ದಿನದ ಸುದ್ದಿ
ಇಸ್ರೇಲಿ ಬೇಹುಗಾರಿಕೆ ಸಾಧನವನ್ನು ಬಳಸಿದವರು ಯಾರು?
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2019/11/Watsapp-suddidina-644.jpg&description=ಇಸ್ರೇಲಿ ಬೇಹುಗಾರಿಕೆ ಸಾಧನವನ್ನು ಬಳಸಿದವರು ಯಾರು?', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2019/11/Watsapp-suddidina-644.jpg&description=ಇಸ್ರೇಲಿ ಬೇಹುಗಾರಿಕೆ ಸಾಧನವನ್ನು ಬಳಸಿದವರು ಯಾರು?', 'pinterestShare', 'width=750,height=350'); return false;" title="Pin This Post">
ವಾಟ್ಸ್ ಆಪ್ ಸರಕಾರಕ್ಕೆ ನೀಡಿರುವ ತನ್ನ ಖಾತೆಗಳ ಹ್ಯಾಕ್ ಆಗಿರುವ ಹೆಸರುಗಳಲ್ಲಿ ಭೀಮ-ಕೋರೆಗಾಂವ್ ವಿಷಯದಲ್ಲಿ ಆಪಾದಿತರಾಗಿರುವವರು ಮತ್ತು ಅವರ ರಕ್ಷಣೆಗೆ ನಿಂತಿರುವ ವಕೀಲರಲ್ಲಿ ಹಲವರ ಹೆಸರುಗಳು ಇವೆ. ಆದ್ದರಿಂದ ಇವೆರಡರ ನಡುವಿನ ಸಂಬಂಧ ಸಾಕಷ್ಟು ಸ್ಪಷ್ಟವಾಗಿದೆ.. ಇವೆಲ್ಲವೂ ಸರಕಾರವೇ ತನ್ನನ್ನು ಟೀಕಿಸುವವರ ಖಾತೆಗಳನ್ನು ಸೀಳಲು ಇಸ್ರೇಲೀ ಬೇಹುಗಾರಿಕೆ ಸಾಧನವನ್ನು ಬಳಸುವಲ್ಲಿ ಶಾಮೀಲಾಗಿದೆ ಎಂಬ ಸಂದೇಹಗಳನ್ನು ದೃಢಪಡಿಸುತ್ತವೆ. ಈ ಇಡೀ ಕೊಳಕು ವ್ಯವಹಾರದ ಆಮೂಲಾಗ್ರ ತನಿಖೆ ನಡೆಯಬೇಕು.
- ಪೀಪಲ್ಸ್ ಡೆಮಾಕ್ರಸಿ ಸಂಪಾದಕೀಯ, ನವಂಬರ್ 10
ವಿವಿಧ ಕಾರ್ಯಕರ್ತರು, ಪತ್ರಕರ್ತರು ಮತ್ತು ರಾಜಕಾರಣಿಗಳ ವಾಟ್ಸ್ ಆಪ್ ಖಾತೆಗಳನ್ನು ಇಸ್ರೇಲಿ ಕಂಪನಿ ಪೆಗಸಸ್ ನ ಬೇಹುಗಾರಿಕೆ ಸಾಧನವನ್ನು ಬಳಸಿ ಸೀಳಿರುವ(ಹ್ಯಾಕ್ ಮಾಡಿರುವ) ಸುದ್ದಿ ಕಳವಳಕಾರಿ ಮತ್ತು ಖಂಡನೀಯ. ಇದು ಹೇಗಾಯಿತು, ಖಾಸಗಿತ್ವದ ಉಲ್ಲಂಘನೆ ಹೇಗೆ ಸಂಭವಿಸಿತು, ಇದಕ್ಕೆ ಯಾರು ಹೊಣೆ ಎಂಬುದಕ್ಕೆ ವಿವರಣೆ ನೀಡಬೇಕಾಗಿದೆ. ಸರಕಾರ ಯಾವುದೇ ವಿವರಣೆಯನ್ನು ಕೊಟ್ಟಿಲ್ಲವಾದರೂ, ಇದರಲ್ಲಿ, ಈ ಬೇಹುಗಾರಿಕೆಯಲ್ಲಿ ಸರಕಾರದ ಶಾಮೀಲಿನತ್ತ ಬೊಟ್ಟು ಮಾಡುವ ಹೆಚ್ಚಿನ ತಥ್ಯಗಳು ಸಾರ್ವಜನಿಕಗೊಂಡಿವೆ.
ಸರಕಾರ, ಈ ಸುದ್ದಿ ಹೊರಬಂದಾಗ, ಹಲವಾರು ಭಾರತೀಯರ ಖಾಸಗಿತ್ವದ ಉಲ್ಲಂಘನೆಯ ಬಗ್ಗೆ ವಾಟ್ಸ್ ಆಪ್ ಯಾವುದೇ ಸರಕಾರೀ ಸಂಸ್ಥೆಗೆ ಯಾವುದೇ ಮಾಹಿತಿ ನೀಡಿರಲಿಲ್ಲ ಎಂದು ಹೇಳಿತು. ಆದರೆ ತಾವು ದಸ್ತಾವೇಜುಗಳೊಂದಿಗೆ ಈ ಮಾಹಿತಿಯನ್ನು ನೀಡಿ, ವಾಸ್ತವವಾಗಿ, ಖಾಸಗಿತ್ವದ ಉಲ್ಲಂಘನೆಯಾಗಬಹುದು ಎಂದು ಭಾರತ ಸರಕಾರವನ್ನು ಎಚ್ಚರಿಸಿದ್ದೆವು ಎಂದು ವಾಟ್ಸ್ ಆಪ್ ನವರು ಪ್ರತ್ಯುತ್ತರ ನೀಡಿದರು. ಮೇ ತಿಂಗಳಲ್ಲಿ ಮತ್ತು ನಂತರ ಮತ್ತೆ ಸಪ್ಟಂಬರಿನಲ್ಲಿ ಈ ಎಚ್ಚರಿಕೆಯನ್ನು ನೀಡಿರುವುದಾಗಿ ಅವರು ಹೇಳಿದ್ದಾರೆ. ಸರಕಾರದ ಹೇಳಿಕೆಗೆ ಉತ್ತರವಾಗಿ ವಾಟ್ಸ್ ಆಪ್ ಮೇ ತಿಂಗಳಲ್ಲಿ ಕಳಿಸಿದ ಟಿಪ್ಪಣಿ ಮತ್ತು ಸಪ್ಟಂಬರ್ನಲ್ಲಿ ಕಳಿಸಿದ ಪತ್ರವನ್ನು ಲಗತ್ತಿಸಿತ್ತು.
ನಂತರ, ಸರಕಾರ ಇದನ್ನು ದೃಢ ಪಡಿಸಿತು, 121 ಭಾರತೀಯರನ್ನು ಪೆಗಸಸ್ ಬೇಹುಗಾರಿಕೆ ಸಾಧನ ಗುರಿ ಮಾಡಿರುವ ಮಾಹಿತಿಯನ್ನು ಸಪ್ಟಂಬರ್ ನಲ್ಲಿ ಪಡೆದಿರುವುದಾಗಿ ಹೇಳಿತು, ಆದರೆ ಮಾಹಿತಿ ತಂತ್ರಜ್ಞಾನ ಮಂತ್ರಾಲಯದ ಪ್ರಕಾರ ಈ ಪತ್ರ ಬಹಳ ಅಸ್ಪಷ್ಟವಾಗಿತ್ತು.
ವಾಟ್ಸ್ ಆಪ್ ಸರಕಾರದೊಂದಿಗೆ ಹಂಚಿಕೊಂಡ ಮಾಹಿತಿಯ ವಿವರಗಳನ್ನು ನೀಡಿರುವುದು, ಈ ಬೇಹುಗಾರಿಕೆಗೆ ಗುರಿಯಾದ ಜನಗಳ ಹೆಸರುಗಳೆಲ್ಲ ಸರಕಾರ ಮತ್ತು ಅದರ ಧೋರಣೆಗಳ ಟೀಕಾಕಾರರಾಗಿರುವ ಸುಪರಿಚಿತ ಕಾರ್ಯಕರ್ತರು ಮತ್ತು ಪತ್ರಕರ್ತರದ್ದಾಗಿರುವುದು, ಈ ಬಗ್ಗೆ ತಮಗೆ ಗೊತ್ತಿರಲಿಲ್ಲ ಎಂದು ನಟಿಸುವ ಸರಕಾರದ ಅಸಮರ್ಪಕ ಮತ್ತು ಕುಂಟು ನೆವವೊಡ್ಡುವ ಪ್ರಯತ್ನಗಳು-ಇವೆಲ್ಲವೂ ಸರಕಾರವೇ ತನ್ನನ್ನು ಟೀಕಿಸುವವರ ಖಾತೆಗಳನ್ನು ಸೀಳಲು ಇಸ್ರೇಲೀ ಬೇಹುಗಾರಿಕೆ ಸಾಧನವನ್ನು ಬಳಸುವಲ್ಲಿ ಶಾಮೀಲಾಗಿದೆ ಎಂಬ ಸಂದೇಹಗಳನ್ನು ದೃಢಪಡಿಸುತ್ತವೆ. ವಾಟ್ಸ್ ಆಪ್ ಸರಕಾರಕ್ಕೆ ನೀಡಿರುವ ಹೆಸರುಗಳಲ್ಲಿ ಭೀಮ-ಕೋರೆಗಾಂವ್ ವಿಷಯದಲ್ಲಿ ಆಪಾದಿತರಾಗಿರುವವರು ಮತ್ತು ಅವರ ರಕ್ಷಣೆಗೆ ನಿಂತಿರುವ ವಕೀಲರಲ್ಲಿ ಹಲವರ ಹೆಸರುಗಳು ಇವೆ. ಆದ್ದರಿಂದ ಇವೆರಡರ ನಡುವಿನ ಸಂಬಂಧ ಸಾಕಷ್ಟು ಸ್ಪಷ್ಟವಾಗಿದೆ.
ತನ್ನ ಬೇಹುಗಾರಿಕೆ ತಂತ್ರಜ್ಞಾನವನ್ನು ಸರಕಾರಗಳಿಗೆ ಮತ್ತು ಸರಕಾರೀ ಏಜೆನ್ಸಿಗಳಿಗೆ ಮಾತ್ರ ನೀಡುವುದು ಎಂದು ಅದನ್ನು ಉತ್ಪಾದಿಸಿದ ಎನ್ ಎಸ್ ಒ ಕಂಪನಿ ಹೇಳಿಕೆ ನೀಡಿದೆ. ಈ ಬೇಹುಗಾರಿಕೆ ತಂತ್ರಜ್ಞಾನ ವಿಪರೀತ ವೆಚ್ಚದಾಯಕವಾಗಿದ್ದು ಯಾವುದೇ ಖಾಸಗಿ ಸಂಸ್ಥೆಗೆ ಇದರ ವೆಚ್ಚ ಭರಿಸುವುದು ಸಾಧ್ಯವಿಲ್ಲ ಎಂಬುದನ್ನೂ ಇಲ್ಲಿ ಗಮನಿಸಬಹುದು.
ಈ ಇಡೀ ಕೊಳಕು ವ್ಯವಹಾರದ ಆಮೂಲಾಗ್ರ ತನಿಖೆ ನಡೆಯಬೇಕು. ಸರಕಾರೀ ಏಜೆನ್ಸಿಗಳು ಯಾವುದಾದರೂ ಈ ಕಾನೂನುಬಾಹಿರ ಕೃತ್ಯಕ್ಕೆ ಕಾರಣರಾಗಿದ್ದರೆ, ಅದಕ್ಕೆ ಹೊಣೆಗಾರರಾದವರನ್ನು ಶಿಕ್ಷಿಸಬೇಕು. ಈ ಪ್ರಕರಣ ಸಾಮಾನ್ಯ ನಾಗರಿಕರ ಹಕ್ಕುಗಳು ಮತ್ತು ಖಾಸಗಿತ್ವವನ್ನು ಕಾಪಾಡಿಕೊಳುವ್ಳ ಒಂದು ಸಮಗ್ರ ಮಾಹಿತಿ ರಕ್ಷಣಾ ಕಾಯ್ದೆಯನ್ನು ತರಬೇಕಾದ ತುರ್ತನ್ನು ಎತ್ತಿತೋರಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಯು ಒಟ್ಟಾರೆ ಶೇಕಡ 81.99 ರಷ್ಟು ಸಾಧನೆ ಮಾಡಿದ್ದು, ರಾಜ್ಯದಲ್ಲಿ 25 ನೇ ಸ್ಥಾನ ಪಡೆದಿದೆ. ಈ ಬಾರಿಯೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ಅತಿ ಹೆಚ್ಚು ಶೇಕಡ 90.91 ರಷ್ಟು ಫಲಿತಾಂಶ ಪಡೆದು ಮೇಲುಗೈ ಸಾಧಿಸಿದ್ದಾರೆ.
ಜಿಲ್ಲೆಯಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 20,810 ವಿದ್ಯಾರ್ಥಿಗಳ ಪೈಕಿ 16,046 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಶೇಕಡ 77.11 ರಷ್ಟು ಹಾಗೂ ಹೊಸದಾಗಿ ಪರೀಕ್ಷೆ ಬರೆದ (Freshers) 18,949 ವಿದ್ಯಾರ್ಥಿಗಳಲ್ಲಿ 15,540 ಮಂದಿ ಉತ್ತೀರ್ಣರಾಗಿದ್ದಾರೆ ಶೇಕಡ 82.01 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ವಿಭಾಗವಾರು ಫಲಿತಾಂಶದ ವಿಶ್ಲೇಷಣೆ
ವಿಜ್ಞಾನ ವಿಭಾಗ (Science): ಜಿಲ್ಲೆಯಲ್ಲಿ ಅತಿ ಹೆಚ್ಚು ಸಾಧನೆ ಈ ವಿಭಾಗದಲ್ಲಿ ದಾಖಲಾಗಿದೆ. ಒಟ್ಟು 12,536 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,936 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 87.24). ಹೊಸ ವಿದ್ಯಾರ್ಥಿಗಳ ಪೈಕಿ 11,770 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,736 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 90.91 ರಷ್ಟು ಅದ್ಭುತ ಫಲಿತಾಂಶ ಬಂದಿದೆ.
ವಾಣಿಜ್ಯ ವಿಭಾಗ (Commerce)
ಈ ವಿಭಾಗದಲ್ಲಿ ಹಾಜರಾದ 4,295 ವಿದ್ಯಾರ್ಥಿಗಳಲ್ಲಿ 3,075 ಮಂದಿ ಉತ್ತೀರ್ಣರಾಗಿದ್ದಾರೆ (ಶೇ. 71.59). ಹೊಸ ವಿದ್ಯಾರ್ಥಿಗಳ ಪೈಕಿ 3858 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 2960 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 76.72 ರಷ್ಟು ಫಲಿತಾಂಶ ಬಂದಿದೆ.
ಕಲಾ ವಿಭಾಗ (Arts): ಕಲಾ ವಿಭಾಗದಲ್ಲಿ ಒಟ್ಟು 3,979 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 2,035 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 51.14). ಹೊಸ ವಿದ್ಯಾರ್ಥಿಗಳ ಪೈಕಿ 3321 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 1880 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 56.61 ರಷ್ಟು ಫಲಿತಾಂಶ ಬಂದಿದೆ.
ಜಿಲ್ಲೆಯ ಒಟ್ಟಾರೆ ಫಲಿತಾಂಶದಲ್ಲಿ ವಿಜ್ಞಾನ ವಿಭಾಗವು ಪ್ರಥಮ ಸ್ಥಾನದಲ್ಲಿದ್ದರೆ, ವಾಣಿಜ್ಯ ಮತ್ತು ಕಲಾ ವಿಭಾಗಗಳು ನಂತರದ ಸ್ಥಾನ ಪಡೆದಿವೆ ಎಂದು ಉಪ ನಿರ್ದೇಶಕ ಪಳಿನಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ
ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಇಂದು ನಡೆದ ಉಪ ಚುನಾವಣೆಯು ಅತ್ಯಂತ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಒಟ್ಟಾರೆ ಶೇ. 68.55ರಷ್ಟು ಮತದಾನ ದಾಖಲಾಗಿದೆ.
ಬೆಳಿಗ್ಗೆಯಿಂದಲೇ ಮತಗಟ್ಟೆಗಳ ಮುಂದೆ ಮತದಾರರು ಉತ್ಸಾಹದಿಂದ ಸರದಿಯಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು. ಚುನಾವಣಾ ಆಯೋಗದ ಕಟ್ಟುನಿಟ್ಟಿನ ಕ್ರಮಗಳು ಹಾಗೂ ಪೊಲೀಸ್ ಬಂದೋಬಸ್ತ್ನಿಂದಾಗಿ ಯಾವುದೇ ಅಹಿತಕರ ಘಟನೆಗಳಿಲ್ಲದೆ ಮತದಾನ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು.
ಯುವಕರು ಹಾಗೂ ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಮತದಾನ ಮಾಡಿದ್ದು ಕಂಡುಬಂದಿತು. ಚುನಾವಣಾ ಸಿಬ್ಬಂದಿ ಹಾಗೂ ಭದ್ರತಾ ಪಡೆಯ ಸಹಕಾರದೊಂದಿಗೆ ಮತದಾನ ಪ್ರಕ್ರಿಯೆಯು ಸುಗಮವಾಗಿ ಜರುಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ
ಸುದ್ದಿದಿನಡೆಸ್ಕ್:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಹದಡಿ ಗ್ರಾಮದ ಮತಗಟ್ಟೆಯಲ್ಲಿ ತೃತೀಯ ಲಿಂಗತ್ವ ಮತದಾರರು ಮತಗಟ್ಟೆಗೆ ಆಗಮಿಸಿ ಸಂತೋಷದಿಂದ ಮತ ಚಲಾಯಿಸಿದರು.
ಸಮಾಜದ ಪ್ರತಿಯೊಬ್ಬರಿಗೂ ಸಮಾನ ಹಕ್ಕು ಎಂಬ ಸಂದೇಶವನ್ನು ಸಾರಿದ ಕ್ಷಣ! ತಮ್ಮ ಅಮೂಲ್ಯ ಮತದಾನದ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸಿದ ತೃತೀಯ ಲಿಂಗತ್ವ ಮತದಾರರಿಗೆ ಅಭಿನಂದನೆಗಳು ಎಂದು ಜಿಲ್ಲಾ ಪಂಚಾಯತ್ ಸಿಇಓ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ7 days agoಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ
-
ಅಂತರಂಗ4 days agoಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ
-
ದಿನದ ಸುದ್ದಿ7 days agoಕಾಂಗ್ರೆಸ್ ನಿಂದ ಮಾತ್ರ ಜನಪರ ಯೋಜನೆ ನೀಡಲು ಸಾಧ್ಯ: ಡಾ. ಪ್ರಭಾ ಮಲ್ಲಿಕಾರ್ಜುನ
-
ದಿನದ ಸುದ್ದಿ2 days agoಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ
-
ದಿನದ ಸುದ್ದಿ4 days agoಸುಸೂತ್ರ ಮತದಾನಕ್ಕೆ ಜಿಲ್ಲಾಡಳಿತದ ಸಕಲ ಸಿದ್ಧತೆ
-
ದಿನದ ಸುದ್ದಿ3 days agoಅಗ್ನಿವೀರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ3 days agoಪರಿಶಿಷ್ಟ ಪಂಗಡದ ಮಕ್ಕಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಆಹ್ವಾನ
-
ದಿನದ ಸುದ್ದಿ22 hours agoದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ

