ದಿನದ ಸುದ್ದಿ
ಯಕ್ಷಗಾನ ತರಬೇತಿ ಶಿಬಿರ ಮತ್ತು ಪ್ರದರ್ಶನ ನೀಡಲು ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ : 2019-20ನೇ ಸಾಲಿನಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿಯು ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ ಜಾತಿಯ ಪ್ರತಿಭಾವಂತ ಶಿಬಿರಾರ್ಥಿಗಳಿಗೆ ತರಬೇತಿ ಶಿಬಿರ ಮತ್ತು ಪ್ರದರ್ಶನ ನೀಡಲು ಪರಿಶಿಷ್ಟ ಜಾತಿಗೆ ಸೇರಿದ ಪ್ರತಿಭಾವಂತ ಹಿರಿಯ ಪ್ರತಿಷ್ಠಿತ ಯಕ್ಷಗಾನ ಗುರುಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅಕಾಡೆಮಿಯು ಈ ಯೋಜನೆಯಡಿ ಪ.ಜಾತಿಯ ಶಿಬಿರಾರ್ಥಿಗಳಿಗೆ 5 ತಿಂಗಳ ಯಕ್ಷಗಾನ ತರಬೇತಿ ಶಿಬಿರಗಳನ್ನು ನಡೆಸಲು ಹಾಗೂ ಪರಿಕರಗಳೊಂದಿಗೆ ಪ್ರದರ್ಶನ ನೀಡಲು ಉದ್ದೇಶಿಸಿದ್ದು, ಯಕ್ಷಗಾನ ಕಲಾಪ್ರಕಾರಗಳಲ್ಲಿ (ತೆಂಕುತಿಟ್ಟು/ಬಡಗುತಿಟ್ಟು ಯಕ್ಷಗಾನ, ಬಡಾಬಡಗುತಿಟ್ಟು ಯಕ್ಷಗಾನ, ಮೂಡಲಪಾಯ ಯಕ್ಷಗಾನ, ಕೇಳಿಕೆ, ಘಟ್ಟದಕೋರೆ ಯಕ್ಷಗಾನ, ಗೊಂಬೆಯಾಟ ತಾಳಮದ್ದಲೆ) ತರಬೇತಿ ನೀಡಬಯಸುವ ಪರಿಶಿಷ್ಟ ಜಾತಿಗೆ ಸೇರಿದ ಪ್ರತಿಭಾವಂತ ಹಿರಿಯ ಪ್ರತಿಷ್ಠಿತ ಯಕ್ಷಗಾನ ಗುರುಗಳು ಅರ್ಜಿ ಸಲ್ಲಿಸಬಹುದು.
ಅಕಾಡೆಮಿಯಲ್ಲಿ ಸ್ವೀಕೃತವಾದ ಅರ್ಜಿಗಳನ್ನು ಅಕಾಡೆಮಿಯ ಉಪಸಮಿತಿ ಸಭೆಯಲ್ಲಿ ಗುರುಗಳ ಸಂದರ್ಶನ ಮಾಡುವುದರ ಮೂಲಕ ಆಯ್ಕೆ ಮಾಡಲಾಗುವುದು. ತರಬೇತಿ ನೀಡಬಯಸುವ ಯಕ್ಷಗಾನ ಕಲಾಸಂಸ್ಥೆಯವರು/ಪರಿಶಿಷ್ಟ ಜಾತಿಯ ಗುರುಗಳು ಅಥವಾ ಹೆಸರಾಂತ ಗುರುಗಳು ಶಿಬಿರಾರ್ಥಿಗಳ ವಿವರಗಳೊಂದಿಗೆ ಅರ್ಜಿ ನಮೂನೆಯನ್ನು ಆಯಾ ಜಿಲ್ಲೆಯ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಿಂದ ಪಡೆದು ಭರ್ತಿ ಮಾಡಿ ರಿಜಿಸ್ಟ್ರಾರ್, ಕರ್ನಾಟಕ ಯಕ್ಷಗಾನ ಅಕಾಡೆಮಿ, ಕನ್ನಡ ಭವನ, 2ನೆ ಮಹಡಿ, ಚಾಲುಕ್ಯ ವಿಭಾಗ, ಜೆ.ಸಿ.ರಸ್ತೆ, ಬೆಂಗಳೂರು-560002 ಅಕಾಡೆಮಿಯ ಕಚೇರಿಗೆ ಕಳುಹಿಸಬಹುದು.
ಅರ್ಜಿ ಸಲ್ಲಿಸಲು 2020 ರ ಜನವರಿ 11 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 080-22113146 ನ್ನು ಸಂಪರ್ಕಿಸಬಹುದೆಂದು ಕರ್ನಾಟಕ ಯಕ್ಷಗಾನ ಅಕಾಡೆಮಿಯ ರಿಜಿಸ್ಟ್ರಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243