Connect with us

ದಿನದ ಸುದ್ದಿ

ಬುಡಕಟ್ಟು ಜನಾಂಗದ ಗಟ್ಟಿ ದನಿ : ಸಾಯಿ ಪಲ್ಲವಿ

Published

on

  • ಸಿದ್ದು ಸತ್ಯಣ್ಣನವರ್

ಆಕೆಬಡಗ‘ ಎಂಬ ತಮಿಳುನಾಡಿನ ಬುಡಕಟ್ಟು ಜನಾಂಗದ ಕುಡಿ. ದ್ರಾವಿಡತನ ರಕ್ತದಲ್ಲೇ ಇತ್ತು. ಸಿನಿ ರಂಗ ಸೃಷ್ಟಿಸಿದ್ದ ಹಲವು ಸಿದ್ಧ ಮಾದರಿಗಳನ್ನು ಮೀರಿದ ಅಗ್ಗಳಿಕೆ ಸಹ ಆಕೆಯದು. ಹೆಸರು ‘ಸಾಯಿ‌ ಪಲ್ಲವಿ’. ಸದ್ಯ ದಕ್ಷಿಣ ಭಾರತ ಚಿತ್ರರಂಗದ ಬೇಡಿಕೆಯ ನಟಿ. ಆ ಬೇಡಿಕೆಯನ್ನು ತನ್ನ ಪ್ರಬುದ್ಧತೆ,‌ ,ಪ್ರತಿಭೆ, ನಟನಾ ಕೌಶಲ್ಯತೆಯಿಂದ ಸೃಷ್ಟಿಸಿಕೊಂಡಿರುವಾಕೆ.

ಕೆಲ ದಿನಗಳ ಹಿಂದೆ ಆಕೆ ಕಾಸ್ಮೆಟಿಕ್ ಕಂಪನಿಯೊಂದರ ಎರಡು ಕೋಟಿ ರೂಪಾಯಿ ಜಾಹೀರಾತನ್ನು ತಿರಸ್ಕರಿಸಿದ್ದು ದೊಡ್ಡ ಸುದ್ದಿಯಾಗಿತ್ತು. ಅದು ಅವಳನ್ನು ಬಲ್ಲ ಕುಟುಂಬ ವರ್ಗ ಮತ್ತು ಸ್ನೇಹಿತ ವಲಯಕ್ಕೆ ಆಶ್ಚರ್ಯಕರ‌ ಸಂಗತಿಯೇನಾಗಿರಲಿಲ್ಲ. ಯಾಕೆಂದರೆ ಸಾಯಿ ಪಲ್ಲವಿ‌ಯ ತಂಗಿ ಪೂಜಾ‌ ಮೈ ಬಣ್ಣ ಕಪ್ಪು. ಅವಳು ಸಹ ಹಲವು ಕಂಪೆನಿಯ ಕಾಸ್ಮೆಟಿಕ್ ಪ್ರೋಡಕ್ಟ್ಸ್ ಬಳಸಿದವಳೇ. ಆದರೆ ಫಲಿತಾಂಶ ಮಾತ್ರ ಶೂನ್ಯ. ಇದನ್ನೇ‌ ಮತ್ತೊಂದು ಬಗೆಯಲ್ಲಿ‌ ಅಂದರೆ‌ ಎರಡು ಕೋಟಿ‌ ಜಾಹೀರಾತು ಏಕೆ ತಿರಸ್ಕರಿಸಿದೀರಿ? ಎಂದು ಸಂದರ್ಶನವೊಂದರಲ್ಲಿ‌ ನಿರೂಪಕಿ ಕೇಳಿದ್ದಳು.

ಕಾಸ್ಮೆಟಿಕ್ಸ್ ಕಂಪನಿಗಳ ವಂಚನೆ ತನ್ನ ತಂಗಿಯ ಮೂಲಕವೇ ಸಾಯಿ‌ ಪಲ್ಲವಿಗೆ ಮನದಟ್ಟಾಗಿತ್ತು. ಆಗ ಅವಳು ಕೊಟ್ಟ ಉತ್ತರ ಹೀಗಿತ್ತು ‘ಬ್ರಿಟಿಷರು ಬೆಳ್ಳಗೆ, ಆಫ್ರಿಕನ್ನರು ಕಪ್ಪಗೆ, ಭಾರತೀಯರು ಕಂದು. ಆಫ್ರಿಕಾದಲ್ಲಿ ನಾವು ಅಲ್ಲಿನ‌ ಕಪ್ಪನೆ ಯುವತಿಯರನ್ನೇ ಸುಂದರಿಯರು ಎನ್ನಬೇಕಾಗುತ್ತದೆ. ಮೈ ಬಣ್ಣ ಎನ್ನುವುದು ಬರೀ ಒಂದು ಭಾವನೆಯಷ್ಟೇ. ನನ್ನ ತಂಗಿಯೇ ಇದ್ದಳಲ್ಲ, ಮನೆಯಲ್ಲಿ. ನಾನು ಹಾಗಾಗಿ ಆ ಜಾಹೀರಾತನ್ನು ಒಪ್ಪಿಕೊಳ್ಳಲಿಲ್ಲ. ದುಡ್ಡಿಗಾಗಿ ನಾನೇಕೆ‌ ಜನರನ್ನು ವಂಚಿಸಲಿ?’ ಎಂದಿದ್ದಳು. ಇದು ಪ್ರಶ್ನೆಯೊಂದಕ್ಕೆ ಸಾಯಿ ಪಲ್ಲವಿಯ ಉತ್ತರವಾದರೂ ಕಪ್ಪು ಬಣ್ಣದ ಬಗ್ಗೆ ತಮಿಳರ‌ ಪ್ರೇಮವನ್ನು ಹೇಳುತ್ತದೆ. (ಪಾ.ರಂಜಿತ್ ನಿರ್ದೇಶನದ ಕಾಲಾ ಸಿನಿಮಾ ಆ ಬಗ್ಗೆ ಖಚಿತವಾಗಿ ಮಾತನಾಡುತ್ತದೆ. ಈ ಪಟ್ಟಿ ಬೆಳೆಸಿದರೆ ಇನ್ನು ಬೆಳೆಯುತ್ತದೆ. ಅದಿಲ್ಲಿ ಅನಗತ್ಯ).

ತಮಿಳುನಾಡಿನ ನೀಲಗಿರಿ ಬೆಟ್ಟಗಳಲ್ಲಿ ವಾಸಿಸುವ ‘ಬಡಗ’ ಎಂಬ ಬುಡಕಟ್ಟು ಜನಾಂಗದ ಹೆಣ್ಣುಮಗಳು ಈ ಸಾಯಿ ಪಲ್ಲವಿ. ಮೆಡಿಕಲ್ ಓದಿದರೂ (ಹಾರ್ಟ್ ಸ್ಪೇಶಲಿಸ್ಟ್) ಪ್ರಾಕ್ಟೀಸಿಗಾಗಿ ಹೆಸರು ನೋಂದಾಯಿಸಿಕೊಂಡಿಲ್ಲ. ತಮಿಳುನಾಡಿನ ಸುಮಾರು 400 ಹಳ್ಳಿಗಳಲ್ಲಿ ಕಂಡು ಬರುವ ಬಡಗ ಜನಾಂಗ ನಮ್ಮಲ್ಲಿ ಕಾಡು ಕುರುಬ, ಜೇನು ಕುರುಬರು ವಾಸಿಸುವಂತೆಯೇ ಕಾಡಿನ ಏರಿಳಿತಗಳ ನಡುವೆ ಹಟ್ಟಿಗಳಲ್ಲಿ ವಾಸಿಸುವವರು. ‘ಬಡಗ’ ಎಂದರೆ ತಮಿಳು ಜನಪದದಲ್ಲಿ ದಕ್ಷಿಣ ಎಂಬರ್ಥವೂ ಉಂಟು.

ನಟಿಯರಲ್ಲಿ ದ್ರಾವಿಡತನದ ಢಾಳ ಛಾಯೆ ನನಗೆ ಎದ್ದು ಕಂಡದ್ದು ‘ಪ್ರೇಮಂ‘ ಎಂಬ ಸಿನೇಮಾದ ಮೂಲಕ‌‌ ಮೋಡಿ ಮಾಡಿದ‌ ಈ ‘ಮಲರ್‘ ಮೂಲಕ. ವೃತ್ತಿಪರ ನೃತ್ಯಪಟುವಲ್ಲದಿದ್ದರೂ, ಈಕೆ ಅದರಲ್ಲೂ ಯಶಸ್ಸು ಸಾಧಿಸಿದಾಕೆ. ಡ್ಯಾನ್ಸ್ ಬರುತ್ತಿದ್ದ ಕಾರಣಕ್ಕೆ ಮಲಯಾಳಂನ ಎವರ್ ಗ್ರೀನ್ ಹಿಟ್ ಸಿನೆಮಾ ‘ಪ್ರೇಮಂ’ ಚಿತ್ರದಲ್ಲಿ ‘ಮಲರ್’ ಪಾತ್ರದಲ್ಲಿ ನಟಿಸುವ ಅವಕಾಶ ಸಿಕ್ಕಿತ್ತು. ಅಲ್ಲಿಂದಾಚೆಗೆ ಸಾಯಿ ಪಲ್ಲವಿ‌ ಹೊರಳಿ ನೋಡುವ ಪ್ರಮೇಯಗಳೇ ಎದುರಾಗಲಿಲ್ಲ.

ತಮಿಳು, ತೆಲುಗು, ಮಲಯಾಳಂ ಚಿತ್ರರಂಗದಲ್ಲಿ ಬೇಡಿಕೆ ಹೊಂದಿದ್ದರೂ ಆಕೆಯ ಸ್ಪಷ್ಟ ನಿಲುವು ಸಿನಿಮಾ ರಂಗದ ಬಹುತೇಕರಿಗೆ ಅಪಥ್ಯವೂ ಸಹ. ಅದೇನೂ ಅಂತಹ ಗುಟ್ಟೂ ಅಲ್ಲ. ಹಾಗಂತ ಹಲವು ಒತ್ತಡಗಳ ನಡುವೆಯೂ ಸಾಯಿ ಪಲ್ಲವಿ ಪುರುಷ‌ ಪ್ರೌಢಿಮೆಯ ಸಿನೇಮಾ ಇಂಡಸ್ಟ್ರಿಗಳಲ್ಲಿ ತನ್ನ ನಿಲುವಿಗೆ ಬದ್ಧವಾಗಿರೋದು ಹಲವು ಬಾರಿ ಸುದ್ದಿಯೂ ಆಗಿರುವುದು ಹಳೇ ಸಮಾಚಾರ.

ನನ್ನ ತಂಗಿ ಪೂಜಾಳ ಮೈ ಬಣ್ಣ ಕಪ್ಪು. ನನ್ನದು ಬಿಳಿ. ಅದೆಲ್ಲ ಇಲ್ಲಿ ಅನಗತ್ಯ. ಮೈ ಬಣ್ಣ ನನಗೆಂದು ವಿಶೇಷ, ಆಕರ್ಷಕವೆನಿಸಿಲ್ಲ, ಅನಿಸುವುದೂ ಇಲ್ಲ. ಆಫ್ರಿಕನ್ನರ ಮೈ ಬಣ್ಣ ಸಹಜವಾಗಿಯೇ ಕಪ್ಪು. ಕಪ್ಪು ಹುಡುಗಿಯರನ್ನೇ ಅವರು ಸುಂದರಿ ಎಂದು ಕರೆಯಬೇಕು. ಭಾರತದಲ್ಲೂ ಅಷ್ಟೇ’ ಮೇಲೆ ಉಲ್ಲೇಖಿಸಿರುವ ಸಂದರ್ಶನ ಇದೆಯಲ್ಲ, ಅದರಲ್ಲೇ ಮುಂದುವರೆದು ಎರಡನೇ ಬಾರಿ ಇದೇ ಉತ್ತರ ಪುನರುಚ್ಚರಿಸಿದ್ದಳು ಸಾಯಿ ಪಲ್ಲವಿ.

ಬಹುಭಾಷಾ ನಟಿ ಪಾರ್ವತಿ ಮೆನನ್ ಬಿಟ್ಟರೆ ಇಂತಹ ವಿಚಾರಗಳಲ್ಲಿ ತೀರಾ ಇತ್ತೀಚೆಗೆ ಹೀಗೆ ಪುರುಷತ್ವದ ಕಪಾಳಕ್ಕೆ ಹೊಡೆದಂತೆ ನೇರವಾಗಿ ಮಾತನಾಡಿದ್ದು ಸಾಯಿ‌ಪಲ್ಲವಿ ಮಾತ್ರ. ಹದಿ ವಯದ ಯುವಕರಂತೂ ಸಾಯಿ ಪಲ್ಲವಿಯ ತೆಲುಗಿನ ‘ಫಿದಾ‘ ಮಲಯಾಳಂನ ‘ಕಾಳಿ‘ ಹಾಗೂ ‘ಅಧಿರನ್‘ ಸಿನಿಮಾಗಳಲ್ಲಿ ಅವಳ ಮುಗ್ಧ, ಮೋಹಕ ನಟನೆಯನ್ನು ಎಂದೂ ಮರೆಯಲಾರರು. ಅದೆಲ್ಲದರಾಚೆಗೆ ಅವಳ ವೈಚಾರಿಕ ನಿಲುವನ್ನು ಸಹ. ಇಂತಹ ಸಾಯಿ ಪಲ್ಲವಿಗೆ ಇಂದು (   ಮೇ 9 ನಿನ್ನೆ ) ಜನ್ಮದಿನ. ಇಂತಹ ನಟಿಯರ ಸಂಖ್ಯೆ ದುಪ್ಪಟ್ಟಾಗಲಿ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Suddidina.com Kannada online news portal. Its providing Kannada news, film news Kannada, sports news Kannada, political NeWS in Kannada and more.

ದಿನದ ಸುದ್ದಿ

ವಸತಿ ಯೋಜನೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ.

ಈ ಯೋಜನೆಯಡಿ ಸೌಲಭ್ಯ ಒದಗಿಸಲು ನಿಗಧಿತ ಅರ್ಜಿ ನಮೂನೆಯಲ್ಲಿ ಅವಶ್ಯಕ ದಾಖಲಾತಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ್-1ರವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಚನ್ನಗಿರಿ ಕಚೇರಿಯನ್ನು ಸಂಪರ್ಕಿಸಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..

Published

on

1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ ಎಣ್ಣೆಯಂಶವಿರುವ ಆಹಾರವನ್ನು ಕಡಿಮೆ ಮಾಡಿ.

2. ಸಿಹಿ ಪದಾರ್ಥಗಳ ನಿಯಂತ್ರಣ (Avoid Sweets): ಸಕ್ಕರೆ, ಬೆಲ್ಲ, ಬೇಕರಿ ತಿಂಡಿಗಳು, ಐಸ್‌ಕ್ರೀಮ್ ಮತ್ತು ಕೃತಕ ಸಕ್ಕರೆ ಇರುವ ತಂಪು ಪಾನೀಯಗಳ ಬಳಕೆಯನ್ನು ಸಂಪೂರ್ಣವಾಗಿ ಕಡಿಮೆ ಮಾಡಿ ಅಥವಾ ದೂರವಿಡಿ.

3. ದಿನನಿತ್ಯದ ವ್ಯಾಯಾಮ (Regular Exercise): ಪ್ರತಿದಿನ ಕನಿಷ್ಠ 30 ರಿಂದ 45 ನಿಮಿಷಗಳ ಕಾಲ ವೇಗದ ನಡಿಗೆ (brisk walking), ಸೈಕ್ಲಿಂಗ್, ಈಜು ಅಥವಾ ಯೋಗ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ.

4. ದೇಹದ ತೂಕದ ನಿರ್ವಹಣೆ (Weight Management): ಅತಿಯಾದ ದೇಹದ ತೂಕವು ಇನ್ಸುಲಿನ್ ಕಾರ್ಯಕ್ಷಮತೆಯನ್ನು ಕುಂಠಿತಗೊಳಿಸುತ್ತದೆ. ಆದ್ದರಿಂದ ತೂಕವನ್ನು ಆರೋಗ್ಯಕರ ಮಿತಿಯಲ್ಲಿ ಇಟ್ಟುಕೊಳ್ಳುವುದು ಅತ್ಯಗತ್ಯ.

5. ನಿಯಮಿತ ರಕ್ತದ ಪರೀಕ್ಷೆ (Regular Blood Sugar Check): ವೈದ್ಯರ ಸಲಹೆಯಂತೆ ಕಾಲಕಾಲಕ್ಕೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು (Fasting ಮತ್ತು Post Prandial) ಹಾಗೂ ಮೂರು ತಿಂಗಳ ಸರಾಸರಿ ತಿಳಿಸುವ HbA1c ಪರೀಕ್ಷೆಯನ್ನು ಮಾಡಿಸಿಕೊಳ್ಳಿ.

6. ಸಮಯಕ್ಕೆ ಸರಿಯಾಗಿ ಔಷಧಿ ಸೇವನೆ (Timely Medication): ವೈದ್ಯರು ಸೂಚಿಸಿದ ಮಾತ್ರೆಗಳನ್ನು ಅಥವಾ ಇನ್ಸುಲಿನ್ ಅನ್ನು ನಿಗದಿತ ಸಮಯಕ್ಕೆ ತೆಗೆದುಕೊಳ್ಳಿ. ಸ್ವಂತ ನಿರ್ಧಾರದಿಂದ ಔಷಧಿಯನ್ನು ನಿಲ್ಲಿಸಬೇಡಿ.

7. ಮಾನಸಿಕ ಒತ್ತಡದ ನಿರ್ವಹಣೆ (Stress Management): ಅತಿಯಾದ ಮಾನಸಿಕ ಒತ್ತಡವು ದೇಹದಲ್ಲಿ ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಹಾರ್ಮೋನ್‌ಗಳನ್ನು ಬಿಡುಗಡೆ ಮಾಡುತ್ತದೆ. ಒತ್ತಡ ಕಡಿಮೆ ಮಾಡಿಕೊಳ್ಳಲು ಧ್ಯಾನ (Meditation) ಅಥವಾ ಹವ್ಯಾಸಗಳಲ್ಲಿ ತೊಡಗಿಕೊಳ್ಳಿ.

8. ಪೂರಕ ನೀರು ಕುಡಿಯುವುದು (Stay Hydrated): ದಿನವಿಡೀ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ. ಇದು ದೇಹದಲ್ಲಿರುವ ಹೆಚ್ಚುವರಿ ಗ್ಲೂಕೋಸ್ ಮೂತ್ರದ ಮೂಲಕ ಹೊರಹೋಗಲು ಸಹಾಯ ಮಾಡುತ್ತದೆ.

9. ಉತ್ತಮ ನಿದ್ರೆ (Good Sleep): ಪ್ರತಿದಿನ ರಾತ್ರಿ 7 ರಿಂದ 8 ಗಂಟೆಗಳ ಕಾಲ ಶಾಂತಿಯುತವಾದ ನಿದ್ರೆ ಮಾಡುವುದು ದೇಹದ ಚಯಾಪಚಯ ಕ್ರಿಯೆ (Metabolism) ಮತ್ತು ಹಾರ್ಮೋನ್‌ಗಳ ಸಮತೋಲನಕ್ಕೆ ಬಹಳ ಮುಖ್ಯ.

10. ದುರಭ್ಯಾಸಗಳಿಂದ ದೂರವಿರಿ (Avoid Smoking and Alcohol): ಧೂಮಪಾನ ಮತ್ತು ಮದ್ಯಪಾನವು ಸಕ್ಕರೆ ಕಾಯಿಲೆಯ ತೊಂದರೆಗಳನ್ನು (ಹೃದಯ ಮತ್ತು ನರಗಳ ಸಮಸ್ಯೆ) ಮತ್ತಷ್ಟು ಹೆಚ್ಚು ಮಾಡುವುದರಿಂದ ಇವುಗಳಿಂದ ದೂರವಿರುವುದು ಒಳ್ಳೆಯದು.

ಗಮನಿಸಿ: ಈ ಮೇಲಿನ ಮಾಹಿತಿ ರೋಗದ ನಿರ್ವಹಣೆಗೆ ಸಾಮಾನ್ಯ ಮಾರ್ಗದರ್ಶನವಾಗಿದೆ. ಪ್ರತಿಯೊಬ್ಬರ ದೇಹ ಪ್ರಕೃತಿ ವಿಭಿನ್ನವಾಗಿರುವುದರಿಂದ, ನಿಮ್ಮ ವೈದ್ಯರ ವೈಯಕ್ತಿಕ ಸಲಹೆ ಮತ್ತು ಚಿಕಿತ್ಸೆಯ ಕ್ರಮವೇ ಅಂತಿಮ ಹಾಗೂ ಸುರಕ್ಷಿತ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು ಕಾರ್ಯಕ್ರಮದಡಿ ಸೌಲಭ್ಯ: ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಖಾದ್ಯ ತೈಲಗಳನ್ನು ಆಮದು ಮಾಡಿಕೊಳ್ಳುವಲ್ಲಿ ದೇಶದ ಅವಲಂಬನೆಯನ್ನು ಕಡಿಮೆ ಮಾಡಲು ಮತ್ತು ದೇಶಿಯ ಎಣ್ಣೆಕಾಳುಗಳ ಉತ್ಪಾದನೆಯನ್ನು ಹೆಚ್ಚಿಸುವ ಹಾಗೂ ರೈತರ ಆದಾಯವನ್ನು ಸುಧಾರಿಸಲು ಭಾರತ ಸರ್ಕಾರದ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರ ಪುರಷ್ಕೃತ ಕೃಷಿಯೋನ್ನತಿ ಯೋಜನೆಯಡಿ ‘’ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು’’ (National Mission on Edible Oil – Oilseeds (NMEO-OS) ಯೋಜನೆಯನ್ನು ಅನುಷ್ಠಾನ ಮಾಡಲಾಗುತ್ತಿದೆ.

ಎಣ್ಣೆಕಾಳು ಬೆಳೆಗಾರರು ಮತ್ತು ಮೌಲ್ಯ ಸರಪಳಿ ಪಾಲುದಾರರನ್ನು (Value Chain Partners) ಸಂಸ್ಕರಣಾದಾರರೊಂದಿಗೆ ಸಂಪರ್ಕಿಸಲು ಮತ್ತು ಅವರಿಗೆ ಮಾರುಕಟ್ಟೆ ಕಲ್ಪಿಸುವುದರೊಂದಿಗೆ ಉತ್ತಮ ಲಾಭವನ್ನು ಪಡೆಯುವಂತೆ ಖಾತ್ರಿಪಡಿಸುವುದು ಯೋಜನೆಯ ಗುರಿಗಳಲ್ಲಿ ಒಂದಾಗಿದೆ.

ಸದರಿ ಯೋಜನೆಯಡಿ ಸ್ಥಳೀಯವಾಗಿ ಉದ್ಯೋಗಾವಕಾಶ ಕಲ್ಪಿಸಲು ಹಾಗೂ ಶುದ್ಧ ಖಾದ್ಯ ತೈಲ ಉಪಯೋಗಿಸಲು ಅನುಕೂಲವಾಗುವಂತೆ ಪ್ರೇರೇಪಿಸಲು ಸೂಕ್ತವಾಗುವಂತೆ ಹಾಗೂ ಮೌಲ್ಯ ಸರಪಳಿಯನ್ನು ಉತ್ತೇಜಿಸಲು, ಸಂಸ್ಕರಣಾ ಘಟಕಗಳಿಗೆ ಅವಶ್ಯವಿರುವ ಯಂತ್ರೋಪಕರಣಗಳನ್ನು ಪಡೆಯಲು/ಪ್ರಾಥಮಿಕ ಮತ್ತು ದ್ವಿತೀಯ ಎಣ್ಣೆಕಾಳು ಕೊಯ್ಲೋತ್ತರ ಮೂಲ ಸೌಕರ್ಯ ಸೌಲಭ್ಯ ಪಡೆಯಲು ಗರಿಷ್ಠ ಯೋಜನಾ ವರದಿಯ ಶೇ.33 ರಷ್ಟು ಅಥವಾ ರೂ.9.99 ಲಕ್ಷಕ್ಕೆ ಮೀರದಂತೆ ಅನುದಾನವನ್ನು ನೀಡಲಾಗುವುದು. ಸದರಿ ಯೋಜನೆಯ ಘಟಕದಡಿ ಕಟ್ಟಡ ವೆಚ್ಚ ಮತ್ತು ಭೂಮಿ ಬಾಡಿಗೆಯನ್ನು ಪರಿಗಣಿಸಲಾಗುವುದಿಲ್ಲ.

ಸದರಿ ಯೋಜನೆಯಡಿ ಸೌಲಭ್ಯ ಪಡೆಯಲು ಸರ್ಕಾರ / ಸರ್ಕಾರೇತರ ಸಂಸ್ಥೆಗಳು, FPOs ಗಳು ಜುಲೈ 04 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಯೋಜನೆಯ ಮಾರ್ಗಸೂಚಿಯನ್ವಯ ಜಿಲ್ಲಾ ಕಾರ್ಯಕಾರಿ ಸಮಿತಿಯಲ್ಲಿ ಫಲಾನುಭವಿ ಆಯ್ಕೆ ನಡೆಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರ ಕಛೇರಿ, ಉಪ ಕೃಷಿ ನಿರ್ದೇಶಕರ ಕಛೇರಿ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಗಳನ್ನು ಸಂಪರ್ಕಿಸುವಂತೆ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

Trending