ದಿನದ ಸುದ್ದಿ
ಸೇತುವೆಗೆ ಡಿಕ್ಕಿ ಹೊಡೆದು ಕಾರು ಹೊಳೆಗೆ ಬಿದ್ದ ಪ್ರಕರಣ : 400 ಮೀ. ದೂರದಲ್ಲಿ ಇಬ್ಬರ ಮೃತದೇಹ ಪತ್ತೆ
ಸುದ್ದಿದಿನ,ಮಂಗಳೂರು: ಕಡಬದಲ್ಲಿನ ಸೇತುವೆಗೆ ಡಿಕ್ಕಿ ಹೊಡೆದು ಕಾರು ಹೊಳೆಗೆ ಬಿದ್ದ ಪ್ರಕರಣದಲ್ಲಿ ನಾಪತ್ತೆಯಾಗಿದ್ದ ಇಬ್ಬರು ಯುವಕರಲ್ಲಿ ಮೃತದೇಹ ಇಂದು ಪತ್ತೆಯಾಗಿದೆ.
ಸೇತುವೆಯಿಂದ 400 ಮೀಟರ್ ದೂರದಲ್ಲಿ ಮೃತದೇಹ ಪತ್ತೆಯಾಗಿದೆ. ಹೊಳೆಗೆ ಅಡ್ಡಲಾಗಿ ಬಿದ್ದಿರುವ ಮರದಲ್ಲಿ ಮೃತದೇಹ ಸಿಲುಕಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾವೆ. ಮಳೆ ಕಡಿಮೆಯಾಗಿ ನೀರು ಇಳಿಕೆಯಾದ್ದರಿಂದ ಇಂದು ಮೃತದೇಹಗಳು ಸ್ಥಳೀಯರ ಕಣ್ಣಿಗೆ ಬಿದ್ದಿದ್ದಾವೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243