ದಿನದ ಸುದ್ದಿ
ಅಪ್ಪು ಅವರನ್ನ ಜೀವಂತವಾಗಿಡೋದು ಹೀಗೆ : ನಟಿ ರಮ್ಯ ನುಡಿ ನಮನ
ಅಕಾಲ ಮರಣಕ್ಕೆ ತುತ್ತಾದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನೆನೆದು ನಟಿ ರಮ್ಯ ತಮ್ಮ ಫೇಸ್ಬುಕ್ ನಲ್ಲಿ ಪೋಸ್ಟ್ ಮಾಡಿರುವ ಬರಹವಿದು.
- ನಟಿ ರಮ್ಯ,ಬೆಂಗಳೂರು
ಅಪ್ಪು ಜೊತೆಯಲ್ಲಿ ನಾನು ಕಳೆದ ಬಹಳಷ್ಟು ನೆನಪುಗಳು ಅತ್ಯಮೂಲ್ಯ . ನಿಮ್ಮನ್ನು ನಾವು ಎಂದೆಂದಿಗೂ ನೆನೆಯುತ್ತೇವೆ. ಈ ಕಷ್ಟದ ಸಮಯದಲ್ಲಿ ಭಗವಂತ ಅಶ್ವಿನಿ ಮತ್ತು ಕುಟುಂಬಕ್ಕೆ ಧೈರ್ಯ ಮತ್ತು ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ. ನಮ್ಮನ್ನು ಅಗಲಿರುವ ಇಂತ ಉನ್ನತ ವ್ಯಕ್ತಿಗೆ ಸಂತಾಪ ಸಲ್ಲಿಸುವ ಸಂದರ್ಭದಲ್ಲಿ ನಾನು ಅವರ ಅಭಿಮಾನಿಗಳ ಜೊತೆ ಇರುವೆನು.
ಅಪ್ಪು ಅವರ ಬಗ್ಗೆ ಹಲವರು ಬರೆದ ಎಲ್ಲಾ ಭಾವನಾತ್ಮಕ ಸಂದೇಶಗಳನ್ನು ಓದುತ್ತಿದ್ದೇನೆ ಮತ್ತು ಅವೆಲ್ಲವೂ ಅಕ್ಷರಸಹ ನಿಜ. ಕೆಲವಂತು ನನ್ನ ಕಣ್ಣಲ್ಲಿ ನೀರು ತಂದಿತು. ಅದುವೇ ಪುನೀತ್. ಹೌದು, ಅವರೇ ಅಪ್ಪು…
ಇವುಗಳನ್ನು ಓದಿದಾಗ ನನ್ನಲ್ಲಿ ಮೂಡಿದ ಕೆಲವು ಆಲೋಚನೆಗಳು ಇವು.
ಒಬ್ಬ ವ್ಯಕ್ತಿಯನ್ನು ಜೀವಂತವಾಗಿಡಲು ಉತ್ತಮ ಮಾರ್ಗ ಯಾವುದು? ನೆನಪುಗಳಲ್ಲಿ ಅಲ್ಲ, ಏಕೆಂದರೆ ಅದು ಮಾಸಿ ಹೋಗುತ್ತವೆ, ಆದರೆ ಅವರನ್ನು ಜೀವಂತವಾಗಿಡಲು ಒಂದು ಮಾರ್ಗವಿದೆ- ಅವರು ಬದುಕಿದ ರೀತಿಯಲ್ಲಿ ಪ್ರತಿದಿನ ನಾವು ಬದುಕುವುದು.
ಅವರಂತೆಯೇ ನಾವು ಪ್ರೀತಿ ಹಾಗೂ ಕರುಣಾಪೂರ್ಣ ಕಾರ್ಯಗಳಲ್ಲಿ ನಮ್ಮನ್ನು ನಾವು ತೊಡಗಿಸಿಕೊಳ್ಳುವುದರ ಮೂಲಕ ಅವರನ್ನು ಜೀವಂತವಾಗಿ ಇಡುವುದು. ದಿನನಿತ್ಯ ನಾವು ಅವರ ವ್ಯಕ್ತಿತ್ವವನ್ನು ಅನುಸರಿಸುವುದರ ಮೂಲಕ ನಾವು ಅವರನ್ನು ನಮ್ಮಲ್ಲಿ ಜೀವಂತವಾಗಿ ಇಡಲು ಸಾಧ್ಯ. ಈ ರೀತಿ ನಾವು ಅವರ ಮೌಲ್ಯಗಳನ್ನು ಮುಂದುವರಿಸಬಹುದು. ನಾವೆಲ್ಲರು ಅಪ್ಪು ರನ್ನು ಪ್ರತಿ ದಿನವೂ ಆರಾಧಿಸೋಣ.
ಸುದ್ದಿದಿನ.ಕಾಂ|ವಾಟ್ಸಾಪ್|9980346243