Connect with us

ದಿನದ ಸುದ್ದಿ

ಪತ್ರಿಕೋದ್ಯಮ, ಮಾನವೀಯತೆ ಹಾಗೂ ಸಲ್ಮಾನ್ ರಾವೀ ಎಂಬ ಹೃದಯವಂತ..!

Published

on

  • ಡಿ.ಕೆ. ರಮೇಶ್, ಪತ್ರಕರ್ತರು

ಸುದ್ದಿದಿನ ವಿಶೇಷ : ಒಂದು ಸಂದಿಗ್ಧ ಪರಿಸ್ಥಿತಿಯಲ್ಲಿ ಆ ಘಟನೆಯನ್ನು ತಟಸ್ಥವಾಗಿ ವರದಿ ಮಾಡಿದರೆ ಸಾಕೆ ಅಥವಾ ಆ ಘಟನೆಯಲ್ಲಿ ಸಂಕಷ್ಟಕ್ಕೀಡಾದವರ ಸಹಾಯಕ್ಕೆ ವರದಿಗಾರ/ ಛಾಯಾಗ್ರಾಹಕ ಮುಂದಾಗಬೇಕೆ? ಇದೊಂದು ಜಿಜ್ಞಾಸೆ. ಬಹಳ ಹಿಂದಿನಿಂದಲೂ ಇರುವ ಜಿಜ್ಞಾಸೆ ವರದಿಗಾರ ವರದಿ ಮಾಡಿದರಷ್ಟೇ ಸಾಕು ಅದೇ ಒಂದು ಸಹಾಯ ಎನ್ನುವುದು ಒಂದು ವಾದವಾದರೆ, ಸ್ಥಳದಲ್ಲೇ ಇದ್ದವರು ಸಹಾಯಕ್ಕೆ ಬರಬಹುದಿತ್ತಲ್ಲಾ ಎಂಬುದು ಇನ್ನೊಂದು ವಾದ. ಎರಡೂ ಬಹಳ ಮುಖ್ಯವಾದ ಆಲೋಚನೆಗಳು. ಕೊರೊನಾ ರೀತಿಯ ಸಂಕಷ್ಟದ ಸಂದರ್ಭದಲ್ಲಿ ಪತ್ರಕರ್ತರು ಇಂತಹ ಜಿಜ್ಞಾಸೆಗೆ ಮುಖಾಮುಖಿ ಆಗುವುದು, ಅದಕ್ಕೆ ತಮ್ಮದೇ ರೀತಿಯಲ್ಲಿ ಪ್ರತಿಕ್ರಿಯೆ ನೀಡುವುದು ಸಹಜ. ಅಂತಹ ಒಬ್ಬ ಪತ್ರಕರ್ತ ಸಲ್ಮಾನ್ ರಾವೀ.

ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://twitter.com/RifatJawaid/status/1260957072281096192?s=20

ರಾವೀ ಅವರ ಕತೆ ಹೇಳುವ ಮುನ್ನ ಘಟನೆಯೊಂದನ್ನು ಇಲ್ಲಿ ಪ್ರಸ್ತಾಪಿಸಿಬಿಡಬೇಕು. ಮೊದಲನೆಯದು ಸೂಡಾನಿನ ಹಸಿವಿನ ದಾರುಣತೆಯನ್ನು ಚಿತ್ರಿಸುತ್ತಿದ್ದ ಕೆವಿನ್ ಕಾರ್ಟರ್ ಎಂಬ ಛಾಯಾಗ್ರಾಹಕನ ಕುರಿತಾದದ್ದು, ಅಸ್ತಿಪಂಜರದಂತಿರುವ ಮಗುವೊಂದು ಮಣ್ಣಿಗೆ ತಲೆ ಆನಿಸಿದೆ.

ಹಿನ್ನೆಲೆಗೆ ರಣಹದ್ದೊಂದು ಕುಳಿತಿದೆ. ಅದನ್ನು ತನ್ನ ಕ್ಯಾಮೆರಾದಲ್ಲಿ ಕಾರ್ಟರ್ ಸೆರೆ ಹಿಡಿಯುತ್ತಾನೆ. ‘ದ ವಲ್ಚರ್ ಅಂಡ್ ದ ಲಿಟಲ್ ಗರ್ಲ್’ ಎಂಬ ಹೆಸರಿನಲ್ಲಿ ಛಾಯಾಚಿತ್ರ ಮನ್ನಣೆ ಪಡೆಯುತ್ತದೆ. ನ್ಯೂಯಾರ್ಕ್ ಟೈಮ್ಸ್ ಪತ್ರಿಕೆ ಅದನ್ನು ಪ್ರಕಟಿಸಿಸುತ್ತದೆ. ಮುಂದೆ ಆ ಚಿತ್ರಕ್ಕೆ ಪುಲಿಟ್ಜರ್ ಪ್ರಶಸ್ತಿ ಕೂಡ ಸಿಗುತ್ತದೆ. ಅಷ್ಟರಲ್ಲಾಗಲೇ ಅವನ ಕ್ಯಾಮೆರಾ ಅಂತಹ ಹಲವಾರು ಮಕ್ಕಳ ಚಿತ್ರಗಳನ್ನು ಸೆರೆಹಿಡಿಯುತ್ತದೆ. ಆದರೆ ಕಾರ್ಟರ್ ಖಿನ್ನತೆಗೆ ಸರಿಯುತ್ತಾನೆ. ತನ್ನ ಬಾಲ್ಯವನ್ನು ಕಳೆದಿದ್ದ ಪಾರ್ಕ್ ಮೋರ್ ಎಂಬಲ್ಲಿ ಕಡೆಗೊಂದು ದಿನ ಆತ್ಮಹತ್ಯೆ ಮಾಡಿಕೊಳ್ಳುತ್ತಾನೆ. ಆಗ ಅವನ ವಯಸ್ಸು ಕೇವಲ 33.

ಕೆವಿನ್ ಕಾರ್ಟರ್ ಮತ್ತು ಆತನ ಫೋಟೋಗ್ರಫಿ

ಈಗ ಸಲ್ಮಾನ್ ರಾವೀ ವಿಚಾರಕ್ಕೆ ಬರೋಣ. ದೇಶ ಕಂಡ ಅತ್ಯುತ್ತಮ ಪತ್ರಕರ್ತ, ಸೂಕ್ಷ್ಮ ಮನಸ್ಸಿನ ವರದಿಗಾರ, ಬಿಬಿಸಿ ಹಿಂದಿ ವಾಹಿನಿಗಾಗಿ ಅವರು ಸೇವೆ ಸಲ್ಲಿಸುತ್ತಿದ್ದಾರೆ ಎಂಬ ವಿಚಾರಗಳೆಲ್ಲಾ ದೇಶಕ್ಕೆ ಗೊತ್ತಿರುವಂಥದ್ದೇ. ಆದರೆ ಕೊರೊನಾ ಸಂದರ್ಭದಲ್ಲಿ ಅವರು ನಡೆದುಕೊಳ್ಳುತ್ತಿರುವ ರೀತಿಯಿಂದಾಗಿ ಪತ್ರಿಕಾ ಲೋಕ ಎದೆಯುಬ್ಬಿಸುವಂತಾಗಿದೆ. ಜಗತ್ತೇ ಅವರ ಕೆಲಸವನ್ನು ಕೊಂಡಾಡುತ್ತಿದೆ.

ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://twitter.com/salmanravi/status/1261201617522737152?s=19

ಕೊರೊನಾ ದಿಗ್ಬಂಧನದಿಂದಾಗಿ ದೆಹಲಿಯಿಂದ ಸಾವಿರಾರು ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ಮರಳಲು ಬೀದಿಗೆ ಬಂದಿರುತ್ತಾರೆ. ಅಂತಹ ಒಂದು ಕುಟುಂಬ ಸುಮಾರು 250 ಕಿಮೀ ದೂರದ ತನ್ನೂರಿಗೆ ಮರಳಲು ಸಿದ್ಧವಾಗಿರುತ್ತದೆ. ಕುಟುಂಬದ ಹಿರಿಯ ಮಲಗಿರುವ ಮಗುವನ್ನು ಹೆಗಲಿಗೆ ಆನಿಸಿಕೊಂಡಿದ್ದಾನೆ. ಆತನ ಕಾಲಲ್ಲಿ ಚಪ್ಪಲಿ ಇಲ್ಲ ಎಂಬ ಸಂಗತಿ ಸಲ್ಮಾನ್ ಗಮನಕ್ಕೆ ಬರುತ್ತದೆ.

ಸಲ್ಮಾನ್ ಸಹಜವಾಗಿಯೇ ಆ ವ್ಯಕ್ತಿಗೆ ತನ್ನ ಬೂಟುಗಳನ್ನು ಕೊಡುತ್ತಾರೆ. ಕಾರ್ಮಿಕ ಅದನ್ನು ತೊಡಲು ಹಿಂದೇಟು ಹಾಕಿದಾಗ ‘ಇಲ್ಲ ಇಲ್ಲ ನೀವು ಹಾಕಿಕೊಳ್ಳಬೇಕು. ನೀವು ಕ್ರಮಿಸಬೇಕಾದ ಹಾದಿ ಬಹುದೂರದ್ದು. ನನ್ನದು ಹೇಗೋ ನಡೆಯುತ್ತದೆ’ ಎಂದು ಹೇಳಿ ಆತನಿಗೆ ಶೂ ಹಾಕಿಕೊಳ್ಳಲು ಅನುವು ಮಾಡಿಕೊಟ್ಟು ಮತ್ತೊಬ್ಬ ಕಾರ್ಮಿಕನನ್ನು ಮಾತನಾಡಿಸಲು ಹೋಗುತ್ತಾರೆ.

ಬಾಲಿವುಡ್ ನಟರಿಂದ ಹಿಡಿದು ಜನಸಾಮಾನ್ಯರ ತನಕ ಈ ಘಟನೆ ಗಮನ ಸೆಳೆದಿದೆ. ಘಟನೆಗೆ ಪ್ರತಿಕ್ರಿಯೆ ನೀಡಿರುವ ಆಲಿಯಾ ಭಟ್ ಸಹೋದರಿ ಪೂಜಾ ಭಟ್ ‘ಈ ಘಟನೆ ನನ್ನಲ್ಲಿ ಕಣ್ಣೀರು ತರಿಸಿತು’ ಎಂದಿದ್ದಾರೆ. ಟ್ವಿಟರ್, ಫೇಸ್ಬುಕ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಸಲ್ಮಾನ್ ಕೆಲಸಕ್ಕೆ ಮೆಚ್ಚುಗೆಯ ಮಹಾಪೂರವೇ ಹರಿಯುತ್ತಿದೆ.

ಅಷ್ಟೇ ಆಗಿದ್ದರೆ ಅದೊಂದು ಘಟನೆ ಎಂದು ಸುಮ್ಮನಾಗಬಹುದಿತ್ತು. ಆದರೆ ಸಲ್ಮಾನ್ ಅವರೊಳಗಿನ ಅಂತಃಕರಣ ಆ ಘಟನೆಗೆ ಮಾತ್ರ ಸೀಮಿತವಾಗುವುದಿಲ್ಲ. ಕಾಲ್ನಡಿಗೆಯಲ್ಲಿ ಸಾಗುತ್ತಿದ್ದ ವಲಸೆ ಕಾರ್ಮಿಕರ ಒಂದು ತಂಡಕ್ಕೆ ಪೊಲೀಸರ ಸಹಾಯ ಪಡೆದು ಫರೀದಾಬಾದಿನ ಶಾಲೆಯೊಂದರಲ್ಲಿ ತಾತ್ಕಾಲಿಕ ವಸತಿ ಕಲ್ಪಿಸುತ್ತಾರೆ ಸಲ್ಮಾನ್. ಈ ಕೆಲಸವೂ ಅಪಾರ ಮೆಚ್ಚುಗೆ ಗಳಿಸಿದೆ.

ಸಲ್ಮಾನ್ ರಾವೀ, ಪತ್ರಕರ್ತ, ಬಿಬಿಸಿ ನ್ಯೂಸ್

ಇನ್ನೊಂದು ಘಟನೆ ಇವೆರಡಕ್ಕೂ ಹೊರತಾದದ್ದು, ಅದು ಭಾರತದಲ್ಲಿಯೇ ನಡೆದದ್ದು. ‘ಸುದ್ದಿ ಇಲ್ಲದಿದ್ದರೆ ಅದನ್ನು ಸೃಷ್ಟಿಸಿದರಾಯಿತು’ ಎಂಬ ಧೋರಣೆಗೆ ಸಂಬಂಧಿಸಿದ್ದು. ಸ್ಥಳ ಘಟನೆ ನಡೆದ ದಿನ ನೆನಪಿಲ್ಲ. ಆದರೆ ಆ ಘಟನೆಯನ್ನು ಮನುಷ್ಯರಾದವರಾರೂ ಮರೆಯಲು ಸಾಧ್ಯ ಇಲ್ಲ. ರೈತನೋ ಮತ್ತಾರೋ ಆತ್ಮಹತ್ಯೆಗೆ ಮುಂದಾಗಿರುತ್ತಾರೆ. ತಡವಾಗಿ ಅಲ್ಲಿಗೆ ಬರುವ ವೀಡಿಯೊಗ್ರಾಫರ್ ಇನ್ನೊಮ್ಮೆ ಬೆಂಕಿ ಹಚ್ಚಿಕೊಳ್ಳುವಂತೆ ಪ್ರೇರೇಪಿಸುತ್ತಾನೆ. ಆತ ಬೆಂಕಿ ಹಚ್ಚಿಕೊಳ್ಳುತ್ತಾನೆ. ಆತನ ಮೈ ಸುಟ್ಟು ಹೋಗುತ್ತದೆ.

ಮೇಲೆ ವಿವರಿಸಿದ ಮೂರೂ ಘಟನೆಗಳು ಪತ್ರಿಕೋದ್ಯಮ, ನೈತಿಕತೆ, ಮಾನವೀಯತೆಯ ಸುತ್ತ ಹೆಣೆದುಕೊಂಡಿರುವಂತಹವು. ಉಳಿದೆರಡು ಘಟನೆಗಳಿಗಿಂತಲೂ ಸಲ್ಮಾನ್ ರಾವೀ ಅವರ ಕೆಲಸಗಳಿಗೆ ಹೆಚ್ಚು ತೂಕ ಇರುವಂತಿದೆ. ಆ ಕಾರಣಕ್ಕೆ ರಾವೀ ಅಂತಹ ಪತ್ರಕರ್ತರ ಸಂಖ್ಯೆ ಹೆಚ್ಚಲಿ ಎಂದು ಹಾರೈಸಬೇಕಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಚಿತ್ರದುರ್ಗ | ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಡಿ.ಡಿ ಬಿ.ಮಲ್ಲಿಕಾರ್ಜುನ, ಕ್ರೈಸ್ ಇ.ಡಿ ಬಿ.ಶಿವಸ್ವಾಮಿ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ಚಿತ್ರದುರ್ಗ: ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ವಸತಿ ಶಾಲೆಗಳಿಗೆ (ಕ್ರೈಸ್) ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ಸರಬರಾಜು ಮಾಡದೆ ವಂಚಿಸುತ್ತಿರುವ ಶ್ರೀ ಶಿರಡಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ ಚಿತ್ರದುರ್ಗ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಬಿ. ಮಲ್ಲಿಕಾರ್ಜುನ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಇದರ ಕಾರ್ಯನಿರ್ವಾಹಕ ನಿರ್ದೇಶಕರಾದ ಬಿ.ಶಿವಸ್ವಾಮಿ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ವಸತಿ ಶಾಲೆಗಳಿಗೆ ಅಧಿಕೃತ ಟೆಂಡರುದಾರರಾದ ಶ್ರೀ ಶಿರಡಿ ಸಾಯಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರು ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ವಿತರಣೆ ಮಾಡದೆ ಇರುವ ಅಧಿಕೃತ ಮಾಹಿತಿ ತಿಳಿದು, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಚಿತ್ರದುರ್ಗ ಇವುಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳ ಪ್ರಾಂಶುಪಾಲರುಗಳಿAದ ಮಾಹಿತಿಹಕ್ಕು ಅಡಿಯಲ್ಲಿ ಪಡೆದ ದೃಢೀಕೃತ ದಾಖಲೆಗಳನ್ನು ಪರಿಶೀಲನೆ ಮಾಡಿದಾಗ ಆಹಾರ ಸಾಮಾಗ್ರಿ ಸರಬರಾಜಿನಲ್ಲಿ ಹಲವಾರು ಲೋಪದೋಷಗಳು ಕಂಡು ಬಂದಿರುತ್ತವೆ.

ಆದ ಕಾರಣ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ನಾವು ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಪ್ರತ್ಯುತ್ತರವನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ಇರುವ ಕಾರಣ ದಿನಾಂಕ: 21-04-2026 ರಂದು ಜ್ಞಾಪನವನ್ನು ನೀಡಲಾಗಿತ್ತು. ಆದರೆ ಜ್ಞಾಪನ ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಚಿತ್ರದುರ್ಗ ದೂರು ಅರ್ಜಿಗೆ ಸಂಬAಧಿಸಿದAತೆ ತನಿಖಾ ವರದಿಯನ್ನಾಗಲಿ ಅಥವಾ ಪ್ರತ್ಯುತ್ತರವನ್ನಾಗಲಿ ನೀಡಿರುವುದಿಲ್ಲ.

ಈ ಬಗ್ಗೆ ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು ಇವರಿಗೆ ದೂರು ನೀಡಲಾಗಿತ್ತು. ಆದರೆ ಇವರು ಕೂಡ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಾಳೆ ʼನಿರಾಕಾರ ವಿಶ್ವಕರ್ಮʼ ಕೃತಿ ಬಿಡುಗಡೆ

Published

on

ಸುದ್ದಿದಿನ,ಬೆಂಗಳೂರು:ಕಾವ್ಯಸ್ಪಂದನ ಪ್ರಕಾಶನವು ಪ್ರಕಟಿಸಿರುವ ಪತ್ರಕರ್ತ, ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ʼನಿರಾಕಾರ ವಿಶ್ವಕರ್ಮʼ ಕೃತಿಯು ಸೆಪ್ಟೆಂಬರ್‌ 17ರಂದು ಬಿಡುಗಡೆಯಾಗಲಿದೆ. ಅಂದು ಬೆಳಗ್ಗೆ 10.30ಕ್ಕೆ ಮೈಸೂರು ಜಿಲ್ಲೆ, ಕೆ.ಆರ್.ನಗರ ತಾಲೂಕು ಆಡಳಿತ ಕಚೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತದ ಆಶ್ರಯ, ತಾಲೂಕು ವಿಶ್ವಕರ್ಮ ಸೇವಾ ಸಮಾಜ ಹಾಗೂ ತಾಲೂಕು ವಿಶ್ವಕರ್ಮ ಸಂಘದ ಜಂಟಿ ವತಿಯಿಂದ ಆಯೋಜಿಸಿರುವ ‘ವಿಶ್ವಕರ್ಮ ಜಯಂತಿ’ ಕಾರ್ಯಕ್ರಮದಲ್ಲಿ ಶಾಸಕರಾದ ಡಿ. ರವಿಶಂಕರ್‌ ಅವರು ಕೃತಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಹಶೀಲ್ದಾರ್‌ ಜಿ. ಸುರೇಂದ್ರ ಮೂರ್ತಿ ಅವರು ವಹಿಸಲಿದ್ದಾರೆ. ತಾಲೂಕು ವಿಶ್ವಕರ್ಮ ಸೇವಾ ಸಮಾಜದ ಅಧ್ಯಕ್ಷ ರೇವಣ್ಣ, ತಾಲೂಕು ವಿಶ್ವಕರ್ಮ ಸಂಘದ ಅಧ್ಯಕ್ಷ ವೇಣುಗೋಪಾಲ್‌ ಎನ್., ಪದಾಧಿಕಾರಿಗಳಾದ ಈಶ್ವರಾಚಾರ್‌, ಚೇತನ್‌ ಮೂರ್ತಿ ಸೇರಿದಂತೆ ವಿಶ್ವಕರ್ಮ ಸಮುದಾಯದ ಮುಖಂಡರು ಹಾಗೂ ತಾಲೂಕು ಆಡಳಿತದ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಶ್ರೀ ಕಾಳಿಕಾಂಬಾ ದೇವಾಲಯದಲ್ಲಿ ವಿಶ್ವಕರ್ಮ ಜಯಂತಿ ಪ್ರಯುಕ್ತ ವಿಶೇಷ ಪೂಜೆ ನೆರವೇರಲಿದ್ದು, ಬಳಿಕ ಅಲ್ಲಿಂದ ತಾಲೂಕು ಆಡಳಿತ ಕಚೇರಿಯವರೆಗೆ ಮೆರವಣಿಗೆ ನಡೆಯಲಿದೆ.

ವಿಶೇಷವೆಂದರೆ, ಪ್ರಕಾಶಕರು ಹಾಗೂ ಆಯೋಜಕರ ಆಸಕ್ತಿಯ ಮೇರೆಗೆ ‘ನಿರಾಕಾರ ವಿಶ್ವಕರ್ಮ’ ಕೃತಿಯನ್ನು ತಿಂಗಳ ಅಂತರದಲ್ಲಿ ಮೂರು ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಸೆಪ್ಟೆಂಬರ್‌ 17ರಂದು ಕೆ.ಆರ್.ನಗರದಲ್ಲಿ ಕೃತಿ ಬಿಡುಗಡೆಯಾದರೆ, ಸೆಪ್ಟೆಂಬರ್‌ 20ರಂದು ಬೆಂಗಳೂರಿನ ತಾತಗುಣಿಯ ವಿಶ್ವಕರ್ಮ ನಗರದಲ್ಲಿ ಕರ್ನಾಟಕ ರಾಜ್ಯ ವಿಶ್ವಕರ್ಮ ಮಹಾಮಂಡಳಿಯ ವತಿಯಿಂದ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಕೃತಿ ಲೋಕಾರ್ಪಣೆಗೊಳ್ಳಲಿದೆ. ಹಾಗೆಯೇ, ನವೆಂಬರ್‌ 22ರಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಕಾವ್ಯಸ್ಪಂದನ ಪ್ರಕಾಶನ ಏರ್ಪಡಿಸಿರುವ ಕಾರ್ಯಕ್ರಮದಲ್ಲಿಯೂ ಈ ಕೃತಿ ಬಿಡುಗಡೆಯಾಗಲಿದೆ.

ಮಾನವ ನಾಗರಿಕತೆಯ ಇತಿಹಾಸವನ್ನು ತೆರೆದರೆ, ಅದರ ಪ್ರತಿಯೊಂದು ಪುಟದ ಹಿಂದೆಯೂ ಶ್ರಮಿಸಿದ ಅನಾಮಿಕ ಕೈಗಳು ಕಾಣಿಸುತ್ತವೆ. ಆ ಕೈಗಳು ಕಲ್ಲನ್ನು ಕೆತ್ತಿ ದೇವಸ್ಥಾನವಾಗಿಸಿವೆ, ಕಬ್ಬಿಣವನ್ನು ಬಡಿದು ಆಯುಧವಾಗಿಸಿವೆ, ಮರಕ್ಕೆ ರೂಪ ಕೊಟ್ಟು ಬಾಗಿಲಾಗಿಸಿವೆ, ಮಣ್ಣಿಗೆ ಜೀವ ತುಂಬಿ ಮಡಕೆಯಾಗಿಸಿವೆ; ಹಾಗೆಯೇ ಬಣ್ಣಗಳ ಮೂಲಕ ಅಚ್ಚಳಿಯದ ಭಾವನೆಗಳನ್ನು ಮೂಡಿಸಿವೆ. ಆ ಸೃಷ್ಟಿಶೀಲ ಕೈಗಳಿಗೆ ಬಹುಶಃ ಇತಿಹಾಸದ ಅಧಿಕೃತ ಪುಟಗಳಲ್ಲಿ, ರಾಜ-ಮಹಾರಾಜರ ಕಥೆಗಳ ನಡುವೆ ದೊಡ್ಡ ಅಕ್ಷರಗಳಲ್ಲಿ ಹೆಸರು ಸಿಕ್ಕಿಲ್ಲದಿರಬಹುದು. ಆದರೆ ಅವರು ನಿರ್ಮಿಸಿದ ಕಲೆ, ಶಿಲ್ಪ, ವಾಸ್ತು, ಉಪಕರಣ ಮತ್ತು ಸೌಂದರ್ಯವೇ ನಮ್ಮ ನಾಗರಿಕತೆಯ ಉಸಿರಾಗಿ, ಜೀವಂತ ಸಾಕ್ಷಿಗಳಾಗಿ ಇಂದಿಗೂ ಉಳಿದಿವೆ. ಅಂತಹ ಸೃಜನಶೀಲ ಕೈಗಳ ಸಮೂಹ ಸ್ಮೃತಿಯನ್ನು, ಪರಂಪರೆಯನ್ನು ಮತ್ತು ಇತಿಹಾಸವನ್ನು ಅರಿಯುವ ಅರ್ಥಪೂರ್ಣ ಪ್ರಯತ್ನವನ್ನು ನಿರಾಕಾರ ವಿಶ್ವಕರ್ಮ ಕೃತಿಯಲ್ಲಿ ಲೇಖಕರಾದ ಚಂದ್ರಶೇಖರ ಗಂಧನಹಳ್ಳಿ ಅವರು ಮಾಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!

Published

on

ಆಗಸ್ಟ್ 2023 ರಿಂದ ಜುಲೈ 2026 ರವರೆಗೆ ₹28,759 ಕೋಟಿ ಸಬ್ಸಿಡಿ ಬಿಡುಗಡೆ; ಪ್ರತಿ ತಿಂಗಳು 200 ಯೂನಿಟ್ ಉಚಿತ ವಿದ್ಯುತ್‌ನಿಂದ ಕೋಟ್ಯಂತರ ಕುಟುಂಬಗಳ ಆರ್ಥಿಕ ಸಬಲೀಕರಣ

ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರ’ ಎಂಬ ಧ್ಯೇಯದೊಂದಿಗೆ ಆರಂಭವಾದ ಈ ಯೋಜನೆ ಇಂದು ಕೋಟ್ಯಂತರ ಕುಟುಂಬಗಳ ಬದುಕಿಗೆ ಬೆಳಕಾಗಿದೆ.

ಹೌದು! 2023ರ ಆಗಸ್ಟ್‌ನಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಪ್ರತಿ ತಿಂಗಳು 200 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಾಸಿಕ ಬಜೆಟ್‌ಗೆ ದೊಡ್ಡ ಆಸರೆಯಾಗಿದೆ ಎಂದೇ ಹೇಳಬಹುದು.

http://Visit : www.suddidina.com

ಗೃಹಜ್ಯೋತಿ ಯೋಜನೆಯ ಸಾಧನೆಯ ಗಿರಿ: 

ಇಂಧನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ರಾಜ್ಯದ್ಯಂತ ಬರೋಬ್ಬರಿ 1.65 ಕೋಟಿ. ಫಲಾನುಭವಿಗಳು ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದರೆ, ಸೇವಾಸಿಂಧು ಪೋರ್ಟಲ್‌ನಲ್ಲಿ ಒಟ್ಟು 1,76,69,368 ಜನರು ನೋಂದಾಯಿಸಿಕೊಂಡಿದ್ದರೆ. ಒಟ್ಟು 2,06,65,451 ಗೃಹಬಳಕೆ ವಿದ್ಯುತ್ ಗ್ರಾಹಕರಿದ್ದಾರೆ. ಅಂದರೆ ಶೇ.85ಕ್ಕಿಂತ ಹೆಚ್ಚು ಗ್ರಾಹಕರು ಈ ಯೋಜನೆಯಡಿ ನೋಂದಾಯಿಸಿಕೊಂಡು ಲಾಭ ಪಡೆಯುತ್ತಿದ್ದಾರೆ.

ಆರ್ಥಿಕವಾಗಿ ನೋಡುವುದಾದರೆ, 2023ರ ಆಗಸ್ಟ್‌ನಿಂದ 2026ರ ಜುಲೈ ವರೆಗೆ, ಕಳೆದ ಮೂರು ವರ್ಷಗಳಲ್ಲಿ ಸರ್ಕಾರವು ಫಲಾನುಭವಿಗಳಿಗೆ ಒಟ್ಟು ₹28,759.54 ಕೋಟಿ ರೂಪಾಯಿ ಸಬ್ಸಿಡಿ ಬಿಡುಗಡೆ ಮಾಡಿದೆ. ಇದು ಸರ್ಕಾರದ ಬದ್ಧತೆ ಮತ್ತು ಜನಪರ ಕಾಳಜಿಗೆ ಹಿಡಿದ ಕನ್ನಡಿಯಾಗಿದೆ.

ಕುಟುಂಬದ ಬಜೆಟ್‌ಗೆ ಆಸರೆ, ಉಜ್ವಲ ಭವಿಷ್ಯಕ್ಕೆ ಬುನಾದಿ:

ಪ್ರತಿ ತಿಂಗಳು 1000 ದಿಂದ 1500 ರೂಪಾಯಿಗಳವರೆಗೆ ವಿದ್ಯುತ್ ಬಿಲ್ ಕಟ್ಟುತ್ತಿದ್ದ ಸಾಮಾನ್ಯ ಕುಟುಂಬಗಳಿಗೆ ಈಗ ಆ ಹಣ ಸಂಪೂರ್ಣವಾಗಿ ಉಳಿತಾಯವಾಗುತ್ತಿದೆ. ಈ ಉಳಿತಾಯದ ಹಣವನ್ನು ಅವರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಇತರ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಗೃಹಿಣಿಯರಿಗೆ ಇದು ಆರ್ಥಿಕವಾಗಿ ದೊಡ್ಡ ನೆರವಾಗಿದೆ.

ಕೇವಲ ಉಚಿತ ವಿದ್ಯುತ್ ನೀಡುವುದಷ್ಟೇ ಅಲ್ಲ, ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದೇ ಈ ಯೋಜನೆಯ ಮುಖ್ಯ ಗುರಿಯಾಗಿದ್ದು, ರಾಜ್ಯದ ಜನರ ಜೀವನಮಟ್ಟ ಸುಧಾರಿಸಿದೆ. ಗೃಹ ಜ್ಯೋತಿ ಯೋಜನೆಯು ಕೇವಲ ಒಂದು ಯೋಜನೆಯಾಗಿ ಉಳಿಯದೆ, ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕುಟುಂಬಗಳನ್ನು ಈ ಯೋಜನೆಯಡಿ ತರಲು ಇಂಧನ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.

Continue Reading

Trending