Connect with us

ದಿನದ ಸುದ್ದಿ

ಕೋವಿಡ್ ಮಾರ್ಗಸೂಚಿ ಪಾಲಿಸದ ವ್ಯಾಪಾರ-ವಹಿವಾಟು ನಡೆಸುವ ಮಾಲೀಕರ ವಿರುದ್ದ ಕಠಿಣ ಕ್ರಮ : ಡಿಸಿ ಮಹಾಂತೇಶ ಬೀಳಗಿ

Published

on

ಸುದ್ದಿದಿನ,ದಾವಣಗೆರೆ:ದೊಡ್ಡ ದೊಡ್ಡ ಅಂಗಡಿಗಳು, ವ್ಯಾಪಾರ ವಹಿವಾಟು ಕೇಂದ್ರಗಳು, ಮದುವೆ ಮಂಟಪಗಳು, ಎಪಿಎಂಸಿ ಮಾರುಕಟ್ಟೆ, ಥಿಯೇಟರ್, ವಸತಿ ಶಾಲೆಗಳು ಸೇರಿದಂತೆ ಹೆಚ್ಚು ಜನ ಸೇರುವ ಸ್ಥಳಗಳಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಸರಿಸದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಎಚ್ಚರಿಕೆ ನೀಡಿದರು.

ಗುರುವಾರ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ವ್ಯಾಪಾರ ವಹಿವಾಟು, ಕಲ್ಯಾಣ ಮಂಟಪ, ಶೈಕ್ಷಣಿಕ ಸಂಸ್ಥೆ ಒಟ್ಟಾರೆ ಆರ್ಥಿಕ ಚಟುವಟಿಕೆ ನಡೆಸುವ ಮಾಲೀಕರುಗಳಿಗೆ ಕೋವಿಡ್ ಮಾರ್ಗಸೂಚಿಗಳ ಕಟ್ಟುನಿಟ್ಟಿನ ಅನುಸರಣೆ ಕುರಿತು ತಿಳಿಸಲು ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಈ ರೀತಿ ಜನ ಸೇರುವ ಅಂಗಡಿಗಳು, ಕೇಂದ್ರಗಳನ್ನೇ ‘ಸೂಪರ್ ಸ್ಪ್ರೆಡರ್’ ಎಂದು ಕರೆಯಲಾಗುತ್ತಿದ್ದು, ಇಲ್ಲಿ ನಿಯಂತ್ರಣ ಅಗತ್ಯವಾಗಿದೆ. ಆದ ಕಾರಣ ಈ ವಹಿವಾಟು, ಕೇಂದ್ರಗಳ ಮಾಲೀಕರು ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಕೋವಿಡ್ ನಿಯಂತ್ರಣಕ್ಕೆ ಸಹಕರಿಸಬೇಕೆಂದರು.

ಕಳೆದ ಸಾಲಿನ ಮಾರ್ಚ್ ಮಾಹೆಯಲ್ಲಿ ಕೇವಲ 02 ಪ್ರಕರಣಗಳಿದ್ದು ಮಾರ್ಚ್ 23 ಕ್ಕೆ ಲಾಕ್‍ಡೌನ್ ತಯಾರಿಯಾಗಿತ್ತು. ಜೊತೆಗೆ ಜನರು ಅತ್ಯಂತ ಎಚ್ಚರಿಕೆಯಿಂದ ಇದ್ದರು. ಆದರೆ ಪ್ರಸ್ತುತ 156 ಪ್ರಕರಣಗಳಿದ್ದರೂ ಜನರು ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಉಡಾಫೆಯಿಂದ ಎಲ್ಲಿ ಬೇಕೆಂದರಲ್ಲಿ ಓಡಾಡುತ್ತಿದ್ದು, ಮಾಸ್ಕ್ ಧರಿಸುತ್ತಿಲ್ಲ, ಅಂತರ ಕಾಪಾಡುತ್ತಿಲ್ಲ.

ಪರಿಸ್ಥಿತಿ ಇಂದು ಅತ್ಯಂತ ಗಂಭೀರವಾಗಿದೆ. ಕೋವಿಡ್ ವೈರಾಣು ರೂಪಾಂತರಗೊಂಡಿದ್ದು ಎರಡನೇ ಅಲೆಯಲ್ಲಿ ವೈರಾಣು ಅತ್ಯಂತ ವೇಗವಾಗಿ ಹರಡುತ್ತಿದೆಯಾದ್ದರಿಂದ ಯಾರೂ ಕೋವಿಡ್‍ನ್ನು ಹಗುರವಾಗಿ ತೆಗೆದುಕೊಳ್ಳಬಾರದು. ವ್ಯಾಪಾರ, ವಹಿವಾಟು, ಮದುವೆ ಮನೆ, ಶೈಕ್ಷಣಿಕ ಸಂಸ್ಥೆಗಳಲ್ಲಿ ಮಾಸ್ಕ್ ಇಲ್ಲದೇ ಓಡಾಡುತ್ತಿದ್ದಾರೆ. ಜನ ಸಾಯ್ತಾ ಇದ್ದರೂ ಜನರು ಮೈಮರೆತಿರುವುದು ಸಲ್ಲದು.

ಈ ಹಿನ್ನಲೆಯಲ್ಲಿ ವ್ಯಾಪಾರ ವಹಿವಾಟು ಮಾಡುವ ಎಲ್ಲ ಆರ್ಥಿಕ ಚಟುವಟಿಕೆಯ ಕೇಂದ್ರಗಳು ಮತ್ತು ಶೈಕ್ಷಣಿಕ ಸಂಸ್ಥೆಯವರು ಸರ್ಕಾರದ ಕೋವಿಡ್ ಸಮುಚಿತ ವರ್ತನೆಗಳು ಮತ್ತು ಮಾರ್ಗಸೂಚಿಗಳನ್ನು ಅನುಸರಿಸುವ ಮೂಲಕ ಜಿಲ್ಲಾಡಳಿತಕ್ಕೆ ಸಹಕರಿಸಬೇಕು. ಮಾರ್ಗಸೂಚಿಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವುದಂತೂ ಖಚಿತವಾಗಿದ್ದು, ಉಲ್ಲಂಘನೆ ಮಾಡಿದವರ ವಿರುದ್ದ ಕಾಯ್ದೆ, ನಿಯಮಗಳನ್ವಯ ಅತ್ಯಂತ ಕಠಿಣ ಕ್ರಮ ಜರುಗಿಸಲಾಗುವುದು ಎಂದರು.

ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಾಘವನ್ ಮಾತನಾಡಿ, ಕಳೆದ ಸಾಲಿನ ಮಾರ್ಚ್ 4 ರಿಂದ ಕೋವಿಡ್ ನಿಯಂತ್ರಣ ಚಟುವಟಿಕೆಯನ್ನು ಸರ್ಕಾರ ಅತ್ಯಂತ ಕಟ್ಟುನಿಟ್ಟಾಗಿ ಆರಂಭಿಸಿದ್ದು, ಇಲ್ಲಿಯವರೆಗೆ ಮುಂದುವರೆದಿದೆ. ಇದುವರೆಗೆ 27605 ಪಾಸಿಟಿವ್ ಪ್ರಕರಣ ಬಂದಿದ್ದು, ಒಟ್ಟು 264 ಸಾವು ಸಂಭವಿಸಿದೆ. ಕಳೆದ ಆಗಸ್ಟ್‍ನಲ್ಲಿ ಅತಿ ಹೆಚ್ಚು ಪಾಸಿಟಿವಿಟಿ ದರ ಅಂದರೆ ಶೇ16.30 ಇತ್ತು. ಸೋಂಕು ಹರಡುವ ಕೊಂಡಿ ತುಂಡು ಮಾಡುವ ಕಾರ್ಯವನ್ನು ಮಾಡುತ್ತಾ ಬಂದಿದ್ದು, ಈ ಮಾರ್ಚ್‍ನಲ್ಲಿ ಪಾಸಿಟಿವಿಟಿ ದರ 0.29 ಇದೆ. ಪ್ರಸ್ತುತ 160 ಪಾಸಿಟಿವ್ ಪ್ರಕರಣ ಇದ್ದು ಇದರಲ್ಲಿ ದಾವಣಗೆರೆ ತಾಲ್ಲೂಕಿನದ್ದೇ 124 ಪ್ರಕರಣ ಇದೆ ಹಾಗೂ ನಗರದ್ದೇ 106 ಪ್ರಕರಣ ಇದ್ದು ಗಂಭೀರತೆಯನ್ನು ಅರ್ಥ ಮಾಡಿಕೊಳ್ಳಬೇಕಿದೆ.

ಎಲ್ಲ ಖಾಸಗಿ ಆಸ್ಪತ್ರೆ, ಕ್ಲಿನಿಕ್‍ಗಳು ಐಎಲ್‍ಐ ಮತ್ತು ಎಸ್‍ಎಆರ್‍ಐ ಪ್ರಕರಣಗಳನ್ನು ಸರ್ಕಾರಿ ಆಸ್ಪತ್ರೆಗಳಿಗೆ ಕಳುಹಿಸಬೇಕು. ಹಾಗೂ ಎಲ್ಲ ಹೋಟೆಲ್, ಛತ್ರ, ವಸತಿ ಶಾಲೆ ಸೇರಿದಂತೆ ಹೆಚ್ಚು ಜನರು ಕೆಲಸ ಮಾಡುವ ಅಂಗಡಿಗಳು, ಹೋಟೆಲ್, ಶಾಲೆಗಳಲ್ಲಿ 15 ದಿನಗಳಿಗೊಮ್ಮೆ ಕೋವಿಡ್ ಪರೀಕ್ಷೆ ಮಾಡಿಸಬೇಕೆಂದರು.

ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹನುಮಂತರಾಯ ಮಾತನಾಡಿ, ಕೋವಿಡ್ ನಿಯಂತ್ರಣ ಹಿನ್ನೆಲೆಯ ಸರ್ಕಾರದ ಮಾರ್ಗಸೂಚಿಗಳನ್ನು ನಿರ್ಲಕ್ಷಿಸುತ್ತಿರುವುದು ಸರಿಯಲ್ಲ. ಸ್ವಯಂ ನಿಯಂತ್ರಣ ಇಂದು ಅತಿ ಮುಖ್ಯವಾಗಿದೆ. ವೈಯಕ್ತಿಕವಾಗಿ ಕೋವಿಡ್ ವಿರುದ್ದ ಹೋರಾಡಬೇಕಿರುವ ಇಂದಿನ ಸ್ಥಿತಿಯಲ್ಲಿ ವ್ಯಾಪಾರು ವಹಿವಾಟು ಇತರೆ ಸಂಸ್ಥೆಗಳು ಸಹಕರಿಸಬೇಕು.

ಕೋವಿಡ್ ಬಗ್ಗೆ ಎಲ್ಲರಲ್ಲಿ ಜಾಗೃತಿ ಇದ್ದು, ಮಾರ್ಗಸೂಚಿ ಉಲ್ಲಂಘಿಸಿದರೆ ಕ್ರಮ ನಿಶ್ಚಿತ ಎಂದ ಅವರು ಕೋವಿಡ್ ನಿಯಮಗ ಪರಿಣಾಮಕಾರಿ ಜಾರಿಗೆ ಶೀಘ್ರದಲ್ಲೇ ವಾರ್ಡುವಾರು ಮಾರ್ಷಲ್‍ಗಳನ್ನು ನೇಮಕ ಮಾಡಿ ಮಾಸ್ಕ್ ಧರಿಸದಿದ್ದರೆ ರೂ.250, ನಿಗದಿತ ಜನರಿಗಿಂತ ಹೆಚ್ಚು ಸೇರಿದರೆ ಹಾಲ್, ಮಂದಿರಗಳ ಮಾಲೀಕರಿಗೆ, ಆಯೋಜಕರಿಗೆ ರೂ.5 ರಿಂದ 10 ಸಾವಿರ ದಂಡ ಜೊತೆಗೆ ವಿಪತ್ತು ನಿರ್ವಹಣಾ ಕಾಯ್ದೆಯನ್ವಯ ಕ್ರಮ ವಹಿಸಲಾಗುವುದು ಎಂದ ಎಚ್ಚರಿಕೆ ನೀಡಿದರು.

ಮೊನ್ನೆವರೆಗೆ ಸಿಂಗಲ್ ಡಿಜಿಟ್‍ನಲ್ಲಿದ್ದ ಪ್ರಕರಣ ಇಂದು ಡಬಲ್ ಡಿಜಿಟ್ ಆಗಿದ್ದು ಮೂರಂಕಿಗೆ ತಲುಪುವ ಸಮಯ ದೂರವಿಲ್ಲ. ಆದ ಕಾರಣ ಎಲ್ಲರೂ ಎಚ್ಚೆತ್ತುಕೊಂಡು ಕೋವಿಡ್ ನಿಯಮ ಪಾಲಿಸಬೇಕು ಎಂದರು.

ಜಿ.ಪಂ ಸಿಇಓ ಡಾ.ವಿಜಯ ಮಹಾಂತೇಶ ದಾನಮ್ಮನವರ್ ಮಾತನಾಡಿ, ಗಡಿ ಜಿಲ್ಲೆಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ವೇಗವಾಗಿ ಹೆಚ್ಚುತ್ತಿದೆ ಹಾಗೂ ಸಾವುಗಳೂ ಸಂಭವಿಸುತ್ತಿವೆ. ಮಧ್ಯ ಕರ್ನಾಟಕದಲ್ಲಿ ಇನ್ನೂ ಅಷ್ಟು ಪ್ರಕರಣ ಇಲ್ಲ. ಮೊದಲನೇ ನಮಗೆ ಸೂಚನೆ ಸಿಕ್ಕಿದೆ.

ಹಾಗಾಗಿ ನಾವೆಲ್ಲ ಎಚ್ಚೆತ್ತಕೊಳ್ಳಬೇಕು. ಕೇವಲ ವ್ಯಾಪಾರ ವಹಿವಾಟು, ಕೆಲಸದ ಸ್ಥಳಗಳಲ್ಲಿ ಮಾತ್ರವಲ್ಲ ಮನೆಗಳಲ್ಲೂ ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಅನುಸರಿಸಬೇಕು. ರೂಪಾಂತರಿ ವೈರಾಣು ವೇಗವಾಗಿ ಹರಡುತ್ತಿದ್ದು, ಸ್ವಯಂ ನಿಯಂತ್ರಣದಲ್ಲಿ ನಮ್ಮ ಪಾತ್ರ ದೊಡ್ಡದಿದೆ ಎಂದರು.

ಜಿಲ್ಲಾಧಿಕಾರಿಗಳು ಮಾತನಾಡಿ, ಕಲ್ಯಾಣ ಮಂಟಪದ್ಲಿ 200 ಕ್ಕಿಂತ ಹೆಚ್ಚು ಜನ ಸೇರಿದ್ರೆ ಮಂಟಪದ ಮಾಲೀಕರು, ಹೆಣ್ಣು ಮತ್ತು ಗಂಡಿನ ಕಡೆಯವರಿಂದ ಸಹ ದಂಡವನ್ನು ಪಾಲಿಕೆಯವರು ಮಾಡುತ್ತಾರೆ. ಜನ ಸೇರುವಲ್ಲಿ ಕಠಿಣ ಕ್ರಮ ಕೈಗೊಳ್ಳಲು ಮಾರ್ಷಲ್ ನೇಮಕ ಮಾಡಲಾಗುವುದು.

ಸೂಪರ್ ಸ್ಪ್ರೆಡರ್‍ಗಳಾದ ಕಲ್ಯಾಣ ಮಂಟಪ, ವಸತಿ ಶಾಲೆ, ಅಂಗಡಿಗಳಲ್ಲಿ, ಥಿಯೇಟರ್ ಇತರೆಡೆ ಕಟ್ಟುನಿಟ್ಟಿನ ಕ್ರಮ ವಹಿಸಲಾಗುವುದು. ಕೆಪಿಎಂಇ ಅಡಿ ಬರುವ ಎಲ್ಲ ಖಾಸಗಿ ಆಸ್ಪತ್ರೆ ಕ್ಲಿನಿಕ್‍ನವರು ಕೆಮ್ಮು, ಶೀತ ಜ್ವರ ಇದ್ದರೆ ಕೋವಿಡ್ ಟೆಸ್ಟ್ ಆದರೆ ಮಾತ್ರ ಚಿಕಿತ್ಸೆ ಎಂದು ಕಡ್ಡಾಯಗೊಳಿಸಬೇಕು. ಜಿಲ್ಲೆಯ ಎಲ್ಲಾ ಸರ್ಕಾರಿ ಕೇಂದ್ರಗಳಲ್ಲಿ ಫಿವರ್ ಕ್ಲಿನಿಕ್ ಇದ್ದು ಅಲ್ಲಿಗೆ ಕಳುಹಿಸಬೇಕು.

ಹಾಗೂ ಆರ್ಥಿಕ ಚಟುವಟಿಕೆ ನಡೆಸುವವರು ಸರ್ಕಾರ ಹೊರಡಿಸಿರುವ ಎಸ್‍ಓಪಿ ಪ್ರಕಾರ ಕಾರ್ಯ ನಿರ್ವಹಿಸಬೇಕು. ನಿರ್ಲಕ್ಷ್ಯ ಭಾವ ಸಲ್ಲದು. ಏಪ್ರಿಲ್ 1 ರಿಂದ 45 ವರ್ಷ ತುಂಬಿದವರೆಲ್ಲ ಕೋವಿಡ್ ಲಸಿಕೆ ಹಾಕಿಸಿಕೊಳ್ಳಬೇಕು. ಹಳೇ ದಾವಣಗೆರೆ ಭಾಗದಲ್ಲೇ ಹೆಚ್ಚು ಪ್ರಕರಣಗಳು ಇತ್ತು. ಇಲ್ಲಿಯ ಜನರೇ ಲಸಿಕೆಗೆ ಮುಂದಾಗುತ್ತಿಲ್ಲ. ಅಲ್ಲಿನ ಸ್ಥಳೀಯ ನಾಯಕರು ಲಸಿಕೆ ಪಡೆಯಲು ಜನರ ಮನವೊಲಸಿಬೇಕು ಎಂದರು.

ವಿವಿಧ ಕಲ್ಯಾಣ ಮಂಟಪಗಳ ಮಾಲೀಕರು ಜನರಿಗೆ ನಿಯಮಗಳನ್ನು ತಿಳಿಸಿ ಹೇಳಿದರೂ ಕೇಳುತ್ತಿಲ್ಲವೆಂದಾಗ ಡಿಸಿ, ನಿಮ್ಮ ವಿರುದ್ದ ಕ್ರಮ ಕೈಗೊಳ್ಳುತ್ತೇವೆ. ನೀವೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಒಂದು ಪಕ್ಷ ಸಹಾಯ ಬೇಕಾದಲ್ಲಿ ಎಸ್‍ಪಿ ಹಾಗೂ ಪಾಲಿಕೆ ಸಹಾಯ ಪಡೆದುಕೊಳ್ಳುವಂತೆ ತಿಳಿಸಿದರು.

ಸಭೆಯಲ್ಲಿ ಎಡಿಸಿ ಪೂಜಾರ ವೀರಮಲ್ಲಪ್ಪ, ಎಸಿ ಮಮತಾ ಹೊಸಗೌಡರ್ ಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕಿ ನಜ್ಮಾ, ಡಿಹೆಚ್‍ಓ ಡಾ.ನಾಗರಾಜ್, ಜಿಲ್ಲಾ ವರ್ತಕರ ಸಂಘದ, ಐಎಂಎ, ಛೇಂಬರ್ ಆಫ್ ಕಾಮರ್ಸ್, ಸಿನೆಮಾ ಥಿಯೇಟರ್, ವಸತಿ ಶಾಲೆಗಳ, ಬಟ್ಟೆ ಅಂಗಡಿಗಳ ಸಂಘ, ಎಪಿಎಂಸಿ ವರ್ತಕರ ಸಂಘದ, ಲಿಕ್ಕರ್ ಮತ್ತು ವೈನ್‍ಸಂಘದ, ಬೀದಿ ಬದಿ ವ್ಯಾಪಾರಿಗಳ ಸಂಘ ಸೇರಿದಂತೆ ವಿವಿಧ ರೀತಿಯ ಆರ್ಥಿಕ ಚಟುವಟಿಕೆ ಮಾಡುವಂತಹ ಸಂಸ್ಥೆಗಳ ಸಂಘಗಳ ಪದಾಧಿಕಾರಿಗಳು ಹಾಜರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸ್ವಾತಂತ್ರ್ಯವನ್ನು ಗೌರವಿಸಿ, ಭವಿಷ್ಯವನ್ನು ಪ್ರೇರೇಪಿಸೋಣ: ವಿವಿಐಎಸ್‌ನಲ್ಲಿ ಅರ್ಥಪೂರ್ಣ ಸ್ವಾತಂತ್ರ್ಯೋತ್ಸವ

Published

on

ಸುದ್ದಿದಿನ,ಬೆಂಗಳೂರು: ವಿಶ್ವ ವೆಂಕಟೇಶ್ವರ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್‌ನಲ್ಲಿ “ಸ್ವಾತಂತ್ರ್ಯವನ್ನು ಗೌರವಿಸಿ, ಭವಿಷ್ಯವನ್ನು ಪ್ರೇರೇಪಿಸೋಣ” ಎಂಬ ಆಶಯದೊಂದಿಗೆ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಸಂಸ್ಥೆಯ ಅಧ್ಯಕ್ಷರಾದ ಶ್ರೀ ಕಟ್ಟಾ ಬಾಲಾಜಿ ಬಾಬು ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ತಮ್ಮ ಪ್ರೇರಣಾದಾಯಕ ಭಾಷಣದಲ್ಲಿ ಅವರು, ದೇಶಭಕ್ತಿ ಕೇವಲ ಘೋಷಣೆಗಳಿಗೆ ಸೀಮಿತವಾಗದೆ, ಪ್ರತಿಯೊಬ್ಬರೂ ತಮ್ಮ ಮೂಲಭೂತ ಕರ್ತವ್ಯಗಳನ್ನು ಅರಿತು, ತಮ್ಮ ಸಾಮರ್ಥ್ಯ, ಆಸಕ್ತಿ ಹಾಗೂ ಅಭಿರುಚಿಗೆ ತಕ್ಕಂತೆ ರಾಷ್ಟ್ರದ ಪ್ರಗತಿಗೆ ಕೊಡುಗೆ ನೀಡುವುದರಲ್ಲಿ ಅಡಗಿದೆ ಎಂದು ಕರೆ ನೀಡಿದರು. ಪ್ರಾಮಾಣಿಕ ಪರಿಶ್ರಮ ಮತ್ತು ಜವಾಬ್ದಾರಿಯುತ ನಾಗರಿಕತ್ವವೇ ಬಲಿಷ್ಠ ಭಾರತದ ನಿರ್ಮಾಣಕ್ಕೆ ಅಡಿಪಾಯ ಎಂದರು.

ವಿದ್ಯಾರ್ಥಿಗಳ ಮನೋಜ್ಞ ಸಾಂಸ್ಕೃತಿಕ ಕಾರ್ಯಕ್ರಮಗಳು, ದೇಶಭಕ್ತಿ ಪ್ರದರ್ಶನಗಳು ಹಾಗೂ ಶಿಸ್ತುಬದ್ಧ ಮೆರವಣಿಗೆಗಳು ಕಾರ್ಯಕ್ರಮಕ್ಕೆ ಮೆರುಗು ನೀಡಿದವು. ಕೊಡಿಪಾಳ್ಯ ಮತ್ತು ಕೆಂಗೇರಿಯಲ್ಲಿ 445 ಮೀಟರ್ ಇರುವ ವಿಶೇಷ ಧ್ವಜದೊಂದಿಗೆ ವಿದ್ಯಾರ್ಥಿಗಳ ಮೆರವಣಿಗೆ ಗಮನ ಸೆಳೆಯಿತು. ಶತಪ್ರತಿಶತ ಫಲಿತಾಂಶ ಸಾಧಿಸಿದ ಬೋಧಕ ಸಿಬ್ಬಂದಿಯನ್ನು ಮತ್ತು ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ನೇರ ಪ್ರಸಾರವೂ ನಡೆಯಿತು. 2,500 ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗೆ ವಿಶೇಷ ಮಧ್ಯಾಹ್ನದ ಊಟ ಮತ್ತು ಸಿಹಿತಿಂಡಿ ವ್ಯವಸ್ಥೆ ಮಾಡಲಾಗಿದ್ದು, ಒಗ್ಗಟ್ಟು ಮತ್ತು ದೇಶಪ್ರೇಮದ ಸಂಭ್ರಮಕ್ಕೆ ಮತ್ತಷ್ಟು ಮೆರುಗು ನೀಡಿತು.

ಈ ಸಂದರ್ಭದಲ್ಲಿ ವಿವಿಐಎಸ್ ನ ಅಕಾಡೆಮಿಕ್ ಅಡ್ವೈಸರ್ ಡಾ. ರಾಜೇಶ್ವರಿ ದತ್ತಾತ್ರಿ, ವಿವಿ ವಿದ್ಯಾಸಂಸ್ಥೆಯ ಡೀನ್ ಶ್ರೀ ಕಿಶೋರ್ ಕಟ್ಟ, ಪ್ರಾಂಶುಪಾಲೆ ಶ್ರೀಮತಿ ಲಕ್ಷ್ಮಿ ಟಿ.ಎನ್, ಕೆಪಿಸಿ ಪಿಯು ಕಾಲೇಜು ಪ್ರಾಂಶುಪಾಲರಾದ ಡಾ. ಐ. ಚೆನ್ನಾರೆಡ್ಡಿ, ಸಿಬಿಎಸ್‌ಇ ಪ್ರಾಂಶುಪಾಲರಾದ ಪ್ರೊ. ಪ್ರಹ್ಲಾದ, ಉಪಪ್ರಾಂಶುಪಾಲರಾದ ಶ್ರೀ ಮದನ್ ರಾಜ್, ಪ್ರಾಂಶುಪಾಲರಾದ ಡಾ. ಸುರೇಶ್ ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸ್ವಾತಂತ್ರ್ಯವೆಂದರೆ ಬರಿ ಹಕ್ಕಲ್ಲ ದೇಶದ ಬಗ್ಗೆ ಜವಾಬ್ದಾರಿ ಹೊಂದುವುದೂ ಕೂಡ : ಯೋಗೀಶ್ ಸಹ್ಯಾದ್ರಿ

Published

on

ಸುದ್ದಿದಿನ,ಚಿತ್ರದುರ್ಗ : ಸ್ವಾತಂತ್ರ್ಯವೆಂದರೆ ಕೇವಲ ಹಕ್ಕುಗಳ ಅನುಭವವಲ್ಲ, ದೇಶದ ಬಗ್ಗೆ ಜವಾಬ್ದಾರಿ ಹೊಂದುವುದೂ ಸಹ ಹೌದು. ನಮ್ಮ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನಗಳನ್ನು ಸದಾ ಸ್ಮರಿಸಬೇಕು. ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು, ಶಿಸ್ತು, ಪ್ರಾಮಾಣಿಕತೆ ಮತ್ತು ದೇಶಪ್ರೇಮವನ್ನು ಬೆಳೆಸಿಕೊಂಡು ರಾಷ್ಟ್ರದ ಭವಿಷ್ಯದ ಉತ್ತಮ ನಾಗರಿಕರಾಗಬೇಕು ರೋಟರಿ ಕ್ಲಬ್ ಆಫ್ ಚಿತ್ರದುರ್ಗ ಅಧ್ಯಕ್ಷರಾದ ರೊ. ಯೋಗೀಶ್ ಸಹ್ಯಾದ್ರಿ ತಿಳಿಸಿದರು.

ನಗರದ ರೋಟರಿ ವಿದ್ಯಾಲಯದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಸಂಭ್ರಮ, ಸಡಗರ ಹಾಗೂ ದೇಶಭಕ್ತಿಯ ವಾತಾವರಣದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಬಳಿಕ ಮಾತನಾಡಿದ ಅವರು ಮಾತನಾಡಿದರು.

ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತಿರುವುದು ಅನೇಕ ಮಹನೀಯರ ತ್ಯಾಗದ ಫಲ. ಮಹಾತ್ಮ ಗಾಂಧೀಜಿ, ನೇತಾಜಿ ಸುಭಾಷ್ ಚಂದ್ರ ಬೋಸ್, ಭಗತ್ ಸಿಂಗ್, ಸರ್ದಾರ್ ವಲ್ಲಭಭಾಯಿ ಪಟೇಲ್ ಸೇರಿದಂತೆ ಅಸಂಖ್ಯಾತ ಹೋರಾಟಗಾರರು ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಬದುಕನ್ನು ಅರ್ಪಿಸಿದ್ದಾರೆ. ಅವರ ತ್ಯಾಗವನ್ನು ಸ್ಮರಿಸುವುದರ ಜೊತೆಗೆ, ಅವರು ಕಂಡ ಕನಸಿನ ಭಾರತವನ್ನು ನಿರ್ಮಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.

ಸ್ವಾತಂತ್ರ್ಯ ಹೋರಾಟಗಾರರ ತ್ಯಾಗವನ್ನು ಸದಾ ಸ್ಮರಿಸಿ, ಏಕತೆ, ಶಿಸ್ತು, ಶಿಕ್ಷಣ ಮತ್ತು ಸೇವೆಯ ಮೂಲಕ ಶ್ರೇಷ್ಠ ಭಾರತವನ್ನು ನಿರ್ಮಿಸುವ ಸಂಕಲ್ಪವನ್ನು ವಿದ್ಯಾರ್ಥಿಗಳು ಮಾಡಬೇಕು ಎಂದು ಅವರು ಕರೆ ನೀಡಿದರು. ಎಲ್ಲಾ ವಿದ್ಯಾರ್ಥಿಗಳು ದೇಶದ ಹೆಮ್ಮೆ ಮತ್ತು ಭವಿಷ್ಯದ ಆಶಾಕಿರಣಗಳಾಗಲಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೊ. PHF. PDG. ಮಧುಪ್ರಸಾದ್ ಕೆ. ಅವರು ವಹಿಸಿದ್ದರು. ಅವರು ಮಾತನಾಡಿ, ಸ್ವಾತಂತ್ರ್ಯ ಹೋರಾಟಗಾರರ ಆದರ್ಶಗಳನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಶಿಕ್ಷಣದ ಜೊತೆಗೆ ಉತ್ತಮ ಮೌಲ್ಯಗಳು ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸಿಕೊಳ್ಳುವುದು ಇಂದಿನ ಯುವಜನತೆಯ ಕರ್ತವ್ಯವಾಗಿದೆ. ಸ್ವಾತಂತ್ರ್ಯ ನಮಗೆ ಹಕ್ಕುಗಳನ್ನು ನೀಡಿದಂತೆ ಕರ್ತವ್ಯಗಳನ್ನೂ ನೀಡಿದೆ. ಸಂವಿಧಾನವನ್ನು ಗೌರವಿಸುವುದು, ರಾಷ್ಟ್ರಧ್ವಜ ಮತ್ತು ರಾಷ್ಟ್ರಗೀತೆಯನ್ನು ಗೌರವಿಸುವುದು, ಪರಿಸರವನ್ನು ಸಂರಕ್ಷಿಸುವುದು, ಸಾರ್ವಜನಿಕ ಆಸ್ತಿಯನ್ನು ಕಾಪಾಡುವುದು ಹಾಗೂ ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಸಹಬಾಳ್ವೆಯನ್ನು ಬೆಳೆಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ ಎಂದು ಅವರು ಹೇಳಿದರು.

ಮುಖ್ಯ ಅತಿಥಿಗಳಾಗಿ ರೋಟರಿ ಟ್ರಸ್ಟ್ ನ ಖಜಾಂಚಿ ರೊ. ಸತ್ಯನಾರಾಯಣಾಚಾರ್,
ರೊ. ಜಿ.ಎ. ವಿಶ್ವನಾಥ್ ಬಾಬು, ರೋಟರಿ ಕ್ಲಬ್ ಆಫ್ ಚಿತ್ರದುರ್ಗದ ಸದಸ್ಯರು, ಹಾಗೂ ರೊ. ಶಂಕರಪ್ಪ, ಆಡಳಿತಾಧಿಕಾರಿ, ರೋಟರಿ ವಿದ್ಯಾಲಯ, ಉಪಸ್ಥಿತರಿದ್ದು , ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯ ದಿನಾಚರಣೆಯ ಮಹತ್ವವನ್ನು ತಿಳಿಸಿ, ದೇಶದ ಪ್ರಗತಿಯಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದಾಗಿದೆ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ತಮ್ಮದೇ ಆದ ರೀತಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಕುರಿತು ಭಾಷಣ ಮಾಡಲು ಅವಕಾಶ ನೀಡಲಾಗಿದ್ದು, ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ದೇಶಭಕ್ತಿ, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಹಾಗೂ ರಾಷ್ಟ್ರದ ಅಭಿವೃದ್ಧಿಯ ಕುರಿತು ತಮ್ಮ ವಿಚಾರಗಳನ್ನು ಹಂಚಿಕೊಂಡರು. ವಿದ್ಯಾರ್ಥಿಗಳ ಭಾಷಣಗಳು ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿದ್ದವು.

ವಿದ್ಯಾರ್ಥಿಗಳ ಪೋಷಕರು ಕೂಡ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮಕ್ಕಳನ್ನು ಪ್ರೋತ್ಸಾಹಿಸಿದರು. ಶಾಲೆಯ ಮುಖ್ಯ ಶಿಕ್ಷಕಿ ಉಮಾದೇವಿ ಹೆಚ್.ಎಂ. ಅವರು ಅತಿಥಿಗಳನ್ನು ಆತ್ಮೀಯವಾಗಿ ಸ್ವಾಗತಿಸಿ, ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು.

ಶಿಕ್ಷಕಿ ಜ್ಯೋತಿ ಆರ್. ಅವರು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರೂಪಿಸಿದರು. ಹಿರಿಯ ಶಿಕ್ಷಕಿ ಗೌರಮ್ಮ ಅವರು ವಂದನಾರ್ಪಣೆ ಸಲ್ಲಿಸಿ, ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ರೋಟರಿ ಪದಾಧಿಕಾರಿಗಳು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಕೃತಜ್ಞತೆ ಸಲ್ಲಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನವಿಲೇಹಾಳು | 80ನೇ ಸ್ವಾತಂತ್ರ್ಯ ದಿನಾಚರಣೆ ; ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ಸಿಹಿ ಹಂಚಿ ಸಂಭ್ರಮ

Published

on

ಸುದ್ದಿದಿನ,ದಾವಣಗೆರೆ: ಜಿಲ್ಲೆಯ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ, ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ನವಿಲೇಹಾಳು ಗ್ರಾಮದಲ್ಲಿ ಸಿಹಿ ಹಂಚುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮಸ್ಥರು ಹಾಗೂ ಸಾರ್ವಜನಿಕರಿಗೆ ಸಿಹಿ ವಿತರಿಸಿ, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರನ್ನು ಸ್ಮರಿಸಲಾಯಿತು. ಸ್ವಾತಂತ್ರ್ಯ ದಿನಾಚರಣೆಯ ಮಹತ್ವ, ದೇಶದ ಏಕತೆ, ಸಾಮರಸ್ಯ ಹಾಗೂ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಯ ಕುರಿತು ಸಂದೇಶ ನೀಡಲಾಯಿತು.

ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯ ಜಿಲ್ಲಾಧ್ಯಕ್ಷರಾದ ಜಾಫರ್ ಅವರು ಮಾತನಾಡಿ, ಸ್ವಾತಂತ್ರ್ಯವೆಂಬುದು ಕೇವಲ ಆಚರಣೆಗೆ ಸೀಮಿತವಾಗದೆ, ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಹಕ್ಕು, ನ್ಯಾಯ ಹಾಗೂ ಅಭಿವೃದ್ಧಿಯ ಅವಕಾಶ ದೊರೆಯುವಂತಾಗಬೇಕು. ಗ್ರಾಮೀಣ ಪ್ರದೇಶಗಳ ಮೂಲಭೂತ ಸೌಲಭ್ಯಗಳ ಅಭಿವೃದ್ಧಿಗೆ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಗ್ರಾಮಸ್ಥರು, ಯುವಕರು ಹಾಗೂ ಸಾರ್ವಜನಿಕರು ಭಾಗವಹಿಸಿ ಸ್ವಾತಂತ್ರ್ಯ ದಿನಾಚರಣೆಗೆ ಶುಭಾಶಯಗಳನ್ನು ಕೋರಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

Trending