ದಿನದ ಸುದ್ದಿ
ಹೆಣ್ಣೆಂದು ನೋಡದೇ ಎದೆಗೆ ಒದ್ದ ದುರುಳ; ಅಧ್ಯಕ್ಷನಿಗೆ ಮಹಿಳೆಯಿಂದ ಚಪ್ಪಲಿ ಏಟು

ಸುದ್ದಿದಿನ ಡೆಸ್ಕ್ : ಭೂಮಿ ವಿಚಾರ ಸಂಬಂಧಿಸಿದಂತೆ ಆರಂಭವಾದ ಜಗಳದಲ್ಲಿ ಹೆಣ್ಣೆಂದು ನೋಡದೇ ಮಂಡಳ ಪರಿಷತ್ ಅಧ್ಯಕ್ಷನೊಬ್ಬ ಮಹಿಳೆಯ ಎದೆಗೆ ಜಾಡಿಸಿ ಒದಿದ್ದಾನೆ. ಈ ಘಟನೆ ನಡೆದ ಬಳಿಕ ಮಹಿಳೆ ಅಧ್ಯಕ್ಷನಿಗೆ ಚಪ್ಪಲಿ ಪೂಜೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಕತ್ ವೈರಲ್ ಆಗಿದೆ.
ತೆಲಂಗಾಣ ರಾಜ್ಯದ ನಿಜಾಮಬಾದ್ ಜಿಲ್ಲೆಯ ಇಂದಲ್ವಾಯಿ ಬ್ಲಾಕ್ನ ತೆಲಂಗಾಣ ರಾಷ್ಟ್ರ ಸಮಿತಿಯ ಅಧ್ಯಕ್ಷ ಇಮ್ದಾದಿ ಗೋಪಿ ರಾಜವ್ವ ಎಂಬ ಮಹಿಳೆಯ ಎದೆಗೆ ಜಾಡಿಸಿ ಇದ್ದಿದ್ದರಿಂದ ಕೆಳಗೆ ಬಿದ್ದಿದ್ದಾಳೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಮಂಡಳ ಅಧ್ಯಕ್ಷ ಇಮ್ಮಾದಿ ಗೋಪಿಯಿಂದ ಮಹಿಳೆ ಖರೀದಿಸಿದ್ದ ಜಮೀನು ಹಸ್ತಾಂತರ ಮಾಡದಿದ್ದರಿಂದ ಅಧ್ಯಕ್ಷನ ಮನೆ ಎದುರು ಕುಟುಂಬದೊಂದಿಗೆ ಪ್ರತಿಭಟನೆ ನಡೆಸುತ್ತಿದ್ದಳು. ಈ ವೇಳೆ ವಾಗ್ವಾದ ನಡೆದಾಗ ಮಹಿಳೆ ಎದೆಗೆ ಒದ್ದಿದ್ದಾನೆ. ಮಹಿಳೆಯು ಹತ್ತು ತಿಂಗಳ ಹಿಂದೆ 33 ಲಕ್ಷ ರೂ. ನೀಡಿ ಜಮೀನನ್ನು ಖರೀದಿಸಿದ್ದಳು. ಹೆಚ್ಚುವರಿ 23ಲಕ್ಷ ರೂ. ಬೇಡಿಕೆಯಿಟ್ಟಿದ್ದ ಗೋಪಿ ಹಸ್ತಾಂತರ ಮಾಡುವಲ್ಲಿ ವಿಳಂಬ ಮಾಡಿದ್ದ. ಜಮೀನಿನ ಮೂಲ ದಾಖಲಾತಿ ಪತ್ರಗಳನ್ನು ನೀಡುವಂತೆ ಮಹಿಳೆ ಮತ್ತು ಕುಟುಂಬ ಸದಸ್ಯರು ಆಗ್ರಹಿಸಿದ್ದರು.
ಈ ಇಬ್ಬರ ನಡುವೆ ಕಳೆದ ವಾರದಿಂದ ಕಲಹ ಉಂಟಾಗಿತ್ತು. ಆದರೂ ರಾಜವ್ವ ಮತ್ತು ಕುಟುಂಬದ ಸದಸ್ಯರು ಮಾಡಿದ ಮನವಿಗೆ ಸೊಪ್ಪು ಹಾಕದಿದುದ್ದರಿಂದ ಮಹಿಳೆ ಚಪ್ಪಲಿಯಿಂದ ಗೋಪಿಗೆ ಹೊಡೆದಿದ್ದಾಳೆ. ಆಗ ಗೋಪಿ ಮಹಿಳೆಯ ಎದೆಗೆ ಒದ್ದಿದ್ದಾನೆ. ಸ್ಥಳದಲ್ಲಿದ್ದ ಮಹಿಳೆಯ ಕಡೆಯವರು ಆತನ ನೂಕಿದ್ದಾರೆ.
ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಗೋಪಿಯ ವಿರುದ್ಧ ಮಹಿಳೆ ದೂರು ನೀಡಿದ್ದಾಳೆ. ಗೋಪಿಯು ಸಹ ಮಹಿಳೆ, ಆಕೆಯ ಸಂಬಂಧಿಕರ ವಿರುದ್ಧ ಅತಿಕ್ರಮಣ, ಆಸ್ತಿ ಹಾನಿ ಪ್ರತಿ ದೂರು ನೀಡಿದ್ದಾನೆ. ಈ ಪ್ರಕರಣವನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಉಚಿತ ಲ್ಯಾಪ್ಟಾಪ್ ಪಡೆಯಲು ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೊಂದಾಯಿತ ಕಾರ್ಮಿಕರ ಮಕ್ಕಳು ಪ್ರಸಕ್ತ ಸಾಲಿನಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.
ದಾವಣಗೆರೆ ಉಪ ವಿಭಾಗದ ಕಾರ್ಮಿಕ ಅಧಿಕಾರಿ ಇವರ ವ್ಯಾಪ್ತಿಯಲ್ಲಿ ನೋಂದಣಿಯಾಗಿರುವ ಕಾರ್ಮಿಕರು ಈ ಸೌಲಭ್ಯವನ್ನು ಪಡೆಯಬಹುದು. ಅರ್ಜಿ ನಮೂನೆಯನ್ನು ಸಂಬಂಧಿಸಿದ ಕಾರ್ಮಿಕ ನಿರೀಕ್ಷಕರ ಕಛೇರಿಯಿಂದ ಪಡೆದು ಅಗತ್ಯ ದಾಖಲೆಗಳೊಂದಿಗೆ ಕಾರ್ಮಿಕ ನಿರೀಕ್ಷಕರಿಗೆ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅಕ್ಟೋಬರ್ 11 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಅಧಿಕಾರಿಯವರ ಕಚೇರಿ ದೂ ಸಂ:08192-237332 ಸಂಪರ್ಕಿಸಲು ಕಾರ್ಮಿಕ ಅಧಿಕಾರಿ ಇಬ್ರಾಹಿಂ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಾಳೆಯಿಂದ ತಮಿಳುನಾಡಿಗೆ ಕಾವೇರಿ ನೀರು ; ಕಾವೇರಿ ನದಿ ನೀರು ಸಮಿತಿ ನಿರ್ದೇಶನ

ಸುದ್ದಿದಿನ ಡೆಸ್ಕ್ : ತಮಿಳುನಾಡಿಗೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನದಿ ನೀರು ಸಮಿತಿ ತೀರ್ಪಿನ ಕುರಿತು ಕಾನೂನು ತಜ್ಞರ ಜೊತೆ ಚರ್ಚಿಸಿ, ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ ನಿನ್ನೆ ಹೇಳಿದ್ದಾರೆ.
ತಮಿಳುನಾಡಿಗೆ ನಾಳೆಯಿಂದ (ಸೆಪ್ಟಂಬರ್28) ಅಕ್ಟೋಬರ್ 15ರ ತನಕ ಪ್ರತಿನಿತ್ಯ 3 ಸಾವಿರ ಕ್ಯೂಸೆಕ್ನಂತೆ ನೀರು ಹರಿಸುವಂತೆ, ಕಾವೇರಿ ನದಿ ನೀರು ಸಮಿತಿ ನಿನ್ನೆ ಕರ್ನಾಟಕಕ್ಕೆ ನಿರ್ದೇಶನ ನೀಡಿದೆ. ಕಾವೇರಿ ನದಿ ನೀರು ಸಮಿತಿ ವರ್ಚುವಲ್ ಮೂಲಕ ನಡೆದ ಸಭೆಯಲ್ಲಿ ಈ ನಿರ್ದೇಶನ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಉತ್ತಮ ಶಿಕ್ಷಕರ ಪ್ರಶಸ್ತಿಗೆ ಸುಮಂಗಳಾ ಮೇಟಿ ಆಯ್ಕೆ

ಸುದ್ದಿದಿನ, ಬಳ್ಳಾರಿ : ಸಿರಿಗೇರಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ (ಬಸವನಪೇಟೆ) ಮುಖ್ಯ ಗುರುಗಳಾದ ಶ್ರೀಮತಿ ಸುಮಂಗಳಾ ಮೇಟಿಯವರು 2023-24 ನೇ ಸಾಲಿನ ಬಳ್ಳಾರಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಶಿಕ್ಷಕ ವೃತ್ತಿ ಧರ್ಮ ನೇ ತನ್ನ ಸರ್ವಸ್ವ ಎಂದು ತಿಳಿದುಕೊಂಡಂತಹ ಶ್ರೀಮತಿ ಸುಮಂಗಳಾ ಮೇಟಿಯವರು, ಶಿಕ್ಷಕ ವೃತ್ತಿಯಲ್ಲಿ ಉತ್ತಮ ಕರ್ತವ್ಯ ಹಾಗೂ ಸೇವೆಯನ್ನು ಸಲ್ಲಿಸಿದನ್ನು ಪರಿಗಣಿಸಿ ಈ ಹಿಂದೆಯೇ 2022-23 ನೇ ಸಾಲಿನ ಬಳ್ಳಾರಿ ಜಿಲ್ಲಾ ಮಟ್ಟದ ಸಾವಿತ್ರಿ ಬಾಯಿ ಫುಲೆ ಶಿಕ್ಷಕಿ ಪ್ರಶಸ್ತಿ ಪುರಸ್ಕೃತರಾಗಿದ್ದು, ಇವರ ಶಿಕ್ಷಣ ಕ್ಷೇತ್ರದಲ್ಲಿನ ಅಗಾಧವಾದ ಕರ್ತವ್ಯ ಮತ್ತು ಸೇವೆ ನಿಷ್ಠೆಯನ್ನು ಗುರುತಿಸಿದ ಶಾಲಾ ಶಿಕ್ಷಣ ಇಲಾಖೆ ಬಳ್ಳಾರಿ ವತಿಯಿಂದ 2023-24 ನೇ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆಯಾಗಿರುವುದಕ್ಕೆ ಇದೇ ಸಂದರ್ಭದಲ್ಲಿ ಗ್ರಾಮಸ್ಥರು, ಸಮಸ್ತ ಶಿಕ್ಷಕರ ವರ್ಗದವರು, ಅತಿಥಿ ಶಿಕ್ಷಕರು, ಹಿತೈಷಿಗಳು, ಹಳೆಯ ವಿದ್ಯಾರ್ಥಿ ಬಳಗ, ಶಿಕ್ಷಣ ಪ್ರೇಮಿಗಳು, ಅಭಿಮಾನಿ ಬಳಗ,
ಮುಂತಾದವರು ಅಭಿನಂದನೆಯನ್ನು ಸಲ್ಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days ago
ನಾಳೆಯಿಂದ ತಮಿಳುನಾಡಿಗೆ ಕಾವೇರಿ ನೀರು ; ಕಾವೇರಿ ನದಿ ನೀರು ಸಮಿತಿ ನಿರ್ದೇಶನ
-
ದಿನದ ಸುದ್ದಿ5 days ago
ಬೆಂಗಳೂರು ಬಂದ್ ಹಿನ್ನೆಲೆಯಲ್ಲಿ ನಗರದೆಲ್ಲೆಡೆ ಬಿಗಿ ಬಂದೋಬಸ್ತ್ : ಪೊಲೀಸ್ ಕಮೀಷನರ್ ದಯಾನಂದ್
-
ದಿನದ ಸುದ್ದಿ3 days ago
ಉಚಿತ ಲ್ಯಾಪ್ಟಾಪ್ ಪಡೆಯಲು ಅರ್ಜಿ ಆಹ್ವಾನ
-
ದಿನದ ಸುದ್ದಿ4 days ago
ಉತ್ತಮ ಶಿಕ್ಷಕರ ಪ್ರಶಸ್ತಿಗೆ ಸುಮಂಗಳಾ ಮೇಟಿ ಆಯ್ಕೆ