Connect with us

ದಿನದ ಸುದ್ದಿ

ನಾಲ್ಕನೇ ಮದುವೆಗೆ ಸಜ್ಜಾದ್ರು ನಟಿ ವನಿತಾ ವಿಜಯಕುಮಾರ್

Published

on

ಸುದ್ದಿದಿನಡೆಸ್ಕ್:ಹಿರಿಯ ನಟ ವಿಜಯಕುಮಾರ್ ಮತ್ತು ಅವರ ಎರಡನೇ ಪತ್ನಿ ನಟಿ ಮಂಜುಳಾ ಅವರ ಹಿರಿಯ ಪುತ್ರಿ ವನಿತಾ ವಿಜಯಕುಮಾರ್. ತಮ್ಮ 15 ನೇ ವಯಸ್ಸಿನಲ್ಲಿಯೇ ತಮಿಳು ಸಿನಿಮಾದಲ್ಲಿ ನಾಯಕಿಯಾಗಿ ನಟಿಸುವ ಅವಕಾಶ ಪಡೆದರು.

ಆ ಸಾಲಿನಲ್ಲಿ ನಟ ವಿಜಯ್ ಜೊತೆಗೆ ವನಿತಾ ವಿಜಯಕುಮಾರ್ 1995 ರಲ್ಲಿ ನಟಿಸಿದ್ದ ‘ಚಂದ್ರಲೇಖಾ’ ಚಿತ್ರ ಮಿಶ್ರ ಪ್ರತಿಕ್ರಿಯೆ ಪಡೆದು ಸೋಲು ಕಂಡಿತು. ಇದಾದ ಬಳಿಕ ‘ಮಾಣಿಕ್ಯಂ’ ಚಿತ್ರದಲ್ಲಿ ನಟಿಸಿದ ವನಿತಾ ವಿಜಯಕುಮಾರ್, ತೆಲುಗು ಮತ್ತು ಮಲಯಾಳಂನಲ್ಲಿ ತಲಾ ಒಂದು ಚಿತ್ರದಲ್ಲಿ ಮಾತ್ರ ನಟಿಸಿದ್ದಾರೆ.

ಮೊದಲ ಪತಿಗೆ ವಿಚ್ಛೇದನ ನೀಡಿದ ಕೆಲವೇ ತಿಂಗಳಲ್ಲಿ ಆನಂದ್ ಜಯರಾಜನ್ ಎಂಬವರನ್ನು ಎರಡನೇ ಮದುವೆಯಾದರು ವನಿತಾ ವಿಜಯಕುಮಾರ್. ಎರಡನೇ ಪತಿಯ ಮೂಲಕ ಜಯನಿತಾ ಎಂಬ ಮಗಳು ವನಿತಾಗೆ ಜನಿಸಿದಳು. ಬಳಿಕ 2012 ರಲ್ಲಿ ಅವರಿಂದಲೂ ವಿಚ್ಛೇದನ ಪಡೆದರು. ಮತ್ತೆ ಸಿನಿಮಾದಲ್ಲಿ ನಟಿಸುತ್ತೇನೆ ಎಂದು ಹೇಳಿ.. ಅವರೇ ನಿರ್ಮಾಪಕರಾಗಿ ಕಣಕ್ಕಿಳಿದು ಮತ್ತೆ ಕಮ್ ಬ್ಯಾಕ್ ಕೊಟ್ಟ ಚಿತ್ರ ‘ಎಂಜಿಆರ್, ಶಿವಾಜಿ, ರಜನಿ, ಕಮಲ್’. ಈ ಚಿತ್ರವನ್ನು ನೃತ್ಯ ನಿರ್ದೇಶಕ ರಾಬರ್ಟ್ ಮಾಸ್ಟರ್ ನಿರ್ಮಿಸಿ ನಾಯಕನಾಗಿಯೂ ನಟಿಸಿದ್ದರು. ರಾಬರ್ಟ್‌ಗೆ ಜೋಡಿಯಾಗಿ ವನಿತಾ ನಟಿಸಿದ್ದರು.

ಈ ಪ್ರೇಮ ವಿವಾದ ವನಿತಾ ಅವರ ಜೀವನದಲ್ಲಿ ಅಂತ್ಯಗೊಂಡ ನಂತರ, ನಿಜ ಜೀವನದಲ್ಲಿ.. ಅವರ ಕುಟುಂಬದಿಂದಾಗಿ ಹಲವಾರು ಸಮಸ್ಯೆಗಳನ್ನು ಎದುರಿಸಬೇಕಾಯಿತು. ಆಸ್ತಿ ವಿಚಾರವಾಗಿ ನಡೆದ ಗಲಾಟೆ ವನಿತಾ ವಿಜಯಕುಮಾರ್ ಅವರನ್ನು ಕುಟುಂಬದಿಂದ ಸಂಪೂರ್ಣವಾಗಿ ದೂರ ಮಾಡಿತು. ಒಂದು ಹಂತದಲ್ಲಿ ಆರ್ಥಿಕವಾಗಿ ಹಲವು ಕಷ್ಟಗಳನ್ನು ಅನುಭವಿಸುತ್ತಿದ್ದ ವನಿತಾ ವಿಜಯಕುಮಾರ್ ಅವರಿಗೆ ಮತ್ತೆ ಬೆಳ್ಳಿತೆರೆಗೆ ಮರಳಲು ಅವಕಾಶ ಮಾಡಿಕೊಟ್ಟಿದ್ದು, ಬಿಗ್ ಬಾಸ್ ಕಾರ್ಯಕ್ರಮ.

ಈ ಚಾನೆಲ್ ಸಂಬಂಧ ಪೀಟರ್ ಪಾಲ್ ಎಂಬುವವರೊಂದಿಗೆ ಸ್ನೇಹ ಬೆಳೆಸಿದ್ದು, ಇಬ್ಬರ ನಡುವೆ ಮೂಡಿದ ಪ್ರೇಮ 2020 ರಲ್ಲಿ ಮದುವೆಯಲ್ಲಿ ಕೊನೆಗೊಂಡಿತು. ಕ್ರಿಶ್ಚಿಯನ್ ಸಂಪ್ರದಾಯದಂತೆ ಮನೆಯಲ್ಲೇ ನಡೆದ ಈ ಮದುವೆ ಸರಿಯಾಗಿ ನೋಂದಣಿಯಾಗಲಿಲ್ಲ. ಇನ್ನು ಪೀಟರ್ ಪಾಲ್ ಅವರ ಕುಡಿತದ ಚಟದಿಂದಾಗಿ ಮೂರೇ ತಿಂಗಳಲ್ಲಿ ವನಿತಾ ವಿಜಯಕುಮಾರ್ ಅವರಿಂದ ದೂರವಾದರು. ಇದಾದ ಬಳಿಕ ತಮ್ಮ ಸಿನಿಮಾ ಜೀವನದತ್ತಲೇ ಗಮನ ಹರಿಸಿರುವ ವನಿತಾ, ಸತತವಾಗಿ ಹಲವು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗೆ ಪ್ರಶಾಂತ್ ನಟನೆಯ ‘ಅಂಧಗನ್’ ಚಿತ್ರದಲ್ಲಿಯೂ ಅವರ ಅಭಿನಯ ಮೆಚ್ಚುಗೆ ಗಳಿಸಿತು.

ವಿವಾದಗಳಿಗೆ ಹೆಸರಾಗಿರುವ ವನಿತಾ ವಿಜಯಕುಮಾರ್, ಈಗ ನಾಲ್ಕನೇ ಮದುವೆಗೆ ಸಿದ್ಧರಾಗಿದ್ದಾರಾ ಎಂಬ ಅನುಮಾನ ಮೂಡಿದೆ. ಅದೇನೆಂದರೆ ‘ಎಂಜಿಆರ್ ಶಿವಾಜಿ ರಜನಿ ಕಮಲ್’ ಚಿತ್ರದಲ್ಲಿ ನಟಿಸುವಾಗ ತಮ್ಮೊಂದಿಗೆ ಪ್ರೇಮ ಸುದ್ದಿಯಲ್ಲಿ ಸಿಲುಕಿಕೊಂಡಿದ್ದ ಬಿಗ್ ಬಾಸ್ ಸೆಲೆಬ್ರಿಟಿ ರಾಬರ್ಟ್ ಮಾಸ್ಟರ್‌ಗೆ.. ಬೀಚ್‌ನಲ್ಲಿ, ಬಿಕಿನಿ ತೊಟ್ಟು ಮಂಡಿಯೂರಿ ಪ್ರಪೋಸ್ ಮಾಡಿದ್ದಾರೆ. ಇದೇ ವೇಳೆ ಇದಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 5 ರಂದು ಮಹತ್ವದ ಮಾಹಿತಿ ಹೊರಬೀಳಲಿದೆ ಎನ್ನಲಾಗುತ್ತಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.

ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ  ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

Continue Reading

ದಿನದ ಸುದ್ದಿ

ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ

Published

on

ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.

Continue Reading

Trending