Connect with us

ಬಹಿರಂಗ

ಕೆನೆಪದರ, ವರ್ಣವ್ಯವಸ್ಥೆ, ಅಸ್ಪೃಶ್ಯತೆ, ಇತ್ಯಾದಿ..!

Published

on

  • ರಘೋತ್ತಮ ಹೊ.ಬ

Creamy layer ಅಥವಾ ಕೆನೆ ಪದರ ಮೀಸಲಾತಿ ನೀತಿ ಹಿನ್ನೆಲೆಯಲ್ಲಿ ಬಳಸುವ ಈ ಪದದ ಅರ್ಥ “ಒಂದು ತಲೆಮಾರು ಅಥವಾ ಎರಡು ತಲೆಮಾರು ಮೀಸಲಾತಿ ಪಡೆದವರು, ಪಡೆದು ಆರ್ಥಿಕವಾಗಿ ಶ್ರೀಮಂತರಾದವರು, ಅಂತಹವರು ಮೀಸಲಾತಿ ಬಿಟ್ಟು ಕೊಡಬೇಕು” ಎಂಬುದಾಗಿದೆ. ಒಟ್ಟಾರೆ ಆರ್ಥಿಕವಾಗಿ ಒಮ್ಮೆ ಸದೃಢರಾದವರು ಮೀಸಲಾತಿ ಮತ್ತೆ ಪಡೆಯಬಾರದು ಅಂತಹವರು ಮೀಸಲಾತಿ ಇತರರಿಗೆ ಬಿಟ್ಟು ಕೊಡಬೇಕು ಇದು ಕೆನೆ ಪದರ ಎಂಬ ಈ ಲಾಜಿಕ್ ನ ಅರ್ಥ.

ನಿಜ, ನೋಡೋಕೆ ಕೇಳೋಕೆ ಈ ಲಾಜಿಕ್ ತುಂಬಾ ಚೆನ್ನಾಗಿ ಕಾಣಿಸುತ್ತದೆ. ದಲಿತ ಮತ್ತು ಹಿಂದುಳಿದವರನ್ನು ಕೂಡ “ಅಲ್ವ? ಅವರವರೇ ಯಾಕೆ ಮೀಸಲಾತಿ ತಕ್ಕೋ ಬೇಕು? ನಮಗೂ ಕೂಡ ಬಿಟ್ಟು ಕೊಟ್ಟರೆ ಆಗಲ್ವ?” ಎಂದು ಕೇಳುವಂತೆ ಮಾಡುತ್ತದೆ. ಅಂದಹಾಗೆ ಇಂತಹ ಚಿಂತನೆ ಮೊಳಕೆಯೊಡೆಯುವುದು ಆರ್ ಎಸ್ ಎಸ್ ಶಾಖೆಗಳಲ್ಲಿ. ಆರ್ ಎಸ್ ಎಸ್ ಸಭೆಗಳಲ್ಲಿ ಇಂತಹ ಚರ್ಚೆಗಳನ್ನು ಏರ್ಪಡಿಸಿ ಅಭಿಪ್ರಾಯ ರೂಪಿಸುವ ಚಟುವಟಿಕೆಗಳನ್ನು ನಡೆಸಲಾಗುತ್ತದೆ ಮತ್ತು ಇಂತಹ ಕ್ರಿಯೆಗಳಲ್ಲಿ ಕೆಲವು ದಲಿತ ಸಮುದಾಯಕ್ಕೆ ಸೇರಿದ ವ್ಯಕ್ತಿಗಳನ್ನು ಸೇರಿಸಿಕೊಂಡು ಅವರ ಮೂಲಕವೇ ಇದನ್ನು ಹೇಳಿಸಲಾಗುತ್ತದೆ, ಪುಸ್ತಕಗಳನ್ನು ಬರೆಸಲಾಗುತ್ತದೆ, ಬಿಡುಗಡೆ ಮಾಡಿ ಚರ್ಚೆಗೆ ಬಿಡಲಾಗುತ್ತದೆ! Its a kind of intellectual atrocity!!

ಇರಲಿ, ಇವರ ಮಾತನ್ನು ಒಪ್ಪೋಣ. SC/ST ಗಳು ಮತ್ತು ಅವರಿಗಿಂತ ಜಾಸ್ತಿ ಮೀಸಲಾತಿ ಪಡೆವ OBC ಗಳು ಮೀಸಲಾತಿ ಬಿಟ್ಟು ಕೊಡೋಣ. ಆದರೆ ಪ್ರಶ್ನೆ ಎಂದರೆ ಈ ಕೆನೆ ಪದರ ಲಾಜಿಕ್ ಕೇವಲ ಮೀಸಲಾತಿಗೆ ಮಾತ್ರ ಯಾಕೆ ಅಂತ? ವರ್ಣ ವ್ಯವಸ್ಥೆ ಪ್ರಕಾರವೇ ಬರುವುದಾದರೆ ದೇವಾಲಯಗಳನ್ನು ಪೂಜೆ ಮಾಡುವುದು. ಪೂಜೆ ಮಾಡುವ ಈ ಮೀಸಲಾತಿಯಿಂದ ನಿರ್ದಿಷ್ಟ ಸಮುದಾಯಗಳು ಆರ್ಥಿಕವಾಗಿ ಬಹಳ ಶ್ರೀಮಂತರಾಗಿದ್ದಾರೆ. ಈಗಲೂ ಅವರ ತಿಜೋರಿ ತುಂಬುತ್ತಲೇ ಇದೆ. ಮೀಸಲಾತಿಯ ಕೆನೆಗಿಂತ ದೇಗುಲ ಪೂಜೆಯ ಈ ಕೆನೆ ಬಹಳ ದಪ್ಪ ಇದೆ! ಹಾಗೆಯೇ ವ್ಯಾಪಾರ- ವ್ಯವಹಾರ, ಬಿಸಿನೆಸ್ ಕ್ಷೇತ್ರ.

ನಿರ್ದಿಷ್ಟ ಸಮುದಾಯಗಳು ವ್ಯಾಪಾರ ವ್ಯವಹಾರದ ಈ ಕ್ಷೇತ್ರದಲ್ಲಿ ಸಹಸ್ರಾರು ವರ್ಷಗಳಿಂದ ಏಕಸ್ವಾಮ್ಯ ಹೊಂದಿ ಕೆನೆ ಪದರ ದೇಗುಲ ಪೂಜೆಗಿಂತಲೂ ಜಾಸ್ತಿ ಮಾಡಿಕೊಂಡಿದ್ದಾರೆ. ಮುಂದುವರೆದು ಹೇಳುವುದಾದರೆ ಭೂಮಿ. ಎಷ್ಟು ಜನರಿಗೆ ಈ ದೇಶದಲ್ಲಿ ಭೂಮಿ ಸಿಕ್ಕಿದೆ? ಈ ನಿಟ್ಟಿನಲ್ಲಿ ಹೇಳುವುದಾದರೆ ಭೂಮಿ ಅಥವಾ ಭೂ ಒಡೆತನದ ಈ ಕ್ಷೇತ್ರದಲ್ಲಿ ಒಂದಷ್ಟು ಸಮುದಾಯಗಳು ಏಕಸ್ವಾಮ್ಯ ಸಾಧಿಸಿವೆ. ಶತ ಶತಮಾನಗಳಿಂದಲೂ ಪಿತ್ರಾರ್ಜಿತ ಆಸ್ತಿ ಪದ್ಧತಿ ಇರುವ ಭಾರತದಲ್ಲಿ ಅಂತಹ ಸಮುದಾಯಗಳು ಜಮೀನಿನ ಮೇಲಿನ ತಮ್ಮ ಏಕಸ್ವಾಮ್ಯವನ್ನು ಬಿಟ್ಟು ಕೊಟ್ಟಿಲ್ಲ. ಶತಶತಮಾನಗಳಿಂದ ಆ ಜಮೀನಿನಲ್ಲಿ ಬರುವ ಆದಾಯಗಳಿಂದ ಅವರೂ ಕೂಡ ಆರ್ಥಿಕವಾಗಿ ಸಾಕಷ್ಟು ಬಲಾಢ್ಯರಾಗಿ ತಮ್ಮ ಕೆನೆಪದರ ಹೆಚ್ಚಿಸಿಕೊಂಡಿದ್ದಾರೆ.

ಪ್ರಶ್ನೆ ಏನೆಂದರೆ ಈ “ಕೆನೆ ಪದರ”ವನ್ನು ಯಾರೂ ಯಾಕೆ ಪ್ರಶ್ನಿಸುವುದಿಲ್ಲ ಅಥವಾ ಅವರಿಗೂ ಕೆನೆ ಪದರ ನೀತಿ ಅನ್ವಯಿಸಿ ಇತರರಿಗೂ ಪೂಜೆ ಮಾಡುವುದ ಬಿಟ್ಟು ಕೊಡಿ, ಇತರರಿಗೂ ವ್ಯಾಪಾರ-ವ್ಯವಹಾರ ಬಿಟ್ಟು ಕೊಡಿ, ಇತರರಿಗೂ ಭೂಮಿ ಬಿಟ್ಟು ಕೊಡಿ, ಒಂದೇ ತಲೆಮಾರಿಗೆ ಇವೆಲ್ಲ ಸಾಕು ಅಂತ ಯಾಕೆ ಹೇಳಿಲ್ಲ? ಒಟ್ಟಾರೆ ಹೇಳುವುದಾದರೆ ಮನುಸ್ಮೃತಿ ಜಾರಿಗೊಳಿಸಿದ ಮೀಸಲಾತಿ ಯಲ್ಲಿ ಯಾಕೆ ಕೆನೆಪದರ ಜಾರಿಯಾಗಿಲ್ಲ ಅಥವಾ ಜಾರಿಯಾಗಲಿಲ್ಲ ಎಂಬುದು.

ನಿಜ ಹೇಳಬೇಕೆಂದರೆ ಕೆನೆ ಪದರ ನೀತಿ ಮನುಸ್ಮೃತಿ ಕಾಲದಿಂದಲೂ ಜಾರಿಯಾಗಿದ್ದಿದ್ದರೆ ಮೀಸಲಾತಿಯ ಪ್ರಶ್ನೆಯೇ ಬರುತ್ತಿರಲಿಲ್ಲ! ಯಾಕೆಂದರೆ ದೇಗುಲಗಳ ಪೂಜೆ ಮಾಡಿ ಒಂದು ತಲೆಮಾರು ಶ್ರೀಮಂತರಾಗಿ SC/STಗಳನ್ನೂ ಒಳಗೊಂಡಂತೆ ಇತರೆ ಸಮುದಾಯದವರಿಗೆ ಸಂಬಂಧಿತ ಆ ಸಮುದಾಯ ತನ್ನ ಆ ಪೂಜೆಯ ಹಕ್ಕನ್ನು ಬಿಟ್ಟುಕೊಟ್ಟಿದ್ದರೆ,
ವ್ಯಾಪಾರ ವ್ಯವಹಾರ ಮಾಡಿ ಒಂದು ತಲೆಮಾರು ಶ್ರೀಮಂತ ಆದ ಆ ಸಮುದಾಯ SC/STಗಳು ಸೇರಿದಂತೆ ಇತರರಿಗೆ ತನ್ನ ಆ ವ್ಯಾಪಾರದ ಹಕ್ಕನ್ನು ಬಿಟ್ಟುಕೊಟ್ಟಿದ್ದರೆ, ಮುಖ್ಯವಾಗಿ ಭೂಮಿಯನ್ನು ಒಂದು ತಲೆಮಾರು ಅನುಭವಿಸಿದ ಆ ಸಮುದಾಯಗಳು ತದನಂತರ ಭೂಮಿಯನ್ನು SC/ST ಗಳು ಸೇರಿದಂತೆ ಇತರರಿಗೆ ನೀಡಿದ್ದರೆ…

ನಿಜ, ಈ ಕ್ಷೇತ್ರಗಳಲ್ಲೂ ಅಲ್ಲಲ್ಲಿ ಅಲ್ಪ ಸ್ವಲ್ಪ ಬದಲಾವಣೆ ಅದೂ ಸ್ವಾತಂತ್ರ್ಯ ಬಂದ ಮೇಲೆ ಸ್ವಲ್ಪ ಏರುಪೇರಾಗಿರಬಹುದು. ಆದರೆ ಮನುಸ್ಮೃತಿಯ ಆ ಸಂವಿಧಾನ ಸಂಬಂಧಿಸಿದ ಆ ಸಮುದಾಯಗಳಿಗೆ ಅಂದರೆ ಬ್ರಾಹ್ಮಣ, ವೈಶ್ಯ ಮತ್ತು ಭೂಮಾಲೀಕ ಶೂದ್ರ ಸಮುದಾಯಗಳಿಗೆ ನೀಡಿದಷ್ಟು ವ್ಯಾಪಕ ಅವಕಾಶವನ್ನು ಆಧುನಿಕ ಅಂಬೇಡ್ಕರ್ ರಚಿತ ಸಂವಿಧಾನ ಖಂಡಿತ ನೀಡಿಲ್ಲ! ಹಾಗೆಯೇ ಮನುಸ್ಮೃತಿಯ ಕಾನೂನುಗಳನ್ನು ಅಂಬೇಡ್ಕರ್ ವಿರಚಿತ ಸಂವಿಧಾನಕ್ಕೆ ಸಂಪೂರ್ಣ replace ಮಾಡಲು ಆಗಿಲ್ಲ! ಏಕೆಂದರೆ ಮನುಸ್ಮೃತಿ ಜಾರಿಯಾದದ್ದು ಕ್ರಿ.ಪೂ.185ರಲ್ಲಿ.

ಆದರೆ ಅಂಬೇಡ್ಕರ್ ವಿರಚಿತ ಸಂವಿಧಾನ ಜಾರಿಯಾದದ್ದು. ಕ್ರಿ.ಶ.1950ರಲ್ಲಿ. ಅಂದರೆ ಸುಮಾರು 2035 ವರ್ಷದಿಂದ ಮನುಸ್ಮೃತಿ ಜಾರಿಯಲ್ಲಿದೆ. ಅದರ ಮೂಲಕ ಪಡೆದ ಅಘೋಷಿತ ಮೀಸಲಾತಿಯನ್ನು ಸಂಬಂಧಿಸಿದ ಆ ಸಮುದಾಯಗಳು ಹತ್ತಾರು ತಲೆಮಾರು enjoy ಮಾಡಿವೆ. ಕೆನೆ ಪದರ ಜಾರಿ ಮಾಡಬೇಕು ಎಂಬ ಸಣ್ಣ ಚಿಂತನೆ ಸಹ ಮಾಡಿಲ್ಲ. ಆದರೆ ಅಂಬೇಡ್ಕರ್ ಜಾರಿ ಮಾಡಿದ ಮೀಸಲಾತಿಗೆ ಇನ್ನೂ ಸಾವಿರ ಎರಡು ಸಾವಿರ ವರ್ಷವಿರಲಿ ನೂರು ವರ್ಷವೇ ತುಂಬಿಲ್ಲ! ಆದರೆ ಇಲ್ಲಿ ಕೆನೆ ಪದರ ಜಾರಿಯಾಗಬೇಕಂತೆ!!

ಮತ್ತೂ ವಾಸ್ತವವೆಂದರೆ ಕೆನೆ ಪದರ ಜಾರಿಯಾಗಲಿ. ಆದರೆ ಹಾಗೆ ಮೀಸಲಾತಿ ಕಳೆದುಕೊಳ್ಳುವ ಪರಿಶಿಷ್ಟಜಾತಿಯ ಎರಡನೇ ತಲೆಮಾರು ಬದುಕಿಗಾಗಿ ಮಾಡುವುದಾದರೂ ಏನನ್ನು ಎಂಬುದು? ಉದಾಹರಣೆಗೆ ನನಗೆ ತಿಳಿರುವ ಪರಿಶಿಷ್ಟ ಜಾತಿಯ ವ್ಯಕ್ತಿಯೊಬ್ಬರು ನಿವೃತ್ತರಾಗಿದ್ದಾರೆ. ನಿವೃತ್ತಿಯಿಂದ ಬಂದ ಆ ಹಣದಲ್ಲಿ ಅವರು ಒಂದು ಅಂಗಡಿ ತೆರೆದರು. ಆದರೆ ದುರಂತ ಎಂದರೆ ವ್ಯಾಪಾರವೇ ನಡೆಯಲಿಲ್ಲ. ದಲಿತ ಎಂಬ ಕಾರಣಕ್ಕೆ ಯಾರೂ ಅವರ ಅಂಗಡಿಗೆ ಬರಲೇ ಇಲ್ಲ! ಅಂಗಡಿ ತೆಗೆದ ಒಂದೇ ವರ್ಷಕ್ಕೆ ಅವರು ಅದನ್ನು ಮಾರಿ ನಷ್ಟ ಅನುಭವಿಸಿ ನಗರ ಬಿಟ್ಟು ಹಳ್ಳಿ ಸೇರಿಸಿಕೊಂಡರು. ನಿವೃತ್ತಿ ನಂತರ ಬಂದ ಅಷ್ಟೂ ಹಣವನ್ನು ಅವರು ಅಸ್ಪೃಶ್ಯತೆ ಕಾರಣಕ್ಕೆ ಕಳೆದುಕೊಂಡರು.

ಇದು ಒಂದು ಸಣ್ಣ ಉದಾಹರಣೆ ಅಷ್ಟೇ. ಹೇಳುತ್ತಾ ಹೋದರೆ..ಯಾಕೆಂದರೆ ವಯಕ್ತಿಕವಾಗಿ ನಮ್ಮ ಮನೆಯ ಸುತ್ತಮುತ್ತಲೇ ಹಾಗೆ ನಿವೃತ್ತರಾಗಿ ತಮ್ಮ ಮಕ್ಕಳಿಗೆ ಮೀಸಲಾತಿಯ ಯಾವ ಫಲಾನುಭವವೂ ಸಿಗದೆ ಅತ್ತ ಬದುಕನ್ನೂ ಕಟ್ಟಿಕೊಳ್ಳಲಾಗದೆ ನರಕ ಅನುಭವಿಸುತ್ತಿರುವ ಅನೇಕ ಕುಟುಂಬಗಳಿವೆ. ಈ ನಿಟ್ಟಿನಲ್ಲಿ ಕೆನೆ ಪದರ ನೀತಿ ಜಾರಿಯಾಗದಿದ್ದರೂ ಇವರೆಲ್ಲ “ಒಂದೇ ತಲೆಮಾರು ಮೀಸಲಾತಿ ಅನುಭವಿಸಿ ಶ್ರೀಮಂತರಾದರೂ” ಕೂಡ ತಮ್ಮ ಮಕ್ಕಳಿಗೆ ಮುಂದಿನ ಬದುಕು ಕಟ್ಟಿಕೊಡುವಲ್ಲಿ ವಿಫಲರಾಗುತ್ತಿದ್ದಾರೆ. ಮತ್ತೆ ಹೇಳುವುದಾದರೆ ಬಂಡವಾಳ ಇದೆ ಆದರೆ ಆ ಬಂಡವಾಳದಿಂದ ವ್ಯವಹಾರ ಮಾಡುವ ಹಾಗಿಲ್ಲ. ಆದರೆ ಸವರ್ಣೀಯರಿಗೆ ಹಾಗಲ್ಲ. ನಿವೃತ್ತಿ ಒಂದೇ ತಲೆಮಾರಿಗೆ ಆದರೂ ಅವರು ಹೊಟೆಲ್, ವ್ಯಾಪಾರ-ವ್ಯವಹಾರ ಅಂತ ಮೊದಲಿಗಿಂತಲೂ busy ಆಗಿ ಬಿಡ್ತಾರೆ.

ಹಾಗಿದ್ದರೆ ಇದಕ್ಕೆ ಕಾರಣ? ಜಾತಿ. ಜಾತಿವ್ಯವಸ್ಥೆ ಮತ್ತು ಅಸ್ಪೃಶ್ಯತಾಚರಣೆ ಇರುವುದರಿಂದ ಮೀಸಲಾತಿ ಜಾರಿಯಾಯಿತು. In fact ಮೀಸಲಾತಿ ಹುಟ್ಟಿಕೊಂಡಿದ್ದು ಈ ದೇಶದಲ್ಲಿ ಅಸ್ತಿತ್ವದಲ್ಲಿರುವ ಅಸ್ಪೃಶ್ಯತೆ ಕಾರಣಕ್ಕೆ ಹೊರತು ಬಡವ ಶ್ರೀಮಂತ ಎಂಬ ಕಾರಣಕ್ಕೆ ಅಲ್ಲ! ಹಾಗೆಯೇ ಆ ಜಾತಿವ್ಯವಸ್ಥೆ, ಅಸ್ಪೃಶ್ಯತಾಚರಣೆ ಇನ್ನೂ ಇರುವುದರಿಂದ, ಹೆಚ್ಚುತ್ತಿರುವುದರಿಂದ ಮೀಸಲಾತಿ ಇರಲೇಬೇಕು ಮತ್ತು ಆ ಜಾತಿ ವ್ಯವಸ್ಥೆ ಮುಂದುವರೆಯುತ್ತಿರುವ ಕಾರಣಕ್ಕೆ ಮೀಸಲಾತಿ ತಲೆ ತಲೆಮಾರು ಮುಂದುವರಿಯುತ್ತಲೇ ಇರಬೇಕು, ಮುಂದುವರಿಯಲೇಬೇಕು. ಕೆನೆ ಪದರ ನೀತಿ ಜಾರಿ ಮಾಡಿ ಎಂದು ಶೋಷಿತ ಸಮುದಾಯಗಳೇ ಒಂದು ಸಂದರ್ಭದಲ್ಲಿ ಒತ್ತಾಯಿಸಲಿವೆ. ಯಾವಾಗ ಅಂದರೆ ಅಸ್ಪೃಶ್ಯತಾಚರಣೆ ಕೊನೆಗೊಂಡಾಗ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಭಾರತದ ಜನಸಂಖ್ಯೆ ವರವೋ..? ಶಾಪವೋ..?

Published

on

ಸಾಂದರ್ಭಿಕ ಚಿತ್ರ

 

  • ಅಂಬಿಕಾ. ಕೆ
    ಎಂ.ಎ. ಪ್ರಥಮ ವರ್ಷದ ವಿದ್ಯಾರ್ಥಿನಿ
    ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ
    ಬೆಂಗಳೂರು ವಿಶ್ವವಿದ್ಯಾಲಯ

 

ವಿಶ್ವ ಸಂಸ್ಥೆಯು ಪಾಪುಲೇಷನ್ ಫಂಡ್ ಮಾಡಿರುವ ಅಂದಾಜಿನ ಪ್ರಕಾರ ಭಾರತವು ಜಗತ್ತಿನ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ ಎನಿಸಿಕೊಂಡಿದೆ.

ದೇಶದ ಒಟ್ಟು ಜನಸಂಖ್ಯೆಯು 142.86 ಕೋಟಿಗೆ ಏರಿಕೆಯಾಗಿದ್ದು, ಚೀನಾ ಎರಡನೇ ಸ್ಥಾನಕ್ಕೆ ಇಳಿದಿದೆ, ಇಂತಹದೊಂದು ಹಿರಿಮೆಗೆ ಭಾರತವು ಪಾತ್ರವಾಗಲಿದೆ ಎಂಬುದರ ಅರಿವು ಹಿಂದೆಯೇ ಇತ್ತು. ಹೊಸ ಭಾರತದ ಜನಸಂಖ್ಯೆಯ ಸ್ವರೂಪವೇನು ಮತ್ತು ಯಾವ ವಯೋ ಮಾನದವರು ಎಷ್ಟಿದ್ದಾರೆ. ಆದಾಯ ಮಟ್ಟ ಹೇಗಿದೆ, ಆದಾಯ ಹಂಚಿಕೆ ಹೇಗಿದೆ ಎಂಬುದರ ಕುರಿತು ಕೂಡ ಚರ್ಚೆಗಳು ನಡೆಯುತ್ತಿವೆ. ಒಟ್ಟು ಜನಸಂಖ್ಯೆಯ ಜತೆಗೆ ಈ ಎಲ್ಲಾ ಅಂಶಗಳು ಕೂಡ ಸರ್ಕಾರದ ನೀತಿಗಳು ಮತ್ತು ಕಾರ್ಯಕ್ರಮ ರೂಪಿಸುವಿಕೆ ಮೇಲೆ ಪ್ರಭಾವ ಬೀರುತ್ತವೆ. ರಾಜಕೀಯ ಪಕ್ಷಗಳು ಮತ್ತು ಗುಂಪುಗಳು ರಾಜಕೀಯ ಹಾಗೂ ಸಾಮಾಜಿಕ ಸ್ಥಾನಗಳನ್ನು ನಿರ್ಧರಿಸುವಲ್ಲಿಯೂ ಈ ಅಂಶಗಳು ಪಾತ್ರವಹಿಸುತ್ತವೆ ಭಾರತದಲ್ಲಿ ಗರಿಷ್ಠ ಸಂಖ್ಯೆಯು ಯುವ ಜನರಿದ್ದಾರೆ.

ಹಾಗೆಯೇ ಮುಂದುವರೆಯಲಿದೆ 15 ರಿಂದ 24 ವರ್ಷದೊಳಗಿನವರ ಸಂಖ್ಯೆಯು 25.4 ಕೋಟಿ ಎಂದು ಅಂದಾಜಿಸಲಾಗಿದೆ ಇನ್ನು ದೀರ್ಘಕಾಲ ಭಾರತವು ಈ ಸ್ಥಿತಿ ಕಾಯ್ದುಕೊಳ್ಳಲಿದೆ ಎಂಬುದರಲ್ಲಿಯೂ ಅನುಮಾನ ಇಲ್ಲ ಜನಸಂಖ್ಯೆಯಲ್ಲಿ ಜಗತ್ತಿನಲ್ಲಿ ಮೊದಲ ಸ್ಥಾನಕ್ಕೆ ಏರುವುದು, ಗೌರವ ಏನು ಅಲ್ಲ ಬದಲಿಗೆ ಇದು ದೇಶಕ್ಕೆ ಹಲವು ಸವಾಲುಗಳನ್ನು ಹುಟ್ಟುತ್ತದೆ ಜತೆಗೆ ಅವಕಾಶಗಳ ಬಾಗಿಗಳನ್ನು ತೆರೆಯುತ್ತದೆ ಆದರೆ, ಜನರನ್ನು ಸಕಾಲಿಕವಾಗಿ ಮತ್ತು ಪರಿಣಾಮಕಾರಿಯಾಗಿ ಬಲಿಸಿಕೊಳ್ಳದೆ ಇದ್ದರೆ ಜನಸಂಖ್ಯೆಯೇ ಶಾಪವಾಗಿ ದೊಡ್ಡ ಸವಾಲಾಗಿ ಪರಿಣಮಿಸಬಹುದು. ದೇಶ ಪ್ರತಿ ವರ್ಷವೂ ಹೆಚ್ಚು ಹೆಚ್ಚು ಜನರಿಗೆ ಆಹಾರ ಬಟ್ಟೆ ಶಿಕ್ಷಣ ಆರೋಗ್ಯ ಸೇವೆ ಉದ್ಯೋಗಾವಕಾಶಗಳನ್ನು ಒದಗಿಸಬೇಕಾಗುತ್ತದೆ.

ಅಂಬಿಕಾ. ಕೆ

ಹೀಗೆ ಮುಂದುವರೆದರೆ ಉದ್ಯೋಗಾವಕಾಶಗಳು ದೊರೆಯದೆ ಜನರ ಜೀವನ ಮಟ್ಟ ಸುಧಾರಿಸಿಕೊಳ್ಳುವುದು ಕಷ್ಟವೇ ಸರಿ ಕೆಲಸ ಮಾಡುವ ವಯೋಮಾನದ ಜನರನ್ನು ಸಮಂಜಸವಾಗಿ ಬಳಸಿಕೊಂಡರೇ ಮಾತ್ರ ಜನಸಂಖ್ಯೆಯು ದೇಶದ ಅಭಿವೃದ್ಧಿಗೆ ಪೂರಕವಾಗಿ ಪರಿಣಮಿಸುತ್ತದೆ. ದೇಶದಲ್ಲಿ ದೊಡ್ಡ ಸಂಖ್ಯೆಯ ಜನರಿಗೆ ಈಗಲೂ ಮೂಲ ಸೌಲಭ್ಯಗಳನ್ನು ಒದಗಿಸಲು ಸಾಧ್ಯವಾಗಿಲ್ಲ ಆದ್ದರಿಂದ ಎಲ್ಲಾ ಕ್ಷೇತ್ರಗಳಲ್ಲಿಯೂ ಸಂಬಂಧಿಸಿದ ನೀತಿಗಳು ಮತ್ತು ಕಾರ್ಯತಂತ್ರ ಗಳಿಗೆ ಸಂಬಂಧಿಸಿದ ಪ್ರಯತ್ನಗಳನ್ನು ನಡೆಸದೇ ಇದ್ದರೆ ಜನಸಂಖ್ಯೆ ಹೆಚ್ಚಳದ ಲಾಭವು ದೊರೆಯದೆ ಹೋಗಬಹುದು ಇದರ ಪರಿಣಾಮವಾಗಿ ಲಾಭದ ಹೆಸರಿನಲ್ಲಿ ನಷ್ಟವೇ ಹೆಚ್ಚು ಅದುವೇ ಒಂದು ಹೊರೆಯುವಾಗಬಹುದು.

ಯುವ ಜನರಿಗೆ ಸೌಲಭ್ಯಗಳು ಮತ್ತು ಅವಕಾಶಗಳನ್ನು ಸೃಷ್ಟಿಸುವುದರ ಜೊತೆಗೆ ಹೆಚ್ಚುತ್ತಲೇ ಇರುವ ಹಿರಿಯ ನಾಗರಿಕರ ಹಾರೈಕೆಯು ವ್ಯವಸ್ಥೆ ಮಾಡಬೇಕಿದೆ ಅವಕಾಶಗಳನ್ನು ಸದುಪಯೋಗ ಮಾಡಿಕೊಳ್ಳುವುದು ಮತ್ತು ಸವಾಲುಗಳನ್ನು ಎದುರಿಸುವುದು ಭಾರತೀಯರ ಹೊರೆಗಾರಿಕೆ ದೇಶದ ಜನರ ಅಗತ್ಯಗಳನ್ನು ಪೂರೈಸಲು ವಿಫಲವಾದರೆ, ಸಾಮಾಜಿಕ ಸಂಘರ್ಷ ಮತ್ತು ರಾಜಕೀಯ ದೃಷ್ಟಿ ಉಂಟಾಗಿ ಅದು ಗಂಭೀರ ಪರಿಣಾಮಗಳಿಗೆ ಕಾರಣವಾಗಬಹುದು. ಮುಂದೆ ಜನಸಂಖ್ಯಾ ಸ್ಫೋಟವಾದರೂ ಆಶ್ಚರ್ಯ ಪಡಬೇಕಾಗಿಲ್ಲ ಈಗಿನ ಸನ್ನಿವೇಶದಲ್ಲಿ ದೊರಕುತ್ತಿರುವ ಸಂಪನ್ಮೂಲಗಳ ಗರಿಷ್ಠ ಬಳಕೆ ಮತ್ತು ಪರಿಣಾಮಕಾರಿ ಬಳಕೆ ಬಹಳ ಮಹತ್ವವಾಗಿದೆ.

ಮೀಸಲಾತಿ, ವಲಸೆ , ರಾಜಕೀಯ ಪ್ರಾತಿನಿಧ್ಯ ಸಂಪನ್ಮೂಲಗಳ ಹಂಚಿಕೆ ಮತ್ತು ಇದರ ವಿಚಾರಗಳು ಚರ್ಚೆಗೆ ಒಳಗಾಗುವ ಸಾಧ್ಯತೆ ಇದೆ ಸಮಾಜದ ಎಲ್ಲಾ ವರ್ಗಗಳನ್ನು ಸಮಾನವಾಗಿ ಒಳಗೊಳ್ಳುವ ಆರ್ಥಿಕ ಪ್ರಗತಿಯು ಸಾಧ್ಯವಾದರೆ ಜನಸಂಖ್ಯೆ ಏರಿಕೆ ಸವಾಲಾಗಿ ಪರಿಣಮಿಸಬಹುದು ಮಾನವ ಅಭಿವೃದ್ಧಿಯೇ ಅತ್ಯುತ್ತಮ ಕುಟುಂಬ ಕಲ್ಯಾಣ ಯೋಜನೆ ಇದರಿಂದ ಜನಸಂಖ್ಯೆಯ ಏರಿಕೆಯನ್ನು ನಿಯಂತ್ರಣದಲ್ಲಿ ಇರಿಸಿಕೊಳ್ಳಬಹುದು ಜನಸಂಖ್ಯೆ ಹೆಚ್ಚಳ ಯಾವುದೋ ಒಂದು ಸಮುದಾಯ ಕಾರಣ ಎಂದು ದೂಷಿಸುವ ಪ್ರವೃತ್ತಿಗೆ ಜ್ಞಾನದಾದ ಆಧಾರ ಇಲ್ಲದ ಪೂರ್ವಗ್ರಹ ಕಾರಣದಿಂದ ಮತ್ತು ಇದು ತಪ್ಪು ನಡವಳಿಕೆಯ ಜನಸಂಖ್ಯೆಗೆ ಸಂಬಂಧಿಸಿದ ಸವಾಲುಗಳನ್ನು ಉತ್ತಮವಾಗಿ ಮತ್ತು ಜಾಣ್ಮೆಯಿಂದ ನಿರ್ವಹಿಸಿದರೆ ಈ ಶತಮಾನವನ್ನು ಭಾರತದ ಶತಮಾನವನ್ನಾಗಿ ಪರಿವರ್ತಿಸುವ ಅವಕಾಶ ನಮ್ಮ ಮುಂದೆ ಇದೆ ಜನರೇ ನಮ್ಮ ದೇಶದ ಸಂಪನ್ಮೂಲವನ್ನಾಗಿ ಮಾರ್ಪಾಡು ಮಾಡಿಕೊಳ್ಳುವ ಅವಕಾಶ ನಮ್ಮ ನಿಮ್ಮೆಲ್ಲರ ಮೇಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಾಬಾ ಸಾಹೇಬ ಅಂಬೇಡ್ಕರರ ‘ಧ್ಯಾನ’ ಗಾಯನ ; ವಿನೂತನ

Published

on

 

  • ವೆನ್ನೆಲಾ ಕೆ.
    ಎಂ.ಎ. ಪ್ರಥಮ ವರ್ಷದ ವಿದ್ಯಾರ್ಥಿನಿ,
    ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ,
    ಬೆಂಗಳೂರು ವಿಶ್ವವಿದ್ಯಾಲಯ,ಬೆಂಗಳೂರು

ತ್ತೀಚೆಗೆ ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ಅನನ್ಯ ಮಾಧ್ಯಮ ಮತ್ತು ಬೆಳ್ಳಿತೆರೆ ಸಂಸ್ಥೆಯ ವತಿಯಿಂದ ಆಯೋಜಿಸಿದ 132ನೇ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ರವರ ಜನುಮ ನಿಮಿತ್ತವಾಗಿ “ಧಾನ್ಯ” ‘ಗಾಯನವು’ ವಿನೂತನವಾದ ಈ ಕಾರ್ಯಕ್ರಮವು 5 ಘಂಟೆ, 1ನಿಮಿಷ, 14 ಸೆಕೆಂಡ್ ಗೆ ಆರಂಭವಾಗಿದ್ದು ಅವಿಸ್ಮರಣೀಯವಾದ ದಿನ, ಇದೊಂದು ಭಾರತ ಇತಿಹಾಸದ ಪುಟದ ಚರಿತ್ರೆಯಲ್ಲೇ ಹೊಸ ದಾಖಲೆಯೂ ಅಂತ ಹೇಳಬಹುದು.

ಈ ಕಾರ್ಯಕ್ರಮವನ್ನು ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ವು ಇಡೀ ಭಾರತದಲ್ಲೇ ಯಾರು ಮಾಡಿರದ ಈ ವಿನೂತವಾದ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ಬೆಂಗಳೂರು ನಗರದಲ್ಲಿರುವ ಗಾಂಧಿ ಭವನದ ಆವರಣದಲ್ಲಿ ‘ಅನನ್ಯ ಸಂಸ್ಥೆ’ ವತಿಯಿಂದ 132 ನೇ ‘ವಿಶ್ವದ ವೀರ ವಿದ್ಯಾರ್ಥಿ ಹುಟ್ಟಿದ ದಿನ’ ಹಾಗೂ ‘ರಾಷ್ಟ್ರದ ಸ್ಫೂರ್ತಿಯ ದಿನ’ ‘ಸರ್ವ ಸಮುದಾಯದ ಶಕ್ತಿಯ ದಿನ’ ಇದೊಂದು ನಮ್ಮೆಲ್ಲರ ಹಬ್ಬದ ದಿನ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಇಂತಹ ಮೇರು ಶಿಖರ ಟ್ಯಾಗ್ ಲೈನ್ ಗಳಿಂದ ಅದ್ಭುತವಾಗಿ
ಆಯೋಜಿಸಿದ ಕಾರ್ಯಕ್ರಮಕ್ಕೆ ರಾಜ್ಯ ಕಂಡ ಪ್ರಸಿದ್ಧ ಐಪಿಎಸ್ ಅಧಿಕಾರಿಗಳು, ಸರ್ಕಾರಿ ಅಧಿಕಾರಿಗಳು, ಸಿನಿಮಾ ಸೆಲೆಬ್ರಿಟಿಗಳು, ಸಮಸ್ತ ವಿದ್ಯಾರ್ಥಿ ಸಮೂಹ, ಸಾಮಾಜಿಕ ನ್ಯಾಯದ ವಿಚಾರಶೀಲರು, ಬರಹಗಾರರು, ಪತ್ರಕರ್ತರು ಇನ್ನೂ ಅನೇಕ ಮುಂತಾದವರು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ಇದಕ್ಕೆ ಮುಖ್ಯ ಕಾರಣಕರ್ತರಾದ ಅನನ್ಯ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಶ್ರೀ ರಾಂಪುರ ರಾಜೇಶ್ ರವರ ನಿರ್ದೇಶನದಲ್ಲಿ ಇಂತಹ ಕಾರ್ಯಕ್ರಮ ಆಯೋಜಿಸಿದ್ದು ಹೆಮ್ಮೆಯ ವಿಷಯ.

ಇದರ ಹಿನ್ನೆಲೆ: ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ದಲ್ಲಿ ಅತ್ಯುತ್ತಮ ಹಾಗೂ ಅತ್ಯಂತ ತುಂಬಾ ಮನಸ್ಸಿನಿಂದಲ್ಲೇ ವಿಶೇಷವಾದ ಆಸಕ್ತಿಯನ್ನು ಅಂಬೇಡ್ಕರ್ ರವರು ಸಂಗೀತ ಪ್ರಿಯರು ಹಾಗೂ ಅಂಬೇಡ್ಕರ್ ರವರು ಸುಶ್ರಾವ್ಯವಾಗಿ ವಯಲಿನ್ ನುಡಿಸುತ್ತಿದ್ದರು. ಹಾಗೇಯೆ ಇವರಿಗೆ ಚಿತ್ರಕಲೆಯೂ ಸಹ ಒಲಿದಿತ್ತು ಎಂಬುದು ಗಮನಾರ್ಹ ಸಂಗತಿ. ಇಂತಹ ವಿಷಯವನ್ನು ಯಾರು ಸಹ ಬೆಳಕು ಚೆಲ್ಲುವ ಸಾಹಸಕ್ಕೆ ಕೈ ಹಾಕಿ ಇರಲಿಲ್ಲ. ಇದೊಂದು ಅನನ್ಯ ಸಂಸ್ಥೆ ವತಿಯಿಂದ ಇಂತಹ ಕಾರ್ಯಕ್ರಮ ನಡೆಸಿಕೊಟ್ಟಿದ್ದು ಐತಿಹಾಸಿಕ ಚರಿತ್ರೆಗೆ ಮುನ್ನುಡಿವಾಗಿದೆ.

ಅಂಬೇಡ್ಕರ್ ರವರಿಗೆ ತಮ್ಮ ಬಿಡುವಿನ ವೇಳೆಯಲ್ಲಿ ಅದ್ಭುತವಾದ ಒಬ್ಬ ಸಂಗೀತ ಪ್ರಿಯರಾಗಿದ್ದರು. ಇವರು ಸುಶ್ರಾವ್ಯವಾಗಿ ವಯಲಿನ್ ನುಡಿಸುತ್ತಿದ್ದರು ಹಾಗೂ ವಿಶೇಷವಾಗಿ ಚಿತ್ರಕಲೆ ಸಹ ಸರಳವಾಗಿ ಮಾಡುವ ಮೂಲಕ ತಮ್ಮ ಮನದಲ್ಲಿ ಆಸಕ್ತಿ ಹೊಂದಿದ್ದರು. ಇನ್ನು ಹಲವಾರು ವಿಷಯದಲ್ಲಿ ಅಂದರೆ ಅಂಬೇಡ್ಕರ್ ರವರಿಗೆ ವಿಶೇಷವಾದ ಇವುಗಳಲ್ಲಿ ಆಸಕ್ತಿ ಮತ್ತು ಅಭಿರುಚಿಯನ್ನು ಹೊಂದಿದ್ದರು ಎಂಬುದನ್ನು ಮನಗಂಡ ಅನನ್ಯ ಸಂಸ್ಥೆಯ ವತಿಯಿಂದ ಆಯೋಜಿಸಿದ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮವು ಅತ್ಯುತ್ತಮವಾಗಿ ಮೂಡಿಬಂದಿದೆ.

ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮದಲ್ಲಿ ವಿಶೇಷವಾಗಿ ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕರು ಹಾಗೂ ಚಿತ್ರ ಸಾಹಿತ್ಯಗಳು, ಅಂಬೇಡ್ಕರ್ ವಾದಿಗಳು ಮತ್ತು ಚಿತ್ರರಂಗದ ಬಹುಮುಖ ಪ್ರತಿಭೆ, ಮಹಾಗುರುಗಳಾದ ಡಾ. ಹಂಸಲೇಖ ರವರು ಹೊಸದಾಗಿ ಹಾಡನ್ನು ಬರೆದದ್ದು ತುಂಬಾ ಅವಿಸ್ಮರಣೀಯ ಅಂತ ಹೇಳಬಹುದು. ಇವರು ಇದೇ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪ್ರೊತ್ಸಾಹ ನೀಡಿದ್ದು, ಸರ್ವ ಸಮುದಾಯದಕ್ಕೆ ಹೊಸ ಶಕ್ತಿ ತುಂಬಿದ್ದು ಮೇರು ವ್ಯಕ್ತಿಯಾಗಿದ್ದಾರೆ.

ವೆನ್ನೆಲಾ ಕೆ.

ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮದಲ್ಲಿ ಮುಖ್ಯವಾದ ಅಂಶವೆಂದರೆ ಇದರಲ್ಲಿ ಒಟ್ಟು ನಾಲ್ಕು ಭಗವಾನ್ ಬುದ್ಧ, ಅಂಬೇಡ್ಕರ್, ಬಸವೇಶ್ವರ ಮುಂತಾದರವರನ್ನು ವಿಷಯಗಳನ್ನು ಪರಿಗಣಿಸಿ ಅಂಬೇಡ್ಕರ್ ಧ್ಯಾನ ಹಾಡುಗಳ ರಚಿಸಿವುದರಲ್ಲಿ ಪ್ರಮುಖವಾಗಿ ರಾಜ್ಯದ ಹೆಸರಾಂತ ಸಾಹಿತಿ, ಪ್ರಗತಿಪರ ಚಿಂತಕರು ಹಾಗೂ ಮಾಜಿ ಅಧ್ಯಕ್ಷರಾದ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರಿನ ಪ್ರೊ.ಎಸ್.ಜಿ.ಸಿದ್ದರಾಮಯ್ಯನವರ
‘ಧೀ ಶಕ್ತಿಯೇ … ಜ್ಞಾನ ಪರ್ವತದ … ಧೀಮಂತ ಧೀಶಕ್ತಿಯೇ …
ಇಂತಹ ಸಾಲುಗಳನ್ನು, ಡಾ. ಕೈ.ವೈ.ನಾರಾಯಣಸ್ವಾಮಿರವರ ದೀಪಾ …. ಎಲ್ಲರೆದೆಯಲಿ … ಹಚ್ಚಿದ ದೀಪಾ .. ಭೂಪಾ … ಭೂಪಾ … ಭೀಮಾ ಭೂಪಾ .. ಬಾಬಾ .. ಸಾಹೇಬ್.. ಜೀವಸ್ವರವೇ … ಬಾಬಾ.. ಹಾಗೂ ರವಿ ಮರಿಯಪ್ಪರವರ ಹತ್ತು ಸಾವಿರ ವಯಲಿನನ್ನು … ವೀಣೆಗಳು ನೂರೆಂಟು … ಕೋಟಿ ಕೋಟಿ ಎದೆ ಸದ್ದಿನ ಡೊಳ್ಳು … ಸಂಯೋಜಿಸಿದರೇ .. ಸಂವಿಧಾನಾ … ಮತ್ತು ಚಿತ್ರ ಸಾಹಿತಿ, ಹೆಸರಾಂತ ಸಂಗೀತ ನಿರ್ದೇಶಕರು ಡಾ. ಹಂಸಲೇಖ ರವರು ನಿನ್ನ ಮೌನಾ … ದೀನ ಗಾನಾ… ನಿನ್ನ ಧ್ಯಾನಾ .. ಸಂವಿಧಾನಾ … ಈ ನಾಲ್ಕು ಅಂಬೇಡ್ಕರ್ ಧ್ಯಾನ ರಚನೆಗೆ ಇವರುಗಳ ಬರೆದಿರುವ ಅದ್ಭುತವಾದ ಅಂಬೇಡ್ಕರ್ ರವರ ಧ್ಯಾನ ಹಾಡುಗಳನ್ನು ನಮ್ಮ ಹಿಂದುಸ್ತಾನಿ ಸಂಗೀತ ಹಾಡುಗಳ ಮೂಲಕ ಕನ್ವರ್ಟ್ ಮಾಡುವ ಮೂಲಕ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿತು.

ಹಾಗೆಯೇ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮವು ಬಹಳಷ್ಟು ಯಶಸ್ವಿಯಾಗಬೇಕಾದರೆ ಈ ಮೊದಲು ಪುಟ್ಟರಾಜ ಗವಾಯಿಗಳ ಆಪ್ತ ಶಿಷ್ಯರಲ್ಲಿ ಒಬ್ಬರಾದ ವಿದ್ವಾನ್ ಶ್ರೀ ಡಿ. ಕುಮಾರ್ ದಾಸ್ ಅವರ ವಿದ್ವತ್ ಶರೀರದಲ್ಲಿ ‘ಧ್ಯಾನ ಗಾಯನ’ ಹಾಗೂ ಇವರ ತಂಡದ ವತಿಯಿಂದ ನಡೆಸಿಕೊಟ್ಟ ಅದ್ಭತವಾದ ಅಂಬೇಡ್ಕರ್ ರವರ ಧ್ಯಾನವು ಹಿಂದುಸ್ತಾನಿ ಸಂಗೀತದ ಕನ್ವರ್ಟ್ ಮಾಡುವ ಮುಖಾಂತರ ಈ ಹಾಡುಗಳನ್ನು ಬಹಳ ಸೊಗಸಾಗಿ ಮೂಡಿಬಂದಿದ್ದು ಹೊಸ ದಾಖಲೆಗೆ ಸೇರ್ಪಡೆಯಾಗಿದೆ.

ಇನ್ನು ಮುಂಬರುವ ದಿನಗಳಲ್ಲಿ ಅದಷ್ಟು ಹಲವಾರು ವಿನೂತನವಾದ ಭಗವಾನ್ ಬುದ್ಧರ, ಬಸವೇಶ್ವರರ ಹಾಗೂ ವಿಶ್ವದ ವೀರ ವಿದ್ಯಾರ್ಥಿಯಾದ ಮೇರು ರಾಷ್ಟ್ರದ
ನಾಯಕರಾದ ಬಾಬಾಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ರವರ ಹಲವಾರು ಹಾಡುಗಳನ್ನು
ಅನನ್ಯ ಮಾಧ್ಯಮ ಮತ್ತು ಬೆಳ್ಳಿತೆರೆ ಸಂಸ್ಥೆಯ ವತಿಯಿಂದ ಆಯೋಜಿಸಿದರೆ ಇನ್ನುಷ್ಟು ಭಾರತದ ಇತಿಹಾಸದ ಪುಟಗಳಲ್ಲಿ ಮರೆತು ಹೋಗಿರುವ ಹಲವು ಬಗ್ಗೆ ದಾಖಲೆ ಇಲ್ಲದ ನೈಜ ಸಂಗತಿಗಳನ್ನು ಪುನಃ ಹೊಸ ದಾಖಲೆಗೆ ಉಪಯುಕ್ತವಾದ ವಿಶಿಷ್ಟವಾದ ಮೇರು ನಾಯಕನ
ಅಂಬೇಡ್ಕರ್ ರವರ ವಿಚಾರ ಧಾರೆಗಳು ತಾವು ಅನುಭವಿಸಿದ ನೋವು, ನಲಿವು, ಭಾರತದ ರಾಜ್ಯಾಂಗದ ಶಿಲ್ಪಿಯನ್ನು ಮುಂಬರುವ ದಿನಗಳಲ್ಲಿ ಹೊಸ ಪೀಳಿಗೆಯ ಪರಿಚಯಿಸುವ ಕೀರ್ತಿದಾಯಿಕವಾಗಲಿ ಮತ್ತು ಅದಷ್ಟು ಮುಂಬರುವ ದಿನಗಳಲ್ಲಿ ಅಂಬೇಡ್ಕರ್ ರವರ ಆಸಕ್ತಿದಾಯಕ ವಿಚಾರಗಳು ಹಾಗೂ ಸಂಗೀತದ ಬಗ್ಗೆ ಹಲವಾರು ಮಾಹಿತಿಗಳು ಸಮಸಮಸಮಾಜಕ್ಕೆ ತಲುಪುವ ವ್ಯವಸ್ಥೆಗೆ ಸಾಕ್ಷಿಯಾಗಲಿ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಬಹಿರಂಗ

ರಷ್ಯಾದಲ್ಲಿ ಓಂ – ಭರತಾಸ್- ರಾಮ – ರಾವಣ ಲಂಕೇಶ – ಮಾರೀಚ – ಸೀತ ನದಿಗಳು..!

Published

on

  • ಲಕ್ಷ್ಮೀಪತಿ ಕೋಲಾರ, ಸಂಶೋಧಕರು, ಸಂಸ್ಕೃತಿ‌ ಚಿಂತಕರು, ಬೆಂಗಳೂರು

ಸ್ಲಾವ್ ಸಮುದಾಯದ ಲಿತುವೇನಿಯ, ಲಾತ್ವಿಯ, ಬೆಲಾರಸ್,ಉಕ್ರೇನ್ ಮತ್ತು ರಷಿಯಾದಂತಹ ದೇಶಗಳ ನದಿ,ನಗರಗಳು ಸಂಸ್ಕೃತ ಮೂಲದ ಹೆಸರುಗಳನ್ನೆ ಇಂದಿಗು ಉಳಿಸಿಕೊಂಡಿರುವುದು ಆ ಭಾಷೆ ಮತ್ತು ಸಂಬಂಧಿತ ಸಂಸ್ಕೃತಿಯೊಂದಿಗೆ ಅವು ಹಿಂದೊಮ್ಮೆ ಹೊಂದಿದ್ದ ಬಲವಾದ ನಂಟಿಗೆ ಸಾಕ್ಷಿಯಾಗಬಲ್ಲವು.

ಇದರೊಂದಿಗೆ ಉತ್ತರ ಭಾರತದ ಆರ್ಯ ವೈದಿಕರ ಭಾಷೆ ಸಂಸ್ಕೃತಿಯೊಂದಿಗೆ ಸ್ಲಾವ್ ಸಮುದಾಯಕ್ಕೆ ಎಷ್ಟು ನಿಕಟ ಸಂಬಂಧವಿತ್ತೆಂಬುದನ್ನು ಮತ್ತು ನಾಲ್ಕೈದು ಸಾವಿರ ವರ್ಷಗಳ ಹಿಂದೆ ಈ ಎಲ್ಲ ಆರ್ಯ ಸಮುದಾಯಗಳು ಒಟ್ಟಿಗೆ ಒಂದೆಡೆಯೇ ಕಳ್ಳುಬಳ್ಳಿಗಳಾಗಿ ಜೀವಿಸಿದ್ದರೆಂಬುದನ್ನ ಈ ಹಿನ್ನೆಲೆಯಲ್ಲಿ ನಾವು ಗ್ರಹಿಸಬಹುದಾಗಿದೆ.

ಅದರಲ್ಲು ವಿಶೇಷವಾಗಿ ಲಿತುವೇನಿಯ ಮತ್ತು ರಷಿಯಾದ ನದಿಗಳ ಹೆಸರುಗಳು ಎಷ್ಟು ಸಂಸ್ಕೃತಮಯವು (ಇಂಡೋ – ಯುರೋಪಿಯನ್ ಭಾಷಾಮೂಲದ) ಮತ್ತು ವೈದಿಕರ ಪುರಾಣ ಮೂಲದವು ಆಗಿವೆ ಎಂದರೆ, ನಂಬಲಿಕ್ಕು ಅಸಾಧ್ಯ ಎಂಬಂತಿವೆ. ಇದರರ್ಥ ಸ್ಲಾವ್ ಜನರು ವೈದಿಕರ ಪುರಾಣಗಳಿಂದ ಪ್ರೇರಿತಗೊಂಡಿದ್ದಾರೆ ಎಂಬುದಲ್ಲ.

ಬದಲಿಗೆ ವೈದಿಕರ ಇಂದಿನ ಪುರಾಣ – ಸಂಸ್ಕೃತಿ – ಭಾಷೆಗಳು ವೈದಿಕರಿಗೆ ಎಷ್ಟು ಸಂಬಂಧಿಸಿದ್ದೋ ಅದಕ್ಕು ಹೆಚ್ಚಿನದಾಗಿ ಸ್ಲಾವ್ ಸಮುದಾಯಕ್ಕೂ ಸಂಬಂಧಿಸಿದ್ದಾಗಿದ್ದವು. ಹಾಗೆ ನೋಡಿದರೆ ಬ್ರಹ್ಮ – ವೇದ ಮೂಲವು ಕೂಡ ಸ್ಲಾವ್ ಸಮುದಾಯದ ಉತ್ತರ ಧ್ರುವ ಪ್ರದೇಶಕ್ಕೆ ಹೋಗಿ ನಿಲ್ಲುತ್ತದೆ ಎಂಬುದು ಸೋಜಿಗವಾದರು ನಿರ್ವಿವಾದವಾಗಿ ಚಾರಿತ್ರಿಕ ಸತ್ಯವಾಗಿದೆ. 12 – 13 ನೇ ಶತಮಾನಗಳಲ್ಲಿ ಸ್ಲಾವ್ ಜನರು ಕ್ರೈಸ್ತರಾಗಿ ಪರಿವರ್ತಿತರಾಗುವವರೆಗು ಅವರು ಶತಾಂಶ ಮತ್ತು ಥೇಟ್ ಶ್ರೇಷ್ಟ ಆರ್ಯ ವೈದಿಕರೆ ಆಗಿದ್ದರು.

ರಷ್ಯ ಮತ್ತು ಲಿತುವೇನಿಯಾಗಳಲ್ಲಿ ಭರತಾಸ್, ಓಂ, ರಾಮ, ಸೀತ, ಲಂಕೇಶ, ರಾವಣ, ಮಾರೀಚ, ನೆಮುನ (ಯಮುನ), ಕಾಮ, ಯಂತ್ರ, ಶ್ವೇತೆ, ದ್ರವ, ಮೋಕ್ಷ, ಋಗ್ವೇದದ ದಾನವ ಮಾತೆ ದನು ನೆನಪಿನ ದನುಬೆ ಮುಂತಾದ ನದಿಗಳು ಮತ್ತು ನಾರದ (ಈಗ ನರೋದ್ನಯ ಎಂದಿದ್ದರು ಸ್ಥಳೀಯರು ನಾರದ ಬೆಟ್ಟ ಎಂದೇ ಕರೆಯುತ್ತಾರೆ) ಹೆಸರಿನ ಬೆಟ್ಟವು ಇವೆ ಎಂದರೆ ಯಾರೂ ಅಚ್ಚರಿಪಡುವಂತದ್ದೆ.

ಯಾರಿಗಾದರು ಈ ಸಂಗತಿಗಳಲ್ಲಿ ಅನುಮಾನ ಹುಟ್ಟುವುದು ಸಹಜವೆ. ಯಾಕೆಂದರೆ ಸ್ಲಾವ್ – ವೈದಿಕ ಆರ್ಯರ ಮೂಲ ಪ್ರದೇಶವೆ ಉತ್ತರ ದ್ರುವ ಪ್ರದೇಶವಾಗಿತ್ತು ಎಂಬ ಚರಿತ್ರೆಯನ್ನೇ ನಮ್ಮಿಂದ ಮರೆಮಾಚಲಾಗಿತ್ತು ಮತ್ತು ಅದು ಬಹುದೊಡ್ಡ ಸಾಂಸ್ಕೃತಿಕ ರಾಜಕಾರಣವೂ ಆಗಿತ್ತು. ಆದರೆ ತಿಲಕರು ತಮ್ಮ “Arctic Home In the Vedas” ಎಂಬ ಪುಸ್ತಕದಲ್ಲಿ ಉತ್ತರ ಭಾರತದ ವೈದಿಕ ಆರ್ಯರ ತವರು ನೆಲ ಉತ್ತರ ದ್ರುವ ಪ್ರದೇಶವೆ, ಅಂದರೆ ಇಂದಿನ ಲಿತುವೇನಿಯ, ಲಾತ್ವಿಯ, ಬೆಲಾರಸ್ ಪ್ರದೇಶಗಳೇ ಆಗಿದ್ದವು ಎಂದು ಸಮರ್ಥ ಸಾಕ್ಷಾಧಾರಗಳೊಂದಿಗೆ ನಿರೂಪಿಸಿದ್ದಾರೆ.

ರಷ್ಯಾದಲ್ಲಿ ಸಂಸ್ಕೃತ ಭಾಷಾಮೂಲದ ನೂರಾರು ನದಿಗಳಿವೆ. ಭಾರತದಲ್ಲಿ ಕೆಲವು ನದಿಗಳನ್ನ ಹೊರತುಪಡಿಸಿದರೆ ಆ ಪ್ರಮಾಣದ ವೈದಿಕ ಪುರಾಣ ಮೂಲದ ನದಿ ಹೆಸರುಗಳು ಈ ನೆಲದಲ್ಲಿ ಇಲ್ಲವೆಂಬುದು ಪ್ರಾಚೀನ ಕಾಲದಿಂದಲು ಆರ್ಯ ವೈದಿಕರು ಇಲ್ಲಿರಲಿಲ್ಲವೆಂಬುದನ್ನೇ ಸೂಚಿಸುತ್ತದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending