ದಿನದ ಸುದ್ದಿ
ಹಿಟ್ಲರ್ ಸತ್ತು ಇಂದಿಗೆ ಏಳು ದಶಕ
![](https://suddidina.com/wp-content/uploads/2018/04/adolf-hitler.jpg)
ಸುದ್ದಿದಿನ ವಿಶೇಷ: ಜರ್ಮನಿಯ ಸರ್ವಾಧಿಕಾರಿ ಅಡಲ್ಫ್ ಹಿಟ್ಲರ್ ಸತ್ತು ಏ.30 ಇಂದಿಗೆ 73 ವರ್ಷ. ಜನಾಂಗೀಯ ದ್ವೇಷದ ಮೂಲಕ ಜರ್ಮನಿಯನ್ನು ಆಳಿದ ಹಿಟ್ಲರ್ ಯಹೂದಿ ಸಮುದಾಯಕ್ಕೆ ಸಿಂಹಸ್ವಪ್ನವಾಗಿ ಕಾಡಿದ್ದ. ಅಷ್ಟೇ ಅಲ್ಲ ಇಡೀ ವಿಶ್ವವನ್ನು ಗೆಲ್ಲುವ ಕನಸು ಕಾಣುತ್ತಿದ್ದ ಹಿಟ್ಲರ್ ಜಗತ್ತಿನ ಜನರಲ್ಲಿ ಭಯದ ವಾತಾವರಣ ಸೃಷ್ಟಿಸಿದ್ದ. ಇಡೀ ಜರ್ಮನಿಯಲ್ಲಿ ಯಹೂದಿಗಳು ನರಕಯಾತನೆ ಅನುಭವಿಸಿದ್ದರು. ಜಿಲೆಟಿನ್ ಎಂಬ ಯಂತ್ರಕ್ಕೆ ಬಲಿಯಾದ ಜೀವಗಳಿಗೆ ಲೆಕ್ಕವಿರಲಿಲ್ಲ. ಇಂತಹ ಹಿಟ್ಲರ್ ಬಗೆಗೆ ಸಾವಿರಾರು ಕಥೆಗಳು ಹುಟ್ಟಿಕೊಂಡಿವೆ. ಕೆಲ ಸಿನೆಮಾಗಳಲ್ಲಿ ಕೂಡ ಅದು ಅಭಿವ್ಯಕ್ತಿಯಾಗಿದೆ.
ಭಯದ ವ್ಯಕ್ತಿ ಹಿಟ್ಲರ್
ಜಗತ್ತಿನ ನಿದ್ದೆಗೆಡಿಸಿದ್ದ ಹಿಟ್ಲರ್ ಮೂಲತಃ ಸಂಕೋಚ ಹಾಗೂ ಭಯದ ವ್ಯಕ್ತಿಯಾಗಿದ್ದನಂತೆ. ನೋಡುವುದಕ್ಕೆ ಕುಳ್ಳ ವ್ಯಕ್ತಿಯಾಗಿದ್ದ ಆತನಿಗೆ ಮೊದಲು ಜರ್ಮನಿಯ ಸೇನೆಯಲ್ಲಿ ಅವಕಾಶ ಸಿಕ್ಕಿರಲಿಲ್ಲ. ಆತ ಎಷ್ಟು ಸಂಕೋಚ ಹಾಗೂ ಭಯದ ವ್ಯಕ್ತಿಯಾಗಿದ್ದ ಎಂಬುದನ್ನು ಚಾರ್ಲಿ ಚಾಪ್ಲಿನ್ ‘ದಿ ಡಿಕ್ಟೇಟರ್’ ಎಂಬ ಸಿನೆಮಾದಲ್ಲಿ ತೋರಿಸಿದ್ದಾರೆ. ಇಡೀ ಸಿನೆಮಾ ಅಡಲ್ಫ್ ಹಿಟ್ಲರ್ ನನ್ನು ಕೇಂದ್ರವಾಗಿಸಿಕೊಂಡಿದ್ದು, ಹಿಟ್ಲರ್ ನ ಸ್ವಭಾವವನ್ನು ಹಾಸ್ಯದ ಮೂಲಕ ಅನಾವರಣ ಮಾಡಲಾಗಿದೆ.
Read Also: ‘ಅತ್ಯಾಚಾರ’ ಮಾನವ ನಿರ್ಮಿತ ವಿಕೃತಿ
ಹಿಟ್ಲರ್ ಗೆ ಲೈಂಗಿಕ ಆಸಕ್ತಿ ಇರಲಿಲ್ಲ
ಹಿಟ್ಲರ್ ವೈಯಕ್ತಿಕ ಬದುಕಿನ ಬಗೆಗೆ ಹಲವು ವಿಶಿಷ್ಟ ಕತೆಗಳು ಹುಟ್ಟಿಕೊಂಡಿವೆ. ಹಿಟ್ಲರ್ ಗೆ ಲೈಂಗಿಕ ಆಸಕ್ತಿ ಇರಲಿಲ್ಲ. ಆತನಿಗೆ ಕೇವಲ ಒಂದು ವೃಷಣವಿತ್ತು, ಆತ ಸಲ್ಲಿಂಗಿಯಾಗಿದ್ದ ಎಂಬ ತರಹೇವಾರಿ ಕತೆಗಳು ಇವೆ. ಇತಂಹ ಹಿಟ್ಲರ್ ಸುಮಾರು ಎಂಟು ಮಹಿಳೆಯರೊಂದಿಗೆ ಸಖ್ಯ ಹೊಂದಿದ್ದ, ಆತ ರತಿಕ್ರೀಡೆ ಆಡುವಾಗು ಕೂಡ ಶಿಸ್ತು ಪಾಲಿಸುತ್ತಿದ್ದ. ಪೂರ್ತಿ ಬಟ್ಟೆ ಬಿಚ್ಚದೇ ಮಿಲನದಲ್ಲಿ ಭಾಗಿಯಾಗುತ್ತಿದ್ದ ಎಂದು ಹೇಳಲಾಗುತ್ತಿದೆ. ಆತ ಸಖ್ಯ ಹೊಂದಿದ್ದ ಮಹಿಳೆಯರು ಆತನಿಗಿಂದ ಅತಿ ಕಿರಿಯ ವಯಸ್ಸಿನವರು ಆಗಿರುತ್ತಿದ್ದರು ಎಂಬುದು ವಿಶೇಷ.
ಜಿಲೆಟಿನ್ ಯಂತ್ರ
ಭಯ ಹಾಗೂ ಸಂಕೋಚ ಸ್ವಭಾವ ಹೊಂದಿದ್ದ ಹಿಟ್ಲರ್ ನಲ್ಲಿ ಹಲವು ವಿಕೃತಿ ಮನೆ ಮಾಡಿದ್ದವು. ಲಕ್ಷಾಂತರ ಯಹೂದಿಗಳ ಮಾರಣ ಹೋಮ ನಡೆಸಿದ್ದ ಹಿಟ್ಲರ್ ಸಾವಿನ ಸಂಭ್ರಮ ಮಾಡಿದ್ದ. ಸುಮಾರು ಹತ್ತು ಸಾವಿರ ಮಹಿಳೆಯರು ಸೇರಿದಂತೆ ಲಕ್ಷಾಂತರ ಮಂದಿ ಯಹೂದಿಗಳು ಜಿಲೆಟಿನ್ ಎಂಬ ಯಂತ್ರಕ್ಕೆ ಕೊರಳೊಡ್ಡಿದ್ದರು. ಆತನಿಂದ ತಪ್ಪಿಸಿಕೊಳ್ಳಲು ಯಹೂದಿಗಳು ಜರ್ಮನಿ ತೊರೆದು ಜಗತ್ತಿನ ನಾನಾ ದೇಶಗಳಿಗೆ ಪಲಾಯನ ಮಾಡಿದ್ದರು. ಇತಂಹ ಹಿಟ್ಲರ್ ಕೊನೆಗೆ ಒಂದು ದಿನ ಆತ್ಮಹತ್ಯೆಗೆ ಶರಣಾದ.
![](https://suddidina.com/wp-content/uploads/2022/04/20210226_111406.jpg)
ಕ್ರೀಡೆ
Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು
![](https://suddidina.com/wp-content/uploads/2024/07/suddidina_paris_Olympic.jpg)
ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.
ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.
ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ
![](https://suddidina.com/wp-content/uploads/2024/06/judges_suddidina.jpg)
ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.
ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್ಗಳನ್ನು ಒಳಗೊಂಡಿದೆ.
ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ
![](https://suddidina.com/wp-content/uploads/2024/05/application_invitation_arji_suddidina.jpg)
ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
-
ದಿನದ ಸುದ್ದಿ6 days ago
ಆತ್ಮಕತೆ | ಹೊಸದಾಗಿ ಬಂದ ಹಳೆಯ ಗುರುಗಳು
-
ದಿನದ ಸುದ್ದಿ3 days ago
K-SET| ಕೆಸೆಟ್ ಪರೀಕ್ಷೆ ; ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ
-
ದಿನದ ಸುದ್ದಿ6 days ago
ಶಿರೂರು ಗುಡ್ಡಕುಸಿತ ಪ್ರದೇಶಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
-
ದಿನದ ಸುದ್ದಿ7 days ago
ದಾವಣಗೆರೆ ಭಾರೀ ಮಳೆ | ಬೆಳೆ ನಷ್ಟವಾಗಿದ್ದೆಷ್ಟು..?
-
ದಿನದ ಸುದ್ದಿ6 days ago
ಕೃಷಿ ಪಂಡಿತ್, ಆತ್ಮಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ಅತಿಥಿ ಉಪನ್ಯಾಸಕ ಹುದ್ದೆ ; ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ನಾಳೆಯಿಂದ ಸಂಸತ್ತಿನ ಬಜೆಟ್ ಅಧಿವೇಶನ
-
ದಿನದ ಸುದ್ದಿ4 days ago
ಬಲ್ಲಿರೇನು ಕೊಬ್ಬರಿ ಎಣ್ಣೆ ಮಹಿಮೆ..!