Connect with us

ದಿನದ ಸುದ್ದಿ

ಮಾದಕ ವಸ್ತುಗಳಿಗೆ ಕಡಿವಾಣ ; ಸ್ವಾಸ್ಥ್ಯ ಬದುಕಿಗೆ ಸೋಪಾನ

Published

on

  • ಡಾ.ಗೀತಾ ಬಸವರಾಜು, ಉಪನ್ಯಾಸಕರು, ಎ.ವಿ.ಕೆ ಮಹಿಳಾ ಕಾಲೇಜು, ದಾವಣಗೆರೆ

ಗತ್ತಿನಲ್ಲಿರುವ 84 ಕೋಟಿ ಜೀವರಾಶಿಗಳಲ್ಲಿ ಮಾನವ ಶ್ರೇಷ್ಟ ಪ್ರಾಣಿ. ಏಕೆಂದರೆ ಮಾತನಾಡುವ, ಆಲೋಚಿಸುವ, ಭಾವನೆಗಳನ್ನು ಅಭಿವ್ಯಕ್ತಿಸುವ ವಿಶೇಷವಾದ ಸಾಮರ್ಥ್ಯ ಅವನಿಗಿದೆ.

ಈ ಶಕ್ತಿಯ ಮೂಲಕ ತುಂಬಾ ಶ್ರೇಷ್ಟನಾಗಬೇಕಾದ ಮಾನವ ನಗರೀಕರಣ, ಕೈಗಾರಿಕೀಕರಣ, ಪಾಶ್ಚಾತ್ಯೀಕರಣದ ಪ್ರಭಾವದಿಂದ ಪ್ರೇರಿತನಾಗಿ ಮೂಲ ಸಂಸ್ಕೃತಿಯನ್ನು ಮರೆತು ಮೃಗೀಯ ವರ್ತನೆಗೆ ದಾಸನಾಗಿದ್ದಾನೆ. ಪ್ರಸ್ತುತ ವೈಜ್ಞಾನಿಕವಾಗಿ, ತಾಂತ್ರಿಕವಾಗಿ ಎಷ್ಟೇ ಮುಂದುವರೆದಿದ್ದರೂ, 20ನೇ ಶತಮಾನದಿಂದೀಚೆಗೆ ಜಗತ್ತನ್ನೇ ತಲ್ಲಣಗೊಳಿಸುವ ಸಾಮಾಜಿಕ ಪಿಡುಗುಗಳಾದ ಬಡತನ, ಭಿಕ್ಷಾಟನೆ, ನಿರುದ್ಯೋಗ, ವರದಕ್ಷಿಣೆ, ಅಪರಾಧ ಮಾದಕ ವಸ್ತು ವ್ಯಸನವು ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುತ್ತಿವೆ.

ಈ ಸಮಸ್ಯೆಗಳನ್ನು ಪರಿಹರಿಸಬೇಕಾಧ ಯುವಜನತೆ ಇಂತಹ ದುಶ್ಚಟಗಳ ಸೆಲೆಯಲ್ಲಿ ಸಿಕ್ಕು ತಮ್ಮ ಅಮೂಲ್ಯ ಬದುಕನ್ನು ಹಾಳು ಮಾಡಿಕೊಳ್ಳುತ್ತಿರುವುದು ಆತಂಕಕಾರಿ.
ಯುವಶಕ್ತಿಯೇ ದೇಶದ ಶಕ್ತಿಯಾಗಿದ್ದು ಭವ್ಯಭಾರತ ನಿರ್ಮಾಣದಲ್ಲಿ ತೊಡಗಿಸಿಕೊಳ್ಳಬೇಕಾದ ಯುವಜನತೆ ಮಾದಕ ವಸ್ತುಗಳ ದುಶ್ಚಟಕ್ಕೆ ಒಳಗಾಗಿ ಮಾನವೀಯ ಮೌಲ್ಯಗಳನ್ನು ಕಳೆದುಕೊಂಡು ಅಂಧಕಾರದಲ್ಲಿ ಜೀವನ ನಡೆಸುತ್ತ ಚಿಕ್ಕ ವಯಸ್ಸಿನಲ್ಲಿಯೇ ಮರಣ ಹೊಂದುತ್ತಿರುವುದು ಆಘಾತದ ವಿಷಯ.

ಜೋಸೆಫ್ ಜ್ಯೂಲಿಯನ್ ರವರ ಪ್ರಕಾರ ಮಾದಕ ವಸ್ತುಗಳೆಂದರೆ ಯಾವುದೇ ರಾಸಾಯನಿಕ ವಸ್ತುವಾಗಿದ್ದು ಅದರ ಸೇವನೆಯಿಂದ ದೈಹಿಕ ಕಾರ್ಯ, ಮನಸ್ಥಿತಿ, ಗ್ರಹಣ ಶಕ್ತಿಯ ಮೇಲೆ ಪರಿಣಾಮ ಬೀರುತ್ತದೆ. ಇದನ್ನು ಪದೇ ಪದೇ ಬಳಸುವುದರಿಂದ ವ್ಯಕ್ತಿ ಮಾದಕ ವಸ್ತು ವ್ಯಸನಿಯಾಗುತ್ತಾನೆ. ಮಾದಕ ವಸ್ತುವು ಮನಸ್ಸಿಗೆ ಗೊಂದಲವನ್ನು ತರುವ ಪದಾರ್ಥವಾಗಿದ್ದು ಅಮಲು ರೋಗವಾಗಿದೆ. ಭಾರತದ ನಗರ ಪ್ರದೇಶಗಳಲ್ಲಷ್ಟೇ ಅಲ್ಲದೆ ಹಳ್ಳಿ ಹಳ್ಳಿಗಳಲ್ಲಿಯೂ ಇದರ ಬಳಕೆ ಕಂಡುಬರುತ್ತದೆ. ಶ್ರೀಮಂತರು, ಮಧ್ಯಮ ವರ್ಗದವರು, ವಿದ್ಯಾವಂತರು, ಯುವಕರು, ಮಹಿಳೆಯರು ಎಂಬ ಭೇದವಿಲ್ಲದೆ ದುಶ್ಚಟಗಳಿಗೆ ಬಲಿಯಾಗಿ ತಮ್ಮ ಆರೋಗ್ಯವನ್ನು ಕಳೆದುಕೊಳ್ಳುತ್ತಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆಯವರು ನಡೆಸಿದ ಸಮೀಕ್ಷೆಯ ಪ್ರಕಾರ ಭಾರತದ ವಿದ್ಯಾರ್ಥಿಗಳಲ್ಲಿ ಶೇ 10 ರಷ್ಟು ಒಂದಿಲ್ಲೊAದು ದುಶ್ಚಟಕ್ಕೆ ಒಳಗಾಗಿದ್ದು ಅದರಲ್ಲಿ 14 ರಿಂದ 22 ರ ವಯೋಮಾನದವರು ಹೆಚ್ಚಿದ್ದಾರೆ. ಸ್ವಾತಂತ್ಯç ಪೂರ್ವದಲ್ಲಿ ಶೇ 2 ರಷ್ಟಿದ್ದ ವ್ಯಸನಿಗಳು ಪ್ರಸ್ತುತ ಶೇ 30 ಕ್ಕಿಂತ ಹೆಚ್ಚಿದ್ದಾರೆ. ಜಗತ್ತಿನ ಸುಮಾರು 20 ಕೋಟಿಯಷ್ಟು ಇರುವ ಮಾದಕ ವ್ಯಸನಿಗಳಲ್ಲಿ ಭಾರತದಲ್ಲಿ ಶೇ 7.5 ಕೋಟಿ ವ್ಯಸನಿಗಳಿದ್ದಾರೆಂದು ಅಂದಾಜಿಸಲಾಗಿದೆ.

ನಶೆಯ ಅಲೆ ಸಾವಿನ ಬಲೆಯಾಗುತ್ತಿದ್ದರೂ ಕೂಡ ಈ ದೇಶದಲ್ಲಿ ಊಟವಿಲ್ಲದೆ ಸಾಯುವವರ ಸಂಖ್ಯೆಗಿAತಲೂ ಚಟವನ್ನು ಬೆಳೆಸಿಕೊಂಡು ಸಾಯುವವರು ಹೆಚ್ಚಾಗಿದ್ದಾರೆ.
ಮಾದಕ ವಸ್ತು ಬಳಸುವ ಆತಂಕದ ರಾಷ್ಟçಗಳಲ್ಲಿ ಭಾರತ ಪ್ರಥಮ ಸ್ಥಾನದಲ್ಲಿದೆ. ಅಮಲು ಪದಾರ್ಥಗಳಿಗೆ ಬಲಿಯಾಗುತ್ತಿರುವವರಲ್ಲಿ ವಿದ್ಯಾರ್ಥಿಗಳನ್ನೂ ಒಳಗೊಂಡAತೆ ಯುವಜನತೆ ಹೆಚ್ಚಾಗಿದ್ದು ಇದು ದೇಶದ ಭವಿಷ್ಯಕ್ಕೆ ಮಾರಕವಾಗಿದೆ.

ಡಾ.ಗೀತಾ ಬಸವರಾಜು, ಉಪನ್ಯಾಸಕರು,
ಎ.ವಿ.ಕೆ ಮಹಿಳಾ ಕಾಲೇಜು, ದಾವಣಗೆರೆ

ದುಶ್ಚಟಗಳ ಆರಂಭಕ್ಕೆ ಕಾರಣಗಳು

• ಕ್ಷಣಕಾಲ ಸುಖ ಅನಂತಕಾಲ ದು:ಖಕ್ಕೆ ಕಾರಣ ಎನ್ನುವುದು ಗೊತ್ತಿದ್ದೂ ಅಫೀಮು, ಹೆರಾಯಿನ್, ಬೀಡಿ, ಸಿಗರೇಟು, ಮದ್ಯಪಾನ ಮುಂತಾದ ದುಶ್ಚಟಗಳಿಗೆ ವಿದ್ಯಾವಂತ ಯುವಕರೇ ಬಲಿಯಾಗುತ್ತಿದ್ದಾರೆ.
• ಉಲ್ಲಾಸಕ್ಕಾಗಿ, ಫ್ಯಾಷನ್‌ಗಾಗಿ, ದುರ್ಬಲ ಮನಸ್ಸು, ಏಕಾಂಗಿತನ, ಒತ್ತಡ ನಿವಾರಣೆ ಮಾಡಿಕೊಳ್ಳಲು
• ನೋವು, ದು:ಖಕ್ಕೆ ಪರಿಹಾರವೆಂಬ ಭ್ರಮೆಗೆ ಒಳಗಾಗಿ ತನಗೆ ಅರಿವಿಲ್ಲದಂತೆ ದೊಡ್ಡ ಕಂದಕಕ್ಕೆ ಬಿದ್ದು ನರಳಾಡುವಂತ ಸಂದರ್ಭ ತಂದುಕೊಂಡು ಮಾದಕ ವಸ್ತುಗಳ ಮಾಯಾಜಾಲಕ್ಕೆ ಒಳಗಾಗುತ್ತಿದ್ದಾರೆ. ತೆರಣಿಯ ಹುಳು ತಾನು ಸುತ್ತಿದ ಬಲೆಯಲ್ಲಿ ತಾನೇ ಬಿದ್ದು ಹೊರಳಾಡುವಂತೆ ಅವರ ಪರಿಸ್ಥಿತಿಯಾಗಿದೆ.

ದುಶ್ಚಟಗಳಿಂದಾಗುವ ಪರಿಣಾಮಗಳು

• ದೇಹ ಮತ್ತು ಮನಸ್ಸಿನ ಸಮತೋಲನ ಕಳೆದುಕೊಳ್ಳುವುದು.
• ವ್ಯಕ್ತಿ ತನ್ನನ್ನು ದಹಿಸಿಕೊಳ್ಳುವುದರ ಜೊತೆಗೆ ಕುಟುಂಬದ ನೆಮ್ಮದಿಗಿ ಭಂಗ ತರುತ್ತಾನೆ.
• ಕುಟುಂಬ, ಸಮಾಜದಿಂದ ನಿಂದನೆಗೆ ಒಳಗಾಗುವನು.
• ಜ್ಞಾನೇಂದ್ರಿಯಗಳ ಮೇಲೆ ಹತೋಟಿ ಕಳೆದುಕೊಳ್ಳುವನು
• ಸಮಾಜಬಾಹಿರ ಚಟುವಟಿಕೆಗಳಾದ ಕಳ್ಳತನ, ಅತ್ಯಾಚಾರ, ಕೊಲೆ ಇಂತಹ ದುಷ್ಕೃತ್ಯಗಳನ್ನು ಮಾಡುವನು.
• ದಾಂಪತ್ಯದಲ್ಲಿ ವಿರಸವುಂಟಾಗಿ ವಿಚ್ಚೇದನಗಳಾಗುವ ಸಾಧ್ಯತೆ.
• ರಸ್ತೆ ಅಪಘಾತಗಳಲ್ಲಿ ಶೇ 1/3 ರಷ್ಟು ಮದ್ಯಪಾನ ಮತ್ತು ಮಾದಕ ವಸ್ತು ಸೇವನೆಯಿಂದಾಗುತ್ತದೆ. ಈ ಹಿನ್ನೆಲೆಯಲ್ಲಿ ಮಹಾತ್ಮ ಗಾಂಧೀಜಿಯವರು ಬೆಂಕಿ ದೇಹವನ್ನು ನಾಶ ಮಾಡಿದರೆ ಕುಡಿತ ದೇಹ ಮತ್ತು ಆತ್ಮಗಳೆರಡನ್ನೂ ನಾಶ ಮಾಡುತ್ತದೆ ಎಂದಿದ್ದಾರೆ.

ಪರಿಹಾರ ಕ್ರಮಗಳು

• ಮಾದಕ ವಸ್ತುಗಳ ಹಿಡಿತಕ್ಕೆ ಸಿಲುಕದೆ ಅದರಿಂದ ದೂರವಿರುವುದು.
• ಮಾದಕ ವಸ್ತು ಸೇವಿಸುವುದಿಲ್ಲವೆಂದು ಪ್ರತಿಜ್ಞೆ ಮಾಡುವುದು.
• ಸಹೋದ್ಯೋಗಿ, ಸ್ನೇಹಿತರಿಗೆ ತಿಳುವಳಿಕೆ ನೀಡುವುದು.
• 18 ವರ್ಷ ವಯಸ್ಸಿನವರೆಗೂ ಪೋಷಕರು ಮಕ್ಕಳ ಬಗ್ಗೆ ಗಮನ ನೀಡಿ ಮಾರ್ಗದರ್ಶನ ಮಾಡುವುದು.
• ಶಾಲೆ ಕಾಲೇಜುಗಳಲ್ಲಿ ಶಿಕ್ಷಕರು ಮಕ್ಳಳಲ್ಲಿ ಜೀವನ ಕೌಶಲಗಳನ್ನು ಬೆಳೆಸುವ ರಾಯಭಾರಿಗಳಾಗಿ ಕಾರ್ಯನಿರ್ವಹಿಸುವುದು.
• ವಿದ್ಯಾರ್ಥಿಗಳನ್ನು ಸಹಪಠ್ಯ ಚಟುವಟಿಕೆಗಳಲ್ಲಿ ತೊಡಗಿಸಿ ಆರೋಗ್ಯಕರವಾದ ಹವ್ಯಾಸಗಳನ್ನು ಬೆಳೆಸುವುದು.

ಭಾರತ ಸರ್ಕಾರವು 1951ರಲ್ಲಿ ಅಪಾಯಕಾರಿ ವಸ್ತುಗಳ ಕಾಯ್ದೆಯನ್ನು ಜಾರಿಗೆ ತಂದಿತು. ಈ ಕಾಯ್ದೆ ಮಾದಕ ವಸ್ತು ತಯಾರಿಕೆ, ಸಾಗಾಣಿಕೆ, ಮಾರಾಟ ಮತ್ತು ಬಳಕೆಯ ಮೇಲೆ ನಿರ್ಬಂಧ ಹೇರಿದೆ. 1985 ರಲ್ಲಿ ಡ್ರಗ್ಸ್ ಆಕ್ಟ್ ಜಾರಿಗೊಳಿಸಿದೆ. ಈ ಕಾಯ್ದೆ ಮಾದಕ ವಸ್ತುಗಳ ಕಳ್ಳ ವ್ಯಾಪಾರದಲ್ಲಿ ತೊಡಗಿದ ಅಪರಾಧಿಗಳಿಗೆ ಕನಿಷ್ಠ 10 ರಿಂದ 20 ವರ್ಷ ಕಠಿಣ ಶಿಕ್ಷೆ, 1 ರಿಂದ 2 ಲಕ್ಷದವರೆಗೆ ದಂಡ ಘೋಷಿಸಿದೆ.

ಡಿಸೆಂಬರ್-7 1987 ರ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮಾದಕ ವಸ್ತುಗಳ ದುರ್ಬಳಕೆಯನ್ನು ತಡೆಗಟ್ಟುವ ನಿಯಮಾವಳಿಗಳ ಅಂಗೀಕಾರವನ್ನು ಹಲವಾರು ರಾಷ್ಟçಗಳು ಒಪ್ಪಿಕೊಂಡು ವಿಶ್ವದಾದ್ಯಂತ ಮಾದಕ ವಸ್ತುಗಳ ದುರ್ಬಳಕೆ ನಿಯಂತ್ರಿಸುವ ತೀರ್ಮಾನವನ್ನು ಮಾಡಿದವು.

ಜೂನ್-26 ವಿಶ್ವಸಂಸ್ಥೆಯು ಮಾದಕ ವಸ್ತು ದುರ್ಬಳಕೆ ಮತ್ತು ಕಳ್ಳಸಾಗಣೆ ವಿರುದ್ಧದ ಅಂತರರಾಷ್ಟ್ರೀಯ ದಿನವನ್ನು ಆಚರಿಸಿ ಈ ಸಮಸ್ಯೆಯ ನಿಯಂತ್ರಣ ಮತ್ತು ಪರಿಹಾರದ ಕುರಿತು ನಿವಾರಣೆಯಲ್ಲಿ ಸಮುದಾಯ, ಸಮವಯಸ್ಕರು, ಕುಟುಂಬ, ಸಂಘ ಸಂಸ್ಥೆಗಳವರು ಪ್ರಮುಖ ಪಾತ್ರ ವಹಿಸಬೇಕಾಗಿದೆಎಂದು ಮನವರಿಕೆ ಮಾಡಿತು. ಮಾದಕ ವಸ್ತು ದುರ್ಬಳಕೆ ಒಂದು ಮಾನಸಿಕ, ಸಾಮಾಜಿಕ ಸಮಸ್ಯೆಯಾಗಿದ್ದು ಇಡೀ ಸಮುದಾಯವೇ ಇದರ ನಿವಾರಣೋಪಾಯದಲ್ಲಿ ಪಾಲ್ಗೊಳ್ಳಬೇಕೆಂದು ಸೂಚಿಸಿತು.

ವ್ಯಕ್ತಿ ಒಮ್ಮೆ ಈ ಚಕ್ರವ್ಯೂಹದಲ್ಲಿ ಸಿಲುಕಿಕೊಂಡರೆ ಹೊರಬರುವುದು ಕಷ್ಟಸಾಧ್ಯ. ಆರೋಗ್ಯ ಜೀವನ ನಡೆಸಲು ಮಾದಕ ವಸ್ತುಗಳನ್ನು ತ್ಯಜಿಸಿ ಸುಂದರ ಜೀವನ ನಡೆಸಿ ಎಂಬ ಸಂದೇಶ ಸಾರುತ್ತ ನಾವೆಲ್ಲರೂ ಸಂಘಟಿತರಾಗಿ ಸಮಾಜದಲ್ಲಿ ಜಾಗೃತಿ ಮೂಡಿಸಿದಾಗ ದುಶ್ಚಟಮುಕ್ತ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ. (ಜೂನ್-26 ರಂದು ಅಂತರರಾಷ್ಟೀಯ ಮಾದಕ ವಸ್ತುಗಳ ದುರ್ಬಳಕೆ ವಿರೋಧಿ ದಿನ ತನ್ನಿಮಿತ್ತ ಈ ಲೇಖನ – ಡಾ. ಗೀತಾ ಬಸವರಾಜು,ಉಪನ್ಯಾಸಕರು,ಎ.ವಿ.ಕೆ ಮಹಿಳಾ ಕಾಲೇಜು,ದಾವಣಗೆರೆ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!

Published

on

ಆಗಸ್ಟ್ 2023 ರಿಂದ ಜುಲೈ 2026 ರವರೆಗೆ ₹28,759 ಕೋಟಿ ಸಬ್ಸಿಡಿ ಬಿಡುಗಡೆ; ಪ್ರತಿ ತಿಂಗಳು 200 ಯೂನಿಟ್ ಉಚಿತ ವಿದ್ಯುತ್‌ನಿಂದ ಕೋಟ್ಯಂತರ ಕುಟುಂಬಗಳ ಆರ್ಥಿಕ ಸಬಲೀಕರಣ

ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರ’ ಎಂಬ ಧ್ಯೇಯದೊಂದಿಗೆ ಆರಂಭವಾದ ಈ ಯೋಜನೆ ಇಂದು ಕೋಟ್ಯಂತರ ಕುಟುಂಬಗಳ ಬದುಕಿಗೆ ಬೆಳಕಾಗಿದೆ.

ಹೌದು! 2023ರ ಆಗಸ್ಟ್‌ನಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಪ್ರತಿ ತಿಂಗಳು 200 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಾಸಿಕ ಬಜೆಟ್‌ಗೆ ದೊಡ್ಡ ಆಸರೆಯಾಗಿದೆ ಎಂದೇ ಹೇಳಬಹುದು.

http://Visit : www.suddidina.com

ಗೃಹಜ್ಯೋತಿ ಯೋಜನೆಯ ಸಾಧನೆಯ ಗಿರಿ: 

ಇಂಧನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ರಾಜ್ಯದ್ಯಂತ ಬರೋಬ್ಬರಿ 1.65 ಕೋಟಿ. ಫಲಾನುಭವಿಗಳು ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದರೆ, ಸೇವಾಸಿಂಧು ಪೋರ್ಟಲ್‌ನಲ್ಲಿ ಒಟ್ಟು 1,76,69,368 ಜನರು ನೋಂದಾಯಿಸಿಕೊಂಡಿದ್ದರೆ. ಒಟ್ಟು 2,06,65,451 ಗೃಹಬಳಕೆ ವಿದ್ಯುತ್ ಗ್ರಾಹಕರಿದ್ದಾರೆ. ಅಂದರೆ ಶೇ.85ಕ್ಕಿಂತ ಹೆಚ್ಚು ಗ್ರಾಹಕರು ಈ ಯೋಜನೆಯಡಿ ನೋಂದಾಯಿಸಿಕೊಂಡು ಲಾಭ ಪಡೆಯುತ್ತಿದ್ದಾರೆ.

ಆರ್ಥಿಕವಾಗಿ ನೋಡುವುದಾದರೆ, 2023ರ ಆಗಸ್ಟ್‌ನಿಂದ 2026ರ ಜುಲೈ ವರೆಗೆ, ಕಳೆದ ಮೂರು ವರ್ಷಗಳಲ್ಲಿ ಸರ್ಕಾರವು ಫಲಾನುಭವಿಗಳಿಗೆ ಒಟ್ಟು ₹28,759.54 ಕೋಟಿ ರೂಪಾಯಿ ಸಬ್ಸಿಡಿ ಬಿಡುಗಡೆ ಮಾಡಿದೆ. ಇದು ಸರ್ಕಾರದ ಬದ್ಧತೆ ಮತ್ತು ಜನಪರ ಕಾಳಜಿಗೆ ಹಿಡಿದ ಕನ್ನಡಿಯಾಗಿದೆ.

ಕುಟುಂಬದ ಬಜೆಟ್‌ಗೆ ಆಸರೆ, ಉಜ್ವಲ ಭವಿಷ್ಯಕ್ಕೆ ಬುನಾದಿ:

ಪ್ರತಿ ತಿಂಗಳು 1000 ದಿಂದ 1500 ರೂಪಾಯಿಗಳವರೆಗೆ ವಿದ್ಯುತ್ ಬಿಲ್ ಕಟ್ಟುತ್ತಿದ್ದ ಸಾಮಾನ್ಯ ಕುಟುಂಬಗಳಿಗೆ ಈಗ ಆ ಹಣ ಸಂಪೂರ್ಣವಾಗಿ ಉಳಿತಾಯವಾಗುತ್ತಿದೆ. ಈ ಉಳಿತಾಯದ ಹಣವನ್ನು ಅವರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಇತರ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಗೃಹಿಣಿಯರಿಗೆ ಇದು ಆರ್ಥಿಕವಾಗಿ ದೊಡ್ಡ ನೆರವಾಗಿದೆ.

ಕೇವಲ ಉಚಿತ ವಿದ್ಯುತ್ ನೀಡುವುದಷ್ಟೇ ಅಲ್ಲ, ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದೇ ಈ ಯೋಜನೆಯ ಮುಖ್ಯ ಗುರಿಯಾಗಿದ್ದು, ರಾಜ್ಯದ ಜನರ ಜೀವನಮಟ್ಟ ಸುಧಾರಿಸಿದೆ. ಗೃಹ ಜ್ಯೋತಿ ಯೋಜನೆಯು ಕೇವಲ ಒಂದು ಯೋಜನೆಯಾಗಿ ಉಳಿಯದೆ, ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕುಟುಂಬಗಳನ್ನು ಈ ಯೋಜನೆಯಡಿ ತರಲು ಇಂಧನ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.

Continue Reading

ದಿನದ ಸುದ್ದಿ

ರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!

Published

on

ಕರ್ನಾಟಕದ ವೈಟ್‌ಫೀಲ್ಡ್-ಬಂಗಾರಪೇಟೆ, ಹೊಸೂರು-ಓಮಲೂರು ಮಾರ್ಗ ಸೇರಿ 9 ರಾಜ್ಯಗಳ 1200 ಕಿ.ಮೀ ರೈಲು ಜಾಲ ವಿಸ್ತರಣೆಗೆ ಪ್ರಧಾನಿ ಮೋದಿ ಅಧ್ಯಕ್ಷತೆಯ ಸಂಪುಟ ಸಭೆಯಲ್ಲಿ ಅನುಮೋದನೆ

ಸುದ್ದಿದಿನ, ಹೊಸದಿಲ್ಲಿ: ದೇಶದ ರೈಲ್ವೆ ಮೂಲಸೌಕರ್ಯಕ್ಕೆ ಬೃಹತ್ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳ 20ಕ್ಕೂ ಹೆಚ್ಚು ಜಿಲ್ಲೆಗಳನ್ನು ಸಂಪರ್ಕಿಸುವ 20,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ 8 ಬಹು ಟ್ರ್ಯಾಕಿಂಗ್ (Multi-Tracking) ರೈಲು ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ (ಸೆ.09) ನಡೆದ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಈ ಯೋಜನೆಗಳು ಪಿಎಂ-ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಅಡಿಯಲ್ಲಿ ಅನುಷ್ಠಾನಗೊಳ್ಳಲಿವೆ.

http://Visit : www.suddidina.com

ಈ ಯೋಜನೆಗಳಿಂದ ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವು ಬರೋಬ್ಬರಿ 1,200 ಕಿಲೋಮೀಟರ್‌ಗಳಷ್ಟು ವಿಸ್ತರಣೆಯಾಗಲಿದೆ. ಇದರಿಂದ 6,900ಕ್ಕೂ ಹೆಚ್ಚು ಗ್ರಾಮಗಳಿಗೆ ಸುಧಾರಿತ ಸಂಪರ್ಕ ಸಿಗಲಿದ್ದು, ರೈಲುಗಳ ಕಾರ್ಯಾಚರಣೆಯ ದಕ್ಷತೆ ಮತ್ತು ಸೇವಾ ವಿಶ್ವಾಸಾರ್ಹತೆ ಗಣನೀಯವಾಗಿ ಹೆಚ್ಚಾಗಲಿದೆ.

ಯಾವೆಲ್ಲ ಯೋಜನೆಗಳಿಗೆ ಅನುಮೋದನೆ?
ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ಪ್ರಮುಖ ಯೋಜನೆಗಳು ಹೀಗಿವೆ:

1. ಅರಾಕೋಣಂ-ರೇಣಿಗುಂಟಾ ಮತ್ತು ವೈಟ್‌ಫೀಲ್ಡ್-ಬಂಗಾರಪೇಟೆ ನಡುವೆ 3 ಮತ್ತು 4ನೇ ಮಾರ್ಗ: ಇದು ಕರ್ನಾಟಕ ಮತ್ತು ತಮಿಳುನಾಡು, ಆಂಧ್ರಪ್ರದೇಶಕ್ಕೆ ಅತ್ಯಂತ ಮಹತ್ವದ ಯೋಜನೆಯಾಗಿದೆ.

2. ಸಿಕಂದರಾಬಾದ್-ಕಾಜಿಪೇಟೆ ನಡುವೆ ಮಲ್ಟಿ ಟ್ರ್ಯಾಕಿಂಗ್: ತೆಲಂಗಾಣದ ಪ್ರಮುಖ ಮಾರ್ಗದ ದಟ್ಟಣೆ ಕಡಿಮೆ ಮಾಡಲಿದೆ.

3. ಹೊಸೂರು-ಓಮಲೂರು, ಸೇಲಂ-ಕರೂರ್-ದಿಂಡಿಗಲ್ ಜೋಡಿ ಹಳಿ ಯೋಜನೆ: ತಮಿಳುನಾಡು ಮತ್ತು ಕರ್ನಾಟಕದ ಗಡಿ ಭಾಗದ ಸಂಪರ್ಕವನ್ನು ಬಲಪಡಿಸಲಿದೆ.

4. ಖರಗ್‌ಪುರ-ಝಾರ್ಸುಗುಡ ಮತ್ತು ಕತ್ನಿ-ಪೆಂದ್ರ ರಸ್ತೆ ನಡುವೆ 4ನೇ ಮಾರ್ಗ ಮತ್ತು ಬಿಲಾಸ್‌ಪುರ್-ಪೆಂದ್ರ ರಸ್ತೆ ನಡುವೆ 3ನೇ ಮಾರ್ಗ: ಛತ್ತೀಸ್‌ಗಢ, ಒಡಿಶಾ, ಮಧ್ಯಪ್ರದೇಶದ ಕಲ್ಲಿದ್ದಲು ಮತ್ತು ಖನಿಜ ಸಾಗಣೆಗೆ ಸಹಕಾರಿಯಾಗಲಿದೆ.

ಈ ಎಲ್ಲಾ ಯೋಜನೆಗಳು ಕರ್ನಾಟಕ, ಪಶ್ಚಿಮ ಬಂಗಾಳ, ಜಾರ್ಖಂಡ್, ಒಡಿಶಾ, ಮಧ್ಯಪ್ರದೇಶ, ಛತ್ತೀಸ್‌ಗಢ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳನ್ನು ಒಳಗೊಳ್ಳಲಿವೆ.

ಕರ್ನಾಟಕಕ್ಕೆ ಏನು ಲಾಭ?

ಈ ಬಹು ಟ್ರ್ಯಾಕಿಂಗ್ ಯೋಜನೆಗಳಿಂದ ಕರ್ನಾಟಕಕ್ಕೆ ಹಲವು ರೀತಿಯಲ್ಲಿ ಅನುಕೂಲವಾಗಲಿದೆ.ಕೈಗಾರಿಕೆಗಳಿಗೆ ಅನುಕೂಲ: ರಾಜ್ಯದ ಉಕ್ಕು ಕಾರ್ಖಾನೆಗಳಿಗೆ ಕಚ್ಚಾ ವಸ್ತುಗಳಾದ ಖನಿಜ ಸಾಗಿಸಲು ವಾಡಿ-ತಂದೂರು, ಮೋಟುಮಾರಿ-ವಿಷ್ಣುಪುರಂ ಮಾರ್ಗದಲ್ಲಿನ ಅಭಿವೃದ್ಧಿಯಿಂದ ಹೆಚ್ಚಿನ ಅನುಕೂಲವಾಗಲಿದೆ. ಹೂಟಗಿ, ಕೂಡಗಿ, ಯಾದ್ಲಾಪುರ, ಬಳ್ಳಾರಿ ಮತ್ತು ಯರಮರಸ್‌ನಲ್ಲಿರುವ ಉಷ್ಣ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಸಾಗಣೆ ಇನ್ನಷ್ಟು ವೇಗ ಮತ್ತು ಸುಲಭವಾಗಲಿದೆ.

ಬೆಂಗಳೂರು-ಚೆನ್ನೈ ಮಾರ್ಗದಲ್ಲಿ ದಟ್ಟಣೆ ಕಡಿಮೆ: ವೈಟ್‌ಫೀಲ್ಡ್-ಬಂಗಾರಪೇಟೆ ನಡುವಿನ 47 ಕಿ.ಮೀ ಉದ್ದದ 3 ಮತ್ತು 4ನೇ ಮಾರ್ಗವು ಅತ್ಯಂತ ದಟ್ಟಣೆಯ ಮನ್ಮಾಡ-ಹುಬ್ಬಳ್ಳಿ-ಬೆಂಗಳೂರು-ಜೋಳರಪೇಟೆ ವಿಭಾಗದಡಿ ಬರುತ್ತದೆ. ಇದು ಬೆಂಗಳೂರು-ಚೆನ್ನೈ ನಡುವಿನ ರೈಲು ಸಂಚಾರ ದಟ್ಟಣೆಯನ್ನು ಗಣನೀಯವಾಗಿ ಕಡಿಮೆ ಮಾಡಿ, ಹೆಚ್ಚಿನ ರೈಲುಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಿದೆ.

ಪ್ರವಾಸೋದ್ಯಮ ಮತ್ತು ಸರಕು ಸಾಗಣೆಗೆ ಉತ್ತೇಜನ: ಹೊಸೂರು-ಓಮಲೂರು ಜೋಡಿ ಹಳಿ ಮಾರ್ಗದಿಂದ ಕನ್ಯಾಕುಮಾರಿ, ರಾಮೇಶ್ವರಂನಂತಹ ಪುಣ್ಯಕ್ಷೇತ್ರಗಳಿಗೆ ತೆರಳುವ ಲಕ್ಷಾಂತರ ಯಾತ್ರಿಕರಿಗೆ ಅನುಕೂಲವಾಗಲಿದೆ. ಜೊತೆಗೆ ಬೆಂಗಳೂರು ಸುತ್ತಮುತ್ತಲಿನ ಕೈಗಾರಿಕಾ ಪ್ರದೇಶಗಳಿಗೆ ಸರಕು ಸಾಗಣೆಯೂ ವೇಗವಾಗಲಿದೆ.ಒಟ್ಟಾರೆಯಾಗಿ, ಈ ಯೋಜನೆಗಳು ಕೇವಲ ರೈಲು ಮಾರ್ಗಗಳ ವಿಸ್ತರಣೆಯಷ್ಟೇ ಅಲ್ಲ, ದೇಶದ ಆರ್ಥಿಕ ಬೆಳವಣಿಗೆ, ಉದ್ಯೋಗ ಸೃಷ್ಟಿ ಮತ್ತು ಪ್ರಾದೇಶಿಕ ಸಂಪರ್ಕಕ್ಕೆ ಹೊಸ ಶಕ್ತಿ ತುಂಬಲಿವೆ ಎಂದು ಕೇಂದ್ರ ಸರ್ಕಾರ ಹೇಳಿದೆ.

Continue Reading

ದಿನದ ಸುದ್ದಿ

ಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು

Published

on

ಸೆ.10 ರಂದು ವಿಧಾನಸೌಧದಲ್ಲಿ ಶತದಿನೋತ್ಸವ ಸಮಾರಂಭ; ಮಾಜಿ ಸಿಎಂ ಸಿದ್ದರಾಮಯ್ಯರಿಂದ ಉದ್ಘಾಟನೆ, ಗ್ಯಾರಂಟಿ ಫಲಾನುಭವಿಗಳೊಂದಿಗೆ ಸಿಎಂ ಡಿ.ಕೆ. ಶಿವಕುಮಾರ್ ಸಂವಾದ

ಸುದ್ದಿದಿನ, ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತದ 100 ದಿನಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಶತಕದ ಸಂಭ್ರಮವನ್ನು ಆಚರಿಸಲು ರಾಜ್ಯ ಸರ್ಕಾರವು `ದೃಢ ಕರ್ನಾಟಕದ ಸಂಕಲ್ಪ – ಶತಕದ ಪಥ, ಪ್ರಗತಿಯ ರಥ’ ಎಂಬ ವಿಶೇಷ ಮತ್ತು ಅದ್ಧೂರಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

 

ಈ ಕಾರ್ಯಕ್ರಮವು ನಾಳೆ ಅಂದರೆ 2026ನೇ ಸೆಪ್ಟೆಂಬರ್ 10ರ ಗುರುವಾರ ಬೆಳಿಗ್ಗೆ 10 ಗಂಟೆಗೆ ವಿಧಾನಸೌಧದ ಪ್ರತಿಷ್ಠಿತ ಬ್ಯಾಂಕ್ವೇಟ್ ಸಭಾಂಗಣದಲ್ಲಿ ನಡೆಯಲಿದೆ. ಸರ್ಕಾರದ ನೂರು ದಿನಗಳ ಸಾಧನೆ, ಜನಪರ ಯೋಜನೆಗಳ ಅನುಷ್ಠಾನ ಮತ್ತು ಮುಂದಿನ ಅಭಿವೃದ್ಧಿಯ ದೂರದೃಷ್ಟಿಯನ್ನು ಜನರ ಮುಂದಿಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.

ಗಣ್ಯರ ದಂಡು, ಸಿದ್ದರಾಮಯ್ಯರಿಂದ ಉದ್ಘಾಟನೆ:

ಈ ಶತದಿನೋತ್ಸವ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಇದು ಕಾಂಗ್ರೆಸ್ ಪಕ್ಷದಲ್ಲಿನ ಒಗ್ಗಟ್ಟು ಮತ್ತು ನಾಯಕತ್ವದ ನಿರಂತರತೆಯನ್ನು ಸಂಕೇತಿಸುತ್ತದೆ.

ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ಜಿ. ಪರಮೇಶ್ವರ್, ರಾಜ್ಯ ಸಂಪುಟದ ಎಲ್ಲಾ ಸಚಿವರು, ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ರಾಜ್ಯದ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರು ಭಾಗವಹಿಸಲಿದ್ದಾರೆ. ಇದರ ಜೊತೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ.

http://Visit : www.suddidina.com

ಫಲಾನುಭವಿಗಳೊಂದಿಗೆ ನೇರ ಸಂವಾದ – ಕಾರ್ಯಕ್ರಮದ ಪ್ರಮುಖ ಆಕರ್ಷಣೆ

ಈ ಕಾರ್ಯಕ್ರಮದ ಅತ್ಯಂತ ಪ್ರಮುಖ ಆಕರ್ಷಣೆ ಎಂದರೆ ಮುಖ್ಯಮಂತ್ರಿಗಳೊಂದಿಗೆ ಫಲಾನುಭವಿಗಳ ನೇರ ಸಂವಾದ. ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿ, ಯುವನಿಧಿ ಮತ್ತು ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳು ಈ ವೇದಿಕೆಯಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ.

ಕೇವಲ ಗ್ಯಾರಂಟಿ ಯೋಜನೆಗಳಷ್ಟೇ ಅಲ್ಲದೆ, ಸಮಾಜದ ವಿವಿಧ ವರ್ಗಗಳ ಶ್ರಮಿಕರು ಮತ್ತು ಕಾರ್ಮಿಕರು ಕೂಡ ಈ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ. ಕೃಷಿಕರು, ಆಟೋ ಚಾಲಕರು, ಹಮಾಲಿಗಳು, ಗಿಗ್ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಪೌರಕಾರ್ಮಿಕರು ತಮ್ಮ ಬದುಕಿನಲ್ಲಿ ಸರ್ಕಾರದ ಯೋಜನೆಗಳಿಂದ ಆಗಿರುವ ಬದಲಾವಣೆಗಳ ಕುರಿತು ಮುಖ್ಯಮಂತ್ರಿಗಳೊಂದಿಗೆ ಮುಕ್ತವಾಗಿ ಮಾತನಾಡಲಿದ್ದಾರೆ.

100 ದಿನಗಳಲ್ಲಿ ಸರ್ಕಾರವು ಕೈಗೊಂಡಿರುವ ಜನಪರ ನಿರ್ಧಾರಗಳು, ಅಭಿವೃದ್ಧಿ ಕಾಮಗಾರಿಗಳು ಮತ್ತು ಆಡಳಿತದಲ್ಲಿ ತಂದಿರುವ ಪಾರದರ್ಶಕತೆಯ ಬಗ್ಗೆ ಈ ವೇದಿಕೆಯಲ್ಲಿ ಚರ್ಚೆ ನಡೆಯಲಿದೆ. ಸರ್ಕಾರದ ಸಾಧನೆಗಳನ್ನು ಕೇವಲ ಭಾಷಣದ ಮೂಲಕವಲ್ಲ, ಬದಲಾಗಿ ಫಲಾನುಭವಿಗಳ ಬಾಯಿಂದಲೇ ಜನರಿಗೆ ತಲುಪಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಮೂಲಗಳು ತಿಳಿಸಿವೆ.

ಮುಂದಿನ ದಿನಗಳಲ್ಲಿ ದೃಢ ಕರ್ನಾಟಕ’ ನಿರ್ಮಾಣದ ನಿಟ್ಟಿನಲ್ಲಿ ಸರ್ಕಾರದ ಮುಂದಿನ 5 ವರ್ಷಗಳ ಕಾರ್ಯಯೋಜನೆ ಮತ್ತು ರೂಪುರೇಷೆಗಳನ್ನು ಈ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಕಟಿಸಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

Continue Reading

Trending