ದಿನದ ಸುದ್ದಿ
ದೇಶದ ಶಾಲೆ – ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರೋ ವಿದ್ಯಾರ್ಥಿಗಳೆಷ್ಟು..? ಇಲ್ಲಿದೆ ಸಮೀಕ್ಷೆಯ ಸಂಪೂರ್ಣ ಮಾಹಿತಿ
ಸುದ್ದಿದಿನಡೆಸ್ಕ್:ಭಾರತದ ಶಾಲೆಗಳಲ್ಲಿ 26. 52 ಕೋಟಿ ವಿದ್ಯಾರ್ಥಿಗಳು ಮತ್ತು ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ 4.33 ಕೋಟಿ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ ಎಂದು ನಿನ್ನೆ ಸಂಸತ್ತಿನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ 2023-24ರ ಆರ್ಥಿಕ ಸಮೀಕ್ಷೆ ತಿಳಿಸಿದೆ.
ಸಮೀಕ್ಷೆಯ ಪ್ರಕಾರ, ಭಾರತದ ಕೌಶಲ್ಯ ಸಂಸ್ಥೆಗಳಲ್ಲಿ 11 ಕೋಟಿಗೂ ಹೆಚ್ಚು ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. “ಈ ವ್ಯಾಪಕ ಅಂಕಿ – ಅಂಶಗಳು ಸವಾಲಿನ ಅಗಾಧತೆ ಹಾಗೂ ಭಾರತದ ಶೈಕ್ಷಣಿಕ ಪರಿಸರ ವ್ಯವಸ್ಥೆಯನ್ನು ಪರಿವರ್ತಿಸುವ ಹೊಸ ಶಿಕ್ಷಣ ನೀತಿ 2020ರ ಅಂತರ್ಗತ ಮಹತ್ವಾಕಾಂಕ್ಷೆಯ ಮಹತ್ವವನ್ನು ಒತ್ತಿ ಹೇಳುತ್ತವೆ” ಎಂದು ವರದಿ ಹೇಳಿದೆ.
ಇದಲ್ಲದೆ, ಉನ್ನತ ಶಿಕ್ಷಣಕ್ಕೆ ಪ್ರವೇಶ ಪಡೆಯುವ ಪರಿಶಿಷ್ಟಜಾತಿ ಹಾಗೂ ವರ್ಗಗಳು, ಒಬಿಸಿಯಂಥ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿರುವುದನ್ನು ಸಮೀಕ್ಷೆ ತೋರಿಸಿದೆ. ಉನ್ನತ ಶಿಕ್ಷಣದಲ್ಲಿ ಮಹಿಳೆಯರ ದಾಖಲಾತಿಯು 2015 ರಲ್ಲಿ ಇದ್ದ 1.57 ಕೋಟಿಯಿಂದ 2022 ರಲ್ಲಿ 2.07 ಕೋಟಿಗೆ ಏರಿದೆ. ಅಂದರೆ 2015 ರಿಂದ ಇದು ಶೇಕಡಾ 31.6 ರಷ್ಟು ಹೆಚ್ಚಳವಾಗಿದೆ. ಉನ್ನತ ಶಿಕ್ಷಣದಲ್ಲಿ ಹೆಚ್ಚುತ್ತಿರುವ ಸಮಾನತೆಯಿಂದ ಇಲ್ಲಿಯವರೆಗೆ ಹಿಂದುಳಿದ ವರ್ಗಗಳಿಗೆ ಉತ್ತಮ ಉದ್ಯೋಗಾವಕಾಶಗಳು ಲಭ್ಯವಾಗಲಿವೆ.
ಸಮೀಕ್ಷೆಯ ಪ್ರಕಾರ, ಎನ್ಇಪಿ 2020 ನೀತಿಯು ಶಿಕ್ಷಣ ಕ್ಷೇತ್ರದಲ್ಲಿ ಮೂರನೇ ತರಗತಿಯಲ್ಲಿ ಉತ್ತೀರ್ಣವಾದ ಪ್ರತಿ ಮಗುವಿಗೆ ಅಡಿಪಾಯ ಸಾಕ್ಷರತೆ ಮತ್ತು ಸಂಖ್ಯಾಶಾಸ್ತ್ರದ ಮೇಲೆ ಕೇಂದ್ರೀಕೃತವಾಗಿದೆ ಎಂದು ಸಮೀಕ್ಷೆ ಹೇಳಿದೆ. ಆರಂಭಿಕ ಬಾಲ್ಯದ ಶಿಕ್ಷಣಕ್ಕಾಗಿ ಅಂಗನವಾಡಿ ಕೇಂದ್ರಗಳಲ್ಲಿ ತನ್ನ “ಪೋಷಣ್ ಭಿ ಪಢಾಯಿ ಭಿ ಕಾರ್ಯಕ್ರಮದಿಂದ ವಿಶ್ವದ ಅತಿದೊಡ್ಡ, ಸಾರ್ವತ್ರಿಕ, ಉತ್ತಮ-ಗುಣಮಟ್ಟದ ಶಾಲಾಪೂರ್ವ ಜಾಲವನ್ನು ಅಭಿವೃದ್ಧಿಪಡಿಸುವ ಗುರಿಯನ್ನು ಭಾರತ ಹೊಂದಿದೆ ಎಂದು ವರದಿ ಉಲ್ಲೇಖಿಸಿದೆ.
ಮುಂದಿನ ಕಾಲು ಶತಮಾನದಲ್ಲಿ ಆರ್ಥಿಕ ಬೆಳವಣಿಗೆಯ ದರವನ್ನು ಸ್ಥಿರವಾಗಿ ಉಳಿಸಿಕೊಳ್ಳಲು, ಭಾರತವು ತನ್ನ ಯುವಕರಿಗೆ ಅತ್ಯಾಧುನಿಕ ಶಿಕ್ಷಣ ಮತ್ತು ಕೌಶಲ್ಯವನ್ನು ನೀಡಬೇಕಾಗಿದೆ. ಇದು ಉದಯೋನ್ಮುಖ ತಂತ್ರಜ್ಞಾನಗಳನ್ನು ಬಳಸಿ ಕೆಲಸ ಮಾಡಲು ಅವರಿಗೆ ಸಹಾಯ ಮಾಡುತ್ತದೆ ಎಂದು ಸಮೀಕ್ಷೆ ತಿಳಿಸಿದೆ. ಆರ್ಥಿಕ ಸಮೀಕ್ಷೆಯು ಹಿಂದಿನ ಹಣಕಾಸು ವರ್ಷದಲ್ಲಿನ ಭಾರತೀಯ ಆರ್ಥಿಕತೆಯ ಸಮಗ್ರ ಪರಿಶೀಲನೆ ಅಥವಾ ವಾರ್ಷಿಕ ವರದಿಯಾಗಿದೆ.ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವದಾಸಿ ಪುನರ್ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ದಿನದ ಸುದ್ದಿ
ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ
ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.


