ಲೈಫ್ ಸ್ಟೈಲ್
ಸ್ಟಿರಾಯ್ಡುಗಳು : ಜೀವರಕ್ಷಕಗಳೋ ? ಜೀವ ನಾಶಕಗಳೋ ?
- ಡಾ: ಎನ್.ಬಿ.ಶ್ರೀಧರ
ಘಟನೆ 1
“ಸಾರ್.. ಇಲ್ಲೊಂದು ಬೆಲೆಬಾಳುವ ಎತ್ತಿಗೆ ಸಿಕ್ಕ ಪಟ್ಟೆ ಜೇನುನೊಣ ಕಚ್ಚಿ ಎತ್ತು ಸಾಯುವ ಸ್ಥಿತಿಯಲ್ಲಿದೆ. ಇದನ್ನು ಬದುಕಿಸಲು ಚಿಕಿತ್ಸೆ ಸೂಚಿಸಿ”. ಇದು ಉತ್ತರ ಕರ್ನಾಟಕ ಭಾಗದಲ್ಲಿನ ನನ್ನ ವಿದ್ಯಾರ್ಥಿ ಪಶುವೈದ್ಯರ ಕೋರಿಕೆ. ಅದಕ್ಕೆ ಸ್ಟಿರಾಯ್ಡ್ ಅವಶ್ಯಕತೆ ಇದೆ. ಇಂತಿಷ್ಟು ಪ್ರಮಾಣದಲ್ಲಿ ಚುಚ್ಚುಮದ್ದಿನ ರೂಪದಲ್ಲಿ ನೀಡಿ ಹಾಗೂ ಉಳಿದಂತೆ ಇತರ ಚಿಕಿತ್ಸೆ ನೀಡಿ ಎಂದು ಸಲಹೆ ನೀಡಿದೆ. ಮರು ದಿನ ಎತ್ತು ಚೇತರಿಸಿಕೊಂಡಿತು ಸಾರ್.. ಧನ್ಯವಾದ ಅಂದು ಅನುಸರಣಾ ವರದಿ ಬಂತು.
ಘಟನೆ 2
ನಮ್ಮ ಸ್ನೇಹಿತರನ್ನು ಅವರ ಕಾಯಿಲೆಯೊಂದಕ್ಕೆ ಚಿಕಿತ್ಸೆಗಾಗಿ ತಜ್ಞರೊಬ್ಬರ ಬಳಿ ಕರೆದೊಯ್ದಿದ್ದೆ. ಎಲ್ಲಾ ಪರೀಕ್ಷೆಗಳಾದ ಮೇಲೆ ಚಿಕಿತ್ಸಾ ಚೀಟಿಯನ್ನು ವೈದ್ಯರು ವಿವರಿಸಿದರು. ನೀಡಿ… ಇವರೆ.. ನಿಮ್ಮ ಕಾಯಿಲೆ ಇಂತಹದು. ಇದರ ಚಿಕಿತ್ಸೆಗಾಗಿ ಸಣ್ಣ ಪ್ರಮಾಣದಲ್ಲಿ ಸ್ಟಿರಾಯ್ಡ್ ಒಂದನ್ನು ಬರೆದಿದ್ದೇನೆ. ಇದು ನಿಮ್ಮ ಕಾಯಿಲೆಯಲ್ಲಿ ಬಹಳ ಅನಿವಾರ್ಯ.
ಇಂತಿಷ್ಟು ದಿನ ತೆಗೆದುಕೊಳ್ಳಿ ಎನ್ನುತ್ತಿದ್ದಂತೆ ನನ್ನ ಸ್ನೇಹಿತರು ಪಕ್ಕದಲ್ಲಿ ಹಾವು ಹಾದು ಹೋದಂತೆ ಹಾರಿಬಿದ್ದರು. ಛೆ.. ಛೆ.. ಸ್ಟಿರಾಯ್ಡುಗಳೇ? ನಾನು ತೆಗೆದುಕೊಳ್ಳಲು ಸಾಧ್ಯವೇ ಇಲ್ಲ !!. ಈ ಡಾಕ್ಟ್ರೇ ಸರಿ ಇಲ್ಲ. ಸ್ಟಿರಾಯ್ಡುಗಳನ್ನು ಬರ್ದು ಕೊಡ್ತಾರೆ. ಇವರಿಗೆ ಅವರ ಕಾಯಿಲೆಗಳಲ್ಲಿ ಸ್ಟಿರಾಯ್ಡುಗಳ ಬಗ್ಗೆ ಅವರ ಕಾಯಿಲೆಯಲ್ಲಿ ಅನಿವಾರ್ಯತೆಯನ್ನು ವಿವರಿಸಿ ಅವರು ಅದನ್ನು ಸ್ವಲ್ಪ ದಿನ ತೆಗೆದುಕೊಳ್ಳುವಂತೆ ಮಾಡಲು ಸಾಕು ಸಾಕಾಯಿತು!!
ಘಟನೆ 3
ಸುಮಾರು ವರ್ಷಗಳ ಹಿಂದಿನ ಕಥೆ. ನಮ್ಮ ಪ್ರಯೋಗಶಾಲೆಯಲ್ಲಿರುವ ಒಬ್ಬರಿಗೆ ” ಸೋರಿಯಾಸಿಸ್” ಕಾಯಿಲೆ ಇತ್ತು. ಈ ಕಾಯಿಲೆಗೆ ಉತ್ತಮ ಔಷಧಿ ಇಲ್ಲ. ಇದಕ್ಕೆ ಅಲೋಪತಿಯಲ್ಲಿ ಇರುವ ಔಷಧಗಳನ್ನು ತೆಗೆದುಕೊಳ್ಳುತ್ತಾ ದಿನ ದೂಡುತ್ತಿದ್ದರು. ಕೈ ಮೇಲೆ ತುರಿಕೆಯ ಕಲೆಗಳು ಎದ್ದು ಕಾಣುತ್ತಿದ್ದವು.
ಸ್ವಲ್ಪ ದಿನ ಬಿಟ್ಟು ನೋಡಿದರೆ ಏನಾಶ್ಚರ್ಯ !! ಕಲೆಗಳೆಲ್ಲಾ ಮಾಯ !! ಔಷಧಶಾಸ್ತ್ರ ತಜ್ಞರೆಂದು ಹೇಳಿಕೊಳ್ಳುವ ನಮಗೇ ಗೊತ್ತಾಗದ ಹಾಗೇ ಹೊಸ ಔಷಧಿ ಬಂದು ಬಿಟ್ಟಿತೇ ಎಂದು ಆಶ್ಚರ್ಯ ಪಟ್ಟೆ!. ಕೇಳಿದರೂ ನಿಮಗೆ ಆ ಔಷಧದ ವಿಷಯ ಬೇಡ ಸಾರ್. ನೀವು ಅದನ್ನೆಲ್ಲಾ ನಂಬಲ್ಲ ಎಂದು ನುಣುಚಿಕೊಂಡು ಬಿಟ್ಟರು. ವಿಷಯ ಮರೆತು ಹೋಯಿತು.
ಸ್ವಲ್ಪ ದಿನದ ನಂತರ ಅವರಿಂದ ದೂರವಾಣಿ ಕರೆ!. ಸಾರ್. ಸ್ವಲ್ಪ ಮೈಗೆ ಹುಶಾರಿಲ್ಲ.. ನಾಲ್ಕು ದಿನ ರಜೆ ಬೇಕು.. ಸರಿ. ರಜೆ ಮುಗಿಸಿ ಬಂದ ನಂತರ ಅವರಲ್ಲಿ ಏನೋ ಬದಲಾವಣೆ ಗಮನಿಸಿದೆ. ಮುಖವೆಲ್ಲಾ ಸ್ವಲ್ಪ ದಪ್ಪವಾಗಿತ್ತು. ದೇಹದ ತೂಕವೂ ಜಾಸ್ತಿಯಾದ ಹಾಗೇ ಕಾಣಿಸಿತು. ಅಲ್ರೀ… ಯಾಕೋ ದಪ್ಪ ಆದ ಹಾಗೇ ಕಾಣ್ತೀರಲ್ಲ!! ಯಾಕೆ ? ಅಂದೆ. ಇಲ್ಲ ಸಾರ್. ಒಂದು ಹತ್ತು ದಿನದಿಂದ ಆಲಸ್ಯ. ಬೆಳಿಗ್ಗೆ ವಾಕ್ ನಿಲ್ಲಿಸಿ ಬಿಟ್ಟೆ. ಅದಕ್ಕೆ ತೂಕ ಜಾಸ್ತಿಯಾಗಿ ಬಿಟ್ಟಿದೆ ಅಂದರು.
ನನಗೆ ಸಂಶಯವಾಗಿ ಏನಾದ್ರೂ ಔಷಧ ತೆಗೆದುಕೊಳ್ತಾ ಇದ್ದೀರೇನ್ರಿ ?? ಅಂದೆ. ಹೌದು ಸಾರ್. ಈ ಸೋರಿಯಾಸಿಸ್” ಗೆ ಹಳ್ಳಿ ಔಷಧಿ ತಗೋಳ್ತಾ ಇದ್ದೀನಿ ಸಾರ್. ಅದ್ರಿಂದ್ಲೇ ನನಗೆ ಹುಶಾರಾಗಾದೆ. ಅದೇನೂ ತೊಂದ್ರೆ ಇಲ್ಲ ಸಾರ್. ಅಯುರ್ವೇದಿಕ್ ಔಷಧಿ. ಸೈಡ್ ಇಫೆಕ್ಟ್ ಇಲ್ವಂತೆ ಸಾರ್.. ಅಂದ್ರು.
“ಸರಿ. ಔಷಧಿ ತಗೊಂಡು ಬನ್ನಿ ನೋಡೋಣ” ಅಂದೆ. ಕಾಗದದ ಪೊಟ್ಟಣದಲ್ಲಿ ಕಟ್ಟಿದ ಕಂದು ಬಣ್ಣದ ಪುಡಿಯಂತಹ ವಸ್ತುವೊಂದನ್ನು ತಂದು ಕೊಟ್ಟರು. ಅದನ್ನು ನಮ್ಮ ಪ್ರಯೋಗಾಲಯದಲ್ಲಿ ತಪಾಸಣೆಗೆ ಒಳಪಡಿಸಿದೆ. ಅದರಲ್ಲಿ ಸ್ಟಿರೋಯ್ಡ್ ಇರುವುದು ಪತ್ತೆ ಆಯ್ತು.
ನಂತರ ಗೊತ್ತಾಗಿರುವುದು ಆ ಪಂಡಿತ ಆಯುರ್ವೇದದ ಹೆಸರಿನಲ್ಲಿ ಸ್ಟಿರೋಯ್ಡ್ಗಳನ್ನು ಪುಡಿಯಲ್ಲಿ ಬೆರೆಸಿ ಜನರಿಗೆ ನೀಡಿ ಮಂಕು ಬೂದಿ ಎರಚಿ ಹಣ ಕೀಳುತ್ತಿದ್ದ. ಈ ಸ್ಟಿರೋಯ್ಡ್ ಗಳು ಶರೀರದ ರೋಗ ನಿರೋಧಕ ಕಣಗಳನ್ನು ಹತ್ತಿಕ್ಕಿ ತಾತ್ಕಾಲಿಕ ಉಪಶಮನ ನೀಡಿದರೂ ಅವುಗಳ ಅಡ್ಡಪರಿಣಾಮದಿಂದ ಶರೀರದಲ್ಲಿ ನೀರು ತುಂಬಿಕೊಂಡು ದೇಹದ ತೂಕ ಹೆಚ್ಚಿಸಿ ಆಲಸ್ಯವನ್ನುಂಟು ಮಾಡಿದೆ ಅಂತ ಗೊತ್ತಾಯ್ತು. ಔಷಧ ನಿಲ್ಲಿಸಿದ ಮೇಲೆ ಅವರ ಆರೋಗ್ಯ ಸುಧಾರಿಸಿತು.
ಘಟನೆ 4
ಕುದುರೆಗಳು ಚೆನ್ನಾಗಿ ಓಡಲು ಮತ್ತು ಜಾನುವಾರುಗಳು ಚೆನ್ನಾಗಿ ಕೊಬ್ಬಲು ಸ್ಟಿರಾಯ್ಡುಗಳ ಬಳಕೆ ಅತಿಯಾಗಿ ಅವುಗಳಿಗೆ “ಡೋಪಿಂಗ್ ಪರೀಕ್ಷೆ” ಈಗ ಕಡ್ಡಾಯವಾಗಿದೆ. ದೇಹ ಹುರಿಗೊಳಿಸುವ ಸಲುವಾಗಿ ತನ್ನ ಜಿಮ್ ಗ್ರಾಹಕರಿಗೆ ಸ್ಟಿರಾಯ್ಡ್ ಸಹಿತ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಬೆಂಗಳೂರಿನಲ್ಲಿ ಜಿಮ್ ತರಬೇತುದಾರನನ್ನು ಬಂಧಿಸಲಾಗಿದೆ ಮತ್ತು ಬಾಕ್ಸಿಂಗ್ ಚಾಂಪಿಯನ್ ಮೈಕ್ ಟೈಸನ್ ಸ್ಟಿರಾಯ್ಡ್ಸ್ ಉಪಯೋಗಿಸುತ್ತಿದ್ದ ಮತ್ತು ಸಿಕ್ಕಿ ಬಿದ್ದು ಕಂಬಿ ಎಣಿಸಿದ ಇತ್ಯಾದಿ.. ಸುದ್ಧಿಗಳು ಮಾಧ್ಯಮಗಳಲ್ಲಿ ಹರಿದಾಡಿ ಜನರಲ್ಲಿ ಸ್ಟಿರಾಯ್ಡುಗಳ ಬಗ್ಗೆ ಭಯನ್ನು ಹುಟ್ಟಿಸಿದವು. ಇವುಗಳಿಗೆ “ಉದ್ಧೀಪನ ಔಷಧಿಗಳು” ಎಂದೂ ಕರೆಯುತ್ತಾರೆ.
ಈ ಘಟನೆಗಳು ಸ್ಟಿರಾಯ್ಡುಗಳ ಉಪಯುಕ್ತತೆ ಮತ್ತು ಅವುಗಳ ದುಷ್ಪರಿಣಾಮ ಇವುಗಳ ಕುರಿತು ನನ್ನ ಗಮನಕ್ಕೆ ಬಂದ ಚಿಕ್ಕ ಪುಟ್ಟ ಉದಾಹರಣೆಗಳು ಅಷ್ಟೆ.. ಇಂತಹ ಸಹಸ್ರಾರು ಜನರು ಈ ತರಹದ ಸುಳ್ಳು ಔಷಧಗಳಿಗೆ ಬಲಿಯಾಗಿರಬಹುದೇನೋ?
ಹಾಗಿದ್ದರೆ ಏನಿದು ಸ್ಟಿರೋಯ್ಡ್? ಯಾಕೆ ಇದನ್ನು ಬಳಸುತ್ತಾರೆ? ಏನಿದರ ಪರಿಣಾಮ ಮತ್ತು ಅಡ್ಡಪರಿಣಾಮ? ಅನ್ನುವ ಬಗ್ಗೆ ತಿಳಿಯೋಣವೇ?
ಮೆದುಳಿನಿಂದ ಸ್ರವಿಸಲ್ಪಡುವ ಎಸಿಟಿಹೆಚ್ ಹಾರ್ಮೋನಿನಿಂದ ಪ್ರಚೋದಿತವಾಗಿ ಅಡ್ರಿನಲ್ ಗ್ರಂಥಿಯ ಕಾರ್ಟೆಕ್ಸ್ ಭಾಗದಿಂದ “ಕಾರ್ಟಿಕೋಸ್ಟಿರೋಯ್ಡ್” ರಕ್ತದಲ್ಲಿ ಸ್ರವಿಸಲ್ಪಡುತ್ತದೆ. ಪ್ರಸಕ್ತ ಮಾರುಕಟ್ಟೆಯಲ್ಲಿ ಇರುವ ಅನೇಕ ಸ್ಟಿರಾಯ್ಡುಗಳಿಗೆ ಇದೇ ಮೂಲ ಸೌಧ. ಇದರ ಪರಿಣಾಮವನ್ನು ಎರಡು ಮುಖ್ಯ ಘಟ್ಟದಲ್ಲಿ ವಿಭಜಿಸಬಹುದು.
ಅದೆ ಗ್ಲುಕೋಕಾರ್ಟಿಕಾಯ್ಡ್ ಪರಿಣಾಮ ಮತ್ತು ಮಿನೆರಲೋ ಕಾರ್ತಿಕಾಯ್ಡ್ ಪರಿಣಾಮಗಳು. ಶರೀರ ಹೆಚ್ಚಿನ ಕೆಲಸ ಮಾಡಬೇಕಾದರೆ ಅವಶ್ಯವಿರುವ ಗ್ಲುಕೋಸ್ ಬೇಕಾದಾಗ ಗ್ಲುಕೋಕಾರ್ಟಿಕಾಯ್ಡ್ ಪರಿಣಾಮವೆಂದರೆ ರಕ್ತದಲ್ಲಿನ ಗ್ಲುಕೋಸ್ ಪ್ರಮಾಣವನ್ನು ಪಿತ್ತಜನಕಾಂಗ, ಮಾಂಸಖಂಡಗಳು ಮತ್ತು ಕೊಬ್ಬಿನ ಕಣಗಳ ವಿಭಜನೆಯಿಂದ ಹೆಚ್ಚಿಸುವುದು.ಈ ವರ್ಗಕ್ಕೆ ಕೆಲವು ಉದಾಹರಣೆಗಳೆಂದರೆ ಕಾರ್ಟಿಸೊಲ್, ಪ್ರೆಡ್ನಿಸೋನ್, ಪ್ರೆಡ್ನಿಸೋಲೊನ್, ಮೆಥೈಲ್ ಪ್ರೆಡ್ನಿಸೋಲೊನ್,ಡೆಕ್ಸಾಮಿಥಸೋನ್, ಬೆಟಾಮಿಥಸೋನ್ ಇತ್ಯಾದಿ.
ಇನ್ನು ಮಿನೆರಲೋಕಾರ್ಟಿಕಾಯ್ಡ್ ಪರಿಣಾಮವೆಂದರೆ ಶರೀರದಲ್ಲಿ ಹೆಚ್ಚಿನ ಪೊಟ್ಯಾಸಿಯಂ ಅಂಶವನ್ನು ಅಲ್ಡೋಸ್ಟಿರೋನ್ ಅಂಶದ ಮೂಲಕ ಉಳಿಸಿಕೊಳ್ಳುವುದು. ಇದಕ್ಕೆ ಉದಾಹರಣೆಗಳೆಂದರೆ ಅಲ್ಡೋಸ್ಟಿರೋನ್ ಪ್ಲುಡ್ರೋಕಾರ್ಟಿಸೋನ್ ಇತ್ಯಾದಿ.
ಇದಲ್ಲದೇ “ಅನಾಬೋಲಿಕ್ ಸ್ಟಿರಾಯ್ಡ್” ಎಂಬ ಮತ್ತೊಂದು ವರ್ಗವಿದ್ದು ಇದನ್ನು ವಯಸ್ಸಾದ ವ್ಯಕ್ತಿಗಳಲ್ಲಿ ಮಾಂಸಖಂಡಗಳು ದುರ್ಬಲವಾದಾಗ ಉಪಯೋಗಿಸುತ್ತಾರೆ. ಆದರೆ ಬಹಳ ಸಲ ಇದನ್ನು ಕ್ರೀಡಾಪಟುಗಳು ದುರ್ಬಳಕೆ ಮಾಡಿ, ಹಿಂಬಾಗಿಲಿನಿಂದ ಕ್ರೀಡೆಯನ್ನು ಗೆಲ್ಲುವ ಹುನ್ನಾರ ಮಾಡುತ್ತಾರೆ.
“ಅನಾಬೋಲಿಕ್ ಸ್ಟಿರಾಯ್ಡ್” ಇವು ಗಂಡು ಹಾರ್ಮೊನಾದ ಟೆಸ್ಟೋಸ್ಟಿರಾನ್ ಇದರ ಪ್ರತಿರೂಪವಾಗಿದ್ದು ಮಾಂಸಖಂಡಗಳಲ್ಲಿ ಪ್ರೋಟೀನುಗಳ ಬಳಕೆ ಜಾಸ್ತಿ ಮಾಡುತ್ತವೆ. ಇದರಿಂದ ಮಾಂಸಖಂಡಗಳು ಹಿಗ್ಗಿ, ಕುಸ್ತಿ ಮತ್ತು ಬಾಕ್ಸಿಂಗ್ ಪಟುಗಳು ಮತ್ತು ಅನೇಕ ಕ್ರೀಡಾಪಟುಗಳು ಇದರ ದುರ್ಬಳಕೆ ಮಾಡಿ “ಉದ್ಧೀಪನ ಔಷಧಿ” ಪತ್ತೆಯ ಸಮಯದಲ್ಲಿ ಸಿಕ್ಕಿಹಾಕಿಕೊಳ್ಳುತ್ತಾರೆ. ಇದಕ್ಕೆ ಉದಾಹರಣೆಯೆಂದರೆ ಆಂಡ್ರೋಸ್ಟೆನೆಡಿಯೋನ್, ಸ್ಟಾನಜೋಲೋಲ್, ನಾಂಡ್ರೋಲೋನ್ ಇತ್ಯಾದಿ.
ಮತ್ತೊಂದು ಮುಖ್ಯವಾದ ಅಂಶವೆಂದರೆ ಕಾರ್ಟಿಕೋಸ್ಟಿರಾಯ್ಡುಗಳು ಶರೀರದಲ್ಲಿ ಉರಿಯೂತವನ್ನುಂಟು ಮಾಡಬಲ್ಲ ಸೈಟೊಕೈನ್ ಮತ್ತಿತರ ಪದಾರ್ಥಗಳ ಉತ್ಪಾದನೆ ಮತ್ತು ಅವುಗಳ ಕಾರ್ಯವನ್ನು ಕುಂಠಿತಗೊಳಿಸಿ ಉರಿಯೂತವನ್ನು ಕಡಿಮೆ ಮಾಡುತ್ತವೆ. ಕಾರಣ ಇವುಗಳನ್ನು “ ಜೀವ ರಕ್ಷಕ” ಔಷಧಗಳ ಪಟ್ಟಿಯಲ್ಲಿ ಸೇರಿಸುತ್ತಾರೆ.
ಈ ಔಷಧಿ ಇರದಿದ್ದರೆ ಅಪಘಾತ, ಹಾವು ಕಡಿತ, ಜೇನು ಹುಳ ಕಡಿತದಂತ ಅನೇಕ ಜೀವ ತೆಗೆಯುವ ಸ್ಥಿತಿಗಳಿಗೆ “ಜೀವ ರಕ್ಷಕ” ಔಷಧಗಳೇ ಇಲ್ಲವಾಗಿದ್ದವು. ನಮ್ಮ ದೇಹಕ್ಕೆ ಅತಿಯಾದ ಉರಿಯೂತವನ್ನುಂಟು ಮಾಡಬಲ್ಲ ಈ ಸ್ಥಿತಿಗಳಿಗೆ ಗ್ಲುಕೊಕಾರ್ಟಿ ಕಾಯ್ಡುಗಳು ರಾಮಬಾಣವಾಗಿ ಪರಿಣಮಿಸಿವೆ.
ಸ್ಟಿರಾಯ್ಡುಗಳು ಜನ ಹೆದರುವ ಹಾಗೇ “ಭಯಾನಕ” ಔಷಧಿಗಳೇನೂ ಅಲ್ಲ. ಸಾಕಷ್ಟು ಎಚ್ಚರ ವಹಿಸಿಯೇ ಅವುಗಳನ್ನು ಕಂಡು ಹಿಡಿಯಲಾಗಿದೆ. ಸ್ಟಿರಾಯ್ಡುಗಳು ಅಥವಾ ಅನಾಬೊಲಿಕ್ ಸ್ಟಿರಾಯ್ಡುಗಳ ದುರ್ಬಳಕೆಯಿಂದ ಕೆಟ್ಟ ಹೆಸರು ಪಡೆದಿವೆಯೇ ಹೊರತು ಇವುಗಳು ವೈದ್ಯರ ಸಲಹೆಯಂತೆ ಉಪಯೋಗಿಸಿದಲ್ಲಿ ಉತ್ತಮ ಪರಿಣಾಮ ಬೀರಬಲ್ಲ ಔಷಧಗಳು.
ಯಾವುದೇ ಔಷಧವನ್ನು ವೈದ್ಯರ ಸಲಹೆಯಂತೆ ನಿಯಮಿತ ಅವಧಿಗೆ ಬಳಸಿದರೆ ಏನೂ ತೊಂದರೆ ಇಲ್ಲ. ವೈದ್ಯರಿಗೆ ಪ್ರತಿ ಔಷಧಿಯ ಪರಿಣಾಮ ಮತ್ತು ಅಡ್ಡಪರಿಣಾಮ ತಿಳಿದಿರುತ್ತದೆ. ಅವಶ್ಯವಾಗಿದ್ದಾಗ ಮಾತ್ರ ಅವರು ಬಳಸುತ್ತಾರೆ. ಸುಮ್ಮನೆ ಪೂರ್ವಾಗೃಹ ಪೀಡೆಯಿಂದ ಒಂದು ಔಷಧಿಯನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸುವುದು ತರವಲ್ಲ. ಅಲ್ಲದೇ ಕೆಲವರು ಸ್ವಯಂ ವೈದ್ಯದಿಂದಲೂ ಹಾಗೂ ಕೆಲ ಹಣಬಾಕ ಕೊಟ್ಟಿ ವೈದ್ಯರುಗಳು ಸಹ ಈ ಔಷಧಿಗಳನ್ನು ದುರುಪಯೋಗ ಮಾಡುವುದನ್ನು ತಡೆಯುವುದು ಒಳ್ಳೆಯದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..
1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ ಎಣ್ಣೆಯಂಶವಿರುವ ಆಹಾರವನ್ನು ಕಡಿಮೆ ಮಾಡಿ.
2. ಸಿಹಿ ಪದಾರ್ಥಗಳ ನಿಯಂತ್ರಣ (Avoid Sweets): ಸಕ್ಕರೆ, ಬೆಲ್ಲ, ಬೇಕರಿ ತಿಂಡಿಗಳು, ಐಸ್ಕ್ರೀಮ್ ಮತ್ತು ಕೃತಕ ಸಕ್ಕರೆ ಇರುವ ತಂಪು ಪಾನೀಯಗಳ ಬಳಕೆಯನ್ನು ಸಂಪೂರ್ಣವಾಗಿ ಕಡಿಮೆ ಮಾಡಿ ಅಥವಾ ದೂರವಿಡಿ.
3. ದಿನನಿತ್ಯದ ವ್ಯಾಯಾಮ (Regular Exercise): ಪ್ರತಿದಿನ ಕನಿಷ್ಠ 30 ರಿಂದ 45 ನಿಮಿಷಗಳ ಕಾಲ ವೇಗದ ನಡಿಗೆ (brisk walking), ಸೈಕ್ಲಿಂಗ್, ಈಜು ಅಥವಾ ಯೋಗ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ.
4. ದೇಹದ ತೂಕದ ನಿರ್ವಹಣೆ (Weight Management): ಅತಿಯಾದ ದೇಹದ ತೂಕವು ಇನ್ಸುಲಿನ್ ಕಾರ್ಯಕ್ಷಮತೆಯನ್ನು ಕುಂಠಿತಗೊಳಿಸುತ್ತದೆ. ಆದ್ದರಿಂದ ತೂಕವನ್ನು ಆರೋಗ್ಯಕರ ಮಿತಿಯಲ್ಲಿ ಇಟ್ಟುಕೊಳ್ಳುವುದು ಅತ್ಯಗತ್ಯ.
5. ನಿಯಮಿತ ರಕ್ತದ ಪರೀಕ್ಷೆ (Regular Blood Sugar Check): ವೈದ್ಯರ ಸಲಹೆಯಂತೆ ಕಾಲಕಾಲಕ್ಕೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು (Fasting ಮತ್ತು Post Prandial) ಹಾಗೂ ಮೂರು ತಿಂಗಳ ಸರಾಸರಿ ತಿಳಿಸುವ HbA1c ಪರೀಕ್ಷೆಯನ್ನು ಮಾಡಿಸಿಕೊಳ್ಳಿ.
6. ಸಮಯಕ್ಕೆ ಸರಿಯಾಗಿ ಔಷಧಿ ಸೇವನೆ (Timely Medication): ವೈದ್ಯರು ಸೂಚಿಸಿದ ಮಾತ್ರೆಗಳನ್ನು ಅಥವಾ ಇನ್ಸುಲಿನ್ ಅನ್ನು ನಿಗದಿತ ಸಮಯಕ್ಕೆ ತೆಗೆದುಕೊಳ್ಳಿ. ಸ್ವಂತ ನಿರ್ಧಾರದಿಂದ ಔಷಧಿಯನ್ನು ನಿಲ್ಲಿಸಬೇಡಿ.
7. ಮಾನಸಿಕ ಒತ್ತಡದ ನಿರ್ವಹಣೆ (Stress Management): ಅತಿಯಾದ ಮಾನಸಿಕ ಒತ್ತಡವು ದೇಹದಲ್ಲಿ ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಹಾರ್ಮೋನ್ಗಳನ್ನು ಬಿಡುಗಡೆ ಮಾಡುತ್ತದೆ. ಒತ್ತಡ ಕಡಿಮೆ ಮಾಡಿಕೊಳ್ಳಲು ಧ್ಯಾನ (Meditation) ಅಥವಾ ಹವ್ಯಾಸಗಳಲ್ಲಿ ತೊಡಗಿಕೊಳ್ಳಿ.
8. ಪೂರಕ ನೀರು ಕುಡಿಯುವುದು (Stay Hydrated): ದಿನವಿಡೀ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ. ಇದು ದೇಹದಲ್ಲಿರುವ ಹೆಚ್ಚುವರಿ ಗ್ಲೂಕೋಸ್ ಮೂತ್ರದ ಮೂಲಕ ಹೊರಹೋಗಲು ಸಹಾಯ ಮಾಡುತ್ತದೆ.
9. ಉತ್ತಮ ನಿದ್ರೆ (Good Sleep): ಪ್ರತಿದಿನ ರಾತ್ರಿ 7 ರಿಂದ 8 ಗಂಟೆಗಳ ಕಾಲ ಶಾಂತಿಯುತವಾದ ನಿದ್ರೆ ಮಾಡುವುದು ದೇಹದ ಚಯಾಪಚಯ ಕ್ರಿಯೆ (Metabolism) ಮತ್ತು ಹಾರ್ಮೋನ್ಗಳ ಸಮತೋಲನಕ್ಕೆ ಬಹಳ ಮುಖ್ಯ.
10. ದುರಭ್ಯಾಸಗಳಿಂದ ದೂರವಿರಿ (Avoid Smoking and Alcohol): ಧೂಮಪಾನ ಮತ್ತು ಮದ್ಯಪಾನವು ಸಕ್ಕರೆ ಕಾಯಿಲೆಯ ತೊಂದರೆಗಳನ್ನು (ಹೃದಯ ಮತ್ತು ನರಗಳ ಸಮಸ್ಯೆ) ಮತ್ತಷ್ಟು ಹೆಚ್ಚು ಮಾಡುವುದರಿಂದ ಇವುಗಳಿಂದ ದೂರವಿರುವುದು ಒಳ್ಳೆಯದು.
ಗಮನಿಸಿ: ಈ ಮೇಲಿನ ಮಾಹಿತಿ ರೋಗದ ನಿರ್ವಹಣೆಗೆ ಸಾಮಾನ್ಯ ಮಾರ್ಗದರ್ಶನವಾಗಿದೆ. ಪ್ರತಿಯೊಬ್ಬರ ದೇಹ ಪ್ರಕೃತಿ ವಿಭಿನ್ನವಾಗಿರುವುದರಿಂದ, ನಿಮ್ಮ ವೈದ್ಯರ ವೈಯಕ್ತಿಕ ಸಲಹೆ ಮತ್ತು ಚಿಕಿತ್ಸೆಯ ಕ್ರಮವೇ ಅಂತಿಮ ಹಾಗೂ ಸುರಕ್ಷಿತ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗರಿಕೆ ಹುಲ್ಲಿನ ಜ್ಯೂಸ್ನಲ್ಲಿದೆ ರಕ್ತದ ಕ್ಯಾನ್ಸರ್ ಗುಣಪಡಿಸುವ ಶಕ್ತಿ
ಗಿರೀಶ್ ಮುತ್ತು
ಗರಿಕೆ ಹುಲ್ಲಿನ ರಸದ ಸೇವನೆಯಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಸಿನೊಡಾನ್ ಡ್ಯಾಕ್ಟಿಲಾನ್ ಪ್ರೊಟೀನ್ ಎಂಬ ಅಂಶವಿದ್ದು, ಇದು ರೋಗನಿರೋಧಕ ಶಕ್ತಿ ಹೆಚ್ಚಲು ಸಹಾಯ ಮಾಡುತ್ತದೆ. ಇದು ಜ್ವರದಂತಹ ಸಮಸ್ಯೆಗಳ ನಿವಾರಣೆಗೆ ಸಹಾಯ ಮಾಡುತ್ತದೆ. ಹಾಗಾಗೊ ವಾರಕೊಮ್ಮೆ ಅಥವಾ ಹದಿನೈದು ದಿನಕ್ಕೊಮ್ಮೆ ಗರಿಕೆ ಹುಲ್ಲಿನ ರಸ ಅಥವಾ ಕಷಾಯದ ಸೇವನೆ ಮಾಡಬೇಕು
ನಾವು ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಹಲವಾರು ರೀತಿಯ ವ್ಯಾಯಾಮ ಮತ್ತು ಡಯಟ್ ಮಾಡುತ್ತೇವೆ. ಈ ಮಳೆಗಾಲದಲ್ಲಿ ಅನೇಕ ಜನರು ಆರೋಗ್ಯ ಸಮಸ್ಯೆಗಳಿಂದ ದೂರವಿರಲು ಹಲವು ಬಗೆಯ ಜ್ಯೂಸ್ ಕುಡಿಯುತ್ತಾರೆ. ಹಣ್ಣು, ತರಕಾರಿ ರಸ ಕುಡಿದು ಆರೋಗ್ಯವಾಗಿರಲು ಪ್ರಯತ್ನಿಸುತ್ತಾರೆ. ಆದರೆ ಈ ಒಂದು ಜ್ಯೂಸ್ ಅನ್ನು ನೀವು ಕುಡಿದರೆ ನಿಮ್ಮತ್ತ ಕಾಯಿಲೆಗಳು ಸುಳಿಯುವುದೇ ಇಲ್ಲ. ಅದುವೇ ಗರಿಕೆ ಹುಲ್ಲುನ ಜ್ಯೂಸ್.
ಹೌದು… ಆಯುರ್ವೇದ ವೈದ್ಯರು ಈ ಮೂಲಿಕೆಯು ಆರೋಗ್ಯಕ್ಕೆ ಹಲವು ವಿಧಗಳಲ್ಲಿ ಪ್ರಯೋಜನಕಾರಿಯಾಗಿದೆ ಎನ್ನುತ್ತಾರೆ. ಇದನ್ನು ಸೇವಿಸುವುದರಿಂದ ದೇಹದಲ್ಲಿನ ಕ್ಯಾನ್ಸರ್ ಪ್ರಮಾಣವನ್ನು ಕಡಿಮೆ ಮಾಡಬಹುದು. ಅಲ್ಲದೆ ಈ ಹುಲ್ಲಿನ ರಸವನ್ನು ಕುಡಿಯುವುದರಿಂದ ರಕ್ತದಲ್ಲಿರುವ ಕ್ಯಾನ್ಸರ್ ಕೋಶಗಳು ಕಡಿಮೆಯಾಗುವುದು ಮಾತ್ರವಲ್ಲದೆ ರಕ್ತ ಶುದ್ಧವಾಗಿರುತ್ತದೆ.
ಈ ಗರಿಕೆ ಹುಲ್ಲಿನಲ್ಲಿ ವಿಟಮಿನ್ ಎ, ಕೆ, ಸಿ ಮತ್ತು ವಿಟಮಿನ್ ಇ ಗಳು ಸಮೃದ್ಧವಾಗಿದೆ. ಇದು ರಕ್ತವನ್ನು ಶುದ್ಧೀಕರಿಸುತ್ತದೆ ಮತ್ತು ರಕ್ತದೊತ್ತಡ, ರಕ್ತಹೀನತೆ ಮತ್ತು ರಕ್ತ ಸಂಬಂಧಿತ ಕಾಯಿಲೆಗಳನ್ನು ಗುಣಪಡಿಸುತ್ತದೆ. ಹಾಗಾದರೆ ಗರಿಕೆ ಹುಲ್ಲಿನ ಜ್ಯೂಸ್ನ ಇತರ ಆರೋಗ್ಯಕರ ಪ್ರಯೋಜನಗಳ ಬಗ್ಗೆ ತಿಳಿಯೋಣ.
ಗರಿಕೆ ರಸದ ಪ್ರಯೋಜನಗಳು
1. ಈ ಗರಿಕೆ ಹುಲ್ಲಿನ ಜ್ಯೂಸ್ ಎಲ್ಲಿಯೂ ಸಿಗುವುದಿಲ್ಲ. ಕೆಲವೆಡೆ ಮಾತ್ರ ಸಿಗುತ್ತದೆ. ಬೇರು ಮತ್ತು ಎಲೆಗಳು ಸೇರಿದಂತೆ ಗರಿಕೆ ಎಲ್ಲಾ ಭಾಗಗಳು ಔಷಧೀಯ ಗುಣಗಳನ್ನು ಹೊಂದಿದೆ. ಇದು ಕೆಲವು ಹಾನಿಕಾರಕ ವ್ಯಾಕ್ಸಿನಿಯಾ ವೈರಸ್ ಎಂಬ ಸೂಕ್ಷ್ಮಜೀವಿಯನ್ನು ನಾಶಪಡಿಸುವ ಗುಣವನ್ನು ಹೊಂದಿದೆ. ಹೀಗಾಗಿ ಈ ಜ್ಯೂಸ್ ಕುಡಿಯುವವರೂ ಇದು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎನ್ನುತ್ತಾರೆ.
2. ಮೂತ್ರಕೋಶದ ಕಲ್ಲುಗಳು, ದೇಹದ ಊತ, ಮಕ್ಕಳಲ್ಲಿ ದೀರ್ಘಕಾಲದ ನೆಗಡಿ, ಮೂಗು ಸೋರುವಿಕೆ, ನೆಗಡಿ, ಅತಿಸಾರ, ಕಣ್ಣಿನ ದೋಷಗಳು, ಮೆದುಳಿನ ರಕ್ತಸ್ರಾವದಂತಹ ಕಾಯಿಲೆಗಳಿಗೆ ಈ ರಸ ತುಂಬಾ ಒಳ್ಳೆಯದು.
3. ಅಲ್ಲದೆ ತೂಕ ನಷ್ಟ, ಕೊಲೆಸ್ಟ್ರಾಲ್ ಕಡಿತ, ನರರೋಗ, ರಕ್ತದ ಕ್ಯಾನ್ಸರ್ ಚಿಕಿತ್ಸೆ, ಕೆಮ್ಮು, ಹೊಟ್ಟೆ ನೋವು, ರಕ್ತಹೀನತೆ, ಸಂಧಿವಾತ, ಹೃದಯ ಅಸ್ವಸ್ಥತೆ, ಚರ್ಮ ರೋಗಗಳು ಇತ್ಯಾದಿಗಳಿಗೆ ಅತ್ಯುತ್ತಮ ಔಷಧವಾಗಿ ಕಾರ್ಯನಿರ್ವಹಿಸುತ್ತದೆ
4. ರಕ್ತದಲ್ಲಿನ ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸಲು ಮತ್ತು ರಕ್ತದಿಂದ ವಿಷವನ್ನು ತೆಗೆದುಹಾಕುವಲ್ಲಿ ಗರಿಕೆ ರಸವು ಪರಿಣಾಮಕಾರಿಯಾಗಿದೆ.
5. ಗರಿಕೆ ಹುಲ್ಲಿನ ರಸ ಮತ್ತು ಕೊಬ್ಬರಿ ಎಣ್ಣೆಯನ್ನು ಸಮಪ್ರಮಾಣದಲ್ಲಿ ಬೆರೆಸಿ ಕುದಿಸಬೇಕು.. ನಂತರ ಚರ್ಮರೋಗಗಳಾದ ರಿಂಗ್ವರ್ಮ್ ಮತ್ತು ಒಣ ಚರ್ಮವನ್ನು ತ್ವರಿತವಾಗಿ ಗುಣ ಪಡಿಸುತ್ತದೆ.
6. ಗರಿಕೆ ಹುಲ್ಲು ಬೇಕಾದಷ್ಟು ಸಂಗ್ರಹಿಸಿ, ಸ್ವಲ್ಪ ಅರಿಶಿನವನ್ನು ಸೇರಿಸಿ ಪೇಸ್ಟ್ ಮಾಡಿ ದೇಹಕ್ಕೆ ಉಜ್ಜಿಕೊಂಡರೆ, ಒಂದು ಗಂಟೆ ಬಿಟ್ಟು ನಂತರ ಸ್ನಾನ ಮಾಡಿ. ಇದರಿಂದ ದೇಹದ ತುರಿಕೆ ನಿವಾರಣೆಯಾಗುತ್ತದೆ.
ಗರಿಕೆ ಹುಲ್ಲಿನ ರಸ ತಯಾರಿಸುವುದು ಹೇಗೆ?
*ತಾಜಾ ಗರಿಕೆ ಹುಲ್ಲು ಒಂದು ಹಿಡಿಯಷ್ಟು ತೆಗೆದುಕೊಂಡು ಸ್ವಚ್ಚವಾಗಿ ತೊಳೆದುಕೊಳ್ಳಿ.
* ಬಳಿಕ ಇದನ್ನು ಸಣ್ಣ ಸಣ್ಣ ತುಂಡುಗಳನ್ನಾಗಿ ಕತ್ತರಿಸಿಕೊಳ್ಳಿ.
* ಬಳಿಕ ಇದನ್ನು ಮಿಕ್ಸಿಗೆ ಹಾಕಿ ರುಬ್ಬಿಕೊಳ್ಳಬೇಕು.
* ಚೆನ್ನಾಗಿ ಪೇಸ್ಟ್ ಆದ ಬಳಿಕ ಇದನ್ನು ಸೋಸಿಕೊಳ್ಳಬೇಕು.
* ಬಳಿಕ ಇದನ್ನು ಕುಡಿಯಬೇಕು. ಆದರೆ ಇದು ತಕ್ಷಣದ ಮನೆಮದ್ದಾಗಿದೆ. ಆದರೆ ಯಾವುದೇ ಆರೋಗ್ಯ ಸಮಸ್ಯೆಗಳಿಗೆ ಇದು ಕೊನೆಯ ಮದ್ದು ಅಲ್ಲ. ಹೀಗಾಗಿ ಯಾವುದೇ ಆರೋಗ್ಯ ಸಮಸ್ಯೆಗಳು ಉಂಟಾದಾಗ ಮೊದಲು ವೈದ್ಯರನ್ನು ಸಂಪರ್ಕಿಸುವುದು ತುಂಬಾ ಅವಶ್ಯಕ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕುಂಬಳಕಾಯಿ ಬೀಜದಲ್ಲಿ ‘ ಜೀವ ಸಂಜೀವಿನಿ’ : ಮಿಸ್ ಮಾಡ್ದೆ ಓದಿ ; ಆರೋಗ್ಯದ ಗುಟ್ಟು ತಿಳಿಯಿರಿ
ಕುಂಬಳಕಾಯಿ ಬೀಜಗಳು ಖಾದ್ಯ ಬೀಜಗಳಾಗಿವೆ, ಅವುಗಳು ಹೆಚ್ಚಿನ ಪೌಷ್ಟಿಕಾಂಶದ ಮೌಲ್ಯಕ್ಕಾಗಿ ಶತಮಾನಗಳಿಂದ ತಿಳಿದುಬಂದಿದೆ. ಕುಂಬಳಕಾಯಿ ಸಸ್ಯದ ಈ ಚಪ್ಪಟೆ ಮತ್ತು ಬಿಳಿ ಬೀಜಗಳನ್ನು ಸರಿಯಾಗಿ “ಶಕ್ತಿ ಕೇಂದ್ರ” ಎಂದು ಕರೆಯಲಾಗುತ್ತದೆ ಪೋಷಣೆ”. ಕುಂಬಳಕಾಯಿ ಬೀಜದಿಂದ ಹೊರಗಿನ ಬಿಳಿ ಹೊದಿಕೆಯನ್ನು ತೆಗೆದಾಗ, ತಿಳಿ ಹಸಿರು ಬೀಜಗಳನ್ನು ಪಡೆಯಲಾಗುತ್ತದೆ, ಅವು ಕಣ್ಣಿನ ಆಕಾರದಲ್ಲಿರುತ್ತವೆ, ಆದರೆ ಚಪ್ಪಟೆ ಆಕಾರದಲ್ಲಿರುತ್ತವೆ. ಸಾಂಪ್ರದಾಯಿಕವಾಗಿ, ಕುಂಬಳಕಾಯಿ ಬೀಜಗಳನ್ನು ಮೂತ್ರಪಿಂಡದಂತಹ ವಿವಿಧ ಆರೋಗ್ಯ ಪರಿಸ್ಥಿತಿಗಳಿಗೆ ಚಿಕಿತ್ಸೆ ನೀಡಲು ಬಳಸಲಾಗುತ್ತದೆ. ಮೂತ್ರನಾಳದ ತೊಂದರೆಗಳು, ಅಧಿಕ ರಕ್ತದೊತ್ತಡ ಮತ್ತು ಸಕ್ಕರೆ, ಮತ್ತು ಪರಾವಲಂಬಿಗಳು.
ಕುಂಬಳಕಾಯಿ ಬೀಜಗಳನ್ನು ಅವುಗಳ ಕಚ್ಚಾ, ಮೊಳಕೆಯೊಡೆದ ರೂಪದಲ್ಲಿ ಯಾವುದೇ ಕಿರಾಣಿ ಅಂಗಡಿಯಲ್ಲಿ ಕಾಣಬಹುದು, ಇದು ಕುಂಬಳಕಾಯಿ ಬೀಜಗಳನ್ನು ಸೇವಿಸಲು ಉತ್ತಮ ಮಾರ್ಗವಾಗಿದೆ. ಕುಂಬಳಕಾಯಿ ಬೀಜಗಳ ಪೌಷ್ಟಿಕಾಂಶದ ಮೌಲ್ಯವು ಅಧಿಕವಾಗಿದೆ ಮತ್ತು ಇದು ಜೀವಸತ್ವಗಳು, ಖನಿಜಗಳು ಮತ್ತು ಪ್ರೋಟೀನ್ಗಳು ಮತ್ತು ಅಪರ್ಯಾಪ್ತ ಕೊಬ್ಬಿನಾಮ್ಲಗಳ ಸಮೃದ್ಧ ಮೂಲವಾಗಿದೆ. ಕುಂಬಳಕಾಯಿ ಬೀಜಗಳ ಪ್ರಯೋಜನಗಳು ವಿವಿಧ ಆರೋಗ್ಯ ಪರಿಸ್ಥಿತಿಗಳ ಅಪಾಯವನ್ನು ಕಡಿಮೆ ಮಾಡುತ್ತದೆ, ಉದಾಹರಣೆಗೆ ಕ್ಯಾನ್ಸರ್.
ಕುಂಬಳಕಾಯಿ ಬೀಜಗಳ ಪೌಷ್ಟಿಕಾಂಶದ ಮೌಲ್ಯ
ಕುಂಬಳಕಾಯಿ ಬೀಜಗಳು ಪೊಟ್ಯಾಸಿಯಮ್, ಸತು ಮತ್ತು ಮ್ಯಾಂಗನೀಸ್ ಮತ್ತು ವಿಟಮಿನ್ ಕೆ ನಂತಹ ಖನಿಜಗಳು ಸೇರಿದಂತೆ ಹಲವಾರು ಪೋಷಕಾಂಶಗಳ ಪ್ರಬಲ ಮೂಲವಾಗಿದೆ. ನಿರೋಧಕ ವ್ಯವಸ್ಥೆಯ ಪ್ರತಿಜನಕಗಳ ವಿರುದ್ಧ ಹೋರಾಡಲು. ಕುಂಬಳಕಾಯಿ ಬೀಜಗಳು ರಂಜಕ, ಮೆಗ್ನೀಸಿಯಮ್, ಪೊಟ್ಯಾಸಿಯಮ್, ಕಬ್ಬಿಣ ಮತ್ತು ತಾಮ್ರದಂತಹ ಇತರ ಅಗತ್ಯ ಖನಿಜಗಳ ಅತ್ಯುತ್ತಮ ಮೂಲವಾಗಿದೆ.
ಪ್ರತಿ ಸೇವೆಗೆ ಇರುವ ಕುಂಬಳಕಾಯಿ ಬೀಜಗಳ ಬಗ್ಗೆ ಪೌಷ್ಟಿಕಾಂಶದ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.
ಕ್ಯಾಲೋರಿಗಳು: ಕುಂಬಳಕಾಯಿ ಬೀಜಗಳು ಒಣಗಿದ ಕುಂಬಳಕಾಯಿ ಬೀಜಗಳ ನಾಲ್ಕನೇ ಕಪ್ನಲ್ಲಿ 180 kCal ಅನ್ನು ಹೊಂದಿರುತ್ತವೆ.
ಪ್ರೋಟೀನ್ಗಳು: ಕುಂಬಳಕಾಯಿ ಬೀಜಗಳು ಪ್ರತಿ ಸೇವೆಗೆ ಸುಮಾರು 10 ಗ್ರಾಂ ಪ್ರೋಟೀನ್ ಅನ್ನು ಹೊಂದಿರುತ್ತವೆ.
ಫ್ಯಾಟ್: ಕುಂಬಳಕಾಯಿ ಬೀಜಗಳು ಪ್ರತಿ ಸೇವೆಗೆ ಸುಮಾರು 16 ಗ್ರಾಂ ಕೊಬ್ಬನ್ನು ಒದಗಿಸುತ್ತದೆ.
ಕಾರ್ಬೋಹೈಡ್ರೇಟ್ಗಳು: ಕುಂಬಳಕಾಯಿ ಬೀಜಗಳು ಪ್ರತಿ ಸೇವೆಗೆ ಸುಮಾರು 3 ಗ್ರಾಂ ಕಾರ್ಬೋಹೈಡ್ರೇಟ್ಗಳನ್ನು ಹೊಂದಿರುತ್ತವೆ.
ಫೈಬರ್: ಕುಂಬಳಕಾಯಿ ಬೀಜಗಳಲ್ಲಿ ಸುಮಾರು 2 ಗ್ರಾಂ ಫೈಬರ್ ಇರುತ್ತದೆ.
ಕುಂಬಳಕಾಯಿ ಬೀಜಗಳು ಯಾವುದೇ ಸಕ್ಕರೆ ಅಥವಾ ಅನಾರೋಗ್ಯಕರ ಕೊಬ್ಬನ್ನು ಹೊಂದಿರುವುದಿಲ್ಲ, ಇದು ತೂಕ ನಷ್ಟದ ಆಡಳಿತದಲ್ಲಿರುವವರಿಗೆ ಬೆಳಗಿನ ಉಪಾಹಾರ ಧಾನ್ಯಗಳು ಮತ್ತು ಸಲಾಡ್ಗಳಿಗೆ ಉತ್ತಮ ಸೇರ್ಪಡೆಯಾಗಿದೆ. ಆದಾಗ್ಯೂ, ಕುಂಬಳಕಾಯಿ ಬೀಜಗಳು ಹೆಚ್ಚಿನ ಕ್ಯಾಲೋರಿಗಳನ್ನು ಹೊಂದಿರುವ ಕಾರಣ ಮಿತವಾಗಿ ಸೇವಿಸಬೇಕು. ಹೆಚ್ಚುವರಿಯಾಗಿ, ಅವುಗಳು ಹೆಚ್ಚಿನ ಫೈಬರ್ ಅಂಶವನ್ನು ಹೊಂದಿದ್ದು, ಅವುಗಳನ್ನು ಸೇವಿಸಿದ ನಂತರ ಜನರು ಹೊಟ್ಟೆ ತುಂಬಿದ ಭಾವನೆಯನ್ನು ಉಂಟುಮಾಡುತ್ತದೆ ಮತ್ತು ಅತಿಯಾಗಿ ತಿನ್ನುವ ಬಯಕೆಯನ್ನು ನಿಗ್ರಹಿಸುವ ಮೂಲಕ ಅತಿಯಾಗಿ ತಿನ್ನುವುದನ್ನು ತಡೆಯುತ್ತದೆ.
12 ಕುಂಬಳಕಾಯಿ ಬೀಜಗಳ ಆರೋಗ್ಯ ಪ್ರಯೋಜನಗಳು
ಕುಂಬಳಕಾಯಿ ಬೀಜಗಳನ್ನು ನೇರವಾಗಿ ಆಹಾರಕ್ಕೆ ಹೆಚ್ಚುವರಿಯಾಗಿ ಬಳಸಬಹುದು ಅಥವಾ ಸೇವಿಸುವ ಮೊದಲು ಹುರಿಯಬಹುದು. ಅವುಗಳನ್ನು ಸ್ವಂತವಾಗಿ ಲಘುವಾಗಿ ತಿನ್ನಬಹುದು ಅಥವಾ ಅನೇಕ ಪಾಕವಿಧಾನಗಳು ಮತ್ತು ಊಟಗಳಿಗೆ ಸೇರಿಸಬಹುದು. ಅನೇಕ ಕುಂಬಳಕಾಯಿ ಬೀಜಗಳಲ್ಲಿ ಹುರಿದ ಪ್ರಯೋಜನಗಳಿವೆ, ಇದನ್ನು ಸ್ಮೂಥಿಗಳಲ್ಲಿ ಬಳಸುವುದರ ಮೂಲಕ, ಊಟದ ಮೇಲೆ ಅಲಂಕರಿಸುವ ಮೂಲಕ ಅಥವಾ ಲಘುವಾಗಿ ಟೋಸ್ಟ್ ಮಾಡುವ ಮೂಲಕ ಆನಂದಿಸಬಹುದು. ಆದಾಗ್ಯೂ, ಕುಂಬಳಕಾಯಿ ಬೀಜಗಳನ್ನು ಹೆಚ್ಚು ತಿನ್ನಬಾರದು, ವಿಶೇಷವಾಗಿ ಆರೋಗ್ಯಕರ ತೂಕವನ್ನು ನಿರ್ವಹಿಸಲು ಅವುಗಳನ್ನು ಸೇವಿಸುವಾಗ.
ಕುಂಬಳಕಾಯಿ ಬೀಜಗಳನ್ನು ಪ್ರತಿದಿನ ಸೇವಿಸುವುದರಿಂದ ಅನೇಕ ಸಂಭಾವ್ಯ ಪ್ರಯೋಜನಗಳಿವೆ. ಬಿಳಿ ಕುಂಬಳಕಾಯಿ ಬೀಜಗಳ ಟಾಪ್ 12 ಪ್ರಯೋಜನಗಳು ಇಲ್ಲಿವೆ.
ಮಧುಮೇಹದ ಅಪಾಯವನ್ನು ಕಡಿಮೆ ಮಾಡುವುದು
ಕುಂಬಳಕಾಯಿ ಬೀಜಗಳಲ್ಲಿ ಮೆಗ್ನೀಸಿಯಮ್ ಅಧಿಕವಾಗಿದೆ, ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುವ ಆಹಾರದ ಅತ್ಯಗತ್ಯ ಅಂಶವಾಗಿದೆ. ಕುಂಬಳಕಾಯಿ ಬೀಜಗಳು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುವ ಮೂಲಕ ಮತ್ತು ಮಧುಮೇಹದ ಅಪಾಯವನ್ನು ಕಡಿಮೆ ಮಾಡುವ ಮೂಲಕ ಮಧುಮೇಹ ರೋಗಿಗಳಿಗೆ ಒಳ್ಳೆಯದು. ಮಧುಮೇಹ ಮೆಲ್ಲಿಟಸ್ ಅನ್ನು ನಿರ್ವಹಿಸುವ ಮೂಲಕ ಕುಂಬಳಕಾಯಿ ಬೀಜಗಳು ಮಧುಮೇಹ ರೋಗಿಗಳಿಗೆ ಪ್ರಯೋಜನವನ್ನು ನೀಡುತ್ತದೆ, ಇದರಿಂದಾಗಿ ಸ್ಥಿತಿಯನ್ನು ಸರಿಯಾಗಿ ನಿಯಂತ್ರಿಸುತ್ತದೆ.
ಉರಿಯೂತದ ಗುಣಲಕ್ಷಣಗಳು
ಕುಂಬಳಕಾಯಿ ಬೀಜಗಳು ಹಲವಾರು ಉತ್ಕರ್ಷಣ ನಿರೋಧಕಗಳನ್ನು ಹೊಂದಿರುತ್ತವೆ, ಇದು ನಮ್ಮ ಕೋಶಗಳನ್ನು ಹಾನಿಯಿಂದ ರಕ್ಷಿಸಲು ಮತ್ತು ರೋಗಗಳಿಗೆ ಕಾರಣವಾಗುವ ಉರಿಯೂತದಿಂದ ರಕ್ಷಿಸುತ್ತದೆ. ನಾರಿನ ಸಮೃದ್ಧ ಮೂಲವಾಗಿರುವುದರಿಂದ, ಕುಂಬಳಕಾಯಿ ಬೀಜಗಳು ತಮ್ಮ ಉರಿಯೂತದ ಗುಣಲಕ್ಷಣಗಳನ್ನು ವರ್ಧಿಸುತ್ತವೆ. ಈ ಗುಣವು ಯಕೃತ್ತು, ಮೂತ್ರಕೋಶ, ಕರುಳು ಮತ್ತು ಕೀಲುಗಳ ರೋಗಗಳನ್ನು ತಡೆಗಟ್ಟುವಲ್ಲಿ ಪ್ರಯೋಜನಕಾರಿಯಾಗಿದೆ.
ಹೃದಯದ ಕಾರ್ಯವನ್ನು ಬೆಂಬಲಿಸುತ್ತದೆ
ಕುಂಬಳಕಾಯಿ ಬೀಜಗಳು ಉತ್ಕರ್ಷಣ ನಿರೋಧಕ ಗುಣಲಕ್ಷಣಗಳಿಂದಾಗಿ ಹೃದಯದ ಆರೋಗ್ಯಕ್ಕೆ ಒಳ್ಳೆಯದು. ಕುಂಬಳಕಾಯಿ ಬೀಜದಲ್ಲಿರುವ ಆಂಟಿಆಕ್ಸಿಡೆಂಟ್ಗಳು ಹೃದಯವನ್ನು ವಿವಿಧ ಕಾಯಿಲೆಗಳಿಂದ ರಕ್ಷಿಸುತ್ತದೆ. ಹೆಚ್ಚುವರಿಯಾಗಿ, ಕುಂಬಳಕಾಯಿ ಬೀಜಗಳಲ್ಲಿ ಇರುವ ಮೆಗ್ನೀಸಿಯಮ್ ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ, ಇದು ಹೃದಯ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ. ಮೆಗ್ನೀಸಿಯಮ್ ಕೊಲೆಸ್ಟ್ರಾಲ್ ಮಟ್ಟಗಳು ಮತ್ತು ಟ್ರೈಗ್ಲಿಸರೈಡ್ಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ, ಇದರಿಂದಾಗಿ ಹೃದಯ ಕಾಯಿಲೆಗಳ ಅಪಾಯವನ್ನು ಪರಿಣಾಮಕಾರಿಯಾಗಿ ಕಡಿಮೆ ಮಾಡುತ್ತದೆ.
ಉತ್ತಮ ನಿದ್ರೆ
ಕುಂಬಳಕಾಯಿ ಬೀಜಗಳು ಟ್ರಿಪ್ಟೊಫಾನ್, ಉತ್ತಮ ನಿದ್ರೆಯನ್ನು ಉತ್ತೇಜಿಸುವ ಅಮೈನೋ ಆಮ್ಲದಂತಹ ವಿವಿಧ ಪೋಷಕಾಂಶಗಳ ಶಕ್ತಿ ಕೇಂದ್ರವಾಗಿದೆ ಮತ್ತು ತಾಮ್ರ, ಸತು ಮತ್ತು ಸೆಲೆನಿಯಮ್ ಅನ್ನು ಸಹ ಒಳಗೊಂಡಿರುತ್ತದೆ, ಇದು ನಿದ್ರೆಯ ಗುಣಮಟ್ಟ ಮತ್ತು ಅವಧಿಗೆ ಕೊಡುಗೆ ನೀಡುತ್ತದೆ. ಹೆಚ್ಚುವರಿಯಾಗಿ, ಮೆಗ್ನೀಸಿಯಮ್ ಆತಂಕ ಮತ್ತು ಒತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ, ಇದು ನಿದ್ರಾಹೀನತೆಯನ್ನು ತಡೆಯಲು ಸಹಾಯ ಮಾಡುತ್ತದೆ.
ಕ್ಯಾನ್ಸರ್ ವಿರೋಧಿ ಗುಣಲಕ್ಷಣಗಳು
ಕುಂಬಳಕಾಯಿ ಬೀಜಗಳಲ್ಲಿರುವ ಶಕ್ತಿಯುತವಾದ ಉತ್ಕರ್ಷಣ ನಿರೋಧಕಗಳು ಕ್ಯಾನ್ಸರ್ ಕೋಶಗಳ ಬೆಳವಣಿಗೆಯನ್ನು ತಡೆಗಟ್ಟುವಲ್ಲಿ ಪರಿಣಾಮಕಾರಿಯಾಗಿವೆ, ವಿಶೇಷವಾಗಿ ಸ್ತನ ಮತ್ತು ಪ್ರಾಸ್ಟೇಟ್ ಗ್ರಂಥಿಗಳ ಕ್ಯಾನ್ಸರ್.
ತೂಕ ನಿರ್ವಹಣೆಯಲ್ಲಿ ಸಹಾಯಕ
ಕುಂಬಳಕಾಯಿ ಬೀಜಗಳು ಫೈಬರ್ ಮತ್ತು ಪ್ರೋಟೀನ್ಗಳಲ್ಲಿ ಸಮೃದ್ಧವಾಗಿವೆ, ಇದು ಸಣ್ಣ ಪ್ರಮಾಣದ ಬೀಜಗಳನ್ನು ಸೇವಿಸುವ ಮೂಲಕವೂ ವ್ಯಕ್ತಿಯನ್ನು ಪೂರ್ಣವಾಗಿ ಅನುಭವಿಸುವಂತೆ ಮಾಡುತ್ತದೆ. ಅವರು ದೀರ್ಘಕಾಲದವರೆಗೆ ಹಸಿವನ್ನು ನೀಗಿಸಲು ಸಹಾಯ ಮಾಡುತ್ತಾರೆ, ಇದು ದಿನವಿಡೀ ಸೇವಿಸುವ ಆಹಾರದ ಪ್ರಮಾಣವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಆದ್ದರಿಂದ, ಸೇವಿಸುವ ಕ್ಯಾಲೊರಿಗಳ ಪ್ರಮಾಣವನ್ನು ಕಡಿಮೆ ಮಾಡುವ ಮೂಲಕ ತೂಕ ನಷ್ಟದ ಪ್ರಯಾಣದಲ್ಲಿ ಇದು ಸಹಾಯ ಮಾಡುತ್ತದೆ.
ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ
ಕುಂಬಳಕಾಯಿ ಬೀಜಗಳಲ್ಲಿ ವಿಟಮಿನ್ ಇ ಮತ್ತು ಸತುವು ಇರುತ್ತದೆ, ಇದು ರೋಗನಿರೋಧಕ ವ್ಯವಸ್ಥೆಯನ್ನು ಬಲಪಡಿಸಲು ಪೋಷಕಾಂಶಗಳ ಉತ್ತಮ ಮೂಲವಾಗಿದೆ. ವಿಟಮಿನ್ ಇ ಪ್ರತಿರಕ್ಷಣಾ ಪ್ರತಿಕ್ರಿಯೆಗಳನ್ನು ಹೆಚ್ಚಿಸಲು ಮತ್ತು ವಿವಿಧ ಸಾಂಕ್ರಾಮಿಕ ರೋಗಗಳಿಂದ ರಕ್ಷಿಸಲು ಹೆಸರುವಾಸಿಯಾಗಿದೆ ಮತ್ತು ದೇಹದ ಜೀವಕೋಶಗಳಲ್ಲಿ ಸ್ವತಂತ್ರ ರಾಡಿಕಲ್ ಹಾನಿಯನ್ನು ತಡೆಯುತ್ತದೆ. ಸತುವು ನಮ್ಮ ದೇಹವನ್ನು ಉರಿಯೂತ, ಅಲರ್ಜಿಗಳು ಮತ್ತು ರೋಗಕಾರಕಗಳಂತಹ ವಿವಿಧ ಸಮಸ್ಯೆಗಳಿಂದ ರಕ್ಷಿಸುತ್ತದೆ. ಆದ್ದರಿಂದ, ಸಂಚಿತವಾಗಿ, ಈ ಪೋಷಕಾಂಶಗಳು ಸೋಂಕುಗಳನ್ನು ತಡೆಗಟ್ಟಲು ಮತ್ತು ಒಟ್ಟಾರೆ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಕುಂಬಳಕಾಯಿ ಬೀಜಗಳ ಪ್ರಯೋಜನಗಳು ಆಂಟಿಬ್ಯಾಕ್ಟೀರಿಯಲ್, ಆಂಟಿಫಂಗಲ್ ಮತ್ತು ಆಂಟಿವೈರಲ್ ಗುಣಲಕ್ಷಣಗಳನ್ನು ಸಹ ಒಳಗೊಂಡಿರುತ್ತವೆ, ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.
ಮೂಳೆಯ ಆರೋಗ್ಯವನ್ನು ಬೆಂಬಲಿಸುತ್ತದೆ
ಕುಂಬಳಕಾಯಿ ಬೀಜಗಳಲ್ಲಿ ಇರುವ ಮೆಗ್ನೀಸಿಯಮ್ ಬಲವಾದ ಮೂಳೆಗಳಿಗೆ ಒಳ್ಳೆಯದು ಮತ್ತು ಬೆಳವಣಿಗೆಗೆ ಪ್ರಮುಖವಾಗಿದೆ. ಕುಂಬಳಕಾಯಿ ಬೀಜಗಳು ಸಾಕಷ್ಟು ಪ್ರಮಾಣದ ಖನಿಜಗಳನ್ನು ಒದಗಿಸುತ್ತವೆ, ಇದು ಮೂಳೆಗಳ ಸಾಂದ್ರತೆ ಮತ್ತು ಬಲವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಹೀಗಾಗಿ, ಇದು ಸುಲಭವಾಗಿ ಮೂಳೆ ಮುರಿತಗಳು ಮತ್ತು ಆಸ್ಟಿಯೊಪೊರೋಸಿಸ್ನಂತಹ ಪರಿಸ್ಥಿತಿಗಳನ್ನು ತಡೆಯಲು ಸಹಾಯ ಮಾಡುತ್ತದೆ. ಮೆಗ್ನೀಸಿಯಮ್ ಕೊರತೆಯು ಕ್ಯಾಲ್ಸಿಯಂ ಕೊರತೆಗೆ ಸಂಬಂಧಿಸಿದೆ, ಇದು ದುರ್ಬಲ ಮೂಳೆಗಳಿಗೆ ಕಾರಣವಾಗುತ್ತದೆ.
ಪುರುಷ ಸಂತಾನೋತ್ಪತ್ತಿ ಆರೋಗ್ಯವನ್ನು ಬೆಂಬಲಿಸುತ್ತದೆ
ಕುಂಬಳಕಾಯಿ ಬೀಜಗಳಲ್ಲಿ ಉತ್ಕರ್ಷಣ ನಿರೋಧಕಗಳ ದೊಡ್ಡ ಸಂಗ್ರಹವಿದೆ, ಇದು ಪ್ರಾಸ್ಟೇಟ್ ಕ್ಯಾನ್ಸರ್ ಅನ್ನು ತಡೆಯಲು ಸಹಾಯ ಮಾಡುತ್ತದೆ. ಪುರುಷರಿಗೆ ಕುಂಬಳಕಾಯಿ ಬೀಜಗಳ ಪ್ರಯೋಜನಗಳು ಮೂತ್ರದ ಸೋಂಕುಗಳು, ರೋಗಗಳು ಮತ್ತು ಅಸ್ವಸ್ಥತೆಗಳನ್ನು ತಡೆಗಟ್ಟುವುದು ಮತ್ತು ಚಿಕಿತ್ಸೆ ನೀಡುವುದು, ಮತ್ತೊಂದೆಡೆ, ವೀರ್ಯದ ಗುಣಮಟ್ಟವನ್ನು ಸುಧಾರಿಸುವುದು. ಇದು ದೇಹದಲ್ಲಿ ಟೆಸ್ಟೋಸ್ಟೆರಾನ್ ಮಟ್ಟವನ್ನು ಹೆಚ್ಚಿಸುವ ಮೂಲಕ ಪುರುಷರಲ್ಲಿ ಫಲವತ್ತತೆಯನ್ನು ಸುಧಾರಿಸುತ್ತದೆ ಮತ್ತು ವೀರ್ಯದ ಗುಣಮಟ್ಟ ಮತ್ತು ಪ್ರಮಾಣವನ್ನು ಸುಧಾರಿಸುತ್ತದೆ.
ಸ್ತ್ರೀ ಸಂತಾನೋತ್ಪತ್ತಿ ಆರೋಗ್ಯವನ್ನು ಬೆಂಬಲಿಸುತ್ತದೆ
ಕುಂಬಳಕಾಯಿ ಬೀಜಗಳು ಉತ್ತಮ ಪ್ರಮಾಣದ ಸತುವನ್ನು ಹೊಂದಿರುತ್ತವೆ, ಇದು ಗರ್ಭಧಾರಣೆಗೆ ಒಳ್ಳೆಯದು. ಸತುವು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ ಮತ್ತು ಮಗುವಿನ ಆರೋಗ್ಯಕರ ಬೆಳವಣಿಗೆಗೆ ಸಹಾಯ ಮಾಡುತ್ತದೆ, ಇದು ಮಹಿಳೆಯರಿಗೆ ಕುಂಬಳಕಾಯಿ ಬೀಜಗಳ ಪ್ರಯೋಜನಗಳನ್ನು ಹೊಂದಿದೆ. ಆದ್ದರಿಂದ, ಗರ್ಭಿಣಿಯರು ಕುಂಬಳಕಾಯಿ ಬೀಜಗಳಂತಹ ಸತುವು ಭರಿತ ಆಹಾರವನ್ನು ಸೇವಿಸುವುದರಿಂದ ಪ್ರಯೋಜನ ಪಡೆಯುತ್ತಾರೆ. ಕುಂಬಳಕಾಯಿ ಬೀಜಗಳು ಋತುಬಂಧಕ್ಕೊಳಗಾದ ಮಹಿಳೆಯರಲ್ಲಿ ಆಸ್ಟಿಯೊಪೊರೋಸಿಸ್ ಅನ್ನು ತಡೆಯಲು ಸಹಾಯ ಮಾಡುತ್ತದೆ.
ಕೂದಲು ಮತ್ತು ಚರ್ಮಕ್ಕೆ ಒಳ್ಳೆಯದು
ಕುಂಬಳಕಾಯಿ ಬೀಜಗಳನ್ನು ಸೇವಿಸುವುದರಿಂದ ಕೂದಲನ್ನು ನಯವಾಗಿ ಮತ್ತು ಬಲವಾಗಿ ಮತ್ತು ಹೊಳೆಯುವಂತೆ ಮಾಡುತ್ತದೆ. ಇದು ಚರ್ಮವನ್ನು ಮೃದುವಾಗಿಸಲು ಮತ್ತು ಸುಕ್ಕು ಮುಕ್ತವಾಗಲು ಸಹಾಯ ಮಾಡುತ್ತದೆ. ಅದರ ಉರಿಯೂತದ ಗುಣಲಕ್ಷಣಗಳಿಂದಾಗಿ, ಇದು ಮೊಡವೆ ಮತ್ತು ಮೊಡವೆಗಳನ್ನು ತಡೆಯಲು ಸಹಾಯ ಮಾಡುತ್ತದೆ ಚರ್ಮದ ಸೋಂಕುಗಳು.
ಆತಂಕ ಮತ್ತು ಖಿನ್ನತೆಯನ್ನು ಕಡಿಮೆ ಮಾಡುತ್ತದೆ
ಕುಂಬಳಕಾಯಿ ಬೀಜಗಳಲ್ಲಿ ಇರುವ ಮೆಗ್ನೀಸಿಯಮ್ ಒತ್ತಡ ಮತ್ತು ಆತಂಕವನ್ನು ತಡೆಯಲು ಮತ್ತು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದು ಮನಸ್ಸನ್ನು ಶಾಂತಗೊಳಿಸುವ ಮೂಲಕ ಖಿನ್ನತೆಯ ಲಕ್ಷಣಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಕುಂಬಳಕಾಯಿ ಬೀಜಗಳು ಒಂದು ಸೂಪರ್ಫುಡ್ ಆಗಿದ್ದು ಅದು ಹಲವಾರು ಪ್ರಯೋಜನಗಳನ್ನು ಮತ್ತು ಹೆಚ್ಚಿನ ಪೌಷ್ಟಿಕಾಂಶದ ಮೌಲ್ಯವನ್ನು ಹೊಂದಿದೆ. ಇದನ್ನು ಸ್ಮೂಥಿಗಳು, ಸಲಾಡ್ಗಳು, ಸೂಪ್ಗಳು, ಧಾನ್ಯಗಳು, ಕೇಕ್ಗಳು, ಎನರ್ಜಿ ಬಾರ್ಗಳು ಇತ್ಯಾದಿಗಳಲ್ಲಿ ಬಳಸಬಹುದು. ಆದಾಗ್ಯೂ, ಇದನ್ನು ಮಿತವಾಗಿ ಸೇವಿಸಬೇಕು ಇಲ್ಲದಿದ್ದರೆ ಇದು ಉಬ್ಬುವುದು, ಹೊಟ್ಟೆನೋವು, ವಾಯು, ಮತ್ತು ಮಲಬದ್ಧತೆಗೆ ಕಾರಣವಾಗಬಹುದು. ಇದು ಬಹಳಷ್ಟು ಕ್ಯಾಲೊರಿಗಳನ್ನು ಹೊಂದಿರುವುದರಿಂದ, ಇದನ್ನು ಹೆಚ್ಚು ಸೇವಿಸುವುದರಿಂದ ತೂಕ ಹೆಚ್ಚಾಗಬಹುದು. ಕುಂಬಳಕಾಯಿ ಬೀಜಗಳನ್ನು ಸೇವಿಸಲು ಉತ್ತಮ ಮಾರ್ಗವೆಂದರೆ ಅವುಗಳನ್ನು ಹುರಿದು ಊಟಕ್ಕೆ ಸೇರಿಸುವುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoಆಶ್ರಯ ಯೋಜನೆ – ಆವಧಿ ವಿಸ್ತರಣೆ
-
ದಿನದ ಸುದ್ದಿ4 days agoಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ
-
ಅಂಕಣ4 days agoಕವಿತೆ | ದೇವರ ಹೂವು
-
ದಿನದ ಸುದ್ದಿ6 days agoಗರಿಕೆ ಹುಲ್ಲಿನ ಜ್ಯೂಸ್ನಲ್ಲಿದೆ ರಕ್ತದ ಕ್ಯಾನ್ಸರ್ ಗುಣಪಡಿಸುವ ಶಕ್ತಿ
-
ದಿನದ ಸುದ್ದಿ2 days agoರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು ಕಾರ್ಯಕ್ರಮದಡಿ ಸೌಲಭ್ಯ: ಅರ್ಜಿ ಆಹ್ವಾನ
-
ದಿನದ ಸುದ್ದಿ2 days ago10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..
-
ದಿನದ ಸುದ್ದಿ3 days agoಉಚಿತ ಕೋಳಿ ಸಾಕಾಣಿಕೆ ತರಬೇತಿ: ಅರ್ಜಿ ಆಹ್ವಾನ
-
ದಿನದ ಸುದ್ದಿ3 days agoಕೃಷಿ ಪಂಡಿತ ಹಾಗೂ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿ: ಅರ್ಜಿ ಆಹ್ವಾನ

