ಸಿನಿ ಸುದ್ದಿ
ವಿಷ್ಣು ಸ್ಮಾರಕ ನಿರ್ಮಾಣ : ಸುದೀಪ್ ನೇತೃತ್ವದಲ್ಲಿ ಸಿಎಂ ಭೇಟಿಗೆ ಸಿದ್ಧತೆ
ಸುದ್ದಿದಿನ ಡೆಸ್ಕ್ : ವಿಷ್ಣು ಸ್ಮಾರಕ ಸಂಘರ್ಷ ವಿಚಾರವಾಗಿ ಸುದೀಪ್ ನೇತೃತ್ವದಲ್ಲಿ ಸಿಎಂ ಭೇಟಿಗೆ ಸಿದ್ಧತೆ ನಡೆದಿದೆ. ವಿವಿಧ ಕ್ಷೇತ್ರಗಳ ಗಣ್ಯರ ನಿಯೋಗವು ಸಿಎಂ ಅವರನ್ನು ಭೇಟಿ ಮಾಡಲಿದ್ದು, ನಿಯೋಗದಲ್ಲಿ ನಟ ಬಿ.ಸಿ.ಪಾಟೀಲ್, ನಿರ್ದೇಶಕ ರವಿ ಶ್ರೀವತ್ಸ,ನಟ ಶ್ರೀನಗರ ಕಿಟ್ಟಿ. ನಿರ್ದೇಶಕರ ಸಂಘದ ಅಧ್ಯಕ್ಷ ನಾಗೇಂದ್ರ ಪ್ರಸಾದ್. ಕರವೇ ನಾರಾಯಣಗೌಡ ಇವರಲಿದ್ದಾರೆ. ವಿಷ್ಣು ಸೇನಾ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್, ಕಿಚ್ಚ ಸುದೀಪ್ ನೇತೃತ್ವದಲ್ಲಿ ಸಂಘಟಿತ ಪ್ರಯತ್ನವು ಸ್ಮಾರಕ ಅಭಿಮಾನ್ ಸ್ಟುಡಿಯೋದಲ್ಲೇ ಆಗ್ಬೇಕು ಎನ್ನುತ್ತಿದೆ.
ವಿಷ್ಣು ಸ್ಮಾರಕ ವಿಚಾರದಲ್ಲಿ ಯಾವುದೇ ಗೊಂದಲ ಬೇಡ. ವಿಷ್ಣುವರ್ಧನ್ ಅವರ ಸ್ಮಾರಕ ಕುರಿತು ಅತಿ ಶೀಘ್ರದಲ್ಲಿ ನಿರ್ಧಾರ ಮಾಡಲಿದ್ದೇವೆ ಎಂದು ಟ್ವೀಟ್ ಮೂಲಕ ಭರವಸೆ ನೀಡಿದ್ದಾರೆ ಸಿಎಂ ಹೆಚ್.ಡಿ.ಕುಮಾರಸ್ವಾಮಿ.
ವಿಷ್ಣುವರ್ಧನ್ ಅವರ ಸ್ಮಾರಕ ಕುರಿತ ವಿಚಾರದಲ್ಲಿ ಯಾವುದೇ ಗೊಂದಲ ಬೇಡ. ಡಾ ರಾಜಕುಮಾರ್, ವಿಷ್ಣುವರ್ಧನ್ ಹಾಗೂ ಅಂಬರೀಷ್ ರಂತಹ ಮಹನೀಯರನ್ನು ಸ್ಮರಿಸುವ ವಿಚಾರದಲ್ಲಿ ನಾನು ಬದ್ಧನಿದ್ದೇನೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಅತಿ ಶೀಘ್ರದಲ್ಲಿ ವಿಷ್ಣುವರ್ಧನ್ ಅವರ ಸ್ಮಾರಕ ಕುರಿತು ನಿರ್ಧಾರ ಕೈಗೊಳ್ಳುತ್ತೇನೆ.
— CM of Karnataka (@CMofKarnataka) November 29, 2018
ಡಾ. ರಾಜ್ ಕುಮಾರ್, ವಿಷ್ಣುವರ್ಧನ್, ಅಂಬರೀಶ್. ಇಂಥಾ ಮಹನೀಯರನ್ನು ಸ್ಮರಿಸುವ ವಿಚಾರದಲ್ಲಿ ನಾನು ಬದ್ಧನಿದ್ದೇನೆ. ಟ್ವೀಟ್ ಮೂಲಕ ಭರವಸೆ ನೀಡಿದ ಸಿಎಂ ಹೆಚ್.ಡಿ.ಕುಮಾರಸ್ವಾಮಿ.
ಸುದ್ದಿದಿನ.ಕಾಂ|ವಾಟ್ಸಾಪ್|9986715401