ದಿನದ ಸುದ್ದಿ
ಟ್ರ್ಯೂಕಾಲರ್ನಲ್ಲಿ ಸರ್ಕಾರಿ ಸೇವೆಗಳು
ಡಿಜಿಟಲ್ ಸರ್ಕಾರಿ, ಡೈರೆಕರಿಯು ಡಿಜಿಟಲ್ ಸಂವಹನದಲ್ಲಿ ವಿಶ್ವಾಸವನ್ನು ಮೂಡಿಸುತ್ತದೆ ಮತ್ತು ಎಲ್ಲ ರಾಜ್ಯಗಳಲ್ಲೂ ಪರಿಶೀಲಿಸಿದ ಸಂಪರ್ಕಗಳ ಮೂಲಕ ಸಾರ್ವಜನಿಕ ಪ್ರತಿನಿಧಿಗಳು ಮತ್ತು ಪ್ರಾಧಿಕಾರಗಳನ್ನು ಸಂಪರ್ಕಿಸಲು ನಾಗರಿಕರಿಗೆ ಅನುವು ಮಾಡಿಕೊಡುತ್ತದೆ.
ಸುದ್ದಿದಿನ,ನವದೆಹಲಿ: ಭಾರತ ಸರ್ಕಾರ ಮತ್ತು ನಾಗರಿಕರ ಮಧ್ಯೆ ಸರಾಗ ಸಂವಹನಕ್ಕೆ ಬೆಂಬಲ ನೀಡುವುದಕ್ಕಾಗಿ ಆ್ಯಪ್ ಒಳಗೆ ಡಿಜಿಟಲ್ ಸರ್ಕಾರಿ ಡೈರೆಕ್ಟರಿಯನ್ನು ಟ್ರ್ಯೂಕಾಲರ್ ಬಿಡುಗಡೆ ಮಾಡಿದೆ. ಇದರಿಂದಾಗಿ ಸಾವಿರಾರು ಸರ್ಕಾರಿ ಅಧಿಕಾರಗಳನ್ನು ಅವರ ಪರಿಶೀಲಿಸಿದ ಸಂಪರ್ಕ ಸಂಖ್ಯೆಗಳನ್ನು ಬಳಸಿಕೊಂಡು ಸಂಪರ್ಕಿಸಲು ಅನುವಾಗಲಿದೆ. ಯಾವುದೇ ಸ್ಪ್ಯಾಮ್ಗಳು, ಮೋಸ ಮತ್ತು ಸ್ಪ್ಯಾಮ್ನಿಂದ ಬಳಕೆದಾರರನ್ನು ರಕ್ಷಿಸುವ ಮೂಲಕ ನಾಗರಿಕ ಸೇವೆಗಳಲ್ಲಿ ನಾಗರಿಕರಲ್ಲಿ ವಿಶ್ವಾಸ ಮೂಡಿಸಲು ಇದು ಅತ್ಯಂತ ಮಹತ್ವದ ಹೆಜ್ಜೆಯಾಗಿದೆ.
ಡಿಜಿಟಲ್ ಸರ್ಕಾರಿ ಡೈರೆಕ್ಟರಿಯು ಸಹಾಯವಾಣಿಗಳು, ಕಾನೂನು ಜಾರಿ ಏಜೆನ್ಸಿಗಳು, ರಾಜತಾಂತ್ರಿಕ ಕಚೇರಿಗಳು, ಶೈಕ್ಷಣಿಕ ಸಂಸ್ಥೆಗಳು, ಆಸ್ಪತ್ರೆಗಳು ಮತ್ತು ಇತರ ಪ್ರಮುಖ ಇಲಾಖೆಗಳನ್ನು ಸಂಪರ್ಕಿಸುವ ಅವಕಾಶವನ್ನು ನೀಡುತ್ತದೆ. ಇದು 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರತದೇಶಗಳಲ್ಲಿರುವ ಟ್ರ್ಯೂಕಾಲರ್ ಆಪ್ ಬಳಕೆದಾರರಿಗೆ ಲಭ್ಯವಿದೆ.
ಈ ಮಾಹಿತಿಯನ್ನು ಸರ್ಕಾರದಿಂದ ಮತ್ತು ಸರ್ಕಾರಿ ಅಧಿಕಾರಿ ಮೂಲಗಳಿಂದ ನೇರವಾಗಿ ಪಡೆಯಲಾಗಿರುತ್ತದೆ. ಸರ್ಕಾರಿ ಅಧಿಕಾರಿಗಳಿಗೆ ಸಾರ್ವಜನಿಕ ಸೌಲಭ್ಯವನ್ನು ಸರಾಗಗೊಳಿಸುವುದು ಮತ್ತು ನಾಗರಿಕರಿಗೆ ಸಹಾಯ ಮಾಡುವ ಉದ್ದೇಶವನ್ನು ಈ ಉಪಕ್ರಮ ಒಳಗೊಂಡಿದ್ದು, ಕಿರಿಕಿರಿ ಇಲ್ಲದೇ ಸರ್ಕಾರದೊಂದಿಗೆ 240 ಮಿಲಿಯನ್ ಟ್ರ್ಯೂ ಕಾಲರ್ ಭಾರತೀಯ ಬಳಕೆದಾರರಿಗೆ ನೆರವು ನೀಡುವುದು ಉದ್ದೇಶವಾಗಿದೆ.
ಅಂತರ್ಜಾಲ ಬಳಕೆದಾರರು ಮತ್ತು ಸೂಕ್ತ ಪಾಲುದಾರರ ಜೊತೆಗೆ ನಡೆಸಿದ ಸಂವಹನವನ್ನು ಆಧರಿಸಿ, ಫೋನ್ ವಿಷಯದಲ್ಲಿ ಅತ್ಯಂತ ಸಾಮಾನ್ಯವಾಗಿ ನಡೆಯುವ ಮೋಸ ಎಂದರೆ, ಸರ್ಕಾರಿ ಅಧಿಕಾರಿ ಎಂದು ಸುಳ್ಳುಗುರುತು ನೀಡುವುದಾಗಿದೆ. ಟ್ರ್ಯೂಕಾಲರ್ ಬಳಕೆದಾರರು ಮೋಸ ಹೋಗದಂತೆ ತಡೆಯಬೇಕು ಎಂಬುದು ಮತ್ತು ಸಂವಹನದಲ್ಲಿ ವಿಶ್ವಾಸವನ್ನು ಮೂಡಿಸಬೇಕು ಎಂಬ ಧೈಯಕ್ಕೆ ಪರಿಶೀಲನೆಗೆ ಒಳಪಟ್ಟಿ ಸರ್ಕಾರಿ ಸಂಪರ್ಕ ಡೈರೆಕ್ಟರಿ ನಿರ್ಮಾಣ ಪೂರಕವಾಗಿದೆ.
ಬಳಕೆದಾರರಿಗೆ ಈ ಸಂಖ್ಯೆ ಪರಿಶೀಲನೆಗೆ ಒಳಪಟ್ಟಿದ ಎಂಬುದನ್ನು ಸೂಚಿಸಲು ಹಸಿರು ಹಿನ್ನೆಲೆ ಮತ್ತು ನೀಲಿ ಗುರುತು ಕಾಣಿಸುತ್ತದೆ, ಈ ಡೈರೆಕ್ಟರಿಯನ್ನು ವಿಸ್ತರಿಸಲು ವಿವಿಧ ಸರ್ಕಾರಿ ಇಲಾಖೆಗಳ ಜೊತೆಗೆ ಹಿನ್ನೆಲೆಯಲ್ಲಿ ಕೆಲಸ ಮಾಡುತ್ತಿದೆ ಮತ್ತು ಮುಂದಿನ ಹಂತದಲ್ಲಿ ಬಳಕೆದಾರರ ಪ್ರತಿಕ್ರಿಯೆಯನ್ನು ಆಧರಿಸಿ ಜಿಲ್ಲೆ ಮತ್ತು ಪುರಸಭೆಯ ಮಟ್ಟದಲ್ಲೂ ಸಂಪರ್ಕ ಸಂಖ್ಯೆಗಳನ್ನು ಸೇರಿಸುವ ಪ್ರಯತ್ನ ನಡೆಸುತ್ತದೆ. ಮಾಹಿತಿ ಹಂಚಿಕೊಳ್ಳಲು ಮತ್ತು ಡೈರೆಕ್ಟರಿಯಲ್ಲಿ ಪರಿಶೀಲನೆಗೆ ಒಳಪಡಲು ಸರಳ ಪ್ರಕ್ರಿಯೆಯನ್ನೂ ಟೂಕಾಲರ್ ರಚಿಸಿಕೊಂಡಿದೆ.
ಈ ವೈಶಿಷ್ಟ್ಯದ ಬಗ್ಗೆ ಮಾತನಾಡಿದ ಟ್ರ್ಯೂಕಾಲರ್ ಸಾರ್ವಜನಿಕ ವ್ಯವಹಾರಗಳ ನಿರ್ದೇಶಕ ಪ್ರಜ್ಞಾ ಮಿಶ್ರಾ “ಟ್ರ್ಯೂಕಾಲರ್ ಕೇವಲ ಕಾಲ ಐಡೆಂಟಿಫಿಕೇಶನ್ ಆ್ಯಪ್ ಆಗಿ ಉಳಿದಿಲ್ಲ. ಇಂದು ಇದು ನಗರ ಮತ್ತು ಆರೆ ನಗರ/ಗ್ರಾಮೀಣ ಪ್ರದೇಶಗಳ ಮಧ್ಯೆ ಇರುವ ಡಿಜಿಟಲ್ ಕೊರತೆಯನ್ನು ನೀಗಿಸುವ ಸಾಧನವಾಗಿದೆ. ಅಲ್ಲದೆ, ಡಿಜಿಟಲ್ ಸಂವಹನದಲ್ಲಿ ವಿಶ್ವಾಸವನ್ನು ಮೂಡಿಸುತ್ತಿದೆ. ಸರ್ಕಾರಿ ಅಧಿಕಾರಿಗಳು ಎಂದು ಹೇಳಿಕೊಂಡು ಜನರನ್ನು ಮೋಸ ಮಾಡುವುದನ್ನು ತಡೆಯುವುದು ನಮ್ಮ ಉದ್ದೇಶವಾಗಿದೆ.
ಈ ವೈಶಿಷ್ಟ್ಯವನ್ನು ಬಳಸಿಕೊಂಡು ಅಗತ್ಯವಿದ್ದಾಗ ಸರಿಯಾದ ಅಧಿಕಾರಿಗಳನ್ನು ನಾಗರಿಕರು ಸುಲಭವಾಗಿ ಸಂಪರ್ಕಿಸಬಹುದು. ಇದೇ ಮೊದಲ ಬಾರಿಗೆ ಸರ್ಕಾರದ ಅಧಿಕಾರಿಗಳ ಮತ್ತು ಇಲಾಖೆಗಳ ಡಿಜಿಟಲ್ ಡೈರೆಕ್ಟರಿ ಆಗಿದ್ದು, ಬಳಕೆದಾರರ ಪ್ರತಿಕ್ರಿಯೆಯನ್ನು ಆಧರಿಸಿ ಇದನ್ನು ಸುಧಾರಿಸಲಾಗುತ್ತದೆ. ನಮ್ಮ ಸಂವಹನವನ್ನು ಸುರಕ್ಷಿತವಾಗಿಡುವ ನಮ್ಮ ಪ್ರಯತ್ನವನ್ನು ನಾವು ಮುಂದುವರಿಸುತ್ತೇವೆ.’
‘ಟ್ರ್ಯೂಕಾಲರ್’ ಬಗ್ಗೆ
ಜನರ ಮಧ್ಯೆ ಸುರಕ್ಷಿತ ಮತ್ತು ಸೂಕ್ತ ಸಂವಾದಗಳನ್ನು ನಡೆಸಲು ನಾವು ಅವಕಾಶ ಮಾಡಿಕೊಡುತ್ತಿದ್ದೇವೆ ಮತ್ತು ಗ್ರಾಹಕರ ಜೊತೆಗೆ ಉದ್ಯಮಗಳು ಸಂವಹನ ನಡೆಸುವುದನ್ನು ಹೆಚ್ಚು ದಕ್ಷವಾಗಿಸುತ್ತೇವೆ. ಮೋಸದ ಮತ್ತು ಅನಗತ್ಯದ ಸಂವಹನವು ಡಿಜಿಟಲ್ ಆರ್ಥಿಕತೆಗಳು ಮತ್ತು ಬೆಳೆಯುತ್ತಿರುವ ಮಾರುಕಟ್ಟೆಗಳಿಗೆ ಸಾಂಕ್ರಾಮಿಕ ರೋಗದಂತೆ, ಸಂವಹನದಲ್ಲಿ ವಿಶ್ವಾಸವನ್ನು ಮೂಡಿಸುವ ಧೈಯವನ್ನು ನಾವು ಹೊಂದಿದ್ದೇವೆ.
ಟ್ರ್ಯೂಕಾಲರ್ ಪ್ರತಿದಿನದ ಸಂವಹನಕ್ಕೆ ಅನುವು ಮಾಡುವ ಸಾಧನವಾಗಿದ್ದು, 330 ಮಿಲಿಯನ್ ಗೂ ಹೆಚ್ಚು ಸಕ್ರಿಯ ಬಳಕೆದಾರರನ್ನು ಹೊಂದಿದೆ, ಇದು ಬಿಡುಗಡೆಯಾದಾಗಿನಿಮದಲೂ ಬಿಲಿಯನ್ಗೂ ಹೆಚ್ಚು ಡೌನ್ ಲೋಡ್ಗಳಾಗಿವೆ ಮತ್ತು 2021 ರಲ್ಲೇ 38 ಜಿಲಿಯನ್ ಅನಗತ್ಯ ಕರೆಗಳನ್ನು ಗುರುತಿಸಿ ತಡೆಹಿಡಿಯಲಾಗಿದೆ.
2009 ರಿಂದಲೂ ಸ್ಟಾಕ್ ಹೋಮ್ನಲ್ಲಿ ಕೇಂದ್ರ ಕಚೇರಿ ಹೊಂದಿರುವ ನಾವು ಸಹಸಂಸ್ಥಾಪಕರ ನೇತೃತ್ವದ ಉದ್ಯಮಶೀಲ ಕಂಪನಿಯಾಗಿದ್ದು, ಅತ್ಯಂತ ಅನುಭವಿ ಆಡಳಿತ ಮಂಡಳಿಯನ್ನು ಹೊಂದಿದೆ. 2021 ಆಕ್ಟೋಬರ್ 8 ರಿಂದಲೂ ನಾಸ್ಡಾಕ ಸ್ಟಾಕ್ ಹೋಮ್ನಲ್ಲಿ ಟ್ರ್ಯೂಕಾಲರ್ ಲಿಸ್ಟ್ ಆಗಿದೆ. ಇನ್ನಷ್ಟು ಮಾಹಿತಿಗೆ ದಯವಿಟ್ಟು ಈ ವೆಬ್ಸೈಟ್ಗೆ ಭೇಟಿ ಕೊಡಿ www.truecaller.com.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಇಂದಿನಿಂದ ಏ.3 ರವರೆಗೆ ಸೂಳೆಕೆರೆಗೆ ನೀರು ಬಿಡುಗಡೆ
ಸುದ್ದಿದಿನ,ದಾವಣಗೆರೆ: ಭದ್ರಾ ಜಲಾಶಯ ಯೋಜನೆ ವ್ಯಾಪ್ತಿಗೆ ಬರುವ ದೇವರಬೆಳಕೆರೆ ಪಿಕ್ಅಪ್ ಅಣೆಕಟ್ಟಿನ ಸ್ಕವರಿಂಗ್ ಸ್ಪೂಯೀಸ್ ಗೇಟ್ ಮುಖಾಂತರ ಜಲಾಶಯದ ಡೆಡ್ ಸ್ಟೋರೇಜ್ ನೀರನ್ನು ಸೂಳೆಕೆರೆ ಹಳ್ಳಕ್ಕೆ ಮಾರ್ಚ್ 28 ರಿಂದ ಏಪ್ರಿಲ್ 3 ರವರೆಗೆ ಪ್ರತಿದಿನ 20 ಕ್ಯೂಸೆಕ್ಸ್ಗಳಲ್ಲಿ ಜನ-ಜಾನುವಾರು ಪಕ್ಷಿಗಳಿಗೆ ಕುಡಿಯುವ ನೀರು ಒದಗಿಸಲು ಹಾಗೂ ಅಕ್ಕಪಕ್ಕದ ಗ್ರಾಮಗಳ ಕುಡಿಯುವ ನೀರಿನ ಉದ್ದೇಶಕ್ಕೆ ಬಿಡಲಾಗುತ್ತಿದೆ.
ಈ ವೇಳೆ ಹಳ್ಳಕ್ಕೆ ದನ ಕರಗಳನ್ನು ಇಳಿಸುವುದಾಗಲಿ, ಪಂಪ್ಸೆಟ್ಗಳಿಂದ ನೀರೆತ್ತುವುದುನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಕನೀನಿನಿ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ
ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.
ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಇದೇ 30 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಇದೇ ವೇಳೆ ಬಿಹಾರದಲ್ಲಿ ನಾಮಪತ್ರ ಸಲ್ಲಿಕೆಗೆ ನಾಳೆ ಕಡೆ ದಿನವಾಗಿದ್ದು, ಈ ತಿಂಗಳ 30 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 2ರಂದು ನಾಮತ್ರ ಹಿಂಪಡೆಯುವಿಕೆಗೆ ಕೊನೆಯ ದಿನವಾಗಿರುತ್ತದೆ.
ಏಪ್ರಿಲ್ 19 ರಂದು 17 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಅದರಂತೆ ತಮಿಳುನಾಡಿನಲ್ಲಿ 39, ರಾಜಸ್ಥಾನದಲ್ಲಿ 12, ಉತ್ತರ ಪ್ರದೇಶದಲ್ಲಿ 8, ಮಧ್ಯಪ್ರದೇಶದಲ್ಲಿ 6, ಉತ್ತರಾಖಂಡ, ಅಸ್ಸಾಂ ಮತ್ತು ಮಹಾರಾಷ್ಟ್ರದಲ್ಲಿ ತಲಾ 5 , ಬಿಹಾರದಲ್ಲಿ 4, ಪಶ್ಚಿಮ ಬಂಗಾಳದಲ್ಲಿ 3, ಅರುಣಾಚಲ ಪ್ರದೇಶ, ಮಣಿಪುರ, ಮೆಘಾಲಯದಲ್ಲಿ ತಲಾ 2 ಮತ್ತು ಛತ್ತೀಸ್ಗಢ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರ, ಅಂಡಮಾನ್-ನಿಕೋಬಾರ್ ದ್ವೀಪಗಳು, ಜಮ್ಮು-ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ತಲಾ ಒಂದು ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.
ಎರಡನೇ ಹಂತದಲ್ಲಿ 89 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ನಾಳೆ ಅಧಿಸೂಚನೆ ಹೊರಡಿಸಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ
ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆಗೆ ಸದಸ್ಯರನ್ನು ಆಯ್ಕೆ ಮಾಡಲು ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಭಾರತ ಚುನಾವಣಾ ಆಯೋಗ, ಸಕಲ ಸಿದ್ಧತೆಯೊಂದಿಗೆ ಸಜ್ಜಾಗಿದೆ.
ದೇಶದಲ್ಲಿ ಚುನಾವಣೆಗಳನ್ನು ಪಾರದರ್ಶಕವಾಗಿ ಹಾಗೂ ಅತ್ಯಂತ ವಿಶ್ವಾಸಾರ್ಹ ರೀತಿಯಲ್ಲಿ ನಡೆಸುವ ಸಂಕಲ್ಪದೊಂದಿಗೆ ಚುನಾವಣಾ ಆಯೋಗ, ಸಮಸ್ತ ಚುನಾವಣಾ ಪ್ರಕ್ರಿಯೆಗಳನ್ನು ಸುಗಮಗೊಳಿಸಲು ತಂತ್ರಜ್ಞಾನದ ನೆರವನ್ನು ಬಳಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಮತದಾರರು, ಚುನಾವಣಾ ಸಿಬ್ಬಂದಿ ಹಾಗೂ ಆಯೋಗಕ್ಕೆ ನೆರವಾಗುವ ಹಲವು ಆಪ್ಗಳನ್ನು ಚುನಾವಣಾ ಆಯೋಗ ಅಭಿವೃದ್ಧಿಪಡಿಸಿದೆ.
ಈ ಪೈಕಿ ಇಂದು ಸಿ-ವಿಜಿಲ್ ಆಪ್ ಬಗ್ಗೆ ಮಾಹಿತಿ.
ದೇಶದಲ್ಲಿ ಚುನಾವಣೆಗಳ ವೇಳೆ ನಡೆಯುವ ಅಕ್ರಮಗಳು, ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಪ್ರಕರಣಗಳ ಮೇಲೆ ಕಣ್ಣಿಡುವುದು ಕೇವಲ ಚುನಾವಣಾ ಸಿಬ್ಬಂದಿಯ ಕೆಲಸವಲ್ಲ. ಇದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಹೌದು. ಹಾಗಾಗಿ ಚುನಾವಣಾ ಅಕ್ರಮಗಳ ಬಗ್ಗೆ ಸಾರ್ವಜನಿಕರು ಆಯೋಗಕ್ಕೆ ದೂರು ತಲುಪಿಸಲು ಭಾರತ ಚುನಾವಣಾ ಆಯೋಗ ಸಿ-ವಿಜಿಲ್ ಆಪ್ ಅನ್ನು ಅಭಿವೃದ್ಧಿ ಪಡಿಸಿದೆ.
ದೂರುಗಳನ್ನು ಆನ್ಲೈನ್ ಮೂಲಕ ಆಯೋಗಕ್ಕೆ ರವಾನಿಸಲು ಈ ಆಪ್ ನೆರವಾಗುವುದು. ಯಾವುದೇ ಚುನಾವಣಾ ಅಕ್ರಮಗಳ ಬಗ್ಗೆ ಧ್ವನಿಮುದ್ರಣ, ವಿಡಿಯೋ ಚಿತ್ರದ ತುಣುಕುಗಳು ಮತ್ತು ಫೋಟೊ ಮೊದಲಾದ ದಾಖಲೆಗಳನ್ನು ಸಾರ್ವಜನಿಕರು ಇದರ ಮೂಲಕ ಕಳುಹಿಸಬಹುದು.
ಚುನಾವಣೆಗಳಲ್ಲಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಮಾಡುವ ಖರ್ಚು-ವೆಚ್ಚ, ಮತದಾರರ ಮನವೊಲಿಕೆಗೆ ಆಮಿಷಗಳ ಬಳಕೆ ಮೊದಲಾದ ಅಕ್ರಮಗಳ ಬಗ್ಗೆ ದೂರು ನೀಡಲು ಇದನ್ನು ಬಳಸಬಹುದು. ಒಂದುನೂರು ನಿಮಿಷಗಳಲ್ಲಿ ಚುನಾವಣಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುತ್ತಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.
ದೇಶದ ಯಾವ ಮೂಲೆಯಲ್ಲೇ ಆಗಲಿ ನಡೆಯುವ ಚುನಾವಣಾ ಅಕ್ರಮ ಅಥವಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ತಾವು ನೀಡಿದ ದೂರುಗಳನ್ನು ಆಯೋಗ ಪರಿಗಣಿಸಿದೆಯೇ ಎನ್ನುವ ವಿವರಗಳನ್ನು ಸಹ ಸಾರ್ವಜನಿಕರು ಸಿ-ವಿಜಿಲ್-ಆಪ್ ಮೂಲಕ ವೀಕ್ಷಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ನಾಯಕನ ಹಟ್ಟಿ | ಶ್ರೀಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ವಿಶೇಷ ಬಸ್ ಸೌಲಭ್ಯ
-
ದಿನದ ಸುದ್ದಿ6 days ago
ಲೋಕಸಭಾ ಚುನಾವಣೆ : ಚುನಾವಣಾ ಚಟುವಟಿಕೆಗಳ ಕುರಿತ ಜಿಲ್ಲಾವಾರು ಮಾಹಿತಿ
-
ದಿನದ ಸುದ್ದಿ6 days ago
ವಿಜಯಪುರ ಜಿಲ್ಲಾ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಮೈಬೂಬಸಾಹೇಬ.ವೈ.ಜೆ ಆಯ್ಕೆ
-
ದಿನದ ಸುದ್ದಿ6 days ago
ಬೆಂಗಳೂರಿನಲ್ಲಿ ಬಿಜೆಪಿ ನೂತನ ಮಾಧ್ಯಮಕೇಂದ್ರ ಆರಂಭ
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ | ಹೊಸ ಮತದಾರರೆಷ್ಟು ಗೊತ್ತಾ..?
-
ದಿನದ ಸುದ್ದಿ5 days ago
ಕವಿತೆ | ನೆನಪು
-
ದಿನದ ಸುದ್ದಿ3 days ago
ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ
-
ದಿನದ ಸುದ್ದಿ2 days ago
ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ