Connect with us

ನೆಲದನಿ

ಶಿವಮೊಗ್ಗ ಜಿಲ್ಲೆ – ನಮ್ಮ ಹೆಮ್ಮೆ : ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ( ವಿ.ಐ.ಎಸ್.ಎಲ್)

Published

on

ಮೈಸೂರು ಒಡೆಯರ ಆಳ್ವಕೆಗೆ ಒಳಪಟ್ಟ ಪ್ರದೇಶಗಳಲ್ಲಿ ಕೈಗಾರಿಕೆಗಳನ್ನು ನಿರ್ಮಾಣ ಮಾಡುವ ಮಹತ್ತರ ಜವಾಬ್ದಾರಿಯನ್ನು ಸಂಸ್ಥಾನದ ಅಂದಿನ ಇಂಜಿನಿಯರ್ ಆಗಿದ್ದ ಸರ್. ಎಂ. ವಿಶ್ವೇಶ್ವರಯ್ಯ ಅವರಿಗೆ ವಹಿಸಲಾಗಿತ್ತು. ಈ ಸಂದರ್ಭದಲ್ಲಿ ಸರ್.ಎಂ.ವಿ ಯವರು ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯನ್ನು ಸ್ಥಾಪನೆ ಮಾಡಲು ಆಯ್ಕೆ ಮಾಡಿಕೊಂಡ ಸ್ಥಳವೆ ಬೆಂಕಿಪುರ. ಅದುವೇ ಈಗಿನ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕು.

20ನೇ ಶತಮಾನದ ಆದಿಭಾಗದಲ್ಲಿ ಬೆಂಕಿಪುರದ ಭದ್ರಾನದಿಯ ದಂಡೆಯ ಮೇಲೆ ಸರ್.ಎಂ.ವಿ ಯವರು 1600 ಎಕರೆ ವಿಸ್ತೀರ್ಣದಲ್ಲಿ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯನ್ನು ಸ್ಥಾಪನೆ ಮಾಡಿದರು. ತದನಂತರ ಮೈಸೂರು ಅರಸ ನಾಲ್ವಡಿ ಕೃಷ್ಣರಾಜ ಒಡೆಯಾರ್ ಆಳ್ವಕೆಯ ಕಾಲದಲ್ಲಿ ಬೆಂಕಿಪುರಕ್ಕೆ ಭದ್ರಾವತಿ ಎಂದು ಮರುನಾಮಕರಣ ಮಾಡಲಾಯಿತು.

ಬಾಬ ಬುಡನ್‌ಗಿರಿ ಬೆಟ್ಟಗಳಲ್ಲಿ ಮತ್ತು ಕೆಮ್ಮಣ್ಣುಗುಂಡಿ ಬಳಿ ಇರುವ ಶ್ರೀಮಂತ ಅದಿರು ನಿಕ್ಷೇಪಗಳನ್ನು ಸಮರ್ಥವಾಗಿ ಬಳಸಿಕೊಂಡು ಕಬ್ಬಿಣದ ಅದಿರು ಮತ್ತು ಇತರ ಉತ್ಪನ್ನಗಳನ್ನು ತಯಾರಿಸುವ ನಿಟ್ಟಿನಲ್ಲಿ ಕೈಗಾರಿಕೆಯನ್ನು ಸ್ಥಾಪನೆ ಮಾಡಲಾಯಿತು. ಭದ್ರಾವತಿಯಲ್ಲಿ ಕಾರ್ಖಾನೆಯನ್ನು ಸ್ಥಾಪನೆ ಮಾಡುವ ಉದ್ದೇಶದಿಂದ 1915-16 ರಲ್ಲಿ ಪ್ರಾಥಮಿಕ ತನಿಖೆಯನ್ನು ಮಾಡಲಾಯಿತು. ಈ ಸಂಶೋಧನೆಯು ನ್ಯೂಯಾರ್ಕ್ ಮೂಲದ ಸಂಸ್ಥೆಯಿಂದ ಮಾಡಲ್ಪಟ್ಟಿತು. ನಂತರ 1918 ರಿಂದ 1922ರ ಕಾಲಾವಧಿಯಲ್ಲಿ ಸುಮಾರು 1600 ಎಕರೆ ವಿಸ್ತೀರ್ಣದಲ್ಲಿ ಕಾರ್ಖಾನೆ ಸ್ಥಾಪನೆಗೊಂಡಿತು.

ಮದ್ರಾಸ್, ಅಹಮದಾಬಾದ್, ಕರಾಚಿ ಮತ್ತು ಬಾಂಬೆಯಲ್ಲಿ ಮಾರಾಟ ಕಛೇರಿಗಳನ್ನು ತೆರೆಯಲಾಯಿತು. ತದನಂತರ ಕಾರ್ಖಾನೆಯ ಹೆಸರನ್ನು ಮೈಸೂರು ಐರನ್ ಮತ್ತು ಸ್ಟೀಲ್‌ವರ್ಕ್ಸ್ ಎಂದು ಬದಲಾಯಿಸಲಾಯಿತು.

1962ರಲ್ಲಿ ಕಂಪನಿಯ ಹೆಸರನ್ನು ದಿ ಮೈಸೂರು ಐರನ್ ಅಂಡ್ ಸ್ಟೀಲ್ ಲಿಮಿಟೆಡ್ ಎಂದು ಬದಲಾಯಸಲಾಯಿತು. ನಂತರ ಕಂಪನಿಯನ್ನು ಭಾರತ ಸರ್ಕಾರ ಮತ್ತು ಕರ್ನಾಟಕ ಸರ್ಕಾರದ ಒಡೆತನ ಸರ್ಕಾರಿ ಕಂಪನಿಯಾಗಿ ಅನುಕ್ರಮ 40:60ರ ಷೇರು ಅನುಪಾತದೊಂದಿಗೆ ಪರಿವರ್ತಿಸಲಾಯಿತು.

1962ರಲ್ಲಿ ಹೊಸ ಮಾದರಿಯ ಉಕ್ಕಿನ ಸ್ಥಾವರಗಳನ್ನು ಸ್ಥಾಪಿಸಲಾಯಿತು. ಮತ್ತು ಹೊಸ ಎಲ್‌ಡಿ ಪ್ರಕ್ರಿಯೆಯನ್ನು ಬಳಸಿಕೊಂಡು ಉಕ್ಕನ್ನು ತಯಾರಿಸುವಲ್ಲಿ ಯಶಸ್ವಿಯಾಯಿತು. ಕಂಪನಿಯ ಏಳಿಗೆಗೆ ಶ್ರಮಿಸಿದ ಸಂಸ್ಥಾಪಕರನ್ನು ಗೌರವಿಸುವ ನಿಟ್ಟಿನಲ್ಲಿ 1988ರಲ್ಲಿ ಕಂಪನಿಯ ಹೆಸರನ್ನು ವಿಶ್ವೇಶ್ವರಯ್ಯ ಐರನ್ ಆಂಡ್ ಸ್ಟೀಲ್ ಲಿಮಿಟೆಡ್ ಎಂದು ಮರುನಾಮಕರಣ ಮಾಡಲಾಯಿತು. 1989ರಲ್ಲಿ ಇದನ್ನು ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಸಂಸ್ಥೆಯು ತನ್ನ ಅಂಗಸಂಸ್ಥೆಯಾಗಿ ಸ್ವಾಧೀನಪಡಿಸಿಕೊಂಡಿತು. 1988ರಲ್ಲಿ ವಿಐಎಸ್‌ಎಲ್‌ಅನ್ನು ಎಸ್‌ಎಐಎಲ್‌ನಲ್ಲಿ ವಿಲೀನಗೊಳೀಸಲಾಯಿತು.

ಇದನ್ನೂ ಓದಿ |ಕುತೂಹಲ ಮೂಡಿಸಿದ ಸಿಎಂ ಯಡಿಯೂರಪ್ಪ ಸುದ್ದಿಗೋಷ್ಟಿ : ವಿಶೇಷ ಆರ್ಥಿಕ ಪ್ಯಾಕೇಜ್ ನಿರೀಕ್ಷೆ..!?

ನಂತರ ಕಾರ್ಖಾನೆಗೆ ಹೊಸಪೇಟೆಯಿಂದ ಸರಬರಾಜಾಗುವ ಕಬ್ಬಿಣದ ಮ್ಯಾಂಗನೀಸ್ ಅದಿರುಗಳನ್ನು ಕಚ್ಚಾವಸ್ತುಗಳಾಗಿ ಬಳಸಿಕೊಂಡು ಆಲಾಯ್ ಸ್ಟೀಲ್‌ನ್ನು ತಯಾರು ಮಾಡಲಾಗುತ್ತಿತ್ತು. ಇದು ದೇಶದ ಇತರೆ ರಾಜ್ಯಗಳಿಗೆ ಮತ್ತು ವಿದೇಶಗಳಿಗೂ ರಫ್ತಾಗುತ್ತದೆ. ಕಾರ್ಖಾನೆಯು ಭಾರತ ಸರ್ಕಾರದ ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್‌ನ ಆಡಳಿತಕ್ಕೆ ಒಳಪಟ್ಟಿದೆ.

ಹೀಗೆ ತನ್ನ ಕಾರ್ಯ ವೈಖರಿಯಿಂದ ಉತ್ತಮವಾಗಿ ನಡೆಯುತ್ತಿದ್ದ ಕಂಪನಿಯು ಹಲವಾರು ಕಾರಣಗಳಿಂದಾಗಿ ನಷ್ಟದ ಸುಳಿಗೆ ಸಿಕ್ಕಿ ಪ್ರಸ್ತುತ ಸಂಪೂರ್ಣವಾಗಿ ನಿಂತು ಹೋಗುವ ಹಂತವನ್ನು ತಲುಪಿದೆ.

ಇಲ್ಲಿಗೆ ಭೇಟಿ ನೀಡಲು ಪ್ರತಿ ಶನಿವಾರ ಬೆಳಗ್ಗೆ 11 ರಿಂದ ಮಧ್ಯಾಹ್ನ 01 ಗಂಟೆಯವರೆಗೆ ಮಾತ್ರ ಅವಕಾಶವನ್ನು ನೀಡಲಾಗಿದ್ದು ಆಸಕ್ತರು 01 ತಿಂಗಳ ಮುಂಚಿತ ಅನುಮತಿಯನ್ನು ಪಡೆಯಬೇಕು.

ಹೆಚ್ಚಿನ ಮಾಹಿತಿಗಾಗಿ

https://www.youtube.com/watch?v=Tb6jxrMKvnQ

ಪರಾಮರ್ಶನ

https://kn.m.wikipedia.org

https://kanaja.karnataka.gov.in

ಕೃಪೆ : dipr shimoga

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಆತ್ಮಕತೆ | ವಿಶ್ವವಿದ್ಯಾಲಯದ ವಿರುದ್ಧ ನಡೆಸಿದ ಎರಡು ಧರಣಿಗಳು

Published

on

  • ರುದ್ರಪ್ಪ ಹನಗವಾಡಿ

ಮೈಸೂರು ವಿಶ್ವವಿದ್ಯಾಲಯದ ಉಪ ಕುಲಪತಿಗಳಾಗಿ, ಕುವೆಂಪು ಅವರ ಮಾನಸಪುತ್ರರೆಂದೇ ಖ್ಯಾತರಾಗಿದ್ದ ಕನ್ನಡದ ಗದ್ಯ ಬರಹಗಾರ ಪ್ರೊ. ದೇ.ಜ.ಗೌ. ಅವರು ಎರಡು ಅವಧಿಗೆ ಉಪಕುಲಪತಿಗಳಾಗಿದ್ದರು. ಅವರ ಆಡಳಿತಾವಧಿಯಲ್ಲಿಯೇ ಹಲವು ಹೊಸ ಇಲಾಖೆ ಮತ್ತು ಗಂಗೋತ್ರಿಯಲ್ಲಿನ ಅನೇಕ ಹೊಸ ಕಟ್ಟಡಗಳು ಮತ್ತು ಇತರೆ ಮೂಲಭೂತ ಸೌಲಭ್ಯಗಳನ್ನು ಮಾಡಿಸಿದ್ದರು. ಹೀಗಿರುವಾಗ ನಾವು ಫೈನಲ್ ಎಂ.ಎ.ನಲ್ಲಿರುವಾಗ ಪ್ರಥಮ ಎಂ.ಎ., ಎಂ.ಎಸ್ಸಿ., ಎಂ.ಕಾಂ., ಗಳಲ್ಲಿ ಸೇರಿಸಿಕೊಳ್ಳುವಾಗ ಅರ್ಹ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ ಎಂಬ ಕೂಗು ಬಂದ ಕಾರಣ ಸಮಾಜವಾದಿ ಯುವಜನ ಸಭಾ ವತಿಯಿಂದ ಪ್ರತಿಭಟಿಸಲು ತೀರ್ಮಾನಿಸಲಾಯಿತು.

ಮೊದಲನೆಯದಾಗಿ ವಿಶ್ವವಿದ್ಯಾಲಯದ ಪಿ.ಜಿ. ಗಳಲ್ಲಿ ಪ್ರವೇಶಾವಕಾಶಗಳು, ವಿದ್ಯಾರ್ಥಿಗಳು ಆಯಾ ವಿಷಯಗಳಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಅವಕಾಶವನ್ನು ಪಡೆಯುತ್ತಿದ್ದರು. ನಾನು 1972-73ನೇ ಸಾಲಿನಲ್ಲಿ ಸೇರಿದಾಗಲೂ ಹಲವು ವಿಷಯಗಳಲ್ಲಿ ಪ್ರವೇಶಾವಕಾಶದ ಕೊನೆಯ ಹಂತದಲ್ಲಿ ಮಂತ್ರಿ ಮಹೋದಯರೋ ಇಲ್ಲ ವಿಶ್ವವಿದ್ಯಾಲಯದಲ್ಲಿನ ಪ್ರೊಫೆಸರ್‌ಗಳ ಶಿಫಾರಸ್ಸಿನಿಂದ ಒಂದೋ ಎರಡೋ ಕಡಿಮೆ ಅಂಕ ಪಡೆದವರಿಗೂ ಸೀಟು ಕೊಡುತ್ತಿದ್ದರು. ಇವೆಲ್ಲ ಬಹಳ ದಿನಗಳ ನಂತರ ತಿಳಿಯುತ್ತಿದ್ದವು. ಆದರೆ 1973-74 ಆರಂಭಿಕ ಪ್ರವೇಶದಲ್ಲಿ ಅನೇಕ ವಿದ್ಯಾರ್ಥಿಗಳು ಕಡಿಮೆ ಅಂಕ ಪಡೆದಿದ್ದರೂ ಹಲವಾರು ವ್ಯಕ್ತಿಗಳ ಶಿಫಾರಸ್ಸಿನ ಹಿನ್ನೆಲೆಯಲ್ಲಿ 8-10 ವಿದ್ಯಾರ್ಥಿಗಳು ಹಲವಾರು ಸ್ನಾತಕೋತ್ತರ ಶಾಖೆಗಳಲ್ಲಿ ಸೇರ್ಪಡೆಯಾಗಿದ್ದರು.

ಅವುಗಳ ವಿರುದ್ಧ ಸಮಾಜವಾದಿ ಯುವಜನ ಸಭಾದ ವಿದ್ಯಾರ್ಥಿಗಳು ದೇವನೂರು ಮಹಾದೇವನ ನೇತೃತ್ವದಲ್ಲಿ ಕ್ರಾರ‍್ಡ್ ಹಾಲ್ ಎದುರು ಧರಣಿ ಕೂತಿದ್ದೆವು. ಸಣ್ಣದೊಂದು ಪೆಂಡಾಲ್ ಹಾಕಿಕೊಂಡು ವಿಶ್ವವಿದ್ಯಾಲಯದ ಅತ್ಯುನ್ನತ ಕಲಿಕಾ ಕೇಂದ್ರಗಳಲ್ಲಿ ಕ್ರಮಬದ್ಧವಲ್ಲದ ಪ್ರವೇಶಗಳನ್ನು ರದ್ದುಪಡಿಸಲು ಆಗ್ರಹಿಸಿ ಧರಣಿ ನಡೆಯುತ್ತಿತ್ತು. ಈ ಧರಣಿ ಪ್ರಾರಂಭವಾಗುತ್ತಿದ್ದಂತೆ ಎಲ್ಲೆಲ್ಲಿ ಎಷ್ಟೆಷ್ಟು ವಿದ್ಯಾರ್ಥಿಗಳನ್ನು ಶಿಫಾರಸ್ಸಿನ ಮೇರೆಗೆ ಪ್ರವೇಶ ಪಡೆದಿದ್ದಾರೆ ಎನ್ನುವ ಚರ್ಚೆ ಬಂದು ರಾಜ್ಯಶಾಸ್ತç ವಿಭಾಗದಲ್ಲಿ ಅತ್ಯಂತ ಹೆಚ್ಚು ಅನಧಿಕೃತ ಪ್ರವೇಶ ಆಗಿದ್ದವೆಂದು ತಿಳಿದು ಬಂದಿತ್ತು.

ಉಳಿದ ವಿಭಾಗಗಳಲ್ಲಿ ಒಂದು ಎರಡು ಹೀಗೆ ಇದ್ದರೆ, ಕೆ.ಬಿ.ವೈ. ತೋಟಪ್ಪನವರು ಮುಖ್ಯಸ್ಥರಾಗಿದ್ದ ರಾಜ್ಯಶಾಸ್ತç ವಿಭಾಗದಲ್ಲಿ ಅದು ಹೆಚ್ಚಾಗಿತ್ತು. ಹೀಗೆ ಧರಣಿ ಮಾಡುತ್ತಿದ್ದ ನಮ್ಮಲ್ಲಿಗೆ ಮಹೇಶ ರಾಜ್ಯಶಾಸ್ತç ವಿಭಾಗಕ್ಕೆ ಶಿಫಾರಸ್ಸಿನಲ್ಲೇ ಪ್ರವೇಶ ಪಡೆದವನು, ನಮಗೆಲ್ಲ ಇಡ್ಲಿ ಚಟ್ನಿ ಕಟ್ಟಿಸಿಕೊಂಡು ಬಂದು ಕೊಟ್ಟನು. ಅವನ ವಿರುದ್ಧವೇ ನಾವು ಧರಣಿ ಕೂತಿದ್ದರೂ, ಯಾವ ಭಾವಾವೇಶವೂ ಇಲ್ಲದೆ, ಅವನನ್ನು ನೋಡಿ ನಮಗೆ ಅತ್ಯಾಶ್ಚರ್ಯವಾಗಿತ್ತು. ಎಲ್ಲ ಅನಧಿಕೃತ ಪ್ರವೇಶಾರ್ಥಿಗಳನ್ನು ತೆಗೆದು ಹಾಕಿದರೆ ನನಗೇನು ಬೇಸರವಿಲ್ಲ. ನಮ್ಮಪ್ಪನಿಗೆ ಸ್ವಲ್ಪ ಬೇಜಾರಾಗಬಹುದೆಂದು ಹೇಳಿದ್ದು ಈಗ ನೆನಪಾಗುತ್ತಿದೆ. ನಮ್ಮ ಧರಣಿಯಿಂದಾಗಿ ಈಗಾಗಲೇ ಆಗಿರುವ ಪ್ರವೇಶಾರ್ಥಿಗಳನ್ನು ತೆಗೆದು ಹಾಕಲಿಲ್ಲ. ಮುಂದಿನ ವರ್ಷಗಳಲ್ಲಿ ಕಟ್ಟುನಿಟ್ಟಿನ ಕ್ರಮ ಜಾರಿಯಾಗಿ ಪ್ರೊಫೆಸರ್‌ಗಳು ಪ್ರವೇಶಗಳಿಗೆ ಅರ್ಹವಾದ ವಿದ್ಯಾರ್ಥಿಗಳ ಅರ್ಜಿಗಳನ್ನು ಕುಲಪತಿಗಳ ಅನುಮೋದನೆ ಪಡೆದು, ನಂತರ ಪ್ರವೇಶಾರ್ಥಿಗಳಿಗೆ ಪ್ರವೇಶ ನೀಡುವ ಪರಿಪಾಲನೆ ಜಾರಿಗೆ ಬಂದಿದ್ದೊಂದು ಎಸ್.ವೈ.ಎಸ್. ಸಂಘಟನೆಯ ಸಾಧನೆ.

ಜೊತೆಗೆ ನಾನೂ ಕೂಡ, ಕಳೆದ ವರ್ಷವಷ್ಟೇ ಪಾರ್ವತಕ್ಕನವರ ಶಿಫಾರಸ್ಸಿನಿಂದ ಮೂರನೇ ಲಿಸ್ಟ್ನಲ್ಲಿ ಸೀಟು ಪಡೆದುಕೊಂಡಿದ್ದು, ಆ ಬಗ್ಗೆ ನನ್ನೊಳಗೆ ಅಪರಾಧಿ ಭಾವ ಇದ್ದೇ ಇತ್ತು. ಆಗ ಇದೊಂದು ದೊಡ್ಡ ಮಟ್ಟದ ಅನ್ಯಾಯವೆಂದು ಯಾರೂ ಪರಿಗಣಿಸದೆ ಮುಚ್ಚಿ ಹೋಯಿತು. ಈಗ ಅಂತಹ ಶಿಫಾರಸ್ಸಿನವರ ಸಂಖ್ಯೆಯೇ ಜಾಸ್ತಿಯಾಗಿ, ಅದರ ವಿರುದ್ಧ ಹೋರಾಟ ರೂಪಿಸುವಂತೆ ಆಗಿದ್ದು, ನಾನೂ ಕೂಡ ಭಾಗವಹಿಸಿದ್ದು ಆ ಕಾಲಘಟ್ಟದ ಎಚ್ಚರಿಕೆಯಲ್ಲಿದ್ದ ಸಂಘಟನೆಯ ಶಕ್ತಿಯಾಗಿತ್ತು.

ನಮ್ಮ ಧರಣಿಯ ವಿವರ ಮತ್ತು ಅನಧಿಕೃತ ಪ್ರವೇಶಾರ್ಥಿಗಳು ಅರ್ಥಶಾಸ್ತ್ರ ವಿಭಾಗದಲ್ಲೂ ಆಗಿರುವ ಬಗ್ಗೆ ಬಂಡಾಯ ಪತ್ರಿಕೆಯಲ್ಲಿ ಅಚ್ಚಾಗಿತ್ತು. ಅವುಗಳ ಪ್ರತಿಗಳನ್ನು ನಾನು ಸ್ವತಃ ಕ್ಲಾಸಿನಲ್ಲಿ ಹಂಚಿದ್ದೆ. ಆದರೆ ನಮ್ಮ ವಿಭಾಗದ ಮುಖ್ಯಸ್ಥರಾದ ಜಿ.ಟಿ. ಹುಚ್ಚಪ್ಪನವರು ಯಾವುದೇ ವಿಚಾರಣೆ ನಡೆಸದೆ ಸುಮ್ಮನಾಗಿದ್ದರು. ಅವರು, ಆಗ ತೋರಿದ ದೊಡ್ಡತನ ಮರೆಯಲಾಗಿಲ್ಲ. ಅವರು ಮನಸ್ಸು ಮಾಡಿದ್ದರೆ ನನಗೆ ಶೈಕ್ಷಣಿಕವಾಗಿ ತೊಂದರೆ ಕೊಡಬಹುದಾಗಿತ್ತು. ಆದರೆ ಹಿರಿಯರಾಗಿದ್ದ ಪ್ರೊ. ಜಿ.ಟಿ. ಹುಚ್ಚಪ್ಪ ಅವರು ದೊಡ್ಡತನದಿಂದಲೇ ನಡೆದುಕೊಂಡಿದ್ದರು. ಗಂಗೋತ್ರಿ ತುಂಬಾ ಎಲ್ಲ ವಿಭಾಗಗಳ ಹೊರಗೆ ಅನಧಿಕೃತ ಪ್ರವೇಶಾರ್ಥಿಗಳ ಕುರಿತು ಘೋಷವಾಕ್ಯಗಳನ್ನು ಬರೆದಿದ್ದೆವು. ವಿಜ್ಞಾನ ಮತ್ತು ರಾಜ್ಯಶಾಸ್ತç ವಿಭಾಗದಲ್ಲಿ ಆಗಿದ್ದ ಪ್ರವೇಶಾರ್ಥಿಗಳ ವಿವರಗಳನ್ನು ಬಾಟನಿ ವಿಭಾಗದಲ್ಲಿ ರೀಡರ್ ಆಗಿದ್ದ ಪ್ರೊ. ರಾಮಲಿಂಗಮ್ ಅವರೊಡನೆ ಇತರೆ ಅಧ್ಯಾಪಕರುಗಳು ಕೂಡ ನಮಗೆ ವಿವರ ನೀಡುತ್ತಿದ್ದರು. ಎಲ್ಲಾ ವಿಭಾಗಗಳ ಮತ್ತು ಕನ್ನಡ ಅಧ್ಯಯನ ಸಂಸ್ಥೆಯ ಗೋಡೆಯ ಮೇಲೂ ಕೂಡ ಬರೆದಿದ್ದೆವು. ಮಾರನೆ ದಿನ ಕನ್ನಡ ವಿಭಾಗದ ಮುಖ್ಯಸ್ಥರಾಗಿದ್ದ ಪ್ರೊ. ಹಾ.ಮಾ. ನಾಯಕ್ ಅವರು ಬಂದು ನೋಡಿ ಇದೆಲ್ಲಾ `ತಮ್ಮ ವಿದ್ಯಾರ್ಥಿ ಮಹಾದೇವನದೇ ಕೈವಾಡವೆಂದು ರೇಗಾಡಿದರೆಂತಲೂ, ಆತನಿಗೆ ತಕ್ಕ ಶಾಸ್ತಿ ಮಾಡುವುದಾಗಿ ಹೇಳಿದರೆಂದು’ ಆಲನಹಳ್ಳಿ ಕೃಷ್ಣ ಬಂದು ನನ್ನ ಬಳಿ ಹೇಳಿದರು.

ನಾನು ಮಹಾದೇವ ಬಂದಾಕ್ಷಣ ಅವನ ಕನ್ನಡ ವಿಭಾಗದಲ್ಲಿ ಆದ ಬೆಳವಣಿಗೆಯನ್ನು ತಿಳಿಸಿದೆ ಅದಕ್ಕವನು `ನಾವೆಲ್ಲ ಮಾಡುತ್ತಿರುವ ಹೋರಾಟದಲ್ಲಿ ನಿಮ್ಮಂತವರ ಬೆಂಬಲ ತಾತ್ವಿಕವಾಗಿ ಇರುವುದೆಂದು ಭಾವಿಸಿದ್ದೆವು, ಆದರೆ ನೀವು ಆಲನಹಳ್ಳಿ ಕೃಷ್ಣ ಅವರ ಬಳಿ ಆಡಿದ ಮಾತು ಕೇಳಿ ನನಗೆ ಜಿಗುಪ್ಸೆ ಮೂಡಿ ನಿಮ್ಮಂತಹವರ ಕೆಳಗೆ ವಿದ್ಯಾಭ್ಯಾಸ ಮುಂದುವರಿಸಲು ನಾಚಿಕೆಯಾಗುತ್ತದೆ’ ಎಂದು ಪತ್ರ ಬರೆದು ಹಾ.ಮಾ. ನಾಯಕ್ ಮತ್ತು ಪ್ರಜಾವಾಣಿ ಪತ್ರಿಕೆಗೂ ಕಳಿಸಿಕೊಟ್ಟುಬಿಟ್ಟ. ಇದಕ್ಕೆಲ್ಲ ಕಾರಣರಾದ ಆಲನಹಳ್ಳಿ ಅವರಿಗೆ ಪೀಕಲಾಟವಾಯಿತು. ಪೋಸ್ಟ್ ಹಾಕಿದ ಪತ್ರ ಹಾ.ಮಾ.ನಾ.ಗೆ ಮತ್ತು ಪ್ರಜಾವಾಣಿಗೆ ತಲುಪಿದರೂ ಪ್ರಕಟಿಸದಂತೆ ಪ್ರಜಾವಾಣಿಗೆ ಫೋನ್ ಮಾಡಲು ಪ್ರಯತ್ನಿಸಿದರು. ಆದರೆ ಹಾ.ಮಾ.ನಾ.ಗೆ ಬರೆದ ಪತ್ರ ತಲುಪಿ ಮಾದೇವನನ್ನು ಕರೆದು ಮಾತಾಡಿಸಿ, ಹಾ.ಮಾ.ನಾ. ನಾವುಗಳು ಮಾಡುತ್ತಿರುವ ಹೋರಾಟದ ಬಗ್ಗೆ ತಮ್ಮದೇನೂ ಅಭ್ಯಂತರವಿಲ್ಲವೆAದು ಹೇಳಿ ಕಳಿಸಿದರೆಂದು ನಂತರ ತಿಳಿಯಿತು. ಹಾಗಾಗಿ ಮಾದೇವ ಎಂ.ಎ. ಪೂರ್ತಿ ಮುಗಿಸುವ ತನಕ ಮತ್ತೇನು ತೊಂದರೆಯಾಗಲಿಲ್ಲ.

ನಮ್ಮ ಸೀನಿಯರ್ ಆಗಿದ್ದ ಬಸವಣ್ಯಪ್ಪ ಆಗಲೇ ಎಂ.ಎ. ಮುಗಿಸಿ ಪರ‍್ವತಕ್ಕನ ಸೋಷಿಯಾಲಜಿ ವಿಭಾಗದಲ್ಲಿ ಸಹಾಯಕ ನಿರ್ದೇಶಕನ ಕೆಲಸ ಮಾಡುತ್ತಿದ್ದ. ನಾನು ನನ್ನ ಎಸ್‌ವೈಎಸ್ ಚಟುವಟಿಕೆಗಳ ಬಗ್ಗೆ ಪತ್ರಿಕೆಗಳಲ್ಲಿ ವಿಶ್ವವಿದ್ಯಾಲಯದ ವಿಷಯ ಮುದ್ರಿಸಿ ತರಗತಿಯಲ್ಲಿ ಹಂಚಿದ ಬಗ್ಗೆ ತಿಳಿದು, ನನಗೆ ಎಚ್ಚರಿಕೆ ನೀಡಿ ನಿನಗೆ ಎಂ.ಎ.ನಲ್ಲಿ ಥರ್ಡ್ ಕ್ಲಾಸ್ ನೀಡಿ ಎಲ್ಲೂ ನಿನಗೆ ಕೆಲಸವಿದಲ್ಲದಂತೆ ಮಾಡುತ್ತಾರೆಂದು ತಿಳಿಸಿ ಆತಂಕ ವ್ಯಕ್ತಪಡಿಸಿದ್ದ. ಆದರೆ ಅಂತಹದ್ದೇನೂ ನಡೆಯದೆ ಫಲಿತಾಂಶ ಬಂದಾಗ ನಾನು ಎಂ.ಎ. ಸೆಕೆಂಡ್ ಕ್ಲಾಸ್‌ನಲ್ಲಿ ಪಾಸಾಗಿ ಹೊರಬಂದಿದ್ದೆ. ಅದಕ್ಕೆಲ್ಲ ಅಂದಿನ ಮುಖ್ಯಸ್ಥರಾಗಿದ್ದ ಪ್ರೊ. ಜಿ.ಟಿ. ಹುಚ್ಚಪ್ಪನವರ ವಿಶಾಲ ಹೃದಯದ ನಡವಳಿಕೆಯೇ ಕಾರಣವಾಗಿತ್ತು.

ಇನ್ನೊಂದು ಪ್ರಕರಣ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಸೋದರ ಸಂಬಂಧಿಯಾದ ಡಿ. ವಿಜಯರಾಜೇ ಅರಸ್ (ಡಿ.ವಿ. ಅರಸ್) ಅವರು ನೂತನ ರಿಜಿಸ್ಟಾçರ್ ಆಗಿ ಇದ್ದರು. ಅವರು ಬಿ.ಎ. (ಆರ‍್ಸ್) ಮಾಡಿ ಹಲವು ದೇಶಗಳನ್ನು ಸುತ್ತಿ ಬಂದ ಅನುಭವೀ ಆಡಳಿತಗಾರರಾಗಿದ್ದರು. ಅವರ ಆಡಳಿತ ಮತ್ತು ವೈಯಕ್ತಿಕ ಆಸಕ್ತಿಗೆ ತಕ್ಕಂತೆ ತಮ್ಮ ಛೇಂಬರ್‌ಗೆ ರೆಡ್ ಕಾರ್ಪೆಟ್ ಹಾಕಿಸಿಕೊಂಡದ್ದೊಂದು ದೊಡ್ಡ ಸುದ್ದಿಯಾಗಿತ್ತು. ಅದರ ವಿರುದ್ಧ ಎಸ್.ವೈ.ಎಸ್. ಧರಣಿ ಮಾಡಿ ಎಲ್ಲ ವಿದ್ಯಾರ್ಥಿಗಳಲ್ಲೂ ಚರ್ಚಿಸುವಂತೆ ಮತ್ತೆ ಪತ್ರಿಕೆಗಳಲ್ಲಿ ಬಂದು, ರಿಜಿಸ್ಟಾçರ್ ಅವರ ದುಂದು ವೆಚ್ಚಕ್ಕೆ ಕಡಿವಾಣ ಹಾಕಬೇಕೆಂದು ಧರಣಿ ಮಾಡಿದ್ದೆವು. ಈಗ ಯೋಚಿಸಿದರೆ ಆಗ ನಾವು ಮಾಡುತ್ತಿದ್ದ ಸಣ್ಣ ಸಣ್ಣ ಭ್ರಷ್ಟಾಚಾರ ಸ್ವಜನ ಪಕ್ಷಪಾತಗಳಿಗೆ ಪ್ರತಿಕ್ರಿಯಿಸುತ್ತಿದ್ದ ವಿದ್ಯಾರ್ಥಿ ಸಮೂಹ ಈಗ ಇಂತಹ ಯಾವುದೇ ಸ್ಪಂದನವನ್ನು ಕಾಣದೆ ಎಲ್ಲರೂ ತಮ್ಮ ತಮ್ಮ ಜಾತಿ ಸಂಘಟನೆಗಳಲ್ಲಿ ಕ್ರಿಯಾಶೀಲರಾಗಿ ಸಮಾಜದ ಸಮಷ್ಟಿ ಬೆಳವಣಿಗೆಯ ಬಗ್ಗೆ ನಿರುತ್ಸಾಹ ಎದ್ದು ಕಾಣುತ್ತದೆ. ವಿಶ್ವವಿದ್ಯಾಲಯಗಳಲ್ಲಿ ವರ್ಷಗಟ್ಟಲೆ ಅಧ್ಯಾಪಕರಿಲ್ಲದೆ ಇದ್ದರೂ,ಆ ಬಗ್ಗೆ ದಿವ್ಯ ನಿರ್ಲಕ್ಷ್ಯ ದಿಂದ ಇರುವ ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿಗಳಲ್ಲಿ ಸಂಘಟಿತ ಹೋರಾಟಗಳು ಇಲ್ಲವಾಗಿವೆ.

ಈ ಮೇಲಿನ ಎರಡು ಧರಣಿಗಳು ಎಲ್ಲಾ ವಿದ್ಯಾರ್ಥಿ ದೆಸೆಯ ಸಮಾಜವಾದಿ ಯುವಜನ ಸಭಾದ ಸಂಘಟನೆಯ ಮುಖಾಂತರ ನಡೆದವುಗಳು. ವಿದ್ಯಾರ್ಥಿಗಳಾಗಿ ನಾವು ವಿಶ್ವವಿದ್ಯಾಲಯದಲ್ಲಿನ ಸಮಸ್ಯೆಗಳಿಗೆ ಏನೂ ಮಾಡಲಾರೆವು ಎಂದು ಕೈಚೆಲ್ಲಿ ಕೂರದೆ ಸಂಘಟಿತ ಪ್ರತಿಭಟನೆ ಮಾಡಿದಾಗ ಆಗುವ ಬದಲಾವಣೆಯನ್ನು ಕೂಡ ಕಣ್ಣೆದುರಿಗೆ ತೋರಿಸುವಂತಾಗಿದ್ದವು. ಮುಂದಿನ ದಿನಗಳಲ್ಲಿ ಅಧಿಕಾರಸ್ಥರಿಗೆ ಸರಿಯಾದ ಮಾರ್ಗದಲ್ಲಿ ನಡೆಯಲು ದಿಕ್ಸೂಚಿಯಾಗಿ ನಿಂತವು ಎಂಬುದರಲ್ಲಿ ಎರಡು ಮಾತಿಲ್ಲ.

ಓ ನನ್ನ ಮೈಸೂರೆ !

ನಮ್ಮೂರ ಹಾಲಿವಾಣದ ಮುಳ್ಳುಗಳು
ಓಡಾಡೋ ದಾರಿಯ ಕೊರಕಲುಗಳು
ಒಪ್ಪಾರೆ ನೆರಕೆಯ ಹೋಟೆಲುಗಳ ಕಿಲುಬು ಕಪ್ಪುಗಳು
ಒಟ್ಟಾರೆ ಒಂದೆರಡಲ್ಲ ಹೀಗೆ ನೂರಾರು ಸಿಕ್ಕುಗಳ
ಮಡಿ ಮೈಲಿಗೆ ದಾಟಿ…

ನೇರ ಹರಿಯೋ ರೈಲುಹತ್ತಿ ಮೈಸೂರು ತಲುಪಿದ್ದು
ಮಹಾರಾಜರೇ ಕಟ್ಟಿದ ಕಾಲೇಜು ಮೆಟ್ಟಿದ್ದು
ಅರಮನೆ, ಚಾಮುಂಡಿ ಬೆಟ್ಟ
ಎತ್ತೆತ್ತಲೋ ಕೊಂಡೊಯ್ಯುವ ರಸ್ತೆಗಳು
ಹೌಹಾರುವ ನೋಟಗಳು
ಎಲ್ಲ ಹೊತ್ತೊಗೆದಿತ್ತು ನನ್ನ
ಜನ್ಮ ಜನ್ಮಾಂತರದ ಹೊರೆಯ
ಕಣ್ಣಿಗಂಟಿದಾ ಪೊರೆಯ…

ದಿವ್ಯ ದೇಗುಲದಾ ಒಳಗೆ
ಬೆಳಕ ತೋರೋ ಪಂಡಿತರು
ಕಾಸಿ ಕಾಸಿ ಹಣಿಯೋ ಕುಲುಮೆಗಳು
ಬೆಳ್ಳಿ ಬಂಗಾರದ ಭಂಡಾರಗಳು
ಉAಡು ಉಡಲು ಇತ್ತ
ರಾಜನ ಹೆಸರಿನ ತಂಗುದಾಣ
ಅದುವೇ ಪಂಚಾಮೃತ…

ಇದ್ದವರೆಲ್ಲ, ಇಲ್ಲಿ ನನ್ನಂತವರಲ್ಲ
ಆಗಲೇ ಸಿಗರೇಟು ಹಚ್ಚಿ
ಕಥೆ ಬರೆಯೋ ಮಾದೇವ
ಟರ್ಲಿನ್ ಷರ್ಟನಲ್ಲಿ ಬಂಗಾರದ ಚೈನು ಹಾಕಿ
ವಿಶಾಲ ಹೃದಯ ತೋರೋ ರೆಡ್ಡಿ
ತಾಯಿಗಡುಸಿನ ತಾವು ತೋರೋ ಮಹೇಶ
ಅವಸರದಲ್ಲೂ ಉಡದಂತೆ ಹಿಡಿದು ಒಪ್ಪಿಸೋ ಅರ್ಕೇಶ
ಅಕ್ಷರಗಳನಾಡಿಸಿ ಮಣಿಸೋ ಭಕ್ತ
ಸಮತಟ್ಟಲಿ ಹರಿಯೋ ಹೊಳೆಯಂತೆ ಗೊಟ್ಟಿಗೆರೆ ಶಿವರಾಜ
ವಾರವೆಲ್ಲ ಉಣದಿದ್ದರೂ ಬಣ್ಣಗೆಡದ ರಾಕೆ…

ಇಂತವರೆಲ್ಲರ ಕೂಡಿ ಹಾಕಿ ಮಾತಾಡೋ
ನಂಜುAಡಸ್ವಾಮಿ, ವಕೀಲ ಟಿ.ಎನ್.ಎನ್., ದಾನಿ ಪಿ. ಮಲ್ಲೇಶ್
ಅನಂತರಂಗಾಚಾರ್, ರಾಮದಾಸ್
ನೆಲಮೂಲದ ನೆರವು ತೋರೋ
ನೆಲಮನೆಯ ದೇವೇಗೌಡ
ಆಂದೋಲನದಾಳಕ್ಕೂ ಮುಳುಗಿನಿಂತ
ರಾಜಶೇಖರ ಕೋಟಿ
ಅರೆಜೀವಗೊಂಡವರ
ಹೊರೆಹೊತ್ತು ಬರುವಾ ಕೃಷ್ಣಪ್ಪ
ರಿಪೇರಿಯಲ್ಲೇ ಓಡೋ ಜೀಪಲ್ಲಿ ತೇಜಸ್ವಿ
ಕ್ರಾಂತಿಕವನಗಳ ಕಟ್ಟು ಹೊತ್ತ
ಸಂಕ್ರಮಣದ ಚಂಪಾ
ಸ್ಫೋಟಕ ಸುದ್ಧಿಯ ಪ್ರೊ. ರಾಮಲಿಂಗ
ಯುವಕರ ಕಣ್ಣಲ್ಲಿ ಮಿಂಚು ಹರಿಸೋ
ಅನಂತಮೂರ್ತಿ, ಲಂಕೇಶ, ರಾಮಮೂರ್ತಿ
ವಿಚಾರವಾದಿಗಳ ರಥಕತೆಯ
ರ‍್ಮಲಿಂಗಂ, ಕೊವೂರ್, ಪೆರಿಯಾರ್
ಹೆಚ್. ನರಸಿಂಹಯ್ಯ, ಕುವೆಂಪು, ಬಸವಲಿಂಗಪ್ಪ…

ಬದುಕು ಬರಹಗಳೇ
ರಸವಾಗಿ ಕೊಸರಾಗಿ ಮೈವೆತ್ತ
ಎಲ್. ಬಸವರಾಜು, ಸುಜನಾ
ಹೀಗೆ ಹರಿಯುತ್ತದೆ
ನನ್ನರಿವಿನಾ ಹರವು…
ಬೆರಗಾಗಿ – ಬೆಳಕಾಗಿ
ಕೆನೆಮೊಸರ ಕಡೆದಂತೆ
ಸೊಗಸಾಗಿ ಬೆಳೆದಿದೆ
ಇಂದಿಗೂ ತಲೆದಿಂಬಾಗಿ
ತಲೆ ಎತ್ತಿ ತಿರುಗಾಡುವ
ಅಂಬಾಗಿ…

ಮುಂದುವರಿಯುವುದು

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕವಿ ಆನಂದ ಲಕ್ಕೂರು ನಿಧನ ; ಉದಯ ಇಟಗಿ ನುಡಿನಮನ

Published

on

ಕವಿ ಆನಂದ ಲಕ್ಕೂರು
  • ಉದಯ ಇಟಗಿ, ಪ್ರಾಂಶಯಪಾಲರು, ಡಿವಿಎಸ್ ಪದವಿ ಪೂರ್ವ ಕಾಲೇಜು, ಭರಮಸಾಗರ, ಚಿತ್ರದುರ್ಗ

ಆನಂದ ಲಕ್ಕೂರು ಇನ್ನಿಲ್ಲವೆಂಬ ಸುದ್ದಿ ಬಂದಿದೆ. ಈ ಸುದ್ದಿ ಸುಳ್ಳಾಗಲಿ ಎಂದು ಆಶಿಸುತ್ತಲೇ ನಾನಿದನ್ನು ಬೇರೆಯವರ ಹತ್ತಿರ ಇದು ನಿಜವೇ ಎಂದು ಖಾತ್ರಿಪಡಿಸಿಕೊಂಡ ಮೇಲೆ ಇದನ್ನು ವಿಷಾದದಿಂದ ಬರೆಯುತ್ತಿದ್ದೇನೆ.

ನಿಜ ಹೇಳಬೇಕೆಂದರೆ ನನಗೆ ಆನಂದ ಯಾರೂ ಎಂದು ಸರಿಯಾಗಿ ಗೊತ್ತಿರಲಿಲ್ಲ. ಒಂದು ಸಾರಿ ಅವರ “ಒಂದು ಕಪ್ ಕಾಫಿ” ಕವನವನ್ನು ಯಾರೋ ಫೇಸ್ಬ್ಕುಕ್‍ನಲ್ಲಿ ಹಾಕಿದ್ದರು. ನಾನಾಗ ಲಿಬಿಯಾದಲ್ಲಿದ್ದೆ. ನನಗೆ ಆ ಕವನವನ್ನು ಓದಿದ ತಕ್ಷಣ ತುಂಬಾ ಇಷ್ಟವಾಗಿ ಇಂಗ್ಲೀಷಿಗೆ ಅನುವಾದಿಸಿದ್ದೆ. ಆಮೇಲೆ ನಾನದನ್ನು ಮರೆತೂಬಿಟ್ಟಿದ್ದೆ. ಇಬ್ಬರು ಪ್ರೇಮಿಗಳು ಇಷ್ಟು ಚನ್ನಾಗಿ ವಿದಾಯ ಹೇಳಬಹುದೆ? ಎಂದು ಬೆರಗು ಮೂಡಿಸಿದ ಕವನವದು. ಹಾಗಾಗಿ ನಾನದನ್ನು ಇಂಗ್ಲಿಶಷಿಗೆ ತಕ್ಷಣ ಅನುವಾದಿಸಿದ್ದೆ.

ನಾನು ಮರಳಿ ಇಂಡಿಯಾಗೆ ಬಂದ ಮೇಲೆ ಗೊರವರ ಅವರ ಸಂಗಾತದ ಒಂದು ಸಂಚಿಕೆಗೆ ನಾನು ಒಂದಿಷ್ಟು ಅಸ್ಸಾಮಿ ಕವನಗಳನ್ನುಅನುವಾದಿಸಿಕೊಟ್ಟಿದ್ದೆ. ಅದು ಪ್ರಿಂಟಾಗಿ ಹೆಚ್ಚುಕಮ್ಮಿ ಎಂಟು ತಿಂಗಳ ನಂತರ ಅಲ್ಲಿ ನನ್ನ ಫೋನ್ ನಂಬರ್ ತೆಗೆದುಕೊಂಡು ತಮ್ಮ ಪರಿಚಯ ಮಾಡಿಕೊಂಡು ದಿನವೂ ಮಾತನಾಡಲು ಶುರುಮಾಡಿದರು. ನನಗೆ ಬರುಬರುತ್ತಾ ದಿನವೂ ಮಾತನಾಡುವಂಥದ್ದು ಏನಿದೆ ಎಂದು ರೇಜಿಗೆ ಎನಿಸಿದರೂ ಅವಾಯ್ಡ್ ಮಾಡಲಿಲ್ಲ.

ಅವರು ನನ್ನೊಂದಿಗೆ ಮಾತ್ರವಲ್ಲ ಅನೇಕ ಬರಹಗಾರರ ಜೊತೆ ಹೀಗೆ ಮಾತನಾಡುತ್ತಿದ್ದರು ಎಂದು ಆಮೇಲೆ ಗೊತ್ತಾಯಿತು. ಮುಂದೆ ಅವರು ಕುವೆಂಪು ಭಾಷಾ ಭಾರತಿಯಿಂದ ನನ್ನ ಅಸ್ಸಾಮಿ ಅನುವಾದಿತ ಕವನಗಳು ಹೊರಬರಲು ಪರೋಕ್ಷವಾಗಿ ಕಾರಣರಾದರು. ಮುಂದೆ ಅವರು ಒಂದು ಇಂಗ್ಲೀಷ್ ಕಾದಂಬರಿಯನ್ನು ಅನುವಾದಿಸಿದಾಗ ಅವರ ಕೋರಿಕೆಯ ಮೇರೆಗೆ ಮುನ್ನುಡಿ ಬರೆದುಕೊಟ್ಟಿದ್ದೆ.

ಆನಂದ ಬಗ್ಗೆ ಸಾಹಿತ್ಯ ವಲಯದಲ್ಲಿ ಗುಸುಗುಸು ಸುದ್ದಿಗಳು ಹರಿದಾಡುತ್ತಲೇ ಇದ್ದರೂ ಸಾಕ್ಷಿ ಸಮೇತ ಅವರು ನನ್ನ ಕೈಲಿ ಸಿಕ್ಕಿಹಾಕಿಕೊಂಡಿರಲಿಲ್ಲ. ಹಾಗಾಗಿ ನಾನು ಅದರ ಬಗ್ಗೆ ಹೆಚ್ಚು ತಲೆಕೆಡಿಸಿಕೊಂಡಿರಲಿಲ್ಲ. ಜೊತೆಗೆ ಸಾಹಿತ್ಯ ವಲಯದಲ್ಲಿ ಆನಂದ ಲಕ್ಕೂರು ಅವರ ಒಡನಾಟದಲ್ಲಿದ್ದವರೆಲ್ಲಾ ಕೃತಿಚೌರ್ಯ ಮಾಡುವವರು ಎನ್ನುವ ಅಲಿಖಿತ ನಿಯಮವೊಂದು ಜಾರಿಯಲ್ಲಿದ್ದಿದುರಿಂದ ಬಹಳಷ್ಟು ಜನ ಅವರ ಒಡನಾಟವನ್ನು ಇಷ್ಟಪಡುತ್ತಿರಲಿಲ್ಲ. ಆನಂದ ಒಬ್ಬ ಭಾವನಾ ಜೀವಿ. ಆದರೆ ಅಶಿಸ್ತಿನ ಮನುಷ್ಯ. ಬಹಳಷ್ಟು ಜನ ಹುಶಾರಾಗಿರಿ. ಅವರು ಯಾವಾಗ ಬೇಕಾದರೂ ದುಡ್ದು ಕೇಳಬಹುದು ಎಂದಿದ್ದರು. ಆದರೆ ಆನಂದ ಯಾವತ್ತೂ ನನ್ನನ್ನು ಒಂದು ಪೈಸೆಯೂ ಕೇಳದೆ ಪ್ರಾಮಾಣಿಕತೆಯನ್ನು ಮೆರೆದ ಮನುಷ್ಯ.

ಆದರೆ ತೀರಾ ಇತ್ತೀಚಿಗೆ ಅವರು ಒಂದು ಸ್ಥಿರವಾದ ಉದ್ಯೋಗವನ್ನು ಹೊಂದಿಲ್ಲದ ಮನುಷ್ಯ ಎನ್ನುವದು ಗೊತ್ತಾಯ್ತು. ಕುಡಿತದಿಂದ ಅವರ ಆರೋಗ್ಯ ಹದೆಗೆಟ್ಟಿದೆ ಎನ್ನುವದು ಕೂಡಾ ಗೊತ್ತಾಯಿತು. ಈಗ್ಗೆ ಒಂದು ತಿಂಗಳ ಹಿಂದೆ ನನಗೆ ಫೋನ್ ಮಾಡಿ ನಾನೀಗ ಗುಲ್ಬರ್ಗಾದಲ್ಲಿ ಪಿ.ಎಚ್ಡಿ. ಮಾಡುತ್ತಿರುವೆ ನನಗೆ ಸ್ಟೈಫಂಡ್ ಬರುತ್ತಿದೆ ಖುಷಿಯಾಗಿದ್ದೇನೆ ಎಂದು ಹೇಳಿದರು. ನಾನು ಹಾಗೆ ಖುಷಿಯಾಗಿ ಇರಿ ಎಂದು ಹರಿಸಿದ್ದೆ. ಈಗ ನೋಡಿದರೆ ಅವರು ಬಾರದ ಲೋಕಕ್ಕೆ ಹೊರಟುಹೋಗಿದ್ದಾರೆ. ಹೋಗಿ ಬಾ ಗೆಳೆಯ. ನಿನ್ನ ಕವನಗಳು ನಮ್ಮ ಮನದಲ್ಲಿ ಸದಾ ಹಸಿರಾಗಿರುತ್ತವೆ.

ನಾನು ಹಿಂದೆ ಇಂಗ್ಲೀಷಿಗೆ ಅನುವಾದಿಸಿದ ಅವರ ಒಂದು ಕವನವನ್ನು ಇಲ್ಲಿ ಹಾಕುವದರ ಮೂಲಕ ಅವರಿಗೆ ನುಡಿನಮನವನ್ನು ಸಲ್ಲಿಸುತ್ತಿದ್ದೇನೆ. ನಾನು ದೆಹಲಿಯಿಂದ ವಾಪಾಸಾಗುತ್ತಿರುವದರಿಂದ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲಾಗುತ್ತಿಲ್ಲ ಎನ್ನುವ ದುಃಖವಿದೆ.

ಒಂದು ಕಪ್ ಕಾಫಿ

ಕೊನೆಯ ಸಾರಿ
ನನ್ನ ಜೊತೆ ಒಂದು ಕಪ್ ಕಾಫಿ ಕುಡಿಯುತ್ತೀಯಾ?
ನಾನು ತಪ್ಪು ಮಾಡಿದೆನೊ,
ನೀನು ತಪ್ಪು ಮಾಡಿದೆಯೊ,
ಬಿಟ್ಟು ಬಿಡೋಣ:

ಕೊನೆಯ ಸಾರಿ
ನನ್ನ ಜೊತೆ ಒಂದೇ ಒಂದು ಕಪ್ ಕಾಫಿ ಕುಡಿಯುತ್ತೀಯಾ?
ಈ ಗಳಿಗೆಯನ್ನು ಚಿರಸ್ಮರಣೀಯ ಮಾಡುತ್ತೇನೆ

ಯಾರಿಗೆ ಗೊತ್ತು?
ಅದು ಇಲ್ಲೇ ತಿರುವು ಪಡೆಯಬಹುದು !
ಇಲ್ಲ ನಾವಿಬ್ಬರು ಬೇರೆಯಾಗಬಹುದು!
ಯಾರು ಊಹಿಸಿರುತ್ತಾರೆ?
ನಾನೊಂದು ಹೇಳುವುದು
ನೀನೊಂದು ಹೇಳುವುದು
ಮಾತುಗಳೆಂಬ ಟಗರುಗಳು ಗುದ್ದಾಡುತ್ತಿವೆ
ನಮಗಿರುವ ಎಲ್ಲಾ ಮಾತಿನ ದಾರಿಗಳಲ್ಲೂ
ದುಃಖ ಹೆಪ್ಪುಗಟ್ಟಿ ಕುಳಿತುಬಿಟ್ಟಿದೆ
ಯಾರಿಗೆ ಗೊತ್ತು
ನಮ್ಮೆದುರಿಗೆ ವಿಶಾಲ ವನಗಳಿರಬಹುದು,
ದ್ರಾಕ್ಷಿ ಹಣ್ಣುಗಳು ಭಾರ ತಡೆಯಲಾರದೆ,
ನೆಲಕ್ಕೆ ಬಾಗಿದ ಮೋಡಗಳಾಗಬಹುದು.
ಅಪರೂಪದ ನದಿಗಳೂ ಕೂಡ ನಮ್ಮ ಸುತ್ತ ಪರಿಭ್ರಮಿಸಬಹುದು,
ಆದರೆ ಏನು ಲಾಭ?
ನಮ್ಮಿಬ್ಬರಿಗೂ ದಾಹವಾಗುತ್ತಿಲ್ಲಾ…

ಇಬ್ಬರ ಗುಂಡಿಗೆಯ ಮೂಲೆಯಲ್ಲೂ
ಸಣ್ಣ ಕೊಂಬೆಯೊಂದು ಮುರಿದು ಬೀಳುವ ಶಬ್ದ
ದುಃಖದ ಹನಿಗಳು ಸುರಿಯುತ್ತಿರುವ ಶಬ್ದ
ಅವರವರದು ಅವರವರಿಗೆ ಹೊರಲಾರದ ಭಾರವಾಗುತ್ತಿದೆ
ದ್ವೇಷವಿಲ್ಲ,
ಅಸೂಯೆಯಿಲ್ಲ, ಕೋಪವಿಲ್ಲ;
ಅಲ್ಲಿರುವುದು ಬರೀ ಪ್ರೀತಿಯೇ
ಆದರೂ ಕರುಣೆಯೆಂಬುದು ಇಷ್ಟೊಂದು ಕ್ರೂರವಾಗಿರುತ್ತಾ?
ಈಗಲೂ ಕೂಡಾ
ನಿನ್ನ ಕಣ್ಣಲ್ಲೊಂದು ದಯೆ ಕದಲಾಡುತ್ತಿದೆ
ಅದು ನಿನಗೂ ನನಗೂ ಕೂಡಾ ಅರ್ಥವಾಗುತ್ತಿಲ್ಲ
ಹತಾಶೆಯ ಪೊರೆ ಕಣ್ಣಿಂದ ಕಳಚುವವರೆಗೆ
ನಾವಿಬ್ಬರೂ ಕಾಯಬೇಕಷ್ಟೆ!

ನನ್ನ ಕಣ್ಣಿಗೀಗ ನೀನು ಎಟುಕುತ್ತಿಲ್ಲ
ನಿನ್ನ ಕಣ್ಣಿಗೀಗ ನಾನೂ ಎಟುಕುತ್ತಿಲ್ಲ.
ಈ ಹಿಂದಿನ ಕನಸುಗಳೆಲ್ಲಾ ಇಬ್ಬರಲ್ಲೂ
ಕರಗಿಹೋಗಿವೆ
ರೆಕ್ಕೆಮುರಿದ ಹಕ್ಕಿಗಳೆರೆಡು
ತಲಾ ಒಬೊಬ್ಬರ ತಲೆಯ ಮೇಲೆ ಬಂದು ಕೂತು ಬಿಟ್ಟಿವೆ.
ಬಹುಶಃ ಇದು ಕೊನೆಯ ಸಾರಿಯ ಭೇಟಿಯಾಗಬಹುದು!
ನಾವಿಬ್ಬರು ಇಷ್ಟು ಹತ್ತಿರದಲ್ಲಿ ಕಾಫಿ ಕುಡಿಯುವುದು?
ನೆನ್ನೆಗಳೆಲ್ಲಾ ಇಂದು ದೀರ್ಘ ನಿಟ್ಟುಸಿರುಗಳಾಗುತ್ತಿವೆ
ನಿನ್ನೊಳಗೆ ಕದಲಾಡುತ್ತಿರುವ ಗೊಂದಲವೊಂದು
ಮೆತ್ತಗೆ ನನ್ನನ್ನು ತಾಕುತ್ತಿದೆ
ನಾವಿಬ್ಬರು ಇಷ್ಟು ನಿಶಬ್ದವಾಗಿ ಕಾಫಿ ಕುಡಿಯಬೇಕಾ?

ಶವಯಾತ್ರೆಯೂ ಕೂಡಾ
ಇಷ್ಟು ನಿಶಬ್ದವಾಗಿರುವುದಿಲ್ಲ!
ಇದು ನಮ್ಮಿಬ್ಬರ ಕೊನೆಯ ಭೇಟಿ
ಕೊನೆಯ ಸಾರಿಯ ನೆನಪಿಗೆ ತಲಾ ಒಂದೊಂದು ಕಾಫಿ ಕಫ್,
ಈ ಹಿಂದೆ ಇವೇ ಒನ್ ಬೈ ಟೂಗಳು,
ಅವೇ ಈಗ ಎರಡು ಅನಾಮಿಕ ಕಾಫೀ ಕಪ್‌ಗಳು
ಈ ಕಾಫಿ ಕಪ್‌ನೊಳಗೆ ಇಣುಕಿ ನೋಡಿದರೆ
ನೆನ್ನೆಯೆಂಬ ಚೂರು,
ನಮ್ಮಿಬ್ಬರ ಪರಿಚಯಗಳು
ಎರಡು ಬೇರೆ ಬೇರೆ ಬೊಂಬೆಗಳಂತೆ ಕಚ್ಚಾಡುತ್ತಿವೆ

~ಲಕ್ಕೂರು ಆನಂದ್

A Cup of Coffee

For the last time
Would you drink a cup of coffee with me?
No matter
Whether I erred
Or you erred,
Let’s forget it:

For the last time
Would you drink only one cup of coffee with me?
I will make this moment memorable
Who knows
It can take turn here itself!
Or we can split up!
Who could guess that?
I say something
And you something else
The speech rams are fighting with each other
The grief is frozen
On all the speech ways down to us

Who knows
We may have vast forests in front of us,
The grapes,
Being unable to bear the weight
May turn into clouds
By hanging down to the ground
Even the rare rivers can orbit around us,
But what is the benefit?
We both are not feeling thirsty ….
In the corner of our heart
There lies a breaking sound of a small branch
And also the falling sound of heartbreak tears
Each one’s grief
Is becoming
Unbearable burden for each other
There is no hatred
No jealousy and no anger at all
It’s just love
Will really kindness be this much cruel?

Even now
A layer of kindness is seen
In your eyes
But unfortunately
It doesn’t mean to both of us
We both have to wait
Until the sheath of despair dissipates
You are not be seen to my eyes
And I am not to be seen to your eyes
The dreams of past
Have dissolved in both of us
The two birds
With their wings broken
Have sat on each other’s heads.
Probably, this may be our last meeting!
Why should we drink coffee by sitting so closely?
All yesterdays are turning out to be as the long sighs of today
An oscillating confusion within you
Is softly touching me

Why should we drink coffee so quietly?
Even the funeral ceremony also
Won’t be this much silent!
This is our last visit
Come on, let’s have a cup of coffee at least
For the memory of our last visit
Earlier, these were just one by two cups
And now are two anonymous coffee cups
If you peep inside this coffee cup
You will find the pieces of yesterday
And also the introductions of ours
That are fighting like two very different dolls

From Kannada: Anand Lakkuru
To English: Uday Itagi

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಆತ್ಮಕತೆ | ಹಾಸ್ಟೆಲ್‌ನಲ್ಲಿ ಜಾತಿ ಜಗಳ

Published

on

ಸಾಂದರ್ಭಿಕ ಚಿತ್ರ
  • ರುದ್ರಪ್ಪ ಹನಗವಾಡಿ

ನಾನು ಮೈಸೂರಿಗೆ ಬಂದು ಮಹಾರಾಜ ಕಾಲೇಜ್ ಹಾಸ್ಟೆಲ್ ಸೇರಿಕೊಂಡಾಗ ತಡವಾಗಿ ಸೇರಿಕೊಂಡವರಿಗೆ ಎರಡು ಮೂರು ಜನರಿರುವ ರೂಂಗಳನ್ನು ಅಲಾಟ್ ಮಾಡುತ್ತಿದ್ದರು. ನಮಗೆ ರೂಂ ನಂ. ಎ4 ಎಂಬಲ್ಲಿ ನಾಲ್ಕು ಜನರಿಗೆ ನಾನು ಮತ್ತು ಎಲ್. ರವೀಂದ್ರ, ಎರಡನೇ ಬಿ.ಎ.ಯವರಾಗಿದ್ದವರು.

ವೈ. ಮಹೇಶ ಮೊದಲ ಬಿ.ಎ. ಮತ್ತು ಪಿಯುಸಿಗೆ ಸೇರಿದ್ದ ಮುರಳೀಧರ ಇದ್ದೆವು. ರವೀಂದ್ರ ಸದಾ ಹಿಂದಿ ಹಾಡಿನ ಭಕ್ತನಾಗಿದ್ದು ರಾಜೇಶ್ ಖನ್ನಾನ ಹೇರ್ ಸ್ಟೈಲ್‌ನಲ್ಲಿ ಟಾಕುಟೀಕಾಗಿ ತರಗತಿಗೆ ಬರುತ್ತಿದ್ದ. ಮುರಳಿ ಹತ್ತಿರದ ಇಲವಾಲ ಊರಿನವನಾಗಿದ್ದರಿಂದ ದಿನವೂ ಅವರ ಊರಿನಿಂದ ಪರಿಚಯಸ್ಥರು ಬಂದು ಸಂಜೆ ವೇಳೆಯಲ್ಲಿ ಹೊರಗೆ ಹೋಗುತ್ತಿದ್ದ. ನಾನು ಮತ್ತು ಮಹೇಶ ಇಬ್ಬರೇ ಒಬ್ಬರಿಗೊಬ್ಬರು ಹತ್ತಿರವಾಗಿದ್ದೆವು. ಸಭೆ ಸಮಾರಂಭಗಳಿಗೆ ಮತ್ತು ಸಮಾಜವಾದಿ ಯುವ ಜನ ಸಭಾ ಕೆಲಸಗಳಿಗೆ ಜೊತೆಯಲ್ಲಿಯೇ ಹೋಗುತ್ತಿದ್ದೆವು.

ಮಹಾರಾಜ ಕಾಲೇಜ್ ಹಾಸ್ಟೆಲ್‌ವೊಂದು ಸಾರ್ವಜನಿಕ ಹಾಸ್ಟೆಲ್ ಆಗಿದ್ದು ಎಲ್ಲಾ ಜಾತಿಯ ವಿದ್ಯಾರ್ಥಿಗಳಿಗೆ ಅವಕಾಶವಿತ್ತಾದರೂ, ಸ್ಥಳೀಯ ಒಕ್ಕಲಿಗ ವಿದ್ಯಾರ್ಥಿಗಳ ಸಂಖ್ಯೆ ಜಾಸ್ತಿ ಇರುತ್ತಿತ್ತು. ಪರಿಶಿಷ್ಟ ಜಾತಿ / ಪಂಗಡಗಳಿಗೆ ಸಾಕಷ್ಟು ವಿದ್ಯಾರ್ಥಿಗಳಿದ್ದರೂ ಯಾರೂ ತಮ್ಮ ಜಾತಿ ಗುಂಪುಗಳಾಗಿ ಕಾಣಿಸಿಕೊಳ್ಳುತ್ತಿರಲಿಲ್ಲ. ನಾನು ವಿಶೇಷವಾಗಿ 300 ಕಿ.ಮೀ. ದೂರದಿಂದ ಬಂದವನಾಗಿ ನನಗೆ ಪರಿಚಿತರು, ಜಾತಿಗರು ಯಾರೂ ಗೊತ್ತಿರಲಿಲ್ಲ.

ನನ್ನ ರೂಮ್‌ಮೇಟ್‌ಗಳಲ್ಲಿ ಮಹೇಶ ಮತ್ತು ಮುರಳಿ ಒಕ್ಕಲಿಗರಾಗಿದ್ದರು. ರವೀಂದ್ರ ಕೂಡ ಪರಿಶಿಷ್ಟ ಜಾತಿಯವನಾಗಿದ್ದರೂ ಅವರ ತಂದೆ ಆಗಿನ ಕಾಲದ ಅರಣ್ಯ ಇಲಾಖೆಯಲ್ಲಿ ಆರ್.ಎಫ್.ಓ. ಆಗಿದ್ದರಿಂದ ಅವನ ಸಾಮಾಜಿಕ ಹಿನ್ನೆಲೆ ಗೊತ್ತಾಗುತ್ತಿರಲಿಲ್ಲ. ನಾನು ದಾವಣಗೆರೆ ಕಡೆಯವ ಮತ್ತು ಹೆಸರು ರುದ್ರಪ್ಪ ಎಂಬೀ ಕಾರಣದಿಂದ ಯಾರೋ ಲಿಂಗಾಯತರವನಿರಬೇಕೆಂದು ನನ್ನ ಬಗ್ಗೆ ಏನೂ ತಿಳಿಯದವರು ಭಾವಿಸಿದ್ದರು.

ಮಹಾರಾಜಾ ಕಾಲೇಜ್ ಹಾಸ್ಟೆಲ್‌ನಲ್ಲಿನ ಊಟ ಬಹಳ ಅದ್ದೂರಿಯಾಗಿಯೇ ಇರುತ್ತಿತ್ತು. ಬೆಳಿಗ್ಗೆ ಕಾಫಿ, ಟೀ ನಂತರ 9 ರಿಂದ 11 ಗಂಟೆಯವರೆಗೆ ಊಟ, ಮಧ್ಯಾಹ್ನ 1 ರಿಂದ 2ಕ್ಕೆ ತಿಂಡಿ, ರಾತ್ರಿಗೆ 8 ರಿಂದ ಊಟವಿರುತ್ತಿತ್ತು. ಮಾಂಸಹಾರಕ್ಕೆ ಪ್ರತ್ಯೇಕವಾದ ಮೆಸ್ ಇದ್ದು, ಅಲ್ಲಿ ವಾರದಲ್ಲಿ 5 ದಿನಗಳು ಮಾಂಸಾಹಾರ ಇರುತ್ತಿತ್ತು. ಸಸ್ಯಾಹಾರಿ ಮೆಸ್‌ನಲ್ಲಿ ಮಜ್ಜಿಗೆ ಹುಳಿ, ತೊವೆ, ತುಪ್ಪ, ಮೊಸರು, ಬಾಳೆಹಣ್ಣುಗಳಿರುತ್ತಿದ್ದವು. ವಾರದ ಮತ್ತು ತಿಂಗಳ ಕೊನೆಯಲ್ಲಿ ವಿಶೇಷವಾದ ಊಟಗಳು ಇರುತ್ತಿದ್ದವು. ಅದಕ್ಕಾಗಿ ಹೊರಗಿನ ಸ್ನೇಹಿತರನ್ನು ಆಹ್ವಾನಿಸಬಹುದಿತ್ತು.

ಇಂತಹ ಸಂದರ್ಭದಲ್ಲಿ ದಲಿತ ವಿದ್ಯಾರ್ಥಿಗಳು ಮೈಸೂರಿನ ಅಶೋಕಪುರಂ ಗೆಳೆಯರನ್ನು ಆಹ್ವಾನಿಸಿದ್ದರು. ಒಕ್ಕಲಿಗ ವಿದ್ಯಾರ್ಥಿಗಳೂ ಕೂಡ ಕೆ.ಜಿ. ಕೊಪ್ಪಲ ವಿದ್ಯಾರ್ಥಿಸ್ನೇಹಿತರನ್ನು ಆಹ್ವಾನಿಸಿದ್ದರು. ಊಟದ ಹಾಲ್‌ನಲ್ಲಿ ಮೊದಲ ಬ್ಯಾಚ್‌ನಲ್ಲಿಯೇ ಊಟ ಮಾಡುವ ಧಾವಂತದಲ್ಲಿ ಪರಿಶಿಷ್ಟ ಜಾತಿ ಮತ್ತು ಒಕ್ಕಲಿಗ ವಿದ್ಯಾರ್ಥಿಗಳಲ್ಲಿ ಊಟಕ್ಕೆ ಕೂರುವ ಸೀಟಿನ ವಿಷಯಕ್ಕೆ ಮಾತಿಗೆ ಮಾತು ಬೆಳೆದು ಗಲಾಟೆ ಆಗಿತ್ತು. ಊಟದ ಸೀಟಿಗಾಗಿ ಆದ ಗಲಾಟೆ ಅಲ್ಲಿಗೆ ಮುಗಿಯದೆ ಹೊರಗಿನ ರೌಡಿಗಳನ್ನು ಕರೆತಂದು ಎಸ್.ಸಿ. ವಿದ್ಯಾರ್ಥಿಗಳಲ್ಲಿ ಒಬ್ಬೊಬ್ಬರನ್ನೂ ಗುರುತಿಸುತ್ತಾ ಥಳಿಸಿದರು.

ಎಸ್.ಸಿ. ಹುಡುಗರನ್ನು ಕಂಡರೆ ಜಾತಿವಾದಿ ಕೆಲವು ಒಕ್ಕಲಿಗ ವಿದ್ಯಾರ್ಥಿಗಳು ತಾವು ಪ್ರತಿ ತಿಂಗಳೂ ಹಣ ಪಾವತಿಸುತ್ತಿದ್ದು, ಎಸ್.ಸಿ. ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಬಂದ ಹಣದಲ್ಲಿ ಬಿಟ್ಟಿ ಕೂಳು ತಿಂದು ಕೊಬ್ಬಿದ್ದಾರೆ ಎನ್ನುವ ಧೋರಣೆ ಅವರಲ್ಲಿತ್ತು. ಬಳೆ ಶ್ರೀನಿವಾಸ, ನಂಜಪ್ಪ ಮತ್ತು ಗೋವಿಂದ ಎಂಬ ಮೂವರು ಕಾಲೇಜಿನ ವಿದ್ಯಾರ್ಥಿಗಳಾಗಿದ್ದರೂ, ರೌಡಿಗಳಂತೆ ವರ್ತಿಸುತ್ತಿದ್ದರು. ಮೈಸೂರು ಜಿಲ್ಲೆಯ ಹತ್ತಿರದ ಹಳ್ಳಿಗರಾಗಿದ್ದರಿಂದ ಸದಾ ವಿದ್ಯಾರ್ಥಿಗಳಲ್ಲದವರ ಜೊತೆ ಹಾಸ್ಟೆಲ್ ಒಳಗೆ ಇದ್ದ ಸೋಮಾರಿ ಕಟ್ಟೆಯಲ್ಲಿ ಕೂತು ಹರಟುತ್ತಿದ್ದರು.

ಈ ರೀತಿ ಕರೆತಂದ ರೌಡಿಗಳಲ್ಲಿ ಒಬ್ಬ ನನ್ನನ್ನು ಹೊಡೆಯಲು ಬಂದು ಇನ್ನೇನು ಏಟು ಕೊಡುವುದರಲ್ಲಿದ್ದ. ಅಷ್ಟರಲ್ಲೇ ಅಲ್ಲಿದ್ದ ಗೋವಿಂದ `ಲೇ ಅವನು ಎಸ್.ಸಿ. ಅಲ್ಲ, ಲಿಂಗಾಯತ ಬಿಡ್ರೊ’ ಎಂದು ಕೂಗಿದ. ಹಾಗಾಗಿ ನಾನು ಏಟು ಬೀಳುವುದನ್ನು ತಪ್ಪಿಸಿಕೊಂಡು ರೂಮ್‌ಗೆ ಹೋಗಿ ಬಚಾವಾಗಿದ್ದೆ. ನಂತರದ ದಿನಗಳಲ್ಲಿ ನನ್ನ ಜಾತಿ ಅವನಿಗೆ ತಿಳಿದು ತನ್ನ ಅಂದಿನ ದಿನದ ತಪ್ಪಿನ ಅರಿವಾಗಿತ್ತು.

ಇದೆಲ್ಲ ಆಗಿ ಕೆಲವು ದಿನಗಳಲ್ಲಿ ಮಳವಳ್ಳಿ ತಾಲ್ಲೂಕಿನ ದಲಿತರಾಗಿದ್ದ ರಾಜಕಾರಣಿ ಮಾಜಿ ಮಂತ್ರಿ ಮಲ್ಲಿಕಾರ್ಜುನ ಸ್ವಾಮಿ ಆಗ ಸಿಂಡಿಕೇಟ್ ಸದಸ್ಯರಾಗಿದ್ದು, ಕಾಲೇಜ್ ಹಾಸ್ಟೆಲ್‌ನಲ್ಲಿದ್ದ ವಿಶೇಷವಾಗಿ ಏಟು ತಿಂದಿದ್ದ ಹುಡುಗರನ್ನು ನೋಡಲು ವಾರ್ಡನ್ ಶಿವಲಿಂಗಯ್ಯನವರ ಜೊತೆ ಬಂದಿದ್ದರು. ಆಗ ನನ್ನನ್ನು ಸಹ ಕರೆಸಿ ವಿಚಾರಿಸಿ ಚೆನ್ನಾಗಿ ಓದುವ ಬಗ್ಗೆ ಬುದ್ಧಿ ಮಾತು ಹೇಳಿದ್ದರು. ಆದರೆ ನಮ್ಮ ರೂಮ್‌ನಲ್ಲಿ ಮಹೇಶನಾಗಲೀ ಮುರಳಿಯಾಗಲೀ ಜಾತಿಕೂಪದ ಜಗಳಗಳಿಂದ ದೂರ ಇದ್ದರು. ಮತ್ತೆ ನಾನು ಎಂ.ಎ.ನಲ್ಲಿ ಗಂಗೋತ್ರಿಯ ಪಿ.ಜಿ. ಹಾಸ್ಟೆಲ್ ಸೇರಿದಾಗ ಅಲ್ಲಿಯೂ ಒಕ್ಕಲಿಗ ವಿದ್ಯಾರ್ಥಿಗಳಲ್ಲಿನ ಕೆಲವರು ದಲಿತ ವಿದ್ಯಾರ್ಥಿಗಳಿಗೆ ಸರ್ಕಾರಿ ಬ್ರಾಹ್ಮಣರೆಂದು ಹಂಗಿಸುತ್ತಿದ್ದರು.

ನಾನೊಮ್ಮೆ ಬೀರು ಬಾಟಲಿಯಲ್ಲಿ ಕುಡಿಯಲು ನೀರು ತುಂಬಿಕೊಳ್ಳಲು ಹೋಗುವಾಗ `ಇವರಿಗೆ ಬಿಟ್ಟಿ ಊಟದ ಜೊತೆ ಸರ್ಕಾರ ಬೀರು ಕೂಡ ಕೊಡುತ್ತದೆ ನೋಡ್ರೋ ಎಂದು ವ್ಯಂಗ್ಯವಾಗಿ ಮಾತಾಡುತ್ತಿದ್ದನ್ನು ನಾನು ಮಹದೇವನಿಗೆ ಹೇಳಿದ್ದೆ. ಅವನು ಮುಂದೊAದು ದಿನ ಪೂರ್ಣಚಂದ್ರ ತೇಜಸ್ವಿ ಅವರಿಗೆ ತಿಳಿಸಿದ ಕಾರಣ ಅವರು ಹಾಸ್ಟೆಲ್‌ನಲ್ಲಿದ್ದ ಕೆಲವು ಒಕ್ಕಲಿಗ ಹುಡುಗರನ್ನು ಕರೆಸಿ ಚೆನ್ನಾಗಿ ಬೈದು ಕಳಿಸಿದ್ದರಂತೆ. ಆ ನಂತರದ ದಿನಗಳಲ್ಲಿ ಅವರೆಲ್ಲ ನಮ್ಮನ್ನು ಕಂಡರೆ ಕೃತಕ ಗೌರವ ತೋರುತ್ತಿದ್ದರು. ನಂತರ ಎಂ.ಎ. ಮುಗಿಯುವವರೆಗೆ ಮತ್ತಾವ ಜಾತಿ ಜಗಳದ ಸೋಂಕು ಹಾಸ್ಟೆಲ್‌ನಲ್ಲಿ ಮರುಕಳಿಸಲಿಲ್ಲ.

ಮೈಸೂರಿನಲ್ಲಿ ಓದಲು ಮಹಾರಾಜಾ ಕಾಲೇಜು ನಂತರ ಗಂಗೋತ್ರಿಯಲ್ಲಿ ಎಂ.ಎ. ಮಾಡಲು ಸಿಕ್ಕ ಅವಕಾಶದ ಜೊತೆಗೆ ಸಿಕ್ಕ ಹಾಸ್ಟೆಲ್ ಸೌಲಭ್ಯಗಳು, ಜೊತೆಗೆ ಅನೇಕ ಹಿನ್ನೆಲೆಯ ಸ್ನೇಹಿತರ ಬಳಗ ದೊರಕಲು ಅವಕಾಶವಾಯಿತು. ಶೈಕ್ಷಣಿಕ ಶಿಕ್ಷಣದ ಜೊತೆಗೆ ಹಲವು ಹಿನ್ನೆಲೆಯ ವಿದ್ಯಾರ್ಥಿಗಳ ಪರಿಚಯ ಮತ್ತು ವ್ಯಕ್ತಿತ್ವ ವಿಕಸನಕ್ಕೆ ಬಹುದೊಡ್ಡ ಬುನಾದಿಯಾಯಿತು. ಅದಕ್ಕೆಲ್ಲ ಕಾರಣರಾದವರನ್ನು ಸದಾ ನೆನೆಯದಿರಲಾರೆ.

ಮುಂದುವರಿಯುವುದು…

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending