Connect with us

ಸಿನಿ ಸುದ್ದಿ

ಬಣ್ಣದ ಜೊತೆ ಸೆಲ್ಫಿ ಕ್ಲಿಕ್ಕಿಸಿದ ಹರಿಪ್ರಿಯ ! ಇವರೊಂದಿಗೆ ಸೆಲ್ಫಿ ಕ್ಲಿಕ್ಕಿಸೋಕೆ ನಿಮ್ಮ ಡ್ರಾಯಿಂಗ್ ರೆಡಿ ನಾ ?

Published

on

ರ್ಜರಿ ಹುಡುಗಿ ಹರಿಪ್ರಿಯ ಈಗ ಲೈಫ್ ಜೊತೆ ಸೆಲ್ಫಿ ಕ್ಲಿಕ್ಕಿಸುವ  ಸಂಭ್ರಮದಲ್ಲಿದ್ದಾರೆ. ಇವರ ಬಹು ನಿರೀಕ್ಷೆಯ ಚಿತ್ರ ಲೈಫ್ ಜೊತೆ ಸೆಲ್ಫಿ ನಾಳೆ ವರಮಹಾಲಕ್ಷ್ಮಿ ಹಬ್ಬಕ್ಕೆ ತೆರೆಕಾಣಲಿದ್ದು, ಚಿತ್ರದ ಪ್ರಮೋಷನ್ ನಲ್ಲಿ ಬಿಜಿಯಾಗಿರುವ ಹರಿಪ್ರಿಯ, ತಮ್ಮ ಕುಂಚದ ಮೂಲಕ ಚಿತ್ರದ ಪ್ರಮೋಷನ್ ಗೆ ಸಾಥ್ ನೀಡುತ್ತಿದ್ದಾರೆ. ಈ ಚಿತ್ರದಲ್ಲಿ ಪ್ರಜ್ವಲ್ ದೇವರಾಜ್ ಮತ್ತು ಪ್ರೇಮ್ ಮುಖ್ಯ ಭೂಮಿಕೆಯಲೂಲಿದ್ದಾರೆ.

ಸಕಲಕಲಾವಲ್ಲಭೆ ಹರಿಪ್ರಿಯ

ಹರಿಪ್ರಿಯ ಕನ್ನಡ ಚಿತ್ರರಂಗದ ಕಂಡ ಅದ್ಭುತ ನಟಿ. ಕೇವಲ ನಟನೆ ಅಷ್ಟೇ ಅಲ್ಲದೆ ನೃತ್ಯ, ಸೈಕಲಿಂಗ್, ಯೋಗ,ಸಮಾಜ ಸೇವೆ ಗಳಲ್ಲಿ ತನ್ನನ್ನು ತೊಡಗಿಸಿಕೊಂಡಿರುವ ಹೆಣ್ಣು ಮಗಳು.
ಹರಿಪ್ರಿಯ ಒಬ್ಬ  ಅಧ್ಬುತ ಕುಂಚಗಾತಿ ಎಂದು ನಿರೂಪಿಸಿದ್ದಾರೆ. ಸ್ಕೆಚಿಂಗ್ ಅಲ್ಲಿ ಆಸಕ್ತಿ ಹೊಂದಿರುವ ಹರಿಪ್ರಿಯ ಲೈಫ್ ಜೊತೆ ಸೆಲ್ಫಿ ಚಿತ್ರದ ತಮ್ಮ ಪಾತ್ರ “ರಶ್ಮಿಕಾ” ಸೆಲ್ಫಿ ಕ್ಲಿಕ್ಕಿಸುವ ದೃಶ್ಯ ವನ್ನು ಬಹಳ ಸುಂದರವಾಗಿ ಸ್ಕೆಚ್ ಮಾಡಿ ಬಣ್ಣ ತುಂಬಿಸಿದ್ದಾರೆ . ಇದನ್ನು ತಮ್ಮ ಇಂಸ್ಟಾಗ್ರಾಂ ಪೋಸ್ಟ್ ನಲ್ಲಿ ಶೇರ್ ಮಾಡಿ ಕೊಂಡಿದ್ದಾರೆ ಹಾಗೂ ಪ್ರೇಕ್ಷಕರಲ್ಲಿ ಒಂದು ಕ್ರಿಯಾತ್ಮಕ ಸ್ಪರ್ಧೆಯನ್ನೂ  ನೀಡಿದ್ದಾರೆ.ಇದರ ವಿವರ ಇಲ್ಲಿದೆ ನೋಡಿ.

ಹರಿಪ್ರಿಯ ಜೊತೆ ಸೆಲ್ಫಿ ಬೇಕಾ?

ಕುಂಚದ ಕಲಾವಿದೆ ಹರಿಪ್ರಿಯ ತಮ್ಮ ಚಿತ್ರದ ಪ್ರಮೋಷನ್ ಗಾಗಿ , ಸಿನಿ ರಸಿಕರೊಂದಿಗೆ ಸೆಲ್ಫಿ ಕ್ಲಿಕ್ಕಿಸುವ  ಒಂದು ಅಧ್ಬುತ ಅವಕಾಶ ನೀಡಿದ್ದಾರೆ. ಇದಕ್ಕೆ ನೀವು ಮಾಡಬೇಕಾದದ್ದು ಇಷ್ಟೇ.. ಇವರ ಸುಂದರ ಸ್ಕೆಚ್ ಗೆ ಪೈಪೋಟಿ ಎಂಬಂತೆ ನಿಮ್ಮ ಸ್ಕೆಚ್ ಗಳನ್ನು ಲೈಫ್ ಜೊತೆ ಸೆಲ್ಫಿ ಎಂಬ ಹಾಶ್ ಟ್ಯಾಗ್ ಬಳಸಿ ಇವರಿಗೆ ಇಂಸ್ಟಾಗ್ರಾಂ ನಲ್ಲಿ  ಪೋಸ್ಟ್ ಮಾಡಬೇಕು. ನಿಮ್ಮ ಚಿತ್ರ ಅವರಿಗೆ ಇಷ್ಟ ವಾದಲ್ಲಿ ಸ್ಯಾಂಡಲ್ ವುಡ್ ಬೆಡಗಿ ಹರಿಪ್ರಿಯ ಜೊತೆ ಸೆಲ್ಫಿ ಕ್ಲಿಕ್ಕಿಸಿ ಸಂಭ್ರಮಿಸಬಹುದು.
ಇವರ ಪ್ರತಿಭೆ ಗೆ ಹ್ಯಾಟ್ಸ್  ಆಫ್ ಹೇಳುತ್ತಾ ಇವರ ಬಹು ನಿರೀಕ್ಷಿತ  ಚಿತ್ರ ‘ಲೈಫ್ ಜೊತೆ ಸೆಲ್ಫಿ ‘ ಚಿತ್ರ ತಂಡಕ್ಕೆ ಸುದ್ದಿದಿನದ ಶುಭಾಶಯಗಳು.

ಹೆಸರಲ್ಲೇ ಕಲೆ ಬೆರತಿರುವವಳು ನಾನು ಚಿತ್ರಶ್ರೀ ಹರ್ಷ. ವೃತ್ತಿಯಲ್ಲಿ ಉಪನ್ಯಾಸಕಿ. ಹುಟ್ಟಿದ್ದು ಬೆಳೆದದ್ದು ಬೆಂಗಳೂರಿನಲ್ಲಿ. ಬೆಂಗಳೂರು ವಿಶ್ವವಿದ್ಯಾಲಯದ ದ M.A Economics ಪದವೀಧರೆ. M.phil ಕೂಡ ಮುಗಿದಿದ್ದು ಬಿ.ಬಿ.ಎಂ.ಪಿ ಕಾಲೇಜಿನಲ್ಲಿ ಕಳೆದ ಹತ್ತು ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಫ್ಯಾಷನ್ ಸೆಳೆತ ಚಿಕ್ಕಂದಿನಿಂದಲೂ ಇದ್ದೇ ಇತ್ತು. ಅದಕ್ಕೆ ತಕ್ಕಂತೆ ಫ್ಯಾಷನ್ ಲೋಕವೂ ಕೈ ಬೀಸಿ ಕರೆಯುತ್ತಿತ್ತು. ಬಾಲ್ಯದ ಆಸೆ ಈಗ ಈಡೇರಿದೆ. ಫ್ಯಾಷನ್ ಲೋಕದಲ್ಲಿ "ನೈಲ್ ಆರ್ಟ್ ಸ್ಪೆಷಲಿಸ್ಟ" ಎಂಬ ಬಿರದು ನನ್ನದಾಗಿದೆ. ಹಲವಾರು ಖಾಸಗಿ ವಾಹಿನಿಗಳಲ್ಲಿ ಕಾರ್ಯಕ್ರಮ ನಡೆಸಿಕೊಟ್ಟಿದ್ದು, ಸಂಯುಕ್ತ ಕರ್ನಾಟಕ ಹಾಗೂ ಕರ್ಮವೀರ ಪತ್ರಿಕೆ ಗಳಿಗೆ ಫ್ಯಾಷನ್ ಲೇಖನ ಬರೆಯುತ್ತಿದ್ದೇನೆ. ಬ್ಯೂಟಿ ಟ್ರೆಂಡ್ ಹಾಗೂ ನೈಲ್ ಆರ್ಟ್ ನಲ್ಲಿ ವಿನೂತನ ಹಾಗೂ ಟ್ರೆಂಡೀ ಲುಕ್ ಸೃಷ್ಟಿಸುವುದು ನನ್ನ ಹವ್ಯಾಸ. ಹಲವಾರು ಕವನಗಳನ್ನು ಬರೆದಿದ್ದು, ಪ್ರತಿಷ್ಠಿತ ದಿನಪತ್ರಿಕೆ ಗಳಲ್ಲಿ ಪ್ರಕಟವಾಗಿದೆ.

ದಿನದ ಸುದ್ದಿ

ಮತ್ತೆ ತಾಯಿಯಾಗಬೇಕು : ನಟಿ ಸಮಂತಾ

Published

on

ಸುದ್ದಿದಿನಡೆಸ್ಕ್:ಇತ್ತೀಚೆಗೆ ನಟಿ ಸಮಂತಾ ಅವರ ಕಮೆಂಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಆ ಹೇಳಿಕೆಗಳ ಮೇಲೆ ನಾನಾ ರೀತಿಯ ಅನುಮಾನಗಳೂ ವ್ಯಕ್ತವಾಗಿವೆ.

ಟಾಲಿವುಡ್ ಸ್ಟಾರ್ ಹೀರೋಯಿನ್ ಸಮಂತಾ ಬಗ್ಗೆ ವಿಶೇಷ ಪರಿಚಯ ಅಗತ್ಯವಿಲ್ಲ. ಸದ್ಯ ಸಮಂತಾ ಸತತ ಚಿತ್ರಗಳಲ್ಲಿ ಬ್ಯುಸಿಯಾಗಿರುವುದು ಗೊತ್ತೇ ಇದೆ. ಇತ್ತೀಚಿಗೆ ಸಮಂತಾ ಅವರ ವೆಬ್ ಸಿರೀಸ್ ವಿಚಾರಕ್ಕೆ ಸುದ್ದಿಯಾಗಿದ್ದರು. ನಟಿಯ ಇತ್ತೀಚಿನ ವೆಬ್ ಸಿರೀಸ್ ಸಿಟಾಡೆಲ್ ಸಖತ್ ಸುದ್ದಿಯಾಗಿದೆ. ಸದ್ಯ ಈ ವೆಬ್ ಸೀರೀಸ್ ಒಟಿಟಿಯಲ್ಲಿ ಸ್ಟ್ರೀಮ್ ಆಗುತ್ತಿದೆ ಎಂದು ತಿಳಿದುಬಂದಿದೆ. ಈ ವೆಬ್ ಸರಣಿಯ ಪ್ರಚಾರದ ವೇಳೆ ಮಾಡಿದ ಕಾಮೆಂಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಇದರ ಭಾಗವಾಗಿ ಸಮಂತಾ ರಾಜ್ ಮತ್ತು ಡಿಕೆ ಸಂದರ್ಶನವೊಂದರಲ್ಲಿ ಹೇಳಿದ್ದು ದಿ ಫ್ಯಾಮಿಲಿ ಮ್ಯಾನ್ 2 ಚಿತ್ರೀಕರಣದ ವೇಳೆ ನಾನು ಹಲವು ಭಾವನೆಗಳಿಗೆ ಒಳಗಾಗಿದ್ದೆ ಎಂದು ಸಮಂತಾ ಹೇಳಿದ್ದಾರೆ. ಅಲ್ಲದೇ ಅವರ ನಿರ್ದೇಶನದಲ್ಲಿ ನಟಿಸುವುದು ಕಷ್ಟ ಎಂದಿದ್ದಾರೆ. ನಂತರ ಅದೇ ಸಂದರ್ಶನದಲ್ಲಿ ನಟಿ ಬೇರೆ ವಿಚಾರವನ್ನೂ ಹೇಳಿದ್ದಾರೆ.

ಹನಿ ಬನ್ನಿ ವೆಬ್ ಸರಣಿಯಲ್ಲಿ ತಾಯಿ ಪಾತ್ರದ ಬಗ್ಗೆ ಮಾತನಾಡುತ್ತಾ, ಅವರು ಸಂವೇದನಾಶೀಲ ಕಾಮೆಂಟ್​ಗಳನ್ನು ಮಾಡಿದ್ದಾರೆ. ನನಗೆ ತಾಯಿಯಾಗುವ ಕನಸು ಇದೆ. ನಾನು ತಾಯಿಯಾಗಲು ಇಷ್ಟಪಡುತ್ತೇನೆ ಎಂದು ಹೇಳಿದ್ದಾರೆ.

ಇದಕ್ಕಾಗಿ ತಡವಾಗಿದೆ ಎಂದು ಅವರು ಭಾವಿಸುವುದಿಲ್ಲ. ನಾನು ಜೀವನದಲ್ಲಿ ತುಂಬಾ ಖುಷಿಯಾಗಿದ್ದೇನೆ ಎಂದು ಸಮಂತಾ ಹೇಳಿದ ಮಾತುಗಳು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಆದರೆ ಸಮಂತಾ ಈ ಕಾಮೆಂಟ್ ಮಾಡಿದ ನಂತರ ಮತ್ತೊಮ್ಮೆ ಅವರ ಎರಡನೇ ಮದುವೆಯ ಸುದ್ದಿಗೆ ವೇಗ ಸಿಕ್ಕಿದೆ. ಈ ಹಿಂದೆ ರಾಜ್ ಹಾಗೂ ಡಿಕೆಶಿಯಲ್ಲಿ ರಾಜ್ ನನ್ನು ಪ್ರೀತಿಸುತ್ತಿದ್ದು, ಸದ್ಯದಲ್ಲೇ ಮದುವೆಯಾಗಲಿದ್ದಾರೆ ಎಂದು ಹೇಳಲಾಗಿತ್ತು.

ಆದರೆ ಇದೀಗ ಸಮಂತಾ ಎರಡನೇ ಮದುವೆಯ ಸುದ್ದಿ ಮುನ್ನೆಲೆಗೆ ಬಂದಿದ್ದು, ಮತ್ತೆ ತಾಯಿಯಾಗಬೇಕು ಎಂದು ಕಾಮೆಂಟ್ ಮಾಡಿದ್ದಾರೆ. ಇದರೊಂದಿಗೆ ರಾಜ್ ಎರಡನೇ ಮದುವೆಯಾಗಲಿದ್ದಾರೆ ಎಂಬ ಸುದ್ದಿಗೆ ವೇಗ ಸಿಕ್ಕಿದೆ. ಈ ಸುದ್ದಿಯಲ್ಲಿನ ಸತ್ಯಗಳ ಹೊರತಾಗಿ, ಈ ಸುದ್ದಿ ಸಾಮಾಜಿಕ ಮಾಧ್ಯಮದಲ್ಲಿ ಹಾಟ್ ಟಾಪಿಕ್ ಆಗಿದೆ. ಈ ಸುದ್ದಿಗೆ ಸಮಂತಾ ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ನೋಡೋಣ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸಿಕ್ಕಾಬಟ್ಟೆ ಸಾಲ, ಸಾಲು ಸಾಲು ಚೆಕ್‌ಬೌನ್ಸ್‌ ಕೇಸ್‌ ; ನಿರ್ದೇಶಕ ಗುರುಪ್ರಸಾದ್ ಸಾವಿಗೆ ಕಾರಣವಾಯ್ತಾ..!?

Published

on

ಸುದ್ದಿದಿನಡೆಸ್ಕ್:ಸ್ಯಾಂಡಲ್‌ವುಡ್‌ನ ಖ್ಯಾತ ನಿರ್ದೇಶಕ ʻಮಠʼ ಗುರುಪ್ರಸಾದ್‌ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ.

ಗುರುಪ್ರಸಾದ್‌ ಮೇಲೆ ಸಾಲು ಸಾಲು ಚೆಕ್‌ಬೌನ್ಸ್‌ ಕೇಸ್‌ಗಳಿದ್ದವು. ಸಿಕ್ಕ ಸಿಕ್ಕವರ ಬಳಿ ಸಾಲ ಮಾಡಿಕೊಂಡಿದ್ದರು. ಶ್ರೀನಿವಾಸ್‌ ಗೌಡ ಎಂಬುವರ ಜೊತೆ ಹಣದ ವ್ಯವಹಾರಕ್ಕೆ ಕಿರಿಕ್‌ ಕೂಡ ಆಗಿತ್ತು. ಗುರುಪ್ರಸಾದ್‌ಗೆ ಅಭಿಮಾನಿಯಾಗಿದ್ದ ಶ್ರೀನಿವಾಸ್‌ ಗೌಡ 25 ಲಕ್ಷ ಹಣ ನೀಡಿದ್ದರು. ಗುರುಪ್ರಸಾದ್‌ ಬರವಣಿಗೆ ಮೆಚ್ಚಿ ಜೊತೆಯಲ್ಲೇ ಇದ್ದರು ಶ್ರೀನಿವಾಸ್‌ ಗೌಡ.

ಹಣ ವಾಪಸ್‌ ಕೊಡಲಾಗದೇ ಕಿರಿಕ್‌ ಮಾಡಿಕೊಂಡಿದ್ದರು ನಿರ್ದೇಶಕ ಗುರುಪ್ರಸಾದ್‌ ಅವರು. ಈ ಬಗ್ಗೆ ಕೋರ್ಟ್‌ ಮೆಟ್ಟಿಲೇರಿದ್ದ, ಗುರುಪ್ರಸಾದ್‌ ವಿರುದ್ದ ಕಾನೂನು ಸಮರ ಸಾರಿದ್ದರು. ಅಕ್ಟೋಬರ್‌ 24ರಂದು ಇದ್ದ ಕೋರ್ಟ್‌ವಿಚಾರಣೆಗೂ ಹಾಜರಾಗಿರಲಿಲ್ಲ ಗುರುಪ್ರಸಾದ್‌. ಮೆಡಿಕಲ್‌ ರಿಪೋರ್ಟ್‌ ನೀಡಿ ವಿಚಾರಣೆ ಮುಂದೂಡಿಸಿಕೊಂಡಿದ್ದರು.

ನಿನ್ನೆ ಅಂದರೆ ನವೆಂಬರ್‌ 2ಕ್ಕೆ ಗುರುಪ್ರಸಾದ್‌ ಹುಟ್ಟುಹಬ್ಬ ಇತ್ತು. ಶುಭಾಶಯ ಕೋರಲು ಕರೆಮಾಡಿದವರಿಗೂ ನಾಟ್‌ ರೀಚಬಲ್‌ ಬಂದಿತ್ತು ಮೊಬೈಲ್‌.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

‘ಮಠ’ ಸಿನೆಮಾ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ..!

Published

on

ಸುದ್ದಿದಿನಡೆಸ್ಕ್:ಸ್ಯಾಂಡಲ್‌ವುಡ್‌ನ ಖ್ಯಾತ ನಿರ್ದೇಶಕ ʻಮಠʼ ಗುರುಪ್ರಸಾದ್‌ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ.

52 ವರ್ಷದ ಕನಕಪುರ ಮೂಲದ ಗುರುಪ್ರಸಾದ್‌ ಇನ್ನಿಲ್ಲಾ.. ತುಮಕೂರು ರಸ್ತೆಯ ಅಪಾರ್ಟ್‌ಮೆಂಟ್‌ನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾಲದ ಸುಳಿಗೆ ಸಿಲುಕಿದ್ದ ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಠ ಸಿನಿಮಾ ಮೂಲಕ ನಿರ್ದೇಶಕರಾಗಿ ಚಂದನವನಕ್ಕೆ ಪಾದಾರ್ಪಣೆ ಮಾಡಿದ್ದರು. ಮಠ, ಎದ್ದೇಳು ಮಂಜುನಾಥ್‌ ಚಿತ್ರದ ಮೂಲಕ ಮನೆಮಾತಾಗಿದ್ದರು.

ನಿರ್ದೇಶಕ ʻಮಠʼ ಗುರುಪ್ರಸಾದ್‌ ಅವರು ನವೆಂಬರ್ 02, 1972 ರಂದು ರಾಮನಗರದಲ್ಲಿ ಜನಿಸಿದ್ದರು, ಅಂದರೆ ನಿನ್ನೆ ನಿರ್ದೇಶಕ ಗುರುಪ್ರಸಾದ್‌ ಹುಟ್ಟುಹಬ್ಬ ಇತ್ತು, ನಿನ್ನೆ ಬರ್ತ್‌ ಡೇ ವಿಶ್‌ ಮಾಡಲು ಕರೆಮಾಡಿದವರಿಗೆ ನೋ ಆನ್ಸರ್‌ ಅಂತ ಬರುತ್ತಿತ್ತು, ನಿರ್ದೇಶಕ ಗುರುಪ್ರಸಾದ್‌ ಅವರ ಮೊಬೈಲ್‌ ನಾಟ್‌ ರೀಚಬಲ್‌ ಆಗಿತ್ತು, ಗುರುಪ್ರಸಾದ್‌ ತಮ್ಮ ಜನ್ಮದಿನಕ್ಕೆ ಮುನ್ನವೇ ಜೀವನಕ್ಕೆ ಅಂತ್ಯ ಹಾಡಿಕೊಂಡಿದ್ದಾರೆ. ಬರ್ತಡೇಗೂ ಮುನ್ನವೇ ಡೆತ್ ಡೇ ಮಾಡಿಕೊಂಡ ಗುರುಪ್ರಸಾದ್..!

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending