ಲೈಫ್ ಸ್ಟೈಲ್
ರೋಗ ನಿರೋಧಕ ಶಕ್ತಿ ಹೆಚ್ಚಿಸೋ ‘ವಿಟಮಿನ್-ಸಿ’ ಬಗ್ಗೆ ನೀವಿಷ್ಟು ತಿಳಿಯಲೇ ಬೇಕು..!

ಸುದ್ದಿದಿನ ಡೆಸ್ಕ್ : ನಮ್ಮ ದೇಹಕ್ಕೆ ಪ್ರತಿಯೊಂದು ವಿಟಮಿನ್ಗಳು ಕೂಡ ಮುಖ್ಯ. ಒಂದರ ಕೊರತೆ ಕಾಣಿಸಿದರೂ ಅದು ದೇಹದ ಆರೋಗ್ಯದ ಮೇಲೆ ಪರಿಣಾಮ ಬೀರುವುದು ಖಚಿತ. ಕೆಲವು ವಿಟಮಿನ್ ಗಳು ನಮಗೆ ಆಹಾರಗಳಿಂದ ಲಭ್ಯವಾಗುವುದು. ದ್ರವಾಹಾರವಾಗಿರುವಂತಹ ವಿಟಮಿನ್ ಸಿಯು ದೇಹದ ಆರೋಗ್ಯವನ್ನು ಕಾಪಾಡುವಲ್ಲಿ ತುಂಬಾ ಪ್ರಮುಖ ಪಾತ್ರ ವಹಿಸುವುದು. ವಿಟಮಿನ್ ದೇಹದ ಸಂಯೋಜಕ ಅಂಗಾಂಶಗಳ ಆರೋಗ್ಯ ಕಾಪಾಡುವುದು ಮಾತ್ರವಲ್ಲದೆ ಇದರಲ್ಲಿ ಆ್ಯಂಟಿ ಆಕ್ಸಿಡೆಂಟ್ ಗಳು ಕೂಡ ಇದೆ.
- ವಿಟಮಿನ್ -ಸಿ ದೇಹದಲ್ಲಿ ರೋಗ ನಿರೋಧಕಶಕ್ತಿಯನ್ನುಹೆಚ್ಚಿಸುತ್ತದೆ ಮತ್ತು ರೋಗಣುಗಳಜೊತೆಹೋರಾಡುತ್ತದೆ,ಸೋಂಕನ್ನು ತಡೆಗಟ್ಟುತ್ತದೆ.
- ವಸಡಿನಿಂದ ಉಂಟಾಗುವ ರಕ್ತಸ್ರಾವವನ್ನುಪೂರ್ತಿಯಾಗಿ ಕಡಿಮೆಮಾಡಿ ವಾಸಿ ಮಾಡುತ್ತದೆ.
- ಚರ್ಮದ ಸುಕ್ಕನ್ನು ತಡೆಗಟ್ಟಿ,ಚರ್ಮಕ್ಕೆಕಾಂತಿಯನ್ನುನೀಡುತ್ತದೆ,ಅಷ್ಟೆಅಲ್ಲದೆ ತುಂಬಾಅಧಿಕವಾಗಿ ಉತ್ಕರ್ಷಣಶಕ್ತಿಯನ್ನು ಹೊಂದಿದೆ.
- ನೆಗಡಿ,ಕೆಮ್ಮನ್ನು ಕೂಡ ಕಡಿಮೆ ಮಾಡುತ್ತದೆ.ಅವುಗಳಿಗೆಔಷಧಿಯಾಗಿ ಕೆಲಸ ಮಾಡುತ್ತದೆ.
- ಅಷ್ಟೇ ಅಲ್ಲದೆ ನಮ್ಮ ರಕ್ತದಲ್ಲಿರುವ ಬಿಳಿಯ ರಕ್ತಕಣಗಳನ್ನೂಹೆಚ್ಚಿಸುತ್ತದೆ. ನಮ್ಮ ದೇಹದಲ್ಲಿ ಪ್ರತಿ ರಕ್ಷಣಾ ಶಕ್ತಿಯನ್ನುಹೆಚ್ಚಿಸುತ್ತದೆ.
ಕೊರತೆ
- ವಿಟಮಿನ್ ಸಿ ದೇಹದಲ್ಲಿ ಉತ್ಪತ್ತಿಯಾಗದೆ ಇರುವ ಕಾರಣದಿಂದ ಹಲವಾರು ಮಂದಿಯಲ್ಲಿ ವಿಟಮಿನ್ ಸಿ ಕೊರತೆ ಕಂಡುಬರುವುದು. ವಿಟಮಿನ್ ಸಿ ಕೊರತೆಯಿಂದ ನಿಮಗೆ ಸ್ಕರ್ವಿ ಉಂಟಾಗಬಹುದು. ಇದರಿಂದಾಗಿ ನೀವು ತುಂಬಾ ನಿಶ್ಯಕ್ತಿಯಿಂದ ಬಳಲಬಹುದು.
- ಈ ಕಾಯಿಲೆಯು ಮೂಳೆ, ಸ್ನಾಯುಗಳ ಬಲ ಮತ್ತು ರೋಗನಿರೋಧಕ ಕುಂದುವಂತೆ ಮಾಡುವುದು. ಅಧಿಕ ರಕ್ತದೊತ್ತಡ, ಮೂತ್ರಕೋಶಗಳ ಕಾಯಿಲೆ, ಪಾರ್ಶ್ವವಾಯು, ಕೆಲವು ಕ್ಯಾನ್ಸರ್ ಗಳು ಅಪಧಮನಿ ಕಾಠಿಣ್ಯ ಇತ್ಯಾದಿಗಳು ಕಾಣಿಸಿಕೊಳ್ಳಬಹುದು.
ವಿಟಮಿನ್ – ಸಿ ಸಿಗುವ ಹಣ್ಣುಗಳು ಹಾಗೂ ತರಕಾರಿಗಳು ಮತ್ತು ಅದರಲ್ಲಿ ಎಷ್ಟು ವಿಟಮಿನ್ – ಸಿ ಇದೆ ಎಂಬುದನ್ನು ತಿಳಿಯೋಣ
- ಕಳಿತ ಪೇರಳೆ ಹಣ್ಣುಗಳಲ್ಲಿ ಉನ್ನತ ಮಟ್ಟದ ವಿಟಮಿನ್ ಸಿ ಇದೆ. ಒಂದು ಪೇರಳೆ ಹಣ್ಣಿನಲ್ಲಿ ದಿನಕ್ಕೆ ಬೇಕಾಗುವ 628 ಶೇ. ವಿಟಮಿನ್ ಸಿ ಇದೆ. ಇದರಿಂದ ಒಂದು ದಿನ ಪೇರಳೆ ಹಣ್ಣು ಸೇವಿಸಿದರೆ ಮರುದಿನ ವಿಟಮಿನ್ ಸಿ ಬಗ್ಗೆ ಚಿಂತೆ ಮಾಡಬೇಕಿಲ್ಲ.
- ಕಿತ್ತಳೆಯು ವಿಟಮಿನ್ ಸಿ ಸಮೃದ್ಧವಾಗಿರುವಂತಹ ಸಿಟ್ರಸ್ ಹಣ್ನಾಗಿದೆ. ಒಂದು ದೊಡ್ಡ ಕಿತ್ತಳೆ ಹಣ್ಣಿನಲ್ಲಿ 163 ಶೇ. ವಿಟಮಿನ್ ಸಿ ಇದೆ.
- ಲಿಂಬೆಹಣ್ಣು ವಿಟಮಿನ್ ಸಿ ಇರುವ ಮತ್ತೊಂದು ಸಿಟ್ರಸ್ ಹಣ್ಣು. 100 ಗ್ರಾಂನಷ್ಟು ಲಿಂಬೆಹಣ್ಣಿನಲ್ಲಿ 53 ಗ್ರಾಂನಷ್ಟು ವಿಟಮಿನ್ ಸಿ ಇದೆ.
- ನೆಲ್ಲಿಕಾಯಿಯು ರುಚಿಯಲ್ಲಿ ಹುಳಿಯಾಗಿದ್ದರೂ ಇದರಲ್ಲಿ ಉನ್ನತ ಮಟ್ಟದ ವಿಟಮಿನ್ ಸಿ ಇದೆ. ನೂರು ಗ್ರಾಂ ನೆಲ್ಲಿಕಾಯಿಯಲ್ಲಿ 27.7 ಮಿ.ಗ್ರಾಂ. ವಿಟಮಿನ್ ಸಿ ಇದೆ
- ಉಷ್ಣವಲಯದ ಹಣ್ಣಾಗಿರುವ ಅನಾನಸ್ ನಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಒಂದು ಕಪ್ ತಾಜಾ ಅನಾನಸ್ ನಲ್ಲಿ 131 ಶೇ. ವಿಟಮಿನ್ ಸಿ ಇದೆ.
- ಸ್ಟ್ರಾಬೆರಿಯಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಒಂದು ಕಪ್ ಸ್ಟ್ರಾಬೆರಿಯಲ್ಲಿ 149 ಶೇ. ವಿಟಮಿನ್ ಸಿ ಇದೆ.
- ಕಚ್ಚಾ ಪಪ್ಪಾಯಿಯಲ್ಲಿ ವಿಟಮಿನ್ ಸಿ ಉನ್ನತ ಮಟ್ಟದಲ್ಲಿದೆ. ಒಂದು ಕಪ್ ಕಚ್ಚಾ ಪಪ್ಪಾಯಿಯಲ್ಲಿ ದೈನಂದಿನ ಅಗತ್ಯಕ್ಕೆ ಬೇಕಾಗುವ 144 ಶೇ. ವಿಟಮಿನ್ ಸಿ ಇದೆ.
- ಲಿಚೆಯಲ್ಲಿ ವಿಟಮಿನ್ ಸಿಯು ಸಮೃದ್ಧವಾಗಿದೆ ಮತ್ತು ಇದು ತುಂಬಾ ಸಿಹಿಯಾಗಿದೆ. ಇದು ಅದ್ಭುತ ರುಚಿ ಮತ್ತು ಆರೋಗ್ಯಕಾರಿಯು ಹೌದು. 100 ಗ್ರಾಂ ಲಿಚೆಯಲ್ಲಿ 71.5 ಗ್ರಾಂನಷ್ಟು ವಿಟಮಿನ್ ಸಿ ಇದೆ
- ಕೋಸುಗಡ್ಡೆಯು ತುಂಬಾ ಆರೋಗ್ಯಕಾರಿ ತರಕಾರಿಯಾಗಿದೆ ಮತ್ತು ಇದರಲ್ಲಿ ಅಧಿಕ ಮಟ್ಟದ ವಿಟಮಿನ್ ಸಿ ಇದೆ. ಒಂದು ಕಪ್ ಕಚ್ಚಾ ಕೋಸುಗಡ್ಡೆಯಲ್ಲಿ 135 ಶೇ. ವಿಟಮಿನ್ ಸಿ ಇದೆ.
- ಕಿವಿಯು ಉನ್ನತ ಪ್ರಮಾಣದ ವಿಟಮಿನ್ ಸಿ ಇರುವಂತಹ ಹಣ್ಣು. ಒಂದು ತುಂಡು ಕಿವಿಯಲ್ಲಿ ದಿನಕ್ಕೆ ಸೂಚಿಸಲಾಗಿರುವ ವಿಟಮಿನ್ ಸಿಯ 273 ಮಿ.ಗ್ರಾಂ. ಇದೆ.
- ಕೆಂಪು ದೊಣ್ಣೆ ಮೆಣಸಿನಲ್ಲಿ ಕೂಡ ವಿಟಮಿನ್ ಸಿ ಲಭ್ಯವಿದೆ. ಒಂದು ಕಪ್ ಕೆಂಪು ದೊಣ್ಣೆ ಮೆಣಸಿನಲ್ಲಿ 317 ಮಿ.ಗ್ರಾಂ ವಿಟಮಿನ್ ಸಿ ಇದೆ.
- ಪಾರ್ಸ್ಲಿಯಲ್ಲಿ ಉನ್ನತ ಮಟ್ಟದ ವಿಟಮಿನ್ ಸಿ ಇದೆ ಮತ್ತು ಒಂದು ಕಪ್ ತಾಜಾ ಪಾರ್ಸ್ಲಿಯಲ್ಲಿ 133 ಶೇ. ವಿಟಮಿನ್ ಸಿ ಇದೆ.
- ಹಳದಿ ದೊಣ್ಣೆ ಮೆಣಸಿನಲ್ಲಿ ಕೂಡ ವಿಟಮಿನ್ ಸಿ ಇದೆ. ಒಂದು ದೊಡ್ಡ ದೊಣ್ಣೆ ಮೆಣಸಿನಲ್ಲಿ 341 ಮಿ.ಗ್ರಾಂ ವಿಟಮಿನ್ ಸಿ ಇದೆ
- ಹೂಕೋಸು ವಿಟಮಿನ್ ಸಿ ಇರುವ ಎಲೆಜಾತಿಯ ವಿಭಾಗಕ್ಕೆ ಸೇರಿದ ತರಕಾರಿಯಾಗಿದೆ. ಒಂದು ಕಪ್ ಹಸಿ ಹೂಕೋಸಿನಲ್ಲಿ ಶೇ.77ರಷ್ಟು ವಿಟಮಿನ್ ಸಿ ಇದೆ.
ಮಿಸ್ ಮಾಡ್ದೆ ಇದನ್ನೂ ಓದಿ
https://m.facebook.com/story.php?story_fbid=545041352689181&id=299499370576715
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಪಕ್ಷಿ ಸಂಕುಲ ಸಂರಕ್ಷಿಸುವ ಮನೋಭಾವ ಅಗತ್ಯ : ಪ್ರಾಚಾರ್ಯ ಎಂ.ನಾಸಿರುದ್ದೀನ್

ಸುದ್ದಿದಿನ,ಚಿತ್ರದುರ್ಗ: ಜಗತ್ತಿನಲ್ಲಿ ಭೂಮಿಯ ಮೇಲೆ ಸಕಲ ಜೀವರಾಶಿಗಳು ಬದುಕಲು ಅವಕಾಶವಿದ್ದು ಪರಿಸರ ಸಂರಕ್ಷಣೆ ಮಾಡುವುದರ ಮೂಲಕ ಪಕ್ಷಿ ಸಂಕುಲ ಸಂರಕ್ಷಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಡಯಟ್ ಪ್ರಾಚಾರ್ಯ ಎಂ.ನಾಸಿರುದ್ದೀನ್ ಹೇಳಿದರು.
ನಗರದ ಡಯಟ್ ಆವರಣದಲ್ಲಿರುವ 50 ಕ್ಕೂ ಹೆಚ್ಚು ಮರಗಳಲ್ಲಿ ಪಕ್ಷಿಗಳಿಗೆ ಆಹಾರ, ನೀರು ಪೂರೈಕೆ ವ್ಯವಸ್ಥೆ ಮಾಡಿ ಮಾತನಾಡಿದ ಅವರು ಪ್ರಸ್ತುತ ಸಂದರ್ಭದಲ್ಲಿ ಬಿಸಿಲಿನ ತಾಪ ಹೆಚ್ಚಾಗಿದ್ದು ಪಕ್ಷಿಗಳಿಗೆ ನೀರು ಮತ್ತು ಆಹಾರವನ್ನು ಪೂರೈಕೆ ಮಾಡುವ ಮೂಲಕ ಪಕ್ಷಿಗಳ ಬಗ್ಗೆ ಕಾಳಜಿಯೊಂದಿಗೆ ಸಂರಕ್ಷಿಸುವ ಭಾವನೆ ಬೆಳೆಸಿಕೊಳ್ಳಬೇಕು ಎಂದರು. ನಮ್ಮ ಮನೆಗಳ ಮೇಲ್ಚಾವಣಿಯಲ್ಲಿ ನೀರು, ಆಹಾರ ವ್ಯವಸ್ಥೆ ಮಾಡುವುದರಿಂದ ಪಕ್ಷಿಗಳನ್ನು ಸಂರಕ್ಷಿಸಲು ಅನುಕೂಲವಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಉಪನ್ಯಾಸಕ ಆರ್.ನಾಗರಾಜು ಕಚೇರಿ ಸಿಬ್ಬಂದಿ ವರ್ಗದವರು ಇದ್ದರು.
ಫೋಟೋ: ನಗರದ ಡಯಟ್ ಆವರಣದಲ್ಲಿರುವ 50 ಕ್ಕೂ ಹೆಚ್ಚು ಮರಗಳಲ್ಲಿ ಪ್ರಾಚಾರ್ಯ ಎಂ.ನಾಸಿರುದ್ದೀನ್ ಪಕ್ಷಿಗಳಿಗೆ ಆಹಾರ, ನೀರು ಪೂರೈಕೆ ವ್ಯವಸ್ಥೆ ಮಾಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕವಿತೆ | ಮತ್ತಿನ ಕುಣಿಕೆ

- ಗುರು ಸುಳ್ಯ
ನಿದೆರೆಗೆ ದೂಡದ ಮದಿರೆಯ
ಅನುಭವ
ಸದಾ ಸಂಕಟಗಳ ಹೆರುವ
ಮತ್ತಿನ ಕುಣಿಕೆ
ನನ್ನ ಮಡಿಲ ಮೇಲೆ ನನ್ನದೇ
ಒಡಲು ಮಲಗಿರಲು
ಮಲಗಲು ಹಂಬಲಿಸುವ
ಮಗುವಿನ ಮನದೊಳಗೆ
ಚಾದರವಿಲ್ಲದೆ ಅಳುವ ರಸ್ತೆಯ
ಬದಿಗಳು ಚಲಿಸುತ್ತಿದೆ
ಅಪ್ಪನ ಕೈ ಹಿಡಿದು
ಅಮ್ಮನ ಕೆನ್ನೆಯ ಮೇಲೆ
ನಡೆದ ನೆನಪುಗಳು
ಆದ ಅಪಘಾತಗಳ ಆಳ
ಅಳೆಯುತ್ತಿವೆ…
ಶತ ಪ್ರಯತ್ನ ಪಟ್ಟರೂ
ತಪ್ಪದ ದಾರಿಗೆ
ಡಾಂಬರು ಹಾಕಿಸಿದವರ
ರಾಜಕೀಯವನ್ನು ಎದುರಿಸುತ್ತಲೇ
ಹಡೆಯಬೇಕಿದೆ ಮುಂದಿನ ದಾರಿಯ
ತಿರುವುಗಳಲ್ಲಿ ಕೈ ಹಿಡಿದು
ಮೆಲ್ಲನೆ ಕರೆದೊಯ್ಯುವ
ಕವಿತೆಗಳನ್ನು
ಎಲ್ಲೆಂದರಲ್ಲಿ ಬಿಟ್ಟು ಬಿಡಲು
ಸಾಧ್ಯವಾಗುತ್ತಿಲ್ಲ
ಉಸಿರ ನಾದದಲ್ಲಿ
ತೇಯ್ದ ಗಂಧ,
ಆಟ ನಿಲ್ಲಲು ಬಿಡದೆ
ಗಮಗಮಿಸುತ್ತಿದೆ..
ಪ್ರವಾಹದಲ್ಲಿ ಕೊಚ್ಚಿಹೋಗುವ
ಮುನ್ಸೂಚನೆಯಿಲ್ಲದೇ
ಮೊದಲ ಮಳೆಯಲ್ಲಿ ನೆನೆದು
ಚಪ್ಪಲಿಗೆ ಅಂಟಿದ ಮಣ್ಣಿನ ಘಮದಂತೆ.
(ಕವಿತೆ – ಗುರು ಸುಳ್ಯ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮೊಬೈಲ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ

ಸುದ್ದಿದಿನಡೆಸ್ಕ್:ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ನಡೆಸುತ್ತಿರುವ ರಡ್ಸೆಟ್ ಸಂಸ್ಥೆ ವತಿಯಿಂದ ಮೊಬೈಲ್ ರಿಪೇರಿ ಮತ್ತು ಸೇವೆ ಕುರಿತ 30 ದಿನಗಳ ಉಚಿತ ತರಬೇತಿ ಆಯೋಜಿಸಲಾಗಿದೆ, ಅರ್ಜಿ ಸಲ್ಲಿಸಲು ಮಾರ್ಚ್ 28 ಕೊನೆಯ ದಿನವಾಗಿದೆ.
ತರಬೇತಿ ಏಪ್ರಿಲ್ 17 ರಿಂದ ಪ್ರಾರಂಭವಾಗಲಿದ್ದು, ಆಸಕ್ತ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ. 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಕಡ್ಡಾಯವಾಗಿ ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು.
ತರಬೇತಿ ವಸತಿಯುತವಾಗಿದ್ದು, ಉಚಿತ ಊಟ, ವಸತಿ ನೀಡಲಾಗುವುದು. ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9740982585 ಗೆ ಸಂಪರ್ಕಿಸಬಹುದು ಎಂದು ರುಡ್ಸೆಟ್ ಸಂಸ್ಥೆಯ ನಿರ್ದೇಶಕರಾದ ರವಿಕುಮಾರ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days ago
2 ಕೋಟಿ 20 ಲಕ್ಷ ಜನ, ಪಡಿತರ ಚೀಟಿಯ ಪ್ರಯೋಜನ ಪಡೆಯುತ್ತಿಲ್ಲ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ
-
ದಿನದ ಸುದ್ದಿ5 days ago
ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಿಸಿದ ಶಾಸಕ ಕೆ.ಎಸ್.ಬಸವಂತಪ್ಪ
-
ದಿನದ ಸುದ್ದಿ7 days ago
ಅನ್ನಭಾಗ್ಯ ಯೋಜನೆ | ನೇರ ನಗದು ವರ್ಗಾವಣೆ ಬದಲು ಅಕ್ಕಿ ವಿತರಣೆ
-
ದಿನದ ಸುದ್ದಿ2 days ago
ನೆಲಮಂಗಲ ಸಮೀಪದ ದಾಸನಪುರದಲ್ಲಿ 306 ಕೋಟಿ ರೂಪಾಯಿ ವೆಚ್ಚದಲ್ಲಿ ಸುಸಜ್ಜಿತ ಕೃಷಿ ಮಾರುಕಟ್ಟೆ ನಿರ್ಮಾಣ : ಸಚಿವ ಶಿವಾನಂದಪಾಟೀಲ್
-
ದಿನದ ಸುದ್ದಿ5 days ago
ಬೆಂವಿವಿ | ಸಂವಹನ ವಿದ್ಯಾರ್ಥಿಗಳಿಂದ ಹೋಳಿ ಸಂಭ್ರಮ
-
ದಿನದ ಸುದ್ದಿ4 days ago
ಕವಿತೆ | ಮತ್ತಿನ ಕುಣಿಕೆ
-
ದಿನದ ಸುದ್ದಿ2 days ago
ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳ ತಾತ್ಕಾಲಿಕ ಪಟ್ಟಿಗೆ ರಾಜ್ಯದ ಶಿಲಾ ಶಾಸನಗಳು ಸೇರ್ಪಡೆ
-
ದಿನದ ಸುದ್ದಿ1 day ago
ಮಾಸಾಶನ ಪಡೆಯುತ್ತಿರುವ ಕಲಾವಿದರು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಲು ಸೂಚನೆ