ದಿನದ ಸುದ್ದಿ
ಕೇಂದ್ರ ಬಜೆಟ್ | ಕೆಲವು ಕುತೂಹಲಕರ ಅಂಕಿಅಂಶಗಳು ಮತ್ತು ನಮ್ಮ ದೇಶದ ರಿಪೋರ್ಟ್ ಕಾರ್ಡ್..!
- ವಿವೇಕಾನಂದ. ಹೆಚ್. ಕೆ
ಇದು ಪಕ್ಷಾತೀವಾಗಿ ದೇಶದ ವಾಸ್ತವ ಪರಿಸ್ಥಿತಿ.
ಭಾರತ ಸರ್ಕಾರದ ಬಳಿ ಇರುವ ಚಿನ್ನದ ಸಂಗ್ರಹ ಸುಮಾರು 600 ಟನ್.ಅಮೆರಿಕ ಸರ್ಕಾರದ ಬಳಿ ಇರುವ ಚಿನ್ನದ ಸಂಗ್ರಹ ಸುಮಾರು 6000 ಟನ್.
ಭಾರತ ಇಲ್ಲಿಯವರೆಗೆ ಒಲಿಂಪಿಕ್ಸ್ ಕ್ರೀಡೆಗಳಲ್ಲಿ ಗೆದ್ದ ಒಟ್ಟು ಪದಕಗಳು ಸುಮಾರು 28.ಅಮೆರಿಕ ಗೆದ್ದ ಒಟ್ಟು ಪದಕಗಳು ಸುಮಾರು 2250.
ಭಾರತದ ಒಟ್ಟು ಬಜೆಟ್ ಗಾತ್ರ ಸುಮಾರು 30 ಲಕ್ಷ ಕೋಟಿ.ಅಮೆರಿಕದ ಬಜೆಟ್ ಗಾತ್ರ ಸುಮಾರು 375 ಲಕ್ಷ ಕೋಟಿ.ವಿಶ್ವದ ಎರಡನೇ ಅತಿದೊಡ್ಡ ಆರ್ಥಿಕತೆ ಚೀನಾದ ಬಜೆಟ್ ಸುಮಾರು 100 ಲಕ್ಷ ಕೋಟಿ.ಅಮೆರಿಕದ ರಕ್ಷಣಾ ಬಜೆಟ್ ಸುಮಾರು 150 ಲಕ್ಷ ಕೋಟಿ.ಭಾರತದ ರಕ್ಷಣಾ ಬಜೆಟ್ ಸುಮಾರು 6/8 ಲಕ್ಷ ಕೋಟಿ.
ಭಾರತದ ಜನಸಂಖ್ಯೆ ಸುಮಾರು 128 ಕೋಟಿ.
ಅಮೆರಿಕದ ಜನಸಂಖ್ಯೆ ಸುಮಾರು 32 ಕೋಟಿ.
ವಿಸ್ತೀರ್ಣದಲ್ಲಿಯೂ ಅಮೆರಿಕ ಭಾರತಕ್ಕಿಂತ ಬಹಳ ದೊಡ್ಡದಾಗಿದೆ.ತಲಾ ಆದಾಯದ ವ್ಯತ್ಯಾಸವಂತೂ ಅಜಗಜಾಂತರವಿದೆ.ಭಾರತದ ನಿಜವಾದ ಆದಾಯ 22 ಲಕ್ಷ ಕೋಟಿಗಳು ಮಾತ್ರ. ಉಳಿದ 8 ಲಕ್ಷ ಸಾಲ ಮತ್ತು ಇತರ ಮೂಲಗಳು.ಅಂದರೆ ನಮ್ಮ ಈಗಿನ ಸ್ಥಿತಿ ಮತ್ತು ಸಾಗಬೇಕಾದ ಹಾದಿಯ ಒಂದು ಕಲ್ಪನೆ ಮಾಡಿಕೊಳ್ಳಿ.
ಇಲ್ಲಿ ಇನ್ನೂ ಒಂದು ಮುಖ್ಯ ವಿಷಯವಿದೆ. ಅಮೆರಿಕ ಬಜೆಟ್ ನ ಬಹುಪಾಲು ಸದುಪಯೋಗವಾಗುತ್ತದೆ. ಆದರೆ ನಮ್ಮ ದೇಶದಲ್ಲಿ ಭ್ರಷ್ಟಾಚಾರ ತುಂಬಾ ಇರುವುದರಿಂದ ಇರುವ ಹಣದ ಬಹುಪಾಲು ದುರುಪಯೋಗವಾಗುತ್ತದೆ ಅಥವಾ ವ್ಯರ್ಥವಾಗುತ್ತದೆ. ಇದು ಮತ್ತೊಂದು ಹೊಡೆತ.
ಬಜೆಟ್ ಗಳು ಮತ್ತು ನಮ್ಮ ದೇಶದ ಅಭಿವೃದ್ಧಿ
ಭಾರತದ ಎಲ್ಲಾ ರಾಜ್ಯಗಳು ಮತ್ತು ಕೇಂದ್ರ ಸರ್ಕಾರಗಳು ಸ್ವಾತಂತ್ರ್ಯ ನಂತರ ಇಲ್ಲಿಯವರೆಗೂ ಸುಮಾರು 70 ಕ್ಕಿಂತ ಹೆಚ್ಚು ವಾರ್ಷಿಕ ಬಜೆಟ್ ಗಳನ್ನು ಮಂಡಿಸಿವೆ. ಪಂಚವಾರ್ಷಿಕ ಯೋಜನೆಗಳು ಮತ್ತು ಅದನ್ನು ಮೇಲ್ವಿಚಾರಣೆ ಮಾಡುವ ನೀತಿ ಆಯೋಗ ಸಹ ಇದೆ. ಅಪಾರ ಪ್ರಮಾಣದ ಎಲ್ಲಾ ದರ್ಜೆಯ ಆಡಳಿತ ಯಂತ್ರ ಸಹ ಕೆಲಸ ಮಾಡುತ್ತಲೇ ಇದೆ.
ಯಾವ ಸರ್ಕಾರಗಳು ಸಹ ಸಾಮಾನ್ಯವಾಗಿ ಜನರಿಗೆ ತೊಂದರೆ ಕೊಡುವ ಅಥವಾ ಜನರನ್ನು ನಾಶ ಮಾಡುವ ಯೋಜನೆಗಳನ್ನು ರೂಪಿಸುವುದಿಲ್ಲ. ಬಹಳ ಜನರಿಗೆ ಒಳ್ಳೆಯದಾಗಲಿ ಎಂಬ ಆಶಯವನ್ನೇ ಹೊಂದಿರುತ್ತವೆ.
1950 ಮತ್ತು 2020 ರ ನಡುವೆ ಭಾರತದ ಅಭಿವೃದ್ಧಿ ಸುಮಾರಾಗಿ ಆಗಿದೆ. ವಿಶ್ವ ಸಮುದಾಯ ಕೂಡಾ ತಂತ್ರಜ್ಞಾನದ ಸಹಾಯದಿಂದ ಪ್ರಗತಿಯ ಪಥದಲ್ಲಿದೆ.
ಭಾರತದ ಮಟ್ಟಿಗೆ ಅಭಿವೃದ್ಧಿ ಸಮಾನಾಂತರವಾಗಿಲ್ಲ ಮತ್ತು ಸಮಾಧಾನಕರವಾಗಿಲ್ಲ. ದೇಶದ ಶೇಕಡಾ 50% ಗೂ ಹೆಚ್ಚು ಜನ ತಾವು ಇಷ್ಟಪಟ್ಟ ದೈನಂದಿನ ಊಟ ಬಟ್ಟೆ ವಾಸ ಮಕ್ಕಳ ಯೋಗಕ್ಷೇಮ ಮತ್ತು ಸಾಧಾರಣ ಆರೋಗ್ಯ ವ್ಯವಸ್ಥೆ ಮಾಡಿಕೊಳ್ಳಲು ಇನ್ನೂ ಸಾಧ್ಯವಾಗಿಲ್ಲ.
ಇದನ್ನು ನಾವು ಪಕ್ಷಾತೀತವಾಗಿ ಮತ್ತು ನಿಷ್ಪಕ್ಷಪಾತವಾಗಿ ಭಾರತದ ನಿಜವಾದ ಹಿತಾಸಕ್ತಿಯಿಂದ ನೋಡಬೇಕು. ಯಾವುದೋ ಪಕ್ಷದ ವಕ್ತಾರರಂತೆ ಒಬ್ಬರಿಗೊಬ್ಬರು ಆಪಾದನೆ ಮಾಡುತ್ತಾ ಕೆಸರೆರಚಾಟ ಮಾಡಿದರೆ ಸತ್ಯ ಮತ್ತು ವಾಸ್ತವ ಮರೆಯಾಗಿ ಕೇವಲ ಒಣ ಚರ್ಚೆ ಮತ್ತು ಅಂಕಿಅಂಶಗಳು ಮಹತ್ವ ಪಡೆಯುತ್ತವೆ.
ಸರ್ಕಾರ ಘೋಷಿಸುವ ಯಾವುದೇ ಯೋಜನೆಗಳು ಜಾರಿಯಾಗುವುದು ನಮ್ಮ ಸರ್ಕಾರಿ ಆಡಳಿತ ಯಂತ್ರದ ಮುಖಾಂತರ. ಅದು ಈಗಾಗಲೇ ಕಿಲುಬು ಹಿಡಿದಿದೆ. ಅದನ್ನು ಸರಿ ಮಾಡದೆ ಯಾವ ಯೋಜನೆ ಘೋಷಿಸಿದರು ಸಂಪೂರ್ಣ ಉಪಯೋಗ ಆಗುವುದಿಲ್ಲ. ಅದನ್ನು ಸರಿ ದಾರಿಗೆ ತರಲು ರಾಜಕಾರಣಿಗಳು ಹೆಚ್ಚಿನ ಮಹತ್ವ ನೀಡುತ್ತಿಲ್ಲ.
ಇಲ್ಲಿ ಇನ್ನೊಂದು ಆಶ್ಚರ್ಯಕರ ವಿಷಯವಿದೆ. ಆದಾಯ ತೆರಿಗೆ ವಿನಾಯಿತಿ, ವಸ್ತು ಮತ್ತು ಸೇವೆಗಳ ತೆರಿಗೆ ಹೆಚ್ಚಳ, ಸರ್ಕಾರಿ ನೌಕರರ ಸಂಬಳ ಹೆಚ್ಚಳ ಇನ್ನೂ ಮುಂತಾದ ಯೋಜನೆಗಳು ಚಾಚೂ ತಪ್ಪದೆ ಅಥವಾ ಅದಕ್ಕಿಂತ ಹೆಚ್ಚಾಗಿಯೇ ಸಂಪೂರ್ಣ ಜಾರಿಯಾಗುತ್ತದೆ. ಕಾರಣ ಈ ಯೋಜನೆಗಳು ಈಗಾಗಲೇ ವಿದ್ಯಾವಂತರಾಗಿರುವ ಮತ್ತು ವ್ಯವಸ್ಥೆಯ ಮೇಲೆ ನಿಯಂತ್ರಣ ಹೊಂದಿರುವ ಜನಗಳು ಇವುಗಳನ್ನು ಸ್ವತಃ ಅಥವಾ ಮಧ್ಯವರ್ತಿಗಳ ಮುಖಾಂತರ ಜಾರಿಯಾದ ಮಧ್ಯರಾತ್ರಿಯಿಂದಲೇ ಲಾಭ ಪಡೆದುಕೊಳ್ಳುತ್ತಾರೆ.
ಆದರೆ, ಇನ್ನೂ ಕೆಲವು ಯೋಜನೆಗಳು ಇವೆ. ಉದಾಹರಣೆಗೆ ಗರೀಬೀ ಹಠವೋ, ನರೇಗಾ, ಆಹಾರ ಭದ್ರತೆ, ಬೇಟಿ ಬಚಾವೋ ಬೇಟಿ ಪಡಾವೋ , ಸ್ವಚ್ಛ ಭಾರತ್, ಆಯುಷ್ಮಾನ್ ಮುಂತಾದ ಯೋಜನೆಗಳು ಅದರ ನಿಜ ರೂಪದಲ್ಲಿ ಜನರಿಗೆ ತಲುಪುವುದು ತುಂಬಾ ಕಷ್ಟವಿದೆ.
ಜನರಲ್ಲಿ ಇರುವ ಅಜ್ಞಾನ ಬಡತನ ದಾಖಲೆ ಮತ್ತು ಮಾಹಿತಿಯ ಕೊರತೆ, ಭ್ರಷ್ಟಾಚಾರ ಮತ್ತು ಸ್ವಜನ ಪಕ್ಷಪಾತ, ರಾಜಕಾರಣಿಗಳು ಮತ್ತು ಅಧಿಕಾರಿಗಳ ನಿರ್ಲಕ್ಷತನ ಮತ್ತು ಸೋಮಾರಿತನ, ಅಸೂಯೆ ಮುಂತಾದ ಕಾರಣಗಳು ಇವುಗಳನ್ನು ಜಾರಿಯಾಗಲು ಬಿಡುವುದಿಲ್ಲ.
ಪಾರ್ಲಿಮೆಂಟ್ ಅಥವಾ ವಿಧಾನಸೌದದಲ್ಲಿ ಅಂಕಿಅಂಶಗಳ ಸರ್ಕಸ್ ಮಾಡುತ್ತಾ ಬಜೆಟ್ ಮಂಡಿಸುವುದು ಮತ್ತು ಅದರ ಪರ ವಿರೋಧದ ಚರ್ಚೆಗಳಿಗಿಂತ,ಅದರ ಅನುಷ್ಠಾನ ಮತ್ತು ವಾಸ್ತವ ಫಲಿತಾಂಶಗಳ ಬಗ್ಗೆ ಹೆಚ್ಚಿನ ಗಮನ ಹರಿಸಿದರೆ ನಿಜವಾದ ಮತ್ತು ಸಮಾನವಾದ ಅಭಿವೃದ್ಧಿ ಸಾಧ್ಯ. ಇಲ್ಲದಿದ್ದರೆ ಪ್ರತಿ ಸರ್ಕಾರಗಳ ಪ್ರತಿ ಬಜೆಟ್ ಕೇವಲ ಸಾಂಕೇತಿಕ ಶಾಸ್ತ್ರವಾಗುತ್ತದೆ. ಚುನಾವಣಾ ರಾಜಕೀಯದ ನಾಟಕಗಳಾಗುತ್ತವೆ. ಇದು ಎಲ್ಲಾ ಪಕ್ಷಗಳ ಎಲ್ಲಾ ಸರ್ಕಾರಗಳಿಗೂ ಸಮನಾಗಿ ಅನ್ವಯ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಇಂದಿನಿಂದ ಏ.3 ರವರೆಗೆ ಸೂಳೆಕೆರೆಗೆ ನೀರು ಬಿಡುಗಡೆ
ಸುದ್ದಿದಿನ,ದಾವಣಗೆರೆ: ಭದ್ರಾ ಜಲಾಶಯ ಯೋಜನೆ ವ್ಯಾಪ್ತಿಗೆ ಬರುವ ದೇವರಬೆಳಕೆರೆ ಪಿಕ್ಅಪ್ ಅಣೆಕಟ್ಟಿನ ಸ್ಕವರಿಂಗ್ ಸ್ಪೂಯೀಸ್ ಗೇಟ್ ಮುಖಾಂತರ ಜಲಾಶಯದ ಡೆಡ್ ಸ್ಟೋರೇಜ್ ನೀರನ್ನು ಸೂಳೆಕೆರೆ ಹಳ್ಳಕ್ಕೆ ಮಾರ್ಚ್ 28 ರಿಂದ ಏಪ್ರಿಲ್ 3 ರವರೆಗೆ ಪ್ರತಿದಿನ 20 ಕ್ಯೂಸೆಕ್ಸ್ಗಳಲ್ಲಿ ಜನ-ಜಾನುವಾರು ಪಕ್ಷಿಗಳಿಗೆ ಕುಡಿಯುವ ನೀರು ಒದಗಿಸಲು ಹಾಗೂ ಅಕ್ಕಪಕ್ಕದ ಗ್ರಾಮಗಳ ಕುಡಿಯುವ ನೀರಿನ ಉದ್ದೇಶಕ್ಕೆ ಬಿಡಲಾಗುತ್ತಿದೆ.
ಈ ವೇಳೆ ಹಳ್ಳಕ್ಕೆ ದನ ಕರಗಳನ್ನು ಇಳಿಸುವುದಾಗಲಿ, ಪಂಪ್ಸೆಟ್ಗಳಿಂದ ನೀರೆತ್ತುವುದುನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಕನೀನಿನಿ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ
ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.
ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಇದೇ 30 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಇದೇ ವೇಳೆ ಬಿಹಾರದಲ್ಲಿ ನಾಮಪತ್ರ ಸಲ್ಲಿಕೆಗೆ ನಾಳೆ ಕಡೆ ದಿನವಾಗಿದ್ದು, ಈ ತಿಂಗಳ 30 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 2ರಂದು ನಾಮತ್ರ ಹಿಂಪಡೆಯುವಿಕೆಗೆ ಕೊನೆಯ ದಿನವಾಗಿರುತ್ತದೆ.
ಏಪ್ರಿಲ್ 19 ರಂದು 17 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಅದರಂತೆ ತಮಿಳುನಾಡಿನಲ್ಲಿ 39, ರಾಜಸ್ಥಾನದಲ್ಲಿ 12, ಉತ್ತರ ಪ್ರದೇಶದಲ್ಲಿ 8, ಮಧ್ಯಪ್ರದೇಶದಲ್ಲಿ 6, ಉತ್ತರಾಖಂಡ, ಅಸ್ಸಾಂ ಮತ್ತು ಮಹಾರಾಷ್ಟ್ರದಲ್ಲಿ ತಲಾ 5 , ಬಿಹಾರದಲ್ಲಿ 4, ಪಶ್ಚಿಮ ಬಂಗಾಳದಲ್ಲಿ 3, ಅರುಣಾಚಲ ಪ್ರದೇಶ, ಮಣಿಪುರ, ಮೆಘಾಲಯದಲ್ಲಿ ತಲಾ 2 ಮತ್ತು ಛತ್ತೀಸ್ಗಢ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರ, ಅಂಡಮಾನ್-ನಿಕೋಬಾರ್ ದ್ವೀಪಗಳು, ಜಮ್ಮು-ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ತಲಾ ಒಂದು ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.
ಎರಡನೇ ಹಂತದಲ್ಲಿ 89 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ನಾಳೆ ಅಧಿಸೂಚನೆ ಹೊರಡಿಸಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ
ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆಗೆ ಸದಸ್ಯರನ್ನು ಆಯ್ಕೆ ಮಾಡಲು ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಭಾರತ ಚುನಾವಣಾ ಆಯೋಗ, ಸಕಲ ಸಿದ್ಧತೆಯೊಂದಿಗೆ ಸಜ್ಜಾಗಿದೆ.
ದೇಶದಲ್ಲಿ ಚುನಾವಣೆಗಳನ್ನು ಪಾರದರ್ಶಕವಾಗಿ ಹಾಗೂ ಅತ್ಯಂತ ವಿಶ್ವಾಸಾರ್ಹ ರೀತಿಯಲ್ಲಿ ನಡೆಸುವ ಸಂಕಲ್ಪದೊಂದಿಗೆ ಚುನಾವಣಾ ಆಯೋಗ, ಸಮಸ್ತ ಚುನಾವಣಾ ಪ್ರಕ್ರಿಯೆಗಳನ್ನು ಸುಗಮಗೊಳಿಸಲು ತಂತ್ರಜ್ಞಾನದ ನೆರವನ್ನು ಬಳಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಮತದಾರರು, ಚುನಾವಣಾ ಸಿಬ್ಬಂದಿ ಹಾಗೂ ಆಯೋಗಕ್ಕೆ ನೆರವಾಗುವ ಹಲವು ಆಪ್ಗಳನ್ನು ಚುನಾವಣಾ ಆಯೋಗ ಅಭಿವೃದ್ಧಿಪಡಿಸಿದೆ.
ಈ ಪೈಕಿ ಇಂದು ಸಿ-ವಿಜಿಲ್ ಆಪ್ ಬಗ್ಗೆ ಮಾಹಿತಿ.
ದೇಶದಲ್ಲಿ ಚುನಾವಣೆಗಳ ವೇಳೆ ನಡೆಯುವ ಅಕ್ರಮಗಳು, ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಪ್ರಕರಣಗಳ ಮೇಲೆ ಕಣ್ಣಿಡುವುದು ಕೇವಲ ಚುನಾವಣಾ ಸಿಬ್ಬಂದಿಯ ಕೆಲಸವಲ್ಲ. ಇದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಹೌದು. ಹಾಗಾಗಿ ಚುನಾವಣಾ ಅಕ್ರಮಗಳ ಬಗ್ಗೆ ಸಾರ್ವಜನಿಕರು ಆಯೋಗಕ್ಕೆ ದೂರು ತಲುಪಿಸಲು ಭಾರತ ಚುನಾವಣಾ ಆಯೋಗ ಸಿ-ವಿಜಿಲ್ ಆಪ್ ಅನ್ನು ಅಭಿವೃದ್ಧಿ ಪಡಿಸಿದೆ.
ದೂರುಗಳನ್ನು ಆನ್ಲೈನ್ ಮೂಲಕ ಆಯೋಗಕ್ಕೆ ರವಾನಿಸಲು ಈ ಆಪ್ ನೆರವಾಗುವುದು. ಯಾವುದೇ ಚುನಾವಣಾ ಅಕ್ರಮಗಳ ಬಗ್ಗೆ ಧ್ವನಿಮುದ್ರಣ, ವಿಡಿಯೋ ಚಿತ್ರದ ತುಣುಕುಗಳು ಮತ್ತು ಫೋಟೊ ಮೊದಲಾದ ದಾಖಲೆಗಳನ್ನು ಸಾರ್ವಜನಿಕರು ಇದರ ಮೂಲಕ ಕಳುಹಿಸಬಹುದು.
ಚುನಾವಣೆಗಳಲ್ಲಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಮಾಡುವ ಖರ್ಚು-ವೆಚ್ಚ, ಮತದಾರರ ಮನವೊಲಿಕೆಗೆ ಆಮಿಷಗಳ ಬಳಕೆ ಮೊದಲಾದ ಅಕ್ರಮಗಳ ಬಗ್ಗೆ ದೂರು ನೀಡಲು ಇದನ್ನು ಬಳಸಬಹುದು. ಒಂದುನೂರು ನಿಮಿಷಗಳಲ್ಲಿ ಚುನಾವಣಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುತ್ತಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.
ದೇಶದ ಯಾವ ಮೂಲೆಯಲ್ಲೇ ಆಗಲಿ ನಡೆಯುವ ಚುನಾವಣಾ ಅಕ್ರಮ ಅಥವಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ತಾವು ನೀಡಿದ ದೂರುಗಳನ್ನು ಆಯೋಗ ಪರಿಗಣಿಸಿದೆಯೇ ಎನ್ನುವ ವಿವರಗಳನ್ನು ಸಹ ಸಾರ್ವಜನಿಕರು ಸಿ-ವಿಜಿಲ್-ಆಪ್ ಮೂಲಕ ವೀಕ್ಷಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ದಾವಣಗೆರೆ | ವಿನೋಬನಗರದ ಶ್ರೀ ಚೌಡೇಶ್ವರಿ ಜಾತ್ರೆ ಸಂಭ್ರಮ
-
ದಿನದ ಸುದ್ದಿ6 days ago
ಭಾನುವಾರದಂದು ಕಾರ್ಯನಿರ್ವಹಿಸುವಂತೆ ಬ್ಯಾಂಕ್ಗಳಿಗೆ ಆರ್ ಬಿ ಐ ಸೂಚನೆ
-
ದಿನದ ಸುದ್ದಿ6 days ago
ನಾಯಕನ ಹಟ್ಟಿ | ಶ್ರೀಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ವಿಶೇಷ ಬಸ್ ಸೌಲಭ್ಯ
-
ದಿನದ ಸುದ್ದಿ6 days ago
ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಗಳು ಸ್ಥಗಿತ ; ಬಿಜೆಪಿ ಅಧಿಕಾರ ದುರುಪಯೋಗ : ಖರ್ಗೆ ಕಿಡಿ
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ : ಚುನಾವಣಾ ಚಟುವಟಿಕೆಗಳ ಕುರಿತ ಜಿಲ್ಲಾವಾರು ಮಾಹಿತಿ
-
ದಿನದ ಸುದ್ದಿ5 days ago
ವಿಜಯಪುರ ಜಿಲ್ಲಾ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಮೈಬೂಬಸಾಹೇಬ.ವೈ.ಜೆ ಆಯ್ಕೆ
-
ದಿನದ ಸುದ್ದಿ5 days ago
ಬೆಂಗಳೂರಿನಲ್ಲಿ ಬಿಜೆಪಿ ನೂತನ ಮಾಧ್ಯಮಕೇಂದ್ರ ಆರಂಭ
-
ದಿನದ ಸುದ್ದಿ4 days ago
ಲೋಕಸಭಾ ಚುನಾವಣೆ | ಹೊಸ ಮತದಾರರೆಷ್ಟು ಗೊತ್ತಾ..?