ದಿನದ ಸುದ್ದಿ
ಮಾದಕ ವಸ್ತುಗಳಿಗೆ ಕಡಿವಾಣ ; ಸ್ವಾಸ್ಥ್ಯ ಬದುಕಿಗೆ ಸೋಪಾನ
- ಡಾ.ಗೀತಾ ಬಸವರಾಜು, ಉಪನ್ಯಾಸಕರು, ಎ.ವಿ.ಕೆ ಮಹಿಳಾ ಕಾಲೇಜು, ದಾವಣಗೆರೆ
ಜಗತ್ತಿನಲ್ಲಿರುವ 84 ಕೋಟಿ ಜೀವರಾಶಿಗಳಲ್ಲಿ ಮಾನವ ಶ್ರೇಷ್ಟ ಪ್ರಾಣಿ. ಏಕೆಂದರೆ ಮಾತನಾಡುವ, ಆಲೋಚಿಸುವ, ಭಾವನೆಗಳನ್ನು ಅಭಿವ್ಯಕ್ತಿಸುವ ವಿಶೇಷವಾದ ಸಾಮರ್ಥ್ಯ ಅವನಿಗಿದೆ.
ಈ ಶಕ್ತಿಯ ಮೂಲಕ ತುಂಬಾ ಶ್ರೇಷ್ಟನಾಗಬೇಕಾದ ಮಾನವ ನಗರೀಕರಣ, ಕೈಗಾರಿಕೀಕರಣ, ಪಾಶ್ಚಾತ್ಯೀಕರಣದ ಪ್ರಭಾವದಿಂದ ಪ್ರೇರಿತನಾಗಿ ಮೂಲ ಸಂಸ್ಕೃತಿಯನ್ನು ಮರೆತು ಮೃಗೀಯ ವರ್ತನೆಗೆ ದಾಸನಾಗಿದ್ದಾನೆ. ಪ್ರಸ್ತುತ ವೈಜ್ಞಾನಿಕವಾಗಿ, ತಾಂತ್ರಿಕವಾಗಿ ಎಷ್ಟೇ ಮುಂದುವರೆದಿದ್ದರೂ, 20ನೇ ಶತಮಾನದಿಂದೀಚೆಗೆ ಜಗತ್ತನ್ನೇ ತಲ್ಲಣಗೊಳಿಸುವ ಸಾಮಾಜಿಕ ಪಿಡುಗುಗಳಾದ ಬಡತನ, ಭಿಕ್ಷಾಟನೆ, ನಿರುದ್ಯೋಗ, ವರದಕ್ಷಿಣೆ, ಅಪರಾಧ ಮಾದಕ ವಸ್ತು ವ್ಯಸನವು ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುತ್ತಿವೆ.
ಈ ಸಮಸ್ಯೆಗಳನ್ನು ಪರಿಹರಿಸಬೇಕಾಧ ಯುವಜನತೆ ಇಂತಹ ದುಶ್ಚಟಗಳ ಸೆಲೆಯಲ್ಲಿ ಸಿಕ್ಕು ತಮ್ಮ ಅಮೂಲ್ಯ ಬದುಕನ್ನು ಹಾಳು ಮಾಡಿಕೊಳ್ಳುತ್ತಿರುವುದು ಆತಂಕಕಾರಿ.
ಯುವಶಕ್ತಿಯೇ ದೇಶದ ಶಕ್ತಿಯಾಗಿದ್ದು ಭವ್ಯಭಾರತ ನಿರ್ಮಾಣದಲ್ಲಿ ತೊಡಗಿಸಿಕೊಳ್ಳಬೇಕಾದ ಯುವಜನತೆ ಮಾದಕ ವಸ್ತುಗಳ ದುಶ್ಚಟಕ್ಕೆ ಒಳಗಾಗಿ ಮಾನವೀಯ ಮೌಲ್ಯಗಳನ್ನು ಕಳೆದುಕೊಂಡು ಅಂಧಕಾರದಲ್ಲಿ ಜೀವನ ನಡೆಸುತ್ತ ಚಿಕ್ಕ ವಯಸ್ಸಿನಲ್ಲಿಯೇ ಮರಣ ಹೊಂದುತ್ತಿರುವುದು ಆಘಾತದ ವಿಷಯ.
ಜೋಸೆಫ್ ಜ್ಯೂಲಿಯನ್ ರವರ ಪ್ರಕಾರ ಮಾದಕ ವಸ್ತುಗಳೆಂದರೆ ಯಾವುದೇ ರಾಸಾಯನಿಕ ವಸ್ತುವಾಗಿದ್ದು ಅದರ ಸೇವನೆಯಿಂದ ದೈಹಿಕ ಕಾರ್ಯ, ಮನಸ್ಥಿತಿ, ಗ್ರಹಣ ಶಕ್ತಿಯ ಮೇಲೆ ಪರಿಣಾಮ ಬೀರುತ್ತದೆ. ಇದನ್ನು ಪದೇ ಪದೇ ಬಳಸುವುದರಿಂದ ವ್ಯಕ್ತಿ ಮಾದಕ ವಸ್ತು ವ್ಯಸನಿಯಾಗುತ್ತಾನೆ. ಮಾದಕ ವಸ್ತುವು ಮನಸ್ಸಿಗೆ ಗೊಂದಲವನ್ನು ತರುವ ಪದಾರ್ಥವಾಗಿದ್ದು ಅಮಲು ರೋಗವಾಗಿದೆ. ಭಾರತದ ನಗರ ಪ್ರದೇಶಗಳಲ್ಲಷ್ಟೇ ಅಲ್ಲದೆ ಹಳ್ಳಿ ಹಳ್ಳಿಗಳಲ್ಲಿಯೂ ಇದರ ಬಳಕೆ ಕಂಡುಬರುತ್ತದೆ. ಶ್ರೀಮಂತರು, ಮಧ್ಯಮ ವರ್ಗದವರು, ವಿದ್ಯಾವಂತರು, ಯುವಕರು, ಮಹಿಳೆಯರು ಎಂಬ ಭೇದವಿಲ್ಲದೆ ದುಶ್ಚಟಗಳಿಗೆ ಬಲಿಯಾಗಿ ತಮ್ಮ ಆರೋಗ್ಯವನ್ನು ಕಳೆದುಕೊಳ್ಳುತ್ತಿದ್ದಾರೆ.
ವಿಶ್ವ ಆರೋಗ್ಯ ಸಂಸ್ಥೆಯವರು ನಡೆಸಿದ ಸಮೀಕ್ಷೆಯ ಪ್ರಕಾರ ಭಾರತದ ವಿದ್ಯಾರ್ಥಿಗಳಲ್ಲಿ ಶೇ 10 ರಷ್ಟು ಒಂದಿಲ್ಲೊAದು ದುಶ್ಚಟಕ್ಕೆ ಒಳಗಾಗಿದ್ದು ಅದರಲ್ಲಿ 14 ರಿಂದ 22 ರ ವಯೋಮಾನದವರು ಹೆಚ್ಚಿದ್ದಾರೆ. ಸ್ವಾತಂತ್ಯç ಪೂರ್ವದಲ್ಲಿ ಶೇ 2 ರಷ್ಟಿದ್ದ ವ್ಯಸನಿಗಳು ಪ್ರಸ್ತುತ ಶೇ 30 ಕ್ಕಿಂತ ಹೆಚ್ಚಿದ್ದಾರೆ. ಜಗತ್ತಿನ ಸುಮಾರು 20 ಕೋಟಿಯಷ್ಟು ಇರುವ ಮಾದಕ ವ್ಯಸನಿಗಳಲ್ಲಿ ಭಾರತದಲ್ಲಿ ಶೇ 7.5 ಕೋಟಿ ವ್ಯಸನಿಗಳಿದ್ದಾರೆಂದು ಅಂದಾಜಿಸಲಾಗಿದೆ.
ನಶೆಯ ಅಲೆ ಸಾವಿನ ಬಲೆಯಾಗುತ್ತಿದ್ದರೂ ಕೂಡ ಈ ದೇಶದಲ್ಲಿ ಊಟವಿಲ್ಲದೆ ಸಾಯುವವರ ಸಂಖ್ಯೆಗಿAತಲೂ ಚಟವನ್ನು ಬೆಳೆಸಿಕೊಂಡು ಸಾಯುವವರು ಹೆಚ್ಚಾಗಿದ್ದಾರೆ.
ಮಾದಕ ವಸ್ತು ಬಳಸುವ ಆತಂಕದ ರಾಷ್ಟçಗಳಲ್ಲಿ ಭಾರತ ಪ್ರಥಮ ಸ್ಥಾನದಲ್ಲಿದೆ. ಅಮಲು ಪದಾರ್ಥಗಳಿಗೆ ಬಲಿಯಾಗುತ್ತಿರುವವರಲ್ಲಿ ವಿದ್ಯಾರ್ಥಿಗಳನ್ನೂ ಒಳಗೊಂಡAತೆ ಯುವಜನತೆ ಹೆಚ್ಚಾಗಿದ್ದು ಇದು ದೇಶದ ಭವಿಷ್ಯಕ್ಕೆ ಮಾರಕವಾಗಿದೆ.
ದುಶ್ಚಟಗಳ ಆರಂಭಕ್ಕೆ ಕಾರಣಗಳು
• ಕ್ಷಣಕಾಲ ಸುಖ ಅನಂತಕಾಲ ದು:ಖಕ್ಕೆ ಕಾರಣ ಎನ್ನುವುದು ಗೊತ್ತಿದ್ದೂ ಅಫೀಮು, ಹೆರಾಯಿನ್, ಬೀಡಿ, ಸಿಗರೇಟು, ಮದ್ಯಪಾನ ಮುಂತಾದ ದುಶ್ಚಟಗಳಿಗೆ ವಿದ್ಯಾವಂತ ಯುವಕರೇ ಬಲಿಯಾಗುತ್ತಿದ್ದಾರೆ.
• ಉಲ್ಲಾಸಕ್ಕಾಗಿ, ಫ್ಯಾಷನ್ಗಾಗಿ, ದುರ್ಬಲ ಮನಸ್ಸು, ಏಕಾಂಗಿತನ, ಒತ್ತಡ ನಿವಾರಣೆ ಮಾಡಿಕೊಳ್ಳಲು
• ನೋವು, ದು:ಖಕ್ಕೆ ಪರಿಹಾರವೆಂಬ ಭ್ರಮೆಗೆ ಒಳಗಾಗಿ ತನಗೆ ಅರಿವಿಲ್ಲದಂತೆ ದೊಡ್ಡ ಕಂದಕಕ್ಕೆ ಬಿದ್ದು ನರಳಾಡುವಂತ ಸಂದರ್ಭ ತಂದುಕೊಂಡು ಮಾದಕ ವಸ್ತುಗಳ ಮಾಯಾಜಾಲಕ್ಕೆ ಒಳಗಾಗುತ್ತಿದ್ದಾರೆ. ತೆರಣಿಯ ಹುಳು ತಾನು ಸುತ್ತಿದ ಬಲೆಯಲ್ಲಿ ತಾನೇ ಬಿದ್ದು ಹೊರಳಾಡುವಂತೆ ಅವರ ಪರಿಸ್ಥಿತಿಯಾಗಿದೆ.
ದುಶ್ಚಟಗಳಿಂದಾಗುವ ಪರಿಣಾಮಗಳು
• ದೇಹ ಮತ್ತು ಮನಸ್ಸಿನ ಸಮತೋಲನ ಕಳೆದುಕೊಳ್ಳುವುದು.
• ವ್ಯಕ್ತಿ ತನ್ನನ್ನು ದಹಿಸಿಕೊಳ್ಳುವುದರ ಜೊತೆಗೆ ಕುಟುಂಬದ ನೆಮ್ಮದಿಗಿ ಭಂಗ ತರುತ್ತಾನೆ.
• ಕುಟುಂಬ, ಸಮಾಜದಿಂದ ನಿಂದನೆಗೆ ಒಳಗಾಗುವನು.
• ಜ್ಞಾನೇಂದ್ರಿಯಗಳ ಮೇಲೆ ಹತೋಟಿ ಕಳೆದುಕೊಳ್ಳುವನು
• ಸಮಾಜಬಾಹಿರ ಚಟುವಟಿಕೆಗಳಾದ ಕಳ್ಳತನ, ಅತ್ಯಾಚಾರ, ಕೊಲೆ ಇಂತಹ ದುಷ್ಕೃತ್ಯಗಳನ್ನು ಮಾಡುವನು.
• ದಾಂಪತ್ಯದಲ್ಲಿ ವಿರಸವುಂಟಾಗಿ ವಿಚ್ಚೇದನಗಳಾಗುವ ಸಾಧ್ಯತೆ.
• ರಸ್ತೆ ಅಪಘಾತಗಳಲ್ಲಿ ಶೇ 1/3 ರಷ್ಟು ಮದ್ಯಪಾನ ಮತ್ತು ಮಾದಕ ವಸ್ತು ಸೇವನೆಯಿಂದಾಗುತ್ತದೆ. ಈ ಹಿನ್ನೆಲೆಯಲ್ಲಿ ಮಹಾತ್ಮ ಗಾಂಧೀಜಿಯವರು ಬೆಂಕಿ ದೇಹವನ್ನು ನಾಶ ಮಾಡಿದರೆ ಕುಡಿತ ದೇಹ ಮತ್ತು ಆತ್ಮಗಳೆರಡನ್ನೂ ನಾಶ ಮಾಡುತ್ತದೆ ಎಂದಿದ್ದಾರೆ.
ಪರಿಹಾರ ಕ್ರಮಗಳು
• ಮಾದಕ ವಸ್ತುಗಳ ಹಿಡಿತಕ್ಕೆ ಸಿಲುಕದೆ ಅದರಿಂದ ದೂರವಿರುವುದು.
• ಮಾದಕ ವಸ್ತು ಸೇವಿಸುವುದಿಲ್ಲವೆಂದು ಪ್ರತಿಜ್ಞೆ ಮಾಡುವುದು.
• ಸಹೋದ್ಯೋಗಿ, ಸ್ನೇಹಿತರಿಗೆ ತಿಳುವಳಿಕೆ ನೀಡುವುದು.
• 18 ವರ್ಷ ವಯಸ್ಸಿನವರೆಗೂ ಪೋಷಕರು ಮಕ್ಕಳ ಬಗ್ಗೆ ಗಮನ ನೀಡಿ ಮಾರ್ಗದರ್ಶನ ಮಾಡುವುದು.
• ಶಾಲೆ ಕಾಲೇಜುಗಳಲ್ಲಿ ಶಿಕ್ಷಕರು ಮಕ್ಳಳಲ್ಲಿ ಜೀವನ ಕೌಶಲಗಳನ್ನು ಬೆಳೆಸುವ ರಾಯಭಾರಿಗಳಾಗಿ ಕಾರ್ಯನಿರ್ವಹಿಸುವುದು.
• ವಿದ್ಯಾರ್ಥಿಗಳನ್ನು ಸಹಪಠ್ಯ ಚಟುವಟಿಕೆಗಳಲ್ಲಿ ತೊಡಗಿಸಿ ಆರೋಗ್ಯಕರವಾದ ಹವ್ಯಾಸಗಳನ್ನು ಬೆಳೆಸುವುದು.
ಭಾರತ ಸರ್ಕಾರವು 1951ರಲ್ಲಿ ಅಪಾಯಕಾರಿ ವಸ್ತುಗಳ ಕಾಯ್ದೆಯನ್ನು ಜಾರಿಗೆ ತಂದಿತು. ಈ ಕಾಯ್ದೆ ಮಾದಕ ವಸ್ತು ತಯಾರಿಕೆ, ಸಾಗಾಣಿಕೆ, ಮಾರಾಟ ಮತ್ತು ಬಳಕೆಯ ಮೇಲೆ ನಿರ್ಬಂಧ ಹೇರಿದೆ. 1985 ರಲ್ಲಿ ಡ್ರಗ್ಸ್ ಆಕ್ಟ್ ಜಾರಿಗೊಳಿಸಿದೆ. ಈ ಕಾಯ್ದೆ ಮಾದಕ ವಸ್ತುಗಳ ಕಳ್ಳ ವ್ಯಾಪಾರದಲ್ಲಿ ತೊಡಗಿದ ಅಪರಾಧಿಗಳಿಗೆ ಕನಿಷ್ಠ 10 ರಿಂದ 20 ವರ್ಷ ಕಠಿಣ ಶಿಕ್ಷೆ, 1 ರಿಂದ 2 ಲಕ್ಷದವರೆಗೆ ದಂಡ ಘೋಷಿಸಿದೆ.
ಡಿಸೆಂಬರ್-7 1987 ರ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮಾದಕ ವಸ್ತುಗಳ ದುರ್ಬಳಕೆಯನ್ನು ತಡೆಗಟ್ಟುವ ನಿಯಮಾವಳಿಗಳ ಅಂಗೀಕಾರವನ್ನು ಹಲವಾರು ರಾಷ್ಟçಗಳು ಒಪ್ಪಿಕೊಂಡು ವಿಶ್ವದಾದ್ಯಂತ ಮಾದಕ ವಸ್ತುಗಳ ದುರ್ಬಳಕೆ ನಿಯಂತ್ರಿಸುವ ತೀರ್ಮಾನವನ್ನು ಮಾಡಿದವು.
ಜೂನ್-26 ವಿಶ್ವಸಂಸ್ಥೆಯು ಮಾದಕ ವಸ್ತು ದುರ್ಬಳಕೆ ಮತ್ತು ಕಳ್ಳಸಾಗಣೆ ವಿರುದ್ಧದ ಅಂತರರಾಷ್ಟ್ರೀಯ ದಿನವನ್ನು ಆಚರಿಸಿ ಈ ಸಮಸ್ಯೆಯ ನಿಯಂತ್ರಣ ಮತ್ತು ಪರಿಹಾರದ ಕುರಿತು ನಿವಾರಣೆಯಲ್ಲಿ ಸಮುದಾಯ, ಸಮವಯಸ್ಕರು, ಕುಟುಂಬ, ಸಂಘ ಸಂಸ್ಥೆಗಳವರು ಪ್ರಮುಖ ಪಾತ್ರ ವಹಿಸಬೇಕಾಗಿದೆಎಂದು ಮನವರಿಕೆ ಮಾಡಿತು. ಮಾದಕ ವಸ್ತು ದುರ್ಬಳಕೆ ಒಂದು ಮಾನಸಿಕ, ಸಾಮಾಜಿಕ ಸಮಸ್ಯೆಯಾಗಿದ್ದು ಇಡೀ ಸಮುದಾಯವೇ ಇದರ ನಿವಾರಣೋಪಾಯದಲ್ಲಿ ಪಾಲ್ಗೊಳ್ಳಬೇಕೆಂದು ಸೂಚಿಸಿತು.
ವ್ಯಕ್ತಿ ಒಮ್ಮೆ ಈ ಚಕ್ರವ್ಯೂಹದಲ್ಲಿ ಸಿಲುಕಿಕೊಂಡರೆ ಹೊರಬರುವುದು ಕಷ್ಟಸಾಧ್ಯ. ಆರೋಗ್ಯ ಜೀವನ ನಡೆಸಲು ಮಾದಕ ವಸ್ತುಗಳನ್ನು ತ್ಯಜಿಸಿ ಸುಂದರ ಜೀವನ ನಡೆಸಿ ಎಂಬ ಸಂದೇಶ ಸಾರುತ್ತ ನಾವೆಲ್ಲರೂ ಸಂಘಟಿತರಾಗಿ ಸಮಾಜದಲ್ಲಿ ಜಾಗೃತಿ ಮೂಡಿಸಿದಾಗ ದುಶ್ಚಟಮುಕ್ತ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ. (ಜೂನ್-26 ರಂದು ಅಂತರರಾಷ್ಟೀಯ ಮಾದಕ ವಸ್ತುಗಳ ದುರ್ಬಳಕೆ ವಿರೋಧಿ ದಿನ ತನ್ನಿಮಿತ್ತ ಈ ಲೇಖನ – ಡಾ. ಗೀತಾ ಬಸವರಾಜು,ಉಪನ್ಯಾಸಕರು,ಎ.ವಿ.ಕೆ ಮಹಿಳಾ ಕಾಲೇಜು,ದಾವಣಗೆರೆ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಚಿತ್ರದುರ್ಗ | ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಡಿ.ಡಿ ಬಿ.ಮಲ್ಲಿಕಾರ್ಜುನ, ಕ್ರೈಸ್ ಇ.ಡಿ ಬಿ.ಶಿವಸ್ವಾಮಿ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ಚಿತ್ರದುರ್ಗ: ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ವಸತಿ ಶಾಲೆಗಳಿಗೆ (ಕ್ರೈಸ್) ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ಸರಬರಾಜು ಮಾಡದೆ ವಂಚಿಸುತ್ತಿರುವ ಶ್ರೀ ಶಿರಡಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ ಚಿತ್ರದುರ್ಗ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಬಿ. ಮಲ್ಲಿಕಾರ್ಜುನ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಇದರ ಕಾರ್ಯನಿರ್ವಾಹಕ ನಿರ್ದೇಶಕರಾದ ಬಿ.ಶಿವಸ್ವಾಮಿ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ವಸತಿ ಶಾಲೆಗಳಿಗೆ ಅಧಿಕೃತ ಟೆಂಡರುದಾರರಾದ ಶ್ರೀ ಶಿರಡಿ ಸಾಯಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರು ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ವಿತರಣೆ ಮಾಡದೆ ಇರುವ ಅಧಿಕೃತ ಮಾಹಿತಿ ತಿಳಿದು, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಚಿತ್ರದುರ್ಗ ಇವುಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳ ಪ್ರಾಂಶುಪಾಲರುಗಳಿAದ ಮಾಹಿತಿಹಕ್ಕು ಅಡಿಯಲ್ಲಿ ಪಡೆದ ದೃಢೀಕೃತ ದಾಖಲೆಗಳನ್ನು ಪರಿಶೀಲನೆ ಮಾಡಿದಾಗ ಆಹಾರ ಸಾಮಾಗ್ರಿ ಸರಬರಾಜಿನಲ್ಲಿ ಹಲವಾರು ಲೋಪದೋಷಗಳು ಕಂಡು ಬಂದಿರುತ್ತವೆ.
ಆದ ಕಾರಣ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ನಾವು ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಪ್ರತ್ಯುತ್ತರವನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ಇರುವ ಕಾರಣ ದಿನಾಂಕ: 21-04-2026 ರಂದು ಜ್ಞಾಪನವನ್ನು ನೀಡಲಾಗಿತ್ತು. ಆದರೆ ಜ್ಞಾಪನ ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಚಿತ್ರದುರ್ಗ ದೂರು ಅರ್ಜಿಗೆ ಸಂಬAಧಿಸಿದAತೆ ತನಿಖಾ ವರದಿಯನ್ನಾಗಲಿ ಅಥವಾ ಪ್ರತ್ಯುತ್ತರವನ್ನಾಗಲಿ ನೀಡಿರುವುದಿಲ್ಲ.
ಈ ಬಗ್ಗೆ ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು ಇವರಿಗೆ ದೂರು ನೀಡಲಾಗಿತ್ತು. ಆದರೆ ಇವರು ಕೂಡ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಾಳೆ ʼನಿರಾಕಾರ ವಿಶ್ವಕರ್ಮʼ ಕೃತಿ ಬಿಡುಗಡೆ
ಸುದ್ದಿದಿನ,ಬೆಂಗಳೂರು:ಕಾವ್ಯಸ್ಪಂದನ ಪ್ರಕಾಶನವು ಪ್ರಕಟಿಸಿರುವ ಪತ್ರಕರ್ತ, ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ʼನಿರಾಕಾರ ವಿಶ್ವಕರ್ಮʼ ಕೃತಿಯು ಸೆಪ್ಟೆಂಬರ್ 17ರಂದು ಬಿಡುಗಡೆಯಾಗಲಿದೆ. ಅಂದು ಬೆಳಗ್ಗೆ 10.30ಕ್ಕೆ ಮೈಸೂರು ಜಿಲ್ಲೆ, ಕೆ.ಆರ್.ನಗರ ತಾಲೂಕು ಆಡಳಿತ ಕಚೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತದ ಆಶ್ರಯ, ತಾಲೂಕು ವಿಶ್ವಕರ್ಮ ಸೇವಾ ಸಮಾಜ ಹಾಗೂ ತಾಲೂಕು ವಿಶ್ವಕರ್ಮ ಸಂಘದ ಜಂಟಿ ವತಿಯಿಂದ ಆಯೋಜಿಸಿರುವ ‘ವಿಶ್ವಕರ್ಮ ಜಯಂತಿ’ ಕಾರ್ಯಕ್ರಮದಲ್ಲಿ ಶಾಸಕರಾದ ಡಿ. ರವಿಶಂಕರ್ ಅವರು ಕೃತಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಹಶೀಲ್ದಾರ್ ಜಿ. ಸುರೇಂದ್ರ ಮೂರ್ತಿ ಅವರು ವಹಿಸಲಿದ್ದಾರೆ. ತಾಲೂಕು ವಿಶ್ವಕರ್ಮ ಸೇವಾ ಸಮಾಜದ ಅಧ್ಯಕ್ಷ ರೇವಣ್ಣ, ತಾಲೂಕು ವಿಶ್ವಕರ್ಮ ಸಂಘದ ಅಧ್ಯಕ್ಷ ವೇಣುಗೋಪಾಲ್ ಎನ್., ಪದಾಧಿಕಾರಿಗಳಾದ ಈಶ್ವರಾಚಾರ್, ಚೇತನ್ ಮೂರ್ತಿ ಸೇರಿದಂತೆ ವಿಶ್ವಕರ್ಮ ಸಮುದಾಯದ ಮುಖಂಡರು ಹಾಗೂ ತಾಲೂಕು ಆಡಳಿತದ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಶ್ರೀ ಕಾಳಿಕಾಂಬಾ ದೇವಾಲಯದಲ್ಲಿ ವಿಶ್ವಕರ್ಮ ಜಯಂತಿ ಪ್ರಯುಕ್ತ ವಿಶೇಷ ಪೂಜೆ ನೆರವೇರಲಿದ್ದು, ಬಳಿಕ ಅಲ್ಲಿಂದ ತಾಲೂಕು ಆಡಳಿತ ಕಚೇರಿಯವರೆಗೆ ಮೆರವಣಿಗೆ ನಡೆಯಲಿದೆ.
ವಿಶೇಷವೆಂದರೆ, ಪ್ರಕಾಶಕರು ಹಾಗೂ ಆಯೋಜಕರ ಆಸಕ್ತಿಯ ಮೇರೆಗೆ ‘ನಿರಾಕಾರ ವಿಶ್ವಕರ್ಮ’ ಕೃತಿಯನ್ನು ತಿಂಗಳ ಅಂತರದಲ್ಲಿ ಮೂರು ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಸೆಪ್ಟೆಂಬರ್ 17ರಂದು ಕೆ.ಆರ್.ನಗರದಲ್ಲಿ ಕೃತಿ ಬಿಡುಗಡೆಯಾದರೆ, ಸೆಪ್ಟೆಂಬರ್ 20ರಂದು ಬೆಂಗಳೂರಿನ ತಾತಗುಣಿಯ ವಿಶ್ವಕರ್ಮ ನಗರದಲ್ಲಿ ಕರ್ನಾಟಕ ರಾಜ್ಯ ವಿಶ್ವಕರ್ಮ ಮಹಾಮಂಡಳಿಯ ವತಿಯಿಂದ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಕೃತಿ ಲೋಕಾರ್ಪಣೆಗೊಳ್ಳಲಿದೆ. ಹಾಗೆಯೇ, ನವೆಂಬರ್ 22ರಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಕಾವ್ಯಸ್ಪಂದನ ಪ್ರಕಾಶನ ಏರ್ಪಡಿಸಿರುವ ಕಾರ್ಯಕ್ರಮದಲ್ಲಿಯೂ ಈ ಕೃತಿ ಬಿಡುಗಡೆಯಾಗಲಿದೆ.
ಮಾನವ ನಾಗರಿಕತೆಯ ಇತಿಹಾಸವನ್ನು ತೆರೆದರೆ, ಅದರ ಪ್ರತಿಯೊಂದು ಪುಟದ ಹಿಂದೆಯೂ ಶ್ರಮಿಸಿದ ಅನಾಮಿಕ ಕೈಗಳು ಕಾಣಿಸುತ್ತವೆ. ಆ ಕೈಗಳು ಕಲ್ಲನ್ನು ಕೆತ್ತಿ ದೇವಸ್ಥಾನವಾಗಿಸಿವೆ, ಕಬ್ಬಿಣವನ್ನು ಬಡಿದು ಆಯುಧವಾಗಿಸಿವೆ, ಮರಕ್ಕೆ ರೂಪ ಕೊಟ್ಟು ಬಾಗಿಲಾಗಿಸಿವೆ, ಮಣ್ಣಿಗೆ ಜೀವ ತುಂಬಿ ಮಡಕೆಯಾಗಿಸಿವೆ; ಹಾಗೆಯೇ ಬಣ್ಣಗಳ ಮೂಲಕ ಅಚ್ಚಳಿಯದ ಭಾವನೆಗಳನ್ನು ಮೂಡಿಸಿವೆ. ಆ ಸೃಷ್ಟಿಶೀಲ ಕೈಗಳಿಗೆ ಬಹುಶಃ ಇತಿಹಾಸದ ಅಧಿಕೃತ ಪುಟಗಳಲ್ಲಿ, ರಾಜ-ಮಹಾರಾಜರ ಕಥೆಗಳ ನಡುವೆ ದೊಡ್ಡ ಅಕ್ಷರಗಳಲ್ಲಿ ಹೆಸರು ಸಿಕ್ಕಿಲ್ಲದಿರಬಹುದು. ಆದರೆ ಅವರು ನಿರ್ಮಿಸಿದ ಕಲೆ, ಶಿಲ್ಪ, ವಾಸ್ತು, ಉಪಕರಣ ಮತ್ತು ಸೌಂದರ್ಯವೇ ನಮ್ಮ ನಾಗರಿಕತೆಯ ಉಸಿರಾಗಿ, ಜೀವಂತ ಸಾಕ್ಷಿಗಳಾಗಿ ಇಂದಿಗೂ ಉಳಿದಿವೆ. ಅಂತಹ ಸೃಜನಶೀಲ ಕೈಗಳ ಸಮೂಹ ಸ್ಮೃತಿಯನ್ನು, ಪರಂಪರೆಯನ್ನು ಮತ್ತು ಇತಿಹಾಸವನ್ನು ಅರಿಯುವ ಅರ್ಥಪೂರ್ಣ ಪ್ರಯತ್ನವನ್ನು ನಿರಾಕಾರ ವಿಶ್ವಕರ್ಮ ಕೃತಿಯಲ್ಲಿ ಲೇಖಕರಾದ ಚಂದ್ರಶೇಖರ ಗಂಧನಹಳ್ಳಿ ಅವರು ಮಾಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!
ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರ’ ಎಂಬ ಧ್ಯೇಯದೊಂದಿಗೆ ಆರಂಭವಾದ ಈ ಯೋಜನೆ ಇಂದು ಕೋಟ್ಯಂತರ ಕುಟುಂಬಗಳ ಬದುಕಿಗೆ ಬೆಳಕಾಗಿದೆ.
ಹೌದು! 2023ರ ಆಗಸ್ಟ್ನಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಪ್ರತಿ ತಿಂಗಳು 200 ಯೂನಿಟ್ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಾಸಿಕ ಬಜೆಟ್ಗೆ ದೊಡ್ಡ ಆಸರೆಯಾಗಿದೆ ಎಂದೇ ಹೇಳಬಹುದು.
http://Visit : www.suddidina.com
ಗೃಹಜ್ಯೋತಿ ಯೋಜನೆಯ ಸಾಧನೆಯ ಗಿರಿ:
ಇಂಧನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ರಾಜ್ಯದ್ಯಂತ ಬರೋಬ್ಬರಿ 1.65 ಕೋಟಿ. ಫಲಾನುಭವಿಗಳು ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದರೆ, ಸೇವಾಸಿಂಧು ಪೋರ್ಟಲ್ನಲ್ಲಿ ಒಟ್ಟು 1,76,69,368 ಜನರು ನೋಂದಾಯಿಸಿಕೊಂಡಿದ್ದರೆ. ಒಟ್ಟು 2,06,65,451 ಗೃಹಬಳಕೆ ವಿದ್ಯುತ್ ಗ್ರಾಹಕರಿದ್ದಾರೆ. ಅಂದರೆ ಶೇ.85ಕ್ಕಿಂತ ಹೆಚ್ಚು ಗ್ರಾಹಕರು ಈ ಯೋಜನೆಯಡಿ ನೋಂದಾಯಿಸಿಕೊಂಡು ಲಾಭ ಪಡೆಯುತ್ತಿದ್ದಾರೆ.
ಆರ್ಥಿಕವಾಗಿ ನೋಡುವುದಾದರೆ, 2023ರ ಆಗಸ್ಟ್ನಿಂದ 2026ರ ಜುಲೈ ವರೆಗೆ, ಕಳೆದ ಮೂರು ವರ್ಷಗಳಲ್ಲಿ ಸರ್ಕಾರವು ಫಲಾನುಭವಿಗಳಿಗೆ ಒಟ್ಟು ₹28,759.54 ಕೋಟಿ ರೂಪಾಯಿ ಸಬ್ಸಿಡಿ ಬಿಡುಗಡೆ ಮಾಡಿದೆ. ಇದು ಸರ್ಕಾರದ ಬದ್ಧತೆ ಮತ್ತು ಜನಪರ ಕಾಳಜಿಗೆ ಹಿಡಿದ ಕನ್ನಡಿಯಾಗಿದೆ.
ಕುಟುಂಬದ ಬಜೆಟ್ಗೆ ಆಸರೆ, ಉಜ್ವಲ ಭವಿಷ್ಯಕ್ಕೆ ಬುನಾದಿ:
ಪ್ರತಿ ತಿಂಗಳು 1000 ದಿಂದ 1500 ರೂಪಾಯಿಗಳವರೆಗೆ ವಿದ್ಯುತ್ ಬಿಲ್ ಕಟ್ಟುತ್ತಿದ್ದ ಸಾಮಾನ್ಯ ಕುಟುಂಬಗಳಿಗೆ ಈಗ ಆ ಹಣ ಸಂಪೂರ್ಣವಾಗಿ ಉಳಿತಾಯವಾಗುತ್ತಿದೆ. ಈ ಉಳಿತಾಯದ ಹಣವನ್ನು ಅವರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಇತರ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಗೃಹಿಣಿಯರಿಗೆ ಇದು ಆರ್ಥಿಕವಾಗಿ ದೊಡ್ಡ ನೆರವಾಗಿದೆ.
ಕೇವಲ ಉಚಿತ ವಿದ್ಯುತ್ ನೀಡುವುದಷ್ಟೇ ಅಲ್ಲ, ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದೇ ಈ ಯೋಜನೆಯ ಮುಖ್ಯ ಗುರಿಯಾಗಿದ್ದು, ರಾಜ್ಯದ ಜನರ ಜೀವನಮಟ್ಟ ಸುಧಾರಿಸಿದೆ. ಗೃಹ ಜ್ಯೋತಿ ಯೋಜನೆಯು ಕೇವಲ ಒಂದು ಯೋಜನೆಯಾಗಿ ಉಳಿಯದೆ, ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕುಟುಂಬಗಳನ್ನು ಈ ಯೋಜನೆಯಡಿ ತರಲು ಇಂಧನ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.





