Connect with us

ಬಹಿರಂಗ

ಪ್ರೀತಿಯ ವಾಲ್ಮೀಕಿ -ನಾಯಕ ಸಮುದಾಯದ ಸಹೋದರರೇ

Published

on

ಮೊದಲೇ ತಿಳಿಸಿದಂತೆ ವಾಲ್ಮೀಕಿ -ನಾಯಕ ಸಮುದಾಯವು 7.5% ಮೀಸಲಾತಿಗಾಗಿ ಆಗ್ರಹಿಸಿ ನಡೆಸುತ್ತಿರುವ ಹೋರಾಟವನ್ನು ನಾನು ನೈತಿಕವಾಗಿ ಬೆಂಬಲಿಸುತ್ತಿದ್ದೇನೆ. ಈಗ ನಿಮ್ಮ ಮುಂದೆ ನಾನು ಮಂಡಿಸುತ್ತಿರುವ ಈ ಕೆಳಗಿನ ತಕರಾರುಗಳೆಲ್ಲವೂ ನಿಮಗೆ ಆತ್ಮಾವಲೋಕನಕ್ಕೆ ದಾರಿ ಮಾಡಿಕೊಡಲಿ ಎಂದಷ್ಟೇ ಆಶಿಸುತ್ತೇನೆ.

ಮೊನ್ನೆ ನಡೆದ ವಾಲ್ಮೀಕಿ- ನಾಯಕ ಸಮಾವೇಶದಲ್ಲಿ ಭಗವಾಧ್ವಜಗಳು ಹಾರಾಡುತ್ತಿದ್ದವು. ಭಗವಾಧ್ವಜ ಎಂಬುದು ನಾಯಕ ಸಮುದಾಯದವರ ಪಾಲಿಗೆ ದಲಿತರ ಸ್ವಾಭಿಮಾನಿ ಹೋರಾಟದ ಲಾಂಛನವಾಗಿರುವ ನೀಲಿ ಬಾವುಟಕ್ಕಿಂತಲೂ ಮಹತ್ವವಾದದ್ದೇನು? ಭಗವಾಧ್ವಜಗಳನ್ನು ಹಾರಾಡಿಸಿಕೊಂಡು ಯಾರೇ ಬರಲಿ ಅವರು ಅಂಬೇಡ್ಕರ್ ಗೆ ವಿರೋಧಿಗಳೆಂದು ನಾವು ತಿಳಿಯಬೇಕಾಗಿದೆ. ಸಾಮಾಜಿಕ ಮತ್ತು ಆರ್ಥಿಕ ಸಬಲೀಕರಣಕ್ಕಾಗಿ ಸಾಮಾಜಿಕ ನ್ಯಾಯದ ಮಾನದಂಡವೆಂದು ಮೀಸಲಾತಿಯನ್ನು ದೊರಕಿಸಿಕೊಟ್ಟ ಬಾಬಾ ಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ಅವರು ರಚಿಸಿರುವ ಸಂವಿಧಾನದ ಅಡಿಯಲ್ಲಿ ಮೀಸಲಾತಿ ಪಡೆಯುತ್ತಿರುವ ಎಲ್ಲ ಪಂಗಡಗಳು ಒಂದಾಗುವುದನ್ನು ಬಿಟ್ಟು ಮೀಸಲಾತಿ ವಿರೋಧಿಗಳಾದ ಕೇಸರಿ ಪಡೆಗಳ ಹಿಂದೆ ಭಗವಾಧ್ವಜ ಹಾರಿಸುತ್ತಾ ಹೋಗುವುದು ನ್ಯಾಯವೇನು? ಬುದ್ಧಗುರು – ಬಸವಣ್ಣ – ಗಾಂಧೀಜಿ – ಅಂಬೇಡ್ಕರ್- ಕುವೆಂಪು ಮುಂತಾದ ಮಾನವತಾವಾದಿಗಳ ಜಾತ್ಯತೀತ ಹೋರಾಟದ ಹಿನ್ನೆಲೆ ತಿಳಿಯದೆ ಕೋಮುವಾದಿ ಸಂಘಿಗಳೊಂದಿಗೆ ಕೈಜೋಡಿಸುತ್ತಾ ಬರಿದೇ ಮೀಸಲಾತಿ ಫಲಾನುಭವಗಳಿಗಾಗಿ ಆಸೆಪಡುವ ಜನರು, ಅನ್ನ ಕೊಟ್ಟ ಡಾ.ಅಂಬೇಡ್ಕರ್ ಅವರ ಸಂವಿಧಾನದ ಬದಲು ರಾಮಾಯಣ – ಮಹಾಭಾರತ- ಭಗವದ್ಗೀತೆ ಬೇಕೆನ್ನುತ್ತಿದ್ದಾರೆ. ಆತ್ಮಗೌರವದ ಸಂಕೇತವಾದ ನೀಲಿ ಧ್ವಜ ಬೇಕಿಲ್ಲವೆಂದು ದೂರವಿಟ್ಟಿರುವ ಇದೇ ಜನ ಹಿಂದುತ್ವದ ಹೆಸರಿನಲ್ಲಿ ಮತೀಯ ಧ್ವೇಷ ಹರಡುವ ಭಗವಾಧ್ವಜ ಹಿಡಿದುಕೊಂಡಿದ್ದಾರೆ. ಜೈ ಭೀಮ್ ಎಂದು ಭೀಮಮಂತ್ರ ಹೇಳಬೇಕಾದವರು ಜೈ ಶ್ರೀರಾಮ್ – ಜೈ ಭಜರಂಗಬಲಿ ಎಂದು ಕೂಗುತ್ತಿದ್ದಾರೆ. ಏನೆಂತಾ ವರ್ತನೆ ಇವರದು? ಈ ವರ್ತನೆ ಎಷ್ಟರಮಟ್ಟಿಗೆ ಸರಿ?.

ಮೇಲ್ಜಾತಿಗಳ ಗುಡಿಗಳಿಗೂ ಮನೆಗಳಿಗೂ ಪ್ರವೇಶಿಸುವ ಸಾಮಾಜಿಕ ಸ್ವಾತಂತ್ರ್ಯವಿರುವ ವಾಲ್ಮೀಕಿ- ನಾಯಕರಿಗೆ ಹೋಲಿಸಿ ನೋಡಿದರೆ, ಅದೇ ಮೇಲ್ಜಾತಿಯವರ ಗುಡಿಯಾಚೆಗೂ ಮನೆಯಾಚೆಗೂ ತಲೆ ತಗ್ಗಿಸಿ ಕೈಕಟ್ಟಿಕೊಂಡು ನಿಂತಿರುವ ಹೊಲೆಮಾದಿಗರಷ್ಟು ತೀವ್ರವಾದ ಸಾಮಾಜಿಕ ಶೋಷಣೆಗೀಡಾಗಿಲ್ಲವೆಂಬುದು ವಾಸ್ತವ ಸಂಗತಿ. ಸಾಮಾಜಿಕ ಬಹಿಷ್ಕಾರಕ್ಕೆ ಹೊಲೆಮಾದಿಗರು ಗುರಿಯಾಗುತ್ತಿರುವರೇ ಹೊರತು ನಾಯಕ ಜನಾಂಗದವರಲ್ಲ. ಮೀಸಲಾತಿ ಕೇಳುವ ವಾಲ್ಮೀಕಿ – ನಾಯಕರು ಸವರ್ಣೀಯರೊಂದಿಗೆ ಮಾತ್ರ ಗುರುತಿಸಿಕೊಳ್ಳುತ್ತಿದ್ದಾರೆ. ಚಪ್ಪಲಿ ಹೊಲೆಯುವ – ಸತ್ತ ಪಶುಗಳನ್ನು ಹೊತ್ತು ಸಾಗಿಸುವ – ಅರೆ ತಮಟೆ ನುಡಿಸುತ್ತಾ ತೋಟಿ ಕೆಲಸ ಮಾಡುವ – ಕಕ್ಕಸ್ಸು ಬಾಚಿ ಜಾಡಮಾಲಿ ಕೆಲಸ ಮಾಡುವ ಹೊಲೆಮಾದಿಗರನ್ನು ಅಸ್ಪೃಶ್ಯರನ್ನಾಗಿ ಕಾಣುತ್ತಿದ್ದಾರೆ. ಸಮಾಜದ ಸೇವೆ ಮಾಡುತ್ತಾ ಕಟ್ಟಕಡೆಯವರಾಗಿ ಬದುಕುತ್ತಿರುವ ಹೊಲೆಮಾದಿಗರ ವಿರುದ್ಧ ನಾಯಕ ಸಮುದಾಯದವರು ತೋರಿಸುವ ಅಸಡ್ಡೆ -ಕೃತಘ್ನತೆ- ಶೋಷಣೆ ಮಾನವೀಯವಾದದ್ದೇ? ಅಂಬೇಡ್ಕರ್ ದೊರಕಿಸಿ ಕೊಟ್ಟಿರುವ ಮೀಸಲಾತಿಯ ಅನುಕೂಲ ಬೇಕೆಂದ ಮೇಲೆ ಅಂಬೇಡ್ಕರ್ ಅವರು ಹುಟ್ಟಿದ ಅಸ್ಪೃಶ್ಯರ ಸಮಾಜದ ಪರವಾಗಿ ನಿಲ್ಲದಿರುವ ಬಹತೇಕ ನಾಯಕರು, ಜಾತಿ ದೌರ್ಜನ್ಯ ಎಸಗುವ ಸವರ್ಣೀಯರೊಂದಿಗೆ ಮನುವಾದಿಗಳೊಂದಿಗೆ ಗುರುತಿಸಿಕೊಳ್ಳುವುದು ಸರಿಯೇನು? ಇತ್ತೀಚೆಗೆ ಏಪ್ರಿಲ್ 14 ರಂದು ಪಾವಗಡದಲ್ಲಿ ನಾಯಕ ಸಮುದಾಯದವರು ಸವರ್ಣೀಯರೊಂದಿಗೆ ಕೈಜೋಡಿಸಿ ದಲಿತ ಯುವಕರ ಮೇಲೆ ಹಲ್ಲೆ ನಡೆಸಿದ್ದಾರೆ. ಇಂತಹ ದಲಿತ ವಿರೋಧಿ ವರ್ತನೆ ಮತ್ತು ಅಸ್ಪೃಶ್ಯರ ವಿರುದ್ಧ ನಾಯಕರು ಎಸಗುತ್ತಿರುವ ದೌರ್ಜನ್ಯವನ್ನು ಹೇಗೆ ಸಮರ್ಥಿಸಿಕೊಳ್ಳುವಿರಿ?

ರಾಜನಹಳ್ಳಿ ಶ್ರೀ ಮಹರ್ಷಿ ವಾಲ್ಮೀಕಿ ಗುರು ಪೀಠದ ಶ್ರೀ ಪ್ರಸನ್ನಾನಂದ ಪುರಿ ಎಂಬುವ ಸ್ವಾಮೀಜಿಯೊಬ್ಬ ಠೇಂಕಾರದಿಂದ ಮಾತಾಡುತ್ತಾ ಮನುವಾದಿಗಳ ತಾಳಕ್ಕೆ ಕುಣಿಯುವ ಭಟ್ಟಂಗಿಯಾಗಿ ವಾಲ್ಮೀಕಿ ಸಮುದಾಯದ ಯುವಕರನ್ನು ಕೋಮುವಾದಿಗಳನ್ನಾಗಿ ಪರಿವರ್ತಿಸುತ್ತಿದಾರೆ. ಮೊನ್ನೆ ದಿನ ಮೀಸಲಾತಿಗಾಗಿ ಆಗ್ರಹಿಸಿ ನಡೆಸಿದ ವಾಲ್ಮೀಕಿ – ನಾಯಕ ಸಮಾವೇಶದಲ್ಲಿ ಭಗವಾಧ್ವಜಗಳು ಈ ಸ್ವಾಮೀಜಿಯ ನೇತೃತ್ವದಲ್ಲಿ ರಾರಾಜಿಸುತ್ತಿದ್ದವು. ಅಲ್ಲಿ ದಲಿತ ಚಳವಳಿಯ ಸ್ವಾಭಿಮಾನಿ ಹೋರಾಟದ ಸಂಕೇತವಾದ ನೀಲಿ ಬಾವುಟಗಳು ಯಾಕಿರಲಿಲ್ಲ? ಕೇಸರಿ ಭಗವಾಧ್ವಜವು ಅಂಬೇಡ್ಕರ್ ವಿರೋಧಿ ಮನುವಾದಿಗಳಿಗೆ ಮಾತ್ರ ಲಾಂಛನವಾಗಿರುತ್ತದೆ. ಅಂತಹ ವಿರೋಧಿ ಶಕ್ತಿಗಳ ಜೊತೆಗೆ ಗುರುತಿಸಿಕೊಂಡಿರುವ ಸ್ವಾಮೀಜಿಯು ಒಪ್ಪುವ ಕೇಸರಿ ಬಾವುಟಗಳನ್ನೇಕೆ ನೀವು ಬಳಸಿದಿರಿ? ಇದು ಕೇಸರಿ ಬಾವುಟ ಹಿಡಿಯಲು ದಲಿತ ಯುವಕರನ್ನು ಪ್ರಚೋದಿಸುತ್ತಿರುವ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ಆಲಿಯಾಸ್ ಕಿಟ್ಟಿಗೂ ಅನ್ವಯಿಸುವ ಪ್ರಶ್ನೆ. ಭಾರತೀಯ ದಲಿತ ಚಳುವಳಿಯ ಪ್ರಜ್ಞೆಯಾಗಲೀ ಪ್ರಜಾತಾಂತ್ರಿಕ ತಿಳಿವಳಿಕೆಯಾಗಲೀ ಇಲ್ಲದೇ ಭಗವಾಧ್ವಜ ಹಾರಿಸುವ ಸ್ವಾಮೀಜಿಗಳು ನಮ್ಮ ಪ್ರಜಾತಾಂತ್ರಿಕ ನಡಿಗೆಗೆ ಯಾವತ್ತಿಗೂ ಮಾರಕವೆಂದು ನಿಮಗೆ ಅನ್ನಿಸುತ್ತಿಲ್ಲವೇಕೆ?

ಮ್ಯಾಸಬೇಡರು ಊರನಾಯಕರಿಗಿಂತ ಹಿಂದುಳಿದಿದ್ದಾರೆ. ಮ್ಯಾಸಬೇಡರು ಇಂದಿಗೂ ಬುಡಕಟ್ಟು ಚಹರೆಗಳನ್ನು, ಪೆಟ್ಟಿಗೆ ದೇವರುಗಳನ್ನು, ನೆಲದೇವತೆಗಳ ನೆಲೆಗಳನ್ನು, ಪ್ರತ್ಯೇಕ ಭಾಷೆಯನ್ನು, ಗೋಮಾಂಸ ಸೇವನೆಯ ಮೂಲ ಆಹಾರ ಸಂಸ್ಕೃತಿಯನ್ನು, ಗುಡಿಕಟ್ಟು ಕಟ್ಟೆಮನೆ ಒಳಾಡಳಿತ ಪದ್ದತಿಯನ್ನು ಉಳಿಸಿಕೊಂಡುಬಂದಿದ್ದಾರೆ. ಹಾಗಾಗಿ ಮ್ಯಾಸಬೇಡರು ನಿಜವಾದ ಮೀಸಲಾತಿ ಫಲಾನುಭವಿಗಳಾಗಬೇಕಿದೆ. ಇವರು ಇಂದಿಗೂ ಶಿಕ್ಷಣಕ್ಕಾಗಲೀ ನಾಗರಿಕ ಬದುಕಿಗಾಗಲೀ ತೆರದುಕೊಳ್ಳದೆ ಮೀಸಲಾತಿಯೂ ಸಿಗದೆ ಒದ್ದಾಡುತ್ತಿದ್ದಾರೆ. ಪರಿಸ್ಥಿತಿ ಹೀಗಿರಲು ಹಕ್ಕಿಪಿಕ್ಕಿ ಸೋಲಿಗ ಕಾಡುಕುರುಬ ಮಲೆಕುಡಿಯ ಜೇನುಕುರುಬ ಇರುಳಿಗ ಸಿದ್ಧಿಯರು ಮುಂತಾದವರಿಗೆ ಸಿಗಬೇಕಾದ ST ಮೀಸಲಾತಿಯ ಸಿಂಹಪಾಲು ಊರನಾಯಕರ ಪಾಲಾಗುತ್ತಿದೆ. ದೇವರ ಎತ್ತುಗಳ ಕಿಲಾರಿಗಳನ್ನು ಮತ್ತು ದೇವರ ಎತ್ತುಗಳನ್ನೇ ಪವಿತ್ರವೆಂದು ಎತ್ತಿನ ಬಾಲ ಹಿಡಿದುಕೊಂಡಿರುವ ಮ್ಯಾಸನಾಯಕರು ಮೂಲೆಗುಂಪಾಗಿದ್ದಾರೆ. 2011 ರಲ್ಲಿಯೇ ಮ್ಯಾಸಬೇಡರನ್ನು ಓಬಿಸಿ ಪಟ್ಟಿಗೆ ಸೇರಿಸಲಾಗಿದೆ.. ಇದು ಊರನಾಯಕರು ಮಾತ್ರ 7.5% ಮೀಸಲಾತಿ ದೋಚಿಕೊಳ್ಳಲು ಮಾಡಿರುವ ಹುನ್ನಾರವಾಗಿದೆ. ಈ ಪ್ರಶ್ನೆಗೆ ನಿಮ್ಮ ಉತ್ತರವೇನು?

ದಾರ್ಶನಿಕ ಕವಿ ವಾಲ್ಮೀಕಿ ಅವರಿಗಿರುವಷ್ಟು ಸ್ಥಾನಮಾನವನ್ನು ನಾಯಕ ಸಮುದಾಯದವರು, ನಮಗೆಲ್ಲರಿಗೂ ಮೀಸಲಾತಿ ತಂದುಕೊಟ್ಟ ಮಹಾನ್ ನೇತಾರನಾದ ಅಂಬೇಡ್ಕರ್ ಅವರಿಗೆ ನೀಡುತ್ತಿಲ್ಲ. ವಾಲ್ಮೀಕಿ ಒಬ್ಬ ಪುರಾಣಿಮ ಕವಿ – ಅಂಬೇಡ್ಕರ್ ಮೀಸಲಾತಿಯನ್ನು ಕೊಟ್ಟ ಸಾಮಾಜಿಕ ಹೋರಾಟಗಾರ. ಪುರಾಣ ಸಂಗತಿಗಳು ಸಮಾಜದ ಧಾರ್ಮಿಕ ನಾಡಿಯೇ ಹೊರತು ಸಂವಿಧಾನಪ್ರಣೀತ ರಾಜಕೀಯ ಶಕ್ತಿಯಲ್ಲ. ಬುದ್ಧಗುರು – ಬಸವಣ್ಣ – ಗಾಂಧೀಜಿ – ಅಂಬೇಡ್ಕರ್ – ಕುವೆಂಪು ಮುಂತಾದ ಮಾನವತಾವಾದಿ ಜಾತ್ಯತೀತ ಹೋರಾಟಗಾರು ಹಾಗೂ ಸಾಮಾಜಿಕ ನ್ಯಾಯದ ನಿಷ್ಠಾವಂತ ಪ್ರಗತಿಪರ ಹೋರಾಟಗಾರರು ನಮಗೆ ಪ್ರಧಾನವಾಗಬೇಕೇ ಹೊರತು ಪುರಾಣಿಮ ಪ್ರತಿಮಾ ನಾಯಕರಲ್ಲ. ಪುರಾಣಿಮ ಕವಿ ವಾಲ್ಮೀಕಿ ನಮ್ಮೆಲ್ಲರ ಸಾಂಸ್ಕೃತಿಕ ಹೆಮ್ಮೆಯ ಸಂಕೇತವೆಂಬುದನ್ನು ಒಪ್ಪುತ್ತೇವೆ.

ಆದರೆ ಮೀಸಲಾತಿ ದೊರಕಿಸಿಕೊಟ್ಟ ಡಾ.ಅಂಬೇಡ್ಕರ್ ಅವರ ಸಂವಿಧಾನ ಹಾಗೂ ಅಂಬೇಡ್ಕರ್ ನಮಗಿಂದು ಸಾಮಾಜಿಕ ಚಳವಳಿಗಳಲ್ಲಿ ಹೆಚ್ಚು ಪ್ರಸ್ತುತ ಎಂಬುದು ನಿಮಗೇಕೆ ತಿಳಿಯುತ್ತಿಲ್ಲ? ವಾಲ್ಮೀಕಿ ಜಯಂತಿಯನ್ನು ಆಚರಿಸಲು ತೋರಿಸುವ ಉತ್ಸಾಹದ ಅರ್ಧದಷ್ಟಾದರೂ ನಾಯಕ ಸಮುದಾಯದವರು ಅಂಬೇಡ್ಕರ್ ಜಯಂತಿಯನ್ನು ಆಚರಿಸಲು ತೋರಿಸುತ್ತಿಲ್ಲ ಯಾಕೆ? ಪುರಾಣಿಮ ನಾಯಕನಾದ ವಾಲ್ಮೀಕಿ ಮತ್ತು ಚಾರಿತ್ರಿಕ ಪಾಳ್ಳೇಗಾರನಾದ ಮದಕರಿನಾಯಕರ ಜಯಂತಿಗಳನ್ನು ಆಚರಿಸುವ ಇದೇ ಜನ, ಡಾ.ಅಂಬೇಡ್ಕರ್ ಅವರ ಜಯಂತಿ ಆಚರಿಸಲು ಅಥವಾ ಗೌರವ ತೋರಿಸಲು ಯಾಕೆ ಮುಂದಾಗಬಾರದು? ಪುರಾಣಿಮ ಕವಿ ವಾಲ್ಮೀಕಿಗೆ ಕೊಟ್ಟಿರುವ ಲೇಶಮಾತ್ರ ಗೌರವದ ಸ್ಥಾನವನ್ನು ಅಂಬೇಡ್ಕರ್ ಗೆ ಕೊಡದಿರುವ ಇವರು ವಾಲ್ಮೀಕಿಯಿಂದ ಮೀಸಲಾತಿ ಪಡೆದರೋ ಅಥವಾ ಅಂಬೇಡ್ಕರ್ ಅವರಿಂದ ಪಡೆದರೋ?

ಪ್ರೊ.ಕೆ.ನಾರಾಯಣಸ್ವಾಮಿ (ಕೆಎನ್ಎಸ್) ಅವರನ್ನು ಹೊರತುಪಡಿಸಿ ಅಷ್ಟೊಂದು ಬದ್ಧತೆಯಿಂದ ದಲಿತ ಚಳವಳಿಗಾಗಿ ನಾಯಕ ಸಮುದಾಯದ ಯಾವುದೇ ನೇತಾರ ಹೋರಾಟ ಮಾಡಿದ ಉದಾಹರಣೆಗಳಿಲ್ಲ ಎಂಬುದು ಕಟುಸತ್ಯ. ಒಬ್ಬ ವ್ಯಕ್ತಿಯಾಗಿ ನ್ಯಾ.ಎಲ್.ಜಿ.ಹಾವನೂರು ವರದಿ ಹೊರತುಪಡಿಸಿ, ಇಲ್ಲಿಯವರೆಗೆ ನಡೆದುಕೊಂಡು ಬಂದಿರುವ ಒಟ್ಟಾರೆ ಮೀಸಲಾತಿ ಹೋರಾಟಗಳಿಗೆ ನಾಯಕ ಸಮುದಾಯದವರು ನೀಡಿರುವ ಕೊಡುಗೆ ಏನು? ಹಾಗೂ ಈ ಹೋರಾಟಗಳಲ್ಲಿ ಅಸ್ಪೃಶ್ಯರೊಂದಿಗೆ ಕೈಜೋಡಿಸಿ ಒಳಮೀಸಲಾತಿ ಸಮಸ್ಯೆ ನಿರ್ವಹಣೆಗೆ ಎಷ್ಟರಮಟ್ಟಿಗೆ ಸ್ಪಂದಿಸಿದ್ದಾರೆ? ಇನ್ನು ಅಲೆಮಾರಿಗಳ ಪಾಡಂತೂ ಮತ್ತಷ್ಟು ಚಿಂತಾಜನಕವಾಗಿದೆ. ಇಂದಿಗೂ ಟೆಂಟು ಡೇರೆಗಳಲ್ಲಿ ಗೋಚರಿಸದವರಾಗಿ ಅನೇಕ ಅಲೆಮಾರಿ ಸಮುದಾಯಗಳು ಭಿಕ್ಷಾಟನೆ ಮಾಡಿಕೊಂಡು ಊರೂರು ಅಲೆದಾಡುತ್ತಾ ಬದುಕುತ್ತಿವೆ. ಅವರ ಬದುಕು ಹಸನಾಗಿಸುವವರು ಯಾರು?

ಮೀಸಲಾತಿಯ ಮೂಲಕ ಅನ್ನ ಕೊಟ್ಟ ತಂದೆಯನ್ನೇ ಹೊರಗಿಡಬಾರದು.ಒಳಮೀಸಲಾತಿ ವರ್ಗೀಕರಣದ ಹೋರಾಟದಲ್ಲಿ ನಾಯಕ ಸಮುದಾಯದವರ ಬೆಂಬಲವೇ ವ್ಯಕ್ತವಾಗಿಲ್ಲ. ಇಲ್ಲಿ ಪ್ರಶ್ನೆ ಇರುವುದು ಕೇವಲ ಒಳ ಮೀಸಲಾತಿಯ ವರ್ಗೀಕರಣದ ಬಗ್ಗೆಯಲ್ಲ. ಮೀಸಲಾತಿಗೆ ಆಗ್ರಹಿಸಿ ನಡೆಸುತ್ತಿರುವ ಹೋರಾಟಗಳಲ್ಲಿ ಮೀಸಲಾತಿಯ ಜನಕ ಬಾಬಾ ಸಾಹೇಬರ ಭಾವಬಿಂಬವನ್ನು ನಾಯಕ ಸಮುದಾಯದವರು ಅಸ್ಪೃಶ್ಯರಷ್ಟು ಹೃದಯ- ದಮನಿ- ನಾಡಿಗಳಲ್ಲಿ ಹರಿಯುವ ನೆತ್ತರಿನ ಪ್ರಜ್ಞೆಯಾಗಿಸಿಕೊಂಡಿಲ್ಲ ಎಂಬುದೇ ಪ್ರಶ್ನೆ. ವಾಲ್ಮೀಕಿ ಸಮುದಾಯದ ಬಂಧುಗಳೆಲ್ಲರಲ್ಲಿಯೂ ಅರಿವು ಮೂಡಿ ಶೋಷಿತ ಸಮುದಾಯಗಳ ಬೆನ್ನಿಗೆ ನಿಂತಿದ್ದೇ ಆದರೆ, ದಲಿತರ ಮೇಲೆ ಜಾತಿ ಕಾರಣಕ್ಕೆ ದೌರ್ಜನ್ಯ ಎಸಗುವ ಜಾತಿಗ್ರಸ್ತ ಮನಸುಗಳ ಎದೆ ನಡುಗುವುದಷ್ಟೇ ಅಲ್ಲದೆ ಒಂದು ನಿರ್ಣಾಯಕ ರಾಜಕೀಯ ಶಕ್ತಿಯಾಗಿ ಹೊಮ್ಮಬಹುದು. ಮೀಸಲಾತಿ ವಿಚಾರ ಬಂದಾಗ ಮಾತ್ರ ಅಂಬೇಡ್ಕರ್ ಫೋಟೋ ಹಿಡಿಯೋದು, ಬಾಕಿಯ ವೇಳೆಯಲ್ಲಿ ಹಿಂದುತ್ವದ ಝಂಡಾ ಹಾರಿಸೋದು ಹೀಗಿದೆ ಬಹುತೇಕ ಜನರ ವರ್ತನೆ. ಕೆಲವರು ಅಂಬೇಡ್ಕರ್ ಅಂದ್ರೆ ಹೊಲಯ ಮಾದಿಗ ಸಮುದಾಯಕ್ಕೆ ಮೀಸಲು ಅಂತಾ ತಿಳಿದುಕೊಂಡಿದ್ದಾರೆ… ತಾವೂ ದಲಿತರೆಂಬುದನ್ನು ಮರೆತೇಬಿಟ್ಟಿದ್ದಾರೆ. ನೆನಪಿರಲಿ ಮೀಸಲಾತಿಗೆ ಈ ದೇಶದ ಎಲ್ಲಾ ಧರ್ಮೀಯ ಶೋಷಿತರು ಹಕ್ಕುದಾರರು. ಸಂವಿಧಾನದ ಮೂಲಕ ಆ ಹಕ್ಕನ್ನು ದೊರಕಿಸಿಕೊಟ್ಟಿರುವುದು ಅಂಬೇಡ್ಕರ್! ಅದೇ ಸಂವಿಧಾನವನ್ನು ಸುಡುತ್ತಿರುವ ವಿರೋಧಿಗಳೊಂದಿಗೆ ಗುರುತಿಸಿಕೊಳ್ಳುವುದೆಂದರೆ ಅದು ಹೆತ್ತ ತಾಯಿಯ ವಿರುದ್ಧ ಮಕ್ಕಳು ಎಸಗುವ ಮಹಾ ಪಾಪಕಾರ್ಯ!

ಇಂತಹ ವಾಸ್ತವಗಳಿಗೆ ನಾವು ಮುಖಾಮುಖಿಯಾಗಬೇಕು. ಇಲ್ಲದಿದ್ದರೆ ನಾವು ಡಾ.ಬಿ.ಆರ್.ಅಂಬೇಡ್ಕರ್ ಅವರ ವಿರುದ್ಧ ಸಾಗುವ ದ್ರೋಹಿಗಳೂ ಆತ್ಮವಂಚಕರೂ ಆಗುತ್ತೇವೆ. ಶರಣು ಶರಣಾರ್ಥಿಗಳು.

-ಡಾ.ವಡ್ಡಗೆರೆ ನಾಗರಾಜಯ್ಯ
8722724174

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಭಾರತದ ಜನಸಂಖ್ಯೆ ವರವೋ..? ಶಾಪವೋ..?

Published

on

ಸಾಂದರ್ಭಿಕ ಚಿತ್ರ

 

  • ಅಂಬಿಕಾ. ಕೆ
    ಎಂ.ಎ. ಪ್ರಥಮ ವರ್ಷದ ವಿದ್ಯಾರ್ಥಿನಿ
    ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ
    ಬೆಂಗಳೂರು ವಿಶ್ವವಿದ್ಯಾಲಯ

 

ವಿಶ್ವ ಸಂಸ್ಥೆಯು ಪಾಪುಲೇಷನ್ ಫಂಡ್ ಮಾಡಿರುವ ಅಂದಾಜಿನ ಪ್ರಕಾರ ಭಾರತವು ಜಗತ್ತಿನ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ ಎನಿಸಿಕೊಂಡಿದೆ.

ದೇಶದ ಒಟ್ಟು ಜನಸಂಖ್ಯೆಯು 142.86 ಕೋಟಿಗೆ ಏರಿಕೆಯಾಗಿದ್ದು, ಚೀನಾ ಎರಡನೇ ಸ್ಥಾನಕ್ಕೆ ಇಳಿದಿದೆ, ಇಂತಹದೊಂದು ಹಿರಿಮೆಗೆ ಭಾರತವು ಪಾತ್ರವಾಗಲಿದೆ ಎಂಬುದರ ಅರಿವು ಹಿಂದೆಯೇ ಇತ್ತು. ಹೊಸ ಭಾರತದ ಜನಸಂಖ್ಯೆಯ ಸ್ವರೂಪವೇನು ಮತ್ತು ಯಾವ ವಯೋ ಮಾನದವರು ಎಷ್ಟಿದ್ದಾರೆ. ಆದಾಯ ಮಟ್ಟ ಹೇಗಿದೆ, ಆದಾಯ ಹಂಚಿಕೆ ಹೇಗಿದೆ ಎಂಬುದರ ಕುರಿತು ಕೂಡ ಚರ್ಚೆಗಳು ನಡೆಯುತ್ತಿವೆ. ಒಟ್ಟು ಜನಸಂಖ್ಯೆಯ ಜತೆಗೆ ಈ ಎಲ್ಲಾ ಅಂಶಗಳು ಕೂಡ ಸರ್ಕಾರದ ನೀತಿಗಳು ಮತ್ತು ಕಾರ್ಯಕ್ರಮ ರೂಪಿಸುವಿಕೆ ಮೇಲೆ ಪ್ರಭಾವ ಬೀರುತ್ತವೆ. ರಾಜಕೀಯ ಪಕ್ಷಗಳು ಮತ್ತು ಗುಂಪುಗಳು ರಾಜಕೀಯ ಹಾಗೂ ಸಾಮಾಜಿಕ ಸ್ಥಾನಗಳನ್ನು ನಿರ್ಧರಿಸುವಲ್ಲಿಯೂ ಈ ಅಂಶಗಳು ಪಾತ್ರವಹಿಸುತ್ತವೆ ಭಾರತದಲ್ಲಿ ಗರಿಷ್ಠ ಸಂಖ್ಯೆಯು ಯುವ ಜನರಿದ್ದಾರೆ.

ಹಾಗೆಯೇ ಮುಂದುವರೆಯಲಿದೆ 15 ರಿಂದ 24 ವರ್ಷದೊಳಗಿನವರ ಸಂಖ್ಯೆಯು 25.4 ಕೋಟಿ ಎಂದು ಅಂದಾಜಿಸಲಾಗಿದೆ ಇನ್ನು ದೀರ್ಘಕಾಲ ಭಾರತವು ಈ ಸ್ಥಿತಿ ಕಾಯ್ದುಕೊಳ್ಳಲಿದೆ ಎಂಬುದರಲ್ಲಿಯೂ ಅನುಮಾನ ಇಲ್ಲ ಜನಸಂಖ್ಯೆಯಲ್ಲಿ ಜಗತ್ತಿನಲ್ಲಿ ಮೊದಲ ಸ್ಥಾನಕ್ಕೆ ಏರುವುದು, ಗೌರವ ಏನು ಅಲ್ಲ ಬದಲಿಗೆ ಇದು ದೇಶಕ್ಕೆ ಹಲವು ಸವಾಲುಗಳನ್ನು ಹುಟ್ಟುತ್ತದೆ ಜತೆಗೆ ಅವಕಾಶಗಳ ಬಾಗಿಗಳನ್ನು ತೆರೆಯುತ್ತದೆ ಆದರೆ, ಜನರನ್ನು ಸಕಾಲಿಕವಾಗಿ ಮತ್ತು ಪರಿಣಾಮಕಾರಿಯಾಗಿ ಬಲಿಸಿಕೊಳ್ಳದೆ ಇದ್ದರೆ ಜನಸಂಖ್ಯೆಯೇ ಶಾಪವಾಗಿ ದೊಡ್ಡ ಸವಾಲಾಗಿ ಪರಿಣಮಿಸಬಹುದು. ದೇಶ ಪ್ರತಿ ವರ್ಷವೂ ಹೆಚ್ಚು ಹೆಚ್ಚು ಜನರಿಗೆ ಆಹಾರ ಬಟ್ಟೆ ಶಿಕ್ಷಣ ಆರೋಗ್ಯ ಸೇವೆ ಉದ್ಯೋಗಾವಕಾಶಗಳನ್ನು ಒದಗಿಸಬೇಕಾಗುತ್ತದೆ.

ಅಂಬಿಕಾ. ಕೆ

ಹೀಗೆ ಮುಂದುವರೆದರೆ ಉದ್ಯೋಗಾವಕಾಶಗಳು ದೊರೆಯದೆ ಜನರ ಜೀವನ ಮಟ್ಟ ಸುಧಾರಿಸಿಕೊಳ್ಳುವುದು ಕಷ್ಟವೇ ಸರಿ ಕೆಲಸ ಮಾಡುವ ವಯೋಮಾನದ ಜನರನ್ನು ಸಮಂಜಸವಾಗಿ ಬಳಸಿಕೊಂಡರೇ ಮಾತ್ರ ಜನಸಂಖ್ಯೆಯು ದೇಶದ ಅಭಿವೃದ್ಧಿಗೆ ಪೂರಕವಾಗಿ ಪರಿಣಮಿಸುತ್ತದೆ. ದೇಶದಲ್ಲಿ ದೊಡ್ಡ ಸಂಖ್ಯೆಯ ಜನರಿಗೆ ಈಗಲೂ ಮೂಲ ಸೌಲಭ್ಯಗಳನ್ನು ಒದಗಿಸಲು ಸಾಧ್ಯವಾಗಿಲ್ಲ ಆದ್ದರಿಂದ ಎಲ್ಲಾ ಕ್ಷೇತ್ರಗಳಲ್ಲಿಯೂ ಸಂಬಂಧಿಸಿದ ನೀತಿಗಳು ಮತ್ತು ಕಾರ್ಯತಂತ್ರ ಗಳಿಗೆ ಸಂಬಂಧಿಸಿದ ಪ್ರಯತ್ನಗಳನ್ನು ನಡೆಸದೇ ಇದ್ದರೆ ಜನಸಂಖ್ಯೆ ಹೆಚ್ಚಳದ ಲಾಭವು ದೊರೆಯದೆ ಹೋಗಬಹುದು ಇದರ ಪರಿಣಾಮವಾಗಿ ಲಾಭದ ಹೆಸರಿನಲ್ಲಿ ನಷ್ಟವೇ ಹೆಚ್ಚು ಅದುವೇ ಒಂದು ಹೊರೆಯುವಾಗಬಹುದು.

ಯುವ ಜನರಿಗೆ ಸೌಲಭ್ಯಗಳು ಮತ್ತು ಅವಕಾಶಗಳನ್ನು ಸೃಷ್ಟಿಸುವುದರ ಜೊತೆಗೆ ಹೆಚ್ಚುತ್ತಲೇ ಇರುವ ಹಿರಿಯ ನಾಗರಿಕರ ಹಾರೈಕೆಯು ವ್ಯವಸ್ಥೆ ಮಾಡಬೇಕಿದೆ ಅವಕಾಶಗಳನ್ನು ಸದುಪಯೋಗ ಮಾಡಿಕೊಳ್ಳುವುದು ಮತ್ತು ಸವಾಲುಗಳನ್ನು ಎದುರಿಸುವುದು ಭಾರತೀಯರ ಹೊರೆಗಾರಿಕೆ ದೇಶದ ಜನರ ಅಗತ್ಯಗಳನ್ನು ಪೂರೈಸಲು ವಿಫಲವಾದರೆ, ಸಾಮಾಜಿಕ ಸಂಘರ್ಷ ಮತ್ತು ರಾಜಕೀಯ ದೃಷ್ಟಿ ಉಂಟಾಗಿ ಅದು ಗಂಭೀರ ಪರಿಣಾಮಗಳಿಗೆ ಕಾರಣವಾಗಬಹುದು. ಮುಂದೆ ಜನಸಂಖ್ಯಾ ಸ್ಫೋಟವಾದರೂ ಆಶ್ಚರ್ಯ ಪಡಬೇಕಾಗಿಲ್ಲ ಈಗಿನ ಸನ್ನಿವೇಶದಲ್ಲಿ ದೊರಕುತ್ತಿರುವ ಸಂಪನ್ಮೂಲಗಳ ಗರಿಷ್ಠ ಬಳಕೆ ಮತ್ತು ಪರಿಣಾಮಕಾರಿ ಬಳಕೆ ಬಹಳ ಮಹತ್ವವಾಗಿದೆ.

ಮೀಸಲಾತಿ, ವಲಸೆ , ರಾಜಕೀಯ ಪ್ರಾತಿನಿಧ್ಯ ಸಂಪನ್ಮೂಲಗಳ ಹಂಚಿಕೆ ಮತ್ತು ಇದರ ವಿಚಾರಗಳು ಚರ್ಚೆಗೆ ಒಳಗಾಗುವ ಸಾಧ್ಯತೆ ಇದೆ ಸಮಾಜದ ಎಲ್ಲಾ ವರ್ಗಗಳನ್ನು ಸಮಾನವಾಗಿ ಒಳಗೊಳ್ಳುವ ಆರ್ಥಿಕ ಪ್ರಗತಿಯು ಸಾಧ್ಯವಾದರೆ ಜನಸಂಖ್ಯೆ ಏರಿಕೆ ಸವಾಲಾಗಿ ಪರಿಣಮಿಸಬಹುದು ಮಾನವ ಅಭಿವೃದ್ಧಿಯೇ ಅತ್ಯುತ್ತಮ ಕುಟುಂಬ ಕಲ್ಯಾಣ ಯೋಜನೆ ಇದರಿಂದ ಜನಸಂಖ್ಯೆಯ ಏರಿಕೆಯನ್ನು ನಿಯಂತ್ರಣದಲ್ಲಿ ಇರಿಸಿಕೊಳ್ಳಬಹುದು ಜನಸಂಖ್ಯೆ ಹೆಚ್ಚಳ ಯಾವುದೋ ಒಂದು ಸಮುದಾಯ ಕಾರಣ ಎಂದು ದೂಷಿಸುವ ಪ್ರವೃತ್ತಿಗೆ ಜ್ಞಾನದಾದ ಆಧಾರ ಇಲ್ಲದ ಪೂರ್ವಗ್ರಹ ಕಾರಣದಿಂದ ಮತ್ತು ಇದು ತಪ್ಪು ನಡವಳಿಕೆಯ ಜನಸಂಖ್ಯೆಗೆ ಸಂಬಂಧಿಸಿದ ಸವಾಲುಗಳನ್ನು ಉತ್ತಮವಾಗಿ ಮತ್ತು ಜಾಣ್ಮೆಯಿಂದ ನಿರ್ವಹಿಸಿದರೆ ಈ ಶತಮಾನವನ್ನು ಭಾರತದ ಶತಮಾನವನ್ನಾಗಿ ಪರಿವರ್ತಿಸುವ ಅವಕಾಶ ನಮ್ಮ ಮುಂದೆ ಇದೆ ಜನರೇ ನಮ್ಮ ದೇಶದ ಸಂಪನ್ಮೂಲವನ್ನಾಗಿ ಮಾರ್ಪಾಡು ಮಾಡಿಕೊಳ್ಳುವ ಅವಕಾಶ ನಮ್ಮ ನಿಮ್ಮೆಲ್ಲರ ಮೇಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಾಬಾ ಸಾಹೇಬ ಅಂಬೇಡ್ಕರರ ‘ಧ್ಯಾನ’ ಗಾಯನ ; ವಿನೂತನ

Published

on

 

  • ವೆನ್ನೆಲಾ ಕೆ.
    ಎಂ.ಎ. ಪ್ರಥಮ ವರ್ಷದ ವಿದ್ಯಾರ್ಥಿನಿ,
    ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ,
    ಬೆಂಗಳೂರು ವಿಶ್ವವಿದ್ಯಾಲಯ,ಬೆಂಗಳೂರು

ತ್ತೀಚೆಗೆ ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ಅನನ್ಯ ಮಾಧ್ಯಮ ಮತ್ತು ಬೆಳ್ಳಿತೆರೆ ಸಂಸ್ಥೆಯ ವತಿಯಿಂದ ಆಯೋಜಿಸಿದ 132ನೇ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ರವರ ಜನುಮ ನಿಮಿತ್ತವಾಗಿ “ಧಾನ್ಯ” ‘ಗಾಯನವು’ ವಿನೂತನವಾದ ಈ ಕಾರ್ಯಕ್ರಮವು 5 ಘಂಟೆ, 1ನಿಮಿಷ, 14 ಸೆಕೆಂಡ್ ಗೆ ಆರಂಭವಾಗಿದ್ದು ಅವಿಸ್ಮರಣೀಯವಾದ ದಿನ, ಇದೊಂದು ಭಾರತ ಇತಿಹಾಸದ ಪುಟದ ಚರಿತ್ರೆಯಲ್ಲೇ ಹೊಸ ದಾಖಲೆಯೂ ಅಂತ ಹೇಳಬಹುದು.

ಈ ಕಾರ್ಯಕ್ರಮವನ್ನು ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ವು ಇಡೀ ಭಾರತದಲ್ಲೇ ಯಾರು ಮಾಡಿರದ ಈ ವಿನೂತವಾದ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ಬೆಂಗಳೂರು ನಗರದಲ್ಲಿರುವ ಗಾಂಧಿ ಭವನದ ಆವರಣದಲ್ಲಿ ‘ಅನನ್ಯ ಸಂಸ್ಥೆ’ ವತಿಯಿಂದ 132 ನೇ ‘ವಿಶ್ವದ ವೀರ ವಿದ್ಯಾರ್ಥಿ ಹುಟ್ಟಿದ ದಿನ’ ಹಾಗೂ ‘ರಾಷ್ಟ್ರದ ಸ್ಫೂರ್ತಿಯ ದಿನ’ ‘ಸರ್ವ ಸಮುದಾಯದ ಶಕ್ತಿಯ ದಿನ’ ಇದೊಂದು ನಮ್ಮೆಲ್ಲರ ಹಬ್ಬದ ದಿನ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಇಂತಹ ಮೇರು ಶಿಖರ ಟ್ಯಾಗ್ ಲೈನ್ ಗಳಿಂದ ಅದ್ಭುತವಾಗಿ
ಆಯೋಜಿಸಿದ ಕಾರ್ಯಕ್ರಮಕ್ಕೆ ರಾಜ್ಯ ಕಂಡ ಪ್ರಸಿದ್ಧ ಐಪಿಎಸ್ ಅಧಿಕಾರಿಗಳು, ಸರ್ಕಾರಿ ಅಧಿಕಾರಿಗಳು, ಸಿನಿಮಾ ಸೆಲೆಬ್ರಿಟಿಗಳು, ಸಮಸ್ತ ವಿದ್ಯಾರ್ಥಿ ಸಮೂಹ, ಸಾಮಾಜಿಕ ನ್ಯಾಯದ ವಿಚಾರಶೀಲರು, ಬರಹಗಾರರು, ಪತ್ರಕರ್ತರು ಇನ್ನೂ ಅನೇಕ ಮುಂತಾದವರು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ಇದಕ್ಕೆ ಮುಖ್ಯ ಕಾರಣಕರ್ತರಾದ ಅನನ್ಯ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಶ್ರೀ ರಾಂಪುರ ರಾಜೇಶ್ ರವರ ನಿರ್ದೇಶನದಲ್ಲಿ ಇಂತಹ ಕಾರ್ಯಕ್ರಮ ಆಯೋಜಿಸಿದ್ದು ಹೆಮ್ಮೆಯ ವಿಷಯ.

ಇದರ ಹಿನ್ನೆಲೆ: ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ದಲ್ಲಿ ಅತ್ಯುತ್ತಮ ಹಾಗೂ ಅತ್ಯಂತ ತುಂಬಾ ಮನಸ್ಸಿನಿಂದಲ್ಲೇ ವಿಶೇಷವಾದ ಆಸಕ್ತಿಯನ್ನು ಅಂಬೇಡ್ಕರ್ ರವರು ಸಂಗೀತ ಪ್ರಿಯರು ಹಾಗೂ ಅಂಬೇಡ್ಕರ್ ರವರು ಸುಶ್ರಾವ್ಯವಾಗಿ ವಯಲಿನ್ ನುಡಿಸುತ್ತಿದ್ದರು. ಹಾಗೇಯೆ ಇವರಿಗೆ ಚಿತ್ರಕಲೆಯೂ ಸಹ ಒಲಿದಿತ್ತು ಎಂಬುದು ಗಮನಾರ್ಹ ಸಂಗತಿ. ಇಂತಹ ವಿಷಯವನ್ನು ಯಾರು ಸಹ ಬೆಳಕು ಚೆಲ್ಲುವ ಸಾಹಸಕ್ಕೆ ಕೈ ಹಾಕಿ ಇರಲಿಲ್ಲ. ಇದೊಂದು ಅನನ್ಯ ಸಂಸ್ಥೆ ವತಿಯಿಂದ ಇಂತಹ ಕಾರ್ಯಕ್ರಮ ನಡೆಸಿಕೊಟ್ಟಿದ್ದು ಐತಿಹಾಸಿಕ ಚರಿತ್ರೆಗೆ ಮುನ್ನುಡಿವಾಗಿದೆ.

ಅಂಬೇಡ್ಕರ್ ರವರಿಗೆ ತಮ್ಮ ಬಿಡುವಿನ ವೇಳೆಯಲ್ಲಿ ಅದ್ಭುತವಾದ ಒಬ್ಬ ಸಂಗೀತ ಪ್ರಿಯರಾಗಿದ್ದರು. ಇವರು ಸುಶ್ರಾವ್ಯವಾಗಿ ವಯಲಿನ್ ನುಡಿಸುತ್ತಿದ್ದರು ಹಾಗೂ ವಿಶೇಷವಾಗಿ ಚಿತ್ರಕಲೆ ಸಹ ಸರಳವಾಗಿ ಮಾಡುವ ಮೂಲಕ ತಮ್ಮ ಮನದಲ್ಲಿ ಆಸಕ್ತಿ ಹೊಂದಿದ್ದರು. ಇನ್ನು ಹಲವಾರು ವಿಷಯದಲ್ಲಿ ಅಂದರೆ ಅಂಬೇಡ್ಕರ್ ರವರಿಗೆ ವಿಶೇಷವಾದ ಇವುಗಳಲ್ಲಿ ಆಸಕ್ತಿ ಮತ್ತು ಅಭಿರುಚಿಯನ್ನು ಹೊಂದಿದ್ದರು ಎಂಬುದನ್ನು ಮನಗಂಡ ಅನನ್ಯ ಸಂಸ್ಥೆಯ ವತಿಯಿಂದ ಆಯೋಜಿಸಿದ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮವು ಅತ್ಯುತ್ತಮವಾಗಿ ಮೂಡಿಬಂದಿದೆ.

ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮದಲ್ಲಿ ವಿಶೇಷವಾಗಿ ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕರು ಹಾಗೂ ಚಿತ್ರ ಸಾಹಿತ್ಯಗಳು, ಅಂಬೇಡ್ಕರ್ ವಾದಿಗಳು ಮತ್ತು ಚಿತ್ರರಂಗದ ಬಹುಮುಖ ಪ್ರತಿಭೆ, ಮಹಾಗುರುಗಳಾದ ಡಾ. ಹಂಸಲೇಖ ರವರು ಹೊಸದಾಗಿ ಹಾಡನ್ನು ಬರೆದದ್ದು ತುಂಬಾ ಅವಿಸ್ಮರಣೀಯ ಅಂತ ಹೇಳಬಹುದು. ಇವರು ಇದೇ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪ್ರೊತ್ಸಾಹ ನೀಡಿದ್ದು, ಸರ್ವ ಸಮುದಾಯದಕ್ಕೆ ಹೊಸ ಶಕ್ತಿ ತುಂಬಿದ್ದು ಮೇರು ವ್ಯಕ್ತಿಯಾಗಿದ್ದಾರೆ.

ವೆನ್ನೆಲಾ ಕೆ.

ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮದಲ್ಲಿ ಮುಖ್ಯವಾದ ಅಂಶವೆಂದರೆ ಇದರಲ್ಲಿ ಒಟ್ಟು ನಾಲ್ಕು ಭಗವಾನ್ ಬುದ್ಧ, ಅಂಬೇಡ್ಕರ್, ಬಸವೇಶ್ವರ ಮುಂತಾದರವರನ್ನು ವಿಷಯಗಳನ್ನು ಪರಿಗಣಿಸಿ ಅಂಬೇಡ್ಕರ್ ಧ್ಯಾನ ಹಾಡುಗಳ ರಚಿಸಿವುದರಲ್ಲಿ ಪ್ರಮುಖವಾಗಿ ರಾಜ್ಯದ ಹೆಸರಾಂತ ಸಾಹಿತಿ, ಪ್ರಗತಿಪರ ಚಿಂತಕರು ಹಾಗೂ ಮಾಜಿ ಅಧ್ಯಕ್ಷರಾದ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರಿನ ಪ್ರೊ.ಎಸ್.ಜಿ.ಸಿದ್ದರಾಮಯ್ಯನವರ
‘ಧೀ ಶಕ್ತಿಯೇ … ಜ್ಞಾನ ಪರ್ವತದ … ಧೀಮಂತ ಧೀಶಕ್ತಿಯೇ …
ಇಂತಹ ಸಾಲುಗಳನ್ನು, ಡಾ. ಕೈ.ವೈ.ನಾರಾಯಣಸ್ವಾಮಿರವರ ದೀಪಾ …. ಎಲ್ಲರೆದೆಯಲಿ … ಹಚ್ಚಿದ ದೀಪಾ .. ಭೂಪಾ … ಭೂಪಾ … ಭೀಮಾ ಭೂಪಾ .. ಬಾಬಾ .. ಸಾಹೇಬ್.. ಜೀವಸ್ವರವೇ … ಬಾಬಾ.. ಹಾಗೂ ರವಿ ಮರಿಯಪ್ಪರವರ ಹತ್ತು ಸಾವಿರ ವಯಲಿನನ್ನು … ವೀಣೆಗಳು ನೂರೆಂಟು … ಕೋಟಿ ಕೋಟಿ ಎದೆ ಸದ್ದಿನ ಡೊಳ್ಳು … ಸಂಯೋಜಿಸಿದರೇ .. ಸಂವಿಧಾನಾ … ಮತ್ತು ಚಿತ್ರ ಸಾಹಿತಿ, ಹೆಸರಾಂತ ಸಂಗೀತ ನಿರ್ದೇಶಕರು ಡಾ. ಹಂಸಲೇಖ ರವರು ನಿನ್ನ ಮೌನಾ … ದೀನ ಗಾನಾ… ನಿನ್ನ ಧ್ಯಾನಾ .. ಸಂವಿಧಾನಾ … ಈ ನಾಲ್ಕು ಅಂಬೇಡ್ಕರ್ ಧ್ಯಾನ ರಚನೆಗೆ ಇವರುಗಳ ಬರೆದಿರುವ ಅದ್ಭುತವಾದ ಅಂಬೇಡ್ಕರ್ ರವರ ಧ್ಯಾನ ಹಾಡುಗಳನ್ನು ನಮ್ಮ ಹಿಂದುಸ್ತಾನಿ ಸಂಗೀತ ಹಾಡುಗಳ ಮೂಲಕ ಕನ್ವರ್ಟ್ ಮಾಡುವ ಮೂಲಕ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿತು.

ಹಾಗೆಯೇ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮವು ಬಹಳಷ್ಟು ಯಶಸ್ವಿಯಾಗಬೇಕಾದರೆ ಈ ಮೊದಲು ಪುಟ್ಟರಾಜ ಗವಾಯಿಗಳ ಆಪ್ತ ಶಿಷ್ಯರಲ್ಲಿ ಒಬ್ಬರಾದ ವಿದ್ವಾನ್ ಶ್ರೀ ಡಿ. ಕುಮಾರ್ ದಾಸ್ ಅವರ ವಿದ್ವತ್ ಶರೀರದಲ್ಲಿ ‘ಧ್ಯಾನ ಗಾಯನ’ ಹಾಗೂ ಇವರ ತಂಡದ ವತಿಯಿಂದ ನಡೆಸಿಕೊಟ್ಟ ಅದ್ಭತವಾದ ಅಂಬೇಡ್ಕರ್ ರವರ ಧ್ಯಾನವು ಹಿಂದುಸ್ತಾನಿ ಸಂಗೀತದ ಕನ್ವರ್ಟ್ ಮಾಡುವ ಮುಖಾಂತರ ಈ ಹಾಡುಗಳನ್ನು ಬಹಳ ಸೊಗಸಾಗಿ ಮೂಡಿಬಂದಿದ್ದು ಹೊಸ ದಾಖಲೆಗೆ ಸೇರ್ಪಡೆಯಾಗಿದೆ.

ಇನ್ನು ಮುಂಬರುವ ದಿನಗಳಲ್ಲಿ ಅದಷ್ಟು ಹಲವಾರು ವಿನೂತನವಾದ ಭಗವಾನ್ ಬುದ್ಧರ, ಬಸವೇಶ್ವರರ ಹಾಗೂ ವಿಶ್ವದ ವೀರ ವಿದ್ಯಾರ್ಥಿಯಾದ ಮೇರು ರಾಷ್ಟ್ರದ
ನಾಯಕರಾದ ಬಾಬಾಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ರವರ ಹಲವಾರು ಹಾಡುಗಳನ್ನು
ಅನನ್ಯ ಮಾಧ್ಯಮ ಮತ್ತು ಬೆಳ್ಳಿತೆರೆ ಸಂಸ್ಥೆಯ ವತಿಯಿಂದ ಆಯೋಜಿಸಿದರೆ ಇನ್ನುಷ್ಟು ಭಾರತದ ಇತಿಹಾಸದ ಪುಟಗಳಲ್ಲಿ ಮರೆತು ಹೋಗಿರುವ ಹಲವು ಬಗ್ಗೆ ದಾಖಲೆ ಇಲ್ಲದ ನೈಜ ಸಂಗತಿಗಳನ್ನು ಪುನಃ ಹೊಸ ದಾಖಲೆಗೆ ಉಪಯುಕ್ತವಾದ ವಿಶಿಷ್ಟವಾದ ಮೇರು ನಾಯಕನ
ಅಂಬೇಡ್ಕರ್ ರವರ ವಿಚಾರ ಧಾರೆಗಳು ತಾವು ಅನುಭವಿಸಿದ ನೋವು, ನಲಿವು, ಭಾರತದ ರಾಜ್ಯಾಂಗದ ಶಿಲ್ಪಿಯನ್ನು ಮುಂಬರುವ ದಿನಗಳಲ್ಲಿ ಹೊಸ ಪೀಳಿಗೆಯ ಪರಿಚಯಿಸುವ ಕೀರ್ತಿದಾಯಿಕವಾಗಲಿ ಮತ್ತು ಅದಷ್ಟು ಮುಂಬರುವ ದಿನಗಳಲ್ಲಿ ಅಂಬೇಡ್ಕರ್ ರವರ ಆಸಕ್ತಿದಾಯಕ ವಿಚಾರಗಳು ಹಾಗೂ ಸಂಗೀತದ ಬಗ್ಗೆ ಹಲವಾರು ಮಾಹಿತಿಗಳು ಸಮಸಮಸಮಾಜಕ್ಕೆ ತಲುಪುವ ವ್ಯವಸ್ಥೆಗೆ ಸಾಕ್ಷಿಯಾಗಲಿ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಬಹಿರಂಗ

ರಷ್ಯಾದಲ್ಲಿ ಓಂ – ಭರತಾಸ್- ರಾಮ – ರಾವಣ ಲಂಕೇಶ – ಮಾರೀಚ – ಸೀತ ನದಿಗಳು..!

Published

on

  • ಲಕ್ಷ್ಮೀಪತಿ ಕೋಲಾರ, ಸಂಶೋಧಕರು, ಸಂಸ್ಕೃತಿ‌ ಚಿಂತಕರು, ಬೆಂಗಳೂರು

ಸ್ಲಾವ್ ಸಮುದಾಯದ ಲಿತುವೇನಿಯ, ಲಾತ್ವಿಯ, ಬೆಲಾರಸ್,ಉಕ್ರೇನ್ ಮತ್ತು ರಷಿಯಾದಂತಹ ದೇಶಗಳ ನದಿ,ನಗರಗಳು ಸಂಸ್ಕೃತ ಮೂಲದ ಹೆಸರುಗಳನ್ನೆ ಇಂದಿಗು ಉಳಿಸಿಕೊಂಡಿರುವುದು ಆ ಭಾಷೆ ಮತ್ತು ಸಂಬಂಧಿತ ಸಂಸ್ಕೃತಿಯೊಂದಿಗೆ ಅವು ಹಿಂದೊಮ್ಮೆ ಹೊಂದಿದ್ದ ಬಲವಾದ ನಂಟಿಗೆ ಸಾಕ್ಷಿಯಾಗಬಲ್ಲವು.

ಇದರೊಂದಿಗೆ ಉತ್ತರ ಭಾರತದ ಆರ್ಯ ವೈದಿಕರ ಭಾಷೆ ಸಂಸ್ಕೃತಿಯೊಂದಿಗೆ ಸ್ಲಾವ್ ಸಮುದಾಯಕ್ಕೆ ಎಷ್ಟು ನಿಕಟ ಸಂಬಂಧವಿತ್ತೆಂಬುದನ್ನು ಮತ್ತು ನಾಲ್ಕೈದು ಸಾವಿರ ವರ್ಷಗಳ ಹಿಂದೆ ಈ ಎಲ್ಲ ಆರ್ಯ ಸಮುದಾಯಗಳು ಒಟ್ಟಿಗೆ ಒಂದೆಡೆಯೇ ಕಳ್ಳುಬಳ್ಳಿಗಳಾಗಿ ಜೀವಿಸಿದ್ದರೆಂಬುದನ್ನ ಈ ಹಿನ್ನೆಲೆಯಲ್ಲಿ ನಾವು ಗ್ರಹಿಸಬಹುದಾಗಿದೆ.

ಅದರಲ್ಲು ವಿಶೇಷವಾಗಿ ಲಿತುವೇನಿಯ ಮತ್ತು ರಷಿಯಾದ ನದಿಗಳ ಹೆಸರುಗಳು ಎಷ್ಟು ಸಂಸ್ಕೃತಮಯವು (ಇಂಡೋ – ಯುರೋಪಿಯನ್ ಭಾಷಾಮೂಲದ) ಮತ್ತು ವೈದಿಕರ ಪುರಾಣ ಮೂಲದವು ಆಗಿವೆ ಎಂದರೆ, ನಂಬಲಿಕ್ಕು ಅಸಾಧ್ಯ ಎಂಬಂತಿವೆ. ಇದರರ್ಥ ಸ್ಲಾವ್ ಜನರು ವೈದಿಕರ ಪುರಾಣಗಳಿಂದ ಪ್ರೇರಿತಗೊಂಡಿದ್ದಾರೆ ಎಂಬುದಲ್ಲ.

ಬದಲಿಗೆ ವೈದಿಕರ ಇಂದಿನ ಪುರಾಣ – ಸಂಸ್ಕೃತಿ – ಭಾಷೆಗಳು ವೈದಿಕರಿಗೆ ಎಷ್ಟು ಸಂಬಂಧಿಸಿದ್ದೋ ಅದಕ್ಕು ಹೆಚ್ಚಿನದಾಗಿ ಸ್ಲಾವ್ ಸಮುದಾಯಕ್ಕೂ ಸಂಬಂಧಿಸಿದ್ದಾಗಿದ್ದವು. ಹಾಗೆ ನೋಡಿದರೆ ಬ್ರಹ್ಮ – ವೇದ ಮೂಲವು ಕೂಡ ಸ್ಲಾವ್ ಸಮುದಾಯದ ಉತ್ತರ ಧ್ರುವ ಪ್ರದೇಶಕ್ಕೆ ಹೋಗಿ ನಿಲ್ಲುತ್ತದೆ ಎಂಬುದು ಸೋಜಿಗವಾದರು ನಿರ್ವಿವಾದವಾಗಿ ಚಾರಿತ್ರಿಕ ಸತ್ಯವಾಗಿದೆ. 12 – 13 ನೇ ಶತಮಾನಗಳಲ್ಲಿ ಸ್ಲಾವ್ ಜನರು ಕ್ರೈಸ್ತರಾಗಿ ಪರಿವರ್ತಿತರಾಗುವವರೆಗು ಅವರು ಶತಾಂಶ ಮತ್ತು ಥೇಟ್ ಶ್ರೇಷ್ಟ ಆರ್ಯ ವೈದಿಕರೆ ಆಗಿದ್ದರು.

ರಷ್ಯ ಮತ್ತು ಲಿತುವೇನಿಯಾಗಳಲ್ಲಿ ಭರತಾಸ್, ಓಂ, ರಾಮ, ಸೀತ, ಲಂಕೇಶ, ರಾವಣ, ಮಾರೀಚ, ನೆಮುನ (ಯಮುನ), ಕಾಮ, ಯಂತ್ರ, ಶ್ವೇತೆ, ದ್ರವ, ಮೋಕ್ಷ, ಋಗ್ವೇದದ ದಾನವ ಮಾತೆ ದನು ನೆನಪಿನ ದನುಬೆ ಮುಂತಾದ ನದಿಗಳು ಮತ್ತು ನಾರದ (ಈಗ ನರೋದ್ನಯ ಎಂದಿದ್ದರು ಸ್ಥಳೀಯರು ನಾರದ ಬೆಟ್ಟ ಎಂದೇ ಕರೆಯುತ್ತಾರೆ) ಹೆಸರಿನ ಬೆಟ್ಟವು ಇವೆ ಎಂದರೆ ಯಾರೂ ಅಚ್ಚರಿಪಡುವಂತದ್ದೆ.

ಯಾರಿಗಾದರು ಈ ಸಂಗತಿಗಳಲ್ಲಿ ಅನುಮಾನ ಹುಟ್ಟುವುದು ಸಹಜವೆ. ಯಾಕೆಂದರೆ ಸ್ಲಾವ್ – ವೈದಿಕ ಆರ್ಯರ ಮೂಲ ಪ್ರದೇಶವೆ ಉತ್ತರ ದ್ರುವ ಪ್ರದೇಶವಾಗಿತ್ತು ಎಂಬ ಚರಿತ್ರೆಯನ್ನೇ ನಮ್ಮಿಂದ ಮರೆಮಾಚಲಾಗಿತ್ತು ಮತ್ತು ಅದು ಬಹುದೊಡ್ಡ ಸಾಂಸ್ಕೃತಿಕ ರಾಜಕಾರಣವೂ ಆಗಿತ್ತು. ಆದರೆ ತಿಲಕರು ತಮ್ಮ “Arctic Home In the Vedas” ಎಂಬ ಪುಸ್ತಕದಲ್ಲಿ ಉತ್ತರ ಭಾರತದ ವೈದಿಕ ಆರ್ಯರ ತವರು ನೆಲ ಉತ್ತರ ದ್ರುವ ಪ್ರದೇಶವೆ, ಅಂದರೆ ಇಂದಿನ ಲಿತುವೇನಿಯ, ಲಾತ್ವಿಯ, ಬೆಲಾರಸ್ ಪ್ರದೇಶಗಳೇ ಆಗಿದ್ದವು ಎಂದು ಸಮರ್ಥ ಸಾಕ್ಷಾಧಾರಗಳೊಂದಿಗೆ ನಿರೂಪಿಸಿದ್ದಾರೆ.

ರಷ್ಯಾದಲ್ಲಿ ಸಂಸ್ಕೃತ ಭಾಷಾಮೂಲದ ನೂರಾರು ನದಿಗಳಿವೆ. ಭಾರತದಲ್ಲಿ ಕೆಲವು ನದಿಗಳನ್ನ ಹೊರತುಪಡಿಸಿದರೆ ಆ ಪ್ರಮಾಣದ ವೈದಿಕ ಪುರಾಣ ಮೂಲದ ನದಿ ಹೆಸರುಗಳು ಈ ನೆಲದಲ್ಲಿ ಇಲ್ಲವೆಂಬುದು ಪ್ರಾಚೀನ ಕಾಲದಿಂದಲು ಆರ್ಯ ವೈದಿಕರು ಇಲ್ಲಿರಲಿಲ್ಲವೆಂಬುದನ್ನೇ ಸೂಚಿಸುತ್ತದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ2 days ago

ಶೀಘ್ರದಲ್ಲೇ ದೈಹಿಕ ಶಿಕ್ಷಕರ ನೇಮಕ : ಸಚಿವ ಎಸ್. ಮಧು ಬಂಗಾರಪ್ಪ

ಸುದ್ದಿದಿನ ಡೆಸ್ಕ್ : ಪ್ರಾಥಮಿಕ ಶಾಲಾ ವಿಭಾಗದಲ್ಲಿ ಖಾಲಿ ಇರುವ 2120 ದೈಹಿಕ ಶಿಕ್ಷಕರು ಹಾಗೂ ಪ್ರೌಢಶಾಲಾ ವಿಭಾಗದಲ್ಲಿ 2500 ಹುದ್ದೆಗಳ ಭರ್ತಿ ಪ್ರಸ್ತಾವನೆ ಆರ್ಥಿಕ ಇಲಾಖೆಯ...

ದಿನದ ಸುದ್ದಿ1 week ago

ಮಹಿಳೆಗೆ ಮೀಸಲಾತಿ ಬೇಡ, ಸಮಾನ ಪ್ರಾತಿನಿಧ್ಯ ಕೊಡಿ : ಡಾ.ಜ್ಯೋತಿ ಟಿ.ಬಿ

ಸುದ್ದಿದಿನ, ಚನ್ನಗಿರಿ (ಬಸವಾಪಟ್ಟಣ) : ಭಾರತೀಯ ಸಮಾಜದಲ್ಲಿ ಮೀಸಲಾತಿಯಿಂದ ಮಾತ್ರ ಮಹಿಳಾ ಪ್ರಗತಿ ಸಾಧ್ಯವಿಲ್ಲ. ಅವಳಿಗೆ ಪುರುಷನಂತೆ ಸಮಾನವಾದ ಪ್ರಾತಿನಿಧ್ಯ ನೀಡಿದಲ್ಲಿ‌ ಮಾತ್ರವೇ ಮಹಿಳಾ ಪ್ರಗತಿ ಸಾಧ್ಯ....

ದಿನದ ಸುದ್ದಿ1 week ago

ಭಾರತೀಯರೆಲ್ಲರ ಪವಿತ್ರಗ್ರಂಥ ಭಾರತದ ಸಂವಿಧಾನ : ಡಾ.ಕೆ.ಎ.ಓಬಳೇಶ್

ಸುದ್ದಿದಿನ,ದಾವಣಗೆರೆ : ಸಂವಿಧಾನ ಪೂರ್ವದ ಭಾರತದ ಸ್ಥಿತಿಗತಿ ಹಾಗೂ ಸಂವಿಧಾನದ ನಂತರ ಭಾರತದಲ್ಲಾದ ಸಾಮಾಜಿಕ, ಧಾರ್ಮಿಕ ಹಾಗೂ ರಾಜಕೀಯ ಬದಲಾವಣೆಗ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಹಾಗೆಯೇ...

ದಿನದ ಸುದ್ದಿ2 weeks ago

ಸರ್ಕಾರಕ್ಕೆ ಸೆಡ್ಡು ಹೊಡೆದ ದಾವಣಗೆರೆ ರೈತರು

ಪುರಂದರ್ ಲೋಕಿಕೆರೆ ಸುದ್ದಿದಿನ, ದಾವಣಗೆರೆ : ಸರ್ಕಾರದ ಭದ್ರಾ ಅಚ್ಚುಕಟ್ಟು ಪ್ರದೇಶದ ನೀರಾವರಿ ಇಲಾಖೆಯ ಚಿತಾವಣೆಗೆ ಸೆಡ್ಡು ಹೊಡೆದು ಕೇವಲ 110-120 ದಿನಗಳ ಒಳಗಾಗಿಅಲ್ಪಾವಧಿ ತಳಿ ನಾಟಿ...

ದಿನದ ಸುದ್ದಿ2 weeks ago

ಚನ್ನಗಿರಿ | ಅತಿಥಿ ಉಪನ್ಯಾಸಕರಿಂದ ಅನಿರ್ದಿಷ್ಟಾವಧಿ ಮುಷ್ಕರ ; ತಹಶೀಲ್ದಾರರಿಗೆ ಮನವಿ

ಸುದ್ದಿದಿನ, ಚನ್ನಗಿರಿ : ಪಟ್ಟಣದ ಶ್ರೀ ಶಿವಲಿಂಗೇಶ್ವರ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರು ತಮ್ಮ ಸೇವಾ ಖಾಯಂಯಾತಿ ಆಗಿ ಸರ್ಕಾರಕ್ಕೆ ಒತ್ತಾಯಿಸಿ ಶುಕ್ರವಾರ...

ದಿನದ ಸುದ್ದಿ2 weeks ago

ದೇಹದಾಡ್ಯ ಸ್ಪರ್ಧೆ | ಶ್ರೀ ಶಿವಲಿಂಗೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಪ್ರೇಮ್ ಕುಮಾರ್ ಗೆ ‘ಮಿಸ್ಟರ್ ದಾವಣಗೆರೆ’ ಪ್ರಶಸ್ತಿ

ಸುದ್ದಿದಿನ, ಚನ್ನಗಿರಿ : ಶ್ರೀ ಶಿವಲಿಂಗೇಶ್ವರ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ಬಿಎ ವಿದ್ಯಾರ್ಥಿ ಪ್ರೇಮ್ ಕುಮಾರ್ ದಾವಣಗೆರೆ ವಿಶ್ವವಿದ್ಯಾನಿಲಯದ ವ್ಯಾಪ್ತಿಯ ಸರ್ಕಾರಿ ಪ್ರಥಮ...

ದಿನದ ಸುದ್ದಿ2 weeks ago

‘ಸಪ್ತ ಸಾಗರದಾಚೆ ಎಲ್ಲೋ – ಸೈಡ್‍ ಬಿ’ ಚಿತ್ರದ ಟಿಕೆಟ್‍ ಮೇಲೆ ಶೆ.20ರಷ್ಟು ಕಡಿತ

ಸುದ್ದಿದಿನ ಡೆಸ್ಕ್ : ರಕ್ಷಿತ್‍ ಶೆಟ್ಟಿ ಮತ್ತು ರುಕ್ಷಿಣಿ ವಸಂತ್‍ ಅಭಿನಯದ ‘ಸಪ್ತ ಸಾಗರದಾಚೆ ಎಲ್ಲೋ – ಸೈಡ್‍ ಬಿ’ ಚಿತ್ರವು ಕಳೆದ ಶುಕ್ರವಾರ ಬಿಡುಗಡೆಯಾಗಿ, ಯಶಸ್ವಿಯಾಗಿ...

ದಿನದ ಸುದ್ದಿ2 weeks ago

‘ಬ್ಯಾಡ್ ಮ್ಯಾನರ್ಸ್’ ಸಿನಿಮಾ ನೋಡಿದ ಮೊದಲ‌ ಪ್ರೇಕ್ಷಕ ದರ್ಶನ್

ಸುದ್ದಿದಿನ ಡೆಸ್ಕ್ : ಸೂರಿ ನಿರ್ದೇಶನದಲ್ಲಿ ಅಭಿಷೇಕ್‍ ಅಂಬರೀಶ್‍ ಅಭಿನಯಿಸಿರುವ ‘ಬ್ಯಾಡ್‍ ಮ್ಯಾನರ್ಸ್’ ಚಿತ್ರವು ಇದೇ ನ.24ಕ್ಕೆ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಮಧ್ಯೆ, ಇತ್ತೀಚೆಗೆ ಚಿತ್ರತಂಡ ಆಯೋಜಿಸಿದ್ದ...

ದಿನದ ಸುದ್ದಿ3 weeks ago

ಕವಿತೆ | ಮಣ್ಣ ಮಕ್ಕಳು

ಸಿ.ಕೃಷ್ಣನಾಯಕ್, ಆಡಳಿತಾಧಿಕಾರಿ, ಐಟಿಐ ಕಾಲೇಜು ದಾವಣಗೆರೆ ಮಣ್ಣ ಮಕ್ಕಳು ನಾವು ಹಗಳಿರುಳೆನ್ನದೆ ಬೆವರು ಬಸಿದು ಹಸಿದ ಹೊಟ್ಟೆಯಲಿ ಉಸಿರು ಹಿಡಿದವರು ಕಸದಲಿ ರಸ ತೆಗದು ಬದುಕಿನುದ್ದಕ್ಕೂ ಉಳ್ಳವರ...

ದಿನದ ಸುದ್ದಿ3 weeks ago

10,000 ಅಡಿ ಉದ್ದದ ‘ಘೋಸ್ಟ್’ ಪೋಸ್ಟರ್ ಬಿಡುಗಡೆ

ಸುದ್ದಿದಿನ ಡೆಸ್ಕ್ : ಶಿವರಾಜಕುಮಾರ್‍ ಅಭಿನಯದ ‘ಘೋಸ್ಟ್’ ಚಿತ್ರವು ಈಗಾಗಲೇ ನವೆಂಬರ್‌ 17ರಂದು ಜೀ5ನಲ್ಲಿ ಬಿಡುಗಡೆಯಾಗಿದೆ. ಈ ಚಿತ್ರದ ಪ್ರಮೋಷನ್ಗೆ ಬರೋಬ್ಬರಿ 10 ಸಾವಿರ ಚದರ ಅಡಿಯ...

Trending