ದಿನದ ಸುದ್ದಿ
ಸಾವಿರ ಹೂವ್ವ ಎದೆಹನಿ ಬೇಕು..!
- ಹಿರಿಯೂರು ಪ್ರಕಾಶ್
ಕನ್ನಡ ಚಿತ್ರರಂಗವನ್ನು ಡ್ರಗ್ ರಂಗಕ್ಕೆ ಸಮೀಕರಿಸಿ ನಿತ್ಯವೂ ಬಿತ್ತರಿಸುತ್ತಿರುವ ಕೆಟ್ಟ ಸಾಂಬ್ರಾಣಿ ಹೊಗೆಯಂತಿರುವ ಹಸಿ ,ಬಿಸಿ, ಕಸಿ ಸುದ್ದಿ ವೀರರ ಅಬ್ಬರದ ಗಬ್ಬುನಾತದ ನಡುವೆ ಕನ್ನಡ ಚಿತ್ರರಂಗಕ್ಕೆ ತನ್ನದೇ ಆದ ರೀತಿಯಲ್ಲಿ ಪ್ರಬುದ್ಧವಾದ ಸೇವೆಸಲ್ಲಿಸಿ ಕನ್ನಡಿಗರೆಲ್ಲರ ಮನೆಮಾತಾಗಿ ಹೋಗಿದ್ದ ಮಾಗಿದ ಸ್ಫುರದ್ರೂಫಿ ನಟನೊಬ್ಬನ ಜನ್ಮದಿನವನ್ನು ನೆನಪು ಮಾಡಿಕೊಳ್ಳುವ ಅಗತ್ಯ ಹಿಂದೆಂದಿಗಿಂತಲೂ ಇಂದು ಹೆಚ್ಚಿದೆ.
ಇಂದಿನ ಜನಾಂಗಕ್ಕೆ ಸ್ಯಾಂಡಲ್ ವುಡ್ ಎಂದರೆ ಡ್ರಗ್ಮಾಫ಼ಿಯಾ ಎಂದು ಪರಿಚಯಿಸುತ್ತಾ ತನ್ಮೂಲಕ ಸಾಮಾನ್ಯ ಜ್ಞಾನ ಕ್ಷೇತ್ರಕ್ಕೆ ಅದಮ್ಯ ಸೇವೆ ಸಲ್ಲಿಸುತ್ತಿರುವ ಅಪೂರ್ವ ದೃಶ್ಯ ಮಾಧ್ಯಮಗಳ ಘನಕಾರ್ಯದ ಈ ಹೊತ್ತಿನಲ್ಲಿ ಕನ್ನಡ ಚಿತ್ರರಂಗವೆಂದರೆ ಅನೇಕ ಪ್ರತಿಭೆಗಳ ಗಣಿಯೂ ಹೌದೆಂಬ ವಾಸ್ತವವನ್ನು ಕನ್ನಡದ ಪ್ರತಿಭಾನ್ವಿತ ನಟ ಡಾ. ವಿಷ್ಣುವರ್ಧನ್ ರವರ ಎಪ್ಪತ್ತನೇ ಜನ್ಮದಿನವನ್ನು ಆಚರಿಸುವ ಮೂಲಕ ಸಾದರ ಪಡಿಸುವ ಅಗತ್ಯವಿದೆ.
ಬಹುಶಃ ಕನ್ನಡ ಚಿತ್ರರಂಗದಲ್ಲಿ ವರನಟ, ಮೇರುನಟ ಡಾ. ರಾಜ್ ಕುಮಾರ್ ರವರ ನಂತರ ತಮ್ಮ ವೈವಿಧ್ಯಮಯ ಪಾತ್ರಗಳ ಮೂಲಕ, ಸಧಭಿರುಚಿಯ ಚಿತ್ರಗಳ ಮೂಲಕ ಜನಮಾನಸದಲ್ಲಿ ಆಳವಾಗಿ ಬೇರೂರಿರುವ ನಾಯಕ ನಟನೆಂದರೆ ಅದು ನಿಸ್ಸಂದೇಹವಾಗಿ ಡಾ. ವಿಷ್ಣುವರ್ಧನ್. ಅವರು ನಮ್ಮೊಂದಿಗಿದ್ದಿದ್ದರೆ ಇಂದು ತಮ್ಮ ಎಪ್ಪತ್ತನೇ ವಸಂತದ ಸಂಭ್ರಮವನ್ನು ಆಚರಿಸಿಕೊಳ್ಳುತ್ತಿದ್ದರು. ಆದರೆ ಕಲಾವಿದರ ಅದೃಷ್ಟವೆಂದರೆ ಅವರು ನಮ್ಮೊಂದಿಗಿಲ್ಲ ಎನ್ನುವುದು ಕೇವಲ ಭೌತಿಕವಾಗಿ ನಮ್ಮೊಡನಿಲ್ಲವೆಂದು ಅರ್ಥವೇ ಹೊರತು ಅವರ ಕಲಾಸೇವೆಯ ಮೂಲಕ ಅವರು ಜನರ ಹೃನ್ಮನಗಳಲ್ಲಿ ಶಾಶ್ವತವಾಗಿ ಬೇರೂರಿರುತ್ತಾರೆ. ಈ ಮಾತಿಗೆ ಡಾ. ವಿಷ್ಣುವರ್ಧನ್ ಒಂದು ಸ್ಪಷ್ಟ ಉದಾಹರಣೆ.
ಒಮ್ಮೆ ವಿಷ್ಣುವರ್ಧನ್ ರವರ ಭಾವಚಿತ್ರವನ್ನು ದಿಟ್ಟಿಸಿ ನೋಡಿ ! ನಿಷ್ಕಳಂಕತೆ ನಿಚ್ಚಳವಾಗಿ ತುಂಬಿರುವ ಅವರ ಕಂಗಳಲ್ಲಿ ಏನೋ ಒಂಥರಾ ಕಾಂತಿಯಿದೆ, ಅವರ ಮುಖದಲ್ಲಿ ತೇಜಸ್ಸಿದೆ, ಆ ಮುಗುಳುನಗೆಯಲ್ಲಿ ಮುಗ್ಧತೆ ತುಂಬಿದೆ, ಆ ನೋಟದಲ್ಲಿ ಮುಗ್ಧ ಬಾಲಕನ ಅಮಾಯಕತನವಿದೆ. ಅವರ ವ್ಯಕ್ತಿತ್ವದಲ್ಲಿ ಆಕರ್ಷಣೆಯಿದೆ, ನುಡಿಯಲ್ಲಿ ಧೃಡತೆಯಿದೆ, ಸವಿ ಜೇನಿದೆ, ನಡೆಯಲ್ಲಿ ಆತ್ಮವಿಶ್ವಾಸವಿದೆ, ನಕ್ಕರೆ ಹಾಲು ಸಕ್ಕರೆಯಿದೆ, ಕರದಲ್ಲಿ ಕಡಗವಿದೆ, ಅವರ ಬಗ್ಗೆ ಬರೆಯಲು ಹೊರಟರೆ ಕಾದಂಬರಿಯೇ ಆಗುವಂತಿದೆ. ಎಲ್ಲಕ್ಕಿಂತ ಮುಖ್ಯವಾಗಿ ಇಡೀ ಮಾನವ ಕುಲವನ್ನು ಅದರಲ್ಲೂ ವಿಶೇಷವಾಗಿ ಹೆಣ್ಣು ಕುಲವನ್ನು ಗೌರವದಿಂದ ಕಾಣುವ ಸಹೃದತೆಯ ಗುಣವಿದೆ… ಇಷ್ಟೆಲ್ಲಾ ಅಪರೂಪದ ಅಂಶಗಳಿರುವ “ಗುಣವಂತ”ನಾದ “ಹೃದಯವಂತ” ನಿಗೆ ಇಂದು ಎಪ್ಪತ್ತರ ಜನ್ಮದಿನದ ಸಂಭ್ರಮ.
ಬರೋಬ್ಬರಿ 48 ವರ್ಷಗಳ ಹಿಂದೆ ಕನ್ನಡ ಚಿತ್ರರಂಗದಲ್ಲಿ ಹೊಸ ದಾಖಲೆ ಬರೆದ ‘ನಾಗರ ಹಾವು’ ಎಂಬ ಎವರ್ ಗ್ರೀನ್ ಚಿತ್ರವೊಂದು ಕನ್ನಡಕ್ಕೊಬ್ಬ ಸ್ಫುರಧ್ರೂಪಿ, ಹಾಗೂ ಪ್ರತಿಭಾವಂತ ನಟನನ್ನು ಪರಿಚಯಿಸಿತು. “ವಂಶವೃಕ್ಷ ” ವೆಂಬ ಕಪ್ಪುಬಿಳುಪು ಚಿತ್ರದಲ್ಲಿ ಅಲ್ಲೆಲ್ಲೋ ಹಾಗೆ ಬಂದು ಹೀಗೆ ಹೋಗಿದ್ದ ಸಂಪತ್ ಕುಮಾರ್ ಎಂಬ ಹುಡುಗನನ್ನು ‘ ವಿಷ್ಣುವರ್ಧನ’ ಎಂಬ ಐತಿಹಾಸಿಕ ಹೆಸರಿನಿಂದ ನಾಮಕರಣ ಮಾಡಿ ತನ್ಮೂಲಕ ಒಂದು ಅಪರೂಪದ ಕೊಡುಗೆಯನ್ನು ಚಿತ್ರರಂಗಕ್ಕೆ ಕೊಡುತ್ತಿದ್ದೇನೆಂದು ಅಂದು ನಿರ್ದೇಶಕ ಪುಟ್ಟಣ್ಣ ಕಣಗಾಲ್ ಕೂಡಾ ಊಹಿಸಿರಲಿಲ್ಲವೇನೋ ?
ರೋಷ- ಆವೇಶದ, ಬೆಂಕಿಯುಗುಳುವ ಕಂಗಳ, ಕೆದರಿದ ಉದ್ದ ಕೂದಲಿನ, ಸಿಡಿಲಿನಂತಹಾ ಮಾತುಗಳ, ಯಾರಿಗೂ ಕೇರ್ ಮಾಡದ ಚಿತ್ರದುರ್ಗದ ರಾಮಾಚಾರಿಯ ಕ್ಯಾರೆಕ್ಟರ್ ಅಂದು ಚಿತ್ರ ಬಿಡುಗಡೆಯಾದ ರಾತ್ರೋರಾತ್ರಿ ಸಮಸ್ತ ಯುವ ಪಡೆಯ , ಪಡ್ಡೆ ಹೈದರ ಪಾಲಿನ ಆಂಗ್ರೀ ಯಂಗ್ ಮ್ಯಾನ್ ಆಗಿ, ಅನ್ಯಾಯದ ವಿರುದ್ಧದ ಪ್ರತಿಭಟನೆಯ ಐಕಾನ್ ಆಗಿ ಉದ್ಭವಿಸಿ , ಆನಂತರ ಸಾಹಸಸಿಂಹ ವಿಷ್ಣುವರ್ಧನ್ ಎಂದು ರೂಪಾಂತರಗೊಂಡು ಕನ್ನಡ ಚಿತ್ರರಂಗದಲ್ಲಿ ಅನೇಕ ಸಧಭಿರುಚಿಯ ಚಿತ್ರಗಳಲ್ಲಿ ತನ್ನ ಹೃದಯಂಗಮ ಹಾಗೂ ಆಕರ್ಷಕ ಶೈಲಿಯ ನಟನೆಯಿಂದ ಒಬ್ಬ ಮಾಗಿದ, ಮನಮುಟ್ಟುವ ಅಭಿನಯದ ಪರಿಪಕ್ವ ಕಲಾವಿದ ವಿಷ್ಣುವರ್ಧನ್ ಆಗಿ ಮನೆಮಾತಾಗಿದ್ದು ಗಂಧದಗುಡಿಯ ಮನೆಮನೆ ಕಥೆ .
ನಾಗರಹಾವಿನಿಂದ ಆಪ್ತರಕ್ಷಕನ ವರೆಗೆ ಭರ್ತಿ ಇನ್ನೂರು ಚಿತ್ರಗಳಲ್ಲಿ ನಟಿಸಿ ಕನ್ನಡ ಚಿತ್ರರಂಗದಲ್ಲಿ ತನ್ನದೇ ಆದ ಅಭಿಮಾನಿ ಬಳಗವನ್ನು ಹೊಂದಿ ತನ್ನ ಅರವತ್ತರ ಪ್ರಾಯದಲ್ಲೇ ಅಕಾಲ ಮರಣಕ್ಕೆ ತುತ್ತಾದ ವಿಷ್ಣು ಚಿತ್ರರಂಗದ ದಾದಾ ನೇ ಆಗಿದ್ದರು . ಅವರು ನಟಿಸಿದ ಬಹುತೇಕ ಚಿತ್ರಗಳಲ್ಲಿ ಉತ್ತಮ ಕಥೆ, ಸಂಗೀತ, ಸಂದೇಶ, ಅಭಿನಯ, ಭಾವೈಕ್ಯತೆ …ಎಲ್ಲವೂ ಇರುತ್ತಿತ್ತು. ಅದು ಶ್ರೀಸಾಮಾನ್ಯನಿಗೂ ಥಟ್ಟನೇ ಮನಮುಟ್ಟುವಂತೆ ಇದ್ದಿದರಿಂದಾಗಿಯೇ ಅವರಿಗೆ ಅಣ್ಣಾವ್ರಂತೆ ಜನಪ್ರಿಯತೆ ದೊರೆಯಲು ಸಾಧ್ಯವಾಯಿತು.
ಮೂಲತಃ ಸಂಸ್ಕಾರವಂತರಾಗಿದ್ದ ಅವರನ್ನು ಆಗಾಗ್ಗೆ ಒಬ್ಬ ವಿವಾದಾಸ್ಪದ ನಟನನ್ನಾಗಿಸಿದ ಕೀರ್ತಿ ನಮ್ಮ ಅಂದಿನ ಕೆಲವು ಮಾಧ್ಯಮಗಳಿಗೆ ಸಲ್ಲಬೇಕು. ಉಗುರಲ್ಲಿ ಹೋಗುವಂತಹ ಸುದ್ದಿಗಳನ್ನು ವರ್ಣರಂಜಿತ ಕೊಡಲಿಯಿಂದ ಕೆತ್ತಿ ಕೆತ್ತಿ ವಿಷ್ಣುವನ್ನು ತಾನೊಲ್ಲದ ವಿವಾದಗಳ ಕೂಪಕ್ಕೆ ತಳ್ಳಿ ಅದರ ಮಸಿಯನ್ನು ಯಾರ್ಯಾರಿಗೋ ಬಳಿಯಲು ನೋಡಿ ಕೈ ಸುಟ್ಟುಕೊಂಡಿದ್ದು ಈಗ ಇತಿಹಾಸ. ತೆರೆಯ ಮೇಲೆ ನಾಯಕನಾಗಿ ಮಿಂಚಿದ್ದ ವಿಷ್ಣು ಅದೇಕೋ ನಿಜ ಬದುಕಿನ ಹೋರಾಟದಲ್ಲಿ ವಿಮುಖರಾಗಿ ಸದಾ ಅಂತರ್ಮುಖಿಯಾಗಿಯೇ ಇರಲು ಬಯಸುತ್ತಿದ್ದರು.
ಹೀಗಾಗಿಯೇ ಅವರು ಯಾವುದೇ ಹೋರಾಟದ ನಾಯಕತ್ವದಿಂದ, ಮುಜುಗರದ ಹೇಳಿಕೆಗಳಿಂದ ಅಂತರವನ್ನು ಕಾಯ್ದುಕೊಂಡಿರುತ್ತಿದ್ದರು. ಅದರಲ್ಲೂ ತಮ್ಮ ಜೀವನದ ಕೊನೆಯ ದಿನಗಳಲ್ಲಿ ಒಮ್ಮೊಮ್ಮೆ ಸಂತನಂತೆಯೇ ಮಾತನಾಡುತ್ತಾ, ಕೆಲವೊಮ್ಮೆ ಕಳೆದುಕೊಂಡ ಏನನ್ನೋ ಅರಸುವಂತಹ ಬಾಲಕನಂತೆ , ದೈವೀಕ ಪ್ರತಿನಿಧಿಯಂತೆ ಭಾಸವಾಗುತ್ತಿದ್ದರು.
ಅದೇನೇ ಇರಲಿ, ಇಂದಿನ ಸಂತಸದ ಸಂಗತಿಯೆಂದರೆ ವಿಷ್ಣು ಗತಿಸಿ ಹತ್ತು ವರ್ಷಗಳ ನಂತರವಾದರೂ ಅವರ ಅಭಿಮಾನಿಗಳ ಕುಟುಂಬದ ಬಹು ಬೇಡಿಕೆಯ ಸ್ಮಾರಕ ನಿರ್ಮಾಣಕ್ಕೆ ಮೊನ್ನೆ ಚಾಲನೆ ಸಿಕ್ಕಿರುವುದು !. ಕನ್ನಡ ಚಿತ್ರರಂಗಕ್ಕೆ ವಿಷ್ಣುವರ್ಧನ್ ರವರ ಕೊಡುಗೆಯನ್ನು, ಕಲಾಸೇವೆಯನ್ನು ಪರಿಗಣಿಸಿ ಅವರ ಸ್ಮಾರಕ ನಿರ್ಮಾಣಕ್ಕಾಗಿ ಅವರ ನೆಚ್ಚಿನ ಮೈಸೂರು ಬಳಿಯಲ್ಲಿಯೇ ಅದರ ಶಂಕುಸ್ಥಾಪನೆಯಾಗಿರುವುದು ಹಾಗೂ ಇದಕ್ಕಾಗಿ ಸರ್ಕಾರ ಹನ್ನೊಂದು ಕೋಟಿ ಹಣ ತೆಗೆದಿಟ್ಟಿರುವುದು ಅಭಿಮಾನಿಗಳ ಖುಷಿಗೆ ಕಾರಣವಾಗಿದೆ. ಈ ಕಾರ್ಯ ಆದಷ್ಟು ಬೇಗನೇ ಪೂರ್ಣವಾಗಲಿ.
” ಸಾವಿರ ಹೂವ್ವಿನ ಎದೆಹನಿ ಬೇಕು ಜೇನಿನ ಗೂಡಾಗಲು, ಸಾವಿರ ಭಾವ ಸ್ಪಂದಿಸಬೇಕು ಕನ್ನಡ ನಾಡಾಗಲು” ಎಂಬ ಸುಂದರ ಸಾಲುಗಳಂತೆ ಸಾವಿರ ಹೃದಯಗಳು ಮನದುಂಬಿ ಹಾರೈಸಬೇಕಿಂದು ವಿಷ್ಣುವರ್ಧನ್ ರವರ ಜನ್ಮದಿನವಾಗಲು..!
ಚಾಮುಂಡಿ ತಾಯಾಣೆ ಮುಂದಿನ ಜನ್ಮದಲ್ಲೂ ಹುಟ್ಟೋದು ಇಲ್ಲೇನೇ ” ಎಂದು ತಮ್ಮ ಕೊನೆ ಚಿತ್ರದಲ್ಲಿ ವಿಷ್ಣು ಅಂದುಕೊಂಡಂತೆ ತಾಯಿ ಚಾಮುಂಡಿ ಅವರನ್ನು ಮತ್ತೇ ಕರುನಾಡಿನ ಮಣ್ಣಲ್ಲೇ ಜನ್ಮ ನೀಡಲಿ ಎಂಬ ಅಭಿಮಾನಪೂರ್ವಕ ಪ್ರಾರ್ಥನೆಯೊಂದಿಗೆ
ಕಲೆಯನ್ನು, ಕಲಾವಿದರನ್ನು, ಮತ್ತು ಕನ್ನಡವನ್ನು ಮನದಾಳದಿಂದ ಪ್ರೀತಿಸುವ ಎಲ್ಲ ಸಹೃದಯರ ಪರವಾಗಿ ಅಭಿನಯ ಭಾರ್ಗವ ಡಾ. ವಿಷ್ಣುವರ್ಧನ್ ರವರಿಗೆ 70 ನೇ ‘ವರ್ಷ’ ದ ಹುಟ್ಟುಹಬ್ಬದ ಶುಭಾಶಯಗಳು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೀಲು ಮತ್ತು ಮೂಳೆ ಚಿಕಿತ್ಸೆ ; ರೋಬೋಟಿಕ್ ಮತ್ತು ಮಿನಿಮಲಿ ಇನ್ನೇಸಿವ್ ಸರ್ಜರಿಗಳಲ್ಲಿ ಮಹತ್ವದ ಬದಲಾವಣೆ : ಡಾ.ಲೋಕೇಶ್ ಎ. ವೀರಪ್ಪ
ಸುದ್ದಿದಿನ,ದಾವಣಗೆರೆ:ವಯೋಸಹಜವಾಗಿ ಕಂಡುಬರುವ ಮೊಣಕಾಲು, ಸೊಂಟ, ಭುಜ ಮತ್ತು ಕ್ರೀಡಾ ಸಂಬಂಧಿತ ಸಂಧಿ ಸಮಸ್ಯೆಗಳಿಗೆ ಸಮಯೋಚಿತ ಚಿಕಿತ್ಸೆ ಮತ್ತು ನೂತನ ಶಸ್ತ್ರಚಿಕಿತ್ಸಾ ತಂತ್ರಜ್ಞಾನಗಳು ಹೇಗೆ ಸಹಾಯವಾಗುತ್ತಿವೆ ಹಾಗೂ ಈ ಚಿಕಿತ್ಸೆಗಳು ನೋವು ಕಡಿಮೆ ಮಾಡುವುದರ ಜೊತೆಗೆ, ರೋಗಿಗಳು ಮತ್ತೆ ಸ್ವತಂತ್ರವಾಗಿ ನಡೆಯಲು, ದಿನನಿತ್ಯದ ಚಟುವಟಿಕೆಗಳಿಗೆ ಮರಳಲು ಮತ್ತು ಆತ್ಮವಿಶ್ವಾಸದಿಂದ ಬದುಕಲು ನೆರವಾಗುತ್ತಿವೆ ಎಂದು ಮಣಿಪಾಲ್ ಆಸ್ಪತ್ರೆಯ ಮೂಳೆ ಮತ್ತು ಕೀಲು ರೋಬೋಟಿಕ್ ಜಾಯಿಂಟ್ ರಿಪ್ಲೇಸ್ಟೆಂಟ್ ಶಸ್ತ್ರ ಚಿಕಿತ್ಸಾ ತಜ್ಞರಾದ ಡಾ. ಲೋಕೇಶ್ ಎ. ವೀರಪ್ಪ ತಿಳಿಸಿದರು.
ಬುಧವಾರ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು
‘ಆರೋಗ್ಯಕರ ವಯೋವೃದ್ಧತೆ: ಅಸ್ತಿ ಸಮಸ್ಯೆಗಳ ನಿರ್ವಹಣೆ ಮತ್ತು ಪರಿಣಾಮಕಾರಿ ಚಿಕಿತ್ಸಾ ವಿಧಾನಗಳು ಕುರಿತು ಮೂಳೆ ಆರೋಗ್ಯದ ಮಹತ್ವವನ್ನು ಒತ್ತಿ ಹೇಳಿದರು.
ಇಂದಿನ ದಿನಗಳಲ್ಲಿ ಮೊಣಕಾಲು, ಸೊಂಟ ಮತ್ತು ಭುಜ ಸಂಧಿ ಸಮಸ್ಯೆಗಳು, ವಿಶೇಷವಾಗಿ ವಯೋವೃದ್ಧರಲ್ಲಿ ಹೆಚ್ಚುತ್ತಿವೆ. ‘ಇಂದು ಜನರು ಕೇವಲ ನೋವು ನಿವಾರಣೆಯನ್ನು ಮಾತ್ರ ಬಯಸುವುದಿಲ್ಲ. ಅವರು ಸುಲಭವಾಗಿ ನಡೆಯಲು, ಮೆಟ್ಟಿಲೇರಲು, ಮತ್ತೆ ಕೆಲಸಕ್ಕೆ ಹೋಗಲು, ಪ್ರವಾಸ ಮಾಡಲು ಮತ್ತು ಚುರುಕಿನ ಜೀವನವನ್ನು ಮುಂದುವರಿಸಲು ಬಯಸುತ್ತಾರೆ,” ಎಂದು ಹೇಳಿದರು.
“ರೋಬೋಟಿಕ್ ಜಾಯಿಂಟ್ ರಿಪ್ಲೇಸ್ಟೆಂಟ್ ಶಸ್ತ್ರಚಿಕಿತ್ಸೆ ಅಸ್ತಿ ಚಿಕಿತ್ಸೆಯ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆಯನ್ನು ತಂದಿದೆ. ರೋಗಿಯ ದೇಹರಚನೆಗೆ ಅನುಗುಣವಾಗಿ ಶಸ್ತ್ರಚಿಕಿತ್ಸೆಯನ್ನು ಹೆಚ್ಚು ನಿಖರವಾಗಿ ಯೋಜಿಸಲು ಈ ತಂತ್ರಜ್ಞಾನ ಸಹಕಾರಿಯಾಗಿದೆ. ಇದರಿಂದ ಇಂಪ್ಲಾಂಟ್ಗಳ ಸರಿಯಾದ ಅಳವಡಿಕೆ, ಉತ್ತಮ ಜಾಯಿಂಟ್ ಅಲೈನ್ಮೆಂಟ್ ಮತ್ತು ಸಹಜ ಚಲನೆಯ ಸಾಧ್ಯತೆ ಹೆಚ್ಚುತ್ತದೆ. ರೋಗಿಗಳಿಗೆ ಕಡಿಮೆ ರಕ್ತಸ್ರಾವ, ಕಡಿಮೆ ಶಸ್ತ್ರಚಿಕಿತ್ಸೆತರ ನೋವು, ವೇಗವಾದ ಚೇತರಿಕೆ ಹಾಗೂ ಬೇಗನೆ ಸಾಮಾನ್ಯ ಜೀವನಕ್ಕೆ ಮರಳುವ ಅವಕಾಶ ದೊರೆಯುತ್ತದೆ. ಮೊಣಕಾಲು ಮತ್ತು ಸೊಂಟದ ಸಂಪೂರ್ಣ ಅಥವಾ ಭಾಗಶಃ ಜಾಯಿಂಟ್ ಬದಲಾವಣೆ (TKR/PKR) ಶಸ್ತ್ರ ಚಿಕಿತ್ಸೆಗಳಲ್ಲಿ ಈ ತಂತ್ರಜ್ಞಾನ ಉತ್ತಮ ಫಲಿತಾಂಶ ನೀಡುತ್ತಿದೆ,” ಎಂದರು.
“ಇದರ ಜೊತೆಗೆ ಭುಜದ ಆರ್ಥೋಸ್ಕೋಪಿ ಅಥವಾ ‘ಕೀಹೋಲ್ ಸರ್ಜರಿ’ಯಂತಹ ಅತ್ಯಾಧುನಿಕ ಚಿಕಿತ್ಸೆಗಳಲ್ಲಿಯೂ ಉತ್ತಮ ಫಲಿತಾಂಶಗಳನ್ನು ಕಾಣುತ್ತಿದ್ದೇವೆ. ಭುಜದ ಡಿಪ್ಲೊಕೇಶನ್ (ಭುಜದ ಕೀಲಿನ ಸರಿತ) ರೋಟೇಟರ್ ಕಫ್ (ಹರಿದ ಭುಜದ ಮಾಂಸ ಖಂಡ) ಗಾಯಗಳು, ಫೋಜನ್ ಶೋಲ್ಡರ್ (ಭುಜದ ಬಿಗಿತ) ಮೊದಲಾದ ಸಮಸ್ಯೆಗಳು ಬಹಳ ಸಾಮಾನ್ಯವಾಗಿದ್ದು, ಸಮಯಕ್ಕೆ ಚಿಕಿತ್ಸೆ ಪಡೆಯದೇ ಇದ್ದರೆ ದೈನಂದಿನ ಚಟುವಟಿಕೆಗಳ ಮೇಲೆಯೇ ಪರಿಣಾಮ ಬೀರುತ್ತವೆ. ಈಗ ಮಿನಿಮಲ್ಲಿ ಇನ್ನೇಸಿವ್ ಸರ್ಜರಿಸ್ ಅಂದರೆ ಅತಿ ಸಣ್ಣ ಕಟ್ ಮೂಲಕ ಮಾಡುವ ಈ ಶಸ್ತ್ರಚಿಕಿತ್ಸೆಗಳು ರೋಗಿಗಳಿಗೆ ಕಡಿಮೆ ನೋವು ಹಾಗೂ ವೇಗವಾದ ಚೇತರಿಕೆಯನ್ನು ನೀಡುತ್ತಿವೆ, ಎಂದು ತಿಳಿಸಿದರು.
ಇದೇ ವೇಳೆ, ಸಂಕೀರ್ಣ ಪೆಲ್ವಿಕ್ ಟ್ರಾಮಾ ಶಸ್ತ್ರಚಿಕಿತ್ಸೆಗಳು, ‘ಕಪ್ ಅಂಡ್ ಬಾಲ್’ ಜಾಯಿಂಟ್ ಸಂಬಂಧಿತ ಪ್ರೊಸೀಜರ್ಗಳು, ಹಾಗು ಮೊಣಕಾಲು, ಅಂಕಲ್ ಮತ್ತು ಮೊಣಕೈಗೆ ಸಂಬಂಧಿಸಿದ ಮಿನಿಮಲಿ ಇನ್ನೇಸಿವ್ ಕೀಹೋಲ್ ಶಸ್ತ್ರಚಿಕಿತ್ಸೆಗಳ ಕುರಿತು ಕೂಡ ಅವರು ಮಾಹಿತಿ ಹಂಚಿಕೊಂಡರು.
ಇವುಗಳ ಪ್ರಮುಖ ಉದ್ದೇಶ ರೋಗಿಗಳ ಚಲನವಲನವನ್ನು ಪುನಃಸ್ಥಾಪಿಸಿ, ಅವರನ್ನು ಆತ್ಮವಿಶ್ವಾಸದಿಂದ ದಿನನಿತ್ಯದ ಬದುಕಿಗೆ ಮರಳಿಸುವುದಾಗಿದೆ ಎಂದು ಹೇಳಿದರು.
ಸಂವಾದದ ವೇಳೆ ವೈದ್ಯರು, ದಾವಣಗೆರೆ ಮತ್ತು ಸುತ್ತಮುತ್ತಲಿನ ಜಿಲ್ಲೆಗಳಿಂದ ಅನೇಕ ರೋಗಿಗಳು ಸಂಕೀರ್ಣ ಅಸ್ಥಿ ಚಿಕಿತ್ಸೆಗಳು ಹಾಗೂ ಅತ್ಯಾಧುನಿಕ ಜಾಯಿಂಟ್ ಕೇರ್ಗಾಗಿ ಹಳೆ ವಿಮಾನ ನಿಲ್ದಾಣ ರಸ್ತೆಯ ಮಣಿಪಾಲ್ ಆಸ್ಪತ್ರೆಗೆ ನಿರಂತರವಾಗಿ ಭೇಟಿ ನೀಡುತ್ತಿರುವುದಾಗಿ ತಿಳಿಸಿದರು.
ಈ ದೀರ್ಘಕಾಲದ ವಿಶ್ವಾಸವನ್ನು ಗುರುತಿಸಿಕೊಂಡಿರುವ ಆಸ್ಪತ್ರೆ, ರೋಬೋಟಿಕ್ ನೆರವಿನ ಶಸ್ತ್ರಚಿಕಿತ್ಸೆಗಳು, ವಿಶೇಷ ಅಸ್ಥಿ ತಜ್ಞರ ಸೇವೆಗಳು ಮತ್ತು ಪುನಶ್ವೇತನ ಚಿಕಿತ್ಸೆಯನ್ನು ಮಧ್ಯ ಕರ್ನಾಟಕದ ಜನರಿಗೆ ಇನ್ನಷ್ಟು ಸುಲಭವಾಗಿ ಲಭ್ಯವಾಗುವಂತೆ ಮಾಡುವ ಬದ್ಧತೆಯನ್ನು ಪುನರುಚ್ಛರಿಸಿತು. “ನಮ್ಮ ಉದ್ದೇಶ ಕೇವಲ ಶಸ್ತ್ರಚಿಕಿತ್ಸೆ ನಡೆಸುವುದಲ್ಲ; ಜನರು ಮತ್ತೆ ಸ್ವತಂತ್ರವಾಗಿ ನಡೆಯಲು, ತಮ್ಮ ಜೀವನಶೈಲಿಗೆ ಮರಳಲು ಮತ್ತು ಸುಖಕರ ವಯೋವೃದ್ಧತೆಯನ್ನು ಅನುಭವಿಸಲು ಸಹಾಯ ಮಾಡುವುದಾಗಿದೆ,” ಎಂದು ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಇದೇ 22 ರಂದು ಕರ್ನಾಟಕ ಎಜುಕೇಶನ್ ಎಕ್ಸ್ ಪೋ – 2026 ಕಾರ್ಯಕ್ರಮ
ಸುದ್ದಿದಿನ,ದಾವಣಗೆರೆ:ಬೆಂಗಳೂರಿನ ಜಿಎಂಕೆ ಎಡು ಟೆಕ್ ರಾಜ್ಯದ ಸಮಸ್ತ ಖಾಸಗಿ ಅನುದಾನರಹಿತ ಶಾಲಾ ಮುಖ್ಯಸ್ಥರು, ಆಡಳಿತ ಮಂಡಳಿಯ ಸದಸ್ಯರು ಹಾಗೂ ಶಿಕ್ಷಣ ಕ್ಷೇತ್ರದ ಆಸಕ್ತರಿಗಾಗಿ ನಾಳೆ (ಮೇ22) ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ನಗರದ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಸಮುದಾಯ ಭವನದಲ್ಲಿ “ಕರ್ನಾಟಕ ಎಜುಕೇಶನ್ ಎಕ್ಸ್ ಪೋ – 2026″ ಎಂಬ ವಿಶಿಷ್ಟ ಮತ್ತು ರಾಜ್ಯಮಟ್ಟದ ಶೈಕ್ಷಣಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಕಾರ್ಯಾಧ್ಯಕ್ಷ ಕೊಟ್ರೇಶ್ ಅವರು ತಿಳಿಸಿದ್ದಾರೆ.
ಬುಧವಾರ ಪತ್ರಿಕಾಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು ರಾಜ್ಯದಲ್ಲಿ ಖಾಸಗಿ ಅನುದಾನರಹಿತ ಶಾಲೆಗಳು ಎದುರಿಸುತ್ತಿರುವ ಅನೇಕ ಜ್ವಲಂತ ಸಮಸ್ಯೆಗಳು ಹಾಗೂ ಆಡಳಿತಾತ್ಮಕ ಸವಾಲುಗಳಿಗೆ ಪರಿಹಾರ ಮತ್ತು ಕಾನೂನುಬದ್ದ ಮಾರ್ಗದರ್ಶನ ಒದಗಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ರೂಪಿಸಲಾಗಿದೆ ಎಂದರು.
ಈ ಕಾರ್ಯಕ್ರಮದಲ್ಲಿ ಶೈಕ್ಷಣಿಕ ಉದ್ದೇಶಕ್ಕಾಗಿ ಕಡ್ಡಾಯ ಭೂ-ಪರಿವರ್ತನೆ, ಕಟ್ಟಡ ಮತ್ತು ಅಗ್ನಿ ಸುರಕ್ಷತಾ ನಿಯಮಗಳು, RTE ಸಂಬಂಧಿತ ವಿಷಯಗಳು, ಶಾಲಾ ಕಟ್ಟಡಗಳಿಗೆ ಆಸ್ತಿ ತೆರಿಗೆ, ESI, PF, GRATUITY, LWF ಹಾಗೂ ಕಾರ್ಮಿಕ ಕಾನೂನುಗಳನ್ನು ಕುರಿತು ಸಂಪನ್ಮೂಲ ವ್ಯಕ್ತಿಗಳಿಂದ ಮಾಹಿತಿ ನೀಡಲಾಗುತ್ತದೆ ಎಂದರು.
ಇದಲ್ಲದೆ, ರಾಜ್ಯದಲ್ಲಿ ಯಶಸ್ವಿಯಾಗಿ 10 ವರ್ಷ ಹಾಗೂ 25 ವರ್ಷ ಪೂರೈಸಿರುವ ಖಾಸಗಿ ಶಾಲೆಗಳಿಗೆ ಅಭಿನಂದನಾ ಪ್ರಮಾಣ ಪತ್ರ ನೀಡಿ ಗೌರವಿಸಲಾಗುತ್ತದೆ ಎಂದು ಹೇಳಿದರು.
ಶಿಕ್ಷಣ ಕ್ಷೇತ್ರದ ಹೊಸ ತಂತ್ರಜ್ಞಾನಗಳು, ಆಡಳಿತಾತ್ಮಕ ಪರಿಹಾರಗಳು, ಕಾನೂನು ಸಲಹೆಗಳು ಹಾಗೂ ಶಿಕ್ಷಣ ಕ್ಷೇತ್ರದ ಇತ್ತೀಚಿನ ಬೆಳವಣಿಗೆಗಳ ಕುರಿತು ತಿಳಿದುಕೊಳ್ಳಲು ಇದು ಅತ್ಯುತ್ತಮ ವೇದಿಕೆಯಾಗಿದ್ದು, ರಾಜ್ಯದ ಎಲ್ಲಾ ಶಾಲಾ ಮುಖ್ಯಸ್ಥರು ಹಾಗೂ ಶಿಕ್ಷಣಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.
ಸುದ್ದಿಗೋಷ್ಟಿಯಲ್ಲಿ Ours ನ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರಭಾಕರ್ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಈಜುಕೊಳದಲ್ಲಿ ಸಾವು ; ಪರಿಹಾರಕ್ಕೆ ಆದೇಶ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಮೊಹಮ್ಮದ್ ಮುಕ್ತಿಯಾರ್ ಬಿನ್ ಎಸ್. ಆರ್ ಸಮೀವುಲ್ಲ ಇವರ ಮಗ ಮೊಹಮ್ಮದ್ ಮುಬಾರಕ್ @ ಮುಬಾರಕ್ ಈತ ಮತ್ತು ನಿಸಾರ್ ಅಹಮದ್ ಬಿನ್ ಮಹಮ್ಮದ್ ಅಬಿದ್ ಮತ್ತು ಇನ್ನೊಬ್ಬರು, ಬೇತೂರು ರೋಡ್, ಸಿದ್ಧರಾಮೇಶ್ವರ ಬಡಾವಣೆ ಇವರು ತಮ್ಮ ಮಗ ತಾಜು @ ತಾಜುದ್ದೀನ್ ಇವರು ಸ್ವಿಮ್ಮಿಂಗ್ ಪೂಲ್ನಲ್ಲಿ ಈಜಾಡುವ ಸಂಧರ್ಭದಲ್ಲಿ ಮರಣ ಹೊಂದಿರುತ್ತಾರೆ.
ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು 4ನೇ ಎದುರುದಾರರಾದ ಸದಾನಂದ ವಗಲೆ ಹಾಗೂ 1 ರಿಂದ 3ನೇ ಎದುರುದಾರರ ವಿರುದ್ಧ, ತಮ್ಮ ಸೇವೆಯಲ್ಲಿನ ನಿರ್ಲಕ್ಷತೆಯಿಂದ ಘಟನೆ ಸಂಭವಿಸಿದ್ದು ಎಂಬ ತೀರ್ಮಾನಕ್ಕೆ ಆಯೋಗವು ಬಂದಿದ್ದು, ಈಗಾಗಲೇ, 1 ರಿಂದ 3ನೇ ಎದುರುದಾರರು, ದೂರುದಾರರಿಗೆ ರೂ.500,000/- ಲಕ್ಷವನ್ನು ಪರಿಹಾರವಾಗಿ ಈಗಾಗಲೆ ಕೊಟ್ಟಿದ್ದು, ಆದ್ದರಿಂದ 1 ರಿಂದ 3ನೇ ಎದುರುದಾರರ ವಿರುದ್ಧ ಪ್ರಕರಣವನ್ನು ವಜಾ ಮಾಡಿದೆ.
4ನೇ ಎದುರುದಾರರಾದ ಸದಾನಂದ ವಗಲೆ, ಕಾಂಟ್ರಕ್ಟರ್, ಇವರು ಈ ಎರಡು ಪ್ರಕರಣದ ದೂರುದಾರರಿಗೆ ಆದೇಶಿಸಿದ ದಿನದಿಂದ ಒಂದು ತಿಂಗಳೊಳಗೆ ಆದೇಶದ ಪ್ರಕಾರ ಪಾವತಿಸುವಂತೆ ಮೇ.19 ರಂದು ಆದೇಶಿಸಿ ರೂ. 5 ಲಕ್ಷಗಳನ್ನು ಶೇಕಡಾ 6 ವಾರ್ಷಿಕ ಬಡ್ಡಿಯೊಂದಿಗೆ ಹಾಗೂ ದೂರು ಖರ್ಚು ಹಾಗೂ ಮಾನಸಿಕ ಯಾತನೆಗೆ ತಲಾ ರೂ.5 ಸಾವಿರದಂತೆ, ಒಟ್ಟು ರೂ.10,000/-ಗಳನ್ನು ಪರಿಹಾರ ರೂಪವಾಗಿ ದೂರುದಾರರಿಗೆ ನೀಡುವಂತೆ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಪ್ರತ್ಯೇಕವಾಗಿ ಪಾವತಿಸುವಂತೆ ಜಿಲ್ಲಾ ಗ್ರಾಹಕರ ಆಯೋಗದ ಅಧ್ಯಕ್ಷರಾದ ಹೆಚ್.ಎನ್.ಮೀನಾ ಮತ್ತು ಸದಸ್ಯರಾದ ಸಿ.ಎಸ್. ತ್ಯಾಗರಾಜನ್ ಆದೇಶಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoನಕಲಿ ಬಿಲ್ಲುಗಳ ಮೂಲಕ ಲಕ್ಷಾಂತರ ರೂಪಾಯಿ ಅವ್ಯವಹಾರ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ನಾಗರಾಜ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ7 days agoಬ್ಯಾಕ್ಲಾಗ್ ನಿಯಮಾವಳಿ ಉಲ್ಲಂಘನೆ ; ಶಾಲಾ ಶಿಕ್ಷಣ ಇಲಾಖೆ ನಿರ್ದೇಶಕ ಕರಿಚಣ್ಣನವರ್ ವಿರುದ್ಧ ಲೋಕಾಗೆ ದೂರು
-
ಅಂಕಣ5 days agoನೀಟ್ ಸೃಷ್ಟಿಸಿದ ಅವಾಂತರಗಳು ಮತ್ತು ಅದರ ಬಹುಮುಖಿ ಬಿಕ್ಕಟ್ಟುಗಳು: ಒಂದು ವಿಮರ್ಶಾತ್ಮಕ ನೋಟ
-
ದಿನದ ಸುದ್ದಿ5 days agoಲಾರಿ, ಟ್ರಾಕ್ಟರ್ ಗಳಿಗೆ ಟ್ರಿಪ್ ಚೀಟಿ ಇಲ್ಲದೆ ಅಕ್ರಮ ಸಾಗಾಣಿಕೆ ; ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳೊಂದಿಗೆ ಶಾಮೀಲು..!?
-
ದಿನದ ಸುದ್ದಿ7 days ago‘ಹಿಟ್ಲರ್ ಕಲ್ಯಾಣ’ದ ನಾಯಕನ ಬದುಕಿನ ಪಯಣ ಹೀಗಿತ್ತು
-
ದಿನದ ಸುದ್ದಿ5 days agoಕೆ. ಶಿವರಾಜಕುಮಾರ್ ಅವರಿಗೆ ಪಿಎಚ್ ಡಿ ಪದವಿ
-
ದಿನದ ಸುದ್ದಿ4 days agoಶಿಕ್ಷಕರು, ವಾರ್ಡನ್ಗಳಿಗೆ ಪೋಕ್ಸೊ ಕಾಯ್ದೆ ತರಬೇತಿ ನೀಡಿ
-
ದಿನದ ಸುದ್ದಿ3 days agoಲೋಕಾಯುಕ್ತ ಪೋಲಿಸ್ ಇನ್ಸ್ಪೆಕ್ಟರ್ ಪ್ರಭು ಬಿ. ಸೂರಿನ ಅವರಿಂದ ಕಾನೂನು ಅರಿವು

