ದಿನದ ಸುದ್ದಿ
ನಾಲ್ಕನೇ ಮದುವೆಗೆ ಸಜ್ಜಾದ್ರು ನಟಿ ವನಿತಾ ವಿಜಯಕುಮಾರ್
ಸುದ್ದಿದಿನಡೆಸ್ಕ್:ಹಿರಿಯ ನಟ ವಿಜಯಕುಮಾರ್ ಮತ್ತು ಅವರ ಎರಡನೇ ಪತ್ನಿ ನಟಿ ಮಂಜುಳಾ ಅವರ ಹಿರಿಯ ಪುತ್ರಿ ವನಿತಾ ವಿಜಯಕುಮಾರ್. ತಮ್ಮ 15 ನೇ ವಯಸ್ಸಿನಲ್ಲಿಯೇ ತಮಿಳು ಸಿನಿಮಾದಲ್ಲಿ ನಾಯಕಿಯಾಗಿ ನಟಿಸುವ ಅವಕಾಶ ಪಡೆದರು.
ಆ ಸಾಲಿನಲ್ಲಿ ನಟ ವಿಜಯ್ ಜೊತೆಗೆ ವನಿತಾ ವಿಜಯಕುಮಾರ್ 1995 ರಲ್ಲಿ ನಟಿಸಿದ್ದ ‘ಚಂದ್ರಲೇಖಾ’ ಚಿತ್ರ ಮಿಶ್ರ ಪ್ರತಿಕ್ರಿಯೆ ಪಡೆದು ಸೋಲು ಕಂಡಿತು. ಇದಾದ ಬಳಿಕ ‘ಮಾಣಿಕ್ಯಂ’ ಚಿತ್ರದಲ್ಲಿ ನಟಿಸಿದ ವನಿತಾ ವಿಜಯಕುಮಾರ್, ತೆಲುಗು ಮತ್ತು ಮಲಯಾಳಂನಲ್ಲಿ ತಲಾ ಒಂದು ಚಿತ್ರದಲ್ಲಿ ಮಾತ್ರ ನಟಿಸಿದ್ದಾರೆ.
ಮೊದಲ ಪತಿಗೆ ವಿಚ್ಛೇದನ ನೀಡಿದ ಕೆಲವೇ ತಿಂಗಳಲ್ಲಿ ಆನಂದ್ ಜಯರಾಜನ್ ಎಂಬವರನ್ನು ಎರಡನೇ ಮದುವೆಯಾದರು ವನಿತಾ ವಿಜಯಕುಮಾರ್. ಎರಡನೇ ಪತಿಯ ಮೂಲಕ ಜಯನಿತಾ ಎಂಬ ಮಗಳು ವನಿತಾಗೆ ಜನಿಸಿದಳು. ಬಳಿಕ 2012 ರಲ್ಲಿ ಅವರಿಂದಲೂ ವಿಚ್ಛೇದನ ಪಡೆದರು. ಮತ್ತೆ ಸಿನಿಮಾದಲ್ಲಿ ನಟಿಸುತ್ತೇನೆ ಎಂದು ಹೇಳಿ.. ಅವರೇ ನಿರ್ಮಾಪಕರಾಗಿ ಕಣಕ್ಕಿಳಿದು ಮತ್ತೆ ಕಮ್ ಬ್ಯಾಕ್ ಕೊಟ್ಟ ಚಿತ್ರ ‘ಎಂಜಿಆರ್, ಶಿವಾಜಿ, ರಜನಿ, ಕಮಲ್’. ಈ ಚಿತ್ರವನ್ನು ನೃತ್ಯ ನಿರ್ದೇಶಕ ರಾಬರ್ಟ್ ಮಾಸ್ಟರ್ ನಿರ್ಮಿಸಿ ನಾಯಕನಾಗಿಯೂ ನಟಿಸಿದ್ದರು. ರಾಬರ್ಟ್ಗೆ ಜೋಡಿಯಾಗಿ ವನಿತಾ ನಟಿಸಿದ್ದರು.
ಈ ಪ್ರೇಮ ವಿವಾದ ವನಿತಾ ಅವರ ಜೀವನದಲ್ಲಿ ಅಂತ್ಯಗೊಂಡ ನಂತರ, ನಿಜ ಜೀವನದಲ್ಲಿ.. ಅವರ ಕುಟುಂಬದಿಂದಾಗಿ ಹಲವಾರು ಸಮಸ್ಯೆಗಳನ್ನು ಎದುರಿಸಬೇಕಾಯಿತು. ಆಸ್ತಿ ವಿಚಾರವಾಗಿ ನಡೆದ ಗಲಾಟೆ ವನಿತಾ ವಿಜಯಕುಮಾರ್ ಅವರನ್ನು ಕುಟುಂಬದಿಂದ ಸಂಪೂರ್ಣವಾಗಿ ದೂರ ಮಾಡಿತು. ಒಂದು ಹಂತದಲ್ಲಿ ಆರ್ಥಿಕವಾಗಿ ಹಲವು ಕಷ್ಟಗಳನ್ನು ಅನುಭವಿಸುತ್ತಿದ್ದ ವನಿತಾ ವಿಜಯಕುಮಾರ್ ಅವರಿಗೆ ಮತ್ತೆ ಬೆಳ್ಳಿತೆರೆಗೆ ಮರಳಲು ಅವಕಾಶ ಮಾಡಿಕೊಟ್ಟಿದ್ದು, ಬಿಗ್ ಬಾಸ್ ಕಾರ್ಯಕ್ರಮ.
ಈ ಚಾನೆಲ್ ಸಂಬಂಧ ಪೀಟರ್ ಪಾಲ್ ಎಂಬುವವರೊಂದಿಗೆ ಸ್ನೇಹ ಬೆಳೆಸಿದ್ದು, ಇಬ್ಬರ ನಡುವೆ ಮೂಡಿದ ಪ್ರೇಮ 2020 ರಲ್ಲಿ ಮದುವೆಯಲ್ಲಿ ಕೊನೆಗೊಂಡಿತು. ಕ್ರಿಶ್ಚಿಯನ್ ಸಂಪ್ರದಾಯದಂತೆ ಮನೆಯಲ್ಲೇ ನಡೆದ ಈ ಮದುವೆ ಸರಿಯಾಗಿ ನೋಂದಣಿಯಾಗಲಿಲ್ಲ. ಇನ್ನು ಪೀಟರ್ ಪಾಲ್ ಅವರ ಕುಡಿತದ ಚಟದಿಂದಾಗಿ ಮೂರೇ ತಿಂಗಳಲ್ಲಿ ವನಿತಾ ವಿಜಯಕುಮಾರ್ ಅವರಿಂದ ದೂರವಾದರು. ಇದಾದ ಬಳಿಕ ತಮ್ಮ ಸಿನಿಮಾ ಜೀವನದತ್ತಲೇ ಗಮನ ಹರಿಸಿರುವ ವನಿತಾ, ಸತತವಾಗಿ ಹಲವು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗೆ ಪ್ರಶಾಂತ್ ನಟನೆಯ ‘ಅಂಧಗನ್’ ಚಿತ್ರದಲ್ಲಿಯೂ ಅವರ ಅಭಿನಯ ಮೆಚ್ಚುಗೆ ಗಳಿಸಿತು.
ವಿವಾದಗಳಿಗೆ ಹೆಸರಾಗಿರುವ ವನಿತಾ ವಿಜಯಕುಮಾರ್, ಈಗ ನಾಲ್ಕನೇ ಮದುವೆಗೆ ಸಿದ್ಧರಾಗಿದ್ದಾರಾ ಎಂಬ ಅನುಮಾನ ಮೂಡಿದೆ. ಅದೇನೆಂದರೆ ‘ಎಂಜಿಆರ್ ಶಿವಾಜಿ ರಜನಿ ಕಮಲ್’ ಚಿತ್ರದಲ್ಲಿ ನಟಿಸುವಾಗ ತಮ್ಮೊಂದಿಗೆ ಪ್ರೇಮ ಸುದ್ದಿಯಲ್ಲಿ ಸಿಲುಕಿಕೊಂಡಿದ್ದ ಬಿಗ್ ಬಾಸ್ ಸೆಲೆಬ್ರಿಟಿ ರಾಬರ್ಟ್ ಮಾಸ್ಟರ್ಗೆ.. ಬೀಚ್ನಲ್ಲಿ, ಬಿಕಿನಿ ತೊಟ್ಟು ಮಂಡಿಯೂರಿ ಪ್ರಪೋಸ್ ಮಾಡಿದ್ದಾರೆ. ಇದೇ ವೇಳೆ ಇದಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 5 ರಂದು ಮಹತ್ವದ ಮಾಹಿತಿ ಹೊರಬೀಳಲಿದೆ ಎನ್ನಲಾಗುತ್ತಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | 18 ನೇ ವಾರ್ಡ್ ನಲ್ಲಿ ಕೈ ಅಭ್ಯರ್ಥಿ ಸಮರ್ಥ ಶಾಮನೂರು ಪ್ರಚಾರ
ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಸಮರ್ಥ್ ಶಾಮನೂರು ಅವರು ಮಂಗಳವಾರ 18 ನೇ ವಾರ್ಡ್ ವ್ಯಾಪ್ತಿಯಲ್ಲಿ ಅಬ್ಬರ ಪ್ರಚಾರ ನಡೆಸಿದರು.
ನಗರದ ಬಾರ್ ಲೈನ್ ದರ್ಗಕ್ಕೆ ತೆರಳಿ ಚಾದರ ಅರ್ಪಿಸಿದ ಸಮರ್ಥ ಶಾಮನೂರು ಅವರಿಗೆ ಮುಸ್ಲಿಂ ಸಮಾಜದ ಬಾಂಧವರು ಆತ್ಮೀಯವಾಗಿ ಸನ್ಮಾನಿಸಿದರು. ಬಳಿಕ ಅಲ್ಲಿಂದ ಪ್ರಚಾರವನ್ನು ಆರಂಭಿಸಿದ ಅವರು ಎಂ.ಬಿ ಕೇರಿ, ಮಟನ್ ಮಾರ್ಕೇಟ್, ಗಡಿಯಾರ ಕಂಬ, ಸ್ವಾಗೇರ್ ಪೇಟೆ, ಹೊಂಡದ ರಸ್ತೆ, ಕಾಯಿಪೇಟೆಯ ಮನೆ ಮನೆಗೆ ತೆರಳಿ ಮತಯಾಚಿಸಿದರು.
ಕಾಂಗ್ರೆಸ್ ಪಕ್ಷದ ಮುಖಂಡರಾದ ನರಸಿಂಹಪ್ಪ, ರವಿಕುಮಾರ್, ಕಾಶಿನಾಥ್ ಅವರ ಮನೆಗೆ ಅಭ್ಯರ್ಥಿ ಸಮರ್ಥ ಶಾಮನುರು ಅವರು ಭೇಟಿ ನೀಡಿದಾಕ್ಷಣ ಕುಟುಂಬಸ್ಥರು ದಿವಂಗತರಾದ ಡಾ.ಶಾಮನೂರು ಶಿವಶಂಕರಪ್ಪ ಅವರನ್ನು ನೆನೆದು ಭಾವುಕರಾದರು. ಶಾಮನೂರು ಸಮರ್ಥ ಅವರಿಗೆ ದಕ್ಷಿಣ ಕ್ಷೇತ್ರದಲ್ಲಿ ಪ್ರಚಂಡ ಬಹುಮತವನ್ನು ನೀಡಿ ಗೆಲ್ಲಿಸುತ್ತೇವೆ ಎಂದು ಮತದಾರರು ಅಭಿಪ್ರಾಯ ವ್ಯಕ್ತಪಡಿಸಿದರು.
ಸ್ಥಳೀಯ ಮುಖಂಡರಾದ ಚಂದ್ರ ಶೇಖರ್, ಸೋಗಿ ಶಾಂತಕುಮಾರ್, ಪ್ರವೀಣ್ ರಾವ್, ಬಕ್ಕೇಶ್, ಪರಮೇಶ್, ಜಯರಾಜ್, ಹನುಮಂತ್, ರಾಘವೇಂದ್ರ, ಭೀಮಣ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕರ್ನಾಟಕ ಜಾಹೀರಾತು ನೀತಿಗೆ ಸಂಪಾದಕರ ವಿರೋಧ ; ಸಿಎಂಗೆ ಮನವಿ
ನೀತಿಯನ್ನು ಪರಿಶೀಲಿಸುವ ಭರವಸೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಸುದ್ದಿದಿನ,ದಾವಣಗೆರೆ: ಕರ್ನಾಟಕ ಜಾಹೀರಾತು ನೀತಿ-2026 ರಲ್ಲಿ ಪತ್ರಿಕೆಗಳಿಗೆ ಮಾರಕವಾದ ನಿಯಮಗಳನ್ನು ಕೈಬಿಡುವಂತೆ ಕೋರಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ದಾವಣಗೆರೆ ಜಿಲ್ಲಾ ವರದಿಗಾರರ ಕೂಟದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸೋಮವಾರ ಮಧ್ಯಾಹ್ನ ನಗರದ ಎಂ.ಬಿ.ಎ ಗ್ರೌಂಡ್ ಹೆಲಿಪ್ಯಾಡ್ ನಲ್ಲಿ ಮನವಿ ಸಲ್ಲಿಸಲಾಯಿತು.
ರಾಜ್ಯದಲ್ಲಿ ಜಾರಿಗೆ ತರಲು ಹೊರಟಿರುವ ಕರ್ನಾಟಕ ಜಾಹೀರಾತು ನೀತಿ-2026 ಜಿಲ್ಲಾ ಮಟ್ಟದ ಮತ್ತು ಪ್ರಾದೇಶಿಕ ಮಟ್ಟದ ಪತ್ರಿಕೆಗಳಿಗೆ ಮಾರಕವಾಗಿದ್ದು,ಇದರಿಂದ ಶತಶತಮಾನಗಳಿಂದ ಸಮಾಜದ ಮತ್ತು ಸರ್ಕಾರದ ಕೊಂಡಿಯಾಗಿ ಸೇವೆ ಮಾಡುತ್ತಿರುವ ಪತ್ರಿಕೆಗಳು ಮುಚ್ಚುತ್ತವೆ. ಯಾವುದೇ ಕಾರಣಕ್ಕೂ ಪತ್ರಿಕೆಗಳಿಗೆ ಮಾರಕವಾಗುವ ನಿಯಮಗಳನ್ನು ಅಳವಡಿಸದೇ ಪತ್ರಿಕೆಗಳ ಏಳಿಗೆಗೆ ಪೂರಕವಾದ ಅಂಶಗಳನ್ನು ಸೇರಿಸಿ ಕರ್ನಾಟಕ ಜಾಹೀರಾತು ನೀತಿಯನ್ನು ಜಾರಿಗೆ ತರಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ , ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರಿಗೆ ಮನವರಿಕೆ ಮಾಡಿಕೊಡಲಾಯಿತು.
ಸಂಘಗಳ ಮನವಿ ಸ್ವೀಕರಿಸಿದ ಮುಖ್ಯಮಂತ್ರಿಗಳು ಜಾಹೀರಾತು ನೀತಿ ಪರಿಶೀಲಿಸುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯಾಧ್ಯಕ್ಷರಾದ ಎ.ಸಿ.ತಿಪ್ಪೇಸ್ವಾಮಿ, ಜಿಲ್ಲಾ ಘಟಕದ ಅಧ್ಯಕ್ಷರಾದ ಸುರೇಶ್ ಆರ್ ಕುಣೆಬೆಳಕೆರೆ, ಖಜಾಂಜಿ ಶಿವಮೂರ್ತಿ ಟಿ.ಜಿ , ರಾಜ್ಯ ಸಂಘದ ನಾಮನಿರ್ದೇಶನ ಸದಸ್ಯ ಕೆ.ಜೈಮುನಿ ಮತ್ತು
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕರಾದ ಇ.ಎಂ.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಬದ್ರಿನಾಥ್, ಖಜಾಂಚಿ ಜೆ.ಎಸ್.ವೀರೇಶ್ ಹಾಗೂ ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷರಾದ ನಾಗರಾಜ ಬಡದಾಳ್ , ಹಿರಿಯ ಪತ್ರಕರ್ತರಾದ ಕೆ.ಏಕಾಂತಮ್ಮ, ಬಿ.ಎನ್.ಮಲ್ಲೇಶ್, ಮಲ್ಲಿಕಾರ್ಜುನ ಕಬ್ಬೂರು, ಆರ್.ಎಸ್.ತಿಪ್ಪೇಸ್ವಾಮಿ, ಕೊಟ್ರೇಶ್ ಅಣಬೂರುಮಠ, ನಿಂಗಪ್ಪ, ಗೋವಿಂದ ರಾಜು, ಫಕೃದ್ದೀನ್, ಆರ್.ರವಿ,ಬಿ.ವಾಸುದೇವ, ರಾಘವೇಂದ್ರ ರಾವ್, ವೇದಮೂರ್ತಿ,ನಿಂಗಪ್ಪ, ಪರಶುರಾಮ, ನಂದಕುಮಾರ್ ಮುಂತಾದವರು ಇದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಹರಿಹರ ನಗರಸಭೆಯು 04 ಸಂಖ್ಯಾತಿರಿಕ್ತ ಪೌರಕಾರ್ಮಿಕರ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಪ್ರಸ್ತುತ ಹರಿಹರ ನಗರಸಭೆಯಲ್ಲಿ ಕೆಲಸ ನಿರ್ವಹಿಸುತ್ತಿರುವವರು ಹಾಗೂ ಈ ನಿಯಮ ಜಾರಿಗೆ ಬಂದ ದಿನಾಂಕದಲ್ಲಿಯೂ ಸದರಿ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮಾರ್ಚ್ 11 ರಿಂದ ಅರ್ಜಿಗಳನ್ನು ಪಡೆದುಕೊಳ್ಳಬಹುದು.
ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಏಪ್ರಿಲ್ 10 ಕಡೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಅರ್ಜಿಗಳನ್ನು ಹರಿಹರ ನಗರಸಭೆ ಕಚೇರಿಯಿಂದ ಮಾತ್ರ ಪಡೆದುಕೊಳ್ಳಬೇಕು. ಹುದ್ದೆಗಳ ವರ್ಗೀಕರಣ, ಷರತ್ತುಗಳು, ವಯೋಮಿತಿ ಮತ್ತು ಅಗತ್ಯ ಅರ್ಹತೆಗಳ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕಚೇರಿ ಸಮಯದಲ್ಲಿ ಹರಿಹರ ನಗರಸಭೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ದಾವಣಗೆರೆಯ ಜಿಲ್ಲಾಧಿಕಾರಿಗಳು ಹಾಗೂ ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243


