Connect with us

ದಿನದ ಸುದ್ದಿ

ಸರಳ ತರಳಬಾಳು ಹುಣ್ಣಿಮೆಯಂದು ಗೋಶಾಲೆ ಪುಣ್ಯಕೋಟಿಗೆ ಅರ್ಪಣೆ

Published

on

ಸುದ್ದಿದಿನ,‌ಸಿರಿಗೆರೆ: ಉತ್ಸವಗಳಿಂದ ಸಮಾಜದ ಅಭಿವೃದ್ಧಿ ಮಾಡುವುದಕ್ಕಿಂತ ಉತ್ಸವಗಳ ಸಾರ್ಥಕತೆಯ ನೆನಪಿಗೆ ಸಮಾಜದ ಅಭ್ಯುದಯಕ್ಕೆ ಶ್ರಮಿಸುವ ವಿಶೇಷ ಆಶಯ ಹೊಂದಿ ಆ ಕಾರ್ಯದಲ್ಲಿ ಯಶಸ್ಸು ಗಳಿಸಿದ ಕೀರ್ತಿ ತರಳಬಾಳು ಶ್ರೀ ಜಗದ್ಗುರುವರ್ಯರದು.

ಪರಂಪರೆಗೆ ಮತ್ತು ಅಪಾರ ಶಿಷ್ಯಬಳಗದ ಮನಸ್ಸಿಗೆ ಘಾಸಿ ಮಾಡದಂತೆ ಎಲ್ಲರಿಗೂ ಅನುಕೂಲ ತರುವ ಸರ್ವರೂ ಒಪ್ಟಲೇಬೇಕಾದ ಕಾರ್ಯಕ್ರಮಗಳನ್ನು ಜಾರಿಯ ಅನುಷ್ಠಾನದ ಅಪರೂಪದ ವ್ಯಕ್ತಿತ್ವ ಚಿಂತಕ ಶ್ರೇಷ್ಠರಾದ ಶ್ರೀ ತರಳಬಾಳು ಜಗದ್ಗುರು ಡಾ.ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿಗಳವರದು.

ನಾಡಿನ ಧಾರ್ಮಿಕ ಸಮಾರಂಭಗಳಿಗೆ ತರಳಬಾಳು ಹುಣ್ಣಿಮೆ ಮಹೋತ್ಸವಕ್ಕೆ ಮಾತೃಸ್ವರೂಪದಂತಹ ಸ್ಥಾನವಿದೆ. ಸಮಾರಂಭದ ಸಾರ್ಥಕತಗೆ ನೂರಾರು ಸಮಾಜ ಮುಖಿ ಕಾರ್ಯಗಳು ಸಾಕ್ಷಿಯಾಗಿವೆ. ಅಂತಹ ಜನಮುಖಿ ಕಾರ್ಯಗಳಲ್ಲಿ ಸಾವಿರಾರು ಕೋಟಿಗಳ ವೆಚ್ಚದಲ್ಲಿ ನೂರಾರು ಕೆರೆಗಳಿಗಳ ಒಡಲಿಗೆ ಗಂಗೆ ಹರಿದು ರೈತರ ನೆಮ್ಮದಿಗೆ ಕಾರಣವಾಗಿರುವುದು ಪ್ರಮುಖವಾದುದು. ಆರು ದಶಕಗಳಿಂದಲೂ ಸರ್ವರ ಜನಾಧರಣೆಯ ಸಮಾರಂಭವಾಗಿ ಆಯಾ ಕಾಲದ ಸಮಸ್ಯೆಗಳಿಗೆ ಸ್ಪಂದಿಸುವ ಮಾನವೀಯತೆಯ ಮಹೋತ್ಸವವಾಗಿದೆ.

ಈ ವರ್ಷದ ತರಳಬಾಳು ಹುಣ್ಣಿಮೆ ಮಹೋತ್ಸವ ಹೊಯ್ಸಳರ ನಾಡಾದ ಹಳೇಬೀಡಿನಲ್ಲಿ ಆಚರಿಸುವ ಶ್ರೀಗಳ ಆಶಯಕ್ಕೆ ಆ ಭಾಗದ ಭಕ್ತರು ತುದಿಗಾಲಲ್ಲಿ ನಿಂತಿದ್ದರು.

ಭೀಕರ ಬರಗಾಲದ ಛಾಯೆಯನ್ನು ಮನಗಂಡು
ಕಾರ್ಯಕ್ರಮಗಳಿಗೆ ಆ ಭಾಗದ ಜ್ವಲಂತ ಸಮಸ್ಯೆಗಳಿಗೆ ತರಳಬಾಳು ಹುಣ್ಣಿಮೆ ಮಹೋತ್ಸವದ ಮೂಲಕ ಉತ್ತರ ಕಂಡುಕೊಳ್ಳುವ ನಿಟ್ಟಿನಲ್ಲಿ ಶ್ರೀಗಳು ಹಳೇಬೀಡು ವ್ಯಾಪ್ತಿಯ ಕೆರೆಗಳಿಗೆ ಶಾಶ್ವತವಾಗಿ ನೀರು ತುಂಬಿಸುವ ಯೋಜನೆ ಕಾರ್ಯಪಾಲನೆಯ ನಂತರ ಹುಣ್ಣಿಮೆ ಮಹೋತ್ಸವ ಆಚರಿಸುವ ಅರ್ಥಪೂರ್ಣ ನಿರ್ಧಾರ ಕೈಗೊಂಡು ಆ ನಿಟ್ಟಿನಲ್ಲಿ ಹೆಜ್ಜೆ ಹಾಕಿದರು.

ಪರಂಪರೆಯಂತೆ ಸಾಂಕೇತಿಕವಾಗಿ ಸರಳವಾಗಿ 2019ರ ಫೆಬ್ರುವರಿ 19ರಂದು ಸಿರಿಗೆರೆಯಲ್ಲಿ ತರಳಬಾಳು ಹುಣ್ಣಿಮೆ ಮಹೋತ್ಸವ ಆಚರಣೆಯ ಜೊತೆಗೆ ನಾಡಿನ ಗೋವುಗಳ ಪಾಲನೆಗೆ ಅಂದೇ ಗೋಶಾಲೆಯ ಉದ್ಘಾಟಿನೆಯ ಕೈಂಕರ್ಯಕ್ಕೆ ಶ್ರೀ ಜಗದ್ಗುವರ್ಯರು ಮನಸ್ಸು ಮಾಡಿರುವುದು ಅತ್ಯಂತ ಸಂದರ್ಭೋಚಿತವಾದುದಾಗಿದೆ.

ಸದಾ ಜನಮುಖಿ ಕಾರ್ಯಗಳಲ್ಲಿ ಸಂತೃಪ್ತಿ ಕಾಣುವ, ನಿತ್ಯವೂ ರೈತಬಂಧುಗಳ ಉನ್ನತಿಗೆ ಶ್ರಮಿಸುವ ಕನ್ನಡ ನಾಡಿನ ಅಪರೂಪದ ವಿದ್ವತ್ಪೂರ್ಣ, ಸಂತಶ್ರೇಷ್ಟರಾಗಿ ,ರೈತ ಮೆಚ್ಚಿದ ಮಹಾಗುರುವೆಂದೇ ಸುಪ್ರಸಿದ್ಧಿಯಾದ ಪರಮ ಪೂಜನೀಯ ಶ್ರೀ ತರಳಬಾಳು ಜಗದ್ಗುರು ಡಾ.ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿಗಳವರ ನೂರಾರು ಸಮಾಜಮುಖಿ ಸಾಧನೆಗಳಿಗೆ ಮತ್ತೊಂದು ಸೇರ್ಪಡೆ ಎನ್ನುವಂತೆ ತರಳಬಾಳು ಶ್ರೀ ಮಠದ ಸಾವಿರಾರು ಎಕರೆ ಭೂಮಿಯಲ್ಲಿ ಸಕಲ ಸೌಲಭ್ಯಗಳಿಂದ ಕೂಡಿದ ಗೋಶಾಲೆಯ ನಿರ್ಮಾಣದ ತಯಾರಿ ಭರದಿಂದ ಸಾಗಿದೆ.

ಅಕ್ಷರ,ಅನ್ನ,ಆಸರೆ,ಶಿಕ್ಷಣ,
ಉದ್ಯೋಗ,ನ್ಯಾಯದಾನ, ಕನ್ನಡ ಜಾನಪದ ಕಲೆಗಳ ಪುನರುಜ್ಜೀವನ , ಸಾಮಾಜಿಕ ಕಾಳಜಿ,ಪರಿಸರ ರಕ್ಷಣೆ, ಶರಣ ಸಂಸ್ಕೃತಿಯನ್ನು ವಿಶ್ವಕ್ಕೆ ದರ್ಶಸಿದ ಗಣಕ ಋಷಿ ಎಂದೇ ನಾಮದೇಯರಾಗಿರುವ ಶ್ರೀ ಗುರುವರ್ಯರ ಸಾಧನೆಗಳ ಕುರಿತು ಬರೆಯುವುದೆಂದರೆ ಅದು ಸೂರ್ಯನನ್ನು ಕನ್ನಡಯಲ್ಲಿ ಹಿಡಿದಂತೆ..!

ಶ್ರೀಗಳ ದೂರದರ್ಶಿತ್ವ ಹೇಗಿದೆ ಎಂದರೆ. ಈ ವರ್ಷ ಬರದ ಮುನ್ಸೂಚನೆ ಅರಿತ ಶ್ರೀಗಳವರು ಪುಣ್ಯಕೋಟಿ ಉಳಿಸುವ ಅಭಿದಾನಕ್ಕೆ ಕೈ ಹಾಕಿ ಆರು ತಿಂಗಳಿಂದ ಕರ್ತವ್ಯ ಮಗ್ನರಾಗಿ ನೂರಾರು ಲೋಡ್ ಮೇವನ್ನು ಭಕ್ತರ ಮೂಲಕ ಸಂಗ್ರಹಿಸಿ ಕಾಮಧೇನುಗಳ ಸ್ವಾಗತಕ್ಕೆ ಕಾದು ಕುಳಿತಿದ್ದಾರೆ. ಸಿರಿಗೆರೆ ಸಮೀಪದ ಮೇಗಳಹಳ್ಳಿ ಬಳಿ ದೊಡ್ಡ ಕಾವಲೆಂದೇ ಕಲೆಯಲ್ಪಡುವ ಶ್ರೀ ಮಠದ ಒಡೆತನದ ಸಾವಿರಾರು ಎಕರೆ ಭೂ ಪ್ರದೇಶವನ್ನು ಶಿವಕುಮಾರ ವನವನ್ನಾಗಿಸಿ ಹತ್ತಾರು ವನ್ಯಜೀವಿಗಳಿಗೆ ಆಶ್ರಯ ತಾಣವಾಗಿರುವ ಪ್ರದೇಶದಲ್ಲಿ ತರಳಬಾಳು ಗೋಶಾಲೆ ನಿರ್ಮಾಣವಾಗುತ್ತಿದೆ.

ಹೇಗಿರುತ್ತದೆ ಗೋಶಾಲೆ..?

ಕರ್ನಾಟಕದ ಅನೇಕ ಪ್ರದೇಶಗಳು ಪದೇ ಪದೇ ಬರಗಾಲಕ್ಕೆ ತುತ್ತಾಗುವ ಸ್ಥಿತಿ ಇದೆ. ಮನುಷ್ಯರು ಹೇಗಾದರೂ ಬದುಕಿಕೊಳ್ಳುತ್ತಾರೆ. ಆದರೆ ದನಕರುಗಳು ಮೇವು ನೀರಿಲ್ಲದೆ ಕಂಗಾಲಾಗುತ್ತವೆ.

ಚಾಮರಾಜ ನಗರದ ಬಳಿ ಮೇವು ನೀರಿಲ್ಲದೆ ಎಲ್ಲೆಂದರಲ್ಲಿ ದನಕರುಗಳು ಸತ್ತಿರುವ ವರದಿಗಳು ದುಃಖದಾಯಕ ವರದಿಗೆ ಮನನೊಂದ ಶ್ರೀಗಳು
ಸಿರಿಗೆರೆ ಸಮೀಪ ಇರುವ ಶಿವಕುಮಾರ ವನದ1000 ಎಕರೆ ಅರಣ್ಯ ಪ್ರದೇಶದಲ್ಲಿ ಬೃಹತ್ ಗೋಶಾಲೆಯನ್ನು ಆರಂಭಿಸುವ ಯೋಜನೆಯನ್ನು ಶ್ರೀ ತರಳಬಾಳು ಜಗದ್ಗುರು ಡಾ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಯವರು ಸಂಕಲ್ಪಿಸಿದರು.

ಇದೊಂದು ಖಾಯಂ ವ್ಯವಸ್ಥೆಯಾಗಿದ್ದು, ಈ ಕಾರ್ಯಕ್ಕಾಗಿ 2 ಕೋಟಿ ರೂಗಳನ್ನು ಮೀಸಲಿರಿಸಲಾಗಿದೆ. ಈ ಕಾಡಿನಲ್ಲಿ ಹರಿಯುವ ಹಳ್ಳಕ್ಕೆ ಚೆಕ್ ಡ್ಯಾಂ ನಿರ್ಮಾಣ ಮಾಡಿ ಜಾನುವಾರುಗಳಿಗೆ ನೀರನ್ನು ಒದಗಿಸಲಾಗುವುದಲ್ಲದೆ ಆಧುನಿಕ ತಂತ್ರಜ್ಞಾನವನ್ನು ಬಳಸಿ ಮೇವನ್ನು ಬೆಳೆಸಲಾಗುವುದು. ನೀರನ್ನು ಪಂಪ್ ಮಾಡಲು ಸೋಲಾರ್ ವಿದ್ಯತ್ ಉತ್ಪಾದನೆಯ ಬಗ್ಗೆಯೂ ಚಿಂತಿಸಲಾಗುತ್ತಿದೆ. ಕಾಡಿನಲ್ಲಿರುವ ಮೃಗಗಳಿಂದ ಜಾನುವಾರುಗಳಿಗೆ ತೊಂದರೆ ಆಗದಂತೆ ಬೇಲಿಯನ್ನು ನಿರ್ಮಿಸಲಾಗುವುದು. ರಾಜ್ಯದ ಯಾವುದೇ ಭಾಗದ ರೈತರೂ ಇದರ ಪ್ರಯೋಜನ ಪಡೆಯಬಹುದು.

ರೈತರು ಬಯಸಿದರೆ ಜಾನುವಾರುಗಳನ್ನು ಗೋಶಾಲೆಗೆ ತರಲು ಮಠದಿಂದ ಲಾರಿಯನ್ನು ಕಳುಹಿಸುವ ವ್ಯವಸ್ಥೆ ಮಾಡಲಾಗುವುದು. ಬರ ಪ್ರದೇಶದ ರೈತರು ಇಲ್ಲಿಗೆ ದನಕರುಗಳನ್ನು ತಂದು ಮಳೆಗಾಲ ಬರುವ ತನಕ ಮೇವು ಮತ್ತು ನೀರನ್ನು ಪಡೆದು ಸಾಕಬಹುದು.* *ರಾಸುಗಳೊಂದಿಗೆ ಬರುವ ರೈತರಿಗೂ ಮಠದಿಂದ ಆಹಾರ ಮತ್ತು ವಸತಿಯನ್ನು ನೀಡಲಾಗುವುದು.

ತಮ್ಮ ಭಾಗದಲ್ಲಿ ಮಳೆ ಆರಂಭವಾಗಿ ಮೇವು ನೀರು ದೊರೆಯುವವರೆಗೂ ರೈತರು ಶಿವಕುಮಾರ ವನದಲ್ಲಿ ತನ್ನ ರಾಸುಗಳನ್ನು ಸಾಕಿಕೊಂಡು ಹೋಗಲು ಅನುವು ಮಾಡಿಕೊಡುವುದಾಗಿ ಇಂದು ಗೋಶಾಲೆಯ ಕೆಲಸ ಕಾರ್ಯಗಳನ್ನು ಪರಿಶೀಲಿಸಿ ಸೂಕ್ತ ಮಾರ್ಗದರ್ಶನ ನೀಡಿದ ಶ್ರೀ ಜಗದ್ಗುರುವರ್ಯರು ತಿಳಿಸಿದರು.

ಬರಹ : ಬಸವರಾಜ ಸಿರಿಗೆರೆ

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ ನಡೆದ ಕೊಲೆಗಳೆಷ್ಟು ? ಅತ್ಯಾಚಾರಗಳೆಷ್ಟು ಗೊತ್ತಾ?

Published

on

ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಹಾದಿ ಬೀದಿಯಲ್ಲಿ ಹತ್ಯೆಗಳು ಆಗುತ್ತಿವೆ. ಬೆಂಗಳೂರು ನಗರದಲ್ಲಿ ಮಾದಕ ವಸ್ತುಗಳ ದಂಧೆ ಅವ್ಯಾಹತವಾಗಿದೆ.

ಕಳೆದ ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ 430 ಹತ್ಯೆಗಳು ಮತ್ತು 198ಅತ್ಯಾಚಾರ ಪ್ರಕರಣಗಳು ವರದಿಯಾಗಿವೆ. ರಾಜ್ಯಗೃಹ ಇಲಾಖೆ ಕಾರ್ಯನಿರ್ವಹಿಸುತ್ತಿದೆಯೋ ಅಥವಾ ನಿದ್ದೆ ಮಾಡುತ್ತಿದೆಯೋ ? ಎಂದು ಸಾಮಾಜಿಕ ಜಾಲತಾಣದಲ್ಲಿ ಜೆಡಿಎಸ್ ಪ್ರಶ್ನಿಸಿದೆ.ಇದೇ ವೇಳೆ, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದ್ದು, ಅಪರಾಧ ಪ್ರಮಾಣ ಹೆಚ್ಚಳವಾಗಿರುವುದರಿಂದ ಕೂಡಲೇ ಈ ಬಗ್ಗೆ ಕ್ರಮವಹಿಸಬೇಕೆಂದು ಆಗ್ರಹಿಸಿ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಬಿಜೆಪಿ ನಿಯೋಗ ದೂರು ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ : ಗೃಹ ಸಚಿವ ಡಾ. ಜಿ.ಪರಮೇಶ್ವರ್

Published

on

ಸುದ್ದಿದಿನ, ತುಮಕೂರು : ರಾಜ್ಯದಲ್ಲಿ ಜನರು ಶಾಂತಿ ಮತ್ತು ನೆಮ್ಮದಿಯಿಂದ ಬದುಕಲು ಯಾವುದೇ ಕ್ರಮ ತೆಗೆದುಕೊಳ್ಳಲು ಸಿದ್ಧ. ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಶಾಂತಿಯನ್ನು ಕದಡಲು ಎಷ್ಟು ಪ್ರಯತ್ನ ನಡೆಸಿದರೂ ಅದನ್ನು ನಿಯಂತ್ರಿಸುವ ಶಕ್ತಿ ನಮ್ಮ ಸರ್ಕಾರಕ್ಕಿದೆ ಎಂದು ತಿರುಗೇಟು ನೀಡಿದರು. ರಾಜ್ಯದಲ್ಲಿ ಅಪರಾಧ ಪ್ರಕರಣ ಹೆಚ್ಚಳವಾಗುತ್ತಿರುವ ಬಗ್ಗೆ ಪೊಲೀಸ್ ಅಧಿಕಾರಿಗಳೊಂದಿಗೆ ಕೂಲಂಕುಷವಾಗಿ ಚರ್ಚಿಸಿ, ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಡಾ. ಜಿ. ಪರಮೇಶ್ವರ್ ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಿಧಾನ ಪರಿಷತ್ ಚುನಾವಣೆ ; 91 ನಾಮಪತ್ರಗಳು ಪುರಸ್ಕೃತ

Published

on

ಸುದ್ದಿದಿನ ಡೆಸ್ಕ್ : ಕರ್ನಾಟಕ ವಿಧಾನ ಪರಿಷತ್‌ನ ಚುನಾವಣೆಗೆ ಸಂಬಂಧಪಟ್ಟಂತೆ ಒಟ್ಟು 91ನಾಮಪತ್ರಗಳು ಪುರಸ್ಕೃತಗೊಂಡಿವೆ. ಈಶಾನ್ಯ ಪದವಿಧರ ಕ್ಷೇತ್ರಕ್ಕೆ ಒಟ್ಟು 26 ನಾಮಪತ್ರಗಳು ಪುರಸ್ಕೃತಗೊಂಡಿದೆ.

ಅದೇ ರೀತಿ ಕರ್ನಾಟಕದ ಆಗ್ನೇಯಾ ಶಿಕ್ಷಕರ ಕ್ಷೇತ್ರಕ್ಕೆ 15, ಬೆಂಗಳೂರು ಪದವೀಧರರ ಕ್ಷೇತ್ರಕ್ಕೆ 16, ಕರ್ನಾಟಕ ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ 9, ಕನಾಟಕ ನೈಋತ್ಯ ಪದವೀಧರ ಕ್ಷೇತ್ರಕ್ಕೆ12 ಹಾಗೂ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಒಟ್ಟು 13 ನಾಮಪತ್ರಗಳು ಪುರಸ್ಕೃತಗೊಂಡಿವೆ ಎಂದು ಚುನಾವಣಾ ಆಯೋಗದ ಪ್ರಕಟಣೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ9 hours ago

ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ ನಡೆದ ಕೊಲೆಗಳೆಷ್ಟು ? ಅತ್ಯಾಚಾರಗಳೆಷ್ಟು ಗೊತ್ತಾ?

ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಹಾದಿ ಬೀದಿಯಲ್ಲಿ ಹತ್ಯೆಗಳು ಆಗುತ್ತಿವೆ. ಬೆಂಗಳೂರು ನಗರದಲ್ಲಿ ಮಾದಕ ವಸ್ತುಗಳ ದಂಧೆ ಅವ್ಯಾಹತವಾಗಿದೆ. ಕಳೆದ...

ದಿನದ ಸುದ್ದಿ9 hours ago

ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ : ಗೃಹ ಸಚಿವ ಡಾ. ಜಿ.ಪರಮೇಶ್ವರ್

ಸುದ್ದಿದಿನ, ತುಮಕೂರು : ರಾಜ್ಯದಲ್ಲಿ ಜನರು ಶಾಂತಿ ಮತ್ತು ನೆಮ್ಮದಿಯಿಂದ ಬದುಕಲು ಯಾವುದೇ ಕ್ರಮ ತೆಗೆದುಕೊಳ್ಳಲು ಸಿದ್ಧ. ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ ಎಂದು...

ದಿನದ ಸುದ್ದಿ9 hours ago

ವಿಧಾನ ಪರಿಷತ್ ಚುನಾವಣೆ ; 91 ನಾಮಪತ್ರಗಳು ಪುರಸ್ಕೃತ

ಸುದ್ದಿದಿನ ಡೆಸ್ಕ್ : ಕರ್ನಾಟಕ ವಿಧಾನ ಪರಿಷತ್‌ನ ಚುನಾವಣೆಗೆ ಸಂಬಂಧಪಟ್ಟಂತೆ ಒಟ್ಟು 91ನಾಮಪತ್ರಗಳು ಪುರಸ್ಕೃತಗೊಂಡಿವೆ. ಈಶಾನ್ಯ ಪದವಿಧರ ಕ್ಷೇತ್ರಕ್ಕೆ ಒಟ್ಟು 26 ನಾಮಪತ್ರಗಳು ಪುರಸ್ಕೃತಗೊಂಡಿದೆ. ಅದೇ ರೀತಿ...

ದಿನದ ಸುದ್ದಿ10 hours ago

ದೀನ ದಯಾಳ್ ಅಂತ್ಯೋದಯ ಯೋಜನೆ ; ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : ಹೊನ್ನಾಳಿ ಪಟ್ಟಣದ ಸಾರ್ವಜನಿಕರಿಗೆ ದೀನ ದಯಾಳ್ ಅಂತ್ಯೋದಯ ಯೋಜನೆ-ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಯೋಜನೆಯಡಿ ಪ್ರಸಕ್ತ ಸಾಲಿಗೆ ಸ್ವಯಂ ಉದ್ಯೋಗ ಕಾರ್ಯಕ್ರಮದಡಿ, ವ್ಯಕ್ತಿಗತ ಉದ್ಯಮಶೀಲತೆ...

ದಿನದ ಸುದ್ದಿ10 hours ago

ಐತಿಹಾಸಿಕ, ಪಾರಂಪರಿಕ ದೇವಾಲಯಗಳು ಶಾಸನಗಳು, ವೀರಗಲ್ಲು, ಸ್ಮಾರಕಗಳ ಸಂರಕ್ಷಣೆ ; ಸಾರ್ವಜನಿಕರ ಸಹಕಾರ ಅಗತ್ಯ

ಸುದ್ದಿದಿನ,ದಾವಣಗೆರೆ : ಕರ್ನಾಟಕ ಇತಿಹಾಸದ ಶಾಸನಗಳು, ದೇವಾಲಯಗಳು, ಸ್ಮಾರಕಗಳು ಸೇರಿದಂತೆ ಸ್ಥಳಗಳಿದ್ದಲ್ಲಿ ಸಾರ್ವಜನಿಕರು ತಮ್ಮ ತಾಲ್ಲೂಕು, ಊರು, ಗ್ರಾಮಗಳಲ್ಲಿ ವಿನಾಶದ ಸ್ಥಿತಿಯಲ್ಲಿರುವ ದೇವಾಲಯಗಳು, ಶಾಸನಗಳು, ವೀರಗಲ್ಲುಗಳು, ಕೋಟೆಗಳು,...

ದಿನದ ಸುದ್ದಿ11 hours ago

ಪ್ರಥಮ ಪಿ.ಯು.ಸಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ ; ಜಿಲ್ಲೆಯಲ್ಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2024-25 ನೇ ಸಾಲಿಗೆ ಡಾ|| ಎ.ಪಿ.ಜೆ.ಅಬ್ದುಲ್ ಕಲಾಂ ಪದವಿ ಪೂರ್ವ ವಸತಿ ಕಾಲೇಜು, ಕೊಂಡಜ್ಜಿ ಗ್ರಾಮದಲ್ಲಿನ ಮೊರಾರ್ಜಿ...

ದಿನದ ಸುದ್ದಿ14 hours ago

ಮುಂದಿನ ವರ್ಷದಿಂದ 10ನೇ ತರಗತಿಗೆ ಕೃಪಾಂಕ ರದ್ದು ; ಸಚಿವ ಮಧುಬಂಗಾರಪ್ಪ

ಸುದ್ದಿದಿನ, ಚಿಕ್ಕಮಗಳೂರು : ಪರೀಕ್ಷೆಯಲ್ಲಿ ಪಾವಿತ್ರತೆ ಮತ್ತು ಶಿಸ್ತು ಕಾಪಾಡುವ ಉದ್ದೇಶದಿಂದ ಈ ವರ್ಷ ಹತ್ತನೆ ತರಗತಿ ವಿಧ್ಯಾರ್ಥಿಗಳಿಗೆ ಶೇಕಡ 20 ರಷ್ಟು ಕೃಪಾಂಕಗಳನ್ನು ನೀಡಲಾಗಿದೆ. ಇದು...

ದಿನದ ಸುದ್ದಿ1 day ago

ಹಲವು ಜಿಲ್ಲೆಗಳಲ್ಲಿ ಪೂರ್ವ ಮುಂಗಾರು ಆರಂಭ; ಕೃಷಿ ಚಟುವಟಿಕೆ ಆರಂಭ

ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಮುಂದಿನ ಒಂದು ವಾರ ಮುಂಗಾರು ಮಳೆ ಚುರುಕುಗೊಳ್ಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಕೊಡಗು, ಮೈಸೂರು, ಹಾಸನ,...

ದಿನದ ಸುದ್ದಿ1 day ago

ಮೇಲ್ಮನೆಯ ಆರು ಕ್ಷೇತ್ರಗಳ ನಾಮಪತ್ರ ಪರಿಶೀಲನೆ ಪ್ರಗತಿಯಲ್ಲಿ ; ಕಣದಲ್ಲಿ 103 ಅಭ್ಯರ್ಥಿಗಳು : ಇಲ್ಲಿದೆ ಸಂಪೂರ್ಣ ಮಾಹಿತಿ

ಸುದ್ದಿದಿನ ಡೆಸ್ಕ್ : ವಿಧಾನಪರಿಷತ್ತಿನ ಆರು ಸ್ಥಾನಗಳಿಗೆ 103 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ಇಂದು ನಾಮಪತ್ರಗಳ ಪರಿಶೀಲನೆ ಕಾರ್ಯ ಆರಂಭಗೊಂಡಿದೆ. ಕಾಂಗ್ರೆಸ್, ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷದ ಅಭ್ಯರ್ಥಿಗಳು...

ದಿನದ ಸುದ್ದಿ1 day ago

ವಸತಿ ಶಾಲೆಯಲ್ಲಿನ 7, 8 ಮತ್ತು 9ನೇ ತರಗತಿಗಳಲ್ಲಿನ ಖಾಲಿ ಸ್ಥಾನಗಳಿಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿನ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಡಿ ಬರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ನಡೆಸುವ ಒಟ್ಟು 22 ವಸತಿ ಶಾಲೆಗಳು ಕಾರ್ಯನಿರ್ವಹಿಸುತ್ತಿದ್ದು, ಈ ವಸತಿ...

Trending