Connect with us

ದಿನದ ಸುದ್ದಿ

ಸರಳ ತರಳಬಾಳು ಹುಣ್ಣಿಮೆಯಂದು ಗೋಶಾಲೆ ಪುಣ್ಯಕೋಟಿಗೆ ಅರ್ಪಣೆ

Published

on

ಸುದ್ದಿದಿನ,‌ಸಿರಿಗೆರೆ: ಉತ್ಸವಗಳಿಂದ ಸಮಾಜದ ಅಭಿವೃದ್ಧಿ ಮಾಡುವುದಕ್ಕಿಂತ ಉತ್ಸವಗಳ ಸಾರ್ಥಕತೆಯ ನೆನಪಿಗೆ ಸಮಾಜದ ಅಭ್ಯುದಯಕ್ಕೆ ಶ್ರಮಿಸುವ ವಿಶೇಷ ಆಶಯ ಹೊಂದಿ ಆ ಕಾರ್ಯದಲ್ಲಿ ಯಶಸ್ಸು ಗಳಿಸಿದ ಕೀರ್ತಿ ತರಳಬಾಳು ಶ್ರೀ ಜಗದ್ಗುರುವರ್ಯರದು.

ಪರಂಪರೆಗೆ ಮತ್ತು ಅಪಾರ ಶಿಷ್ಯಬಳಗದ ಮನಸ್ಸಿಗೆ ಘಾಸಿ ಮಾಡದಂತೆ ಎಲ್ಲರಿಗೂ ಅನುಕೂಲ ತರುವ ಸರ್ವರೂ ಒಪ್ಟಲೇಬೇಕಾದ ಕಾರ್ಯಕ್ರಮಗಳನ್ನು ಜಾರಿಯ ಅನುಷ್ಠಾನದ ಅಪರೂಪದ ವ್ಯಕ್ತಿತ್ವ ಚಿಂತಕ ಶ್ರೇಷ್ಠರಾದ ಶ್ರೀ ತರಳಬಾಳು ಜಗದ್ಗುರು ಡಾ.ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿಗಳವರದು.

ನಾಡಿನ ಧಾರ್ಮಿಕ ಸಮಾರಂಭಗಳಿಗೆ ತರಳಬಾಳು ಹುಣ್ಣಿಮೆ ಮಹೋತ್ಸವಕ್ಕೆ ಮಾತೃಸ್ವರೂಪದಂತಹ ಸ್ಥಾನವಿದೆ. ಸಮಾರಂಭದ ಸಾರ್ಥಕತಗೆ ನೂರಾರು ಸಮಾಜ ಮುಖಿ ಕಾರ್ಯಗಳು ಸಾಕ್ಷಿಯಾಗಿವೆ. ಅಂತಹ ಜನಮುಖಿ ಕಾರ್ಯಗಳಲ್ಲಿ ಸಾವಿರಾರು ಕೋಟಿಗಳ ವೆಚ್ಚದಲ್ಲಿ ನೂರಾರು ಕೆರೆಗಳಿಗಳ ಒಡಲಿಗೆ ಗಂಗೆ ಹರಿದು ರೈತರ ನೆಮ್ಮದಿಗೆ ಕಾರಣವಾಗಿರುವುದು ಪ್ರಮುಖವಾದುದು. ಆರು ದಶಕಗಳಿಂದಲೂ ಸರ್ವರ ಜನಾಧರಣೆಯ ಸಮಾರಂಭವಾಗಿ ಆಯಾ ಕಾಲದ ಸಮಸ್ಯೆಗಳಿಗೆ ಸ್ಪಂದಿಸುವ ಮಾನವೀಯತೆಯ ಮಹೋತ್ಸವವಾಗಿದೆ.

ಈ ವರ್ಷದ ತರಳಬಾಳು ಹುಣ್ಣಿಮೆ ಮಹೋತ್ಸವ ಹೊಯ್ಸಳರ ನಾಡಾದ ಹಳೇಬೀಡಿನಲ್ಲಿ ಆಚರಿಸುವ ಶ್ರೀಗಳ ಆಶಯಕ್ಕೆ ಆ ಭಾಗದ ಭಕ್ತರು ತುದಿಗಾಲಲ್ಲಿ ನಿಂತಿದ್ದರು.

ಭೀಕರ ಬರಗಾಲದ ಛಾಯೆಯನ್ನು ಮನಗಂಡು
ಕಾರ್ಯಕ್ರಮಗಳಿಗೆ ಆ ಭಾಗದ ಜ್ವಲಂತ ಸಮಸ್ಯೆಗಳಿಗೆ ತರಳಬಾಳು ಹುಣ್ಣಿಮೆ ಮಹೋತ್ಸವದ ಮೂಲಕ ಉತ್ತರ ಕಂಡುಕೊಳ್ಳುವ ನಿಟ್ಟಿನಲ್ಲಿ ಶ್ರೀಗಳು ಹಳೇಬೀಡು ವ್ಯಾಪ್ತಿಯ ಕೆರೆಗಳಿಗೆ ಶಾಶ್ವತವಾಗಿ ನೀರು ತುಂಬಿಸುವ ಯೋಜನೆ ಕಾರ್ಯಪಾಲನೆಯ ನಂತರ ಹುಣ್ಣಿಮೆ ಮಹೋತ್ಸವ ಆಚರಿಸುವ ಅರ್ಥಪೂರ್ಣ ನಿರ್ಧಾರ ಕೈಗೊಂಡು ಆ ನಿಟ್ಟಿನಲ್ಲಿ ಹೆಜ್ಜೆ ಹಾಕಿದರು.

ಪರಂಪರೆಯಂತೆ ಸಾಂಕೇತಿಕವಾಗಿ ಸರಳವಾಗಿ 2019ರ ಫೆಬ್ರುವರಿ 19ರಂದು ಸಿರಿಗೆರೆಯಲ್ಲಿ ತರಳಬಾಳು ಹುಣ್ಣಿಮೆ ಮಹೋತ್ಸವ ಆಚರಣೆಯ ಜೊತೆಗೆ ನಾಡಿನ ಗೋವುಗಳ ಪಾಲನೆಗೆ ಅಂದೇ ಗೋಶಾಲೆಯ ಉದ್ಘಾಟಿನೆಯ ಕೈಂಕರ್ಯಕ್ಕೆ ಶ್ರೀ ಜಗದ್ಗುವರ್ಯರು ಮನಸ್ಸು ಮಾಡಿರುವುದು ಅತ್ಯಂತ ಸಂದರ್ಭೋಚಿತವಾದುದಾಗಿದೆ.

ಸದಾ ಜನಮುಖಿ ಕಾರ್ಯಗಳಲ್ಲಿ ಸಂತೃಪ್ತಿ ಕಾಣುವ, ನಿತ್ಯವೂ ರೈತಬಂಧುಗಳ ಉನ್ನತಿಗೆ ಶ್ರಮಿಸುವ ಕನ್ನಡ ನಾಡಿನ ಅಪರೂಪದ ವಿದ್ವತ್ಪೂರ್ಣ, ಸಂತಶ್ರೇಷ್ಟರಾಗಿ ,ರೈತ ಮೆಚ್ಚಿದ ಮಹಾಗುರುವೆಂದೇ ಸುಪ್ರಸಿದ್ಧಿಯಾದ ಪರಮ ಪೂಜನೀಯ ಶ್ರೀ ತರಳಬಾಳು ಜಗದ್ಗುರು ಡಾ.ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿಗಳವರ ನೂರಾರು ಸಮಾಜಮುಖಿ ಸಾಧನೆಗಳಿಗೆ ಮತ್ತೊಂದು ಸೇರ್ಪಡೆ ಎನ್ನುವಂತೆ ತರಳಬಾಳು ಶ್ರೀ ಮಠದ ಸಾವಿರಾರು ಎಕರೆ ಭೂಮಿಯಲ್ಲಿ ಸಕಲ ಸೌಲಭ್ಯಗಳಿಂದ ಕೂಡಿದ ಗೋಶಾಲೆಯ ನಿರ್ಮಾಣದ ತಯಾರಿ ಭರದಿಂದ ಸಾಗಿದೆ.

ಅಕ್ಷರ,ಅನ್ನ,ಆಸರೆ,ಶಿಕ್ಷಣ,
ಉದ್ಯೋಗ,ನ್ಯಾಯದಾನ, ಕನ್ನಡ ಜಾನಪದ ಕಲೆಗಳ ಪುನರುಜ್ಜೀವನ , ಸಾಮಾಜಿಕ ಕಾಳಜಿ,ಪರಿಸರ ರಕ್ಷಣೆ, ಶರಣ ಸಂಸ್ಕೃತಿಯನ್ನು ವಿಶ್ವಕ್ಕೆ ದರ್ಶಸಿದ ಗಣಕ ಋಷಿ ಎಂದೇ ನಾಮದೇಯರಾಗಿರುವ ಶ್ರೀ ಗುರುವರ್ಯರ ಸಾಧನೆಗಳ ಕುರಿತು ಬರೆಯುವುದೆಂದರೆ ಅದು ಸೂರ್ಯನನ್ನು ಕನ್ನಡಯಲ್ಲಿ ಹಿಡಿದಂತೆ..!

ಶ್ರೀಗಳ ದೂರದರ್ಶಿತ್ವ ಹೇಗಿದೆ ಎಂದರೆ. ಈ ವರ್ಷ ಬರದ ಮುನ್ಸೂಚನೆ ಅರಿತ ಶ್ರೀಗಳವರು ಪುಣ್ಯಕೋಟಿ ಉಳಿಸುವ ಅಭಿದಾನಕ್ಕೆ ಕೈ ಹಾಕಿ ಆರು ತಿಂಗಳಿಂದ ಕರ್ತವ್ಯ ಮಗ್ನರಾಗಿ ನೂರಾರು ಲೋಡ್ ಮೇವನ್ನು ಭಕ್ತರ ಮೂಲಕ ಸಂಗ್ರಹಿಸಿ ಕಾಮಧೇನುಗಳ ಸ್ವಾಗತಕ್ಕೆ ಕಾದು ಕುಳಿತಿದ್ದಾರೆ. ಸಿರಿಗೆರೆ ಸಮೀಪದ ಮೇಗಳಹಳ್ಳಿ ಬಳಿ ದೊಡ್ಡ ಕಾವಲೆಂದೇ ಕಲೆಯಲ್ಪಡುವ ಶ್ರೀ ಮಠದ ಒಡೆತನದ ಸಾವಿರಾರು ಎಕರೆ ಭೂ ಪ್ರದೇಶವನ್ನು ಶಿವಕುಮಾರ ವನವನ್ನಾಗಿಸಿ ಹತ್ತಾರು ವನ್ಯಜೀವಿಗಳಿಗೆ ಆಶ್ರಯ ತಾಣವಾಗಿರುವ ಪ್ರದೇಶದಲ್ಲಿ ತರಳಬಾಳು ಗೋಶಾಲೆ ನಿರ್ಮಾಣವಾಗುತ್ತಿದೆ.

ಹೇಗಿರುತ್ತದೆ ಗೋಶಾಲೆ..?

ಕರ್ನಾಟಕದ ಅನೇಕ ಪ್ರದೇಶಗಳು ಪದೇ ಪದೇ ಬರಗಾಲಕ್ಕೆ ತುತ್ತಾಗುವ ಸ್ಥಿತಿ ಇದೆ. ಮನುಷ್ಯರು ಹೇಗಾದರೂ ಬದುಕಿಕೊಳ್ಳುತ್ತಾರೆ. ಆದರೆ ದನಕರುಗಳು ಮೇವು ನೀರಿಲ್ಲದೆ ಕಂಗಾಲಾಗುತ್ತವೆ.

ಚಾಮರಾಜ ನಗರದ ಬಳಿ ಮೇವು ನೀರಿಲ್ಲದೆ ಎಲ್ಲೆಂದರಲ್ಲಿ ದನಕರುಗಳು ಸತ್ತಿರುವ ವರದಿಗಳು ದುಃಖದಾಯಕ ವರದಿಗೆ ಮನನೊಂದ ಶ್ರೀಗಳು
ಸಿರಿಗೆರೆ ಸಮೀಪ ಇರುವ ಶಿವಕುಮಾರ ವನದ1000 ಎಕರೆ ಅರಣ್ಯ ಪ್ರದೇಶದಲ್ಲಿ ಬೃಹತ್ ಗೋಶಾಲೆಯನ್ನು ಆರಂಭಿಸುವ ಯೋಜನೆಯನ್ನು ಶ್ರೀ ತರಳಬಾಳು ಜಗದ್ಗುರು ಡಾ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಯವರು ಸಂಕಲ್ಪಿಸಿದರು.

ಇದೊಂದು ಖಾಯಂ ವ್ಯವಸ್ಥೆಯಾಗಿದ್ದು, ಈ ಕಾರ್ಯಕ್ಕಾಗಿ 2 ಕೋಟಿ ರೂಗಳನ್ನು ಮೀಸಲಿರಿಸಲಾಗಿದೆ. ಈ ಕಾಡಿನಲ್ಲಿ ಹರಿಯುವ ಹಳ್ಳಕ್ಕೆ ಚೆಕ್ ಡ್ಯಾಂ ನಿರ್ಮಾಣ ಮಾಡಿ ಜಾನುವಾರುಗಳಿಗೆ ನೀರನ್ನು ಒದಗಿಸಲಾಗುವುದಲ್ಲದೆ ಆಧುನಿಕ ತಂತ್ರಜ್ಞಾನವನ್ನು ಬಳಸಿ ಮೇವನ್ನು ಬೆಳೆಸಲಾಗುವುದು. ನೀರನ್ನು ಪಂಪ್ ಮಾಡಲು ಸೋಲಾರ್ ವಿದ್ಯತ್ ಉತ್ಪಾದನೆಯ ಬಗ್ಗೆಯೂ ಚಿಂತಿಸಲಾಗುತ್ತಿದೆ. ಕಾಡಿನಲ್ಲಿರುವ ಮೃಗಗಳಿಂದ ಜಾನುವಾರುಗಳಿಗೆ ತೊಂದರೆ ಆಗದಂತೆ ಬೇಲಿಯನ್ನು ನಿರ್ಮಿಸಲಾಗುವುದು. ರಾಜ್ಯದ ಯಾವುದೇ ಭಾಗದ ರೈತರೂ ಇದರ ಪ್ರಯೋಜನ ಪಡೆಯಬಹುದು.

ರೈತರು ಬಯಸಿದರೆ ಜಾನುವಾರುಗಳನ್ನು ಗೋಶಾಲೆಗೆ ತರಲು ಮಠದಿಂದ ಲಾರಿಯನ್ನು ಕಳುಹಿಸುವ ವ್ಯವಸ್ಥೆ ಮಾಡಲಾಗುವುದು. ಬರ ಪ್ರದೇಶದ ರೈತರು ಇಲ್ಲಿಗೆ ದನಕರುಗಳನ್ನು ತಂದು ಮಳೆಗಾಲ ಬರುವ ತನಕ ಮೇವು ಮತ್ತು ನೀರನ್ನು ಪಡೆದು ಸಾಕಬಹುದು.* *ರಾಸುಗಳೊಂದಿಗೆ ಬರುವ ರೈತರಿಗೂ ಮಠದಿಂದ ಆಹಾರ ಮತ್ತು ವಸತಿಯನ್ನು ನೀಡಲಾಗುವುದು.

ತಮ್ಮ ಭಾಗದಲ್ಲಿ ಮಳೆ ಆರಂಭವಾಗಿ ಮೇವು ನೀರು ದೊರೆಯುವವರೆಗೂ ರೈತರು ಶಿವಕುಮಾರ ವನದಲ್ಲಿ ತನ್ನ ರಾಸುಗಳನ್ನು ಸಾಕಿಕೊಂಡು ಹೋಗಲು ಅನುವು ಮಾಡಿಕೊಡುವುದಾಗಿ ಇಂದು ಗೋಶಾಲೆಯ ಕೆಲಸ ಕಾರ್ಯಗಳನ್ನು ಪರಿಶೀಲಿಸಿ ಸೂಕ್ತ ಮಾರ್ಗದರ್ಶನ ನೀಡಿದ ಶ್ರೀ ಜಗದ್ಗುರುವರ್ಯರು ತಿಳಿಸಿದರು.

ಬರಹ : ಬಸವರಾಜ ಸಿರಿಗೆರೆ

ಸುದ್ದಿದಿನ.ಕಾಂ|ವಾಟ್ಸಾಪ್|9986715401

ಕ್ರೀಡೆ

Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು

Published

on

ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್‌ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್‌ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.

ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ

Published

on

ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.

ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್‌ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್‌ಗಳನ್ನು ಒಳಗೊಂಡಿದೆ.

ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್‌ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್‌ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್‌ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ಕ್ರೀಡೆ15 hours ago

Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು

ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್‌ನಲ್ಲಿ ಭಾರತದ ಧ್ವಜಧಾರಿಗಳಾದ...

ದಿನದ ಸುದ್ದಿ15 hours ago

JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ

ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ...

ದಿನದ ಸುದ್ದಿ15 hours ago

KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ

ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ....

ದಿನದ ಸುದ್ದಿ16 hours ago

HEAVY RAIN | ಮೂರು ದಿನ ಭಾರೀ ಮಳೆ ; ಆರೆಂಜ್ ಅಲರ್ಟ್ ಘೋಷಣೆ

ಸುದ್ದಿದಿನಡೆಸ್ಕ್:ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ವ್ಯಾಪಕ ಮಳೆಯಾಗಲಿದೆ ಎಂದು ಆರೆಂಜ್ ಅಲರ್ಟ್ ಹವಾಮಾನ ಇಲಾಖೆ ಘೋಷಿಸಿದೆ. ಇಂದು ಮತ್ತು ನಾಳೆ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ,...

ದಿನದ ಸುದ್ದಿ16 hours ago

ಇಂದು – ನಾಳೆ ಹಾವೇರಿ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ

ಸುದ್ದಿದಿನಡೆಸ್ಕ್:ಇಂದು ಮತ್ತು ನಾಳೆ, ಹಾವೇರಿ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಉತ್ತರಕಡ ಜಿಲ್ಲೆಯ ಶಾಲೆ ಹಾಗೂ ಪದವಿ ಪೂರ್ವ, ಐಟಿಐ ಮತ್ತು...

ದಿನದ ಸುದ್ದಿ17 hours ago

ಯುವಕರಿಗೆ ಶಿಕ್ಷಣ, ಕೌಶಲ್ಯ ಹೆಚ್ಚಿಸುವ ‘ಮಾದರಿ ಕೌಶಲ್ಯ ಸಾಲ ಯೋಜನೆ’ಗೆ ಚಾಲನೆ

ಸುದ್ದಿದಿನಡೆಸ್ಕ್:ಕೇಂದ್ರ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಖಾತೆ ರಾಜ್ಯ ಸಚಿವ ಜಯಂತ್ ಚೌಧರಿ ನವದೆಹಲಿಯಲ್ಲಿ ನಿನ್ನೆ ‘ಮಾದರಿ ಕೌಶಲ್ಯ ಸಾಲ ಯೋಜನೆ’ಗೆ ಚಾಲನೆ ನೀಡಿದರು. ಸಮಾರಂಭ ಉದ್ದೇಶಿಸಿ ಮಾತನಾಡಿದ...

ದಿನದ ಸುದ್ದಿ18 hours ago

ಇಂದು ಕಾರ್ಗಿಲ್ ವಿಜಯ ದಿವಸ್ ; ಯೋಧರ ಸ್ಮರಣೆ

ಸುದ್ದಿದಿನಡೆಸ್ಕ್:ಇಂದು ಕಾರ್ಗಿಲ್ ವಿಜಯ್ ದಿವಸ್. ಇದರ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಲಿದ್ದಾರೆ. ಪಾಕಿಸ್ತಾನ ವಿರುದ್ಧದ ಕಾರ್ಗಿಲ್ ಯುದ್ಧದಲ್ಲಿ ಬಲಿದಾನಗೈದ...

ದಿನದ ಸುದ್ದಿ1 day ago

ದಾವಣಗೆರೆ | ನಾಳೆ ಎಲ್ಲೆಲ್ಲಿ ಕರೆಂಟ್ ಕಟ್..

ಸುದ್ದಿದಿನ,ದಾವಣಗೆರೆ:ಜಲಸಿರಿ ಕಾಮಗಾರಿ ಪ್ರಯುಕ್ತ ಜುಲೈ 26 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಎಎಫ್.15 ರಂಗನಾಥ ಫೀಡರ್ ವ್ಯಾಪ್ತಿಯ ವಿದ್ಯಾನಗರ ಕೊನೆ ಬಸ್ ನಿಲ್ದಾಣದಿಂದ...

ದಿನದ ಸುದ್ದಿ1 day ago

ದಾವಣಗೆರೆ | ಸೆಪ್ಟೆಂಬರ್ 14 ರಂದು ರಾಷ್ಟ್ರೀಯ ಲೋಕ ಅದಾಲತ್

ಸುದ್ದಿದಿನ,ದಾವಣಗೆರೆ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಸೆಪ್ಟೆಂಬರ್ 14 ರಂದು ರಾಷ್ಟ್ರೀಯ ಲೋಕ್...

ದಿನದ ಸುದ್ದಿ1 day ago

ದಾವಣಗೆರೆ ಜಿಲ್ಲೆಯಲ್ಲಿ ವಾಡಿಕೆಗಿಂತ ಈ ಬಾರಿ ಹೆಚ್ಚು ಮಳೆ

ಸುದ್ದಿದಿನ,ದಾವಣಗೆರೆ:ದಾವಣಗೆರೆ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಪೂರ್ವ ಮುಂಗಾರು ಹಾಗೂ ಮುಂಗಾರಿನಲ್ಲಿ ವಾಡಿಕೆಗಿಂತ 41 ಮಿ.ಮೀ ಹೆಚ್ಚು ಮಳೆಯಾಗಿದೆ. 2024 ರ ಜನವರಿಯಿಂದ ಜುಲೈ 23 ರ ವರೆಗಿನ...

Trending