ದಿನದ ಸುದ್ದಿ
ಸೂಳೆಕೆರೆ ರಕ್ಷಣೆಗೆ ಸರ್ವಪ್ರಯತ್ನ : ತರಳಬಾಳು ಶ್ರೀ
![](https://suddidina.com/wp-content/uploads/2018/05/Sulekerep1-suddidina.jpg)
ಸುದ್ದಿದಿನ ಡೆಸ್ಕ್ | ಏಷ್ಯಾದಲ್ಲಿಯೇ ಅತಿ ದೊಡ್ಡದಾದ ಕೆರೆ ಎಂಬ ಖ್ಯಾತಿಗೆ ಪಾತ್ರವಾದ ಚನ್ನಗಿರಿ ತಾಲ್ಲೂಕಿನ ಸೂಳೆಕೆರೆ ಯನ್ನು ಕಾನೂನು ಬದ್ಧವಾಗಿ ಉಳಿಸುವ ಸರ್ವ ಪ್ರಯತ್ನವನ್ನು ಮಾಡಬೇಕಾಗಿದೆ ಎಂದು ಸಿರಿಗೆರೆ ಶ್ರೀ ತರಳಬಾಳು ಜಗದ್ಗುರು ಡಾ.ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ ತಿಳಿಸಿದರು.
ಸೂಳೆಕೆರೆ ಒತ್ತುವರಿ ತೆರವಿನ ವಿಚಾರದಿ ಚರ್ಚಿಸಲು ತರಳಬಾಳು ಸದ್ದರ್ಮ ನ್ಯಾಯಪೀಠದಕ್ಕೆ 3 ನೇ ಬಾರಿ ಭೇಟಿ ನೀಡಿದ್ದ ಖಡ್ಗ ಸ್ವಯಂ ಸೇವಾ ಸಂಘದ ಪದಾಧಿಕಾರಿಗಳೊಂದಿಗೆ ಶ್ರೀಗಳು ಮಾತನಾಡಿದರು. ದೂರವಾಣಿ ಮೂಲಕ ಶಿವಮೊಗ್ಗ ನೀರಾವರಿ ಇಲಾಖೆಯ ಮುಖ್ಯಸ್ಥರನ್ನು ಸಂಪರ್ಕಿಸಿದ ಶ್ರೀಗಳು ,ಸೂಳೆಕೆರೆಯ ವಿಸ್ತೀರ್ಣ 5447 ಎಕರೆ. 24 ಕೋಡಿಯನ್ನು 28 ಅಡಿಗೆ ಹೆಚ್ಚಿಸಿದ್ದರಿಂದ ಸಾವಿರಾರು ಎಕರೆ ಜಮೀನು ಮುಳುಗಡೆಯಾಗಿದೆ . ಭೂ ಮಾಲೀಕರಿಗೆ ಪರಿಹಾರವನ್ನೂ ವಿತರಿಸಲಾಗಿದೆ.ಆದರೆ ಕಂದಾಯ ಇಲಾಖೆಯಿಂದ ನೀರಾವರಿ ಇಲಾಖೆಗೆ ಈ ಜಮೀನನ್ನು ಹಸ್ತಾಂತರಿಸಿಲ್ಲ .ಒಂದು ಸಾವಿರಕ್ಕೂ ಅಧಿಕ ಎಕರೆ ಜಮೀನುನ್ನೂ ನೀರಾವರಿ ಇಲಾಖೆ ಸುಪರ್ದಿಗೆ ತಗೆದುಕೊಳ್ಳಬೇಕು ಎಂದು ನಿರ್ದೇಶನ ನೀಡಿದರು.
ಕೆರೆ ಸರ್ವೆ ಕಾರ್ಯಕ್ಕೆ ಭೂಮಾಪಕರ ಪಟ್ಟಿ ನೀಡಿದ ಶ್ರೀಗಳು ಇವರಲ್ಲಿ ಸೂಕ್ತವಾದವರನ್ನು ಆಯ್ಕೆ ಮಾಡಿಕೊಂಡು ಅಳತೆ ಮಾಡಿಸಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.ಕೆರೆಯನ್ನು ಅಳತೆ ಮಾಡಿದ ನಂತರ ಅದರ ಸುತ್ತಲೂ 5 ಅಡಿ ಆಳ ಮತ್ತು 5 ಅಡಿ ಅಗಲದ ಗುಂಡಿಯನ್ನು ತೆಗೆಯುವಂತೆ ಇದರ ಖರ್ಚಿಗೆ ಬೇಕಾದ ಹಣವನ್ನು ಸಂಬಂಧಿಸಿದ ಇಲಾಖೆಯಿಂದ ಬಿಡುಗಡೆ ಮಾಡಿಸುವಂತೆ ಚನ್ನಗಿರಿ ಕ್ಷೇತ್ರದ ಶಾಸಕರಾದ ಮಾಡಾಳು ವಿರೂಪಾಕ್ಷಪ್ಪನವರಿಗೆ ದೂರವಾಣಿ ಮೂಲಕ ತಿಳಿಸಿದರು.
ಖಡ್ಗ ಸ್ವಯಂ ಸೇವಾ ಸಂಘದ ರಾಜ್ಯಾಧ್ಯಕ್ಷ ಬಿ.ಆರ್ ರಘು ,ಪ್ರಧಾನ ಕಾರ್ಯದರ್ಶಿ ಟಿ.ಕುಬೇಂದ್ರಸ್ವಾಮಿ, ನಿರ್ದೇಶಕರಾದ ಚಂದ್ರಹಾಸ್ ,ವೀರಭದ್ರಪ್ನ ವೀರಭದ್ರಪ್ಪ, ರವಿಕುಮಾರ್ ಇತರರು ಈ ಸಂದರ್ಭದಲ್ಲಿ ಹಾಜರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401
![](https://suddidina.com/wp-content/uploads/2022/04/20210226_111406.jpg)
ಕ್ರೀಡೆ
Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು
![](https://suddidina.com/wp-content/uploads/2024/07/suddidina_paris_Olympic.jpg)
ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.
ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.
ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ
![](https://suddidina.com/wp-content/uploads/2024/06/judges_suddidina.jpg)
ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.
ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್ಗಳನ್ನು ಒಳಗೊಂಡಿದೆ.
ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ
![](https://suddidina.com/wp-content/uploads/2024/05/application_invitation_arji_suddidina.jpg)
ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
-
ದಿನದ ಸುದ್ದಿ6 days ago
ಆತ್ಮಕತೆ | ಹೊಸದಾಗಿ ಬಂದ ಹಳೆಯ ಗುರುಗಳು
-
ದಿನದ ಸುದ್ದಿ3 days ago
K-SET| ಕೆಸೆಟ್ ಪರೀಕ್ಷೆ ; ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ
-
ದಿನದ ಸುದ್ದಿ5 days ago
ಶಿರೂರು ಗುಡ್ಡಕುಸಿತ ಪ್ರದೇಶಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
-
ದಿನದ ಸುದ್ದಿ5 days ago
ಅತಿಥಿ ಉಪನ್ಯಾಸಕ ಹುದ್ದೆ ; ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ದಾವಣಗೆರೆ ಭಾರೀ ಮಳೆ | ಬೆಳೆ ನಷ್ಟವಾಗಿದ್ದೆಷ್ಟು..?
-
ದಿನದ ಸುದ್ದಿ6 days ago
ಕೃಷಿ ಪಂಡಿತ್, ಆತ್ಮಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ನಾಳೆಯಿಂದ ಸಂಸತ್ತಿನ ಬಜೆಟ್ ಅಧಿವೇಶನ
-
ದಿನದ ಸುದ್ದಿ4 days ago
ಬಲ್ಲಿರೇನು ಕೊಬ್ಬರಿ ಎಣ್ಣೆ ಮಹಿಮೆ..!