Connect with us

ದಿನದ ಸುದ್ದಿ

ಸರಳ ತರಳಬಾಳು ಹುಣ್ಣಿಮೆಯಂದು ಗೋಶಾಲೆ ಪುಣ್ಯಕೋಟಿಗೆ ಅರ್ಪಣೆ

Published

on

ಸುದ್ದಿದಿನ,‌ಸಿರಿಗೆರೆ: ಉತ್ಸವಗಳಿಂದ ಸಮಾಜದ ಅಭಿವೃದ್ಧಿ ಮಾಡುವುದಕ್ಕಿಂತ ಉತ್ಸವಗಳ ಸಾರ್ಥಕತೆಯ ನೆನಪಿಗೆ ಸಮಾಜದ ಅಭ್ಯುದಯಕ್ಕೆ ಶ್ರಮಿಸುವ ವಿಶೇಷ ಆಶಯ ಹೊಂದಿ ಆ ಕಾರ್ಯದಲ್ಲಿ ಯಶಸ್ಸು ಗಳಿಸಿದ ಕೀರ್ತಿ ತರಳಬಾಳು ಶ್ರೀ ಜಗದ್ಗುರುವರ್ಯರದು.

ಪರಂಪರೆಗೆ ಮತ್ತು ಅಪಾರ ಶಿಷ್ಯಬಳಗದ ಮನಸ್ಸಿಗೆ ಘಾಸಿ ಮಾಡದಂತೆ ಎಲ್ಲರಿಗೂ ಅನುಕೂಲ ತರುವ ಸರ್ವರೂ ಒಪ್ಟಲೇಬೇಕಾದ ಕಾರ್ಯಕ್ರಮಗಳನ್ನು ಜಾರಿಯ ಅನುಷ್ಠಾನದ ಅಪರೂಪದ ವ್ಯಕ್ತಿತ್ವ ಚಿಂತಕ ಶ್ರೇಷ್ಠರಾದ ಶ್ರೀ ತರಳಬಾಳು ಜಗದ್ಗುರು ಡಾ.ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿಗಳವರದು.

ನಾಡಿನ ಧಾರ್ಮಿಕ ಸಮಾರಂಭಗಳಿಗೆ ತರಳಬಾಳು ಹುಣ್ಣಿಮೆ ಮಹೋತ್ಸವಕ್ಕೆ ಮಾತೃಸ್ವರೂಪದಂತಹ ಸ್ಥಾನವಿದೆ. ಸಮಾರಂಭದ ಸಾರ್ಥಕತಗೆ ನೂರಾರು ಸಮಾಜ ಮುಖಿ ಕಾರ್ಯಗಳು ಸಾಕ್ಷಿಯಾಗಿವೆ. ಅಂತಹ ಜನಮುಖಿ ಕಾರ್ಯಗಳಲ್ಲಿ ಸಾವಿರಾರು ಕೋಟಿಗಳ ವೆಚ್ಚದಲ್ಲಿ ನೂರಾರು ಕೆರೆಗಳಿಗಳ ಒಡಲಿಗೆ ಗಂಗೆ ಹರಿದು ರೈತರ ನೆಮ್ಮದಿಗೆ ಕಾರಣವಾಗಿರುವುದು ಪ್ರಮುಖವಾದುದು. ಆರು ದಶಕಗಳಿಂದಲೂ ಸರ್ವರ ಜನಾಧರಣೆಯ ಸಮಾರಂಭವಾಗಿ ಆಯಾ ಕಾಲದ ಸಮಸ್ಯೆಗಳಿಗೆ ಸ್ಪಂದಿಸುವ ಮಾನವೀಯತೆಯ ಮಹೋತ್ಸವವಾಗಿದೆ.

ಈ ವರ್ಷದ ತರಳಬಾಳು ಹುಣ್ಣಿಮೆ ಮಹೋತ್ಸವ ಹೊಯ್ಸಳರ ನಾಡಾದ ಹಳೇಬೀಡಿನಲ್ಲಿ ಆಚರಿಸುವ ಶ್ರೀಗಳ ಆಶಯಕ್ಕೆ ಆ ಭಾಗದ ಭಕ್ತರು ತುದಿಗಾಲಲ್ಲಿ ನಿಂತಿದ್ದರು.

ಭೀಕರ ಬರಗಾಲದ ಛಾಯೆಯನ್ನು ಮನಗಂಡು
ಕಾರ್ಯಕ್ರಮಗಳಿಗೆ ಆ ಭಾಗದ ಜ್ವಲಂತ ಸಮಸ್ಯೆಗಳಿಗೆ ತರಳಬಾಳು ಹುಣ್ಣಿಮೆ ಮಹೋತ್ಸವದ ಮೂಲಕ ಉತ್ತರ ಕಂಡುಕೊಳ್ಳುವ ನಿಟ್ಟಿನಲ್ಲಿ ಶ್ರೀಗಳು ಹಳೇಬೀಡು ವ್ಯಾಪ್ತಿಯ ಕೆರೆಗಳಿಗೆ ಶಾಶ್ವತವಾಗಿ ನೀರು ತುಂಬಿಸುವ ಯೋಜನೆ ಕಾರ್ಯಪಾಲನೆಯ ನಂತರ ಹುಣ್ಣಿಮೆ ಮಹೋತ್ಸವ ಆಚರಿಸುವ ಅರ್ಥಪೂರ್ಣ ನಿರ್ಧಾರ ಕೈಗೊಂಡು ಆ ನಿಟ್ಟಿನಲ್ಲಿ ಹೆಜ್ಜೆ ಹಾಕಿದರು.

ಪರಂಪರೆಯಂತೆ ಸಾಂಕೇತಿಕವಾಗಿ ಸರಳವಾಗಿ 2019ರ ಫೆಬ್ರುವರಿ 19ರಂದು ಸಿರಿಗೆರೆಯಲ್ಲಿ ತರಳಬಾಳು ಹುಣ್ಣಿಮೆ ಮಹೋತ್ಸವ ಆಚರಣೆಯ ಜೊತೆಗೆ ನಾಡಿನ ಗೋವುಗಳ ಪಾಲನೆಗೆ ಅಂದೇ ಗೋಶಾಲೆಯ ಉದ್ಘಾಟಿನೆಯ ಕೈಂಕರ್ಯಕ್ಕೆ ಶ್ರೀ ಜಗದ್ಗುವರ್ಯರು ಮನಸ್ಸು ಮಾಡಿರುವುದು ಅತ್ಯಂತ ಸಂದರ್ಭೋಚಿತವಾದುದಾಗಿದೆ.

ಸದಾ ಜನಮುಖಿ ಕಾರ್ಯಗಳಲ್ಲಿ ಸಂತೃಪ್ತಿ ಕಾಣುವ, ನಿತ್ಯವೂ ರೈತಬಂಧುಗಳ ಉನ್ನತಿಗೆ ಶ್ರಮಿಸುವ ಕನ್ನಡ ನಾಡಿನ ಅಪರೂಪದ ವಿದ್ವತ್ಪೂರ್ಣ, ಸಂತಶ್ರೇಷ್ಟರಾಗಿ ,ರೈತ ಮೆಚ್ಚಿದ ಮಹಾಗುರುವೆಂದೇ ಸುಪ್ರಸಿದ್ಧಿಯಾದ ಪರಮ ಪೂಜನೀಯ ಶ್ರೀ ತರಳಬಾಳು ಜಗದ್ಗುರು ಡಾ.ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿಗಳವರ ನೂರಾರು ಸಮಾಜಮುಖಿ ಸಾಧನೆಗಳಿಗೆ ಮತ್ತೊಂದು ಸೇರ್ಪಡೆ ಎನ್ನುವಂತೆ ತರಳಬಾಳು ಶ್ರೀ ಮಠದ ಸಾವಿರಾರು ಎಕರೆ ಭೂಮಿಯಲ್ಲಿ ಸಕಲ ಸೌಲಭ್ಯಗಳಿಂದ ಕೂಡಿದ ಗೋಶಾಲೆಯ ನಿರ್ಮಾಣದ ತಯಾರಿ ಭರದಿಂದ ಸಾಗಿದೆ.

ಅಕ್ಷರ,ಅನ್ನ,ಆಸರೆ,ಶಿಕ್ಷಣ,
ಉದ್ಯೋಗ,ನ್ಯಾಯದಾನ, ಕನ್ನಡ ಜಾನಪದ ಕಲೆಗಳ ಪುನರುಜ್ಜೀವನ , ಸಾಮಾಜಿಕ ಕಾಳಜಿ,ಪರಿಸರ ರಕ್ಷಣೆ, ಶರಣ ಸಂಸ್ಕೃತಿಯನ್ನು ವಿಶ್ವಕ್ಕೆ ದರ್ಶಸಿದ ಗಣಕ ಋಷಿ ಎಂದೇ ನಾಮದೇಯರಾಗಿರುವ ಶ್ರೀ ಗುರುವರ್ಯರ ಸಾಧನೆಗಳ ಕುರಿತು ಬರೆಯುವುದೆಂದರೆ ಅದು ಸೂರ್ಯನನ್ನು ಕನ್ನಡಯಲ್ಲಿ ಹಿಡಿದಂತೆ..!

ಶ್ರೀಗಳ ದೂರದರ್ಶಿತ್ವ ಹೇಗಿದೆ ಎಂದರೆ. ಈ ವರ್ಷ ಬರದ ಮುನ್ಸೂಚನೆ ಅರಿತ ಶ್ರೀಗಳವರು ಪುಣ್ಯಕೋಟಿ ಉಳಿಸುವ ಅಭಿದಾನಕ್ಕೆ ಕೈ ಹಾಕಿ ಆರು ತಿಂಗಳಿಂದ ಕರ್ತವ್ಯ ಮಗ್ನರಾಗಿ ನೂರಾರು ಲೋಡ್ ಮೇವನ್ನು ಭಕ್ತರ ಮೂಲಕ ಸಂಗ್ರಹಿಸಿ ಕಾಮಧೇನುಗಳ ಸ್ವಾಗತಕ್ಕೆ ಕಾದು ಕುಳಿತಿದ್ದಾರೆ. ಸಿರಿಗೆರೆ ಸಮೀಪದ ಮೇಗಳಹಳ್ಳಿ ಬಳಿ ದೊಡ್ಡ ಕಾವಲೆಂದೇ ಕಲೆಯಲ್ಪಡುವ ಶ್ರೀ ಮಠದ ಒಡೆತನದ ಸಾವಿರಾರು ಎಕರೆ ಭೂ ಪ್ರದೇಶವನ್ನು ಶಿವಕುಮಾರ ವನವನ್ನಾಗಿಸಿ ಹತ್ತಾರು ವನ್ಯಜೀವಿಗಳಿಗೆ ಆಶ್ರಯ ತಾಣವಾಗಿರುವ ಪ್ರದೇಶದಲ್ಲಿ ತರಳಬಾಳು ಗೋಶಾಲೆ ನಿರ್ಮಾಣವಾಗುತ್ತಿದೆ.

ಹೇಗಿರುತ್ತದೆ ಗೋಶಾಲೆ..?

ಕರ್ನಾಟಕದ ಅನೇಕ ಪ್ರದೇಶಗಳು ಪದೇ ಪದೇ ಬರಗಾಲಕ್ಕೆ ತುತ್ತಾಗುವ ಸ್ಥಿತಿ ಇದೆ. ಮನುಷ್ಯರು ಹೇಗಾದರೂ ಬದುಕಿಕೊಳ್ಳುತ್ತಾರೆ. ಆದರೆ ದನಕರುಗಳು ಮೇವು ನೀರಿಲ್ಲದೆ ಕಂಗಾಲಾಗುತ್ತವೆ.

ಚಾಮರಾಜ ನಗರದ ಬಳಿ ಮೇವು ನೀರಿಲ್ಲದೆ ಎಲ್ಲೆಂದರಲ್ಲಿ ದನಕರುಗಳು ಸತ್ತಿರುವ ವರದಿಗಳು ದುಃಖದಾಯಕ ವರದಿಗೆ ಮನನೊಂದ ಶ್ರೀಗಳು
ಸಿರಿಗೆರೆ ಸಮೀಪ ಇರುವ ಶಿವಕುಮಾರ ವನದ1000 ಎಕರೆ ಅರಣ್ಯ ಪ್ರದೇಶದಲ್ಲಿ ಬೃಹತ್ ಗೋಶಾಲೆಯನ್ನು ಆರಂಭಿಸುವ ಯೋಜನೆಯನ್ನು ಶ್ರೀ ತರಳಬಾಳು ಜಗದ್ಗುರು ಡಾ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಯವರು ಸಂಕಲ್ಪಿಸಿದರು.

ಇದೊಂದು ಖಾಯಂ ವ್ಯವಸ್ಥೆಯಾಗಿದ್ದು, ಈ ಕಾರ್ಯಕ್ಕಾಗಿ 2 ಕೋಟಿ ರೂಗಳನ್ನು ಮೀಸಲಿರಿಸಲಾಗಿದೆ. ಈ ಕಾಡಿನಲ್ಲಿ ಹರಿಯುವ ಹಳ್ಳಕ್ಕೆ ಚೆಕ್ ಡ್ಯಾಂ ನಿರ್ಮಾಣ ಮಾಡಿ ಜಾನುವಾರುಗಳಿಗೆ ನೀರನ್ನು ಒದಗಿಸಲಾಗುವುದಲ್ಲದೆ ಆಧುನಿಕ ತಂತ್ರಜ್ಞಾನವನ್ನು ಬಳಸಿ ಮೇವನ್ನು ಬೆಳೆಸಲಾಗುವುದು. ನೀರನ್ನು ಪಂಪ್ ಮಾಡಲು ಸೋಲಾರ್ ವಿದ್ಯತ್ ಉತ್ಪಾದನೆಯ ಬಗ್ಗೆಯೂ ಚಿಂತಿಸಲಾಗುತ್ತಿದೆ. ಕಾಡಿನಲ್ಲಿರುವ ಮೃಗಗಳಿಂದ ಜಾನುವಾರುಗಳಿಗೆ ತೊಂದರೆ ಆಗದಂತೆ ಬೇಲಿಯನ್ನು ನಿರ್ಮಿಸಲಾಗುವುದು. ರಾಜ್ಯದ ಯಾವುದೇ ಭಾಗದ ರೈತರೂ ಇದರ ಪ್ರಯೋಜನ ಪಡೆಯಬಹುದು.

ರೈತರು ಬಯಸಿದರೆ ಜಾನುವಾರುಗಳನ್ನು ಗೋಶಾಲೆಗೆ ತರಲು ಮಠದಿಂದ ಲಾರಿಯನ್ನು ಕಳುಹಿಸುವ ವ್ಯವಸ್ಥೆ ಮಾಡಲಾಗುವುದು. ಬರ ಪ್ರದೇಶದ ರೈತರು ಇಲ್ಲಿಗೆ ದನಕರುಗಳನ್ನು ತಂದು ಮಳೆಗಾಲ ಬರುವ ತನಕ ಮೇವು ಮತ್ತು ನೀರನ್ನು ಪಡೆದು ಸಾಕಬಹುದು.* *ರಾಸುಗಳೊಂದಿಗೆ ಬರುವ ರೈತರಿಗೂ ಮಠದಿಂದ ಆಹಾರ ಮತ್ತು ವಸತಿಯನ್ನು ನೀಡಲಾಗುವುದು.

ತಮ್ಮ ಭಾಗದಲ್ಲಿ ಮಳೆ ಆರಂಭವಾಗಿ ಮೇವು ನೀರು ದೊರೆಯುವವರೆಗೂ ರೈತರು ಶಿವಕುಮಾರ ವನದಲ್ಲಿ ತನ್ನ ರಾಸುಗಳನ್ನು ಸಾಕಿಕೊಂಡು ಹೋಗಲು ಅನುವು ಮಾಡಿಕೊಡುವುದಾಗಿ ಇಂದು ಗೋಶಾಲೆಯ ಕೆಲಸ ಕಾರ್ಯಗಳನ್ನು ಪರಿಶೀಲಿಸಿ ಸೂಕ್ತ ಮಾರ್ಗದರ್ಶನ ನೀಡಿದ ಶ್ರೀ ಜಗದ್ಗುರುವರ್ಯರು ತಿಳಿಸಿದರು.

ಬರಹ : ಬಸವರಾಜ ಸಿರಿಗೆರೆ

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ವಸತಿ ಯೋಜನೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ.

ಈ ಯೋಜನೆಯಡಿ ಸೌಲಭ್ಯ ಒದಗಿಸಲು ನಿಗಧಿತ ಅರ್ಜಿ ನಮೂನೆಯಲ್ಲಿ ಅವಶ್ಯಕ ದಾಖಲಾತಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ್-1ರವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಚನ್ನಗಿರಿ ಕಚೇರಿಯನ್ನು ಸಂಪರ್ಕಿಸಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..

Published

on

1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ ಎಣ್ಣೆಯಂಶವಿರುವ ಆಹಾರವನ್ನು ಕಡಿಮೆ ಮಾಡಿ.

2. ಸಿಹಿ ಪದಾರ್ಥಗಳ ನಿಯಂತ್ರಣ (Avoid Sweets): ಸಕ್ಕರೆ, ಬೆಲ್ಲ, ಬೇಕರಿ ತಿಂಡಿಗಳು, ಐಸ್‌ಕ್ರೀಮ್ ಮತ್ತು ಕೃತಕ ಸಕ್ಕರೆ ಇರುವ ತಂಪು ಪಾನೀಯಗಳ ಬಳಕೆಯನ್ನು ಸಂಪೂರ್ಣವಾಗಿ ಕಡಿಮೆ ಮಾಡಿ ಅಥವಾ ದೂರವಿಡಿ.

3. ದಿನನಿತ್ಯದ ವ್ಯಾಯಾಮ (Regular Exercise): ಪ್ರತಿದಿನ ಕನಿಷ್ಠ 30 ರಿಂದ 45 ನಿಮಿಷಗಳ ಕಾಲ ವೇಗದ ನಡಿಗೆ (brisk walking), ಸೈಕ್ಲಿಂಗ್, ಈಜು ಅಥವಾ ಯೋಗ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ.

4. ದೇಹದ ತೂಕದ ನಿರ್ವಹಣೆ (Weight Management): ಅತಿಯಾದ ದೇಹದ ತೂಕವು ಇನ್ಸುಲಿನ್ ಕಾರ್ಯಕ್ಷಮತೆಯನ್ನು ಕುಂಠಿತಗೊಳಿಸುತ್ತದೆ. ಆದ್ದರಿಂದ ತೂಕವನ್ನು ಆರೋಗ್ಯಕರ ಮಿತಿಯಲ್ಲಿ ಇಟ್ಟುಕೊಳ್ಳುವುದು ಅತ್ಯಗತ್ಯ.

5. ನಿಯಮಿತ ರಕ್ತದ ಪರೀಕ್ಷೆ (Regular Blood Sugar Check): ವೈದ್ಯರ ಸಲಹೆಯಂತೆ ಕಾಲಕಾಲಕ್ಕೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು (Fasting ಮತ್ತು Post Prandial) ಹಾಗೂ ಮೂರು ತಿಂಗಳ ಸರಾಸರಿ ತಿಳಿಸುವ HbA1c ಪರೀಕ್ಷೆಯನ್ನು ಮಾಡಿಸಿಕೊಳ್ಳಿ.

6. ಸಮಯಕ್ಕೆ ಸರಿಯಾಗಿ ಔಷಧಿ ಸೇವನೆ (Timely Medication): ವೈದ್ಯರು ಸೂಚಿಸಿದ ಮಾತ್ರೆಗಳನ್ನು ಅಥವಾ ಇನ್ಸುಲಿನ್ ಅನ್ನು ನಿಗದಿತ ಸಮಯಕ್ಕೆ ತೆಗೆದುಕೊಳ್ಳಿ. ಸ್ವಂತ ನಿರ್ಧಾರದಿಂದ ಔಷಧಿಯನ್ನು ನಿಲ್ಲಿಸಬೇಡಿ.

7. ಮಾನಸಿಕ ಒತ್ತಡದ ನಿರ್ವಹಣೆ (Stress Management): ಅತಿಯಾದ ಮಾನಸಿಕ ಒತ್ತಡವು ದೇಹದಲ್ಲಿ ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಹಾರ್ಮೋನ್‌ಗಳನ್ನು ಬಿಡುಗಡೆ ಮಾಡುತ್ತದೆ. ಒತ್ತಡ ಕಡಿಮೆ ಮಾಡಿಕೊಳ್ಳಲು ಧ್ಯಾನ (Meditation) ಅಥವಾ ಹವ್ಯಾಸಗಳಲ್ಲಿ ತೊಡಗಿಕೊಳ್ಳಿ.

8. ಪೂರಕ ನೀರು ಕುಡಿಯುವುದು (Stay Hydrated): ದಿನವಿಡೀ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ. ಇದು ದೇಹದಲ್ಲಿರುವ ಹೆಚ್ಚುವರಿ ಗ್ಲೂಕೋಸ್ ಮೂತ್ರದ ಮೂಲಕ ಹೊರಹೋಗಲು ಸಹಾಯ ಮಾಡುತ್ತದೆ.

9. ಉತ್ತಮ ನಿದ್ರೆ (Good Sleep): ಪ್ರತಿದಿನ ರಾತ್ರಿ 7 ರಿಂದ 8 ಗಂಟೆಗಳ ಕಾಲ ಶಾಂತಿಯುತವಾದ ನಿದ್ರೆ ಮಾಡುವುದು ದೇಹದ ಚಯಾಪಚಯ ಕ್ರಿಯೆ (Metabolism) ಮತ್ತು ಹಾರ್ಮೋನ್‌ಗಳ ಸಮತೋಲನಕ್ಕೆ ಬಹಳ ಮುಖ್ಯ.

10. ದುರಭ್ಯಾಸಗಳಿಂದ ದೂರವಿರಿ (Avoid Smoking and Alcohol): ಧೂಮಪಾನ ಮತ್ತು ಮದ್ಯಪಾನವು ಸಕ್ಕರೆ ಕಾಯಿಲೆಯ ತೊಂದರೆಗಳನ್ನು (ಹೃದಯ ಮತ್ತು ನರಗಳ ಸಮಸ್ಯೆ) ಮತ್ತಷ್ಟು ಹೆಚ್ಚು ಮಾಡುವುದರಿಂದ ಇವುಗಳಿಂದ ದೂರವಿರುವುದು ಒಳ್ಳೆಯದು.

ಗಮನಿಸಿ: ಈ ಮೇಲಿನ ಮಾಹಿತಿ ರೋಗದ ನಿರ್ವಹಣೆಗೆ ಸಾಮಾನ್ಯ ಮಾರ್ಗದರ್ಶನವಾಗಿದೆ. ಪ್ರತಿಯೊಬ್ಬರ ದೇಹ ಪ್ರಕೃತಿ ವಿಭಿನ್ನವಾಗಿರುವುದರಿಂದ, ನಿಮ್ಮ ವೈದ್ಯರ ವೈಯಕ್ತಿಕ ಸಲಹೆ ಮತ್ತು ಚಿಕಿತ್ಸೆಯ ಕ್ರಮವೇ ಅಂತಿಮ ಹಾಗೂ ಸುರಕ್ಷಿತ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು ಕಾರ್ಯಕ್ರಮದಡಿ ಸೌಲಭ್ಯ: ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಖಾದ್ಯ ತೈಲಗಳನ್ನು ಆಮದು ಮಾಡಿಕೊಳ್ಳುವಲ್ಲಿ ದೇಶದ ಅವಲಂಬನೆಯನ್ನು ಕಡಿಮೆ ಮಾಡಲು ಮತ್ತು ದೇಶಿಯ ಎಣ್ಣೆಕಾಳುಗಳ ಉತ್ಪಾದನೆಯನ್ನು ಹೆಚ್ಚಿಸುವ ಹಾಗೂ ರೈತರ ಆದಾಯವನ್ನು ಸುಧಾರಿಸಲು ಭಾರತ ಸರ್ಕಾರದ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರ ಪುರಷ್ಕೃತ ಕೃಷಿಯೋನ್ನತಿ ಯೋಜನೆಯಡಿ ‘’ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು’’ (National Mission on Edible Oil – Oilseeds (NMEO-OS) ಯೋಜನೆಯನ್ನು ಅನುಷ್ಠಾನ ಮಾಡಲಾಗುತ್ತಿದೆ.

ಎಣ್ಣೆಕಾಳು ಬೆಳೆಗಾರರು ಮತ್ತು ಮೌಲ್ಯ ಸರಪಳಿ ಪಾಲುದಾರರನ್ನು (Value Chain Partners) ಸಂಸ್ಕರಣಾದಾರರೊಂದಿಗೆ ಸಂಪರ್ಕಿಸಲು ಮತ್ತು ಅವರಿಗೆ ಮಾರುಕಟ್ಟೆ ಕಲ್ಪಿಸುವುದರೊಂದಿಗೆ ಉತ್ತಮ ಲಾಭವನ್ನು ಪಡೆಯುವಂತೆ ಖಾತ್ರಿಪಡಿಸುವುದು ಯೋಜನೆಯ ಗುರಿಗಳಲ್ಲಿ ಒಂದಾಗಿದೆ.

ಸದರಿ ಯೋಜನೆಯಡಿ ಸ್ಥಳೀಯವಾಗಿ ಉದ್ಯೋಗಾವಕಾಶ ಕಲ್ಪಿಸಲು ಹಾಗೂ ಶುದ್ಧ ಖಾದ್ಯ ತೈಲ ಉಪಯೋಗಿಸಲು ಅನುಕೂಲವಾಗುವಂತೆ ಪ್ರೇರೇಪಿಸಲು ಸೂಕ್ತವಾಗುವಂತೆ ಹಾಗೂ ಮೌಲ್ಯ ಸರಪಳಿಯನ್ನು ಉತ್ತೇಜಿಸಲು, ಸಂಸ್ಕರಣಾ ಘಟಕಗಳಿಗೆ ಅವಶ್ಯವಿರುವ ಯಂತ್ರೋಪಕರಣಗಳನ್ನು ಪಡೆಯಲು/ಪ್ರಾಥಮಿಕ ಮತ್ತು ದ್ವಿತೀಯ ಎಣ್ಣೆಕಾಳು ಕೊಯ್ಲೋತ್ತರ ಮೂಲ ಸೌಕರ್ಯ ಸೌಲಭ್ಯ ಪಡೆಯಲು ಗರಿಷ್ಠ ಯೋಜನಾ ವರದಿಯ ಶೇ.33 ರಷ್ಟು ಅಥವಾ ರೂ.9.99 ಲಕ್ಷಕ್ಕೆ ಮೀರದಂತೆ ಅನುದಾನವನ್ನು ನೀಡಲಾಗುವುದು. ಸದರಿ ಯೋಜನೆಯ ಘಟಕದಡಿ ಕಟ್ಟಡ ವೆಚ್ಚ ಮತ್ತು ಭೂಮಿ ಬಾಡಿಗೆಯನ್ನು ಪರಿಗಣಿಸಲಾಗುವುದಿಲ್ಲ.

ಸದರಿ ಯೋಜನೆಯಡಿ ಸೌಲಭ್ಯ ಪಡೆಯಲು ಸರ್ಕಾರ / ಸರ್ಕಾರೇತರ ಸಂಸ್ಥೆಗಳು, FPOs ಗಳು ಜುಲೈ 04 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಯೋಜನೆಯ ಮಾರ್ಗಸೂಚಿಯನ್ವಯ ಜಿಲ್ಲಾ ಕಾರ್ಯಕಾರಿ ಸಮಿತಿಯಲ್ಲಿ ಫಲಾನುಭವಿ ಆಯ್ಕೆ ನಡೆಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರ ಕಛೇರಿ, ಉಪ ಕೃಷಿ ನಿರ್ದೇಶಕರ ಕಛೇರಿ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಗಳನ್ನು ಸಂಪರ್ಕಿಸುವಂತೆ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading
Advertisement

Title

ದಿನದ ಸುದ್ದಿ12 hours ago

ವಸತಿ ಯೋಜನೆಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ. ಈ...

ದಿನದ ಸುದ್ದಿ1 day ago

10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..

1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ...

ದಿನದ ಸುದ್ದಿ2 days ago

ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು ಕಾರ್ಯಕ್ರಮದಡಿ ಸೌಲಭ್ಯ: ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ: ಖಾದ್ಯ ತೈಲಗಳನ್ನು ಆಮದು ಮಾಡಿಕೊಳ್ಳುವಲ್ಲಿ ದೇಶದ ಅವಲಂಬನೆಯನ್ನು ಕಡಿಮೆ ಮಾಡಲು ಮತ್ತು ದೇಶಿಯ ಎಣ್ಣೆಕಾಳುಗಳ ಉತ್ಪಾದನೆಯನ್ನು ಹೆಚ್ಚಿಸುವ ಹಾಗೂ ರೈತರ ಆದಾಯವನ್ನು ಸುಧಾರಿಸಲು ಭಾರತ ಸರ್ಕಾರದ...

ದಿನದ ಸುದ್ದಿ2 days ago

ಉಚಿತ ಕೋಳಿ ಸಾಕಾಣಿಕೆ ತರಬೇತಿ: ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ 12 ದಿನಗಳ ಉಚಿತ ಕೋಳಿ ಸಾಕಾಣಿಕೆ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ....

ದಿನದ ಸುದ್ದಿ2 days ago

ಕೃಷಿ ಪಂಡಿತ ಹಾಗೂ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿ: ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ: ಕೃಷಿ ಇಲಾಖೆ ಹಾಗೂ ಆತ್ಮ (ATMA) ಯೋಜನೆಯಡಿ 2026-27ನೇ ಸಾಲಿನ ವಿವಿಧ ಕೃಷಿ ಪ್ರಶಸ್ತಿಗಳಿಗಾಗಿ ದಾವಣಗೆರೆ ಜಿಲ್ಲೆಯ ಅರ್ಹ ಹಾಗೂ ಆಸಕ್ತ ರೈತ ಮತ್ತು ರೈತ...

ಅಂಕಣ3 days ago

ಕವಿತೆ | ದೇವರ ಹೂವು

~ ಡಾ. ಸಿ.ಬಿ.ಐನಳ್ಳಿ ಊಟ ಮಾಟ ವೇಷ ಭಾಷೆ ಪ್ರಾರ್ಥನೆ ಬೇರೆ ಬೇರೆ ಪವಿತ್ರಪಠ್ಯ ಅವನದೊಂದು ನನ್ನದಿನ್ನೊಂದಂತೆ ನದಿ ದಂಡೆಯ ಮೇಲೆ ನೋಟ ಬೆರೆತು ಮಾತು ಮರೆತು...

ದಿನದ ಸುದ್ದಿ3 days ago

ಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ

ಸುದ್ದಿದಿನ,ಚಿತ್ರದುರ್ಗ:ಜಿಲ್ಲೆಯ ಬ್ಯಾಂಕ್ ಕಾಲೋನಿಯ ಸ್ಪೀಚ್ ಸಂಸ್ಥೆಯ ಸಂಸ್ಥಾಪಕರು ಹಾಗೂ ಎರಡು ಅವಧಿಗೆ ಹೊಳಲ್ಕೆರೆ ತಾಲ್ಲೂಕಿನ ಅರೇಹಳ್ಳಿ ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಹೆಚ್.ರಾಮಚಂದ್ರಪ್ಪ (59 ವರ್ಷ) ಶನಿವಾರ ಬೆಳಗ್ಗೆ...

ದಿನದ ಸುದ್ದಿ4 days ago

ಆಶ್ರಯ ಯೋಜನೆ – ಆವಧಿ ವಿಸ್ತರಣೆ

ಸುದ್ದಿದಿನ,ದಾವಣಗೆರೆ : 2025-26 ನೇ ಸಾಲಿನ ಪ್ರಧಾನ ಮಂತ್ರಿ ಆವಾಸ್ (ನಗರ) 2.0 ಯೋಜನೆಯಡಿ ನಿವೇಶನ ಮತ್ತು ವಸತಿ ರಹಿತ ಫಲಾನುಭವಿಗಳ ಅರ್ಜಿಗಳನ್ನು ಸಲ್ಲಿಸಲು ಜೂನ್‌ 30...

ದಿನದ ಸುದ್ದಿ5 days ago

ಗರಿಕೆ ಹುಲ್ಲಿನ ಜ್ಯೂಸ್‌ನಲ್ಲಿದೆ ರಕ್ತದ ಕ್ಯಾನ್ಸರ್ ಗುಣಪಡಿಸುವ ಶಕ್ತಿ

ಗಿರೀಶ್ ಮುತ್ತು ಗರಿಕೆ ಹುಲ್ಲಿನ ರಸದ ಸೇವನೆಯಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಸಿನೊಡಾನ್ ಡ್ಯಾಕ್ಟಿಲಾನ್ ಪ್ರೊಟೀನ್ ಎಂಬ ಅಂಶವಿದ್ದು, ಇದು ರೋಗನಿರೋಧಕ ಶಕ್ತಿ ಹೆಚ್ಚಲು...

ದಿನದ ಸುದ್ದಿ6 days ago

ಬಡವರ ಕಲ್ಯಾಣವೇ ನಮ್ಮ ಆಡಳಿತದ ಕೇಂದ್ರಬಿಂದು : ಸಿಎಂ ಡಿಕೆಶಿ

ಸುದ್ದಿದಿನ,ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಿದ ಬಳಿಕ ಜನಪರ ಆಡಳಿತಕ್ಕೆ ಆದ್ಯತೆ ನೀಡುವುದಾಗಿ ಘೋಷಿಸಿದ್ದು, ಯುವಕರು, ವಿದ್ಯಾರ್ಥಿಗಳು ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ...

Trending