ದಿನದ ಸುದ್ದಿ
ಪತ್ರಿಕೋದ್ಯಮ, ಮಾನವೀಯತೆ ಹಾಗೂ ಸಲ್ಮಾನ್ ರಾವೀ ಎಂಬ ಹೃದಯವಂತ..!

- ಡಿ.ಕೆ. ರಮೇಶ್, ಪತ್ರಕರ್ತರು
ಸುದ್ದಿದಿನ ವಿಶೇಷ : ಒಂದು ಸಂದಿಗ್ಧ ಪರಿಸ್ಥಿತಿಯಲ್ಲಿ ಆ ಘಟನೆಯನ್ನು ತಟಸ್ಥವಾಗಿ ವರದಿ ಮಾಡಿದರೆ ಸಾಕೆ ಅಥವಾ ಆ ಘಟನೆಯಲ್ಲಿ ಸಂಕಷ್ಟಕ್ಕೀಡಾದವರ ಸಹಾಯಕ್ಕೆ ವರದಿಗಾರ/ ಛಾಯಾಗ್ರಾಹಕ ಮುಂದಾಗಬೇಕೆ? ಇದೊಂದು ಜಿಜ್ಞಾಸೆ. ಬಹಳ ಹಿಂದಿನಿಂದಲೂ ಇರುವ ಜಿಜ್ಞಾಸೆ ವರದಿಗಾರ ವರದಿ ಮಾಡಿದರಷ್ಟೇ ಸಾಕು ಅದೇ ಒಂದು ಸಹಾಯ ಎನ್ನುವುದು ಒಂದು ವಾದವಾದರೆ, ಸ್ಥಳದಲ್ಲೇ ಇದ್ದವರು ಸಹಾಯಕ್ಕೆ ಬರಬಹುದಿತ್ತಲ್ಲಾ ಎಂಬುದು ಇನ್ನೊಂದು ವಾದ. ಎರಡೂ ಬಹಳ ಮುಖ್ಯವಾದ ಆಲೋಚನೆಗಳು. ಕೊರೊನಾ ರೀತಿಯ ಸಂಕಷ್ಟದ ಸಂದರ್ಭದಲ್ಲಿ ಪತ್ರಕರ್ತರು ಇಂತಹ ಜಿಜ್ಞಾಸೆಗೆ ಮುಖಾಮುಖಿ ಆಗುವುದು, ಅದಕ್ಕೆ ತಮ್ಮದೇ ರೀತಿಯಲ್ಲಿ ಪ್ರತಿಕ್ರಿಯೆ ನೀಡುವುದು ಸಹಜ. ಅಂತಹ ಒಬ್ಬ ಪತ್ರಕರ್ತ ಸಲ್ಮಾನ್ ರಾವೀ.
ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://twitter.com/RifatJawaid/status/1260957072281096192?s=20
ರಾವೀ ಅವರ ಕತೆ ಹೇಳುವ ಮುನ್ನ ಘಟನೆಯೊಂದನ್ನು ಇಲ್ಲಿ ಪ್ರಸ್ತಾಪಿಸಿಬಿಡಬೇಕು. ಮೊದಲನೆಯದು ಸೂಡಾನಿನ ಹಸಿವಿನ ದಾರುಣತೆಯನ್ನು ಚಿತ್ರಿಸುತ್ತಿದ್ದ ಕೆವಿನ್ ಕಾರ್ಟರ್ ಎಂಬ ಛಾಯಾಗ್ರಾಹಕನ ಕುರಿತಾದದ್ದು, ಅಸ್ತಿಪಂಜರದಂತಿರುವ ಮಗುವೊಂದು ಮಣ್ಣಿಗೆ ತಲೆ ಆನಿಸಿದೆ.
ಹಿನ್ನೆಲೆಗೆ ರಣಹದ್ದೊಂದು ಕುಳಿತಿದೆ. ಅದನ್ನು ತನ್ನ ಕ್ಯಾಮೆರಾದಲ್ಲಿ ಕಾರ್ಟರ್ ಸೆರೆ ಹಿಡಿಯುತ್ತಾನೆ. ‘ದ ವಲ್ಚರ್ ಅಂಡ್ ದ ಲಿಟಲ್ ಗರ್ಲ್’ ಎಂಬ ಹೆಸರಿನಲ್ಲಿ ಛಾಯಾಚಿತ್ರ ಮನ್ನಣೆ ಪಡೆಯುತ್ತದೆ. ನ್ಯೂಯಾರ್ಕ್ ಟೈಮ್ಸ್ ಪತ್ರಿಕೆ ಅದನ್ನು ಪ್ರಕಟಿಸಿಸುತ್ತದೆ. ಮುಂದೆ ಆ ಚಿತ್ರಕ್ಕೆ ಪುಲಿಟ್ಜರ್ ಪ್ರಶಸ್ತಿ ಕೂಡ ಸಿಗುತ್ತದೆ. ಅಷ್ಟರಲ್ಲಾಗಲೇ ಅವನ ಕ್ಯಾಮೆರಾ ಅಂತಹ ಹಲವಾರು ಮಕ್ಕಳ ಚಿತ್ರಗಳನ್ನು ಸೆರೆಹಿಡಿಯುತ್ತದೆ. ಆದರೆ ಕಾರ್ಟರ್ ಖಿನ್ನತೆಗೆ ಸರಿಯುತ್ತಾನೆ. ತನ್ನ ಬಾಲ್ಯವನ್ನು ಕಳೆದಿದ್ದ ಪಾರ್ಕ್ ಮೋರ್ ಎಂಬಲ್ಲಿ ಕಡೆಗೊಂದು ದಿನ ಆತ್ಮಹತ್ಯೆ ಮಾಡಿಕೊಳ್ಳುತ್ತಾನೆ. ಆಗ ಅವನ ವಯಸ್ಸು ಕೇವಲ 33.
ಈಗ ಸಲ್ಮಾನ್ ರಾವೀ ವಿಚಾರಕ್ಕೆ ಬರೋಣ. ದೇಶ ಕಂಡ ಅತ್ಯುತ್ತಮ ಪತ್ರಕರ್ತ, ಸೂಕ್ಷ್ಮ ಮನಸ್ಸಿನ ವರದಿಗಾರ, ಬಿಬಿಸಿ ಹಿಂದಿ ವಾಹಿನಿಗಾಗಿ ಅವರು ಸೇವೆ ಸಲ್ಲಿಸುತ್ತಿದ್ದಾರೆ ಎಂಬ ವಿಚಾರಗಳೆಲ್ಲಾ ದೇಶಕ್ಕೆ ಗೊತ್ತಿರುವಂಥದ್ದೇ. ಆದರೆ ಕೊರೊನಾ ಸಂದರ್ಭದಲ್ಲಿ ಅವರು ನಡೆದುಕೊಳ್ಳುತ್ತಿರುವ ರೀತಿಯಿಂದಾಗಿ ಪತ್ರಿಕಾ ಲೋಕ ಎದೆಯುಬ್ಬಿಸುವಂತಾಗಿದೆ. ಜಗತ್ತೇ ಅವರ ಕೆಲಸವನ್ನು ಕೊಂಡಾಡುತ್ತಿದೆ.
ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://twitter.com/salmanravi/status/1261201617522737152?s=19
ಕೊರೊನಾ ದಿಗ್ಬಂಧನದಿಂದಾಗಿ ದೆಹಲಿಯಿಂದ ಸಾವಿರಾರು ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ಮರಳಲು ಬೀದಿಗೆ ಬಂದಿರುತ್ತಾರೆ. ಅಂತಹ ಒಂದು ಕುಟುಂಬ ಸುಮಾರು 250 ಕಿಮೀ ದೂರದ ತನ್ನೂರಿಗೆ ಮರಳಲು ಸಿದ್ಧವಾಗಿರುತ್ತದೆ. ಕುಟುಂಬದ ಹಿರಿಯ ಮಲಗಿರುವ ಮಗುವನ್ನು ಹೆಗಲಿಗೆ ಆನಿಸಿಕೊಂಡಿದ್ದಾನೆ. ಆತನ ಕಾಲಲ್ಲಿ ಚಪ್ಪಲಿ ಇಲ್ಲ ಎಂಬ ಸಂಗತಿ ಸಲ್ಮಾನ್ ಗಮನಕ್ಕೆ ಬರುತ್ತದೆ.
ಸಲ್ಮಾನ್ ಸಹಜವಾಗಿಯೇ ಆ ವ್ಯಕ್ತಿಗೆ ತನ್ನ ಬೂಟುಗಳನ್ನು ಕೊಡುತ್ತಾರೆ. ಕಾರ್ಮಿಕ ಅದನ್ನು ತೊಡಲು ಹಿಂದೇಟು ಹಾಕಿದಾಗ ‘ಇಲ್ಲ ಇಲ್ಲ ನೀವು ಹಾಕಿಕೊಳ್ಳಬೇಕು. ನೀವು ಕ್ರಮಿಸಬೇಕಾದ ಹಾದಿ ಬಹುದೂರದ್ದು. ನನ್ನದು ಹೇಗೋ ನಡೆಯುತ್ತದೆ’ ಎಂದು ಹೇಳಿ ಆತನಿಗೆ ಶೂ ಹಾಕಿಕೊಳ್ಳಲು ಅನುವು ಮಾಡಿಕೊಟ್ಟು ಮತ್ತೊಬ್ಬ ಕಾರ್ಮಿಕನನ್ನು ಮಾತನಾಡಿಸಲು ಹೋಗುತ್ತಾರೆ.
ಬಾಲಿವುಡ್ ನಟರಿಂದ ಹಿಡಿದು ಜನಸಾಮಾನ್ಯರ ತನಕ ಈ ಘಟನೆ ಗಮನ ಸೆಳೆದಿದೆ. ಘಟನೆಗೆ ಪ್ರತಿಕ್ರಿಯೆ ನೀಡಿರುವ ಆಲಿಯಾ ಭಟ್ ಸಹೋದರಿ ಪೂಜಾ ಭಟ್ ‘ಈ ಘಟನೆ ನನ್ನಲ್ಲಿ ಕಣ್ಣೀರು ತರಿಸಿತು’ ಎಂದಿದ್ದಾರೆ. ಟ್ವಿಟರ್, ಫೇಸ್ಬುಕ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಸಲ್ಮಾನ್ ಕೆಲಸಕ್ಕೆ ಮೆಚ್ಚುಗೆಯ ಮಹಾಪೂರವೇ ಹರಿಯುತ್ತಿದೆ.
ಅಷ್ಟೇ ಆಗಿದ್ದರೆ ಅದೊಂದು ಘಟನೆ ಎಂದು ಸುಮ್ಮನಾಗಬಹುದಿತ್ತು. ಆದರೆ ಸಲ್ಮಾನ್ ಅವರೊಳಗಿನ ಅಂತಃಕರಣ ಆ ಘಟನೆಗೆ ಮಾತ್ರ ಸೀಮಿತವಾಗುವುದಿಲ್ಲ. ಕಾಲ್ನಡಿಗೆಯಲ್ಲಿ ಸಾಗುತ್ತಿದ್ದ ವಲಸೆ ಕಾರ್ಮಿಕರ ಒಂದು ತಂಡಕ್ಕೆ ಪೊಲೀಸರ ಸಹಾಯ ಪಡೆದು ಫರೀದಾಬಾದಿನ ಶಾಲೆಯೊಂದರಲ್ಲಿ ತಾತ್ಕಾಲಿಕ ವಸತಿ ಕಲ್ಪಿಸುತ್ತಾರೆ ಸಲ್ಮಾನ್. ಈ ಕೆಲಸವೂ ಅಪಾರ ಮೆಚ್ಚುಗೆ ಗಳಿಸಿದೆ.
ಇನ್ನೊಂದು ಘಟನೆ ಇವೆರಡಕ್ಕೂ ಹೊರತಾದದ್ದು, ಅದು ಭಾರತದಲ್ಲಿಯೇ ನಡೆದದ್ದು. ‘ಸುದ್ದಿ ಇಲ್ಲದಿದ್ದರೆ ಅದನ್ನು ಸೃಷ್ಟಿಸಿದರಾಯಿತು’ ಎಂಬ ಧೋರಣೆಗೆ ಸಂಬಂಧಿಸಿದ್ದು. ಸ್ಥಳ ಘಟನೆ ನಡೆದ ದಿನ ನೆನಪಿಲ್ಲ. ಆದರೆ ಆ ಘಟನೆಯನ್ನು ಮನುಷ್ಯರಾದವರಾರೂ ಮರೆಯಲು ಸಾಧ್ಯ ಇಲ್ಲ. ರೈತನೋ ಮತ್ತಾರೋ ಆತ್ಮಹತ್ಯೆಗೆ ಮುಂದಾಗಿರುತ್ತಾರೆ. ತಡವಾಗಿ ಅಲ್ಲಿಗೆ ಬರುವ ವೀಡಿಯೊಗ್ರಾಫರ್ ಇನ್ನೊಮ್ಮೆ ಬೆಂಕಿ ಹಚ್ಚಿಕೊಳ್ಳುವಂತೆ ಪ್ರೇರೇಪಿಸುತ್ತಾನೆ. ಆತ ಬೆಂಕಿ ಹಚ್ಚಿಕೊಳ್ಳುತ್ತಾನೆ. ಆತನ ಮೈ ಸುಟ್ಟು ಹೋಗುತ್ತದೆ.
Spontaneous gesture by someone who is equally generous off camera too. God bless you @salmanravi https://t.co/JKbWKhMEPy
— Mitul Thakkar (@MitulThakkar) May 14, 2020
ಮೇಲೆ ವಿವರಿಸಿದ ಮೂರೂ ಘಟನೆಗಳು ಪತ್ರಿಕೋದ್ಯಮ, ನೈತಿಕತೆ, ಮಾನವೀಯತೆಯ ಸುತ್ತ ಹೆಣೆದುಕೊಂಡಿರುವಂತಹವು. ಉಳಿದೆರಡು ಘಟನೆಗಳಿಗಿಂತಲೂ ಸಲ್ಮಾನ್ ರಾವೀ ಅವರ ಕೆಲಸಗಳಿಗೆ ಹೆಚ್ಚು ತೂಕ ಇರುವಂತಿದೆ. ಆ ಕಾರಣಕ್ಕೆ ರಾವೀ ಅಂತಹ ಪತ್ರಕರ್ತರ ಸಂಖ್ಯೆ ಹೆಚ್ಚಲಿ ಎಂದು ಹಾರೈಸಬೇಕಿದೆ.
This photo is going to haunt me for the rest of my life 😥 pic.twitter.com/HyonF6sutW
— SALMAN RAVI (@salmanravi) May 16, 2020
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಬಿಗ್ ಬಾಸ್ ಖ್ಯಾತಿಯ ಜಯಶ್ರೀ ಆತ್ಮಹತ್ಯೆ ; ಕಾರಣ ಏನು ಗೊತ್ತಾ..!?

ಸುದ್ದಿದಿನ,ಬೆಂಗಳೂರು : ಸೀಸನ್ ಮೂರರ ಬಿಗ್ ಬಾಸ್ ಖ್ಯಾತಿಯ ಜಯಶ್ರೀ ರಾಮಯ್ಯ ಸೋಮವಾರ ಆತ್ಮಹತ್ಯೆಗೆ ಶರಣಾಗಿದ್ದಾರೆ. ಜಯಶ್ರೀ ಹಿಂದೆಯೂ ಆತ್ಮಹತ್ಯೆಗೆ ಪ್ರಯತ್ನಿಸಿದ್ದರು. ಇತ್ತೀಚಿಗೆ ಕೆಲದಿನಗಳಿಂದ ಅತೀವ ಖಿನ್ನತೆಯಿಂದ ಬಳಲುತ್ತಿದ್ದರು.
ಮಾದನಾಯಕನಹಳ್ಳಿ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಪ್ರಗತಿ ಬಡಾವಣೆಯ ಅಪಾರ್ಟ್ಮೆಂಟ್ ನಲ್ಲಿ ಜಯಶ್ರೀ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ.
ಅಂದಹಾಗೇ ಈ ಹಿಂದೆಯೂ ನಟಿ ಜಯಶ್ರೀ ಆತ್ಮಹತ್ಯೆಗೆ ಯತ್ನಿಸಿದ್ದರು. ಆನಂತ್ರ ಅವರು ಸಾವಿನಿಂದ ಬಚಾವ್ ಆಗಿದ್ದರು. ಆದ್ರೇ ಇದೀಗ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ನನ್ನ ಜೀವನದಲ್ಲಿ ನಡೆಯಬಾರದ ಘಟನೆಯೊಂದು ನಡೆದು ಹೋಗಿದೆ. ಅದರಿಂದ ಹೊರಬರಲು ಆಗುತ್ತಿಲ್ಲ ನನಗೆ ದಯಾಮರಣ ಕೊಡಿ ಎಂದು ತಮ್ಮ ಫೇಸ್ ಬುಕ್ ನಲ್ಲಿ ಲೈವ್ ಬಂದು ಕೆಲವು ದಿನಗಳ ಹಿಂದೆ ಕೇಳಿಕೊಂಡಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಎಂ.ಜಿ.ಶಶಿಕಲಾ ಮೂರ್ತಿ ನಲ್ಕುದುರೆ ಅವರಿಗೆ ‘ಜನಸೇವಾರತ್ನ’ ರಾಜ್ಯ ಪ್ರಶಸ್ತಿ

ಸುದ್ದಿದಿನ,ದಾವಣಗೆರೆ : ಭಾರತರತ್ನ ಡಾ| ಬಾಬಾಸಾಹೇಬ ಅಂಬೇಡ್ಕರ ಹಾಗೂ ಮಾಜಿ ರಾಷ್ಟ್ರಪತಿ ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಹೆಸರಿನಲ್ಲಿ ಪ್ರತಿ ವರ್ಷದಂತೆ ಕೊಡಮಾಡುವ ಮಾನವ ಧರ್ಮ 4ನೇ ಕನ್ನಡ ಮಾಧ್ಯಮ ಸಮಾವೇಶ ಹಾಗೂ ಜನಸೇವಾರತ್ನ ರಾಜ್ಯ ಪ್ರಶಸ್ತಿಪ್ರಧಾನ ಸಮಾರಂಭದಲ್ಲಿ ರಾಜ್ಯಮಟ್ಟದ ಪ್ರಶಸ್ತಿ ಪತ್ರವನ್ನು ಎಂ.ಜಿ.ಶಶಿಕಲಾ ಮೂರ್ತಿ ನಲ್ಕುದುರೆ ಅವರಿಗೆ ನೀಡಿ ಗಣ್ಯಮಾನ್ಯರ ಉಪಸ್ಥಿತಿಯಲ್ಲಿ ಗೌರವಿಸಲಾಯಿತು.
ಮಾನವ ಇತಿಹಾಸದಲ್ಲಿ ಮನುಕುಲವನ್ನೆ ತತ್ತರಿಸುವಂತೆ ಮಾಡಿದ ಕೋವಿಡ್-19ಹೋರಾಟದಲ್ಲಿ ಜನಕಲ್ಯಾಣಕ್ಕಾಗಿ ಸಂಜೀವಿನಿ ಲಸಿಕೆ ತಯಾರಿಸಿದ ಭಾರತೀಯರು ತಮ್ಮ ತನು-ಮನ ಧನವನ್ನು ಸಮರ್ಪಿಸಿ ಜನಸೇವೆ ರಕ್ಷಣೆಗೆ ಕಂಕಣ ಬದ್ಧರಾಗಿ ನಿಂತು ಹೋರಾಟ ಮಾಡಿದ್ದರ ಫಲವಾಗಿ ಟ್ರಸ್ಟ್ ಹಾಗೂ ಪತ್ರಿಕಾಬಳಗದ ವತಿಯಿಂದ ನಾಡು-ನುಡಿ ನೆಲ-ಜಲ ಭಾಷೆಗಾಗಿ ಅಕ್ಷರ ಸೇವೆಗಾಗಿ ಮತ್ತು ಮಾನವ ಧರ್ಮ ಪರಿಪಾಲನೆಗಾಗಿ ಹಾಗೂ ಸಮಾಜಸೇವೆಗಾಗಿ ಶ್ರಮಿಸಿದ ಸಾಧಕರಾದ ಶ್ರೀಮತಿ ಎಂ.ಜಿ.ಶಶಿಕಲಾ ಮೂರ್ತಿ ನಲ್ಕುದುರೆ ಅವರ ಅನುಪಮ ಸೇವೆಯನ್ನು ಸ್ಮರಿಸಿ ಇವರಿಗೆ ಅತ್ಯಂತ ಗೌರವಪೂರ್ವಕಾಗಿ ಸನ್ಮಾನಿಸಿ ಈ ರಾಜ್ಯ ಪ್ರಶಸ್ತಿಯನ್ನು
ಪ್ರಧಾನ ಮಾಡಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ದಾವಣಗೆರೆ | ಪ್ರವಾಸಿ ಟ್ಯಾಕ್ಸಿಗೆ ಸಹಾಯಧನ : ಅಂತಿಮ ಆಯ್ಕೆ ಪಟ್ಟಿಗೆ ಆಕ್ಷೇಪಣೆಗಳ ಆಹ್ವಾನ

ಸುದ್ದಿದಿನ,ದಾವಣಗೆರೆ : ಎಸ್ಸಿಪಿ/ಟಿಎಸ್ಪಿ ಯೋಜನೆಯಡಿ ಪ್ರವಾಸಿ ಟ್ಯಾಕ್ಸಿಗೆ ಸಹಾಯಧನ ಒದಗಿಸಲು ಫಲಾನುಭವಿಗಳ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲಾಗಿದ್ದು, ಆಯ್ಕೆ ಪಟ್ಟಿ ಕುರಿತು ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ.
2012-13 ನೇ ಸಾಲಿನಿಂದ 2016-17ನೇ ಸಾಲಿನವರೆಗೆ ಬಾಕಿ ಇರುವ ಪರಿಶಿಷ್ಟ ಜಾತಿ 9, ಪರಿಶಿಷ್ಟ ಪಂಗಡ 4 ಮತ್ತು 2013-14 ರಿಂದ 2016-17 ನೇ ಸಾಲಿನವರೆಗೆ ಬಾಕಿ ಇರುವ ಹಿಂದುಳಿದ ವರ್ಗದ 10 ಹಾಗೂ ಅಲ್ಪಸಂಖ್ಯಾತರ ವರ್ಗದ 03 ಸೇರಿದಂತೆ ಒಟ್ಟು 26 ಅರ್ಹ ವಿದ್ಯಾವಂತ ನಿರುದ್ಯೋಗಿ ಅಭ್ಯರ್ಥಿಗಳಿಗೆ ತಲಾ ರೂ.2 ಲಕ್ಷಗಳಲ್ಲಿ ಪ್ರವಾಸಿ ಟ್ಯಾಕ್ಸಿಗೆ ಸಹಾಯಧನ ಒದಗಿಸಲು ಅರ್ಹ ಫಲಾನುಭವಿಗಳ ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ.
ಈ ಪಟ್ಟಿಗೆ ಸಂಬಂಧಿಸಿದಂತೆ ಸಾರ್ವಜನಿಕರು ಅಥವಾ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಲ್ಲಿ ಆಕ್ಷೇಪಣೆಗಳೇನಾದರೂ ಇದಲ್ಲಿ ಸೂಕ್ತ ದಾಖಲೆಗೊಂದಿಗೆ ಫೆ.5 ರೊಳಗೆ ಜಿಲ್ಲಾಧಿಕಾರಿಗಳು ಹಾಗೂ ಅಧ್ಯಕ್ಷರು, ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ದಿ ಸಮಿತಿ, ದಾವಣಗೆರೆ ಅಥವಾ ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ಉಪವಿಭಾಗಾಧಿಕಾರಿಗಳ ಕಚೇರಿ ಆವರಣ, ರೈಲ್ವೆ ನಿಲ್ದಾಣದ ಪಕ್ಕ, ಪಿ.ಬಿ.ರಸ್ತೆ ದಾವಣಗೆರೆ ಇಲ್ಲಿಗೆ ಆಕ್ಷೇಪಣೆ ಸಲ್ಲಿಸಬಹುದೆಂದು ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ದಾವಣಗೆರೆ | 120 ಕೋಟಿ ವೆಚ್ಚದಲ್ಲಿ ನೂತನ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣ ನಿರ್ಮಾಣ : ಸಂಸದ ಜಿ.ಎಂ.ಸಿದ್ದೇಶ್ವರ
-
ದಿನದ ಸುದ್ದಿ7 days ago
ಕೆಎಸ್ಆರ್ಟಿಸಿ ನೌಕರರು ಆತಂಕಕ್ಕೆ ಒಳಗಾಗುವುದು ಬೇಡ : ಸಾರಿಗೆ ಸಚಿವ ಲಕ್ಷ್ಮಣ ಸವದಿ ಭರವಸೆ
-
ದಿನದ ಸುದ್ದಿ6 days ago
ಲಜ್ಜೆಗೆಟ್ಟ ರಾಜಕಾರಣಕ್ಕೆ ಕರ್ನಾಟಕವೇ ತವರು..!
-
ದಿನದ ಸುದ್ದಿ7 days ago
ಜಿಎಸ್ ಟಿ ಪರಿಹಾರದಲ್ಲಿ ರಾಜ್ಯಕ್ಕೆ ಅಂದಾಜು 27 ಸಾವಿರ ಕೋಟಿ ಖೋತಾ ಆಗಬಹುದು : ಸಿದ್ದರಾಮಯ್ಯ
-
ದಿನದ ಸುದ್ದಿ6 days ago
ರಾಷ್ಟ್ರೀಯ ತನಿಖಾ ದಳದಿಂದ ಸಮನ್ಸ್ ಪಡೆದಿದ್ದ ಖಾಲ್ಸಾ ಏಡ್ ನೊಬೆಲ್ ಶಾಂತಿ ಪುರಸ್ಕಾರಕ್ಕೆ ನಾಮನಿರ್ದೇಶನ..!
-
ಕ್ರೀಡೆ6 days ago
ಪ.ಜಾತಿ/ಪ.ಪಂಗಡಕ್ಕೆ ಸಹಾಯಧನ ಮತ್ತು ಕ್ರೀಡಾಗಂಟಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ಡಿಎಸ್ಟಿ/ಪಿಹೆಚ್ಡಿ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ಕುರುಬ ಎಸ್ ಟಿ ಹೋರಾಟ | ಪಾದಯಾತ್ರೆಯಲ್ಲಿ ಕಾಗಿನೆಲೆ ಶ್ರೀ ಸರ್ಕಾರಕ್ಕೆ ಕೊಟ್ರು ಡೆಡ್ ಲೈನ್..!