Connect with us

ದಿನದ ಸುದ್ದಿ

ಹೊಸಪೇಟೆ ನಗರದ ತುಂಬೆಲ್ಲಾ ಜಾಹೀರಾತುಗಳ ಹಾವಳಿ ; ಕಣ್ಣ್ಮುಚ್ಚಿ ಕುಳಿತ ಅಧಿಕಾರಿಗಳು

Published

on

  • ಗಿರೀಶ್ ಕುಮಾರ್ ಗೌಡ

ಸುದ್ದಿದಿನ,ಹೊಸಪೇಟೆ:ನಗರದಲ್ಲಿ 2025 ಮೇ 20 ರಂದು ನಡೆಯುವ ಸಾಧನಾ ಸಂಪರ್ಕ ಸಮಾವೇಶಕ್ಕೆ ಮೇ 15 ರಿಂದಲೇ ಹೊಸಪೇಟೆ ನಗರದ ತುಂಬೆಲ್ಲಾ ರಾಜಕೀಯ ನಾಯಕರ ಜಾಹೀರಾತುಗಳ ಹಾವಳಿ ಹೆಚ್ಚಾಗಿದೆ .ಆದರೆ ಜಿಲ್ಲೆಯ ಅಧಿಕಾರಿಗಳು ಮತ್ತು ಪರಿಸರ ಅಭಿಯಂತರರು ನಿದ್ದೆಗೆ ಜಾರಿರುವ ದುರ್ಘಟನೆ ನಡೆದಿದೆ.

ನಗರದ ಟಿ.ಬಿ ಡ್ಯಾಂ ರಸ್ತೆಯ ಉದ್ದಕ್ಕೂ ವಿಜಯನಗರ ಕ್ಷೇತ್ರದ ಶಾಸಕ ಹೆಚ್.ಆರ್. ಗವಿಯಪ್ಪ ಅವರು ದೊಡ್ಡ ಗಾತ್ರದ ಬ್ಯಾನರ್ ಗಳನ್ನು ಹಾಕಿಕೊಂಡು ನಗರ ಅಭಿವೃದ್ಧಿ ಮಾಡದೇ ಶೋಕಿ ಮಾಡಿಕೊಂಡು ಕೈಮುಗಿದು ಬ್ಯಾನರ್ ಹಾಕಿಕೊಂಡಿದ್ದು ದುರಂತ ಎನ್ನುವ ಮಾತುಗಳು ಸಾರ್ವಜನಿಕರ ವಲಯದಲ್ಲಿ ಕೇಳಿ ಬಂದಿದೆ.

ಇನ್ನು ಯಾವುದೇ ನಗರಸಭೆಯಿಂದ ಅನುಮತಿಯನ್ನು ಪಡೆಯದೆ ಇರೋದ್ ಸಹ ದುರಂತವಾಗಿದೆ. ಸಾಮಾನ್ಯ ಜನರಿಗೆ ಒಂದು ಕಾನೂನು, ರಾಜಕೀಯ ವ್ಯಕ್ತಿಗಳಿಗೆ ಒಂದು ಕಾನೂನು ಮಾಡಿದ್ದು ಜಿಲ್ಲಾಧಿಕಾರಿಗಳಿಗೆ ಹಾಗೂ ಪರಿಸರ ಅಭಿಯಂತರರಿಗೆ ನಾಚಿಕೆಗೇಡಿನ ಸಂಗತಿಯಾಗಿದೆ.

ಬ್ಯಾನರ್ ನಲ್ಲಿ ಸಚಿವ ಸಂತೋಷ ಲಾಡ್ ಇಲ್ಲ

ಕರ್ನಾಟಕದಲ್ಲಿ ಸಚಿವ ಸಂತೋಷ ಲಾಡ್ ಪೋಟೋ ಬ್ಯಾನರ್ ನಲ್ಲಿ ಇಲ್ಲದೆ ಇರೋದ್ ಸಹ ದುರಂತ. ಏಕೆಂದರೆ ಕಾಂಗ್ರೆಸ್ ಪಕ್ಷದಲ್ಲಿ ಏನೇ ಸಮಸ್ಯೆ ಬಂದರೂ ಮೊದಲು ಹೋಗೋದು ಸಚಿವ ಸಂತೋಷ್ ಲಾಡ್ ಆದರೆ ಸಾಧನಾ ಸಂಪರ್ಕ ಸಮಾವೇಶದ ಶಾಸಕ ಗವಿಯಪ್ಪ ಅವರ ಬ್ಯಾನರ್ ನಲ್ಲಿ ಸಂತೋಷ ಲಾಡ್ ಕಾಣದೇ ಇರೋದು ದುರಂತವಾಗಿದೆ.

I Don’t know Sir ಎಂದ ಆರತಿ ಪರಿಸರ ಅಭಿಯಂತರರು

ಇನ್ನು ಸಮಾವೇಶದ ಅಂಗವಾಗಿ ನಗರದಲ್ಲಿ ಹಾಕಿದ ಬ್ಯಾನರ್ ಗಳ ಬಗ್ಗೆ ಪರಿಸರ ಅಭಿಯಂತರರಾದ ಆರತಿ ಅವರಿಗೆ ಆರಂಭದಲ್ಲಿ ಪೋನ್ ಕರೆ ಮಾಡಿದರೆ ಸ್ವೀಕರಿಸಲಿಲ್ಲ, ವ್ಯಾಟ್ಸಾಪ್ ಮೂಲಕ ಸಂದೇಶ ಕಳಿಸಿದರೇ I Don’t know Sir ಎಂದು ಸಂದೇಶ ಕಳಿಸಿದ್ದಾರೆ‌. ಇನ್ನು ಈ ವಿಚಾರವಾಗಿ ತಹಶಿಲ್ದಾರರಾದ ಶೃತಿ ಹಾಗೂ ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್ ಇನ್ನಿತರ ಅಧಿಕಾರಿಗಳು ಮೌನರಾಗಿದ್ದು ಏಕೆ ? ಎಂದು ಸಾರ್ವಜನಿಕರು ಪ್ರಶ್ನೆ ಮಾಡಿದರು.

ಸಂಜೆ ಕರೆ ಮಾಡಿದರೆ 250 ಕ್ಕೆ ಗವಿಯಪ್ಪ ಅವರು ಅನುಮತಿಗೆ ಕಳಿಸಿದ್ದಾರೆ ನಂತರ ಅವರ ಯಾವುದೇ ದಾಖಲೆಗಳನ್ನು ಪತ್ರಿಕೆಗೆ ಕಳಿಸಲಿಲ್ಲದೇ ಇರೋದ್ ಸಹ ದುರಂತ. ಬಹಳ ಸುಳ್ಳು ಹೇಳುವ ಅಧಿಕಾರಿ ಆರತಿ.

ಇನ್ನು ಸಿಎಂ ಮತ್ತು ಡಿಸಿಎಂ ನಗರಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಪುಟ್ ಪಾಥ್ ಮೇಲೆ ಇದ್ದ ಅಂಗಡಿಗಳು, ಹೋಟೆಲ್ ಗಳು, ಬಂಡಿಗಳನ್ನು, ಆಟೋ ನಿಲ್ದಾಣದಲ್ಲಿ ಇದ್ದ ಆಟೋಗಳನ್ನು ತೆರವು ಗೊಳಿಸಿ ಸಾರ್ವಜನಿಕರಿಗೆ ತೊಂದರೆ ಉಂಟು ಮಾಡಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

Published

on

ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.

ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.

ತಿರಸ್ಕೃತಗೊಂಡ ಅರ್ಜಿಗಳ ಅಭ್ಯರ್ಥಿಗಳ ಆಕ್ಷೇಪಣೆಗಳಿದ್ದಲ್ಲಿ, ಮಾರ್ಚ್ 13 ರೊಳಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಪೂರಕ ದಾಖಲಾತಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಗಂಗಾರ‍್ವಾಮಿ.ಜಿ.ಎಂ.ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ

Published

on

ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.

ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)

AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.

ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್‌ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.

ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.

ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್‌ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್‌ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.

ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್‌ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.

ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending