Connect with us

ಬಹಿರಂಗ

ಪಾದಪೂಜೆ ಮತ್ತು ಪಾದೋದಕ ಸೇವನೆ ಎಂಬ ಅನಿಷ್ಟ ಪದ್ದತಿ

Published

on

ನಾನು ಅಪಾರವಾಗಿ ಗೌರವಿಸುವ ಯುವ ಸಮಾಜವಾದಿ ಚಿಂತಕ, ಸಾಮಾಜಿಕ ಕಾರ್ಯಕರ್ತ, ಗೆಳೆಯ ಜಿ.ಟಿ.ನರೇಂದ್ರಕುಮಾರ್ ಅವರು, ನಿನ್ನೆ ದಿನ ಸಂಜೆ ನನಗೆ ಫೋನಾಯಿಸಿ, ಜಾರ್ಖಂಡ್ ನಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಹಿರಿಯ ಬಿಜೆಪಿ ಕಾರ್ಯಕರ್ತರೋರ್ವರು ತಮ್ಮ ಪಕ್ಷದ ಗೊಡ್ಡ ಕ್ಷೇತ್ರದ ಸಂಸದ ನಿಶಿಕಾಂತ್ ದುಬೆ ಅವರ ಪಾದಗಳನ್ನು ತೊಳೆದು ಆ ನೀರನ್ನು ಸೇವಿಸಿದ ಅಸಹ್ಯಕರ ಘಟನೆ ಕುರಿತು ಮಾತನಾಡಿದರು.

ನಮ್ಮ ಮಾತು ಬಸವಮೂರ್ತಿ ಮಾದಾರ ಚೆನ್ನಯ್ಯನು ಪಾದ ಪೂಜೆ ಮಾಡಿಸಿಕೊಂಡ ಅವೈಜ್ಞಾನಿಕ ನಡೆಯ ಕಡೆಗೆ ಹಾಗೂ ನಾನು ಈ ಘಟನೆಯನ್ನು ಸಾಮಾಜಿಕ ಜಾಲತಾಣದಲ್ಲಿ ಖಂಡಿಸಿದ ಕಡೆಗೆ ಹೊರಳಿಕೊಂಡಿತು. ಬುದ್ಧಗುರು – ಬಸವಣ್ಣ- ಗಾಂಧಿ- ಅಂಬೇಡ್ಕರ್- ಲೋಹಿಯಾ- ಕುವೆಂಪು ಮುಂತಾದವರ ವೈಚಾರಿಕ ಚಿಂತನೆಗಳನ್ನು ಅಪಾರವಾಗಿ ಓದಿಕೊಂಡಿರುವ ಜಿ.ಟಿ.ನರೇಂದ್ರಕುಮಾರ್, ಭಾರತದ ಮೊದಲನೇ ರಾಷ್ಟ್ರಪತಿಯಾಗಿದ್ದ ಬಾಬು ರಾಜೇಂದ್ರ ಪ್ರಸಾದ್ ಅವರು ಕಾಶಿಯಲ್ಲಿ ಪಂಕ್ತಿಯಲ್ಲಿ ಕುಳಿತಿದ್ದ ನೂರಾರು ಬ್ರಾಹ್ಮಣರ ಪಾದಪೂಜೆ ಮಾಡಿದ ಕಾರಣ, ರಾಮಮನೋಹರ ಲೋಹಿಯಾ ಅವರ ಕಟು ಟೀಕೆಗೆ ಗುರಿಯಾಗಿ, ತಮ್ಮ ಜೀವಮಾನದಲ್ಲಿ ಮತ್ತಿನ್ನೆಂದೂ ಪಾದಪೂಜೆ ಮಾಡದಂತೆ ಸುದ್ದಿಮಾಧ್ಯಮಗಳಲ್ಲಿ ಸಾರ್ವಜನಿಕವಾಗಿ ಅಪಮಾನಕ್ಕೆ ಗುರಿಯಾದ ಚಾರಿತ್ರಿಕ ಸನ್ನಿವೇಷ ಕುರಿತು ನನ್ನ ಗಮನಕ್ಕೆ ತಂದರು.

ಬಸವಮೂರ್ತಿ ಮಾದಾರ ಚೆನ್ನಯ್ಯನು ಬ್ರಾಹ್ಮಣ ಮತ್ತು ಲಿಂಗಾಯತ ದಂಪತಿಗಳಿಂದ ಪಾದಪೂಜೆ ಮಾಡಿಸಿಕೊಂಡ ಘಟನೆಯನ್ನು ಕುರಿತು ನಾನು ಸಾಮಾಜಿಕ ಜಾಲತಾಣದಲ್ಲಿ ಬರೆದದ್ದನ್ನು ಓದಿದ್ದ ಕೆಲವು ಚೆನ್ನಯ್ಯಾಭಿಮಾನಿ ಗೆಳೆಯರು, ನಮ್ಮ ನರೇಂದ್ರಕುಮಾರ್ ಅವರಿಗೆ ಫೋನ್ ಮಾಡಿ, “ಮೊದಲೇ ನಾವು ಮಾದಿಗರು ಹಿಂದುಳಿದಿದ್ದೇವೆ… ವಡ್ಡಗೆರೆ ಅವರಿಗೆ ಹೀಗೆಲ್ಲಾ ಬರೆಯಬಾರದು ಅಂತಾ ತಾಕೀತುಮಾಡಿ ಹೇಳಿ ಸರ್…. ವಡ್ಡಗೆರೆ ನಿಮ್ಮ ಮಾತು ಕೇಳುತ್ತಾರೆ’” ಎಂದು ಕೇಳಿಕೊಂಡಿದ್ದಾರೆ.

ಅದೇ ಕೆಲವು ಗೆಳೆಯರು, “ಹೊಲೆಮಾದಿಗರ ಸ್ವಾಮೀಜಿಗಳ ವಿಷಯ ಬಂದಾಗ ಮಾತ್ರ ವೈಚಾರಿಕ ಪ್ರಜ್ಞೆ ಜಾಗೃತವಾಗಿ ಟೀಕಿಸುವ ಪ್ರಗತಿಪರ ಚಿಂತಕರು ಬ್ರಾಹ್ಮಣ, ಲಿಂಗಾಯತ, ವಕ್ಕಲಿಗ, ಕುರುಬ, ಕುಂಬಾರ, ತಿಗಳ, ಈಡಿಗ, ನಾಯಕ ಮುಂತಾದ ಜನಾಂಗಗಳ ಸ್ವಾಮೀಜಿಗಳ ಬಗ್ಗೆ ಟೀಕಿಸದೆ ಮೌನವಹಿಸುವಿರೇಕೆ?” ಎಂದು ನನ್ನನ್ನು ಪ್ರಶ್ನಿಸುತ್ತಿದ್ದಾರೆ.

ಇವರ ಪ್ರಶ್ನೆ ಹೇಗಿದೆ ಎಂದರೆ – “ಜಾತೀಯತೆ ಎಲ್ಲಿದೆ? ನಾವು ಮೇಲ್ಜಾತಿಯವರು ನಿಜ. ಆದರೆ ಜಾತೀಯತೆ ನಮ್ಮಲ್ಲಿಲ್ಲ. ನೀವು ಜಾತಿಭೇದಕ್ಕೆ ಮೇಲ್ಜಾತಿಗಳನ್ನು ಮಾತ್ರ ಗುರಿಮಾಡಿ ಮಾತಾಡುತ್ತೀರಲ್ಲಾ ಯಾಕೆ…. ನಿಮ್ಮ ನಿಮ್ಮೊಳಗೇ ಎಡಗೈ ಬಲಗೈ ಹೀಗೆ ಎಷ್ಟೊಂದು ಭೇದವಿದೆ…. ಮೊದಲು ನೀವು ಸರಿಯಾಗಿರಿ…” ಹೀಗೆ ವಿವೇಕರಾಹಿತ್ಯವಾಗಿ ಕೇಳುವ ಮನೋಧೋರಣೆಗಿಂತ ನನ್ನನ್ನು ಕೇಳಿರುವ ಪ್ರಶ್ನೆ ಬೇರೆಯಲ್ಲ. ಜಾತಿ ಹೇರಿದವರೇ ಹೀಗೆ ಜಾತೀಯತೆ ನಿಮ್ಮೊಳಗೇ ಇದೆ ಎಂದು ದಲಿತರ ಕಡೆಗೇ ಬೊಟ್ಟು ಮಾಡಿದರೆ ದಲಿತರು ಯಾರನ್ನು ದೂರಬೇಕು? ಜಾತಿಭೇದ ದಲಿತರು ಮಾತ್ರ ಸೃಷ್ಟಿಸಿಕೊಂಡು ಪೋಷಿಸುತ್ತಿರುವ ಸಂಗತಿಯೇನು?

ನಾನು ವೈಯಕ್ತಿಕವಾಗಿ ನನ್ನ ಅನುಭವ ಪರಿಧಿಗೆ ಬಂದ ಯಾವುದೇ ಮೌಢ್ಯವನ್ನು ನನ್ನದೇ ಮಿತಿಯಲ್ಲಿ ಸಾಧ್ಯವಾದಷ್ಟು ಮಟ್ಟಿಗೆ ವೈಚಾರಿಕವಾಗಿ ಮುಖಾಮುಖಿಯಾಗುತ್ತಾ ಬಂದಿದ್ದೇನೆ. ಸಹಜವಾಗಿ ಅನೇಕ ಜಾತಿಗಳ ಬಹುತೇಕ ಸ್ವಾಮೀಜಿಗಳು ನನ್ನ ವೈಚಾರಿಕ ವಿಮರ್ಶೆಗೆ ಒಳಗಾಗಿದ್ದಾರೆ. ನನ್ನಲ್ಲಿರುವ ಮೌಢ್ಯದ ಮುಖಕ್ಕೆ ಯಾರೇ ಕನ್ನಡಿ ಹಿಡಿದರೂ ನಾನು ತಿದ್ದಿಕೊಳ್ಳಲು ಸಿದ್ಧನಾಗಿದ್ದುಕೊಂಡೇ ವಿಮರ್ಶಿಸುವುದು ನನ್ನ ಜಾಯಮಾನ.

ಮಾದಾರ ಚೆನ್ನಯ್ಯ ಪಾದಪೂಜೆ ಮಾಡಿಸಿಕೊಂಡಿರುವ ಸಂಗತಿ ಖಂಡನೀಯವಾದುದು. ವ್ಯಕ್ತಿಯ ಕಾಲು ತೊಳೆದ ನೀರು ಪವಿತ್ರ ತೀರ್ಥವಲ್ಲ, ಅದು ಕಲುಷಿತ ನೀರು. ಅದು ಕುಡಿಯಲಾಗಲೀ, ಅಡುಗೆಗೆ ಬಳಸಲಾಗಲೀ ಯೋಗ್ಯವಲ್ಲ, ಅದರಿಂದ ರೋಗ- ರುಜಿನಗಳು ಬರುತ್ತವೆ. ಇಷ್ಟು ಪ್ರಾಥಮಿಕ ತಿಳಿವಳಿಕೆ ಇರುವ ಯಾವುದೇ ವ್ಯಕ್ತಿ ತನ್ನ ಪಾದ ತೊಳೆಸಿಕೊಂಡು ಆ ನೀರನ್ನು ಇತರರಿಗೆ ಕುಡಿಸಲಾರ. ಇತರರ ಪಾದ ತೊಳೆದು ತಾನೂ ಕುಡಿಯಲಾರ.

ಸರಿ.ಈಗ ಗೆಳೆಯರು ನನ್ನನ್ನು ಕೇಳಿದ ಪ್ರಶ್ನೆಗೆ ಬರೋಣ…

ಮಠಪೀಠಗಳ ಗುರುಪದವಿ ಅಲಂಕರಿಸಿ ಕುಳಿತಿರುವ ದಲಿತ ಹಿಂದುಳಿದ ಜನಾಂಗಗಳ ಸ್ವಾಮೀಜಿಗಳಿಗೇನಾಗಿದೆ? ಅವರಿಗೆ ರಾಜಕೀಯ ಮೋಹವಿದ್ದರೆ ಕಾವಿ ಕಳಚಿ ಬಿಸಾಕಿ ಖಾದಿ ತೊಟ್ಟುಕೊಳ್ಳಲಿ. ಕಾವಿ ಕಿತ್ತೆಸೆದು ರಾಜಕೀಯಕ್ಕೆ ಬರುವುದಷ್ಟೇ ಅಲ್ಲ, ಸಂಸಾರ ಕಟ್ಟಿಕೊಳ್ಳಲು ಬಯಸಿದರೆ ಮದುವೆಯನ್ನೂ ಆಗಲಿ. ಕಾವಿ ತೊಟ್ಟು ಒಂದು ನಿರ್ದಿಷ್ಟ ರಾಜಕೀಯ ಪಕ್ಷದ ಸಿದ್ಧಾಂತಕ್ಕೆ ಬದ್ದವಾಗಿ ನಡೆದುಕೊಳ್ಳಬೇಕಾದ ಹಂಗಿಗೆ ಬಿದ್ದ ಬಳಿಕವೂ, ತಾವು ಧರ್ಮಾಧಿಕಾರಿಗಳಾಗಿ ತಮ್ಮ ಸಮಾಜದ ಜನರಿಗೆ ಯಾವ ಧರ್ಮಬೋಧೆ ಮತ್ತು ದಾರ್ಶನಿಕತೆಯನ್ನು ತಿಳಿಸಿಕೊಡಲು ಸಾಧ್ಯ?

ಕಾವಿ ತೊಟ್ಟು ಬಸವಮೂರ್ತಿ ಮಾದಾರ ಚನ್ನಯ್ಯ ಎಂಬ ಹೆಸರಿಟ್ಟುಕೊಂಡಿರುವ ಕೃಷ್ಣಮೂರ್ತಿ, ಘನಶರಣರಾದ ಬಸವಣ್ಣ ಮತ್ತು ಮಾದಾರ ಚೆನ್ನಯ್ಯನವರ ಧ್ಯೇಯ – ತತ್ವಾದರ್ಶಗಳಿಗೆ ವಿರುದ್ಧವಾಗಿ ಯಾಕೆ ನಡೆದುಕೊಳ್ಳಬೇಕು? ಇವತ್ತು ರಾಜಕೀಯ ಪಕ್ಷಗಳ ಪರ ವಿರೋಧ ಚಿಂತನೆಗಳನ್ನು ಪ್ರಚಾರ ಮಾಡಿಕೊಂಡು ಗಬ್ಬೆದ್ದು ನಾರುತ್ತಿರುವ ರಾಜಕೀಯದ ಗಾಳಕ್ಕೆ ಸಿಲುಕಿದ ಮೀನಾಗಬೇಕೇನು ಈ ಸ್ವಾಮೀಜಿ? ಪುರೋಹಿತಶಾಹಿ ವ್ಯವಸ್ಥೆಗೆ ಕಾವಲು ನಾಯಿಯಾದ ಚೆನ್ನಯ್ಯನಂತಹ ಮತ್ತಾವ ಸ್ವಾಮೀಜಿಯನ್ನೂ ದಲಿತರಲ್ಲಿ ನಾಕಾಣೆನು. ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿಯು ವ್ಯಾವಹಾರಿಕವಾಗಿ ಮಾತ್ರ ಚೆನ್ನಯ್ಯನ ಹೆಸರು ಹೇಳಿಕೊಳ್ಳುತ್ತಾರೆಯೇ ವಿನಃ, ಆಂತರಿಕವಾಗಿ, ಧಾರ್ಮಿಕವಾಗಿ, ಬೌದ್ಧಿಕವಾಗಿ ಎಂದಿಗೂ ವಚನಕಾರ ಮಾದಾರ ಚೆನ್ನಯ್ಯನಂತೆ ಯೊಚಿಸಿದವರಲ್ಲ,.

ಯಾರೇ ಸ್ವಾಮೀಜಿಯಾದವರಿಗೆ ಬೇಕಿರುವುದು ರಾಜಕೀಯ ಪ್ರಜ್ಞೆಯೇ ಹೊರತು, ತಂತ್ರ ಪ್ರತಿತಂತ್ರ ವ್ಯೂಹದ ರಾಜಕೀಯವಲ್ಲ. ಎಲ್ಲಾ ರಾಜಕೀಯ ಪಕ್ಷಗಳಲ್ಲಿ ಹಾಗೂ ಎಲ್ಲಾ ತತ್ವ ಸಿದ್ಧಾಂತಗಳಲ್ಲಿ ದಲಿತರು ಇರುತ್ತಾರೆ. ಹೀಗಿರುವಾಗ ತಮ್ಮ ಸ್ವಾಮಿಗಳ ಮಾತು ಕೇಳಿಕೊಂಡು ದಲಿತರೆಲ್ಲರೂ ಪಕ್ಷರಾಜಕಾರಣಕ್ಕಿಳಿದು ಪರಸ್ಪರ ಕಚ್ಚಾಡಲು ಸಾಧ್ಯವಿಲ್ಲ. ಸ್ವಾಮಿಯಾದವನಿಗೆ ಬೇಕಾಗಿರುವುದು ಜನರ ಧಾರ್ಮಿಕ ಮತ್ತು ಆಧ್ಯಾತ್ಮಿಕ ಶ್ರದ್ಧೆಯೇ ಹೊರತು ಜನರ ರಾಜಕೀಯವಲ್ಲ.

ಈಗ ನಾನು ಹೇಳಹೊರಟಿರುವುದು ಬುದ್ಧಗುರು – ಬಸವಣ್ಣ – ಅಂಬೇಡ್ಕರ್ ಸಿದ್ಧಾಂತಗಳ ಬಗ್ಗೆ. ಕೋಮುವಾದದ ಬಗ್ಗೆ. ದಲಿತ ಸಮುದಾಯಗಳ ಸ್ವಾಭಿಮಾನವನ್ನು ಬ್ರಾಹ್ಮಣ್ಯದ ಅಮಲಿನಲ್ಲಿ ಹರಾಜು ಹಾಕುತ್ತಿರುವುದರ ಬಗ್ಗೆ. ದಲಿತ ಸಮುದಾಯವನ್ನು ಆರೆಸ್ಸೆಸ್ ಗೆ ಅಥವಾ ಸಂಘಪರಿವಾರಕ್ಕೆ ಮಾರ್ಟ್ಗೇಜ್ ಮಾಡಲು ಪ್ರಯತ್ನಿಸುತ್ತಿರುವುದರ ಬಗ್ಗೆ.
ದಲಿತರ ಸ್ವಾಬಿಮಾನ ನಮ್ಮ ಪೂರ್ವಿಕ ವೈಚಾರಿಕ ನಡೆಗಳನ್ನು ಬ್ರಾಹ್ಮಣ್ಯ ವಿರೋಧಿ ಬಂಡುಕೋರ ದಂಗೆಗಳನ್ನು ಗೌರವಿಸುವುದು ಮತ್ತು ಊರ್ಜಿತಗೊಳಿಸುವುದರಲ್ಲಿದೆ.

ವೈಯಕ್ತಿಕ ಸ್ವಾರ್ಥಕ್ಕಾಗಿ ಸಂಘಿಯಾಗಿರುವ ಬಸವಮೂರ್ತಿ ಮಾದಾರ ಚನ್ನಯ್ಯ, ಆರೆಸ್ಸೆಸ್ ಬೈಟಕ್ ಗಳನ್ನು ಚಿತ್ರದುರ್ಗದ ತನ್ನ ಮಠದಲ್ಲಿಯೇ ನಡೆಸುತ್ತಿರುವುದು ಎಲ್ಲರಿಗೂ ತಿಳಿದಿರುವ ಸಂಗತಿ. ಹೀಗಿರಲು ಬಸವಣ್ಣನಿಂದ ವಂದ್ಯನಾದ ಶರಣ ಮಾದಾರ ಚನ್ನಯ್ಯನಾಗುವ ಯೋಗ್ಯತೆಯಂತೂ ಇಲ್ಲದ ಬಳಿಕ, ಮತ್ತೊಮ್ಮೆ ಕೃಷ್ಣಮೂರ್ತಿ ಆಲಿಯಾಸ್ ಕಿಟ್ಟಿಯಾಗಲು ನಮಗಾವ ಆಕ್ಷೇಪವೂ ಇಲ್ಲ. ಕಿಟ್ಟಿ ಯಾವತ್ತಿಗೂ ಶರಣ ಮಾದಾರ ಚೆನ್ನಯ್ಯನಾಗಲಾರ.. ನಮ್ಮ ಬೊಟ್ಟು ನಮ್ಮ ಕಣ್ಣನ್ನೇ ಚುಚ್ಚುತ್ತಿರುವಾಗ ನನಗೆ ಪ್ರಶ್ನೆ ಕೇಳಿದ ಗೆಳೆಯರು ಈ ಸಾಮಾಜಿಕ ವಾಸ್ತವವನ್ನೇಕೆ ಅರ್ಥಮಾಡಿಕೊಳ್ಳುತ್ತಿಲ್ಲ. ಯಾವುದೇ ರಾಜಕೀಯ ಪಕ್ಷಕ್ಕೆ ಒತ್ತೆ ಬಿದ್ದ ಸ್ವಾಮಿಗಳು ಧರ್ಮ ಮತ್ತು ದಾರ್ಶನಿಕತೆಯನ್ನು ಕುರಿತು ಹೇಗೆ ಹೇಳಬಲ್ಲರು ಏನಂತ ಹೇಳಬಲ್ಲರು? ಬಸವಮೂರ್ತಿ ಮಾದಾರ ಚನ್ನಯ್ಯ ತಮ್ಮ ಪೀಠಕ್ಕೆ ರಾಜಿನಾಮೆ ಕೊಟ್ಟು ಫುಲ್ ಟೈಮ್ ಸಂಘಪರಿವಾರದ ಕಾರ್ಯಕರ್ತರಾಗಿರಲಿ ಯಾರು ಬೇಡ ಅಂತಾರೆ?

ಬಸವಮೂರ್ತಿ ಮಾದಾರ ಚೆನ್ನಯ್ಯ ಎಂಬ ಹೆಸರಿಟ್ಟುಕೊಂಡು ಕನಿಷ್ಟ ಆ ಹೆಸರಿಗಾದರೂ ಒಂದು ತೂಕ ಬರುವಂತಹ ಕಾರ್ಯಗಳನ್ನು ಮಾಡುವುದನ್ನು ಬಿಟ್ಟು ದಲಿತರ ಮತ್ತು ಅಲ್ಪಸಂಖ್ಯಾತರ ಆಹಾರದ ಹಕ್ಕನ್ನು ಕಿತ್ತುಕೊಳ್ಳುವ ಗೋಹತ್ಯಾ ನಿಷೇಧ ಅಜೆಂಡವನ್ನು ಬೆಂಬಲಿಸುವುದು, ರಾಮ ಮಂದಿರದ ನಿರ್ಮಾಣ ಕಾರ್ಯದಲ್ಲಿ ದಲಿತರು ಕೈಜೋಡಿಸಬೇಕೆನ್ನುವುದು, ಹೋಮ ಹವನ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದು, ಮತಾಂತರ ನಿಷೇಧ ಮಸೂದೆ ಜಾರಿಯಾಗಬೇಕೆಂದು ಒತ್ತಾಯಿಸುವುದು, ಹಿಂದೂ ಸಮಾಜೋತ್ಸವಗಳಲ್ಲಿ ಭಾಗವಹಿಸುವುದ ಇಂತಹವೇ ರೀತಿಯ ಸಂಘಪರಿವಾರದ ಅಜೆಂಡಾಗಳನ್ನು ಬೆಂಬಲಿಸುವ ಈ ಸ್ವಾಮೀಜಿಯ ಮನಸ್ಥಿತಿ ನೋಡಿದರೆ, ಈತ ನಿಜವಾಗಿಯೂ ದಲಿತ ಸಮುದಾಯದವನೇ, ಅಂಬೇಡ್ಕರ್ ಹೆಸರೆತ್ತಲು ಯೋಗ್ಯನೇ ಎಂಬ ಪ್ರಶ್ನೆ ಮೂಡುತ್ತದೆ. ಕೋಮುವಾದ ಮತ್ತು ಭ್ರಷ್ಟಾಚಾರದ ಮಹಾ ರೂಪಕದಂತಿರುವ ಯಡಿಯೂರಪ್ಪನನ್ನು ಶರಣ ಬಸವಣ್ಣನೊಂದಿಗೆ ಹೋಲಿಸುವುದು, ಲ್ಯಾಂಡ್ ಡೀಲಿಂಗ್ ಮುಂತಾದವೆಲ್ಲಾ ಸ್ವಾಮೀಜಿಯಾದವನಿಗೆ ಯಾಕೆ ಬೇಕು?

ಹೇಳಿಕೇಳಿ ಬಸವಮೂರ್ತಿ ಮಾದಾರ ಚೆನ್ನಯ್ಯ, ಚಿತ್ರದುರ್ಗದ ಮುರುಘರಾಜೇಂದ್ರ ಶರಣರ ಶಿಷ್ಯನಾಗಿ ಲಿಂಗದೀಕ್ಷೆ ಪಡೆದುಕೊಂಡವರು. ಇಷ್ಟಲಿಂಗವನ್ನು ಅಂಗದ ಮೇಲೆ ಧರಿಸಿದ ಶರಣರು, ದೇಹವನ್ನೇ ದೇವಾಲಯವೆಂದು ಭಾವಿಸಬೇಕಾಗಿಯೂ, ಚಿತ್ಕಳಾರೂಪ ಪ್ರಜ್ವಲನದ ಸಂಕೇತವಾದ ಕರಸ್ಥಲ ಲಿಂಗದ ಹೊರತು ಅನ್ಯ ಸ್ಥಾವರರೂಪಿ ದೇವಾಲಯಗಳಿಗೆ ಹೋಗಬಾರದಾಗಿಯೂ ಶರಣಧರ್ಮದ ವಚನ ಸಂವಿಧಾನ ತಿಳಿಸುತ್ತದೆ. ವಚನ ಸಂವಿಧಾನದ ಘನ ಉದ್ದೇಶವೇ ಜನರಲ್ಲಿ ವೈಚಾರಿಕತೆ, ವೈಜ್ಞಾನಿಕ ಮನೋಭಾವ ಮತ್ತು ಸಕಲ ಜೀವಮಂಡಲಕ್ಕೆ ಲೇಸು ಬಯಸುವ ಸಮದರ್ಶನ ಭಾವವನ್ನು ಜಾಗೃತಗೊಳಿಸುವುದಾಗಿದೆ. ಇಂತಹ ಶರಣಧರ್ಮದ ವೈಚಾರಿಕತೆಯ ದಾರಿಯಲ್ಲಿ ನಡೆಯಬೇಕಾದವರು ಪುರೋಹಿತಶಾಹಿಯು ಹೇರಿದ ಗೊಡ್ಡು ಆಚರಣೆಗಳು ಸಂಪ್ರದಾಯಗಳು ಮತ್ತು ವಿಚಾರಗಳನ್ನು ಪೋಷಿಸಲು ಮುಂದಾಗಿರುವುದು ವಿಷಾದನೀಯ ಸಂಗತಿ. ಗುಲಾಮಗಿರಿಯನ್ನು ಕಿತ್ತೊಗೆಯಬೇಕಾದ ಜನರೇ ಬ್ರಾಹ್ಮಣಶಾಹಿಯನ್ನು ಮುದ್ದುಮಾಡಲು ಹೋಗಿ ಪಾದಪೂಜೆ ರೂಪದಲ್ಲಿ ಮತ್ತೆ ಗುಲಾಮಿತನವನ್ನು ಹೇರಿಕೊಳ್ಳುವುದು ಸರಿಯೇನು?

ಆದಿಜಾಂಬವರ ಮಹಾ ದಾರ್ಶನಿಕನಾದ ಮಾತಂಗಮುನಿ ಬ್ರಾಹ್ಮಣ್ಯದ ವಿರುದ್ಧ ಬಂಡೆದ್ದವನು. ಬುದ್ಧಗುರು ಬ್ರಾಹ್ಮಣ್ಯದ ವಿರುದ್ಧ ಹೋರಾಡಿದವನು. ಬಸವಣ್ಣ ದಂಗೆ ಎದ್ದದ್ದೂ ಇದೇ ಬ್ರಾಹ್ಮಣ್ಯದ ವಿರುದ್ಧ. ಕುವೆಂಪು, ಪೆರಿಯಾರ್, ನಾರಾಯಣ ಗುರು ಮುಂತಾದವರು ಸೆಣೆಸಿದ್ಷು ಇದರ ವಿರುದ್ಧವೇ. ಹೀಗಿರಲು ಚೆನ್ನಯ್ಯ ಈ ಬ್ರಾಹ್ಮಣ್ಯದ ಕಾವಲು ನಾಯಿ ಆಗಬೇಕೇನು? ನಮಗೆ ನಮ್ಮ ತಳಸ್ತರರ ಬಹು ಸಂಸ್ಕೃತಿ ಮತ್ತು ಪರಂಪರೆ ಮುಖ್ಯವೋ ಅಥವಾ ಬಹುತ್ವಕ್ಕೆ ವಿರೋಧಿಯಾದ ಏಕಾಕಾರಿ ವೈದಿಕ ಸಂಸ್ಕೃತಿಯ ಭಜನೆ ಮಾಡುವುದು ಮುಖ್ಯವೋ..? ಇಡೀ ರಾಜ್ಯದ ಪ್ರಜ್ಞಾವಂತ ಪ್ರಜ್ಞಾವಂತರು ಸಮಾನತೆಯ ಆಸೆಯಿಂದ ಲಿಂಗಾಯತ ಧರ್ಮದ ನಿರೀಕ್ಷೆಯಲ್ಲಿದ್ದರೆ, ಮಾದಾರ ಚೆನ್ನಯ್ಯನು ಪುರೋಹಿತಶಾಹಿಯ ಗುಲಾಮಗಿರಿ ಮಾಡುತ್ತಾ ಬ್ರಾಹ್ಮಣ್ಯದ ಕೊಚ್ಚೆ ಮೋರಿಯಲ್ಲಿಯೇ ಸುಖ ಅನುಭವಿಸುತ್ತಾ ಇದ್ದಾರೆಂದರೆ ಏನು ಹೇಳೋಣ?

ಲೇಖಕರು – ಡಾ. ವಡ್ಡಗೆರೆ ನಾಗರಾಜಯ್ಯ
ಬೆಂಗಳೂರು
ಮೊ.ಸಂ : 8722724174

ದಿನದ ಸುದ್ದಿ

ಭಾರತದ ಜನಸಂಖ್ಯೆ ವರವೋ..? ಶಾಪವೋ..?

Published

on

ಸಾಂದರ್ಭಿಕ ಚಿತ್ರ

 

  • ಅಂಬಿಕಾ. ಕೆ
    ಎಂ.ಎ. ಪ್ರಥಮ ವರ್ಷದ ವಿದ್ಯಾರ್ಥಿನಿ
    ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ
    ಬೆಂಗಳೂರು ವಿಶ್ವವಿದ್ಯಾಲಯ

 

ವಿಶ್ವ ಸಂಸ್ಥೆಯು ಪಾಪುಲೇಷನ್ ಫಂಡ್ ಮಾಡಿರುವ ಅಂದಾಜಿನ ಪ್ರಕಾರ ಭಾರತವು ಜಗತ್ತಿನ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ ಎನಿಸಿಕೊಂಡಿದೆ.

ದೇಶದ ಒಟ್ಟು ಜನಸಂಖ್ಯೆಯು 142.86 ಕೋಟಿಗೆ ಏರಿಕೆಯಾಗಿದ್ದು, ಚೀನಾ ಎರಡನೇ ಸ್ಥಾನಕ್ಕೆ ಇಳಿದಿದೆ, ಇಂತಹದೊಂದು ಹಿರಿಮೆಗೆ ಭಾರತವು ಪಾತ್ರವಾಗಲಿದೆ ಎಂಬುದರ ಅರಿವು ಹಿಂದೆಯೇ ಇತ್ತು. ಹೊಸ ಭಾರತದ ಜನಸಂಖ್ಯೆಯ ಸ್ವರೂಪವೇನು ಮತ್ತು ಯಾವ ವಯೋ ಮಾನದವರು ಎಷ್ಟಿದ್ದಾರೆ. ಆದಾಯ ಮಟ್ಟ ಹೇಗಿದೆ, ಆದಾಯ ಹಂಚಿಕೆ ಹೇಗಿದೆ ಎಂಬುದರ ಕುರಿತು ಕೂಡ ಚರ್ಚೆಗಳು ನಡೆಯುತ್ತಿವೆ. ಒಟ್ಟು ಜನಸಂಖ್ಯೆಯ ಜತೆಗೆ ಈ ಎಲ್ಲಾ ಅಂಶಗಳು ಕೂಡ ಸರ್ಕಾರದ ನೀತಿಗಳು ಮತ್ತು ಕಾರ್ಯಕ್ರಮ ರೂಪಿಸುವಿಕೆ ಮೇಲೆ ಪ್ರಭಾವ ಬೀರುತ್ತವೆ. ರಾಜಕೀಯ ಪಕ್ಷಗಳು ಮತ್ತು ಗುಂಪುಗಳು ರಾಜಕೀಯ ಹಾಗೂ ಸಾಮಾಜಿಕ ಸ್ಥಾನಗಳನ್ನು ನಿರ್ಧರಿಸುವಲ್ಲಿಯೂ ಈ ಅಂಶಗಳು ಪಾತ್ರವಹಿಸುತ್ತವೆ ಭಾರತದಲ್ಲಿ ಗರಿಷ್ಠ ಸಂಖ್ಯೆಯು ಯುವ ಜನರಿದ್ದಾರೆ.

ಹಾಗೆಯೇ ಮುಂದುವರೆಯಲಿದೆ 15 ರಿಂದ 24 ವರ್ಷದೊಳಗಿನವರ ಸಂಖ್ಯೆಯು 25.4 ಕೋಟಿ ಎಂದು ಅಂದಾಜಿಸಲಾಗಿದೆ ಇನ್ನು ದೀರ್ಘಕಾಲ ಭಾರತವು ಈ ಸ್ಥಿತಿ ಕಾಯ್ದುಕೊಳ್ಳಲಿದೆ ಎಂಬುದರಲ್ಲಿಯೂ ಅನುಮಾನ ಇಲ್ಲ ಜನಸಂಖ್ಯೆಯಲ್ಲಿ ಜಗತ್ತಿನಲ್ಲಿ ಮೊದಲ ಸ್ಥಾನಕ್ಕೆ ಏರುವುದು, ಗೌರವ ಏನು ಅಲ್ಲ ಬದಲಿಗೆ ಇದು ದೇಶಕ್ಕೆ ಹಲವು ಸವಾಲುಗಳನ್ನು ಹುಟ್ಟುತ್ತದೆ ಜತೆಗೆ ಅವಕಾಶಗಳ ಬಾಗಿಗಳನ್ನು ತೆರೆಯುತ್ತದೆ ಆದರೆ, ಜನರನ್ನು ಸಕಾಲಿಕವಾಗಿ ಮತ್ತು ಪರಿಣಾಮಕಾರಿಯಾಗಿ ಬಲಿಸಿಕೊಳ್ಳದೆ ಇದ್ದರೆ ಜನಸಂಖ್ಯೆಯೇ ಶಾಪವಾಗಿ ದೊಡ್ಡ ಸವಾಲಾಗಿ ಪರಿಣಮಿಸಬಹುದು. ದೇಶ ಪ್ರತಿ ವರ್ಷವೂ ಹೆಚ್ಚು ಹೆಚ್ಚು ಜನರಿಗೆ ಆಹಾರ ಬಟ್ಟೆ ಶಿಕ್ಷಣ ಆರೋಗ್ಯ ಸೇವೆ ಉದ್ಯೋಗಾವಕಾಶಗಳನ್ನು ಒದಗಿಸಬೇಕಾಗುತ್ತದೆ.

ಅಂಬಿಕಾ. ಕೆ

ಹೀಗೆ ಮುಂದುವರೆದರೆ ಉದ್ಯೋಗಾವಕಾಶಗಳು ದೊರೆಯದೆ ಜನರ ಜೀವನ ಮಟ್ಟ ಸುಧಾರಿಸಿಕೊಳ್ಳುವುದು ಕಷ್ಟವೇ ಸರಿ ಕೆಲಸ ಮಾಡುವ ವಯೋಮಾನದ ಜನರನ್ನು ಸಮಂಜಸವಾಗಿ ಬಳಸಿಕೊಂಡರೇ ಮಾತ್ರ ಜನಸಂಖ್ಯೆಯು ದೇಶದ ಅಭಿವೃದ್ಧಿಗೆ ಪೂರಕವಾಗಿ ಪರಿಣಮಿಸುತ್ತದೆ. ದೇಶದಲ್ಲಿ ದೊಡ್ಡ ಸಂಖ್ಯೆಯ ಜನರಿಗೆ ಈಗಲೂ ಮೂಲ ಸೌಲಭ್ಯಗಳನ್ನು ಒದಗಿಸಲು ಸಾಧ್ಯವಾಗಿಲ್ಲ ಆದ್ದರಿಂದ ಎಲ್ಲಾ ಕ್ಷೇತ್ರಗಳಲ್ಲಿಯೂ ಸಂಬಂಧಿಸಿದ ನೀತಿಗಳು ಮತ್ತು ಕಾರ್ಯತಂತ್ರ ಗಳಿಗೆ ಸಂಬಂಧಿಸಿದ ಪ್ರಯತ್ನಗಳನ್ನು ನಡೆಸದೇ ಇದ್ದರೆ ಜನಸಂಖ್ಯೆ ಹೆಚ್ಚಳದ ಲಾಭವು ದೊರೆಯದೆ ಹೋಗಬಹುದು ಇದರ ಪರಿಣಾಮವಾಗಿ ಲಾಭದ ಹೆಸರಿನಲ್ಲಿ ನಷ್ಟವೇ ಹೆಚ್ಚು ಅದುವೇ ಒಂದು ಹೊರೆಯುವಾಗಬಹುದು.

ಯುವ ಜನರಿಗೆ ಸೌಲಭ್ಯಗಳು ಮತ್ತು ಅವಕಾಶಗಳನ್ನು ಸೃಷ್ಟಿಸುವುದರ ಜೊತೆಗೆ ಹೆಚ್ಚುತ್ತಲೇ ಇರುವ ಹಿರಿಯ ನಾಗರಿಕರ ಹಾರೈಕೆಯು ವ್ಯವಸ್ಥೆ ಮಾಡಬೇಕಿದೆ ಅವಕಾಶಗಳನ್ನು ಸದುಪಯೋಗ ಮಾಡಿಕೊಳ್ಳುವುದು ಮತ್ತು ಸವಾಲುಗಳನ್ನು ಎದುರಿಸುವುದು ಭಾರತೀಯರ ಹೊರೆಗಾರಿಕೆ ದೇಶದ ಜನರ ಅಗತ್ಯಗಳನ್ನು ಪೂರೈಸಲು ವಿಫಲವಾದರೆ, ಸಾಮಾಜಿಕ ಸಂಘರ್ಷ ಮತ್ತು ರಾಜಕೀಯ ದೃಷ್ಟಿ ಉಂಟಾಗಿ ಅದು ಗಂಭೀರ ಪರಿಣಾಮಗಳಿಗೆ ಕಾರಣವಾಗಬಹುದು. ಮುಂದೆ ಜನಸಂಖ್ಯಾ ಸ್ಫೋಟವಾದರೂ ಆಶ್ಚರ್ಯ ಪಡಬೇಕಾಗಿಲ್ಲ ಈಗಿನ ಸನ್ನಿವೇಶದಲ್ಲಿ ದೊರಕುತ್ತಿರುವ ಸಂಪನ್ಮೂಲಗಳ ಗರಿಷ್ಠ ಬಳಕೆ ಮತ್ತು ಪರಿಣಾಮಕಾರಿ ಬಳಕೆ ಬಹಳ ಮಹತ್ವವಾಗಿದೆ.

ಮೀಸಲಾತಿ, ವಲಸೆ , ರಾಜಕೀಯ ಪ್ರಾತಿನಿಧ್ಯ ಸಂಪನ್ಮೂಲಗಳ ಹಂಚಿಕೆ ಮತ್ತು ಇದರ ವಿಚಾರಗಳು ಚರ್ಚೆಗೆ ಒಳಗಾಗುವ ಸಾಧ್ಯತೆ ಇದೆ ಸಮಾಜದ ಎಲ್ಲಾ ವರ್ಗಗಳನ್ನು ಸಮಾನವಾಗಿ ಒಳಗೊಳ್ಳುವ ಆರ್ಥಿಕ ಪ್ರಗತಿಯು ಸಾಧ್ಯವಾದರೆ ಜನಸಂಖ್ಯೆ ಏರಿಕೆ ಸವಾಲಾಗಿ ಪರಿಣಮಿಸಬಹುದು ಮಾನವ ಅಭಿವೃದ್ಧಿಯೇ ಅತ್ಯುತ್ತಮ ಕುಟುಂಬ ಕಲ್ಯಾಣ ಯೋಜನೆ ಇದರಿಂದ ಜನಸಂಖ್ಯೆಯ ಏರಿಕೆಯನ್ನು ನಿಯಂತ್ರಣದಲ್ಲಿ ಇರಿಸಿಕೊಳ್ಳಬಹುದು ಜನಸಂಖ್ಯೆ ಹೆಚ್ಚಳ ಯಾವುದೋ ಒಂದು ಸಮುದಾಯ ಕಾರಣ ಎಂದು ದೂಷಿಸುವ ಪ್ರವೃತ್ತಿಗೆ ಜ್ಞಾನದಾದ ಆಧಾರ ಇಲ್ಲದ ಪೂರ್ವಗ್ರಹ ಕಾರಣದಿಂದ ಮತ್ತು ಇದು ತಪ್ಪು ನಡವಳಿಕೆಯ ಜನಸಂಖ್ಯೆಗೆ ಸಂಬಂಧಿಸಿದ ಸವಾಲುಗಳನ್ನು ಉತ್ತಮವಾಗಿ ಮತ್ತು ಜಾಣ್ಮೆಯಿಂದ ನಿರ್ವಹಿಸಿದರೆ ಈ ಶತಮಾನವನ್ನು ಭಾರತದ ಶತಮಾನವನ್ನಾಗಿ ಪರಿವರ್ತಿಸುವ ಅವಕಾಶ ನಮ್ಮ ಮುಂದೆ ಇದೆ ಜನರೇ ನಮ್ಮ ದೇಶದ ಸಂಪನ್ಮೂಲವನ್ನಾಗಿ ಮಾರ್ಪಾಡು ಮಾಡಿಕೊಳ್ಳುವ ಅವಕಾಶ ನಮ್ಮ ನಿಮ್ಮೆಲ್ಲರ ಮೇಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಾಬಾ ಸಾಹೇಬ ಅಂಬೇಡ್ಕರರ ‘ಧ್ಯಾನ’ ಗಾಯನ ; ವಿನೂತನ

Published

on

 

  • ವೆನ್ನೆಲಾ ಕೆ.
    ಎಂ.ಎ. ಪ್ರಥಮ ವರ್ಷದ ವಿದ್ಯಾರ್ಥಿನಿ,
    ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ,
    ಬೆಂಗಳೂರು ವಿಶ್ವವಿದ್ಯಾಲಯ,ಬೆಂಗಳೂರು

ತ್ತೀಚೆಗೆ ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ಅನನ್ಯ ಮಾಧ್ಯಮ ಮತ್ತು ಬೆಳ್ಳಿತೆರೆ ಸಂಸ್ಥೆಯ ವತಿಯಿಂದ ಆಯೋಜಿಸಿದ 132ನೇ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ರವರ ಜನುಮ ನಿಮಿತ್ತವಾಗಿ “ಧಾನ್ಯ” ‘ಗಾಯನವು’ ವಿನೂತನವಾದ ಈ ಕಾರ್ಯಕ್ರಮವು 5 ಘಂಟೆ, 1ನಿಮಿಷ, 14 ಸೆಕೆಂಡ್ ಗೆ ಆರಂಭವಾಗಿದ್ದು ಅವಿಸ್ಮರಣೀಯವಾದ ದಿನ, ಇದೊಂದು ಭಾರತ ಇತಿಹಾಸದ ಪುಟದ ಚರಿತ್ರೆಯಲ್ಲೇ ಹೊಸ ದಾಖಲೆಯೂ ಅಂತ ಹೇಳಬಹುದು.

ಈ ಕಾರ್ಯಕ್ರಮವನ್ನು ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ವು ಇಡೀ ಭಾರತದಲ್ಲೇ ಯಾರು ಮಾಡಿರದ ಈ ವಿನೂತವಾದ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ಬೆಂಗಳೂರು ನಗರದಲ್ಲಿರುವ ಗಾಂಧಿ ಭವನದ ಆವರಣದಲ್ಲಿ ‘ಅನನ್ಯ ಸಂಸ್ಥೆ’ ವತಿಯಿಂದ 132 ನೇ ‘ವಿಶ್ವದ ವೀರ ವಿದ್ಯಾರ್ಥಿ ಹುಟ್ಟಿದ ದಿನ’ ಹಾಗೂ ‘ರಾಷ್ಟ್ರದ ಸ್ಫೂರ್ತಿಯ ದಿನ’ ‘ಸರ್ವ ಸಮುದಾಯದ ಶಕ್ತಿಯ ದಿನ’ ಇದೊಂದು ನಮ್ಮೆಲ್ಲರ ಹಬ್ಬದ ದಿನ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಇಂತಹ ಮೇರು ಶಿಖರ ಟ್ಯಾಗ್ ಲೈನ್ ಗಳಿಂದ ಅದ್ಭುತವಾಗಿ
ಆಯೋಜಿಸಿದ ಕಾರ್ಯಕ್ರಮಕ್ಕೆ ರಾಜ್ಯ ಕಂಡ ಪ್ರಸಿದ್ಧ ಐಪಿಎಸ್ ಅಧಿಕಾರಿಗಳು, ಸರ್ಕಾರಿ ಅಧಿಕಾರಿಗಳು, ಸಿನಿಮಾ ಸೆಲೆಬ್ರಿಟಿಗಳು, ಸಮಸ್ತ ವಿದ್ಯಾರ್ಥಿ ಸಮೂಹ, ಸಾಮಾಜಿಕ ನ್ಯಾಯದ ವಿಚಾರಶೀಲರು, ಬರಹಗಾರರು, ಪತ್ರಕರ್ತರು ಇನ್ನೂ ಅನೇಕ ಮುಂತಾದವರು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ಇದಕ್ಕೆ ಮುಖ್ಯ ಕಾರಣಕರ್ತರಾದ ಅನನ್ಯ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಶ್ರೀ ರಾಂಪುರ ರಾಜೇಶ್ ರವರ ನಿರ್ದೇಶನದಲ್ಲಿ ಇಂತಹ ಕಾರ್ಯಕ್ರಮ ಆಯೋಜಿಸಿದ್ದು ಹೆಮ್ಮೆಯ ವಿಷಯ.

ಇದರ ಹಿನ್ನೆಲೆ: ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ದಲ್ಲಿ ಅತ್ಯುತ್ತಮ ಹಾಗೂ ಅತ್ಯಂತ ತುಂಬಾ ಮನಸ್ಸಿನಿಂದಲ್ಲೇ ವಿಶೇಷವಾದ ಆಸಕ್ತಿಯನ್ನು ಅಂಬೇಡ್ಕರ್ ರವರು ಸಂಗೀತ ಪ್ರಿಯರು ಹಾಗೂ ಅಂಬೇಡ್ಕರ್ ರವರು ಸುಶ್ರಾವ್ಯವಾಗಿ ವಯಲಿನ್ ನುಡಿಸುತ್ತಿದ್ದರು. ಹಾಗೇಯೆ ಇವರಿಗೆ ಚಿತ್ರಕಲೆಯೂ ಸಹ ಒಲಿದಿತ್ತು ಎಂಬುದು ಗಮನಾರ್ಹ ಸಂಗತಿ. ಇಂತಹ ವಿಷಯವನ್ನು ಯಾರು ಸಹ ಬೆಳಕು ಚೆಲ್ಲುವ ಸಾಹಸಕ್ಕೆ ಕೈ ಹಾಕಿ ಇರಲಿಲ್ಲ. ಇದೊಂದು ಅನನ್ಯ ಸಂಸ್ಥೆ ವತಿಯಿಂದ ಇಂತಹ ಕಾರ್ಯಕ್ರಮ ನಡೆಸಿಕೊಟ್ಟಿದ್ದು ಐತಿಹಾಸಿಕ ಚರಿತ್ರೆಗೆ ಮುನ್ನುಡಿವಾಗಿದೆ.

ಅಂಬೇಡ್ಕರ್ ರವರಿಗೆ ತಮ್ಮ ಬಿಡುವಿನ ವೇಳೆಯಲ್ಲಿ ಅದ್ಭುತವಾದ ಒಬ್ಬ ಸಂಗೀತ ಪ್ರಿಯರಾಗಿದ್ದರು. ಇವರು ಸುಶ್ರಾವ್ಯವಾಗಿ ವಯಲಿನ್ ನುಡಿಸುತ್ತಿದ್ದರು ಹಾಗೂ ವಿಶೇಷವಾಗಿ ಚಿತ್ರಕಲೆ ಸಹ ಸರಳವಾಗಿ ಮಾಡುವ ಮೂಲಕ ತಮ್ಮ ಮನದಲ್ಲಿ ಆಸಕ್ತಿ ಹೊಂದಿದ್ದರು. ಇನ್ನು ಹಲವಾರು ವಿಷಯದಲ್ಲಿ ಅಂದರೆ ಅಂಬೇಡ್ಕರ್ ರವರಿಗೆ ವಿಶೇಷವಾದ ಇವುಗಳಲ್ಲಿ ಆಸಕ್ತಿ ಮತ್ತು ಅಭಿರುಚಿಯನ್ನು ಹೊಂದಿದ್ದರು ಎಂಬುದನ್ನು ಮನಗಂಡ ಅನನ್ಯ ಸಂಸ್ಥೆಯ ವತಿಯಿಂದ ಆಯೋಜಿಸಿದ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮವು ಅತ್ಯುತ್ತಮವಾಗಿ ಮೂಡಿಬಂದಿದೆ.

ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮದಲ್ಲಿ ವಿಶೇಷವಾಗಿ ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕರು ಹಾಗೂ ಚಿತ್ರ ಸಾಹಿತ್ಯಗಳು, ಅಂಬೇಡ್ಕರ್ ವಾದಿಗಳು ಮತ್ತು ಚಿತ್ರರಂಗದ ಬಹುಮುಖ ಪ್ರತಿಭೆ, ಮಹಾಗುರುಗಳಾದ ಡಾ. ಹಂಸಲೇಖ ರವರು ಹೊಸದಾಗಿ ಹಾಡನ್ನು ಬರೆದದ್ದು ತುಂಬಾ ಅವಿಸ್ಮರಣೀಯ ಅಂತ ಹೇಳಬಹುದು. ಇವರು ಇದೇ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪ್ರೊತ್ಸಾಹ ನೀಡಿದ್ದು, ಸರ್ವ ಸಮುದಾಯದಕ್ಕೆ ಹೊಸ ಶಕ್ತಿ ತುಂಬಿದ್ದು ಮೇರು ವ್ಯಕ್ತಿಯಾಗಿದ್ದಾರೆ.

ವೆನ್ನೆಲಾ ಕೆ.

ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮದಲ್ಲಿ ಮುಖ್ಯವಾದ ಅಂಶವೆಂದರೆ ಇದರಲ್ಲಿ ಒಟ್ಟು ನಾಲ್ಕು ಭಗವಾನ್ ಬುದ್ಧ, ಅಂಬೇಡ್ಕರ್, ಬಸವೇಶ್ವರ ಮುಂತಾದರವರನ್ನು ವಿಷಯಗಳನ್ನು ಪರಿಗಣಿಸಿ ಅಂಬೇಡ್ಕರ್ ಧ್ಯಾನ ಹಾಡುಗಳ ರಚಿಸಿವುದರಲ್ಲಿ ಪ್ರಮುಖವಾಗಿ ರಾಜ್ಯದ ಹೆಸರಾಂತ ಸಾಹಿತಿ, ಪ್ರಗತಿಪರ ಚಿಂತಕರು ಹಾಗೂ ಮಾಜಿ ಅಧ್ಯಕ್ಷರಾದ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರಿನ ಪ್ರೊ.ಎಸ್.ಜಿ.ಸಿದ್ದರಾಮಯ್ಯನವರ
‘ಧೀ ಶಕ್ತಿಯೇ … ಜ್ಞಾನ ಪರ್ವತದ … ಧೀಮಂತ ಧೀಶಕ್ತಿಯೇ …
ಇಂತಹ ಸಾಲುಗಳನ್ನು, ಡಾ. ಕೈ.ವೈ.ನಾರಾಯಣಸ್ವಾಮಿರವರ ದೀಪಾ …. ಎಲ್ಲರೆದೆಯಲಿ … ಹಚ್ಚಿದ ದೀಪಾ .. ಭೂಪಾ … ಭೂಪಾ … ಭೀಮಾ ಭೂಪಾ .. ಬಾಬಾ .. ಸಾಹೇಬ್.. ಜೀವಸ್ವರವೇ … ಬಾಬಾ.. ಹಾಗೂ ರವಿ ಮರಿಯಪ್ಪರವರ ಹತ್ತು ಸಾವಿರ ವಯಲಿನನ್ನು … ವೀಣೆಗಳು ನೂರೆಂಟು … ಕೋಟಿ ಕೋಟಿ ಎದೆ ಸದ್ದಿನ ಡೊಳ್ಳು … ಸಂಯೋಜಿಸಿದರೇ .. ಸಂವಿಧಾನಾ … ಮತ್ತು ಚಿತ್ರ ಸಾಹಿತಿ, ಹೆಸರಾಂತ ಸಂಗೀತ ನಿರ್ದೇಶಕರು ಡಾ. ಹಂಸಲೇಖ ರವರು ನಿನ್ನ ಮೌನಾ … ದೀನ ಗಾನಾ… ನಿನ್ನ ಧ್ಯಾನಾ .. ಸಂವಿಧಾನಾ … ಈ ನಾಲ್ಕು ಅಂಬೇಡ್ಕರ್ ಧ್ಯಾನ ರಚನೆಗೆ ಇವರುಗಳ ಬರೆದಿರುವ ಅದ್ಭುತವಾದ ಅಂಬೇಡ್ಕರ್ ರವರ ಧ್ಯಾನ ಹಾಡುಗಳನ್ನು ನಮ್ಮ ಹಿಂದುಸ್ತಾನಿ ಸಂಗೀತ ಹಾಡುಗಳ ಮೂಲಕ ಕನ್ವರ್ಟ್ ಮಾಡುವ ಮೂಲಕ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿತು.

ಹಾಗೆಯೇ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮವು ಬಹಳಷ್ಟು ಯಶಸ್ವಿಯಾಗಬೇಕಾದರೆ ಈ ಮೊದಲು ಪುಟ್ಟರಾಜ ಗವಾಯಿಗಳ ಆಪ್ತ ಶಿಷ್ಯರಲ್ಲಿ ಒಬ್ಬರಾದ ವಿದ್ವಾನ್ ಶ್ರೀ ಡಿ. ಕುಮಾರ್ ದಾಸ್ ಅವರ ವಿದ್ವತ್ ಶರೀರದಲ್ಲಿ ‘ಧ್ಯಾನ ಗಾಯನ’ ಹಾಗೂ ಇವರ ತಂಡದ ವತಿಯಿಂದ ನಡೆಸಿಕೊಟ್ಟ ಅದ್ಭತವಾದ ಅಂಬೇಡ್ಕರ್ ರವರ ಧ್ಯಾನವು ಹಿಂದುಸ್ತಾನಿ ಸಂಗೀತದ ಕನ್ವರ್ಟ್ ಮಾಡುವ ಮುಖಾಂತರ ಈ ಹಾಡುಗಳನ್ನು ಬಹಳ ಸೊಗಸಾಗಿ ಮೂಡಿಬಂದಿದ್ದು ಹೊಸ ದಾಖಲೆಗೆ ಸೇರ್ಪಡೆಯಾಗಿದೆ.

ಇನ್ನು ಮುಂಬರುವ ದಿನಗಳಲ್ಲಿ ಅದಷ್ಟು ಹಲವಾರು ವಿನೂತನವಾದ ಭಗವಾನ್ ಬುದ್ಧರ, ಬಸವೇಶ್ವರರ ಹಾಗೂ ವಿಶ್ವದ ವೀರ ವಿದ್ಯಾರ್ಥಿಯಾದ ಮೇರು ರಾಷ್ಟ್ರದ
ನಾಯಕರಾದ ಬಾಬಾಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ರವರ ಹಲವಾರು ಹಾಡುಗಳನ್ನು
ಅನನ್ಯ ಮಾಧ್ಯಮ ಮತ್ತು ಬೆಳ್ಳಿತೆರೆ ಸಂಸ್ಥೆಯ ವತಿಯಿಂದ ಆಯೋಜಿಸಿದರೆ ಇನ್ನುಷ್ಟು ಭಾರತದ ಇತಿಹಾಸದ ಪುಟಗಳಲ್ಲಿ ಮರೆತು ಹೋಗಿರುವ ಹಲವು ಬಗ್ಗೆ ದಾಖಲೆ ಇಲ್ಲದ ನೈಜ ಸಂಗತಿಗಳನ್ನು ಪುನಃ ಹೊಸ ದಾಖಲೆಗೆ ಉಪಯುಕ್ತವಾದ ವಿಶಿಷ್ಟವಾದ ಮೇರು ನಾಯಕನ
ಅಂಬೇಡ್ಕರ್ ರವರ ವಿಚಾರ ಧಾರೆಗಳು ತಾವು ಅನುಭವಿಸಿದ ನೋವು, ನಲಿವು, ಭಾರತದ ರಾಜ್ಯಾಂಗದ ಶಿಲ್ಪಿಯನ್ನು ಮುಂಬರುವ ದಿನಗಳಲ್ಲಿ ಹೊಸ ಪೀಳಿಗೆಯ ಪರಿಚಯಿಸುವ ಕೀರ್ತಿದಾಯಿಕವಾಗಲಿ ಮತ್ತು ಅದಷ್ಟು ಮುಂಬರುವ ದಿನಗಳಲ್ಲಿ ಅಂಬೇಡ್ಕರ್ ರವರ ಆಸಕ್ತಿದಾಯಕ ವಿಚಾರಗಳು ಹಾಗೂ ಸಂಗೀತದ ಬಗ್ಗೆ ಹಲವಾರು ಮಾಹಿತಿಗಳು ಸಮಸಮಸಮಾಜಕ್ಕೆ ತಲುಪುವ ವ್ಯವಸ್ಥೆಗೆ ಸಾಕ್ಷಿಯಾಗಲಿ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಬಹಿರಂಗ

ರಷ್ಯಾದಲ್ಲಿ ಓಂ – ಭರತಾಸ್- ರಾಮ – ರಾವಣ ಲಂಕೇಶ – ಮಾರೀಚ – ಸೀತ ನದಿಗಳು..!

Published

on

  • ಲಕ್ಷ್ಮೀಪತಿ ಕೋಲಾರ, ಸಂಶೋಧಕರು, ಸಂಸ್ಕೃತಿ‌ ಚಿಂತಕರು, ಬೆಂಗಳೂರು

ಸ್ಲಾವ್ ಸಮುದಾಯದ ಲಿತುವೇನಿಯ, ಲಾತ್ವಿಯ, ಬೆಲಾರಸ್,ಉಕ್ರೇನ್ ಮತ್ತು ರಷಿಯಾದಂತಹ ದೇಶಗಳ ನದಿ,ನಗರಗಳು ಸಂಸ್ಕೃತ ಮೂಲದ ಹೆಸರುಗಳನ್ನೆ ಇಂದಿಗು ಉಳಿಸಿಕೊಂಡಿರುವುದು ಆ ಭಾಷೆ ಮತ್ತು ಸಂಬಂಧಿತ ಸಂಸ್ಕೃತಿಯೊಂದಿಗೆ ಅವು ಹಿಂದೊಮ್ಮೆ ಹೊಂದಿದ್ದ ಬಲವಾದ ನಂಟಿಗೆ ಸಾಕ್ಷಿಯಾಗಬಲ್ಲವು.

ಇದರೊಂದಿಗೆ ಉತ್ತರ ಭಾರತದ ಆರ್ಯ ವೈದಿಕರ ಭಾಷೆ ಸಂಸ್ಕೃತಿಯೊಂದಿಗೆ ಸ್ಲಾವ್ ಸಮುದಾಯಕ್ಕೆ ಎಷ್ಟು ನಿಕಟ ಸಂಬಂಧವಿತ್ತೆಂಬುದನ್ನು ಮತ್ತು ನಾಲ್ಕೈದು ಸಾವಿರ ವರ್ಷಗಳ ಹಿಂದೆ ಈ ಎಲ್ಲ ಆರ್ಯ ಸಮುದಾಯಗಳು ಒಟ್ಟಿಗೆ ಒಂದೆಡೆಯೇ ಕಳ್ಳುಬಳ್ಳಿಗಳಾಗಿ ಜೀವಿಸಿದ್ದರೆಂಬುದನ್ನ ಈ ಹಿನ್ನೆಲೆಯಲ್ಲಿ ನಾವು ಗ್ರಹಿಸಬಹುದಾಗಿದೆ.

ಅದರಲ್ಲು ವಿಶೇಷವಾಗಿ ಲಿತುವೇನಿಯ ಮತ್ತು ರಷಿಯಾದ ನದಿಗಳ ಹೆಸರುಗಳು ಎಷ್ಟು ಸಂಸ್ಕೃತಮಯವು (ಇಂಡೋ – ಯುರೋಪಿಯನ್ ಭಾಷಾಮೂಲದ) ಮತ್ತು ವೈದಿಕರ ಪುರಾಣ ಮೂಲದವು ಆಗಿವೆ ಎಂದರೆ, ನಂಬಲಿಕ್ಕು ಅಸಾಧ್ಯ ಎಂಬಂತಿವೆ. ಇದರರ್ಥ ಸ್ಲಾವ್ ಜನರು ವೈದಿಕರ ಪುರಾಣಗಳಿಂದ ಪ್ರೇರಿತಗೊಂಡಿದ್ದಾರೆ ಎಂಬುದಲ್ಲ.

ಬದಲಿಗೆ ವೈದಿಕರ ಇಂದಿನ ಪುರಾಣ – ಸಂಸ್ಕೃತಿ – ಭಾಷೆಗಳು ವೈದಿಕರಿಗೆ ಎಷ್ಟು ಸಂಬಂಧಿಸಿದ್ದೋ ಅದಕ್ಕು ಹೆಚ್ಚಿನದಾಗಿ ಸ್ಲಾವ್ ಸಮುದಾಯಕ್ಕೂ ಸಂಬಂಧಿಸಿದ್ದಾಗಿದ್ದವು. ಹಾಗೆ ನೋಡಿದರೆ ಬ್ರಹ್ಮ – ವೇದ ಮೂಲವು ಕೂಡ ಸ್ಲಾವ್ ಸಮುದಾಯದ ಉತ್ತರ ಧ್ರುವ ಪ್ರದೇಶಕ್ಕೆ ಹೋಗಿ ನಿಲ್ಲುತ್ತದೆ ಎಂಬುದು ಸೋಜಿಗವಾದರು ನಿರ್ವಿವಾದವಾಗಿ ಚಾರಿತ್ರಿಕ ಸತ್ಯವಾಗಿದೆ. 12 – 13 ನೇ ಶತಮಾನಗಳಲ್ಲಿ ಸ್ಲಾವ್ ಜನರು ಕ್ರೈಸ್ತರಾಗಿ ಪರಿವರ್ತಿತರಾಗುವವರೆಗು ಅವರು ಶತಾಂಶ ಮತ್ತು ಥೇಟ್ ಶ್ರೇಷ್ಟ ಆರ್ಯ ವೈದಿಕರೆ ಆಗಿದ್ದರು.

ರಷ್ಯ ಮತ್ತು ಲಿತುವೇನಿಯಾಗಳಲ್ಲಿ ಭರತಾಸ್, ಓಂ, ರಾಮ, ಸೀತ, ಲಂಕೇಶ, ರಾವಣ, ಮಾರೀಚ, ನೆಮುನ (ಯಮುನ), ಕಾಮ, ಯಂತ್ರ, ಶ್ವೇತೆ, ದ್ರವ, ಮೋಕ್ಷ, ಋಗ್ವೇದದ ದಾನವ ಮಾತೆ ದನು ನೆನಪಿನ ದನುಬೆ ಮುಂತಾದ ನದಿಗಳು ಮತ್ತು ನಾರದ (ಈಗ ನರೋದ್ನಯ ಎಂದಿದ್ದರು ಸ್ಥಳೀಯರು ನಾರದ ಬೆಟ್ಟ ಎಂದೇ ಕರೆಯುತ್ತಾರೆ) ಹೆಸರಿನ ಬೆಟ್ಟವು ಇವೆ ಎಂದರೆ ಯಾರೂ ಅಚ್ಚರಿಪಡುವಂತದ್ದೆ.

ಯಾರಿಗಾದರು ಈ ಸಂಗತಿಗಳಲ್ಲಿ ಅನುಮಾನ ಹುಟ್ಟುವುದು ಸಹಜವೆ. ಯಾಕೆಂದರೆ ಸ್ಲಾವ್ – ವೈದಿಕ ಆರ್ಯರ ಮೂಲ ಪ್ರದೇಶವೆ ಉತ್ತರ ದ್ರುವ ಪ್ರದೇಶವಾಗಿತ್ತು ಎಂಬ ಚರಿತ್ರೆಯನ್ನೇ ನಮ್ಮಿಂದ ಮರೆಮಾಚಲಾಗಿತ್ತು ಮತ್ತು ಅದು ಬಹುದೊಡ್ಡ ಸಾಂಸ್ಕೃತಿಕ ರಾಜಕಾರಣವೂ ಆಗಿತ್ತು. ಆದರೆ ತಿಲಕರು ತಮ್ಮ “Arctic Home In the Vedas” ಎಂಬ ಪುಸ್ತಕದಲ್ಲಿ ಉತ್ತರ ಭಾರತದ ವೈದಿಕ ಆರ್ಯರ ತವರು ನೆಲ ಉತ್ತರ ದ್ರುವ ಪ್ರದೇಶವೆ, ಅಂದರೆ ಇಂದಿನ ಲಿತುವೇನಿಯ, ಲಾತ್ವಿಯ, ಬೆಲಾರಸ್ ಪ್ರದೇಶಗಳೇ ಆಗಿದ್ದವು ಎಂದು ಸಮರ್ಥ ಸಾಕ್ಷಾಧಾರಗಳೊಂದಿಗೆ ನಿರೂಪಿಸಿದ್ದಾರೆ.

ರಷ್ಯಾದಲ್ಲಿ ಸಂಸ್ಕೃತ ಭಾಷಾಮೂಲದ ನೂರಾರು ನದಿಗಳಿವೆ. ಭಾರತದಲ್ಲಿ ಕೆಲವು ನದಿಗಳನ್ನ ಹೊರತುಪಡಿಸಿದರೆ ಆ ಪ್ರಮಾಣದ ವೈದಿಕ ಪುರಾಣ ಮೂಲದ ನದಿ ಹೆಸರುಗಳು ಈ ನೆಲದಲ್ಲಿ ಇಲ್ಲವೆಂಬುದು ಪ್ರಾಚೀನ ಕಾಲದಿಂದಲು ಆರ್ಯ ವೈದಿಕರು ಇಲ್ಲಿರಲಿಲ್ಲವೆಂಬುದನ್ನೇ ಸೂಚಿಸುತ್ತದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ2 weeks ago

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮಡಿಕೇರಿಯಲ್ಲಿ...

ದಿನದ ಸುದ್ದಿ2 weeks ago

ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ

ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ...

ದಿನದ ಸುದ್ದಿ3 weeks ago

ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್‍ಗೆ ರೂ.10 ಪಡೆದ ಶಾಪಿಂಗ್ ಮಾಲ್‍ಗೆ ದಂಡ

ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499...

ದಿನದ ಸುದ್ದಿ3 weeks ago

ವಿವಿಧ ಜಿಲ್ಲೆಗಳಲ್ಲಿ ಡಾ. ಬಾಬು ಜಗಜೀವನ್ ರಾಮ್ 117ನೇ ಜನ್ಮ ದಿನಾಚರಣೆ

ಸುದ್ದಿದಿನ ಡೆಸ್ಕ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಾ. ಬಾಬು ಜಗಜೀವನ್ ರಾಮ್ ಅವರ 117ನೇ ಜನ್ಮ ದಿನಾಚರಣೆ ಪ್ರಯುಕ್ತ ವಿಧಾನ ಸೌದದಲ್ಲಿರುವ ಪ್ರತಿಮೆಗೆ ಮಾಲಾರ್ಪಣೆ ಮಾಡಿ...

ದಿನದ ಸುದ್ದಿ3 weeks ago

ಇಂದು ಚುನಾವಣಾ ಆಯೋಗ ಸಮಾವೇಶ

ಸುದ್ದಿದಿನ ಡೆಸ್ಕ್ : ಕಳೆದ ಲೋಕಸಭಾ ಚುನಾವಣೆಯಲ್ಲಿ ಕಡಿಮೆ ಮತದಾನವಾಗಿರುವ 11 ರಾಜ್ಯಗಳ ನಗರ ಪಾಲಿಕೆ ಆಯುಕ್ತರು ಮತ್ತು ಆಯ್ದ ಜಿಲ್ಲಾ ಚುನಾವಣಾ ಅಧಿಕಾರಿಗಳೊಂದಿಗೆ ಕೇಂದ್ರ ಚುನಾವಣಾ...

ದಿನದ ಸುದ್ದಿ3 weeks ago

ತಂತ್ರಜ್ಞಾನ ಮೋಡಿ : ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ಡಾ. ಚಂದ್ರಪ್ಪ ಎಚ್, ಸಹಾಯಕ ಪ್ರಾಧ್ಯಾಪಕರು, ಭೌತವಿಜ್ಞಾನ ವಿಭಾಗ, ಸರ್ಕಾರಿ ವಿಜ್ಞಾನ ಕಾಲೇಜು, ಚಿತ್ರದುರ್ಗ 90ರ ದಶಕದಿಂದೀಚೆಗೆ, ಎಲ್ಲೆಡೆ ಸದ್ದಿಲ್ಲದೇ ಕ್ರಮೇಣ ಒಕ್ಕರಿಸತೊಡಗಿದೆ ಆಧುನಿಕ ಯಾಂತ್ರಿಕೃತ ಬದುಕು....

ದಿನದ ಸುದ್ದಿ3 weeks ago

ಔಷಧಗಳ ದರ ಗಣನೀಯ ಏರಿಕೆ ಕುರಿತ ಮಾಧ್ಯಮಗಳ ವರದಿ ಸತ್ಯಕ್ಕೆ ದೂರವಾದ ಸಂಗತಿ ; ಕೇಂದ್ರ ಸರ್ಕಾರ ಸ್ಪಷ್ಟನೆ

ಸುದ್ದಿದಿನ ಡೆಸ್ಕ್ : ಮಾರುಕಟ್ಟೆಗಳಲ್ಲಿ ಮಾರಾಟ ಮಾಡುವ ವಿವಿಧ ಔಷಧಿಗಳ ದರ ಗಣನೀಯವಾಗಿ ಏರಿಕೆ ಮಾಡಲಾಗಿದೆ ಎಂಬ ಮಾಧ್ಯಮಗಳ ವರದಿ ಸತ್ಯಕ್ಕೆ ದೂರವಾದ ಸಂಗತಿ ಮತ್ತು ಜನರನ್ನು...

ದಿನದ ಸುದ್ದಿ3 weeks ago

ರಾಜ್ಯದಲ್ಲಿ ಬಿಸಿಲ ತಾಪ ಇನ್ನೂ ಹೆಚ್ಚಾಗಲಿದೆ ; ಹವಾಮಾನ ಇಲಾಖೆ ಮುನ್ಸೂಚನೆ

ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಮುಂದಿನ 7 ದಿನಗಳಲ್ಲಿ ಬಿಸಿಲ ತಾಪ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಅವಧಿಯಲ್ಲಿ ಜನರುಕೆಲವು ಮುನ್ನೆಚ್ಚರಿಕೆ...

ದಿನದ ಸುದ್ದಿ3 weeks ago

ಜಿಲ್ಲೆಯ ರಾಜಕಾರಣದಲ್ಲಿ ನನಗೆ ಅನ್ಯಾಯ; ರಾಜಕೀಯ ಕುತಂತ್ರ ವ್ಯವಸ್ಥೆ ವಿರುದ್ಧ ನನ್ನ ಹೋರಾಟ : ವಿನಯ್ ಕುಮಾರ್

ಸುದ್ದಿದಿನ,ದಾವಣಗೆರೆ : ಜಿಲ್ಲೆಯ ರಾಜಕಾರಣದಲ್ಲಿ ಚೆನ್ನಯ್ಯ ಒಡಿಯರ್ ಅವರಿಗೆ ಆದ ಅನ್ಯಾಯ ನನಗೂ ಆಗಿದೆ. ನನ್ನ ಹೋರಾಟ ನನ್ನ ಸ್ವಾಭಿಮಾನದ ಹೋರಾಟ ಒಬ್ಬ ವ್ಯಕ್ತಿ ಪಕ್ಷದ ವಿರುದ್ಧ...

ದಿನದ ಸುದ್ದಿ3 weeks ago

ಲೋಕಸಭೆ ಚುನಾವಣೆ; ರಾಜ್ಯದ 14 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಸಲು ಇಂದು ಕೊನೆ ದಿನ

ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆ ಸಾರ್ವತ್ರಿಕ ಚುನಾವಣೆಗೆ, ದೇಶಾದ್ಯಂತ ಎರಡನೇ ಹಂತದ 89 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ. ರಾಜ್ಯದಲ್ಲಿ ನಡೆಯುತ್ತಿರುವ ಮೊದಲ...

Trending