Connect with us

ದಿನದ ಸುದ್ದಿ

ಇವರೇ ನೋಡಿ ಟ್ವೀಟ್ಟರ್, ಪೇಸ್ಬುಕ್ ಮೀಮ್ಸ್ ಸ್ಟಾರ್ ಕ್ಸೇವಿಯರ್ ಉರ್ಫ್ ಓಂಪ್ರಕಾಶ್

Published

on

  • ~ ಸಿದ್ದು ಸತ್ಯಣ್ಣನವರ್

ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿದ್ದವರಿಗೆ ನೋಡಿದ ಕೂಡಲೇ ನಗು ಉಕ್ಕಿಸಿ, ಉಲ್ಲಸಿತಗೊಳಿಸುವ ಕ್ಸೇವಿಯರ್ ಮೀಮ್ಸ್ ಗಳ ಪರಿಚಯ ಇದ್ದೇ ಇರುತ್ತದೆ. ಕ್ಸೇವಿಯರ್ ಎಂದರೆ ಯಾರು? ಎಂದು ಹೆಸರೇಳಿದರೆ ಗೊತ್ತಾಗದಿರುವವರು ಅವರ ಫೋಟೊ ನೋಡಿದರೆ ಕೂಡಲೇ ಮುಖದ ಮೇಲೆ ನಗು ಮೂಡಿರುತ್ತದೆ.

ತುಂಟ ಕಾಮೆಂಟ್ ಹಾಗೂ ಹಾಸ್ಯದ ತಿರುಳುಗಳ ಪೋಸ್ಟ್ ಮೂಲಕ ಗಮನ ಸೆಳೆಯುವ‌ ಕ್ಸೇವಿಯರ್ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಹಾಸ್ಯಪ್ರಜ್ಞೆಯಿಂದ ಸಾಕಷ್ಟು ಪ್ರಸಿದ್ಧ. ಕ್ಸೇವಿಯರ್ ಹೆಸರಿನಿಂದ ಜನಪ್ರಿಯರಾದ ಇವರ ನಿಜವಾದ ಹೆಸರು ಓಂಪ್ರಕಾಶ್. ಅಸಂಖ್ಯ ಟ್ವೀಟರ್, ಫೇಸ್ಬುಕ್ ಪ್ರೋಫೈಲ್ ಗಳಲ್ಲಿ ಓಂಪ್ರಕಾಶ್ ಅವರ ಫೋಟೊ ಕ್ಸೇವಿಯರ್ ಎಂದೇ ಹಂಚಲ್ಪಟ್ಟಿದೆ.

ಮೀಮ್ಸ್ ಸ್ಟಾರ್ ಎಂದೇ ಪ್ರಖ್ಯಾತರಾಗಿರುವ ಇವರು ಮಧ್ಯವಯಸ್ಕ ಭಾರತೀಯರು ಹೆಚ್ಚಾಗಿ ಇಷ್ಟಪಡುವ ದಪ್ಪಮೀಸೆಯ ಫೋಟೊ ಹೊಂದಿರುವ ಪ್ರೋಫೈಲ್ ಮೂಲಕ ಟ್ವೀಟ್ಟರ್ ಮತ್ತು ಫೇಸ್ಬುಕ್ಕಿನ ಸಾಕಷ್ಟು ಟ್ರೋಲ್, ಮೀಮ್ ಪೇಜುಗಳಲ್ಲಿ ಕಾಣಸಿಗುತ್ತಾರೆ. ಕ್ಸೇವಿಯರ್ ಅಂಕಲ್, ಕ್ಸೇವಿಯರ್ ಮೀಮ್ಸ್, ಕ್ಸೇವಿಯರ್ ಪಾಂಡಾ, ಕ್ಸೇವಿಯರ್ ಮಿಮ್ ಬಾಯ್ ಹೀಗೆ ಇವರ ಹೆಸರಿನ ಮೂಲಕ ಸಾವಿರಾರು ಮೀಮ್ಸ್ ಮೇಕಿಂಗ್ ಪ್ರೋಫೈಲ್ ಗಳು ಲಕ್ಷಾಂತರ ಹಿಂಬಾಲಕರನ್ನು ಹೊಂದಿವೆ. ಮೀಮ್ಸ್ ಗಾಗಿಯೇ ವಿನ್ಯಾಸಗೊಳಿಸಲಾಗಿರುವ, ವಿದೇಶಗಳಲ್ಲೂ ಕೋಟ್ಯಂತರ ಜನರು ಹಿಂಬಾಲಿಸುವ 9gag ಎಂಬ ವೆಬ್ಸೈಟಿನಲ್ಲಿ ಇವರ ಸಾಕಷ್ಟು ಮೀಮ್ಸ್ ಗಳು ಜನಪ್ರಿಯವಾಗಿವೆ. ಫೇಸ್ಬುಕ್, ಟ್ವಿಟ್ಟರ್ ಬಳಸುವವರಿಗೆ ಕ್ಸೇವಿಯರ್ ಹಾಸ್ಯಪ್ರಜ್ಞೆ ಎಂಥದ್ದು ಎಂಬುದನ್ನ ಕೇಳಿದರೆ ನಗುವೇ ಅವರ ಉತ್ತರವಾಗಿರುತ್ತದೆ ಎಂಬುದಕ್ಕೆ ಸಹ ಚೆಂದದ ಮೀಮ್ ಒಂದಿದೆ.

ಕಾನ್ಪುರ ಐಐಟಿ ಸಿಬ್ಬಂದಿಯಾದ ಓಂಪ್ರಕಾಶ್ ಅವರು ಅಲ್ಲಿನ ಭೌತಶಾಸ್ತ್ರ ವಿಭಾಗದ ತಾಂತ್ರಿಕ ಮೇಲ್ವಿಚಾರಕ ಹುದ್ದೆಯಲ್ಲಿದ್ದಾರೆ. ಕ್ಸೇವಿಯರ್ ಎಂದು ಅವರು ಪ್ರಸಿದ್ಧರಾಗಲು ಕಾರಣ ಅವರ ಅಪರಿಮಿತ ಹಾಸ್ಯಪ್ರಜ್ಞೆಯ ‘ಪಕಾಲು ಪಾಪಿಟೋ’ ಎಂಬ ಕಾಲ್ಪನಿಕ ಗುಮಾಸ್ತನ ಪಾತ್ರವನ್ನು ಸೃಷ್ಟಿಸಿದ್ದಕ್ಕಾಗಿ. ಆ ಗುಮಾಸ್ತನ ಮೊದಲ ಟ್ವೀಟ್ ಟ್ವೀಟ್ಟರಿನಲ್ಲಿ ಹೆಚ್ಚುಕಡಿಮೆ 18 ಸಾವಿರ ರೀಟ್ವೀಟ್ ಆಗಿತ್ತು.

ಟ್ವೀಟ್ಟರ್ ನಿಯಮಗಳ ತಾಂತ್ರಿಕ ಕಾರಣಗಳಿಂದ ಸುಮಾರು ಲಕ್ಷ ಹಿಂಬಾಲಕರಿದ್ದ ಈ ಅಕೌಂಟ್ ಸ್ಥಗಿತಗೊಂಡಿತು. ನಂತರ ಕಾಮಿಕ್ ಮೀಮ್ ಗಳಿಂದ ಆರಂಭದಲ್ಲಿ ಪ್ರಸಿದ್ಧರಾಗಿದ್ದ ಓಂಪ್ರಕಾಶ್ ಅವರು ಕೊನೆಗೆ ಕ್ಸೇವಿಯರ್ ಹೆಸರಿನ ಮೂಲಕ ಮೀಮ್ ಪ್ರಿಯರಿಗೆ ಮನೆಮಾತಾದರು. ಓಂಪ್ರಕಾಶ್ ಅವರು ಫೇಸ್ಬುಕ್ ಮತ್ತು ಟ್ವಿಟ್ಟರ್ ನಲ್ಲಿ ಕ್ರಮವಾಗಿ 1.4 ಮಿಲಿಯನ್ ಹಾಗೂ 3 ಲಕ್ಷ ಹಿಂಬಾಲಕರನ್ನು ಹೊಂದಿದ್ದಾರೆ. ‘ಪಕಾಲು ಪಾಪಿಟೋ’ ಅಕೌಂಟ್ ತಾಂತ್ರಿಕವಾಗಿ ಸ್ಥಗಿತಗೊಂಡ ಕಾರಣ ಕ್ಸೇವಿಯರ್ ಎಂಬ ಹೆಸರಿನ ತಮಾಷೆಯ ಮೀಮ್ಸ್ ಮೂಲಕ ಇನ್ಸ್ಟಾಗ್ರಾಂ, ಫೇಸ್ಬುಕ್, ಟ್ವಿಟ್ಟರ್ ಎಲ್ಲ ಕಡೆಗಳಲ್ಲಿ ಕಾಣಿಸುತ್ತಾರೆ. ( ಸಿದ್ದು ಸತ್ಯಣ್ಣನವರ್ ಅವರ ಫೇಸ್ ಬುಕ್ ಪೇಜ್ ನಿಂದ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

Published

on

ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.

ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.

ತಿರಸ್ಕೃತಗೊಂಡ ಅರ್ಜಿಗಳ ಅಭ್ಯರ್ಥಿಗಳ ಆಕ್ಷೇಪಣೆಗಳಿದ್ದಲ್ಲಿ, ಮಾರ್ಚ್ 13 ರೊಳಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಪೂರಕ ದಾಖಲಾತಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಗಂಗಾರ‍್ವಾಮಿ.ಜಿ.ಎಂ.ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ

Published

on

ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.

ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)

AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.

ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್‌ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.

ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.

ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್‌ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್‌ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.

ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್‌ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.

ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending