ದಿನದ ಸುದ್ದಿ
ಕೋವಿಡ್ ಮಾರ್ಗಸೂಚಿ ಪಾಲಿಸದ ವ್ಯಾಪಾರ-ವಹಿವಾಟು ನಡೆಸುವ ಮಾಲೀಕರ ವಿರುದ್ದ ಕಠಿಣ ಕ್ರಮ : ಡಿಸಿ ಮಹಾಂತೇಶ ಬೀಳಗಿ
ಸುದ್ದಿದಿನ,ದಾವಣಗೆರೆ:ದೊಡ್ಡ ದೊಡ್ಡ ಅಂಗಡಿಗಳು, ವ್ಯಾಪಾರ ವಹಿವಾಟು ಕೇಂದ್ರಗಳು, ಮದುವೆ ಮಂಟಪಗಳು, ಎಪಿಎಂಸಿ ಮಾರುಕಟ್ಟೆ, ಥಿಯೇಟರ್, ವಸತಿ ಶಾಲೆಗಳು ಸೇರಿದಂತೆ ಹೆಚ್ಚು ಜನ ಸೇರುವ ಸ್ಥಳಗಳಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಸರಿಸದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಎಚ್ಚರಿಕೆ ನೀಡಿದರು.
ಗುರುವಾರ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ವ್ಯಾಪಾರ ವಹಿವಾಟು, ಕಲ್ಯಾಣ ಮಂಟಪ, ಶೈಕ್ಷಣಿಕ ಸಂಸ್ಥೆ ಒಟ್ಟಾರೆ ಆರ್ಥಿಕ ಚಟುವಟಿಕೆ ನಡೆಸುವ ಮಾಲೀಕರುಗಳಿಗೆ ಕೋವಿಡ್ ಮಾರ್ಗಸೂಚಿಗಳ ಕಟ್ಟುನಿಟ್ಟಿನ ಅನುಸರಣೆ ಕುರಿತು ತಿಳಿಸಲು ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಈ ರೀತಿ ಜನ ಸೇರುವ ಅಂಗಡಿಗಳು, ಕೇಂದ್ರಗಳನ್ನೇ ‘ಸೂಪರ್ ಸ್ಪ್ರೆಡರ್’ ಎಂದು ಕರೆಯಲಾಗುತ್ತಿದ್ದು, ಇಲ್ಲಿ ನಿಯಂತ್ರಣ ಅಗತ್ಯವಾಗಿದೆ. ಆದ ಕಾರಣ ಈ ವಹಿವಾಟು, ಕೇಂದ್ರಗಳ ಮಾಲೀಕರು ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಕೋವಿಡ್ ನಿಯಂತ್ರಣಕ್ಕೆ ಸಹಕರಿಸಬೇಕೆಂದರು.
ಕಳೆದ ಸಾಲಿನ ಮಾರ್ಚ್ ಮಾಹೆಯಲ್ಲಿ ಕೇವಲ 02 ಪ್ರಕರಣಗಳಿದ್ದು ಮಾರ್ಚ್ 23 ಕ್ಕೆ ಲಾಕ್ಡೌನ್ ತಯಾರಿಯಾಗಿತ್ತು. ಜೊತೆಗೆ ಜನರು ಅತ್ಯಂತ ಎಚ್ಚರಿಕೆಯಿಂದ ಇದ್ದರು. ಆದರೆ ಪ್ರಸ್ತುತ 156 ಪ್ರಕರಣಗಳಿದ್ದರೂ ಜನರು ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಉಡಾಫೆಯಿಂದ ಎಲ್ಲಿ ಬೇಕೆಂದರಲ್ಲಿ ಓಡಾಡುತ್ತಿದ್ದು, ಮಾಸ್ಕ್ ಧರಿಸುತ್ತಿಲ್ಲ, ಅಂತರ ಕಾಪಾಡುತ್ತಿಲ್ಲ.
ಪರಿಸ್ಥಿತಿ ಇಂದು ಅತ್ಯಂತ ಗಂಭೀರವಾಗಿದೆ. ಕೋವಿಡ್ ವೈರಾಣು ರೂಪಾಂತರಗೊಂಡಿದ್ದು ಎರಡನೇ ಅಲೆಯಲ್ಲಿ ವೈರಾಣು ಅತ್ಯಂತ ವೇಗವಾಗಿ ಹರಡುತ್ತಿದೆಯಾದ್ದರಿಂದ ಯಾರೂ ಕೋವಿಡ್ನ್ನು ಹಗುರವಾಗಿ ತೆಗೆದುಕೊಳ್ಳಬಾರದು. ವ್ಯಾಪಾರ, ವಹಿವಾಟು, ಮದುವೆ ಮನೆ, ಶೈಕ್ಷಣಿಕ ಸಂಸ್ಥೆಗಳಲ್ಲಿ ಮಾಸ್ಕ್ ಇಲ್ಲದೇ ಓಡಾಡುತ್ತಿದ್ದಾರೆ. ಜನ ಸಾಯ್ತಾ ಇದ್ದರೂ ಜನರು ಮೈಮರೆತಿರುವುದು ಸಲ್ಲದು.
ಈ ಹಿನ್ನಲೆಯಲ್ಲಿ ವ್ಯಾಪಾರ ವಹಿವಾಟು ಮಾಡುವ ಎಲ್ಲ ಆರ್ಥಿಕ ಚಟುವಟಿಕೆಯ ಕೇಂದ್ರಗಳು ಮತ್ತು ಶೈಕ್ಷಣಿಕ ಸಂಸ್ಥೆಯವರು ಸರ್ಕಾರದ ಕೋವಿಡ್ ಸಮುಚಿತ ವರ್ತನೆಗಳು ಮತ್ತು ಮಾರ್ಗಸೂಚಿಗಳನ್ನು ಅನುಸರಿಸುವ ಮೂಲಕ ಜಿಲ್ಲಾಡಳಿತಕ್ಕೆ ಸಹಕರಿಸಬೇಕು. ಮಾರ್ಗಸೂಚಿಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವುದಂತೂ ಖಚಿತವಾಗಿದ್ದು, ಉಲ್ಲಂಘನೆ ಮಾಡಿದವರ ವಿರುದ್ದ ಕಾಯ್ದೆ, ನಿಯಮಗಳನ್ವಯ ಅತ್ಯಂತ ಕಠಿಣ ಕ್ರಮ ಜರುಗಿಸಲಾಗುವುದು ಎಂದರು.
ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಾಘವನ್ ಮಾತನಾಡಿ, ಕಳೆದ ಸಾಲಿನ ಮಾರ್ಚ್ 4 ರಿಂದ ಕೋವಿಡ್ ನಿಯಂತ್ರಣ ಚಟುವಟಿಕೆಯನ್ನು ಸರ್ಕಾರ ಅತ್ಯಂತ ಕಟ್ಟುನಿಟ್ಟಾಗಿ ಆರಂಭಿಸಿದ್ದು, ಇಲ್ಲಿಯವರೆಗೆ ಮುಂದುವರೆದಿದೆ. ಇದುವರೆಗೆ 27605 ಪಾಸಿಟಿವ್ ಪ್ರಕರಣ ಬಂದಿದ್ದು, ಒಟ್ಟು 264 ಸಾವು ಸಂಭವಿಸಿದೆ. ಕಳೆದ ಆಗಸ್ಟ್ನಲ್ಲಿ ಅತಿ ಹೆಚ್ಚು ಪಾಸಿಟಿವಿಟಿ ದರ ಅಂದರೆ ಶೇ16.30 ಇತ್ತು. ಸೋಂಕು ಹರಡುವ ಕೊಂಡಿ ತುಂಡು ಮಾಡುವ ಕಾರ್ಯವನ್ನು ಮಾಡುತ್ತಾ ಬಂದಿದ್ದು, ಈ ಮಾರ್ಚ್ನಲ್ಲಿ ಪಾಸಿಟಿವಿಟಿ ದರ 0.29 ಇದೆ. ಪ್ರಸ್ತುತ 160 ಪಾಸಿಟಿವ್ ಪ್ರಕರಣ ಇದ್ದು ಇದರಲ್ಲಿ ದಾವಣಗೆರೆ ತಾಲ್ಲೂಕಿನದ್ದೇ 124 ಪ್ರಕರಣ ಇದೆ ಹಾಗೂ ನಗರದ್ದೇ 106 ಪ್ರಕರಣ ಇದ್ದು ಗಂಭೀರತೆಯನ್ನು ಅರ್ಥ ಮಾಡಿಕೊಳ್ಳಬೇಕಿದೆ.
ಎಲ್ಲ ಖಾಸಗಿ ಆಸ್ಪತ್ರೆ, ಕ್ಲಿನಿಕ್ಗಳು ಐಎಲ್ಐ ಮತ್ತು ಎಸ್ಎಆರ್ಐ ಪ್ರಕರಣಗಳನ್ನು ಸರ್ಕಾರಿ ಆಸ್ಪತ್ರೆಗಳಿಗೆ ಕಳುಹಿಸಬೇಕು. ಹಾಗೂ ಎಲ್ಲ ಹೋಟೆಲ್, ಛತ್ರ, ವಸತಿ ಶಾಲೆ ಸೇರಿದಂತೆ ಹೆಚ್ಚು ಜನರು ಕೆಲಸ ಮಾಡುವ ಅಂಗಡಿಗಳು, ಹೋಟೆಲ್, ಶಾಲೆಗಳಲ್ಲಿ 15 ದಿನಗಳಿಗೊಮ್ಮೆ ಕೋವಿಡ್ ಪರೀಕ್ಷೆ ಮಾಡಿಸಬೇಕೆಂದರು.
ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹನುಮಂತರಾಯ ಮಾತನಾಡಿ, ಕೋವಿಡ್ ನಿಯಂತ್ರಣ ಹಿನ್ನೆಲೆಯ ಸರ್ಕಾರದ ಮಾರ್ಗಸೂಚಿಗಳನ್ನು ನಿರ್ಲಕ್ಷಿಸುತ್ತಿರುವುದು ಸರಿಯಲ್ಲ. ಸ್ವಯಂ ನಿಯಂತ್ರಣ ಇಂದು ಅತಿ ಮುಖ್ಯವಾಗಿದೆ. ವೈಯಕ್ತಿಕವಾಗಿ ಕೋವಿಡ್ ವಿರುದ್ದ ಹೋರಾಡಬೇಕಿರುವ ಇಂದಿನ ಸ್ಥಿತಿಯಲ್ಲಿ ವ್ಯಾಪಾರು ವಹಿವಾಟು ಇತರೆ ಸಂಸ್ಥೆಗಳು ಸಹಕರಿಸಬೇಕು.
ಕೋವಿಡ್ ಬಗ್ಗೆ ಎಲ್ಲರಲ್ಲಿ ಜಾಗೃತಿ ಇದ್ದು, ಮಾರ್ಗಸೂಚಿ ಉಲ್ಲಂಘಿಸಿದರೆ ಕ್ರಮ ನಿಶ್ಚಿತ ಎಂದ ಅವರು ಕೋವಿಡ್ ನಿಯಮಗ ಪರಿಣಾಮಕಾರಿ ಜಾರಿಗೆ ಶೀಘ್ರದಲ್ಲೇ ವಾರ್ಡುವಾರು ಮಾರ್ಷಲ್ಗಳನ್ನು ನೇಮಕ ಮಾಡಿ ಮಾಸ್ಕ್ ಧರಿಸದಿದ್ದರೆ ರೂ.250, ನಿಗದಿತ ಜನರಿಗಿಂತ ಹೆಚ್ಚು ಸೇರಿದರೆ ಹಾಲ್, ಮಂದಿರಗಳ ಮಾಲೀಕರಿಗೆ, ಆಯೋಜಕರಿಗೆ ರೂ.5 ರಿಂದ 10 ಸಾವಿರ ದಂಡ ಜೊತೆಗೆ ವಿಪತ್ತು ನಿರ್ವಹಣಾ ಕಾಯ್ದೆಯನ್ವಯ ಕ್ರಮ ವಹಿಸಲಾಗುವುದು ಎಂದ ಎಚ್ಚರಿಕೆ ನೀಡಿದರು.
ಮೊನ್ನೆವರೆಗೆ ಸಿಂಗಲ್ ಡಿಜಿಟ್ನಲ್ಲಿದ್ದ ಪ್ರಕರಣ ಇಂದು ಡಬಲ್ ಡಿಜಿಟ್ ಆಗಿದ್ದು ಮೂರಂಕಿಗೆ ತಲುಪುವ ಸಮಯ ದೂರವಿಲ್ಲ. ಆದ ಕಾರಣ ಎಲ್ಲರೂ ಎಚ್ಚೆತ್ತುಕೊಂಡು ಕೋವಿಡ್ ನಿಯಮ ಪಾಲಿಸಬೇಕು ಎಂದರು.
ಜಿ.ಪಂ ಸಿಇಓ ಡಾ.ವಿಜಯ ಮಹಾಂತೇಶ ದಾನಮ್ಮನವರ್ ಮಾತನಾಡಿ, ಗಡಿ ಜಿಲ್ಲೆಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ವೇಗವಾಗಿ ಹೆಚ್ಚುತ್ತಿದೆ ಹಾಗೂ ಸಾವುಗಳೂ ಸಂಭವಿಸುತ್ತಿವೆ. ಮಧ್ಯ ಕರ್ನಾಟಕದಲ್ಲಿ ಇನ್ನೂ ಅಷ್ಟು ಪ್ರಕರಣ ಇಲ್ಲ. ಮೊದಲನೇ ನಮಗೆ ಸೂಚನೆ ಸಿಕ್ಕಿದೆ.
ಹಾಗಾಗಿ ನಾವೆಲ್ಲ ಎಚ್ಚೆತ್ತಕೊಳ್ಳಬೇಕು. ಕೇವಲ ವ್ಯಾಪಾರ ವಹಿವಾಟು, ಕೆಲಸದ ಸ್ಥಳಗಳಲ್ಲಿ ಮಾತ್ರವಲ್ಲ ಮನೆಗಳಲ್ಲೂ ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಅನುಸರಿಸಬೇಕು. ರೂಪಾಂತರಿ ವೈರಾಣು ವೇಗವಾಗಿ ಹರಡುತ್ತಿದ್ದು, ಸ್ವಯಂ ನಿಯಂತ್ರಣದಲ್ಲಿ ನಮ್ಮ ಪಾತ್ರ ದೊಡ್ಡದಿದೆ ಎಂದರು.
ಜಿಲ್ಲಾಧಿಕಾರಿಗಳು ಮಾತನಾಡಿ, ಕಲ್ಯಾಣ ಮಂಟಪದ್ಲಿ 200 ಕ್ಕಿಂತ ಹೆಚ್ಚು ಜನ ಸೇರಿದ್ರೆ ಮಂಟಪದ ಮಾಲೀಕರು, ಹೆಣ್ಣು ಮತ್ತು ಗಂಡಿನ ಕಡೆಯವರಿಂದ ಸಹ ದಂಡವನ್ನು ಪಾಲಿಕೆಯವರು ಮಾಡುತ್ತಾರೆ. ಜನ ಸೇರುವಲ್ಲಿ ಕಠಿಣ ಕ್ರಮ ಕೈಗೊಳ್ಳಲು ಮಾರ್ಷಲ್ ನೇಮಕ ಮಾಡಲಾಗುವುದು.
ಸೂಪರ್ ಸ್ಪ್ರೆಡರ್ಗಳಾದ ಕಲ್ಯಾಣ ಮಂಟಪ, ವಸತಿ ಶಾಲೆ, ಅಂಗಡಿಗಳಲ್ಲಿ, ಥಿಯೇಟರ್ ಇತರೆಡೆ ಕಟ್ಟುನಿಟ್ಟಿನ ಕ್ರಮ ವಹಿಸಲಾಗುವುದು. ಕೆಪಿಎಂಇ ಅಡಿ ಬರುವ ಎಲ್ಲ ಖಾಸಗಿ ಆಸ್ಪತ್ರೆ ಕ್ಲಿನಿಕ್ನವರು ಕೆಮ್ಮು, ಶೀತ ಜ್ವರ ಇದ್ದರೆ ಕೋವಿಡ್ ಟೆಸ್ಟ್ ಆದರೆ ಮಾತ್ರ ಚಿಕಿತ್ಸೆ ಎಂದು ಕಡ್ಡಾಯಗೊಳಿಸಬೇಕು. ಜಿಲ್ಲೆಯ ಎಲ್ಲಾ ಸರ್ಕಾರಿ ಕೇಂದ್ರಗಳಲ್ಲಿ ಫಿವರ್ ಕ್ಲಿನಿಕ್ ಇದ್ದು ಅಲ್ಲಿಗೆ ಕಳುಹಿಸಬೇಕು.
ಹಾಗೂ ಆರ್ಥಿಕ ಚಟುವಟಿಕೆ ನಡೆಸುವವರು ಸರ್ಕಾರ ಹೊರಡಿಸಿರುವ ಎಸ್ಓಪಿ ಪ್ರಕಾರ ಕಾರ್ಯ ನಿರ್ವಹಿಸಬೇಕು. ನಿರ್ಲಕ್ಷ್ಯ ಭಾವ ಸಲ್ಲದು. ಏಪ್ರಿಲ್ 1 ರಿಂದ 45 ವರ್ಷ ತುಂಬಿದವರೆಲ್ಲ ಕೋವಿಡ್ ಲಸಿಕೆ ಹಾಕಿಸಿಕೊಳ್ಳಬೇಕು. ಹಳೇ ದಾವಣಗೆರೆ ಭಾಗದಲ್ಲೇ ಹೆಚ್ಚು ಪ್ರಕರಣಗಳು ಇತ್ತು. ಇಲ್ಲಿಯ ಜನರೇ ಲಸಿಕೆಗೆ ಮುಂದಾಗುತ್ತಿಲ್ಲ. ಅಲ್ಲಿನ ಸ್ಥಳೀಯ ನಾಯಕರು ಲಸಿಕೆ ಪಡೆಯಲು ಜನರ ಮನವೊಲಸಿಬೇಕು ಎಂದರು.
ವಿವಿಧ ಕಲ್ಯಾಣ ಮಂಟಪಗಳ ಮಾಲೀಕರು ಜನರಿಗೆ ನಿಯಮಗಳನ್ನು ತಿಳಿಸಿ ಹೇಳಿದರೂ ಕೇಳುತ್ತಿಲ್ಲವೆಂದಾಗ ಡಿಸಿ, ನಿಮ್ಮ ವಿರುದ್ದ ಕ್ರಮ ಕೈಗೊಳ್ಳುತ್ತೇವೆ. ನೀವೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಒಂದು ಪಕ್ಷ ಸಹಾಯ ಬೇಕಾದಲ್ಲಿ ಎಸ್ಪಿ ಹಾಗೂ ಪಾಲಿಕೆ ಸಹಾಯ ಪಡೆದುಕೊಳ್ಳುವಂತೆ ತಿಳಿಸಿದರು.
ಸಭೆಯಲ್ಲಿ ಎಡಿಸಿ ಪೂಜಾರ ವೀರಮಲ್ಲಪ್ಪ, ಎಸಿ ಮಮತಾ ಹೊಸಗೌಡರ್ ಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕಿ ನಜ್ಮಾ, ಡಿಹೆಚ್ಓ ಡಾ.ನಾಗರಾಜ್, ಜಿಲ್ಲಾ ವರ್ತಕರ ಸಂಘದ, ಐಎಂಎ, ಛೇಂಬರ್ ಆಫ್ ಕಾಮರ್ಸ್, ಸಿನೆಮಾ ಥಿಯೇಟರ್, ವಸತಿ ಶಾಲೆಗಳ, ಬಟ್ಟೆ ಅಂಗಡಿಗಳ ಸಂಘ, ಎಪಿಎಂಸಿ ವರ್ತಕರ ಸಂಘದ, ಲಿಕ್ಕರ್ ಮತ್ತು ವೈನ್ಸಂಘದ, ಬೀದಿ ಬದಿ ವ್ಯಾಪಾರಿಗಳ ಸಂಘ ಸೇರಿದಂತೆ ವಿವಿಧ ರೀತಿಯ ಆರ್ಥಿಕ ಚಟುವಟಿಕೆ ಮಾಡುವಂತಹ ಸಂಸ್ಥೆಗಳ ಸಂಘಗಳ ಪದಾಧಿಕಾರಿಗಳು ಹಾಜರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಾವಿನಲ್ಲೂ ಒಂದಾದ ಪ್ರೇಮಿಗಳು: ಪ್ರೇಮಿಯ ಪಕ್ಕದಲ್ಲೇ ಪ್ರೇಯಸಿಯ ಅಂತ್ಯಸಂಸ್ಕಾರ!
ಸುದ್ದಿದಿನ,ಕುಂಬಳೆ: ಪ್ರೀತಿ ಎನ್ನುವುದು ಸಾವಿನ ನಂತರವೂ ಶಾಶ್ವತ ಎಂಬುದಕ್ಕೆ ಕೇರಳದ ಕಾಸರಗೋಡಿನಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ನಿಶ್ಚಿತಾರ್ಥವಾಗಿದ್ದ ಯುವಕ ಮೃತಪಟ್ಟ ಬೆನ್ನಲ್ಲೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಯುವತಿಯ ಅಂತ್ಯಸಂಸ್ಕಾರವನ್ನು ಆಕೆಯ ಇಚ್ಛೆಯಂತೆ ಯುವಕನ ಸಮಾಧಿಯ ಪಕ್ಕದಲ್ಲೇ ನೆರವೇರಿಸಲಾಗಿದೆ.
ನಡೆದಿದ್ದೇನು?
ಕಿದೂರು ಕುಂಟಂಗೇರಡ್ಕದ ಪ್ರಫುಲ್ಲ (26) ಮತ್ತು ತಮಿಳುನಾಡು ನಿವಾಸಿಯಾದ ಬ್ಯಾಂಕ್ ನೌಕರ ಮಣಿ ಎಂಬವರಿಗೆ ನಾಲ್ಕು ತಿಂಗಳ ಹಿಂದೆ ಅದ್ಧೂರಿಯಾಗಿ ಮದುವೆ ನಿಶ್ಚಿತಾರ್ಥ ನಡೆದಿತ್ತು. ಇನ್ನೇನು ದಾಂಪತ್ಯ ಜೀವನಕ್ಕೆ ಕಾಲಿಡಬೇಕು ಎನ್ನುವಷ್ಟರಲ್ಲಿ, ಒಂದು ತಿಂಗಳ ಹಿಂದೆ ಸಂಭವಿಸಿದ ಬೈಕ್ ಅಪಘಾತದಲ್ಲಿ ಮಣಿ ಮೃತಪಟ್ಟಿದ್ದರು.
ಡೆತ್ ನೋಟ್ನಲ್ಲಿತ್ತು ಕೊನೆಯ ಆಸೆ
ತನ್ನ ಭಾವಿ ಪತಿಯ ಅಗಲಿಕೆಯಿಂದ ತೀವ್ರವಾಗಿ ನೊಂದಿದ್ದ ಪ್ರಫುಲ್ಲ, ಕಳೆದ ಭಾನುವಾರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾವಿಗೂ ಮುನ್ನ ಆಕೆ ಬರೆದಿದ್ದ ಡೆತ್ ನೋಟ್ ಎಲ್ಲರ ಕಣ್ಣಾಲಿಗಳನ್ನು ಒದ್ದೆ ಮಾಡಿದೆ. “ನನ್ನ ಮೃತದೇಹವನ್ನು ಮಣಿಯ ಸಮಾಧಿಯ ಸಮೀಪದಲ್ಲೇ ಅಂತ್ಯಸಂಸ್ಕಾರ ಮಾಡಬೇಕು” ಎಂದು ಆಕೆ ತನ್ನ ಕೊನೆಯ ಆಸೆಯನ್ನು ಬರೆದಿಟ್ಟಿದ್ದರು.
ತಮಿಳುನಾಡಿನಲ್ಲಿ ಅಂತ್ಯಕ್ರಿಯೆ
ಯುವತಿಯ ಆಸೆಯಂತೆ ಉಭಯ ಕುಟುಂಬದವರು ಮಾತುಕತೆ ನಡೆಸಿದರು. ಅದರಂತೆ ನಿನ್ನೆ ಕಾಸರಗೋಡಿನಿಂದ ಪ್ರಫುಲ್ಲರ ಮೃತದೇಹವನ್ನು ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ವಳ್ಳಿಯೂರು ಎಂಬಲ್ಲಿಗೆ ಕೊಂಡೊಯ್ಯಲಾಯಿತು. ಅಲ್ಲಿ ಮಣಿಯ ಸಮಾಧಿಯ ಪಕ್ಕದಲ್ಲೇ ಪ್ರಫುಲ್ಲರ ಅಂತ್ಯಸಂಸ್ಕಾರವನ್ನು ನೆರವೇರಿಸುವ ಮೂಲಕ ಪ್ರೇಮಿಗಳಿಬ್ಬರನ್ನು ಸಾವಿನಲ್ಲೂ ಒಂದಾಗಿಸಲಾಯಿತು.
ಅಂತ್ಯಸಂಸ್ಕಾರದ ವೇಳೆ ಎರಡೂ ಕುಟುಂಬದ ಸದಸ್ಯರು ಉಪಸ್ಥಿತರಿದ್ದು, ಮರುಗುವ ಪ್ರೇಮಕಥೆಗೆ ಕಂಬನಿಯ ವಿದಾಯ ಹೇಳಿದರು. ಈ ವಿಡಿಯೋ ಮತ್ತು ಸುದ್ದಿ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ನೆಟ್ಟಿಗರು ಈ ಜೋಡಿಯ ಆತ್ಮಕ್ಕೆ ಶಾಂತಿ ಕೋರುತ್ತಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ ಡಿಪ್ಲೋಮಾ ಕೋರ್ಸ್; ಪ್ರವೇಶಾತಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ: 2026-27ನೇ ಶೈಕ್ಷಣಿಕ ಸಾಲಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿನ ಮೂರು ವರ್ಷಗಳ ಡಿಪ್ಲೋಮಾ (ಡಿ.ಹೆಚ್.ಟಿ.ಟಿ) ಹಾಗೂ ಎರಡನೇ ವರ್ಷದ ನೇರ ಪ್ರವೇಶಕ್ಕೆ (Lateral Entry) ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ 2026 ರ ಜುಲೈ 01ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 23 ವರ್ಷ ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 25 ವರ್ಷ ಮೀರಿರಬಾರದು. ಒಟ್ಟು 39 ಅಭ್ಯರ್ಥಿಗಳನ್ನು (ಪುರುಷ ಮತ್ತು ಮಹಿಳಾ) ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಪ್ರತಿಯೊಬ್ಬ ವಿದ್ಯಾರ್ಥಿಗೆ ಪ್ರತಿ ತಿಂಗಳು ರೂ. 2,500/- ಗಳ ಶಿಷ್ಯವೇತನ ನೀಡಲಾಗುವುದು., ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲಿಷ್ ಅನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು.
ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಡಿಪ್ಲೋಮಾ ಕೋರ್ಸ್ಗೆ ನೇರ ಪ್ರವೇಶಕ್ಕೆ https://khtigadag.ac.in/
ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿಗಳಿಗಾಗಿ ಉಪ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ಕಾಲೇಜು ರಸ್ತೆ, ನಿಟ್ಟುವಳ್ಳಿ, ದಾವಣಗೆರೆ ಅಥವಾ ದೂರವಾಣಿ ಸಂಖ್ಯೆ: 08192-262362 ಸಂಪರ್ಕಿಸುವಂತೆ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದಿನದ ಸುದ್ದಿ
ದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ
ಸುದ್ದಿದಿನ,ದಾವಣಗೆರೆ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಬರುತ್ತದೆ ಎಂಬುದಾಗಿ ಉಪನ್ಯಾಸಕರೊಬ್ಬರಿಗೆ ಆಮಿಷ ತೋರಿಸಿದ ದುಷ್ಕರ್ಮಿಗಳು 14 ಲಕ್ಷ ರೂಪಾಯಿ ವಂಚಿಸಿರುವ ಘಟನೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ದಾವಣಗೆರೆಯ ಭೂಮಿಕಾ ನಗರದ ನಿವಾಸಿಯಾಗಿರುವ 52 ವರ್ಷದ ಸರ್ಕಾರಿ ಕಾಲೇಜಿನ ಉಪನ್ಯಾಸಕ ಹಣ ಕಳೆದುಕೊಂಡಿದ್ದಾರೆ.
ಉಪನ್ಯಾಸಕರು ಮೊದಲಿಗೆ ಟೆಲಿಗ್ರಾಂ ಮೂಲಕ ಲಿಂಕ್ ಕ್ಲಿಕ್ ಮಾಡಿದ್ದಾರೆ. ಅಲ್ಲಿ ವಂಚಕರು ಹೇಳಿದಂತೆ ಹಲವು ಲಿಂಕ್ಗಳನ್ನು ಕ್ಲಿಕ್ ಮಾಡುತ್ತಾ ಹೋಗಿದ್ದು, ಹಂತಹಂತವಾಗಿ ಹಣ ಕಳೆದುಕೊಂಡಿದ್ದಾರೆ.
ಲಾಭದ ನಿರೀಕ್ಷೆಯಲ್ಲಿದ್ದ ಉಪನ್ಯಾಸಕರಿಗೆ ಲಾಭ ಹೋಗಲಿ, ಅಸಲೂ ಬಾರದ ಕಾರಣ ಅನುಮಾನಗೊಂಡು ತಾನು ಹಣ ಕಳೆದುಕೊಂಡಿರುವುದು ದೃಢಪಟ್ಟಿದೆ. ನಂತರ ಸೈಬರ್ ಠಾಣೆಗೆ ತೆರಳಿ ಪ್ರಕರಣ ದಾಖಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ2 days ago2.5 ಕೋಟಿ ಖರೀದಿಯಲ್ಲಿ ಅವ್ಯವಹಾರ ; ಆಯುಕ್ತೆ ಮಂಜುಶ್ರೀ ಸೇರಿ 6 ಅಧಿಕಾರಿಗಳ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ6 days agoದಾವಣಗೆರೆ | ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬೆಂಕಿ ರಹಿತ ಕುಕಿಂಗ್ ಕಾರ್ಯಕ್ರಮ
-
ದಿನದ ಸುದ್ದಿ6 days agoಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ
-
ದಿನದ ಸುದ್ದಿ2 days agoದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸಮಾರೋಪ ಸಮಾರಂಭ
-
ದಿನದ ಸುದ್ದಿ7 days agoಸಂಶೋಧಕರಿಂದ ಪಶ್ಚಿಮ ಘಟ್ಟಗಳಲ್ಲಿ ಮೂರು ಅಣಬೆಯ ಹೊಸ ಶಿಲೀಂಧ್ರ ಜಾತಿಗಳ ಪತ್ತೆ
-
ಅಂಕಣ1 day agoಪ್ರಜಾಪ್ರಭುತ್ವ: ಸಮಾನತೆ, ಸಾಮಾಜಿಕ ನ್ಯಾಯ ಮತ್ತು ನೈತಿಕ ಹೊಣೆಗಾರಿಕೆ
-
ಕ್ರೀಡೆ6 days agoಹಿರಿಯ ಕ್ರಿಕೆಟ್ ಪಟು ಎನ್ಆರ್ಎಚ್ ರಮೇಶ್ ನಿಧನ
-
ದಿನದ ಸುದ್ದಿ1 day agoದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ

