ದಿನದ ಸುದ್ದಿ
ಟ್ರೋಲ್ ಹೆಸರಲ್ಲಿ ಎಲ್ಲವೂ “ತಮಾಷಾ” ಆಗಿ ಮುಗಿಯಬಾರದು..!
- ರಾಜಾರಾಂ ತಲ್ಲೂರು
ಉಡುಪಿಯಲ್ಲಿ ಪ್ರವಾಸೋದ್ಯಮ ಪ್ರೋತ್ಸಾಹಕ್ಕಾಗಿ ರಚಿಸಲಾಗಿರುವ ಖಾಸಗಿ ತೇಲು ಮಂಚವೊಂದು (ಅದು ಬ್ರಿಜ್ ಅಲ್ಲ; ಎಲ್ಲಿಗೂ ಸಂಪರ್ಕ ಕಲ್ಪಿಸುವುದಿಲ್ಲ!!) ಕಳಚಿಕೊಂಡಿದೆ ಮತ್ತು ಈಗ ನಡೆದಿರುವ 40% ಕಮಿಷನ್ ಹೆಸರಲ್ಲಿ ಎರ್ರಾಬಿರ್ರಿ ಟ್ರೋಲ್ ಆಗುತ್ತಿದೆ.
ನಾನು ಅರ್ಥ ಮಾಡಿಕೊಂಡಿರುವಂತೆ ಇದೊಂದು ಖಾಸಗಿ ಪ್ರಯತ್ನವಾಗಿದ್ದು, ಅಲ್ಲಿ ಆ ಚಟುವಟಿಕೆಗೆ ಅವಕಾಶವನ್ನು ಲೀಸ್ ಪಡೆದು ನಿರ್ಮಿಸಲಾಗಿರುವ ತೇಲುಮಂಚ. ಕರ್ನಾಟಕದ ಕರಾವಳಿಯ ಮಟ್ಟಿಗೆ ಅದು ಹೊಸಬಗೆಯ ಪ್ರಯತ್ನ ಆಗಿರುವುದರಿಂದ ಅದು ಅಲ್ಲಿ ಬರಲು ಕಾರಣರಾದವರೆಲ್ಲ ಅದರ ಉದ್ಘಾಟನೆಯ ವೇಳೆ ಕ್ರೆಡಿಟ್ ತೆಗೆದುಕೊಂಡದ್ದು ಸತ್ಯ. ಇದರಲ್ಲಿ ಸ್ಥಳೀಯ ಬೀಚ್ ಅಭಿವೃದ್ಧಿ ಸಮಿತಿ, ಜಿಲ್ಲಾಡಳಿತ, ಜನಪ್ರತಿನಿಧಿಗಳು, ಮಾಧ್ಯಮ ಎಲ್ಲರದೂ ಪಾಲಿದೆ. ಇದರಲ್ಲಿ ತಪ್ಪೇನಿಲ್ಲ.
ಈಗ ಆ ತೇಲುಮಂಚ ಎಲ್ಲೋ ದೂರದಲ್ಲಿ ಬೀಸುತ್ತಿರುವ ತೂಪಾನಿನ ಪ್ರಭಾವದಿಂದಾಗಿ ಎದ್ದ ಅಲೆಗಳಿಗೆ ಬಲಿಯಾಗಿದೆ ಅಥವಾ ಅದರ ಲೀಸ್ ಹೋಲ್ಡರ್ ಮಾಧ್ಯಮಗಳಿಗೆ ತಿಳಿಸಿರುವಂತೆ ಅದನ್ನು ಡಿಸ್ಮ್ಯಾಂಟಲ್ ಮಾಡಲಾಗಿದೆ.
ಅದೇನೇ ಇರಲಿ. ಈ ಸಂಗತಿಯನ್ನು ರಾಜಕೀಯವಾಗಿ ಟ್ರೋಲ್ ಮಾಡಲು ಹೊರಟಾಗ, ಸಹಜವಾಗಿಯೇ ಪಕ್ಷರಾಜಕೀಯ, ಟ್ರೋಲ್ ಸೇನೆ, ಭಕ್ತಸೇನೆಗಳೆಲ್ಲ ಜಮಾಯಿಸಿ, ಕೇಳಲೇ ಬೇಕಾದ ಮೂಲ ಸಂಗತಿಗಳು ಅಡಿ ಬೀಳುತ್ತವೆ. ನಮ್ಮ ಮಾಧ್ಯಮಗಳು ಕೂಡ ತಳಕ್ಕಿಳಿದು ನೋಡುವ ಬದಲು ಟ್ರೋಲ್ಗಳನ್ನಾಧರಿಸಿ ಸುದ್ದಿ ಮಾಡುತ್ತಿರುವುದರಿಂದಾಗಿ ಈ “ಪ್ರಕರಣ”ದ ಮಹತ್ವವೇ ಮುಕ್ಕಾದಂತಾಗಿದೆ. ಈ ಪ್ರಕರಣದಲ್ಲಿ ಕೇಳಬೇಕಾಗಿರುವ ಪ್ರಶ್ನೆಗಳಿವು. ಜಿಲ್ಲಾಡಳಿತ, ಬೀಚ್ ಸಮಿತಿ ಮತ್ತು ಸ್ಥಳೀಯ ಜನಪ್ರತಿನಿಧಿಗಳು ಇದಕ್ಕೆ ಉತ್ತರ ನೀಡಲು ಬಾಧ್ಯಸ್ಥರು.
- ಈ ತೇಲುಮಂಚವನ್ನು ಸಾರ್ವಜನಿಕರಿಗೆ ಬಳಕೆಗೆ ತೆರೆಯುವ ಮುನ್ನ ಎಷ್ಟು ಸಮಯ ಪ್ರಾಯೋಗಿಕವಾಗಿ ಬಳಸಿ, ಅದರ ಅಪಾಯ ಸಾಧ್ಯತೆಗಳನ್ನು ಪರೀಕ್ಷಿಸಲಾಗಿದೆ?
- ತೇಲುಮಂಚ ಉದ್ಘಾಟನೆಯ ವೇಳೆಯಲ್ಲಿ, ಅಲ್ಲಿ ಹತ್ತಾರು ಮಂದಿ ಜೀವರಕ್ಷಕರಿರುತ್ತಾ, ಸ್ಥಳೀಯ ಶಾಸಕರು ಅಕಸ್ಮಾತ್ ಉರುಳಿಬಿದ್ದ ವೀಡಿಯೊ ಒಂದು ವೈರಲ್ ಆಗಿತ್ತು. ಈ ಘಟನೆ ಆದ ಬಳಿಕವೂ ಸೂಕ್ತ ಮುಂಜಾಗ್ರತೆಗಳಿಲ್ಲದೆ ಆ ತೇಲುಮಂಚವನ್ನು ಯಾಕೆ ಸಾರ್ವಜನಿಕರಿಗೆ ತೆರೆಯಲಾಯಿತು?
- ಈ ತೇಲುಮಂಚ ನಿರ್ಮಾಣಕ್ಕೆ ಮಾಡಿಕೊಳ್ಳಲಾಗಿರುವ ಲೀಸ್ ಒಪ್ಪಂದದಲ್ಲಿ ಅಪಾಯ ಸಂಭಾವ್ಯತೆಗಳ ಬಗ್ಗೆ ಏನು ಷರತ್ತುಗಳಿವೆ?
- ಸ್ಥಳೀಯ ಸಮುದ್ರದ ಗುಣ, ಹವಾಮಾನಗಳನ್ನಾಧರಿಸಿ ಇಲ್ಲಿ ಆ ರೀತಿಯ ತೇಲುಮಂಚ ನಿರ್ಮಾಣ ಸಾಧುವೇ? ಎಂಬ ಬಗ್ಗೆ ಅಧ್ಯಯನವೇನಾದರೂ ನಡೆದಿದೆಯೆ? ಅದರ ವಿವರಗಳಿದ್ದರೆ ಕೊಡಿ.
- ಹಣ ತೆತ್ತು ತೇಲುಮಂಚಕ್ಕೆ ತೆರಳುವ ಪ್ರವಾಸಿಗರಿಗೆ ಸುರಕ್ಷಾ ಕವಚಗಳಿವೆಯೆ (ಕೆಲವು ವೀಡೀಯೊಗಳಲ್ಲಿ ಕವಚಗಳಿಲ್ಲದ ಪ್ರವಾಸಿಗರನ್ನು ಕಂಡಿದ್ದೇನೆ)? ವಿಮೆ ಅಥವಾ ಬೇರೆ ರಕ್ಷಣೆಗಳಿವೆಯೆ?
- ಈ ರೀತಿಯ ಪ್ರವಾಸೋದ್ಯಮ ಸಂಬಂಧಿ ಚಟುವಟಿಕೆಗಳಿಗೆ ಅಲ್ಲಿ ಯಾರು ಕೂಡಾ ಲೀಸ್ ಪಡೆಯಬಹುದೆ? ಅದಕ್ಕೆ ಮಾನದಂಡಗಳೇನು? ಅರ್ಹತೆಗಳೇನು? ಅವರ ಜವಾಬ್ದಾರಿಗಳೇನು? ಲೀಸ್ ಕೊಡುವವರು ಯಾರು? ಇಲ್ಲಿ ಜಿಲ್ಲಾಡಳಿತದ ಹೊಣೆ ಏನು?
ಸಂಬಂಧಿತರು ಸಾರ್ವಜನಿಕರಿಗೆ ಉತ್ತರ ನೀಡುತ್ತಾರೆಂದು ಭಾವಿಸೋಣವೆ?
(ರಾಜಾರಾಂ ತಲ್ಲೂರು ಅವರ ಫೇಸ್ಬುಕ್ ಬರಹ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಾವಿನಲ್ಲೂ ಒಂದಾದ ಪ್ರೇಮಿಗಳು: ಪ್ರೇಮಿಯ ಪಕ್ಕದಲ್ಲೇ ಪ್ರೇಯಸಿಯ ಅಂತ್ಯಸಂಸ್ಕಾರ!
ಸುದ್ದಿದಿನ,ಕುಂಬಳೆ: ಪ್ರೀತಿ ಎನ್ನುವುದು ಸಾವಿನ ನಂತರವೂ ಶಾಶ್ವತ ಎಂಬುದಕ್ಕೆ ಕೇರಳದ ಕಾಸರಗೋಡಿನಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ನಿಶ್ಚಿತಾರ್ಥವಾಗಿದ್ದ ಯುವಕ ಮೃತಪಟ್ಟ ಬೆನ್ನಲ್ಲೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಯುವತಿಯ ಅಂತ್ಯಸಂಸ್ಕಾರವನ್ನು ಆಕೆಯ ಇಚ್ಛೆಯಂತೆ ಯುವಕನ ಸಮಾಧಿಯ ಪಕ್ಕದಲ್ಲೇ ನೆರವೇರಿಸಲಾಗಿದೆ.
ನಡೆದಿದ್ದೇನು?
ಕಿದೂರು ಕುಂಟಂಗೇರಡ್ಕದ ಪ್ರಫುಲ್ಲ (26) ಮತ್ತು ತಮಿಳುನಾಡು ನಿವಾಸಿಯಾದ ಬ್ಯಾಂಕ್ ನೌಕರ ಮಣಿ ಎಂಬವರಿಗೆ ನಾಲ್ಕು ತಿಂಗಳ ಹಿಂದೆ ಅದ್ಧೂರಿಯಾಗಿ ಮದುವೆ ನಿಶ್ಚಿತಾರ್ಥ ನಡೆದಿತ್ತು. ಇನ್ನೇನು ದಾಂಪತ್ಯ ಜೀವನಕ್ಕೆ ಕಾಲಿಡಬೇಕು ಎನ್ನುವಷ್ಟರಲ್ಲಿ, ಒಂದು ತಿಂಗಳ ಹಿಂದೆ ಸಂಭವಿಸಿದ ಬೈಕ್ ಅಪಘಾತದಲ್ಲಿ ಮಣಿ ಮೃತಪಟ್ಟಿದ್ದರು.
ಡೆತ್ ನೋಟ್ನಲ್ಲಿತ್ತು ಕೊನೆಯ ಆಸೆ
ತನ್ನ ಭಾವಿ ಪತಿಯ ಅಗಲಿಕೆಯಿಂದ ತೀವ್ರವಾಗಿ ನೊಂದಿದ್ದ ಪ್ರಫುಲ್ಲ, ಕಳೆದ ಭಾನುವಾರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾವಿಗೂ ಮುನ್ನ ಆಕೆ ಬರೆದಿದ್ದ ಡೆತ್ ನೋಟ್ ಎಲ್ಲರ ಕಣ್ಣಾಲಿಗಳನ್ನು ಒದ್ದೆ ಮಾಡಿದೆ. “ನನ್ನ ಮೃತದೇಹವನ್ನು ಮಣಿಯ ಸಮಾಧಿಯ ಸಮೀಪದಲ್ಲೇ ಅಂತ್ಯಸಂಸ್ಕಾರ ಮಾಡಬೇಕು” ಎಂದು ಆಕೆ ತನ್ನ ಕೊನೆಯ ಆಸೆಯನ್ನು ಬರೆದಿಟ್ಟಿದ್ದರು.
ತಮಿಳುನಾಡಿನಲ್ಲಿ ಅಂತ್ಯಕ್ರಿಯೆ
ಯುವತಿಯ ಆಸೆಯಂತೆ ಉಭಯ ಕುಟುಂಬದವರು ಮಾತುಕತೆ ನಡೆಸಿದರು. ಅದರಂತೆ ನಿನ್ನೆ ಕಾಸರಗೋಡಿನಿಂದ ಪ್ರಫುಲ್ಲರ ಮೃತದೇಹವನ್ನು ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ವಳ್ಳಿಯೂರು ಎಂಬಲ್ಲಿಗೆ ಕೊಂಡೊಯ್ಯಲಾಯಿತು. ಅಲ್ಲಿ ಮಣಿಯ ಸಮಾಧಿಯ ಪಕ್ಕದಲ್ಲೇ ಪ್ರಫುಲ್ಲರ ಅಂತ್ಯಸಂಸ್ಕಾರವನ್ನು ನೆರವೇರಿಸುವ ಮೂಲಕ ಪ್ರೇಮಿಗಳಿಬ್ಬರನ್ನು ಸಾವಿನಲ್ಲೂ ಒಂದಾಗಿಸಲಾಯಿತು.
ಅಂತ್ಯಸಂಸ್ಕಾರದ ವೇಳೆ ಎರಡೂ ಕುಟುಂಬದ ಸದಸ್ಯರು ಉಪಸ್ಥಿತರಿದ್ದು, ಮರುಗುವ ಪ್ರೇಮಕಥೆಗೆ ಕಂಬನಿಯ ವಿದಾಯ ಹೇಳಿದರು. ಈ ವಿಡಿಯೋ ಮತ್ತು ಸುದ್ದಿ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ನೆಟ್ಟಿಗರು ಈ ಜೋಡಿಯ ಆತ್ಮಕ್ಕೆ ಶಾಂತಿ ಕೋರುತ್ತಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ ಡಿಪ್ಲೋಮಾ ಕೋರ್ಸ್; ಪ್ರವೇಶಾತಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ: 2026-27ನೇ ಶೈಕ್ಷಣಿಕ ಸಾಲಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿನ ಮೂರು ವರ್ಷಗಳ ಡಿಪ್ಲೋಮಾ (ಡಿ.ಹೆಚ್.ಟಿ.ಟಿ) ಹಾಗೂ ಎರಡನೇ ವರ್ಷದ ನೇರ ಪ್ರವೇಶಕ್ಕೆ (Lateral Entry) ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ 2026 ರ ಜುಲೈ 01ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 23 ವರ್ಷ ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 25 ವರ್ಷ ಮೀರಿರಬಾರದು. ಒಟ್ಟು 39 ಅಭ್ಯರ್ಥಿಗಳನ್ನು (ಪುರುಷ ಮತ್ತು ಮಹಿಳಾ) ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಪ್ರತಿಯೊಬ್ಬ ವಿದ್ಯಾರ್ಥಿಗೆ ಪ್ರತಿ ತಿಂಗಳು ರೂ. 2,500/- ಗಳ ಶಿಷ್ಯವೇತನ ನೀಡಲಾಗುವುದು., ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲಿಷ್ ಅನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು.
ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಡಿಪ್ಲೋಮಾ ಕೋರ್ಸ್ಗೆ ನೇರ ಪ್ರವೇಶಕ್ಕೆ https://khtigadag.ac.in/
ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿಗಳಿಗಾಗಿ ಉಪ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ಕಾಲೇಜು ರಸ್ತೆ, ನಿಟ್ಟುವಳ್ಳಿ, ದಾವಣಗೆರೆ ಅಥವಾ ದೂರವಾಣಿ ಸಂಖ್ಯೆ: 08192-262362 ಸಂಪರ್ಕಿಸುವಂತೆ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದಿನದ ಸುದ್ದಿ
ದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ
ಸುದ್ದಿದಿನ,ದಾವಣಗೆರೆ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಬರುತ್ತದೆ ಎಂಬುದಾಗಿ ಉಪನ್ಯಾಸಕರೊಬ್ಬರಿಗೆ ಆಮಿಷ ತೋರಿಸಿದ ದುಷ್ಕರ್ಮಿಗಳು 14 ಲಕ್ಷ ರೂಪಾಯಿ ವಂಚಿಸಿರುವ ಘಟನೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ದಾವಣಗೆರೆಯ ಭೂಮಿಕಾ ನಗರದ ನಿವಾಸಿಯಾಗಿರುವ 52 ವರ್ಷದ ಸರ್ಕಾರಿ ಕಾಲೇಜಿನ ಉಪನ್ಯಾಸಕ ಹಣ ಕಳೆದುಕೊಂಡಿದ್ದಾರೆ.
ಉಪನ್ಯಾಸಕರು ಮೊದಲಿಗೆ ಟೆಲಿಗ್ರಾಂ ಮೂಲಕ ಲಿಂಕ್ ಕ್ಲಿಕ್ ಮಾಡಿದ್ದಾರೆ. ಅಲ್ಲಿ ವಂಚಕರು ಹೇಳಿದಂತೆ ಹಲವು ಲಿಂಕ್ಗಳನ್ನು ಕ್ಲಿಕ್ ಮಾಡುತ್ತಾ ಹೋಗಿದ್ದು, ಹಂತಹಂತವಾಗಿ ಹಣ ಕಳೆದುಕೊಂಡಿದ್ದಾರೆ.
ಲಾಭದ ನಿರೀಕ್ಷೆಯಲ್ಲಿದ್ದ ಉಪನ್ಯಾಸಕರಿಗೆ ಲಾಭ ಹೋಗಲಿ, ಅಸಲೂ ಬಾರದ ಕಾರಣ ಅನುಮಾನಗೊಂಡು ತಾನು ಹಣ ಕಳೆದುಕೊಂಡಿರುವುದು ದೃಢಪಟ್ಟಿದೆ. ನಂತರ ಸೈಬರ್ ಠಾಣೆಗೆ ತೆರಳಿ ಪ್ರಕರಣ ದಾಖಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ2 days ago2.5 ಕೋಟಿ ಖರೀದಿಯಲ್ಲಿ ಅವ್ಯವಹಾರ ; ಆಯುಕ್ತೆ ಮಂಜುಶ್ರೀ ಸೇರಿ 6 ಅಧಿಕಾರಿಗಳ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ6 days agoದಾವಣಗೆರೆ | ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬೆಂಕಿ ರಹಿತ ಕುಕಿಂಗ್ ಕಾರ್ಯಕ್ರಮ
-
ದಿನದ ಸುದ್ದಿ6 days agoಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ
-
ದಿನದ ಸುದ್ದಿ2 days agoದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸಮಾರೋಪ ಸಮಾರಂಭ
-
ದಿನದ ಸುದ್ದಿ6 days agoಸಂಶೋಧಕರಿಂದ ಪಶ್ಚಿಮ ಘಟ್ಟಗಳಲ್ಲಿ ಮೂರು ಅಣಬೆಯ ಹೊಸ ಶಿಲೀಂಧ್ರ ಜಾತಿಗಳ ಪತ್ತೆ
-
ಕ್ರೀಡೆ6 days agoಹಿರಿಯ ಕ್ರಿಕೆಟ್ ಪಟು ಎನ್ಆರ್ಎಚ್ ರಮೇಶ್ ನಿಧನ
-
ಅಂಕಣ1 day agoಪ್ರಜಾಪ್ರಭುತ್ವ: ಸಮಾನತೆ, ಸಾಮಾಜಿಕ ನ್ಯಾಯ ಮತ್ತು ನೈತಿಕ ಹೊಣೆಗಾರಿಕೆ
-
ದಿನದ ಸುದ್ದಿ1 day agoದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ

