವಾರಣೆ: ಹೆಣ್ಣುಮಕ್ಕಳ ಋತುಚಕ್ರದ ವೇಳೆ ಕಾಣಿಸಿಕೊಳ್ಳುವ ಹೊಟ್ಟೆನೋವಿಗೆ 10ಗ್ರಾಂ ಈಶ್ವರ ಬೇರಿನ ಕಷಾಯ ಮಾಡಿ (30 ರಿಂದ 40 ಎಂ.ಎಲ್) ಕುಡಿಸಬೇಕು.
ಹೊಟ್ಟೆ ಕ್ರಿಮಿ ಬಾಧೆ: 5-10 ಮಿಲಿ ಎಲೆರಸವನ್ನು 3 ದಿನ ಕುಡಿಯುವುದರಿಂದ ಕಡಿಮೆಯಾಗುವುದು.
ಜ್ವರಕ್ಕೆ ದಿವ್ಯೌಷಧಿ: 5 ಗ್ರಾಂ ಈಶ್ವರ ಬೇರನ್ನು ಕಷಾಯ ಮಾಡಿ ಅದಕ್ಕೆ 1/2 ಚಮಚ ಕಾಳು ಮೆಣಸು ಪುಡಿ ಸೇರಿಸಿ ಕುಡಿಯುವುದರಿಂದ ಕಡಿಮೆಯಾಗುವುದು. ಶರೀರ ಬಿಸಿ ಆಗಿ ಚಳಿಯಿಂದ ಕೂಡಿದ ಜ್ವರವಿದ್ದರೆ ಈಶ್ವರ ಬೇರಿನ ಕಷಾಯದೊಂದಿಗೆ ಈಶ್ವರ ಬೇರಿನ ಎಲೆ ರಸಕ್ಕೆ ಹಿಪ್ಪಿಯನ್ನು ಪುಡಿಮಾಡಿ ಸೇರಿಸಿ ಕುಡಿಯುವುದರಿಂದ ಕಡಿಮೆಯಾಗುವುದು.
ಸರ್ಪ ಸುತ್ತಿಗೆ ರಾಮಬಾಣ: ಇತ್ತೀಚೆಗೆ ಸರ್ಪ ಸುತ್ತಿಗೆ ಅನೇಕ ಔಷಧಿಗಳಿದ್ದರು ಈಶ್ವರ ಬೇರು ಮತ್ತು ನೀಲಿ ಸೊಪ್ಪನ್ನು ಸೇರಿಸಿ ಅರೆದು ಹಚ್ಚುವುದರಿಂದ ಉರಿ ನೋವು ಕಡಿಮೆಯಾಗುವುದು.
ದೃಷ್ಟಿ ದೋಷ ನಿವಾರಣೆ: ಇದರ ಬೇರನ್ನು ನಯವಾಗಿ ಚೂರ್ಣಮಾಡಿ ಅದಕ್ಕೆ ಅಪ್ಪಟ ಗೋರೋಜನ ಮತ್ತು ಚಂದನ ಸೇರಿಸಿ ತಿಲಕವಿಟ್ಟರೆ ದೃಷ್ಟಿ ದೋಷ ಪರಿಹಾರವಾಗುತ್ತದೆ.
ಮಲಬದ್ಧತೆ ಮತ್ತು ಮೂಲವ್ಯಾಧಿ ನಿವಾರಣೆ: ಈಶ್ವರಿಬೇರು, ಹಾವು ಮೆಕ್ಕೆ ಬೇರು ದಂತಿ, ತಿಗಡೆ ಕೊಮ್ಮೆ ಬೇರು, ಅಳಲೆಕಾಯಿ ಸಿಪ್ಪೆ, ಹಿಪ್ಪಲಿ ಇವುಗಳೆಲ್ಲವನ್ನು ಸಮತೂಕದಲ್ಲಿ ನಯವಾಗಿ ಚೂರ್ಣಿಸಬೇಕು. ನಂತರ 2 ರಿಂದ 2.5 ಗ್ರಾಂ ಚೂರ್ಣವನ್ನು ಸೇವಿಸಿ ಬಿಸಿನೀರು ಕುಡಿದರೆ ಮಲಬದ್ಧತೆ ಮತ್ತು ಮೂಲವ್ಯಾದಿ ನಿವಾರಣೆಯಾಗುತ್ತದೆ.

ಹೀಗೆ ಈಶ್ವರ ಬೇರು (Indian birthwort) ಮತ್ತು ಅದರ ಎಲೆಯಲ್ಲಿ ಅಡಗಿರುವ ದಿವ್ಯೌಷಧಿ ಅಪಾರ. ಅದರಲ್ಲಿ ತೀಕ್ಷ ಗುಣಗಳುಳ್ಳ ಮದ್ದಾಗಿದ್ದು, ಅನೇಕ ಕಾಯಿಲೆಗಳಿಗೆ ರಾಮಬಾಣವಾಗಿದೆ. ಯಾವುದೇ ಔಷಧಿಯಾದರು ಉಪಯೋಗಿಸು ಮುನ್ನ ಒಮ್ಮೆ ತಜ್ಞ ವೈದ್ಯರ ಸಲಹೆ ಪಡೆಯುವುದು ಸೂಕ್ತ.

Continue Reading

ದಿನದ ಸುದ್ದಿ

ಗೃಹಬಳಕೆ ಎಲ್‌ಪಿಜಿ ಸಿಲೆಂಡರ್ ಬೆಲೆಯಲ್ಲಿ ಬದಲಾವಣೆ ಇಲ್ಲ

Published

on

ಸುದ್ದಿದಿನಡೆಸ್ಕ್:ಗೃಹಬಳಕೆಯ ಎಲ್‌ಪಿಜಿ ಸಿಲೆಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಸ್ಪಷ್ಟಪಡಿಸಿದೆ.

ಗೃಹ ಬಳಕೆ ಎಲ್‌ಪಿಜಿ ಸಿಲೆಂಡರ್ ಬೆಲೆಯನ್ನು 111 ರೂಪಾಯಿಗಳಷ್ಟು ಹೆಚ್ಚಿಸಲಾಗಿದೆ ಎಂಬ ಮಾಧ್ಯಮ ವರದಿಗಳನ್ನು ತಳ್ಳಿ ಹಾಕಿರುವ ಸಚಿವಾಲಯ, ವಾಣಿಜ್ಯ ಸಿಲೆಂಡರ್ ಬೆಲೆಯು ಅಂತಾರಾಷ್ಟ್ರೀಯ ಕಚ್ಚಾ ಅನಿಲ ಮತ್ತು ಸಂಬAಧಿತ ದರಗಳ ಮೇಲೆ ಅವಲಂಬಿತವಾಗಿದ್ದು, ಆಗಾಗ್ಗೆ ಮಾರುಕಟ್ಟೆಯ ದರಗಳು ಬದಲಾಗುತ್ತವೆ. ಆದರೆ, ಗೃಹ ಬಳಕೆಯ ಸಿಲೆಂಡರ್ ದರದಲ್ಲಿ ಯಾವುದೇ ವ್ಯತ್ಯಾಸವಿಲ್ಲ ಎಂದು ತಿಳಿಸಿದೆ.

ದೆಹಲಿಯಲ್ಲಿ 14.2 ಕೆಜಿ ಗೃಹ ಬಳಕೆ ಅಡುಗೆ ಅನಿಲ ಸಿಲೆಂಡರ್ ಬೆಲೆ 950 ರೂಪಾಯಿಯಾಗಿದ್ದು, ಪ್ರಧಾನಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಇದು 553 ರೂಪಾಯಿ ಬೆಲೆಯಲ್ಲಿ ಲಭ್ಯವಿದೆ. ಇದು ಆಗಸ್ಟ್ 2023 ರಿಂದ ನವೆಂಬರ್ 2025ರವರೆಗೆ ಹೋಲಿಸಿದರೆ, ಶೇಕಡಾ 39 ರಷ್ಟು ದರ ಕಡಿತವನ್ನು ಸೂಚಿಸುತ್ತದೆ. ಜನರಿಗೆ ಸುಸ್ಥಿರ ಇಂಧನ ಪೂರೈಕೆಗೆ ಒತ್ತು ನೀಡಲಾಗಿದ್ದು, ದರ ಬದಲಾವಣೆ ಇಲ್ಲ ಎಂದು ಸಚಿವಾಲಯ ಮಾಹಿತಿ ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending