ದಿನದ ಸುದ್ದಿ
ಅಲೆಮಾರಿ ಸಮುದಾಯಗಳ ಅಸ್ಮಿತೆ ಉಳಿಸುವಲ್ಲಿ ಆಳುವ ಸರ್ಕಾರಗಳು ವಿಫಲ : ಬರಗೂರು ರಾಮಚಂದ್ರಪ್ಪ ಕಳವಳ

ಸುದ್ದಿದಿನ, ಬೆಂಗಳೂರು :ಎಸ್ಸಿ ಎಸ್ಟಿ ಅಲೆಮಾರಿ ಸಮುದಾಯಗಳ ಸಮಗ್ರ ಅಭಿವೃದ್ಧಿಗೆ ಸಮನ್ವಯ ಸಮಿತಿಯ ಮೂಲಕ ಹೋರಾಟ ರೂಪಿಸಲು ಪೂರ್ವಭಾವಿ ಸಭೆಯಲ್ಲಿ ಭಾನುವಾರ ನಿರ್ಧಾರ ಮಾಡಲಾಯಿತು.
ನಗರದ ಖಾಸಗಿ ಹೋಟೆಲ್ನಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗದ ಅಲೆಮಾರಿ ಅರೆಅಲೆಮಾರಿ ಸಮುದಾಯಗಳ ಚಿಂತನ ಮಂಥನ ಸಭೆಯನ್ನು ಚಿತ್ರನಟರು ಸಮಾಜ ಸೇವಕರು ಚೇತನ್ ಅಹಿಂಸಾ ಅವರು ಆಯೋಜಿಸಿದ್ದರು.
ಸಭೆಯಲ್ಲಿ ಪ್ರಗತಿಪರ ಚಿಂತಕರು ಬರಗೂರು ರಾಮಚಂದ್ರ ಅವರು ಭಾಗವಹಿಸಿ ಮಾತನಾಡುತ್ತಾ ಭಾರತದ ಬಹು ಸಂಸ್ಕೃತಿಯ ಉಳಿವಿಗಾಗಿ ನೆಲ ಮತ್ತು ನೆಲೆಯೇ ಇಲ್ಲದ ಅಲೆಮಾರಿಗಳ ಕೊಡುಗೆ ಅಪಾರವಾಗಿದ್ದು.ಆದರೆ ಈ ಸಮುದಾಯಗಳ ಅಸ್ಮಿತೆಯನ್ನು ಉಳಿಸುವುದರ ಜೊತೆಗೆ ಅವರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ಆಳುವ ಸರ್ಕಾರಗಳು ಸಂಪೂರ್ಣವಾಗಿ ವಿಫಲವಾಗಿದ್ದು ಇದರ ಬಗ್ಗೆ ಬೇಸರ ವ್ಯಕ್ತಪಡಿಸಿದರು.
ಮುಂದಿನ ದಿನಗಳಲ್ಲಿ ಸಾಹಿತ್ಯ ಮತ್ತು ಪ್ರಗತಿಪರ ವಲಯದಲ್ಲಿ ಚರ್ಚಿಸಿ ಸಮನ್ವಯ ಸಮಿತಿಯನ್ನು ರಚಿಸಿಕೊಂಡು ಹೋರಾಟ ರೂಪಿಸುವಂತೆ ಸಲಹೆ ನೀಡಿದರು.
ನಂತರ ಅಲೆಮಾರಿ ಸಮುದಾಯಗಳನ್ನು ಉದ್ದೇಶಿಸಿ ಮಾಜಿ ಸಚಿವರು ಸಾಹಿತಿಗಳು ಆದ ಶ್ರೀಮತಿ ಬಿಟಿ ಲಲಿತ್ ನಾಯಕರವರು ಮಾತನಾಡುತ್ತಾ ಎಪ್ಪತ್ತರ ದಶಕದಲ್ಲಿ ದಲಿತ ವರ್ಗಗಳಿಗೆ ಮೂಡಿದ ಸಾಮಾಜಿಕ ಪ್ರಜ್ಞೆ ಅಲೆಮಾರಿ ಸಮುದಾಯಗಳಿಗೆ ಮೂಡಲಿಲ್ಲ.ಆದ್ದರಿಂದ ಇಂದಿಗೂ ಈ ಸಮುದಾಯಗಳು ಮುಖ್ಯವಾಹಿನಿಗೆ ಬರಲು ಸಾಧ್ಯವಾಗಿಲ್ಲ ಆದರೆ ನಮ್ಮನ್ನಾಳಿದ ಸರ್ಕಾರಗಳು
ಇದುವರೆಗೂ ಈ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗದ ಅಲೆಮಾರಿಗಳ ಸಮಗ್ರ ಅಭಿವೃದ್ಧಿಯ ಬಗ್ಗೆ ಕಿಂಚಿತ್ತು ಕಾಳಜಿ ತೋರಿ ಸಿಲ್ಲದಿರುವುದು ಅತ್ಯಂತ ವಿಷಾದಕರ ಸಂಗತಿಯಾಗಿದೆ ಎಂದರು.
ಈಗಿನ ಮೈತ್ರಿ ಸರ್ಕಾರದಲ್ಲಿಯೂ ಸಹ ಕಳೆದ ಬಜೆಟ್ನಲ್ಲಿ ಈ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗದ ಅಲೆಮಾರಿಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ ನೀಡಿಲ್ಲದಿರುವ ಮಲತಾಯಿ ಧೋರಣೆಯನ್ನು ಖಂಡಿಸುತ್ತಾ ಮುಂದಿನ ದಿನಗಳಲ್ಲಿ ಎಲ್ಲ ಪ್ರಗತಿಪರ ಚಿಂತಕರನ್ನು ಒಳಗೊಂಡು ಹೋರಾಟ ರೂಪಿಸುವಂತೆ ಸಲಹೆ ನೀಡಿ ಈ ಹೋರಾಟಕ್ಕೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದರು.
ಅದೇ ರೀತಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪ್ರೊಫೆಸರ್ ಎಸ್ ಜಿ ಸಿದ್ದರಾಮಯ್ಯನವರು ಮಾತನಾಡುತ್ತಾ ದೇಶದಲ್ಲಿ ಅಸಂಘಟಿತ 749 ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯಗಳ ಸುಮಾರು 11 ಕೋಟಿ ಜನರ ಬದುಕು ಮೂರಾಬಟ್ಟೆಯಾಗಿ ಅವರು ಇಂದಿಗೂ ಬೀದಿಯಲ್ಲಿ ಬಿದ್ದಿದ್ದಾರೆ ಕಾರಣ ಇದುವರೆಗೂ ಆಳಿದ ಸರ್ಕಾರ ಮತ್ತು ಜನಪ್ರತಿನಿಧಿಗಳು ಈ ಬಗ್ಗೆ ಇಚ್ಛಾಶಕ್ತಿಯ ಕೊರತೆಯಿಂದ ಬಹುಸಂಖ್ಯಾತ ಮೂಲನಿವಾಸಿಗಳು ಇಂದಿಗೂ ಅವಕಾಶ ವಂಚಿತರಾಗಿ ಅಲೆಮಾರಿಗಳಾಗಿದ್ದಾರೆ ಎಂದರು.
ಆದ್ದರಿಂದ ಎಲ್ಲ ಅಲೆಮಾರಿ ನಾಯಕರು ತಮ್ಮ ತಮ್ಮ ಭಿನ್ನಾಭಿಪ್ರಾಯಗಳನ್ನು ಬದಿಗಿರಿಸಿ ಮುಂದಿನ ಹೋರಾಟವನ್ನು ರೂಪಿಸಲು ಶೀಘ್ರವೇ ಎಲ್ಲ ಪ್ರಗತಿಪರ ಚಿಂತಕರು ಬುದ್ಧಿಜೀವಿಗಳು ಹಿರಿಯ ಸಾಹಿತಿಗಳನ್ನು ಒಳಗೊಂಡಂತೆ ಅಲೆಮಾರಿಗಳ ಅಭಿವೃದ್ಧಿಗಾಗಿ ಅಲೆಮಾರಿ ಸಮುದಾಯಗಳ ಹೋರಾಟ ಸಮನ್ವಯ ಸಮಿತಿಯನ್ನು ರಚಿಸಿ ಹೋರಾಟ ರೂಪಿಸುವುದಾಗಿ ತಿಳಿಸುತ್ತಾ ಮೈತ್ರಿ ಸರ್ಕಾರದ ಜೊತೆಯಲ್ಲಿ ಎಸ್ಸಿ ಎಸ್ಟಿ ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿಶೇಷ ಅನುದಾನ ಬಿಡುಗಡೆಯ ಬಗ್ಗೆ ಮಾತುಕತೆ ನಡೆಸುವುದಾಗಿ ಭರವಸೆ ನೀಡಿದರು.
ಸಭೆಯನ್ನು ಆಯೋಜಿಸಿದ ಚಿತ್ರನಟರಾದ ಚೇತನ್ ಅಹಿಂಸ ಅವರು ಮಾತನಾಡುತ್ತಾ ಕನಿಷ್ಠ ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿರುವ ಅಲೆಮಾರಿ ಸಮುದಾಯಗಳಿಗೆ ವಸತಿ ಶಿಕ್ಷಣ ಮತ್ತು ಮೂಲಭೂತ ಸೌಕರ್ಯಗಳನ್ನು ದಕ್ಕಿಸಿಕೊಡಲು ಮುಂದಿನ ಸಭೆಯಲ್ಲಿ ಚರ್ಚೆ ನಡೆಸಲಾಗುವುದು ಎಂದರು.
ಅಲೆಮಾರಿ ಅರೆ ಅಲೆಮಾರಿ ವಿಮುಕ್ತ ಬುಡಕಟ್ಟು ಒಕ್ಕೂಟದ ಅಧ್ಯಕ್ಷರಾದ ಭಾಸ್ಕರ ದಾಸ್ ಎಕ್ಕಾರು, ಅಲೆಮಾರಿ ಬುಡಕಟ್ಟು ಮಹಾಸಭಾದ ಮುಖಂಡರು ಹಾಗೂ ಚಿಂತಕರು ಆದ ಡಾ. ಬಾಲಗುರುಮೂರ್ತಿ, ಡಾ. ಗೋವಿಂದಸ್ವಾಮಿ ,ಶೇಷಪ್ಪ, ರಂಗಪ್ಪ ಹಾಗೂ BAMCEF ಸುಭಾಷ್ ಶೀಲವಂತ ಅಜೀಜ್ ಪಿಂಡಾರಿ ಡಾಕ್ಟರ್ ಭಾನುಪ್ರಕಾಶ್ ಹಾಗೂ ಸುಮಾರು 51 ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗದ ಅಲೆಮಾರಿ ಸಮುದಾಯಗಳ ಮುಖಂಡರಾದ ಬಿ.ಎಸ್. ಅನಂದ್ ಕುಮಾರ್ ಏಕಲವ್ಯ, ಬಿ.ಎಚ್. ಮಂಜುನಾಥ್, ಎಸ್,ಗೋವಿಂದು, ಕಿರಣ್ ಕುಮಾರ್ ಕೊತ್ತಿಗೆರೆ,
ಲೋಹಿತಾಕ್ಷ,ಬಿ.ಟಿ. ದಾಸರ್ ಮಹೇಂದ್ರರಾವ್ ಸಾಸ್ನಕ್ ಮತ್ತಿತರೆ ಅಲೆಮಾರಿ ಸಮುದಾಯಗಳ ನೂರಾರು ಮುಖಂಡರು ಈ ಒಂದು ಅಲೆಮಾರಿ ಚಿಂತನ ಮಂಥನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್ಶಿಪ್ ಅವಕಾಶ : ಅರ್ಜಿ ಆಹ್ವಾನ

ಸುದ್ದಿದಿನ,ಬಳ್ಳಾರಿ:ಕರ್ನಾಟಕ ಮಾಧ್ಯಮ ಅಕಾಡೆಮಿಯು ಮಹಿಳಾ ಆಯವ್ಯಯ ಹಾಗೂ ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಗಳಡಿ ಪತ್ರಿಕೋದ್ಯಮದಲ್ಲಿ ಆಸಕ್ತಿ ಇರುವ ಸ್ನಾತಕೋತ್ತರ ಪದವೀಧರರಿಗೆ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್ಶಿಪ್ ಅವಕಾಶ ಕಲ್ಪಿಸಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದವರಿಗೆ ಆದ್ಯತೆ ನೀಡಲಾಗುವುದು. ಬರವಣಿಗೆಯಲ್ಲಿ ಪರಿಣತಿ ಹೊಂದಿರುವ, ಪತ್ರಿಕೋದ್ಯಮದಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
2022-23 ಹಾಗೂ 2023-24 ನೇ ಶೈಕ್ಷಣಿಕ ವರ್ಷದಲ್ಲಿ ಯಾವುದೇ ವಿಷಯದಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಪ್ರವೇಶ ಪರೀಕ್ಷೆಯ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ವಿವರ
ಮಹಿಳಾ ಆಯವ್ಯಯದಡಿ 10 ಮಹಿಳೆಯರು, ಪರಿಶಿಷ್ಟ ಜಾತಿ ಉಪಯೋಜನೆಯಡಿ 10 ಪರಿಶಿಷ್ಟ ಜಾತಿಯ ಅಭ್ಯರ್ಥಿಗಳು ಹಾಗೂ ಪರಿಶಿಷ್ಟ ಪಂಗಡ ಉಪ ಯೋಜನೆಯಡಿ 4 ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಇಂಟರ್ನ್ಶಿಪ್ ಗೆ ಅವಕಾಶ ಕಲ್ಪಿಸಲಾಗುವುದು. ಒಟ್ಟು 24 ಅಭ್ಯರ್ಥಿಗಳಿಗೆ ಇಂಟರ್ನ್ಶಿಪ್ ಅವಕಾಶ ಒದಗಿಸಲಾಗುವುದು.
ಆಯ್ಕೆಯಾದ ಅಭ್ಯರ್ಥಿಗಳಿಗೆ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಎರಡು ತಂಡಗಳಲ್ಲಿ ಎರಡು ತಿಂಗಳ ಇಂಟರ್ನ್ಶಿಪ್ ಗೆ ಅವಕಾಶ ಕಲ್ಪಿಸಲಾಗುವುದು. ಇಂಟರ್ನ್ಶಿಪ್ ಗೆ ಸಂಸ್ಥೆ ಹಾಗೂ ಸ್ಥಳವನ್ನು ಅಕಾಡೆಮಿಯೇ ನಿಗದಿ ಪಡಿಸುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಅಕಾಡೆಮಿ ವತಿಯಿಂದ ಮಾಸಿಕ 20,000/- ರೂ. ಸ್ಟೆöÊಫಂಡ್ ನೀಡಲಾಗುವುದು.
ಅಭ್ಯರ್ಥಿಗಳು ತಮ್ಮ ಸ್ವವಿವರ (Curriculum Vitae) ದೊಂದಿಗೆ ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಪೂರಕ ದಾಖಲೆಗಳೊಂದಿಗೆ ಗೂಗಲ್ ಫಾರ್ಮ್ https://forms.gle/UgNqDcFs1v6akyAD9 ರಲ್ಲಿ ಅರ್ಜಿ ಸಲ್ಲಿಸಬೇಕು. ಅಭ್ಯರ್ಥಿಗಳ ಆಯ್ಕೆಯ ಅಂತಿಮ ತೀರ್ಮಾನ ಅಕಾಡೆಮಿಯ ಸಮಿತಿಯದ್ದೇ ಅಗಿರುತ್ತದೆ.
ಅರ್ಜಿ ಸಲ್ಲಿಸಲು ಜುಲೈ 25 ಕೊನೆಯ ದಿನವಾಗಿದ್ದು, ತಡವಾಗಿ ಬಂದ ಅರ್ಜಿಗಳನ್ನು ಪರಿಗಣಿಸುವುದಿಲ್ಲ ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷರಾದ ಆಯೇಶಾ ಖಾನಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕ್ರೀಡಾ ಸಾಮಾಗ್ರಿಗಳ ಸರಬರಾಜಿಗೆ ಯುವ ಸಂಘಗಳಿಂದ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ಯುವ ಚೈತನ್ಯ ಕಾರ್ಯಕ್ರಮದಡಿ ಕ್ರೀಡಾ ಕಿಟ್ಗಳನ್ನು ಸರಬರಾಜು ಮಾಡಲು ಯುವಕ, ಯುವತಿಯರ ಸಂಘಗಳಿಂದ ಸೇವಾ ಸಿಂಧೂ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು.
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಜುಲೈ 22 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ ದಾವಣಗೆರೆ ದೂ.ಸಂ: 08192-237480 ನ್ನು ಸಂಪರ್ಕಿಸಲು ಸಹಾಯಕ ನಿರ್ದೇಶಕ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಂಪೈರ್ ಟ್ರೇಡಿಂಗ್ ಕಂಪನಿಯಲ್ಲಿ ಹಣವನ್ನು ತೊಡಗಿಸಿ ಮೋಸ : ದೂರು ದಾಖಲು

ಸುದ್ದಿದಿನ,ದಾವಣಗೆರೆ:ದಾವಣಗೆರೆ ನಗರದ ಡಿಸಿಎಂ ಲೇಔಟಿನ ಎಂಎಸ್ಎಂ ಪ್ಲಾಜಾದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆನ್ಲೈನ್ ರಿಂಗ್ ವ್ಯವಹಾರ ನಡೆಸಲು ತೆರೆದಿರುವ ಎಂಪೈರ್ ಟ್ರೇಡಿಂಗ್ ಕಂಪನಿ ತೆರೆದುಕೊಂಡು ಸಾರ್ವಜನಿಕರಿಂದ ಹಣವನ್ನು ಆರೋಪಿತರಾದ ಗಜಾನನ ತಂದೆ ರಾಮಪೂಜಾರಪ್ಪ ಇವರು ತಮ್ಮ ಸ್ನೇಹಿತರೊಂದಿಗೆ ಪಡೆದುಕೊಂಡು ಪ್ರತಿ ತಿಂಗಳು ಶೇಕಡಾ 5 ರಷ್ಟು ಲಾಭಾಂಶವನ್ನು ಕೊಡುವುದಾಗಿ ಹೇಳಿ ಕೆಲವು ತಿಂಗಳು ಕೊಟ್ಟು ನಂತರದ ದಿನಗಳಲ್ಲಿ ಲಾಭಾಂಶವನ್ನು ಮತ್ತು ಅಸಲಿನ ಹಣವನ್ನು ಕೊಡದೇ ಒಟ್ಟು ಸಾರ್ವಜನಿಕರಿಂದ 31.50,000/- ರೂಗಳನ್ನು ಕಟ್ಟಿಸಿಕೊಂಡು 61.62.800/- ರೂ ಲಾಭಾಂಶದ ಹಣವನ್ನು ಜಮಾ ಮಾಡಿದ್ದು ರೂ.37,33,500ಗಳನ್ನು 6 ತಿಂಗಳ ಲಾಭಾಂಶದ ಹಣವನ್ನು ಮತ್ತು ಅಸಲಿನ ಹಣವನ್ನು ಕೊಡದೇ ಮೋಸ ಮಾಡಿರುತ್ತಾರೆ ಎಂದು ಹರೀಶ.ಕೆ ತಂದೆ ಉಮೇಶಪ್ಪ ಪೊಲೀಸ್ ಠಾಣೆಗೆ ದೂರು ಸಲ್ಲಿಸಿರುತ್ತಾರೆ.
ಠೇವಣಿದಾರರು ಎಂಪೈರ್ ಟ್ರೇಡಿಂಗ್ ಕಂಪನಿಯಲ್ಲಿ ಹಣವನ್ನು ತೊಡಗಿಸಿ ಮೋಸ ಹೋಗಿದ್ದಲ್ಲಿ ಸೂಕ್ತ ದಾಖಲಾತಿಗಳೊಂದಿಗೆ ದಾವಣಗೆರೆ ನಗರದ ಸಿಇಎನ್ ಪೊಲೀಸ್ ಠಾಣೆ, ಮೊದಲನೇ ಮಹಡಿ ವಿದ್ಯಾನಗರ ಪೊಲೀಸ್ ಇನ್ಸ್ಪೆಕ್ಟರ್ ರವರ ಬಳಿ ಹೋಗಿ ಮಾಹಿತಿ ನೀಡಬೇಕು. ದೂ.ಸಂ:08192-225119 ನ್ನು ಸಂಪರ್ಕಿಸಲು ಪೊಲೀಸ್ ನಿರೀಕ್ಷಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
