Connect with us

ದಿನದ ಸುದ್ದಿ

ಇಸ್ರೇಲಿ ಬೇಹುಗಾರಿಕೆ ಸಾಧನವನ್ನು ಬಳಸಿದವರು ಯಾರು?

Published

on

ವಾಟ್ಸ್ ಆಪ್ ಸರಕಾರಕ್ಕೆ ನೀಡಿರುವ ತನ್ನ ಖಾತೆಗಳ ಹ್ಯಾಕ್ ಆಗಿರುವ ಹೆಸರುಗಳಲ್ಲಿ ಭೀಮ-ಕೋರೆಗಾಂವ್ ವಿಷಯದಲ್ಲಿ ಆಪಾದಿತರಾಗಿರುವವರು ಮತ್ತು ಅವರ ರಕ್ಷಣೆಗೆ ನಿಂತಿರುವ ವಕೀಲರಲ್ಲಿ ಹಲವರ ಹೆಸರುಗಳು ಇವೆ. ಆದ್ದರಿಂದ ಇವೆರಡರ ನಡುವಿನ ಸಂಬಂಧ ಸಾಕಷ್ಟು ಸ್ಪಷ್ಟವಾಗಿದೆ.. ಇವೆಲ್ಲವೂ ಸರಕಾರವೇ ತನ್ನನ್ನು ಟೀಕಿಸುವವರ ಖಾತೆಗಳನ್ನು ಸೀಳಲು ಇಸ್ರೇಲೀ ಬೇಹುಗಾರಿಕೆ ಸಾಧನವನ್ನು ಬಳಸುವಲ್ಲಿ ಶಾಮೀಲಾಗಿದೆ ಎಂಬ ಸಂದೇಹಗಳನ್ನು ದೃಢಪಡಿಸುತ್ತವೆ. ಈ ಇಡೀ ಕೊಳಕು ವ್ಯವಹಾರದ ಆಮೂಲಾಗ್ರ ತನಿಖೆ ನಡೆಯಬೇಕು.

  • ಪೀಪಲ್ಸ್ ಡೆಮಾಕ್ರಸಿ ಸಂಪಾದಕೀಯ, ನವಂಬರ್ 10

ವಿವಿಧ ಕಾರ್ಯಕರ್ತರು, ಪತ್ರಕರ್ತರು ಮತ್ತು ರಾಜಕಾರಣಿಗಳ ವಾಟ್ಸ್ ಆಪ್ ಖಾತೆಗಳನ್ನು ಇಸ್ರೇಲಿ ಕಂಪನಿ ಪೆಗಸಸ್ ನ ಬೇಹುಗಾರಿಕೆ ಸಾಧನವನ್ನು ಬಳಸಿ ಸೀಳಿರುವ(ಹ್ಯಾಕ್ ಮಾಡಿರುವ) ಸುದ್ದಿ ಕಳವಳಕಾರಿ ಮತ್ತು ಖಂಡನೀಯ. ಇದು ಹೇಗಾಯಿತು, ಖಾಸಗಿತ್ವದ ಉಲ್ಲಂಘನೆ ಹೇಗೆ ಸಂಭವಿಸಿತು, ಇದಕ್ಕೆ ಯಾರು ಹೊಣೆ ಎಂಬುದಕ್ಕೆ ವಿವರಣೆ ನೀಡಬೇಕಾಗಿದೆ. ಸರಕಾರ ಯಾವುದೇ ವಿವರಣೆಯನ್ನು ಕೊಟ್ಟಿಲ್ಲವಾದರೂ, ಇದರಲ್ಲಿ, ಈ ಬೇಹುಗಾರಿಕೆಯಲ್ಲಿ ಸರಕಾರದ ಶಾಮೀಲಿನತ್ತ ಬೊಟ್ಟು ಮಾಡುವ ಹೆಚ್ಚಿನ ತಥ್ಯಗಳು ಸಾರ್ವಜನಿಕಗೊಂಡಿವೆ.

ಸರಕಾರ, ಈ ಸುದ್ದಿ ಹೊರಬಂದಾಗ, ಹಲವಾರು ಭಾರತೀಯರ ಖಾಸಗಿತ್ವದ ಉಲ್ಲಂಘನೆಯ ಬಗ್ಗೆ ವಾಟ್ಸ್ ಆಪ್ ಯಾವುದೇ ಸರಕಾರೀ ಸಂಸ್ಥೆಗೆ ಯಾವುದೇ ಮಾಹಿತಿ ನೀಡಿರಲಿಲ್ಲ ಎಂದು ಹೇಳಿತು. ಆದರೆ ತಾವು ದಸ್ತಾವೇಜುಗಳೊಂದಿಗೆ ಈ ಮಾಹಿತಿಯನ್ನು ನೀಡಿ, ವಾಸ್ತವವಾಗಿ, ಖಾಸಗಿತ್ವದ ಉಲ್ಲಂಘನೆಯಾಗಬಹುದು ಎಂದು ಭಾರತ ಸರಕಾರವನ್ನು ಎಚ್ಚರಿಸಿದ್ದೆವು ಎಂದು ವಾಟ್ಸ್ ಆಪ್ ನವರು ಪ್ರತ್ಯುತ್ತರ ನೀಡಿದರು. ಮೇ ತಿಂಗಳಲ್ಲಿ ಮತ್ತು ನಂತರ ಮತ್ತೆ ಸಪ್ಟಂಬರಿನಲ್ಲಿ ಈ ಎಚ್ಚರಿಕೆಯನ್ನು ನೀಡಿರುವುದಾಗಿ ಅವರು ಹೇಳಿದ್ದಾರೆ. ಸರಕಾರದ ಹೇಳಿಕೆಗೆ ಉತ್ತರವಾಗಿ ವಾಟ್ಸ್ ಆಪ್ ಮೇ ತಿಂಗಳಲ್ಲಿ ಕಳಿಸಿದ ಟಿಪ್ಪಣಿ ಮತ್ತು ಸಪ್ಟಂಬರ್‌ನಲ್ಲಿ ಕಳಿಸಿದ ಪತ್ರವನ್ನು ಲಗತ್ತಿಸಿತ್ತು.

ನಂತರ, ಸರಕಾರ ಇದನ್ನು ದೃಢ ಪಡಿಸಿತು, 121 ಭಾರತೀಯರನ್ನು ಪೆಗಸಸ್ ಬೇಹುಗಾರಿಕೆ ಸಾಧನ ಗುರಿ ಮಾಡಿರುವ ಮಾಹಿತಿಯನ್ನು ಸಪ್ಟಂಬರ್ ನಲ್ಲಿ ಪಡೆದಿರುವುದಾಗಿ ಹೇಳಿತು, ಆದರೆ ಮಾಹಿತಿ ತಂತ್ರಜ್ಞಾನ ಮಂತ್ರಾಲಯದ ಪ್ರಕಾರ ಈ ಪತ್ರ ಬಹಳ ಅಸ್ಪಷ್ಟವಾಗಿತ್ತು.

ವಾಟ್ಸ್ ಆಪ್ ಸರಕಾರದೊಂದಿಗೆ ಹಂಚಿಕೊಂಡ ಮಾಹಿತಿಯ ವಿವರಗಳನ್ನು ನೀಡಿರುವುದು, ಈ ಬೇಹುಗಾರಿಕೆಗೆ ಗುರಿಯಾದ ಜನಗಳ ಹೆಸರುಗಳೆಲ್ಲ ಸರಕಾರ ಮತ್ತು ಅದರ ಧೋರಣೆಗಳ ಟೀಕಾಕಾರರಾಗಿರುವ ಸುಪರಿಚಿತ ಕಾರ್ಯಕರ್ತರು ಮತ್ತು ಪತ್ರಕರ್ತರದ್ದಾಗಿರುವುದು, ಈ ಬಗ್ಗೆ ತಮಗೆ ಗೊತ್ತಿರಲಿಲ್ಲ ಎಂದು ನಟಿಸುವ ಸರಕಾರದ ಅಸಮರ್ಪಕ ಮತ್ತು ಕುಂಟು ನೆವವೊಡ್ಡುವ ಪ್ರಯತ್ನಗಳು-ಇವೆಲ್ಲವೂ ಸರಕಾರವೇ ತನ್ನನ್ನು ಟೀಕಿಸುವವರ ಖಾತೆಗಳನ್ನು ಸೀಳಲು ಇಸ್ರೇಲೀ ಬೇಹುಗಾರಿಕೆ ಸಾಧನವನ್ನು ಬಳಸುವಲ್ಲಿ ಶಾಮೀಲಾಗಿದೆ ಎಂಬ ಸಂದೇಹಗಳನ್ನು ದೃಢಪಡಿಸುತ್ತವೆ. ವಾಟ್ಸ್ ಆಪ್ ಸರಕಾರಕ್ಕೆ ನೀಡಿರುವ ಹೆಸರುಗಳಲ್ಲಿ ಭೀಮ-ಕೋರೆಗಾಂವ್ ವಿಷಯದಲ್ಲಿ ಆಪಾದಿತರಾಗಿರುವವರು ಮತ್ತು ಅವರ ರಕ್ಷಣೆಗೆ ನಿಂತಿರುವ ವಕೀಲರಲ್ಲಿ ಹಲವರ ಹೆಸರುಗಳು ಇವೆ. ಆದ್ದರಿಂದ ಇವೆರಡರ ನಡುವಿನ ಸಂಬಂಧ ಸಾಕಷ್ಟು ಸ್ಪಷ್ಟವಾಗಿದೆ.

ತನ್ನ ಬೇಹುಗಾರಿಕೆ ತಂತ್ರಜ್ಞಾನವನ್ನು ಸರಕಾರಗಳಿಗೆ ಮತ್ತು ಸರಕಾರೀ ಏಜೆನ್ಸಿಗಳಿಗೆ ಮಾತ್ರ ನೀಡುವುದು ಎಂದು ಅದನ್ನು ಉತ್ಪಾದಿಸಿದ ಎನ್ ಎಸ್ ಒ ಕಂಪನಿ ಹೇಳಿಕೆ ನೀಡಿದೆ. ಈ ಬೇಹುಗಾರಿಕೆ ತಂತ್ರಜ್ಞಾನ ವಿಪರೀತ ವೆಚ್ಚದಾಯಕವಾಗಿದ್ದು ಯಾವುದೇ ಖಾಸಗಿ ಸಂಸ್ಥೆಗೆ ಇದರ ವೆಚ್ಚ ಭರಿಸುವುದು ಸಾಧ್ಯವಿಲ್ಲ ಎಂಬುದನ್ನೂ ಇಲ್ಲಿ ಗಮನಿಸಬಹುದು.

ಈ ಇಡೀ ಕೊಳಕು ವ್ಯವಹಾರದ ಆಮೂಲಾಗ್ರ ತನಿಖೆ ನಡೆಯಬೇಕು. ಸರಕಾರೀ ಏಜೆನ್ಸಿಗಳು ಯಾವುದಾದರೂ ಈ ಕಾನೂನುಬಾಹಿರ ಕೃತ್ಯಕ್ಕೆ ಕಾರಣರಾಗಿದ್ದರೆ, ಅದಕ್ಕೆ ಹೊಣೆಗಾರರಾದವರನ್ನು ಶಿಕ್ಷಿಸಬೇಕು. ಈ ಪ್ರಕರಣ ಸಾಮಾನ್ಯ ನಾಗರಿಕರ ಹಕ್ಕುಗಳು ಮತ್ತು ಖಾಸಗಿತ್ವವನ್ನು ಕಾಪಾಡಿಕೊಳುವ್ಳ ಒಂದು ಸಮಗ್ರ ಮಾಹಿತಿ ರಕ್ಷಣಾ ಕಾಯ್ದೆಯನ್ನು ತರಬೇಕಾದ ತುರ್ತನ್ನು ಎತ್ತಿತೋರಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.

ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.

ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ

Published

on

ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.

ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.

ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್‍ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.

ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.

ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.

ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್‍ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.

ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್‍ಗೆ ರೂ.10 ಪಡೆದ ಶಾಪಿಂಗ್ ಮಾಲ್‍ಗೆ ದಂಡ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್‍ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್‍ಗೆ ಪಡೆಯಲಾಯಿತು.

ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.

ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್‍ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್‍ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending