Connect with us

ದಿನದ ಸುದ್ದಿ

ನೇಪಾಳದ ವಿಶ್ವ ಶಾಂತಿ ಸಮ್ಮೇಳನ : ಭಾರತವನ್ನು ಪ್ರತಿನಿಧಿಸಲಿರುವ ತರಳಬಾಳು ಶ್ರೀಗಳು

Published

on

ಭರತಖಂಡದ ಶ್ರೇಷ್ಠ ವಿದ್ವಾಂಸರಲ್ಲಿ ಆಗ್ರಗಣ್ಯರದ ಪರಮಪೂಜ್ಯ ಶ್ರೀ ತರಳಬಾಳು ಜಗದ್ಗುರು ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಯವರಿಗೆ ಅಂತರರಾಷ್ಟ್ರೀಯ ಶಾಂತಿ ಪ್ರತಿಷ್ಠಾನದ ಆಹ್ವಾನದ ಮೇರೆಗೆ ನೇಪಾಳದ ರಾಜಧಾನಿ ಕಠ್ಮಂಡುವಿನಲ್ಲಿ ನ.30 ರಿಂದ ಡಿ.3 ರವರೆಗೆ ನಡೆಯಲಿರುವ ಏಷ್ಯಾ ಶಾಂತಿ ಶೃಂಗ ಸಭೆಯಲ್ಲಿ ಗುರುವರ್ಯರು ” ನಮ್ಮ ಕಾಲದ ಪ್ರಚಲಿತ ಸವಾಲುಗಳು,ಅಭಿವೃದ್ಧಿ & ಸಾರ್ವಕಾಲಿಕ ಮೌಲ್ಯಗಳ “ಕುರಿತು ವಿಷಯ ಮಂಡಿಸುವರು.

ಭಾರತದ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಕೂಡ ಭಾಗವಹಿಸಲಿದ್ದಾರೆ.ಕಳೆದ ಹಲವು ಅಂತರರಾಷ್ಟ್ರೀಯ ವೇದಿಕೆಗಳಲ್ಲಿ ಶ್ರೀ ಗಳು ತಮ್ಮ ವಿದ್ವತ್ಪೂರ್ಣ ಜ್ಞಾನ ಪ್ರಭೆಯನ್ನು ಜಗತ್ತಿನ ವಿದ್ವಾಂಸರ ಸಮ್ಮುಖದಿ ಭಾರತದ ಭವ್ಯ ಪರಂಪರೆಯ ವಿಶ್ವರೂಪ ದರ್ಶನ ಮಾಡಿರುವುದು ಭಾರತೀಯರೆಲ್ಲರು ಹೆಮ್ಮೆ ಪಡುವಂತಹದು.

ನೇಪಾಳದ ಶಾಂತಿ ಶೃಂಗ ಸಮ್ಮೇಳನಕ್ಕೆ ತರಳಬಾಳು ಶ್ರೀ ಜಗದ್ಗುರುವರ್ಯರು.ನಮ್ಮ ಕಾಲದಲ್ಲಿ ಪ್ರಚಲಿತ ಸವಾಲುಗಳು ಅಭಿವೃದ್ಧಿ ಮತ್ತು ಸಾರ್ವಜನಿಕ ಮೌಲ್ಯಗಳು ಕುರಿತು ಶ್ರೀ ಜಗದ್ಗುರುವರ್ಯರಿಂದ ವಿಷಯ ಮಂಡನೆ.ಶ್ರೀ ಜಗದ್ಗುರುವರ್ಯರ ಜೊತೆ ಮಾಜಿ ರಾಷ್ಟ್ರಪತಿ ಶ್ರೀ ಪ್ರಣವ್ ಮುಖರ್ಜಿ ಭಾಗಿ.

ದಶಕಗಳ ಹಿಂದೆಯೇ ಅಮೇರಿಕಾದ ಸಂಸ್ಥೆಯಿಂದ ವಿಶ್ವ ಶಾಂತಿಧೂತ ಪ್ರಶಸ್ತಿ ಪುರಸ್ಕೃತರಾಗಿವ ಶ್ರೀ ತರಳಬಾಳು ಜಗದ್ಗುರು ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿಗಳವರುನವಂಬರ್ 30 ರಿಂದ ಡಿಸೆಂಬರ್ 3 ರವರೆಗೆ ನೇಪಾಳದ ರಾಜಧಾನಿ ಕಠ್ಮಂಡುವಿನಲ್ಲಿ ಜರುಗಲಿರುವ ಶಾಂತಿ ಶೃಂಗ ಸಮ್ಮೇಳನ.

ಗುರುವರ್ಯರು ಸಕಲ ಭಾಷೆ ವಿದ್ವಾಂಸರಾಗಿದರು ಸಹ ಮಾತೃಭಾಷೆಯ ಮೇಲಿನ ಅವರ ಪ್ರೇಮ ಅನನ್ಯ..
ಅಂತರರಾಷ್ಟ್ರೀಯ ವೇದಿಕೆಗಳಲ್ಲಿ
ಕನ್ನಡದಲ್ಲಿ ಸಹಿಮಾಡುವ ಮುಖೇನ ಕರುನಾಡ ತಾಯಿ ಭುವನೇಶ್ವರಿ ಯ ಹೆಮ್ಮೆಯ ಪುತ್ರ ರತ್ನರೆನಿಸಿದ್ದಾರೆ.

ಭಾರತ್ ಮಾತಾಕ್ಕಿ ಜೈ…
ಜೈ ಕರ್ನಾಟಕ

ದಿನದ ಸುದ್ದಿ

ಶಿವರಾಮ ಕಾರಂತ ಬಡಾವಣೆಗೆ ಮುಹೂರ್ತ: ಆ.31ಕ್ಕೆ 18 ಸಾವಿರ ನಿವೇಶನ ಹಂಚಿಕೆ?

Published

on

ದಶಕದ ಕಾನೂನು ಸಂಕೋಲೆ ಅಂತ್ಯ; ಕಾರಂತ ಬಡಾವಣೆಯಲ್ಲಿ 18 ಸಾವಿರ ನಿವೇಶನ ಹಂಚಿಕೆಗೆ ಮುಹೂರ್ತ!

ಸುದ್ದಿದಿನ,ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮಹತ್ವಾಕಾಂಕ್ಷೆಯ ಡಾ. ಕೆ. ಶಿವರಾಮ ಕಾರಂತ ಬಡಾವಣೆಯ ನಿವೇಶನ ಹಂಚಿಕೆಗೆ ಕೊನೆಗೂ ಕಾಲ ಕೂಡಿ ಬಂದಿದೆ. ದೀರ್ಘಕಾಲದ ಕಾನೂನು ವಿವಾದಗಳ ಬಳಿಕ ಹೈಕೋರ್ಟ್‌ ಅನುಮತಿ ದೊರೆತಿರುವ ಹಿನ್ನೆಲೆಯಲ್ಲಿ, ಆ.31ರಂದು ಭೂಮಿ ನೀಡಿದ ರೈತರು ಹಾಗೂ ಭೂಮಾಲೀಕರಿಗೆ 18 ಸಾವಿರ ನಿವೇಶನ ಹಂಚಿಕೆ ಮಾಡುವ ಮೂಲಕ ಪ್ರಕ್ರಿಯೆಗೆ ಸಾಂಕೇತಿಕ ಚಾಲನೆ ನೀಡುವ ಸಾಧ್ಯತೆ ಇದೆ.

ಹೈಲೈಟ್ಸ್:

  • ಆ.31ರಂದು ಕಾರಂತ ಬಡಾವಣೆಯ ನಿವೇಶನ ಹಂಚಿಕೆಗೆ ಚಾಲನೆ ನೀಡುವ ಸಾಧ್ಯತೆ
  • 3,200 ರೈತರು ಹಾಗೂ ಭೂಮಾಲೀಕರಿಗೆ ಸುಮಾರು 18,000 ನಿವೇಶನ ಮೀಸಲು
  • ಹೈಕೋರ್ಟ್‌ ಹಸಿರು ನಿಶಾನೆ ಬಳಿಕ ದಶಕದ ಕಾನೂನು ತೊಡಕು ನಿವಾರಣೆ
  • ಸಾರ್ವಜನಿಕರಿಂದಲೂ ನಿವೇಶನಕ್ಕಾಗಿ ಅರ್ಜಿ ಆಹ್ವಾನಿಸುವ ನಿರೀಕ್ಷೆ
  • ವಸತಿ ನಿವೇಶನದ ದರ ಚದರ ಅಡಿಗೆ ₹6,000; 30×40 ಸೈಟ್‌ಗೆ ₹72 ಲಕ್ಷ

ಕಾನೂನು ತೊಡಕು ನಿವಾರಣೆ

ಉತ್ತರ ಬೆಂಗಳೂರಿನಲ್ಲಿ ರೂಪುಗೊಂಡಿರುವ ಡಾ. ಕೆ. ಶಿವರಾಮ ಕಾರಂತ ಬಡಾವಣೆ ಹಲವು ವರ್ಷಗಳಿಂದ ಕಾನೂನು ವಿವಾದಗಳಿಂದಾಗಿ ಸ್ಥಗಿತಗೊಂಡಿತ್ತು. ಇದೀಗ ಹೈಕೋರ್ಟ್‌ ನಿವೇಶನ ಹಂಚಿಕೆ ಹಾಗೂ ಸಾರ್ವಜನಿಕರಿಂದ ಅರ್ಜಿ ಸ್ವೀಕರಿಸುವ ಪ್ರಕ್ರಿಯೆಗೆ ಹಸಿರು ನಿಶಾನೆ ತೋರಿಸಿರುವ ಹಿನ್ನೆಲೆಯಲ್ಲಿ ಬಡಾವಣೆಗೆ ಹೊಸ ಚೈತನ್ಯ ಬಂದಿದೆ.

ಸುಮಾರು 3,069 ಎಕರೆ ಪ್ರದೇಶದಲ್ಲಿ, ಆವಲಹಳ್ಳಿ, ರಾಮಗೊಂಡನಹಳ್ಳಿ, ಜಾರಕಬಂಡೆ ಕಾವಲ್‌ ಸೇರಿದಂತೆ 17 ಹಳ್ಳಿಗಳನ್ನು ಒಳಗೊಂಡಿರುವ ಈ ಬಡಾವಣೆ ದಶಕಕ್ಕೂ ಹೆಚ್ಚು ಕಾಲ ವಿವಿಧ ಕಾನೂನು ತೊಡಕುಗಳನ್ನು ಎದುರಿಸಿತ್ತು. ಸಮಸ್ಯೆ ಪರಿಹಾರಕ್ಕಾಗಿ ಸುಪ್ರೀಂ ಕೋರ್ಟ್‌ ವಿಶೇಷ ಮೂವರು ಸದಸ್ಯರ ಸಮಿತಿಯನ್ನೂ ರಚಿಸಿತ್ತು.

http://Visit : www.suddidina.com

3,200 ಭೂಮಾಲೀಕರಿಗೆ 18 ಸಾವಿರ ಸೈಟ್‌

ಬಡಾವಣೆ ನಿರ್ಮಾಣಕ್ಕಾಗಿ ಸುಮಾರು 3,200 ರೈತರು ಮತ್ತು ಭೂಮಾಲೀಕರು ತಮ್ಮ ಜಮೀನು ನೀಡಿದ್ದಾರೆ. ಅವರ ತ್ಯಾಗಕ್ಕೆ ಪ್ರತಿಫಲವಾಗಿ ಸುಮಾರು 18 ಸಾವಿರ ನಿವೇಶನಗಳನ್ನು ಮೀಸಲಿಡಲಾಗಿದೆ. ಒಟ್ಟಾರೆ ಬಡಾವಣೆಯಲ್ಲಿ ವಿವಿಧ ಅಳತೆಯ 34,992 ನಿವೇಶನಗಳನ್ನು ರಚಿಸಲಾಗಿದೆ ಎಂದು ಬಿಡಿಎ ಮೂಲಗಳು ತಿಳಿಸಿವೆ.

ಆ.31ರಂದು ನಡೆಯುವ ಸಾಧ್ಯತೆಯಿರುವ ಕಾರ್ಯಕ್ರಮದಲ್ಲಿ 600ರಿಂದ 1,000 ಮಂದಿ ಭೂಮಾಲೀಕರಿಗೆ ಮುಖ್ಯಮಂತ್ರಿಗಳಿಂದ ಸಾಂಕೇತಿಕವಾಗಿ ನಿವೇಶನ ಹಂಚಿಕೆ ಮಾಡುವ ನಿರೀಕ್ಷೆಯಿದೆ. ಉಳಿದ ಫಲಾನುಭವಿಗಳಿಗೆ ಪ್ರತ್ಯೇಕ ಕೌಂಟರ್‌ಗಳ ಮೂಲಕ ಹಂಚಿಕೆ ಮಾಡುವ ವ್ಯವಸ್ಥೆ ಕಲ್ಪಿಸುವ ಉದ್ದೇಶವಿದೆ.

ಸಾರ್ವಜನಿಕರಿಗೂ ಅರ್ಜಿ ಸಲ್ಲಿಕೆಗೆ ಅವಕಾಶ

ಭೂಮಾಲೀಕರಿಗೆ ನಿವೇಶನ ಹಂಚಿಕೆಯ ಜೊತೆಗೆ ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸುವ ಪ್ರಕ್ರಿಯೆಗೂ ಚಾಲನೆ ನೀಡಲು ಬಿಡಿಎ ಮುಂದಾಗಿದೆ. ಇದರಿಂದ ಹಲವು ವರ್ಷಗಳಿಂದ ಕಾರಂತ ಬಡಾವಣೆಯಲ್ಲಿ ನಿವೇಶನ ಪಡೆಯುವ ನಿರೀಕ್ಷೆಯಲ್ಲಿದ್ದ ಸಾರ್ವಜನಿಕರಿಗೂ ಅವಕಾಶ ದೊರೆಯಲಿದೆ.

ಚದರ ಅಡಿಗೆ ₹6,000 ದರ

ಕಾರಂತ ಬಡಾವಣೆಯ ವಸತಿ ನಿವೇಶನಗಳ ಬೆಲೆಯನ್ನು ಚದರ ಅಡಿಗೆ ₹6,000 ಎಂದು ನಿಗದಿಪಡಿಸಲಾಗಿದೆ. ಮೂರು ವರ್ಷಗಳ ಹಿಂದೆ ಚದರ ಅಡಿಗೆ ₹5,000 ದರ ಪ್ರಸ್ತಾಪಿಸಲಾಗಿತ್ತು. ಇದೀಗ ₹1,000 ಹೆಚ್ಚಳ ಮಾಡಲಾಗಿದೆ.

ಪರಿಷ್ಕೃತ ದರದಂತೆ 30×40 ಅಡಿ, ಅಂದರೆ 1,200 ಚದರ ಅಡಿ ನಿವೇಶನಕ್ಕೆ ಸುಮಾರು ₹72 ಲಕ್ಷ ವೆಚ್ಚವಾಗಲಿದೆ.

ಹಲವು ವರ್ಷಗಳ ನಿರೀಕ್ಷೆಗೆ ತೆರೆ?

ನ್ಯಾಯಾಲಯದ ತೀರ್ಪು ಹಾಗೂ ಆಡಳಿತಾತ್ಮಕ ಪ್ರಕ್ರಿಯೆಗಳು ವೇಗ ಪಡೆದಿರುವ ಹಿನ್ನೆಲೆಯಲ್ಲಿ ಕಾರಂತ ಬಡಾವಣೆಯ ನಿವೇಶನ ಹಂಚಿಕೆ ಇದೀಗ ನಿರ್ಣಾಯಕ ಹಂತ ತಲುಪಿದೆ. ಆ.31ರ ಕಾರ್ಯಕ್ರಮ ಯಶಸ್ವಿಯಾಗಿ ನಡೆದರೆ, ಭೂಮಿ ನೀಡಿದ ಸಾವಿರಾರು ಕುಟುಂಬಗಳ ಹಲವು ವರ್ಷಗಳ ನಿರೀಕ್ಷೆಗೆ ತೆರೆ ಬೀಳುವುದರ ಜೊತೆಗೆ ಸಾರ್ವಜನಿಕರಿಗೂ ನಿವೇಶನ ಪಡೆಯುವ ದಾರಿ ಮತ್ತಷ್ಟು ಸ್ಪಷ್ಟವಾಗಲಿದೆ.

Continue Reading

ದಿನದ ಸುದ್ದಿ

ಗೃಹಜ್ಯೋತಿ ಮರುಸಮೀಕ್ಷೆಗೆ ಕೌಂಟ್‌ಡೌನ್: 1.17 ಲಕ್ಷ ಫಲಾನುಭವಿಗಳಿಗೆ ಇನ್ನೂ 5 ದಿನ ಮಾತ್ರ!

Published

on

ಗೃಹಜ್ಯೋತಿ ಮರುಸಮೀಕ್ಷೆಗೆ ಕೌಂಟ್‌ಡೌನ್: 1.17 ಲಕ್ಷ ಫಲಾನುಭವಿಗಳಿಗೆ ಇನ್ನೂ 5 ದಿನ ಮಾತ್ರ!

ಸುದ್ದಿದಿನ, ಮೈಸೂರು: ನೈಜ ಫಲಾನುಭವಿಗಳಿಗೆ ಮಾತ್ರ ಗೃಹಜ್ಯೋತಿ ಯೋಜನೆಯ ಸಬ್ಸಿಡಿ ತಲುಪಿಸುವ ಉದ್ದೇಶದಿಂದ ರಾಜ್ಯಾದ್ಯಂತ ನಡೆಯುತ್ತಿರುವ ಮರುಸಮೀಕ್ಷೆ ಅಂತಿಮ ಹಂತಕ್ಕೆ ಬಂದಿದೆ. ಮೈಸೂರು ಜಿಲ್ಲೆಯಲ್ಲಿ ಶೇ.84ರಷ್ಟು ಪರಿಶೀಲನೆ ಪೂರ್ಣಗೊಂಡಿದ್ದು, ಇನ್ನೂ 1.17 ಲಕ್ಷ ಫಲಾನುಭವಿಗಳು ದಾಖಲೆಗಳೊಂದಿಗೆ ಪರಿಶೀಲನೆಗೆ ಒಳಪಡಬೇಕಿದೆ.

ಗೃಹಜ್ಯೋತಿ ಮರುಸಮೀಕ್ಷೆಗೆ ಅಂತಿಮ ಗಡುವು ಸಮೀಪ

200 ಯೂನಿಟ್‌ಗಿಂತ ಕಡಿಮೆ ವಿದ್ಯುತ್‌ ಬಳಸುವ ಅರ್ಹ ಗೃಹ ಬಳಕೆದಾರರಿಗೆ ವಿದ್ಯುತ್‌ ಬಿಲ್‌ ಭಾರ ಕಡಿಮೆ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರ ಗೃಹಜ್ಯೋತಿ ಯೋಜನೆ ಜಾರಿಗೊಳಿಸಿದೆ. ಆದರೆ, ಯೋಜನೆಗೆ ಅನರ್ಹರಾಗಿದ್ದರೂ ಸೌಲಭ್ಯ ಪಡೆಯುತ್ತಿರುವವರು ಅಥವಾ ತಪ್ಪಾಗಿ ನೋಂದಣಿಯಾಗಿರುವ ಸಂಪರ್ಕಗಳನ್ನು ಪತ್ತೆಹಚ್ಚಲು ಸರ್ಕಾರ ಮರುಸಮೀಕ್ಷೆ ಕೈಗೊಂಡಿದೆ.

2026ರ ಜುಲೈ 1ರಿಂದ ಮನೆ-ಮನೆಗೆ ತೆರಳಿ ಪರಿಶೀಲನೆ ಆರಂಭಿಸಲಾಗಿದ್ದು, ಎರಡು ತಿಂಗಳಲ್ಲಿ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ. ಅದರಂತೆ ಆಗಸ್ಟ್ 31ಕ್ಕೆ ಮರುಸಮೀಕ್ಷೆಯ ಗಡುವು ಮುಕ್ತಾಯಗೊಳ್ಳಲಿದೆ.

ಮೈಸೂರಿನಲ್ಲಿ ಶೇ.84ರಷ್ಟು ಪರಿಶೀಲನೆ ಪೂರ್ಣ

ಮೈಸೂರು ಜಿಲ್ಲೆಯಲ್ಲಿ ಒಟ್ಟು 7.65 ಲಕ್ಷ ಗೃಹಜ್ಯೋತಿ ಫಲಾನುಭವಿಗಳಿದ್ದು, ಆಗಸ್ಟ್ 24ರ ಅಂತ್ಯದ ವೇಳೆಗೆ 6.48 ಲಕ್ಷ ಮಂದಿಯ ಮರುಪರಿಶೀಲನೆ ಪೂರ್ಣಗೊಂಡಿದೆ. ಅಂದರೆ ಶೇ.84ರಷ್ಟು ಪ್ರಕ್ರಿಯೆ ಮುಗಿದಿದೆ.

ಆದರೆ ಇನ್ನೂ 1.17 ಲಕ್ಷ ಫಲಾನುಭವಿಗಳು ತಮ್ಮ ದಾಖಲೆಗಳನ್ನು ಸಲ್ಲಿಸಿ ಪರಿಶೀಲನೆಗೆ ಒಳಪಡಬೇಕಿದೆ. ನಿಗದಿತ ಅವಧಿಯಲ್ಲಿ ಪರಿಶೀಲನೆ ಮಾಡಿಸಿಕೊಳ್ಳದಿದ್ದರೆ, ಇಂತಹ ಫಲಾನುಭವಿಗಳು ಯೋಜನೆಯ ಸೌಲಭ್ಯದಿಂದ ಹೊರಗುಳಿಯುವ ಸಾಧ್ಯತೆ ಇದೆ.

ಮನೆಗೆ ನೋಟಿಸ್ ಅಂಟಿಸುವ ಕಾರ್ಯ

ಕೆಲ ವಾರಗಳಿಂದ ಪರಿಶೀಲನೆಗೆ ಲಭ್ಯವಾಗದ ಬಳಕೆದಾರರ ಮನೆಗಳಿಗೆ ಸೆಸ್ಕ್ ಸಿಬ್ಬಂದಿ ನೋಟಿಸ್ ಅಂಟಿಸುತ್ತಿದ್ದಾರೆ. ನೋಟಿಸ್ ಪಡೆದವರು ತಮ್ಮ ವ್ಯಾಪ್ತಿಯ ಸೆಸ್ಕ್ ಕಚೇರಿಗೆ ತೆರಳಿ ಅಗತ್ಯ ದಾಖಲೆಗಳನ್ನು ನೀಡಿ ಪರಿಶೀಲನೆ ಮಾಡಿಸಿಕೊಳ್ಳಬೇಕಾಗಿದೆ.

ಉಳಿದ 1.17 ಲಕ್ಷ ಫಲಾನುಭವಿಗಳ ಪರಿಶೀಲನೆ ಕೆಲವೇ ದಿನಗಳಲ್ಲಿ ಪೂರ್ಣಗೊಳಿಸುವುದು ಅಧಿಕಾರಿಗಳಿಗೆ ದೊಡ್ಡ ಸವಾಲಾಗಿದೆ. ಈ ಅವಧಿಯಲ್ಲಿ ಸಾಧ್ಯವಾಗದಿದ್ದರೆ ಸರ್ಕಾರ ಗಡುವು ವಿಸ್ತರಿಸುವ ಸಾಧ್ಯತೆಯೂ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಏಕೆ ನಡೆಯುತ್ತಿದೆ ಮರುಸಮೀಕ್ಷೆ?

ಮರುಪರಿಶೀಲನೆಯ ಪ್ರಮುಖ ಉದ್ದೇಶಗಳು:

  • ತಪ್ಪಾದ ನೋಂದಣಿಗಳನ್ನು ಪತ್ತೆಹಚ್ಚುವುದು
  • ಅನರ್ಹ ವಿದ್ಯುತ್ ಸಂಪರ್ಕಗಳನ್ನು ಗುರುತಿಸುವುದು
  • ದಾಖಲೆಗಳ ಹೊಂದಾಣಿಕೆ ಪರಿಶೀಲಿಸುವುದು
  • ಸಬ್ಸಿಡಿಯ ದುರ್ಬಳಕೆ ತಡೆಯುವುದು
  • ಅರ್ಹ ಕುಟುಂಬಗಳಿಗೆ ಮಾತ್ರ ಯೋಜನೆಯ ಲಾಭ ಖಚಿತಪಡಿಸುವುದು

ಫಲಾನುಭವಿಗಳು ಯಾವ ದಾಖಲೆ ನೀಡಬೇಕು?

ಪರಿಶೀಲನೆ ವೇಳೆ ಫಲಾನುಭವಿಗಳು ವಿದ್ಯುತ್ ಬಿಲ್, ಖಾತೆ ಸಂಖ್ಯೆ, ಆಧಾರ್ ಸಂಬಂಧಿತ ವಿವರ, ಗುರುತಿನ ದಾಖಲೆ ಹಾಗೂ ವಿಳಾಸದ ದಾಖಲೆಗಳನ್ನು ಒದಗಿಸಬೇಕಾಗುತ್ತದೆ. ಅಗತ್ಯವಿದ್ದರೆ ಇತರೆ ದಾಖಲೆಗಳನ್ನೂ ಅಧಿಕಾರಿಗಳು ಕೇಳಬಹುದು.

ಯಾರಿಗೆ ಗೃಹಜ್ಯೋತಿ ಸೌಲಭ್ಯ?

ವಸತಿ ಉದ್ದೇಶದ ವಿದ್ಯುತ್ ಸಂಪರ್ಕ ಹೊಂದಿರುವ, ನಿಗದಿತ ಬಳಕೆ ಮಿತಿಯೊಳಗಿರುವ ಮತ್ತು ವಿದ್ಯುತ್ ಖಾತೆಗೆ ಆಧಾರ್ ಲಿಂಕ್ ಮಾಡಿರುವ ರಾಜ್ಯದ ಕುಟುಂಬಗಳಿಗೆ ಯೋಜನೆ ಅನ್ವಯಿಸುತ್ತದೆ. 2022-23ರ ಸರಾಸರಿ ಮಾಸಿಕ ವಿದ್ಯುತ್ ಬಳಕೆಯನ್ನು ಆಧಾರವಾಗಿಟ್ಟುಕೊಂಡು ಶೇ.10ರಷ್ಟು ಹೆಚ್ಚುವರಿ ಬಳಕೆಗೆ ಅವಕಾಶ ನೀಡಲಾಗಿದೆ. ಈ ಲೆಕ್ಕಾಚಾರದಲ್ಲಿ ಬಳಕೆ ಮಿತಿ 200 ಯೂನಿಟ್‌ಗಿಂತ ಕಡಿಮೆ ಇರಬೇಕು.

ಉದಾಹರಣೆಗೆ, ಒಂದು ಮನೆಯ ಸರಾಸರಿ ಬಳಕೆ 100 ಯೂನಿಟ್‌ ಆಗಿದ್ದರೆ, ಶೇ.10 ಹೆಚ್ಚುವರಿ ಅವಕಾಶದೊಂದಿಗೆ ಸುಮಾರು 110 ಯೂನಿಟ್‌ವರೆಗೆ ಸಬ್ಸಿಡಿ ಮಿತಿ ಅನ್ವಯಿಸಬಹುದು. 200 ಯೂನಿಟ್ ಮೀರಿದ ಬಳಕೆಗೆ ಸಂಪೂರ್ಣ ಬಿಲ್ ಉಚಿತವಾಗುವುದಿಲ್ಲ.

ಅರ್ಹ ಫಲಾನುಭವಿಗಳಿಗೆ ಹಿಂದಿನ ನಿಯಮದಂತೆ ಸಬ್ಸಿಡಿ ಮುಂದುವರಿಯಲಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ಪರಿಶೀಲನೆ ಬಾಕಿ ಇರುವ ಫಲಾನುಭವಿಗಳು ಕೊನೆಯ ದಿನದವರೆಗೆ ಕಾಯದೆ, ಅಗತ್ಯ ದಾಖಲೆಗಳೊಂದಿಗೆ ಸೆಸ್ಕ್ ಕಚೇರಿಗೆ ತೆರಳಿ ಪ್ರಕ್ರಿಯೆ ಪೂರ್ಣಗೊಳಿಸುವುದು ಮುಖ್ಯವಾಗಿದೆ.

Continue Reading

ದಿನದ ಸುದ್ದಿ

ವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: 2023-24 ಮತ್ತು 2024-25ನೇ ಸಾಲಿನಲ್ಲಿ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ಬರುವ ಸಮಸ್ಯಾತ್ಮಕ ಗ್ರಾಮಗಳಲ್ಲಿ 4215 ತುರ್ತು ಕುಡಿಯುವ ನೀರಿನ ಕಾಮಗಾರಿಯಲ್ಲಿ ನಡೆದಿರುವ ಅವ್ಯವಹಾರ ಮತ್ತು ನಕಲಿ ಕಾಮಗಾರಿಗಳನ್ನು ತನಿಖೆಗೆ ಒಳಪಡಿಸುವಂತೆ ದೂರು ನೀಡಿ 6 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿನ ಪ್ರಭಾರ ಕಾರ್ಯಪಾಲಕ ಅಭಿಯಂತರರಾದ ಟಿ. ಸೋಮ್ಲನಾಯ್ಕ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ 2023-24 ಮತ್ತು 2024-25ನೇ ಸಾಲಿನ ತುರ್ತು ಕುಡಿಯುವ ನೀರಿನ ಯೋಜನೆಗೆ ಸಂಬAಧಿಸಿದ ಕಾಮಗಾರಿಗಳಿಗೆ ಸಂಬAಧಿಸಿದAತೆ ಹೊನ್ನಾಳಿ ಉಪವಿಭಾಗದ ಅಡಿಯಲ್ಲಿ ನಡೆದಿರುವ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ನಾಲ್ಕು ಹಂತದ ತುರ್ತು ಕುಡಿಯುವ ನೀರಿನ ಯೋಜನೆಯ ಕಾಮಗಾರಿಗಳ ಸಂಪೂರ್ಣ ಕಡತವನ್ನು ಪಡೆದು ಪರಿಶೀಲನೆ ಮಾಡಿದಾಗ, ಇಲ್ಲಿ ಸಾಕಷ್ಟು ಅವ್ಯವಹಾರ ಹಾಗೂ ಲೋಪಗಳು ಕಂಡುಬAದಿರುತ್ತವೆ. ಅಂತಹ ಪ್ರಮುಖ ಲೋಪಗಳನ್ನು ಉಲ್ಲೇಖಿಸಿ ಸೂಕ್ತ ತನಿಖೆಗೆ ಒಳಪಡಿಸುವಂತೆ ದಿನಾಂಕ: 01-12-2025 ರಂದು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರಿಗೆ ದೂರು ನೀಡಲಾಗಿತ್ತು.

ಈ ದೂರು ಅರ್ಜಿಗೆ ಸಂಬಂಧಿಸಿದಂತೆ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರು 2 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಕಾರಣ ದಿನಾಂಕ: 27-01-2026 ರಂದು ಜ್ಞಾಪನವನ್ನು ನೀಡಲಾಗಿರುತ್ತದೆ. ಆದರೆ ಜ್ಞಾಪನ ನೀಡಿ 6 ತಿಂಗಳು ಕಳೆಯುತ್ತ ಬಂದರೂ ಈ ದೂರು ಅರ್ಜಿಗೆ ಸಂಬAಧಿಸಿದAತೆ ಕಾರ್ಯಪಾಲಕ ಅಭಿಯಂತರರು (ಪ್ರಭಾರ), ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರು ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿರುತ್ತಾರೆ.

ಈ ದೂರು ಅರ್ಜಿಯನ್ನು ತನಿಖೆಗೆ ಒಳಪಡಿಸುವಲ್ಲಿ ತೋರಿದ ನಿರ್ಲಕ್ಷö್ಯಕ್ಕೆ ಪ್ರಮುಖ ಕಾರಣವೆಂದರೆ, ಹೊನ್ನಾಳಿ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರೇ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿನ ಪ್ರಭಾರ ಕಾರ್ಯಪಾಲಕ ಅಭಿಯಂತರರಾಗಿ ಕಾರ್ಯನಿರ್ವಹಿಸಿರುತ್ತಾರೆ. ಈ ಕಾರಣಕ್ಕಾಗಿ ತನ್ನ ಮೇಲಿನ ಆರೋಪವನ್ನು ತನಿಖೆಗೆ ಒಳಪಡಿಸುವಲ್ಲಿ ನಿರ್ಲಕ್ಷö್ಯ ತೋರಿ, ಈ ದೂರು ಅರ್ಜಿಯನ್ನು ಮೂಲೆ ಗುಂಪಾಗಿಸಿರುತ್ತಾರೆ. ಆದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಭಾರ ಕಾರ್ಯಪಾಲಕ ಅಭಿಯಂತರರಾದ ಸೋಮ್ಲನಾಯ್ಕ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ31 minutes ago

ಶಿವರಾಮ ಕಾರಂತ ಬಡಾವಣೆಗೆ ಮುಹೂರ್ತ: ಆ.31ಕ್ಕೆ 18 ಸಾವಿರ ನಿವೇಶನ ಹಂಚಿಕೆ?

ಸುದ್ದಿದಿನ,ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮಹತ್ವಾಕಾಂಕ್ಷೆಯ ಡಾ. ಕೆ. ಶಿವರಾಮ ಕಾರಂತ ಬಡಾವಣೆಯ ನಿವೇಶನ ಹಂಚಿಕೆಗೆ ಕೊನೆಗೂ ಕಾಲ ಕೂಡಿ ಬಂದಿದೆ. ದೀರ್ಘಕಾಲದ ಕಾನೂನು ವಿವಾದಗಳ ಬಳಿಕ...

ದಿನದ ಸುದ್ದಿ48 minutes ago

ಗೃಹಜ್ಯೋತಿ ಮರುಸಮೀಕ್ಷೆಗೆ ಕೌಂಟ್‌ಡೌನ್: 1.17 ಲಕ್ಷ ಫಲಾನುಭವಿಗಳಿಗೆ ಇನ್ನೂ 5 ದಿನ ಮಾತ್ರ!

ಸುದ್ದಿದಿನ, ಮೈಸೂರು: ನೈಜ ಫಲಾನುಭವಿಗಳಿಗೆ ಮಾತ್ರ ಗೃಹಜ್ಯೋತಿ ಯೋಜನೆಯ ಸಬ್ಸಿಡಿ ತಲುಪಿಸುವ ಉದ್ದೇಶದಿಂದ ರಾಜ್ಯಾದ್ಯಂತ ನಡೆಯುತ್ತಿರುವ ಮರುಸಮೀಕ್ಷೆ ಅಂತಿಮ ಹಂತಕ್ಕೆ ಬಂದಿದೆ. ಮೈಸೂರು ಜಿಲ್ಲೆಯಲ್ಲಿ ಶೇ.84ರಷ್ಟು ಪರಿಶೀಲನೆ...

august-27-2026-daily-horoscope-kannada-rashi-bhavishya august-27-2026-daily-horoscope-kannada-rashi-bhavishya
ನಿತ್ಯ ಭವಿಷ್ಯ57 minutes ago

ಆಗಸ್ಟ್ 27ರ ರಾಶಿಭವಿಷ್ಯ: ವೃತ್ತಿಯಿಂದ ಪ್ರೇಮದವರೆಗೆ ಇಂದು ನಿಮ್ಮ ದಿನ ಹೇಗಿರಲಿದೆ?

ಮೇಷದಿಂದ ಮೀನದವರೆಗೆ ದ್ವಾದಶ ರಾಶಿಗಳ ದಿನಭವಿಷ್ಯ ಇಲ್ಲಿದೆ. ಉದ್ಯೋಗ, ವ್ಯವಹಾರ, ಶಿಕ್ಷಣ, ಕುಟುಂಬ, ಆರೋಗ್ಯ ಮತ್ತು ಪ್ರೇಮ ಜೀವನದಲ್ಲಿ ಇಂದು ಯಾವ ರಾಶಿಗೆ ಶುಭ? ಯಾರು ಎಚ್ಚರಿಕೆ...

bread_trick_fix_sticky_overcooked bread_trick_fix_sticky_overcooked
ಲೈಫ್ ಸ್ಟೈಲ್1 hour ago

ಅನ್ನ ಜಿಗುಟಾಯಿತಾ? ಬ್ರೆಡ್‌ನ ಈ ಸರಳ ಟ್ರಿಕ್‌ನಿಂದ ಮೆತ್ತಗಾದ ಅನ್ನಕ್ಕೆ ಪರಿಹಾರ!

ಸುದ್ದಿದಿನ: ಅನ್ನ ಬೇಯಿಸುವಾಗ ನೀರು ಹೆಚ್ಚಾಗಿ ಬಿದ್ದು ಮೆತ್ತಗಾಗುವುದು ಅಥವಾ ಹೆಚ್ಚು ಹೊತ್ತು ಬೇಯಿಸಿ ಜಿಗುಟಾಗುವುದು ಸಾಮಾನ್ಯ. ಆದರೆ ಇಂತಹ ಸಂದರ್ಭಗಳಲ್ಲಿ ಅನ್ನವನ್ನು ವ್ಯರ್ಥ ಮಾಡುವ ಅಗತ್ಯವಿಲ್ಲ....

Khova_Making_Raksha_Bandana_Suddidina Khova_Making_Raksha_Bandana_Suddidina
ಲೈಫ್ ಸ್ಟೈಲ್1 hour ago

ರಕ್ಷಾಬಂಧನದ ಸಿಹಿಗೆ ಮಾರುಕಟ್ಟೆ ಖೋವಾ ಬೇಡ; ಮನೆಯಲ್ಲೇ ಶುದ್ಧ ಮಾವಾ ತಯಾರಿಸಿ!

ಸುದ್ದಿದಿನ: ರಕ್ಷಾಬಂಧನ ಸೇರಿದಂತೆ ಹಬ್ಬಗಳ ಸಮಯದಲ್ಲಿ ಸಿಹಿತಿಂಡಿಗಳಿಗೆ ಬೇಡಿಕೆ ಹೆಚ್ಚಾಗುತ್ತದೆ. ಗುಲಾಬ್ ಜಾಮೂನ್, ಪೇಡಾ, ಬರ್ಫಿ, ಗುಜಿಯಾ ಸೇರಿದಂತೆ ಹಲವು ಸಿಹಿತಿಂಡಿಗಳ ತಯಾರಿಕೆಯಲ್ಲಿ ಖೋವಾ ಪ್ರಮುಖ ಪದಾರ್ಥವಾಗಿದೆ....

ದಿನದ ಸುದ್ದಿ22 hours ago

ವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ: 2023-24 ಮತ್ತು 2024-25ನೇ ಸಾಲಿನಲ್ಲಿ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ಬರುವ ಸಮಸ್ಯಾತ್ಮಕ ಗ್ರಾಮಗಳಲ್ಲಿ 4215 ತುರ್ತು ಕುಡಿಯುವ ನೀರಿನ ಕಾಮಗಾರಿಯಲ್ಲಿ ನಡೆದಿರುವ ಅವ್ಯವಹಾರ ಮತ್ತು...

ದಿನದ ಸುದ್ದಿ23 hours ago

ಇಂಗ್ಲಿಷ್ ಕಲಿಯಲು ಬಂದ ಜಪಾನ್ ಯುವಕ ಜೈಲು ಸೇರಿದ ; 75000 ಪರಿಹಾರ ಪಡೆದ

ಸುದ್ದಿದಿನಡೆಸ್ಕ್:ಜಪಾನ್‌ನ ಹಿರೋತೋಷಿ ತನಕಾ ಇಂಗ್ಲಿಷ್ ಕಲಿಯಲು ಬೆಂಗಳೂರಿಗೆ ಬಂದಿದ್ದರು. ಆದರೆ ಇಂಗ್ಲಿಷ್ ಅಕಾಡೆಮಿಯಲ್ಲಿ ಸರಿಯಾಗಿ ಇಂಗ್ಲೀಷ್ ಕಲಿಸುತ್ತಿಲ್ಲವೆಂದು ಅಕಾಡೆಮಿ ಮುಖ್ಯಸ್ಥರೊಂದಿಗೆ ಜಗಳ ನಡೆದ ಬಳಿಕ ತನಕಾ ವಿರುದ್ಧ...

ದಿನದ ಸುದ್ದಿ23 hours ago

ಡಾಲಿಯ ಕನಸು ಒಂದೇ ಹೀರೋ ಆಗೋದು

ಮೈಸೂರಿನ ರಂಗಾಯಣದಲ್ಲಿ ನಾಟಕ ತಂಡಗಳಲ್ಲಿ ಗುರುತಿಸಿಕೊಂಡ ದಿನಗಳಿಂದಲೇ ಡಾಲಿ ಧನಂಜಯ್ ಅವರದ್ದು ಒಂದೇ ಕನಸು—ಸಿನಿಮಾ ಹೀರೋ ಆಗಬೇಕು! ಕಾಲೇಜು ಯುವಕರಾಗಿದ್ದಾಗಲೂ ಮೌನ ಸ್ವಭಾವದ, ವಿಧೇಯ, ಪರಿಶ್ರಮಿ ಮತ್ತು...

ದಿನದ ಸುದ್ದಿ2 days ago

ಉದ್ದಿಮೆದಾರರಿಗೆ ನೆರವು ಯೋಜನೆ; ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ವಿಶೇಷ ಘಟಕ ಯೋಜನೆ, ಗಿರಿಜನ ಉಪ ಯೋಜನೆಯಡಿ ವಿವಿಧ ಯೋಜನೆಗಳಾದ ಸಾಫ್ಟ್ ಸೀಡ್ ಕ್ಯಾಪಿಟಲ್, ಶೇ.60 ರಷ್ಟು ಸಹಾಯಧನ ಸಾಲ ಶುಲ್ಕ ಮರುಪಾವತಿ ಮತ್ತು ವಿದ್ಯುಚ್ಚಕ್ತಿ ಸಹಾಯಧನ...

ದಿನದ ಸುದ್ದಿ2 days ago

ಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!

ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ ಜುಲೈ 25ರ ಭರವಸೆ ಜಾರಿಗೆ ವಿಳಂಬ: CJP ತೀವ್ರ ಆಕ್ರೋಶ ಇಂಡಿಯಾ ಗೇಟ್‌ನಿಂದ ಪೊಲೀಸ್ ಕೇಂದ್ರ...

Trending