Connect with us

ದಿನದ ಸುದ್ದಿ

ತಂತ್ರಜ್ಞಾನ ಮೋಡಿ : ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

Published

on

  • ಡಾ. ಚಂದ್ರಪ್ಪ ಎಚ್, ಸಹಾಯಕ ಪ್ರಾಧ್ಯಾಪಕರು, ಭೌತವಿಜ್ಞಾನ ವಿಭಾಗ, ಸರ್ಕಾರಿ ವಿಜ್ಞಾನ ಕಾಲೇಜು, ಚಿತ್ರದುರ್ಗ

90ರ ದಶಕದಿಂದೀಚೆಗೆ, ಎಲ್ಲೆಡೆ ಸದ್ದಿಲ್ಲದೇ ಕ್ರಮೇಣ ಒಕ್ಕರಿಸತೊಡಗಿದೆ ಆಧುನಿಕ ಯಾಂತ್ರಿಕೃತ ಬದುಕು.

ಜನಸಾಮಾನ್ಯರ ಅರಿವಿನ-ಪರಿಧಿ ತಿಳಿಗೊಳ್ಳುವುದರ ಮೊದಲೇ ಊಹಿಸಲಾರದಷ್ಟು ಮಟ್ಟಿಗೆ ಇಂದು, ಸ್ವಚ್ಛಂದ ಹಳ್ಳಿ-ಸೊಬಗಿನ ಕೂಡು-ಕುಟುಂಬದ, ಮೈ-ಮನಸ್ಸು ತುಂಬಿದ, ಪರಿಶುದ್ಧ ಜೀವನ ಪ್ರೀತಿ, ಉತ್ಸಾಹ, ಮಮತೆಯನ್ನು ಇನ್ನಿಲ್ಲವಾಗಿಸಿದೆ ಎನಿಸುತ್ತದೆಯಲ್ಲವೆ?

ಹೇಗೆಂದರೆ, ಕಲ್ಪಿಸಿಕೊಂಡರೂ ಕಣ್ಣೆದುರಿಗೆ ತೆರೆದಿಡುವ ಅಮೂಲ್ಯ ಬದುಕು, ಅದೆಷ್ಟು ಬೇಗ ದಿಕ್ಕು-ದೆಸೆಯಿಲ್ಲದೆ ಕಣ್ಣು-ಕಟ್ಟಿದ ಸ್ಪರ್ಧೆಗಿಳಿದ ಕುದುರೆಯಂತೆ ಅಲೆಯುವಂತಾಗಿದೆ! ಅರೆಕ್ಷಣ, ಮೈಮನ ಕಸಿವಿಸಿಗೊಳ್ಳುತ್ತೆ! ಜೀವ ಮರುಗುತ್ತೆ. ಮತ್ತೆ ಮತ್ತೆ ಆ ಬಾಲ್ಯ, ಹಳ್ಳಿ ಬದುಕನ್ನ ಅರಸಿ ಬಯಸುತ್ತೆ! ಜನತೆ, ಹಳ್ಳಿಯಲ್ಲಿನ ಗಿಡ-ಮರ, ಪಶು-ಪಕ್ಷಿ, ಹಳ್ಳ-ಕೊಳ್ಳ, ಬೆಟ್ಟ-ಗುಡ್ಡ ಮುಂತಾದ ಪರಿಸರದ ಸಕಲ ಜೀವಿಗಳೊಂದಿಗೆ ಒಂದಾಗಿ ನಲ್ಮೆಯಿಂದ ಪರಿಶುದ್ಧ ಮನದಿ, ಭೂ ತಾಯಿ, ತಿಳಿ-ನೀಲಿ ಆಗಸ, ಮಳೆ, ಗಾಳಿ, ಬೆಳಕನ್ನ ಇನ್ನಿಲ್ಲದೆ ಅಪ್ಪಿ, ಅತ್ಯಂತ ಸಂತಸ-ಖುಷಿಯಿಂದ, ಇರುವ ಪರಿಸ್ಥಿತಿಗೆ ಒಗ್ಗಿ , ಬದುಕು ರೂಪಿಸಿಕೊಂಡು ಜೀವನೋತ್ಸಾಹ ತಳೆಯುತ್ತಿದ್ದರು.

ನಿಜ ಹೇಳಬೇಕೆಂದರೆ, ಪರಿಸರವೇ ಪಾಠ; ಭೂ ತಾಯಿಯೇ ಹಾಸಿಗೆ; ಆಗಸವೇ ಹೊದಿಕೆಯಾಗಿ, ದುಡಿದ, ದಣಿವರಿದ ಮನದಿ, ಕಣ್ತುಂಬಿ ನೆಮ್ಮದಿಯ ನಿಟ್ಟುಸಿರುಗೈವ ಕ್ಷಣಗಳು ಅದಾಗಿತ್ತು!

ಹಳ್ಳಿಯಲ್ಲಿನ ಆಟೋಟಗಳು, ತಮಾಷೆಯ ಕ್ಷಣಗಳು, ಆಟಿಕೆಗಳು, ಸಾಮಾನುಗಳು, ಹಬ್ಬ-ಹರಿದಿನಗಳು, ಜಾತ್ರೆ-ಸಂತೆಗಳು, ಒಕ್ಕಲು ಸಮಯದ ಸುಗ್ಗಿಯ ಮಧುರ ಕ್ಷಣಗಳು ಇತ್ಯಾದಿ ಜನತೆಯ ಮುಗ್ಧ -ಮನಸ್ಸು ಮತ್ತು ಹೊಳೆವ ಮುಖದಲ್ಲಿ, ನಿಷ್ಕಲ್ಮಶ ಮಂದಹಾಸ ಮೂಡಿಸಿ, ಬೆಲೆ ಕಟ್ಟಲಾಗದ ಖುಷಿಯ ಕ್ಷಣಗಳನ್ನು ಸದಾ ಅವರಲ್ಲಿ ಕಂಗೊಳಿಸುತ್ತಿದ್ದವು.

ಎಲ್ಲರೂ ದುಡಿವವರು; ಎಲ್ಲರೂ ಭಾಗಿಯಾಗುವವರು; ಎಲ್ಲರೊಳಗೊಂದಾಗಿ ಬಾಳುವವರು; ಎಲ್ಲರಲ್ಲೂ ಧನ್ಯತಾ ಭಾವ; ಆದರಣೀಯತೆ, ಪೂಜ್ಯತಾ-ಭಾವ ತುಂಬಿತ್ತು! ಅಂತಃಕರಣೆ, ಕರುಣೆ, ಪ್ರೀತಿ-ವಿಶ್ವಾಸ, ತಕ್ಕಮಟ್ಟಿಗೆ ಮಾನವೀಯತೆ ಬದುಕ-ಪ್ರೀತಿ ಹೆಚ್ಚಿಸಿತ್ತು!

ಈಗಾಗಲೇ, ನಾವು ಯಾವ ಸ್ಥಿತಿ ತಲುಪಿದ್ದೇವೆಂದರೆ: ಶಾಲಾ ರಜೆಯ ದಿನಗಳಲ್ಲಿ, ಈಗಿನ ಮಕ್ಕಳಿಗೆ ಆ ಕಾಲದ ಹಳ್ಳಿಗಳ ಜೀವನ ಪರಿಚಯಿಸಲು ಗೊಟಗೋಡಿಯ ರಾಕ್ ಗಾರ್ಡನ್ – ಹಾವೇರಿ, ಹೆರಿಟೇಜ್ ವಿಲೇಜ್ – ಮಣಿಪಾಲ, ಅಲ್ಲಲ್ಲಿ ಸಾರ್ವಜನಿಕ ಉದ್ಯಾನವನ, ಹಾಗೂ ಇತರೆ ಕೆಲವು ಮ್ಯೂಸಿಯಮ್ ಗಳತ್ತ ಮುಖ ಮಾಡಿಬೇಕೆ ಹೊರತು ನೈಜ ಚಿತ್ರಣ ಪ್ರಸ್ತುತ ಹಳ್ಳಿಗಾಡಿನಲ್ಲೂ ಕಾಣಸಿಗದು! ಸ್ವತಃ ಹಳ್ಳಿಗರೇ ಪರಿತಪಿಸುವ ಸ್ಥಿತಿ.

ಕಾರಣ ಇಷ್ಟೆ: ತಂತ್ರಜ್ಞಾನದ ಆವಿಷ್ಕಾರ ಮತ್ತು ಎಲ್ಲ ಕ್ಷೇತ್ರಗಳಲ್ಲೂ ಹೊಕ್ಕಿರುವ ಅದರ ಗಾಢವಾದ ಛಾಯೆ. ಇಡೀ ‘ಪ್ರಪಂಚವೇ ಒಂದು ಹಳ್ಳಿ’ (Global Village) ಯಾಗಿ ಮಾರ್ಪಟ್ಟಿರುವ ಭಾವನೆ. ವಿಶೇಷವಾಗಿ, ದೂರವಾಣಿ, ಇಂಟರ್ನೆಟ್, ಯುಟ್ಯೂಬ್, ನೇರ ಮೆದುಳಿಗೆ ಕೈ ಹಾಕಿರುವ ಸಾಮಾಜಿಕ ಜಾಲತಾಣಗಳ ಡ್ರಗ್ಸ್ ರೀತಿಯ ಮಾನಸಿಕ ಮೋಹ ಬೆಂಬಿಡದೆ ಇಂದಿನ ಆಧುನಿಕ ಜನತೆಯ ಚಿಂತನಾರ್ಹ ಯೋಚನಾ ಶಕ್ತಿ, ಆರೋಗ್ಯ , ಕೌಟುಂಬಿಕ ಮೌಲ್ಯಗಳು, ಮಾನವೀಯ ಗುಣಗಳು ಹಾಗೂ ಒಟ್ಟಾರೆ ಜೀವನ ಶೈಲಿಯನ್ನೇ ಅಕ್ಷರಸಃ ನುಂಗಿಹಾಕಿವೆ! ಅಲ್ಲದೆ, ಇದು ಇಂದಿನ ಅನಿವಾರ್ಯವೆಂಬಂತೆ ಕಠೋರ ಸನ್ನಿವೇಶ ಹುಟ್ಟುಹಾಕಿವೆ.

ಒಂದೆಡೆ, ‘ಅತೀಯಾದ ಅಮೃತವೂ ವಿಷ’ವೆನ್ನುವಂತೆ, ಹಾಗೂ ಊಟದಲ್ಲಿ ‘ರುಚಿಗೆ ತಕ್ಕಷ್ಟು ಉಪ್ಪಿ’ರುವಂತೆ ಹಲವು ಒಳಿತು-ಕೆಡುಕಗಳ ನಡುವೆ ಎಲ್ಲವೂ ಹಿತಮಿತವಾಗಿ ಬಳಕೆಯಲ್ಲಿದ್ದರೆ ಚೆನ್ನ. ಅಲ್ವೇ? ಮೈ ಮನ ಆರೋಗ್ಯಕರವಾಗಿರುತ್ತೆ; ಜೀವನ ಉತ್ಸಾಹದಿಂದ ಕೂಡಿರುತ್ತೆ.
ಜೊತೆಗೆ, ಇತ್ತೀಚೆಗೆ ಜಗತ್ತಿನೆಲ್ಲೆಡೆ ಭಾರೀ ಸಂಚಲನ ಸೃಷ್ಟಿಸಿರುವ ‘ಕೃತಕ ಬುದ್ಧಿಮತ್ತೆ’ (Artificial Intelligence – AI) ಹಾಗೂ ‘ಬಯೋಚಿಪ್’ ತಂತ್ರಜ್ಞಾನಗಳು. ಈ ಎರಡೂ ತಂತ್ರಜ್ಞಾನಗಳು ಬಹುತೇಕ ಮನುಷ್ಯನನ್ನ ಸಹ ಒಂದು ಸರಕಾಗಿ ನೋಡುವ ದೂರದೃಷ್ಟಿ ಹೊಂದಿವೆ ಎಂದರೆ ತಪ್ಪಾಗಲಿಕ್ಕಿಲ್ಲ! ತೀರ ಇತ್ತೀಚೆಗೆ, ತಂತ್ರಜ್ಞಾನ ಜಗತ್ತಿನ ಹೆಸರಾಂತ ಉದ್ಯಮಿ: ಎಲಾನ್ ಮಸ್ಕ್ ತಮ್ಮ ‘ನ್ಯೂರಾಲಿಂಕ್’ (Neuralink) ಸಂಸ್ಥೆಯ ಮೂಲಕ ಪ್ರಪಂಚದ ಮೊಟ್ಟ ಮೊದಲ ಪ್ರಯತ್ನವಾಗಿ ಆರೋಗ್ಯವಂತ ವ್ಯಕ್ತಿಯೊಬ್ಬರ ಮೆದುಳಿನಲ್ಲಿ ಪ್ರಾಯೋಗಿಕ – ‘ಮೊದಲ ಬಯೋಚಿಪ್’ ಅಳವಡಿಸಿರುವುದು ಎಲ್ಲರ ಅಚ್ಚರಿಗೆ ಕಾರಣವಾಗಿದೆ! ಇದುವರೆಗೂ, ಮೊಬೈಲ್ ನಲ್ಲಿ ಕೇವಲ ‘ಮೆಮೊರಿ ಕಾರ್ಡ್’ ಬಳಸಿ, ಅದರಲ್ಲಿ ಸಂಗ್ರಹಿಸಿದ ಮಾಹಿತಿ ಬೇಕೆಂದಾಗ ಆಲಿಸುವ, ನೋಡುವ ಪರಿಪಾಠದ ಪರಿಚಯವಿದ್ದ ನಮಗೆ, AI ಹಾಗೂ Biochip ತಂತ್ರಜ್ಞಾನಗಳ ಅವತಾರಗಳು ಊಹೆಗೂ ಮೀರಿದ್ದು ಅನ್ಸುತ್ತೆ ಕೂಡ.

ಆಗ, ಜಗತ್ತು ಹೇಗಿರಬೇಡ? ತಂತ್ರಜ್ಞಾನ ತೊರೆದು ಮನುಷ್ಯ, ಜೀವನ ಕಲ್ಪಿಸಿಕೊಳ್ಳಲಾರದ ಪರಿಸ್ಥಿತಿ ನಿರ್ಮಾಣವಾಗಿದೆ. ಅದು, ಕೇವಲ ಮನುಷ್ಯನ ಅವಶ್ಯಕತೆಗಳಿಗೆ ಪೂರಕವಾಗಿರಬೇಕೆ ಹೊರತು; ಆತನನ್ನ ಆಳುವ ಸ್ಥಿತಿ ತಲುಪಬಾರದು! ಮುಂದಿನ ದಿನಗಳಲ್ಲಿ, ಮನುಷ್ಯ ಎದುರಿಸಬಹುದಾದ ಭಯಾನಕ ತಂತ್ರಜ್ಞಾನ ಸಂಕೋಲೆಗಳನ್ನು ಕುರಿತು ಚರ್ಚಿಸುವ ಅಗತ್ಯ ಇಂದಿನ ತುರ್ತು ಅನಿವಾರ್ಯ. ಆದರೆ, ಎಲ್ಲವೂ ಸಲೀಸಾಗಿ ಕೈಗೆಟುಕುವ ಇಂದಿನ ದಿನಗಳಲಿ, ಅತಿಯಾಗಿ ಮಿತಿಮೀರಿರುವ ಅನುಕೂಲಗಳು ಅಮೂಲ್ಯ ಖುಷಿಯ ಕ್ಷಣಗಳನ್ನು ಎಂದಿಗೂ ನೀಡಲಾರವು.

ಬದಲಿಗೆ, ಪ್ರತಿಷ್ಠೆಯ ಹೆಮ್ಮರಗಳಾಗಿ, ಜನತೆ ನಾಲ್ಕು ದಿನದ ಈ ಬಾಳಲಿ ಏನೋ ಬಹುದೊಡ್ಡ ಸಾಧನೆಗೈದವರಂತೆ, ಯಂತ್ರಮಾನವರಂತೆ ಬೀಗುವವರೆ!!? ಮೂಲಭೂತವಾಗಿ, ಮಾನವ ಸಹಿತ ಸಕಲ ಜೀವ-ಸಂಕುಲವೂ ವಾಸಯೋಗ್ಯ ಸ್ವಚ್ಛಂದ ಭೂಮಿ ಸಂರಕ್ಷಣೆ ನಮ್ಮೆಲ್ಲರ ಹೊಣೆ. ಭೂಮಿಯಲ್ಲಿ, ಮಣ್ಣಿನ ಫಲವತ್ತತೆ ಹಾಗೂ ನೀರು ಸಂರಕ್ಷಿಸದೆ; ಗಿಡ-ಮರ ಬೆಳೆಸದೆ; ಹಸಿರು ಹೆಚ್ಚಿಸದೆ, ಮತ್ತು ಪರಿಸರ ಸಮತೋಲನ ಕಾಪಾಡದೆ; ಕೇವಲ ತಂತ್ರಜ್ಞಾನ ತಲೆಯಲಿ ಹೊತ್ತು, ಮನುಷ್ಯ ಉತ್ತಮ ಆಹಾರ, ಆರೋಗ್ಯ ಮತ್ತು ಜೀವನ ಕಟ್ಟಿಕೊಳ್ಳಲು ಎಂದಿಗೂ ಸಾಧ್ಯವಿಲ್ಲ. ಸಮರೋಪಾದಿಯಲ್ಲಿ, ಜನತೆ ಸ್ವ ಇಚ್ಛೆಯಿಂದ ಹಳ್ಳಿ-ಹಳ್ಳಿಗಳಿಂದ, ನಗರಗಳು, ಬೆಟ್ಟ-ಗುಡ್ಡಗಳಲ್ಲೆಡೆ ಬೃಹತ್ ಸಂಖ್ಯೆಯಲ್ಲಿ ಸಸಿಗಳನ್ನ ನೆಟ್ಟು, ಪಾಲನೆ-ಪೋಷಣೆಗೈಯ್ಯುವ ಚಳುವಳಿ ರೂಪದ ಆಂದೋಲನ ದೇಶಾದ್ಯಂತ ಅತ್ಯಂತ ತ್ವರಿತವಾಗಿ ಕೈಗೂಡಬೇಕು. ಈ ನಿಟ್ಟಿನಲ್ಲಿ, ಎಲ್ಲರೂ ಕೈಜೋಡಿಸಬೇಕು.

(ಲೇಖಕರು : ಡಾ. ಚಂದ್ರಪ್ಪ ಎಚ್, ಸಹಾಯಕ ಪ್ರಾಧ್ಯಾಪಕರು, ಭೌತವಿಜ್ಞಾನ ವಿಭಾಗ, ಸರ್ಕಾರಿ ವಿಜ್ಞಾನ ಕಾಲೇಜು, ಚಿತ್ರದುರ್ಗ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ

Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು

Published

on

ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್‌ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್‌ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.

ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ

Published

on

ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.

ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್‌ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್‌ಗಳನ್ನು ಒಳಗೊಂಡಿದೆ.

ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್‌ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್‌ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್‌ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending