Connect with us

ಲೈಫ್ ಸ್ಟೈಲ್

ಯೋಗದ ಅನ್ವೇಷಣೆ | ಮಿಸ್ ಮಾಡ್ದೆ ಈ ಲೇಖನ ಓದಿ..!

Published

on

  • ನಿತ್ಯತೃಪ್ತ

ಪುರಾತನರು, ನಾನು ಯರು? ಏಕೆ ಹುಟ್ಟಿದ್ದೇನೆ? ಯಾಕೆ ಸಾಯುತ್ತೇನೆ? ಯಾಕೆ ಬದುಕಿದ್ದೇನೆ? ನನ್ನ ಮುಂದಿರುವ ವೈವಿಧ್ಯಮಯ ಸೃಷ್ಟಿಗೆ ಕರ್ತ ಯಾರು? ಇದರ ಉದ್ದೇಶ ಏನು? ಈ ಪ್ರಶ್ನೆಗಳನ್ನ ಮುಂದಿಟ್ಟುಕೊಂಡು ಮಾಡಿದ 6ಸಾವಿರ ವರ್ಷಗಳ ಪ್ರಯೋಗವೇ ನಾಲ್ಕು ವೇದಗಳು. ಋಗ್ವೇದ, ಯಜುರ್ವೇದ, ಸಾಮವೇದ, ಅಥರ್ವಣವೇದ.

ಋಗ್ವೇದದ ಪ್ರಾಯೋಗಿಕ ಅಂತ್ಯ -ಪ್ರಙ್ಞನಂ ಬ್ರಹ್ಮ
ಯಜುರ್ವೇದದ ಪ್ರಾಯೋಗಿಕ ಅಂತ್ಯ – ಅಹಂ ಬ್ರಹ್ಮಾಸ್ಮಿ
ಸಾಮವೇದದ ಪ್ರಾಯೋಗಿಕ ಅಂತ್ಯ- ತತ್ವ ಮಸಿ
ಅಥರ್ವಣ ವೇದದ ಪ್ರಾಯೋಗಿಕ ಅಂತ್ಯ- ಅಯಂ ಆತ್ಮ ಬ್ರಹ್ಮ

ವೇದಾಂಗಗಳ ಅರಣ್ಯಕಗಳು ಸಂಹಿತೆಗಳು ಬ್ರಾಹ್ಮಣಕಗಳು ಕೊನೆಯದಾಗಿ ಉಪನಿಷತ್ತುಗಳಲ್ಲಿ ಹೇರಳವಾಗಿ ಯೋಗದ ಬಗೆ ವಿವರಿಸಲದಪಟ್ಟಿದೆ.

ನಾಲ್ಕು ವೇದಗಳಿಗೆ ಸೇರಿದ 108 ಉಪನಿಷತ್ತುಗಳಲ್ಲಿ ಕೆಳಕಂಡಂತೆ ಇವೆ.

  1. ಮುಖ್ಯವಾದ ಉಪನಿಷತ್ತುಗಳು (ಬೃಹತ್)-10
  2. ವೇದಾಂತಕ್ಕೆ ಸಂಬಂಧಪಟ್ಟ ಉಪಿಷತ್ತುಗಳು- 25
  3. ಶಾಕ್ತರಿಗೆ ಸಂಬಂಧಪಟ್ಟ ಉಪನಿಷತ್ತುಗಳು-08
  4. ವೈಷ್ಣವರಿಗೆ ಸಂಬಂಧಪಟ್ಟ ಉಪನಿಷತ್ತುಗಳು-14
  5. ಶೈವರಿಗೆ ಸಂಬಂಧಪಟ್ಟ ಉಪನಿಷತ್ತುಗಳು- 14
  6. ಸನ್ಯಾಸಕ್ಕೆ ಸಂಬಂಧಪಟ್ಟ ಉಪನಿಷತ್ತುಗಳು- 17
  7. ಯೋಗಕ್ಕೆ ಸಂಬಂಧಪಟ್ಟ ಉಪನಿಷತ್ತುಗಳು-20

ಈ ಮೇಲಿನ 108 ಉಪನಿಷತ್ತುಗಳು ಅರ್ಥವಾಗದಿದ್ದಕ್ಕೆ 6 ಶಾಸ್ತ್ರಗಳನ್ನು ಬರೆದರು. ಅವು ಸಾಂಖ್ಯ ಶಾಸ್ತ್ರ, ವೈಷೇಶಿಕ ಶಾಸ್ತ್ರ, ಯೋಗ ಶಾಸ್ತ್ರ, ನ್ಯಾಯ ಶಾಸ್ತ್ರ, ಉತ್ತರ ಮೀಮಾಂಸೆ ಮತ್ತು ಪೂರ್ವ ಮೀಮಾಂಸೆ.
ಇವುಗಳೂ ಕೂಡ ಅರ್ಥವಾಗದಿದ್ದಕ್ಕೆ 18 ಪುರಾಣಗಳನ್ನು ಬರೆದರು. ಅವು ಭಾಗವತ ಪುರಾಣ, ವಿಷ್ಣುಪುರಾಣ, ಮತ್ಸಯ ಪುರಾಣ, ಶಿವ ಪುರಾಣ, ಗರುಡ ಪುರಾಣ, ಬ್ರಹ್ಮ ಪುರಾಣ, ನಾರದೇಯ ಪುರಾಣ, ವಾಮನ ಪುರಾಣ, ಭವಿಷ್ಯ ಪುರಾಣ, ಬ್ರಹ್ಮ ಪುರಾಣ, ಲಿಂಗ ಪುರಾಣ, ವಿರಹ ಪುರಾಣ, ಅಗ್ನಿ ಪುರಾಣ, ಮಾರಖಂಡಯ್ಯ ಪುರಾಣ, ಕೂರ್ಮ ಪುರಾಣ, ಪದ್ಮ ಪುರಾಣ, ಸ್ಕಂದ ಪುರಾಣ.

ಇವುಗಳ ಜೊತೆಗೆ ಎರಡು ಮಹಾ ಕಾವ್ಯಗಳನ್ನು ವ್ಯಾಸರು ಮತ್ತು ವಾಲ್ಮೀಕಿ ಬರೆದಿದ್ದಾರೆ. ಈ ಮಹಾನ್ ಕೃತಿಗಳೇ ರಾಮಾಯಣ ಮತ್ತು ಮಹಾಭಾರತ. ಇವುಗಳಲ್ಲಿ ರಾಜಯೋಗ, ಹಠಯೋಗ, ಙ್ನನಯೋ, ಭಕ್ತಿಯೋಗ, ಕರ್ಮಯೋಗ, ಕುಂಡಲಿನಿಯೋಗ, ಮಂತ್ರಯೋಗ, ಲಯ ಯೋಗ ಈ ರೀತಿ ಯೋಗದ ಬಗ್ಗೆ ಬರೆದ ಸವಿಸ್ತಾರವಾದ ಕೃತಿಗಳು.

ರಾಮಾಯಣದಲ್ಲಿ ವಾಲ್ಮೀಕಿಯು 32ಸಾವಿರ ಶ್ಲೋಕಗಳು ಬೃಹತ್ ಯೋಗ ವಾಷಿಷ್ಠ ಕೃತಿಯನ್ನು ರಚಿಸಿದ್ದಾರೆ. ಮಹ ಬಾರತದಲ್ಲಿ ವ್ಯಾರು 700 ಶ್ಲೋಕಗಳು ಭಗವದ್ಗೀತೆಯನ್ನು ಬರೆದು, 18 ರೀತಿ ಯೋಗಗಳನ್ನು ವಿವರಿಸಿದ್ದಾರೆ. ಕಾಲಗತಿಯಲ್ಲಿ ಇವುಗಳೆಲ್ಲ ಮಠ ಮತ್ತು ಗುಹೆಗಳಲ್ಲಿ ಸೇರಿಕೊಂಡು ಸಾಮಾನ್ಯ ಜನರಿಗರ ದೊರೆಯದೆ ಬರಿ ಕಂದಾಚರಗಳ ವೇದಾಂತವಾಗಿ ಮನೆ ಮನೆ ಹೊಕ್ಕಿವೆ.

ಪಾಶ್ಚಿಮಾತ್ಯ ವಿದ್ವಾಂಸರಾದ ಮ್ಯಾಕ್ಸ್ಮುಲ್ಲರ್ ಭಾರತಕ್ಕೆ ಬಂದು ಸಂಸ್ಕøತ ಕಲಿತು 4 ವೇದಗಳನ್ನು ಇಂಗ್ಲಿಷ್ ಭಾಷೆಗೆ ಭಾಷಾಂತರಿಸಿದ್ದಾರೆ. ಮ್ಯಾಕ್ಸ್‍ಮುಲ್ಲರ್ ವಿಶ್ವವಿದ್ಯಾಲಯದಲ್ಲಿ ವೇದಗಳ ಅಧ್ಯಯನ ನಡೆಯುತ್ತಿದೆ. ಇದೇ ತರಹ Sarpent power ಎಂಬ ತತ್ವ ಙ್ಞನಿ ಭಾರತಕ್ಕೆ ಬಂದು ಇಲ್ಲಿ ನೆಲೆಸಿ ಸಂಸ್ಕøತ ಕಲಿತು ಯೋಗದ 20 ಉಪನಿಷತ್ತುಗಳನ್ನು ಹಗೂ ಯಂತ್ರ, ತಂತ್ರ, ಮಂತ್ರ ಸ್ವರ ಮುಂತದ ಶಾಸ್ತ್ರಗಳನ್ನು ಇಂಗ್ಲಿಷ್‍ಗೆ ಭಾಷಾಂತರಿಸಿ  Sarpent power  ಎಂಬಕೃತಿ ಬರೆದರು. ಈ ಕೃತಿಯ ಮೂಲಕ ಯೋಗವನ್ನು ಪಾಶ್ಚಿಮಾತ್ಯರಿಗೆ ಪರಿಚಯಿಸಿದ ಮಹತ್ಮ.

ಹಾಗೆಯೇ ಸ್ವಾಮಿ ವಿವೇಕಾನಂದರು, ಯೋಗನಂದರು, ಋಷಿಕೇಷದ ಸ್ವಾಮಿ ಶಿವಾನಂದರ ಶಿಷ್ಯರಾದ ಸ್ವಾಮಿ ಸತ್ಯಾನಂದರು ಪ್ರಪಂಚದಾದ್ಯಂತ ಉಪದೇಶಿಸಿದ್ದಾರೆ. ಪ್ರಪಂಚದಾದ್ಯಂತ ಯೋಗದ ಬಗೆಗಿನ ಸಾಹಿತ್ಯ ಹೇರಳವಾಗಿ ದೊರೆಯುವಂತೆ ಮಾಡಿದ್ದಾರೆ. ಬುದ್ದ ಹುಟ್ಟಿದ್ದು, ಬೌದ್ಧಧರ್ಮ ಹುಟ್ಟಿದ್ದು ಭಾರತವಾದರೆ ಬೆಳೆದದ್ದು ಮಾತ್ರ ಪರರಾಷ್ಟ್ರಗಳಲ್ಲಿ, ಯೋಗವೂ ಸಹ ಹಾಗೆಯೇ.

ಯೋಗ ಒಂದು ಅಮೂಲ್ಯವಾದ ಸಂಸ್ಕøತಿ. ಮನುಷ್ಯನಿಂದ ಹುಟ್ಟಿ ಮನುಷ್ಯನಿಗೋಸ್ಕರ ಮನುಷ್ಯ ಇರುವ ತನಕ ಇರುವುದೋ ಅದೇ ಸಂಸ್ಕøತಿ. ಯೋಗವು ಒಂದು ವಿಙ್ಞನವೂ ಹೌದು, ಅಂದರೆ ಐಕ್ಯತೆ ಅಥವಾ ವೃತ್ತಿ ನಿರೋಧವೇ ಯೋಗ. ಮಾತು ಮತ್ತು ಆಲೋಚನೆ ಮಾಡುವ ಕ್ರಿಯೆಯನ್ನು ಸಮನ್ವಯಗೊಳಿಸುವುದೇ ಯೋಗ. ಅಲ್ಲದೆ ಜನ್ಮ ಜನ್ಮಾಂತರ ಗಳಿಂದ ಬಂದ ಅಭ್ಯಸಗಳ ವವೃತ್ತಿಗಳನ್ನು ನಿಯಂತ್ರಿಸಿ, ನಿರೋಧಿಸಿ ಜೀವನದ ಉತ್ತುಂಗ ಕಲೆಯನ್ನು ಬೋಧಿಸುತ್ತದೆ. ಆತ್ಮ ಸಾಕ್ಷಾತ್ಕಾರಕ್ಕೆ ಇರುವ ಅಡಚಣೆತಳನ್ನು ತೆಗೆದು ಹಾಕುತ್ತದೆ. ಇದು ಪಶುತ್ವದಿಂದ ಪರಮಾತ್ಮನ ಕಡೆಗೆ ಕೊಂಡೊಯ್ಯುತ್ತದೆ.

ಯೋಗದ ಚರ್ಚೆ ಮಾಡುವುದರಿಂದ ವೇಷ ಭೂಷಣಗಳಿಂದ ಶಾಸ್ತ್ರ ಅಧ್ಯಯನದಿಂದ ದೊರೆಯುವುದಿಲ್ಲ. ಯೋಗಿ ಯಾಗಬೇಕಾದರೆ ಸಾಧನೆ ಮಾಡಬೇಕು. ಸಾಧನೆಯಿಂದ ಮಾತ್ರ ಸಿದ್ಧಿ ದೊರೆಯುತ್ತದೆ. ಯೋಗವನ್ನು ಹುಡುಗರು, ಮುದುಕರು, ತೀರಾ ಮುದುಕರು, ರೋಗಿಗಳು, ನಿತ್ರಾಣ ಹೊಂದಿರುವವರು ಅಭ್ಯಾಸ ಮಾಡಿ ಸಿದ್ಧಿ ಪಡೆಯಬಹುದು(ಹ.ಠ ಪ್ರದೀಪಿಕೆ 64.65.66 ಪ್ರಥಮ ಉಪದೇಶ).

ತಪಸ್ಸು ಸ್ಥಳೀಯ ಅದ್ಯಯನ, ಈಶ್ವರಿ ಪ್ರಣಿಧ್ಯಾನ ಇವೆ ಯೋಗ ಕ್ರಿಯೆಗಳು. ಇದೇ ಅಷ್ಟಾಂಗ ಯೋಗ, ಯಮ, ನಿಯಮ, ಆಸನ, ಪ್ರಾಣಯಾಮ ಪ್ರತ್ಯಾಹಾರ ಇವು ಹ.ಠ ಕ್ರಿಯೆಗಳು ಧರಣ ಧ್ಯಾನ ಸಮಾಧಿ ಇವು ರಾಜ ಯೋಗ(king of yoga).

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

Published

on

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.

4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.

5. ಕತಾರ್‌ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.

6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ರಾಜ್ಯದಲ್ಲಿ ಜಾತಿ ಗಣತಿ ಮರು ಸಮೀಕ್ಷೆಗೆ ಸಂಪುಟ ಸಭೆಯಲ್ಲಿ ಒಪ್ಪಿಗೆ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನಡೆಸ್ಕ್:ಜಾತಿಗಣತಿ ಮರು ಸಮೀಕ್ಷೆಗೆ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ದೊರೆತಿದೆ.

ಸಂಪುಟ ಸಭೆಯ ಬಳಿಕ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಜಾತಿಗಣತಿ ಮರು ಸಮೀಕ್ಷೆಗೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ದೊರೆತಿದೆ ಎಂದು ಹೇಳಿದ್ದಾರೆ.

54 ಮಾನದಂಡಗಳನ್ನು ಇಟ್ಟುಕೊಂಡು ಹೋಗಿ ಮನೆ ಮನೆ ಸಮೀಕ್ಷೆ ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ. ಹೈಕಮಾಂಡ್ ನೀಡಿದ ಸೂಚನೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾತಿ ಗಣತಿ ವಿಚಾರದಲ್ಲಿ ಸರಿಯಾದ ಸ್ಪಷ್ಟತೆ ನೀಡಬೇಕು ಎಂದು ಉಡುಪಿ – ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಆಗ್ರಹಿಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು ಸಿದ್ದರಾಮಯ್ಯನವರೇ ಜಾತಿ ಗಣತಿಗೆ 200 ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದು161 ಕೋಟಿ ರೂಪಾಯಿ ಖರ್ಚಾಗಿದೆ ಎಂದು ಹೇಳಿ, ಇದೀಗ ಜಾತಿ ಜನಗಣತಿಯನ್ನು ವಾಪಸ್ ಪಡೆಯುವುದಾಗಿ ಹೇಳುತ್ತಿರುವುದು ಹಾಸ್ಯಸ್ಪದವಾಗಿದೆ ಎಂದು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

RCB ಸಂಭ್ರಮಾಚರಣೆ : 18 ರೂಪಾಯಿಗೆ ಬಿರಿಯಾನಿ ಮಾರಾಟ

Published

on

ಸುದ್ದಿದಿನ,ಬೆಂಗಳೂರು:ಆರ್‌ಸಿಬಿ ವಿಜಯೋತ್ಸವದಲ್ಲಿ ಬೆಂಗಳೂರು ಮಿಂದೆದ್ದಿದೆ. ಜನ ವಿಭಿನ್ನ ರೀತಿಯಲ್ಲಿ ತಮ್ಮ ಸಂಭ್ರಮಾಚರಣೆ ವ್ಯಕ್ತಪಡಿಸಿದ್ದಾರೆ. ಹೋಟೆಲ್‌ ರೆಸ್ಟೋರೆಂಟ್‌ಗಳೂ ಕೂಡ ಇದನ್ನೇ ಬಂಡವಾಳ ಮಾಡಿಕೊಂಡು ಭರ್ಜರಿ ವ್ಯಾಪಾರ ಮಾಡಿವೆ.

ಬೆಂಗಳೂರಿನ #NativeCooks ಫುಡ್‌ ಡೆಲಿವರಿ ಸಂಸ್ಥೆಯು ಕೇವಲ 18 ರೂಪಾಯಿಗೆ ಬಿರಿಯಾನಿ ಮಾರಾಟ ಮಾಡುವ ಮೂಲಕ ಆರ್‌ಸಿಬಿ ಅಭಿಮಾನಿಗಳ ಮನ ಗೆದ್ದಿದೆ.

ಹೌದು, ಹೆಬ್ಬಾಳ, ಆರ್‌ಟಿ ನಗರ, ಸದಾಶಿವನಗರದಲ್ಲಿ ಡೆಲಿವರಿ ಶುಲ್ಕವಿಲ್ಲದೆ ಅತಿ ಕಡಿಮೆ ದರದಲ್ಲಿ ಫುಡ್‌ ಡೆಲಿವರಿ ಮಾಡುತ್ತಿರುವ #NativeCooks ಸಂಸ್ಥೆಯು ಆರ್‌ಸಿಬಿ ಅಭಿಮಾನಿಗಳನ್ನು ಖುಷಿಪಡಿಸಲು ಈ ರೀತಿ ಹೊಸ ಆಫರ್‌ ಬಿಟ್ಟಿತ್ತು. ಮೂಲಗಳ ಪ್ರಕಾರ ಸುಮಾರು ಒಂದು ಸಾವಿರ ಬಿರಿಯಾನಿ ಲಂಚ್‌ಬಾಕ್ಸ್‌ಗಳನ್ನು ತಲಾ 18ರೂಪಾಯಿಯಂತೆ ಮಾರಾಟ ಮಾಡಿದೆ.

ಮನೆಯಲ್ಲೇ ಮಾಡಿದ ಆಹಾರ ಪದಾರ್ಥಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿರುವ ನೇಟೀವ್‌ ಕುಕ್ಸ್‌ ಸಂಸ್ಥೆಯು ಹೆಣ್ಣುಮಕ್ಕಳೇ ಸೇರಿ ನಡೆಸುತ್ತಿರುವ ಪುಟ್ಟ ಕೇಟರಿಂಗ್‌ ಆಗಿದೆ. ವಾರದಲ್ಲಿ 6 ದಿನಗಳ ಕಾಲ ಕಾರ್ಯ ನಿರ್ವಹಿಸುವ ಈ ಕೇಟರಿಂಗ್.‌ ವೆಜ್‌ ಊಟವನ್ನು ಕೇವಲ 80 ರೂಪಾಯಿಗೆ ಹಾಗೂ ನಾನ್‌ವೆಜ್‌ ಊಟವನ್ನು 135 ರೂಪಾಯಿಗೆ ಹಾಗೂ ಎಕ್‌ ಮೀಲ್‌ಅನ್ನು ಕೇವಲ 110 ರೂಪಾಯಿಗೆ ಮಾರಾಟ ಮಾಡುತ್ತಿದೆ.

ಸದ್ಯಕ್ಕೆ ಹೆಬ್ಬಾಳ, ಆರ್‌ಟಿನಗರ ಹಾಗೂ ಸದಾಶಿವನಗರಕ್ಕೆ ಡೆಲಿವರಿ ಶುಲ್ಕ ಇಲ್ಲದೇ ಆಹಾರ ವಿತರಿಸುತ್ತಿದ್ದು, ಹೆಚ್ಚಿನ ಮಾಹಿತಿಗೆ 80 4853 6206 ಸಂಪರ್ಕಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ12 hours ago

ಮಾಜಿ ಸೈನಿಕರ ಮಕ್ಕಳಿಗೆ ವಿವಿಧ ಶಿಷ್ಯವೇತನ ಮತ್ತು ನಗದು ಪ್ರಶಸ್ತಿ : ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ಸಾರ್ವತ್ರಿಕ ಪರೀಕ್ಷೆಗಳಲ್ಲಿ ಗರಿಷ್ಠ ಅಂಕ ಪಡೆದ ಕರ್ನಾಟಕದ ಮೂಲ ನಿವಾಸಿ ಮಾಜಿ ಸೈನಿಕರ ಮಕ್ಕಳಿಗಾಗಿ ಜನರಲ್ ಕೆ.ಎಸ್.ತಿಮ್ಮಯ್ಯ ನಗದು...

ಅಂಕಣ3 days ago

ಆತ್ಮಕತೆ | ಕೃಷ್ಣಪ್ಪನವರ ನಿಧನ : (09.06.1938 – 30.04.1997)

~ ರುದ್ರಪ್ಪ ಹನಗವಾಡಿ ಭದ್ರಾವತಿಯಿಂದ ಬೆಂಗಳೂರಿಗೆ ಬಂದ ಕೃಷ್ಣಪ್ಪನವರು ಬಹುಜನ ಸಮಾಜ ಪಕ್ಷದ ಕೆಲಸ ನಿರ್ವಹಿಸುತ್ತಿದ್ದರೂ ಅವರ ರಕ್ತಮಾಂಸ ಬಸಿದು ಕಟ್ಟಿದ ಮೂಲಸಂಘಟನೆ ಡಿಎಸ್‌ಎಸ್ ಹಲವು ಗುಂಪುಗಳಾಗಿ...

ದಿನದ ಸುದ್ದಿ4 days ago

ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ, ಗಿಗ್, ಸಿನಿ ಹಾಗೂ ಮನೆಗೆಲಸ ಕಾರ್ಮಿಕರ ಕಲ್ಯಾಣಕ್ಕಾಗಿ ಅಧಿನಿಯಮ ಜಾರಿಗೆ ಕ್ರಮ : ಸಚಿವ ಸಂತೋಷ್ ಲಾಡ್

ಸುದ್ದಿದಿನ,ದಾವಣಗೆರೆ:ದೇಶದಲ್ಲೇ ಪ್ರಥಮ ಬಾರಿಗೆ ಕರ್ನಾಟಕ ರಾಜ್ಯ ಸರ್ಕಾರ ಇ-ಕಾಮರ್ಸ್ ಫ್ಲಾಟ್ ಫಾರ್ಮ್ ಆಧಾರಿತ ಗಿಗ್ ಕಾರ್ಮಿಕರು, ಸಿನಿಮಾ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ದುಡಿಯುತ್ತಿರುವ ಕಲಾ ಕಾರ್ಮಿಕರು ಹಾಗೂ...

ದಿನದ ಸುದ್ದಿ4 days ago

ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ 9360 ಪ್ರಕರಣ ಇತ್ಯರ್ಥ ; ವಿಚ್ಚೇದನ ಕೋರಿ ಸಲ್ಲಿಸಿದ್ದ 23 ಜೋಡಿ ವೈವಾಹಿಕ ಜೀವನ ಸುಖಾಂತ್ಯ

ಸುದ್ದಿದಿನ,ದಾವಣಗೆರೆ:ಜಿಲ್ಲೆಯಾದ್ಯಂತ ಎಲ್ಲಾ ನ್ಯಾಯಾಲಯಗಳಲ್ಲಿ ಜುಲೈ 12 ರಂದು ರಾಷ್ಟ್ರೀಯ ಲೋಕ್ ಅದಾಲತ್‌ನ್ನು ಹಮ್ಮಿಕೊಳ್ಳಲಾಗಿತ್ತು. ವಿವಿಧ ಪ್ರಕರಣಗಳ 18024 ಕೈಗೆತ್ತಿಕೊಂಡಿದ್ದು, ಅದರಲ್ಲಿ ಒಟ್ಟು 9,360 ಜಾರಿಯಲ್ಲಿರುವ ಪ್ರಕರಣಗಳು ಮುಕ್ತಾಯಗೊಂಡು,...

ದಿನದ ಸುದ್ದಿ5 days ago

500 ಪಡಿತರ ಚೀಟಿಗಳಿಗೆ ಒಂದು ಪಡಿತರ ಅಂಗಡಿ ತೆರೆಯಲು ಸರ್ಕಾರ ನಿರ್ಧಾರ

ಸುದ್ದಿದಿನಡೆಸ್ಕ್:ಗ್ರಾಮೀಣ ಪ್ರದೇಶದಲ್ಲಿ 500 ಪಡಿತರ ಚೀಟಿಗಳಿಗೆ ಒಂದು ಪಡಿತರ ಅಂಗಡಿ ಹಾಗೂ ನಗರ ಪ್ರದೇಶಗಳಲ್ಲಿ 800 ಪಡಿತರ ಚೀಟಿಗಳಿಗೆ ಒಂದು ಪಡಿತರ ಅಂಗಡಿ ತೆರೆಯಲು ಶೀಘ್ರದಲ್ಲೇ ಆದೇಶ...

ದಿನದ ಸುದ್ದಿ5 days ago

ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಮೂಲ ಸೌಲಭ್ಯಗಳ ಕೊರತೆ : ಕರವೇ ಮನವಿ

ಸುದ್ದಿದಿನ,ದಾವಣಗೆರೆ:ಜಿಲ್ಲೆಯ ಎಲ್ಲಾ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಗಳನ್ನು ಸರಿಪಡಿಸಲು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ಗಿತ್ತೆ ಮಾಧವ್ ವಿಠ್ಠಲ್ ರಾವ್ ರವರಿಗೆ ಕರವೇ(ಪ್ರವೀಣ...

ದಿನದ ಸುದ್ದಿ5 days ago

ದತ್ತಾಂಶ ನಿರ್ವಾಹಕ ಗ್ರೇಡ್ ಎ ಪರೀಕ್ಷೆಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಭಾರತ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು ದತ್ತಾಂಶ ನಿರ್ವಾಹಕ ಗ್ರೇಡ್ ‘ಎ’ ಪರೀಕ್ಷೆಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ...

ದಿನದ ಸುದ್ದಿ5 days ago

ವಿವಿಧ ಸೌಲಭ್ಯಗಳ್ನು ಪಡೆಯಲು ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ಮುಕ್ತ ನಿಧಿ ಅನುದಾನದಲ್ಲಿ ಕಲ್ಯಾಣ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಅರ್ಹ ಫಲಾನುಭವಿಗಳಿಗೆ ವಿವಿಧ ಸೌಲಭ್ಯಗಳನ್ನು ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಫಲಾನುಭವಿಗಳು ನಿಗಧಿತ ನಮೂನೆಯ ಅರ್ಜಿಯನ್ನು...

ದಿನದ ಸುದ್ದಿ5 days ago

ಉದ್ಯೋಗ | ಜುಲೈ 15 ರಂದದು ನೇರ ಸಂದರ್ಶನ

ಸುದ್ದಿದಿನ,ದಾವಣಗೆರೆ:ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ದಾವಣಗೆರೆ ಇವರ ವತಿಯಿಂದ ವಿಶ್ವ ಕೌಶಲ್ಯ ದಿನದ ಪ್ರಯುಕ್ತ ಜುಲೈ 15 ರಂದು ಬೆಳಗ್ಗೆ 10 ಗಂಟೆಗೆ ವಾಕ್-ಇನ್-ಇಂಟರ್‍ವೀವ್ ಆಯೋಜಿಸಲಾಗಿದೆ. ವಾಕ್-ಇನ್-ಇಂಟರ್‍ವೀವ್...

ದಿನದ ಸುದ್ದಿ6 days ago

ಪಿಹೆಚ್‍ಡಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರಿಗೆ ವಿದ್ಯಾರ್ಥಿವೇತನ : ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ವಿಶ್ವವಿದ್ಯಾನಿಲಯಗಳಲ್ಲಿ ಪಿಹೆಚ್‍ಡಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಜೆ.ಆರ್.ಎಫ್ ಮಾದರಿಯಲ್ಲಿ ಫೇಲೋಶಿಪ್ ಅಥವಾ ವಿದ್ಯಾರ್ಥಿವೇತನಕ್ಕೆ ಅನ್‍ಲೈನ್ ಮೂಲಕ ಅರ್ಜಿ...

Trending