ಅಂಕಣ
ವಿದ್ಯಾರ್ಥಿಗಳಿಗೆ ಸಲಹೆ | ಓದಿದ್ದನ್ನು ಸುಲಭವಾಗಿ ನೆನಪಿನಲ್ಲಿಡಲು ಕೆಲವು ಟಿಪ್ಸ್ ಗಳು
ಓದಿದ ಮಾಹಿತಿಯನ್ನು ನೆನಪಿನಲ್ಲಿ ಇಟ್ಟುಕೊಳ್ಳಲು ಕೆಲವೊಂದು ಪರಿಣಾಮಕಾರಿ ಟಿಪ್ಸ್ (ಸೂಚನೆಗಳು) ಇಲ್ಲಿವೆ
ಸಮಯದಲ್ಲಿ ಪುನರವಲೋಕನ (Revision) ಮಾಡಿ : ಓದಿದ 24 ಗಂಟೆಗಳ ಒಳಗೆ ಪುನರವಲೋಕನೆ ಮಾಡಿದರೆ, ಮಾಹಿತಿ ನೆನಪಿನಲ್ಲಿ ಹೆಚ್ಚು ಕಾಲ ಇರುತ್ತದೆ. Spaced repetition ತಂತ್ರವನ್ನು ಬಳಸಿ (ಉದಾ: 1 ದಿನ, 3 ದಿನ, 7 ದಿನ, 15 ದಿನ…)
ಸಾಧ್ಯವಾದರೆ ಬರೆಯುತ್ತಾ ಓದಿ:ಬರೆಯುತ್ತಾ ಓದಿದರೆ ಮಗಜಿನಲ್ಲಿ ಆ ಮಾಹಿತಿ ಮುದ್ರಣವಾಗುತ್ತದೆ.ನೋಟ್ಸ್ ತಯಾರಿಸಿ, ಮುಖ್ಯ ಅಂಶಗಳನ್ನು Highlighter ಅಥವಾ ಪೆನ್ ಬಳಸಿ ಗುರುತಿಸಿ.
Teaching Method:ನೀವು ಓದಿದುದನ್ನು ಯಾರಿಗಾದರೂ ಕಲಿಸಲು ಪ್ರಯತ್ನಿಸಿ. ಕಲಿಸಲು ಆಗುವಷ್ಟು ನಿಮಗೆ ಅರ್ಥವಾಗಿರುತ್ತದೆ ಮತ್ತು ಅದು ದೀರ್ಘಕಾಲಕ್ಕೆ ನೆನಪಿನಲ್ಲಿ ಉಳಿಯುತ್ತದೆ.
Mnemonic Devices (ಸ್ಮರಣಾ ಸಾಧನಗಳು):ಶಬ್ದಸಂಕೇತ, ಸಂಕ್ಷಿಪ್ತ ರೂಪಗಳು, ಅಕ್ಷರ ಸಂಯೋಜನೆ ಇತ್ಯಾದಿಗಳನ್ನು ಬಳಸಿ. ಉದಾಹರಣೆ: VIBGYOR – Rainbow colors ನೆನಪಿಡಲು.
Visualization (ಕಲ್ಪನೆ):ಓದಿದ ವಿಷಯವನ್ನು ಚಿತ್ರ ರೂಪದಲ್ಲಿ ತಿಲುಕಿಸಿಕೊಳ್ಳಿ. ಮನಸ್ಸಿನಲ್ಲಿ ದೃಶ್ಯ ಕಲ್ಪನೆ ಮಾಡಿದರೆ ಹೆಚ್ಚು ನಿಜವಾಗಿ ನೆನಪಾಗುತ್ತದೆ. ಸಂಕುಚಿತ ಓದಲು ಬದಲು ಸಂಪೂರ್ಣ ಅರ್ಥ ಮಾಡಿಕೊಳ್ಳಿ. ಗಟ್ಟಿಯಾಗಿ ಕೇವಲ ಪಾಠವನ್ನು ಹಠಪಾಠ ಮಾಡುವ ಬದಲು ಅರ್ಥಮಾಡಿಕೊಳ್ಳಿ. ಅರ್ಥ ಮಾಡಿಕೊಂಡ ಮಾಹಿತಿ ಹೆಚ್ಚು ದೀರ್ಘಕಾಲ ನೆನಪಿನಲ್ಲಿ ಉಳಿಯುತ್ತದೆ.
ನಿದ್ರೆ, ಆಹಾರ ಮತ್ತು ವ್ಯಾಯಾಮ : ಉತ್ತಮ ನಿದ್ರೆ ಮೆಮೋರಿ ವೃದ್ಧಿಗೆ ಅಗತ್ಯ.ತೂಕ ಇಳಿಯದ ಆಹಾರ, ನೀರಿನ ಸೇವನೆ ಮತ್ತು ನಿತ್ಯ ವ್ಯಾಯಾಮ ಮೆದುಳಿಗೆ ಸಹಕಾರಿಯಾಗುತ್ತದೆ.
ಓದಿದ್ದನ್ನು ನೆನಪಿನಲ್ಲಿ ಇಟ್ಟುಕೊಳ್ಳಲು ಇನ್ನೂ ಕೆಲವು ಪರಿಣಾಮಕಾರಿ ಟಿಪ್ಸ್ಗಳು ಇಲ್ಲಿವೆ:
ಸಮಯಾನುಕೂಲ ಪುನರಾವೃತ್ತಿ (Spaced Repetition): ಒಂದೇ ವಿಷಯವನ್ನು ಕಡಿಮೆ ಸಮಯದ ಅವಧಿಗಳಲ್ಲಿ ಮರುಮರು ಓದಿ.ಮೊದಲ ದಿನ ಓದಿ → ನಂತರ 1 ದಿನ, 3 ದಿನ, 7 ದಿನ, 15 ದಿನಕ್ಕೆ ಮರು ಓದಿ.
ಅರ್ಥ ಮಾಡಿಕೊಂಡು ಓದುವುದು: ಅರ್ಥವಿಲ್ಲದೆ ಹಚ್ಚುಮೆಚ್ಚಾಗಿ ಓದಿದರೆ ನೆನಪಿಗೆ ಅಷ್ಟಾಗಿ ಬರುವುದಿಲ್ಲ. ವಿಷಯವನ್ನು ನಿಮ್ಮದೇ ಭಾಷೆಯಲ್ಲಿ ಅರ್ಥ ಮಾಡಿಕೊಂಡು ಓದುವುದು ಉತ್ತಮ.
ನಿಮ್ಮದೇ ಪದಗಳಲ್ಲಿ ಹೇಳುವುದು (Self-Explanation): ಓದಿದ ವಿಷಯವನ್ನು ಇತರರಿಗೆ (ಅಥವಾ ಕೇವಲ ನಿಮಗೆ) ನಿಮ್ಮದೇ ಭಾಷೆಯಲ್ಲಿ ವಿವರಿಸಿ ಹೇಳಿ.
ಮೈಂಡ್ ಮ್ಯಾಪ್ ಅಥವಾ ಡೈಗ್ರಾಂ ಬಳಕೆ:ಮಾಹಿತಿ ದೃಶ್ಯ ರೂಪದಲ್ಲಿ (visual) ಓದಿದರೆ ಉಳಿತಾಯ ಹೆಚ್ಚಾಗುತ್ತದೆ. ಸಂಕ್ಷಿಪ್ತ ನೋಟ್ಸ್, ಟೇಬಲ್ಗಳು, ಡೈಗ್ರಾಂಗಳು ಉಪಯುಕ್ತ.
ಪ್ರಶ್ನೆ ಮಾಡಿ ಉತ್ತರಿಸಲು ಯತ್ನಿಸಿ (Active Recall): ಪ್ರಶ್ನೆ ರೂಪದಲ್ಲಿ ಓದಿದ ವಿಷಯವನ್ನು ಪ್ರಶ್ನಿಸಿ, ಉತ್ತರಿಸಬೇಕು. ಉದಾಹರಣೆ: “ಈ ತತ್ವದ ಮೂಲ ಅರ್ಥವೇನು?”, “ಇದು ಯಾವ ಸಂದರ್ಭದಲ್ಲಿದೆ?”
ವಿಶ್ರಾಂತಿ ಮತ್ತು ನಿದ್ರೆ : ನಿರಂತರ ಓದುವ ಬದಲು ಮಧ್ಯೆ ಮಧ್ಯೆ ವಿಶ್ರಾಂತಿ ತೆಗೆದುಕೊಳ್ಳಿ. ಉತ್ತಮ ನಿದ್ರೆ ಮೆಮೊರಿಯಿಗಾಗಿ ಬಹಳ ಮುಖ್ಯ.
ಪ್ರಯೋಗಾತ್ಮಕ ಕಲಿಕೆ (Practical Application): ಓದಿದ ವಿಷಯವನ್ನು ಜೀವನದಲ್ಲಿ ಅಥವಾ ಅಭ್ಯಾಸಗಳಲ್ಲಿ ಅನ್ವಯಿಸಿ ನೋಡಲು ಯತ್ನಿಸಿ.
ಸಂಕ್ಷಿಪ್ತ ನೋಟ್ಸ್ ತೆಗೆದುಕೊಳ್ಳಿ: ಓದುತ್ತಾ ಮುಖ್ಯ ವಿಷಯಗಳನ್ನು ಟಿಪ್ಪಣಿ ರೂಪದಲ್ಲಿ ಬರೆದುಕೊಳ್ಳಿ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ತತ್ವಪದಗಳು ಸಾರ್ವಕಾಲಿಕ ಬೆಳಕನಿಧಿ: ಕಾ.ತ.ಚಿಕ್ಕಣ್ಣ
ಸುದ್ದಿದಿನ,ಬೆಂಗಳೂರು:ತತ್ವಪದಗಳು ಎಲ್ಲ ಕಾಲಕ್ಕೂ ಸಲ್ಲುವಂತಹ ಬೆಳಕನ್ನು ನೀಡುವ ಸೃಜನಶೀಲ ಸಂರಚನೆಗಳಾಗಿವೆ ಎಂದು ಕರ್ನಾಟಕ ಸರ್ಕಾರದ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಅಧ್ಯಕ್ಷರಾದ ಶ್ರೀ ಕಾ.ತ.ಚಿಕ್ಕಣ್ಣ ಅವರು ಅಭಿಪ್ರಾಯಪಟ್ಟರು.
ಬೆಂಗಳೂರಿನ ಕೆ.ನಾರಾಯಣಪುರದ ಕ್ರಿಸ್ತು ಜಯಂತಿ ಡೀಮ್ಡ್ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗ ಹಾಗೂ ಕರ್ನಾಟಕ ಸರ್ಕಾರದ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಕನ್ನಡ ತತ್ವಪದ ಸಾಹಿತ್ಯ: ಸಾಂಸ್ಕೃತಿಕ ಅನುಸಂಧಾನ’ ವಿಷಯ ಕುರಿತಾದ ಒಂದು ದಿನದ ರಾಷ್ಟ್ರೀಯ ವಿಚಾರಸಂಕಿರಣದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ತತ್ವಪದ ಸಾಹಿತ್ಯ ರೂಪುಗೊಂಡಿದ್ದ ಕಾಲವನ್ನು ಕತ್ತಲಯುಗ ಎಂದು ಕರೆದು ವಿಸ್ಮೃತಿಗೆ ತಳ್ಳಲಾಗಿತ್ತು. ಆದರೆ ಆ ಕತ್ತಲೆಯುಗದಲ್ಲಿಯೇ ಜಗತ್ತಿಗೆ ಮಹೋನ್ನತ ಬೆಳಕು ನೀಡುವ ನುಡಿರತ್ನಗಳು ರಚನೆಗೊಂಡಿದ್ದವು. ತತ್ವಪದಕಾರರು ಪರಂಪರೆಯೊಂದಿಗೆ ಸಂವಾದ ನಡೆಸುತ್ತಾ ವರ್ತಮಾನಕ್ಕೆ ಸೂಕ್ತವಾಗಿ ಅನ್ವಯವಾಗುವ ಹಾಗೂ ಭವಿಷ್ಯಕ್ಕೆ ಬೇಕಾದ ಜಾಗೃತಿಯನ್ನು ನೀಡುವ ಮೂಲಕ ಕನ್ನಡ ಸಂಸ್ಕೃತಿಯಲ್ಲಿ ತಮ್ಮದೇ ಆದ ಮೌಲ್ಯಯುತ ಸ್ಥಾನವನ್ನು ಪಡೆದುಕೊಂಡಿವೆ. ಸಮಾಜದಲ್ಲಿರುವ ಜಾತಿಭೇದ, ಲಿಂಗಭೇದ, ವರ್ಣಭೇದ ಮೊದಲಾದ ವಿಷಕಾರಿ ಮನಸ್ಥಿತಿಗೆ ತತ್ವಪದಕಾರರು ತಮ್ಮ ನುಡಿ-ನಡೆಗಳ ಮೂಲಕ ಚಿಕಿತ್ಸೆ ನೀಡುವ ಮೂಲಕ ಬದುಕಿನ ಸತ್ಯ ಮತ್ತು ಸಾರ್ಥಕತೆಯನ್ನು ಸಾಧಿಸಿತೋರಿದ್ದಾರೆ ಎಂದು ತಿಳಿಸಿದರು.
ವಿಶ್ವಾತ್ಮಕವಾದ ಸಂವೇದನೆಯ ತತ್ವಪದ ಸಾಹಿತ್ಯ
ವಿಚಾರಸಂಕಿರಣವನ್ನು ಉದ್ಘಾಟನೆ ಮಾಡಿದ ಕ್ರಿಸ್ತು ಜಯಂತಿ ವಿವಿಯ ಸಂಸೋಧನೆ ಮತ್ತು ಅಭಿವೃದ್ಧಿ ವಿಭಾಗದ ನಿರ್ದೇಶಕರಾದ ಫಾ.ಡಾ.ಮರಿಯಾಲಾಲ್ ಜೋಸೆಫ್ ಅವರು, ಕನ್ನಡದ ತತ್ವಪದಗಳು ಜನಸಾಮಾನ್ಯರ ವೇದಗಳಾಗಿವೆ. ಕನ್ನಡ ಸಾಹಿತ್ಯಕ್ಕೆ ಸಂಗೀತಾತ್ಮಕ ಶಾಸ್ತ್ರೀಯ ಸಂರಚನೆಯ ಜೊತೆಗೆ ವಿಶ್ವಾತ್ಮಕವಾದ ಸಂವೇದನೆಯ ಮೂಲಕ ಮಹತ್ತರವಾದ ಕೊಡುಗೆ ನೀಡಿದ್ದು ತತ್ವಪದ ಸಾಹಿತ್ಯ.
ಮಧ್ಯಯುಗೀನ ಕಾಲದ ಭಕ್ತಿಚಳವಳಿಯ ಭಾಗವಾಗಿ ಮೂಡಿಬಂದ ವಚನ ಸಾಹಿತ್ಯ ಹಾಗೂ ಕೀರ್ತನ ಸಾಹಿತ್ಯಗಳು ಕರ್ನಾಟಕದಲ್ಲಿ ಮೂಡಿಸಿದ ಸಾಂಸ್ಕೃತಿಕ ಚೈತನ್ಯಶೀಲತೆಯನ್ನು ನಂತರದಲ್ಲಿ ಮುಂದುವರೆಸುವ ಮೂಲಕ ಮತ್ತಷ್ಟು ಎತ್ತರಕ್ಕೆ ಕೊಂಡೊಯ್ದದ್ದು ತತ್ವಪದ ಸಾಹಿತ್ಯವಾಗಿದೆ. ಇಂದಿನ ಆವೇಗದ ಆಧುನಿಕ ಜಗತ್ತಿಗೆ ತತ್ವಪದಕಾರರು ನೀಡಿದ ಅರಿವಿನ ಬೆಳಕು ಅತ್ಯಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.
ನಿಜತ್ವ ಬೆಳಗುವ ದಾರಿದೀಪ ತತ್ವಪದಗಳು-ಪದ್ಮಾಲಯ ನಾಗರಾಜ್: ಪ್ರಧಾನಗೋಷ್ಠಿಯ ಅಧ್ಯಕ್ಷತೆ ವಹಿಸಿ ತತ್ವಪದಗಳ ಸಾಂಸ್ಕೃತಿಕ ಮಹತ್ವ ಕುರಿತು ಮಾತನಾಡಿದ ಅಚಲ ಸಾಧಕರಾದ ಪದ್ಮಾಲಯ ನಾಗರಾಜ್ ಅವರು, ಜಗತ್ತಿನಾದ್ಯಂತ ಇಂದು ನಡೆಯುತ್ತಿರುವ ಅಧಿಕಾರ ಹಾಗೂ ವ್ಯಾಪಾರದಾಹೀ ರಾಜಕೀಯ ಲಂಪಟ, ಆರ್ಥಿಕ ಲಂಪಟ ಹಾಗೂ ಸಾಮಾಜಿಕ ಅಸಮಾನ ಸೃಷ್ಟಿಗಳು ಮಾನವಲೋಕವನ್ನು ಭ್ರಮೆ ಮತ್ತು ಅಸತ್ಯದತ್ತ ಕೊಂಡೊಯ್ಯುತ್ತಿವೆ. ಅವೈಜ್ಞಾನಿಕ ಕಲ್ಪನೆಗಳನ್ನು ಹುಟ್ಟುಹಾಕುತ್ತಾ ವಾಸ್ತವಿಕತೆಯಿಂದ ದೂರಮಾಡುತ್ತಿವೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ನಿರಂತರ ಆಗುವಿಕೆಯ ಅನಂತವಿಶ್ವದಲ್ಲಿ ನಾವೊಂದು ಬಿಂದುವೆಂಬ ಸತ್ಯದರ್ಶನ ಮಾಡಿಸುವ ಮೂಲಕ ನಿಜತ್ವವನ್ನು ಬೆಳಗುವ ದಾರದೀಪವಾಗಿವೆ ತತ್ವಪದಗಳು ಎಂದು ತಿಳಿಸಿದರು.
‘ತತ್ವಪದಕಾರ್ತಿಯರ ಲೋಕದೃಷ್ಠಿ’ಯನ್ನು ಕುರಿತು ವಿಚಾರಮಂಡನೆ ಮಾಡಿದ ಡಾ.ಶೋಭಾರಾಣಿ ಎನ್. ಅವರು, ‘ತತ್ವಪದಕಾರ್ತಿಯರು ಸಂಸಾರದ ಸಹಯಾನದೊಂದಿಗೇ ಅಧ್ಯಾತ್ಮಿಕ ಸಾಧನೆಯನ್ನು ಮಾಡಬಹುದೆಂದು ಸಾಧಿಸಿತೋರಿದ್ದಾರೆ. ನಿರ್ಭೀತ ನುಡಿಕಾರರು ತತ್ವಪದಕಾರ್ತಿಯರು. ಮಹಿಳಾ ತತ್ವಪದಕಾರರ ಇನ್ನೂ ಎಷ್ಟೋ ತತ್ವಪದಗಳು ಸಂಗ್ರಹವಾಗಬೇಕಿದೆ’ ಎಂದು ಅಭಿಪ್ರಯಪಟ್ಟರು.
‘ಕನ್ನಡ ತತ್ವಪದಗಳು ಮತ್ತು ಬಹುತ್ವ ಭಾರತ’ ಕುರಿತು ಮಾತನಾಡಿದ ರವಿ ಕಂಬಳಿ ಅವರು, ಬಹುಸಂಸ್ಕೃತಿಗಳಿರುವ ಭಾರತದಲ್ಲಿ ಏಕರೂಪೀತನದ ಯಾಜಮಾನ್ಯ ಹೇರುವ ದೌರ್ಜನ್ಯ ಹಾಗೂ ಸಮಸ್ಯೆಗಳಿಗೆ ಪ್ರತಿಕ್ರಿಯೆಯಾಗಿ ಕನ್ನಡ ತತ್ವಪದಕಾರರು ಬಹುತ್ವವನ್ನು ತಮ್ಮ ಸಾಹಿತ್ಯದ ಆಶಯ ಹಾಗೂ ಬದುಕಿನ ಆಚರಣೆಯನ್ನಾಗಿ ಮಾಡಿಕೊಂಡರು. ಮೌಢ್ಯರಹಿತವಾದ ಸಮಸಮಾಜ ಕಲ್ಪನೆ ಅವರದಾಗಿತ್ತು. ತಮಗಿಂತಲೂ ಹಿಂದೆ ಹಲವು ಬಗೆಯ ಬಹುತ್ವದ ಮಾದರಿಗಳನ್ನು ಪ್ರತಿಪಾದಿಸಿದ್ದ ವಚನಕಾರರು ಇವರಿಗೆ ಆದರ್ಶವಾಗಿದ್ದರು ಎಂದು ತಿಳಿಸಿದರು.
ವಿಚಾರಸಂಕಿರಣದ ಭಾಗವಾಗಿ ಹೊರತರಲಾಗಿದ್ದ ‘ಕನ್ನಡ ತತ್ವಪದ ಸಾಹಿತ್ಯ
ಸಾಂಸ್ಕೃತಿಕ ಅನುಸಂಧಾನ-ಸಂಪುಟ 1 ಮತ್ತು 2’ ಕೃತಿಗಳನ್ನು ಲೋಕಾರ್ಪಣೆಗೊಳಿಸಲಾಯಿತು. ಪ್ರಸಿದ್ಧ ಗಾಯಕರಾದ ಶ್ರೀ ಖಾಸೀಂ ಮಲ್ಲಿಗೆ ಮಡುವು ತತ್ವಪದ ಗಾಯನವನ್ನು ಪ್ರಸ್ತುತಪಡಿಸಿದರು. ಪರ್ಯಾಯಗೋಷ್ಠಿಗಳಲ್ಲಿ 6೦ಕ್ಕೂ ಹೆಚ್ಚು ಸಂಶೋಧಕರು ಪ್ರಬಂಧ ಮಂಡನೆ ಮಾಡಿದರು.
ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದ ಮಾನವಿಕ ವಿಭಾಗದ ಡೀನರಾದ ಡಾ.ಗೋಪಕುಮಾರ್ ಎ.ವಿ. ಅವರು ಮುಖ್ಯ ಅತಿಥಿಯಾಗಿದ್ದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಕ್ಯಾಪ್ಟನ್ ಡಾ.ಸರ್ವೇಶ್ ಬಿ.ಎಸ್. ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ವಿಚಾರಸಂಕಿರಣದ ಸಂಯೋಜಕರಾದ ಡಾ.ಕಿರಣಕುಮಾರ್ ಹೆಚ್.ಜಿ ಅವರು ವಂದಿಸಿದರು.
ಕನ್ನಡ ಪ್ರಾಧ್ಯಾಪಕರಾದ ಡಾ.ಕುಪ್ಪನಹಳ್ಳಿ ಎಂ.ಭೈರಪ್ಪ ಅವರು ನಿರೂಪಿಸಿದರು. ಕನ್ನಡ ಪ್ರಾಧ್ಯಾಪಕರಾದ ಪ್ರೊ.ಚಂದ್ರಶೇಖರ್ ಎನ್., ಡಾ.ಸೈಯದ್ ಮುಯಿನ್, ಡಾ.ರವಿಶಂಕರ್ ಎ.ಕೆ., ತತ್ವಪದಕಾರರ ಅಧ್ಯಯನ ಕೇಂದ್ರದ ಸಿಬ್ಬಂದಿವರ್ಗದವರಾದ ರಜತಾ ಶೆಟ್ಟಿ ಹಾಗೂ ಸುಪ್ರಿಯಾ ಅವರು ಉಪಸ್ಥಿತರಿದ್ದರು. 200ಕ್ಕೂ ಹೆಚ್ಚು ಅಧ್ಯಾಪಕರು, ಸಂಶೋಧಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ರಸ್ತೆ ವಿಸ್ತೀರ್ಣ ವಿರೋಧಿಸಿ ಎಸ್ಓಜಿ ಕಾಲೋನಿ ನಿವಾಸಿಗಳ ಪ್ರತಿಭಟನೆ
ದಾವಣಗೆರೆ: ಎಸ್ಓಜಿ ಕಾಲೊನಿಯ ಮುಖ್ಯ ರಸ್ತೆಯ ವಿಸ್ತೀರ್ಣ ಕಡಿತಗೊಳಿಸಿ ನಿರಾಶ್ರಿತರಿಗೆ ನಿವೇಶನ ಹಂಚಿಕೆ ಮಾಡಿರುವ ಆದೇಶವನ್ನು ಕೂಡಲೇ ರದ್ದುಪಡಿಸುವುದರೊಂದಿಗೆ, ನೀರಿನ ಕಂದಾಯ ಪಾವತಿಗೆ 5 ವರ್ಷದ ಬಾಕಿಯನ್ನು ಮಾತ್ರ ಪರಿಗಣಿಸಬೇಕು ಎಂದು ಒತ್ತಾಯಿಸಿ ಎಸ್ಒಜಿ ಕಾಲೊನಿಯ ನಿವಾಸಿಗಳು ಮಹಾನಗರ ಪಾಲಿಕೆ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.
ಜಯದೇವ ವೃತ್ತದಲ್ಲಿ ಸೇರಿದ ಎಸ್ಒಜಿ ಕಾಲೊನಿಯ ನಿವಾಸಿಗಳು ಇಲ್ಲಿಂದಲೇ ಮೆರವಣಿಗೆ ಹೊರಟು ಮಹಾನಗರ ಪಾಲಿಕೆಗೆ ತೆರಳಿ ಮನವಿ ಸಲ್ಲಿಸಿದರು.
ನಗರದ ರವೀಂದ್ರನಾಥ ಬಡಾವಣೆಯಲ್ಲಿ ಇತ್ತೀಚೆಗೆ ತೆರವುಗೊಳಿಸಿದ 36 ಕುಟುಂಬಗಳಿಗೆ ನಿರಾಶ್ರಿತರ ಕೇಂದ್ರದಲ್ಲಿ ಆಶ್ರಯ ಕಲ್ಪಿಸಲಾಗಿತ್ತು. ಈ ಕುಟುಂಬಗಳಿಗೆ ಇತ್ತೀಚೆಗೆ ಎಸ್ಒಜಿ ಕಾಲೊನಿಯ ಮುಖ್ಯ ರಸ್ತೆ ಬದಿಯಲ್ಲಿ ನಿವೇಶನ ಒದಗಿಸಲಾಗಿದೆ. ಮುಖ್ಯರಸ್ತೆಯ ವಿಸ್ತೀರ್ಣವನ್ನು ಕಡಿತಗೊಳಿಸಿ ನಿರಾಶ್ರಿತರಿಗೆ ನಿವೇಶನ ಸೌಲಭ್ಯ ಕಲ್ಪಿಸಿದ್ದು ಖಂಡನೀಯ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.
ವಾಹನ ದಟ್ಟಣೆ ಸಾಧ್ಯತೆಯನ್ನು ಗಮನಿಸಿ 40 ಅಡಿ ಮುಖ್ಯ ರಸ್ತೆಯನ್ನು ನಿರ್ಮಿಸಲಾಗಿತ್ತು. ಇದೇ ರಸ್ತೆಯ ಬದಿಯಲ್ಲಿ ಒಳಚರಂಡಿ, ಗ್ಯಾಸ್ ಕೊಳವೆ ಮಾರ್ಗ ಹಾಗೂ ಕುಡಿಯುವ ನೀರಿನ ಪೈಪ್ಲೈನ್ ಅಳವಡಿಸಲಾಗಿದೆ. ರಸ್ತೆ ವಿಸ್ತೀರ್ಣವನ್ನು 25 ಅಡಿಗೆ ಕಡಿತಗೊಳಿಸಿ ಪ್ರತಿ ನಿರಾಶ್ರಿತ ಕುಟುಂಬಕ್ಕೆ 15X40 ಅಡಿಯ ನಿವೇಶನ ಹಂಚಿಕೆ ಮಾಡಲಾಗಿದೆ. ಇದರಿಂದ ಕಾಲೊನಿಯ ನಿವಾಸಿಗಳಿಗೆ ತೊಂದರೆ ಆಗಲಿದೆ ಎಂದು ಎಸ್ಓಜಿ ಕಾಲೊನಿ ನಾಗರಿಕ ಹಿತರಕ್ಷಣಾ ಸಮಿತಿ ಅಧ್ಯಕ್ಷ ಡಿ. ಕಲ್ಲೇಶಪ್ಪ ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾಧಿಕಾರಿಯಾಗಿದ್ದ ಕೆ.ಶಿವರಾಂ ಅವರು ಎಸ್ಒಜಿ ಕಾಲೊನಿ ನಿರ್ಮಿಸಿದ್ದರು. ಶಾಸಕರಾಗಿದ್ದ ಶಾಮನೂರು ಶಿವಶಂಕರಪ್ಪ ಅವರು ನೀರಿನ ಕಂದಾಯಕ್ಕೆ ವಿನಾಯಿತಿ ನೀಡಿದ್ದರು. ಆದರೆ, ಇತ್ತೀಚೆಗೆ ಮಹಾನಗರ ಪಾಲಿಕೆ 25 ವರ್ಷಗಳ ನೀರಿನ ಕಂದಾಯ ಪಾವತಿಸುವಂತೆ ನೋಟಿಸ್ ನೀಡಿದೆ. ಇದು ನಾಗರಿಕರಲ್ಲಿ ಆತಂಕ ಮೂಡಿಸಿದೆ ಎಂದು ಪ್ರತಿಭಟನಕಾರರು ಅಸಮಾಧಾನ ಹೊರಹಾಕಿದರು.

ಅಂತರಂಗ
250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ
250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು
ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ
ಬೆಂಗಳೂರು: ಮಧ್ಯಪ್ರದೇಶ ರಾಜ್ಯದ ಖಾರ್ಗೋನ್ ಜಿಲ್ಲೆಯಲ್ಲಿರುವ ನರ್ಮದಾ ನದಿ ತೀರದಲ್ಲಿ 250ಕ್ಕೂ ಹೆಚ್ಚು ಗಿಳಿಗಳು ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿರುವ ಪ್ರಕರಣ ಇಡೀ ದೇಶದಲ್ಲಿ ಇದೇ ಮೊದಲ ಬಾರಿಗೆ ನಡೆದ ದುರ್ಘಟನೆ ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ ಆತಂಕ ವ್ಯಕ್ತಪಡಿಸಿದ್ದಾರೆ.
ಕಳೆದ ಮೂರು ದಿನಗಳಲ್ಲಿ ನರ್ಮದಾ ನದಿ ತೀರದಲ್ಲಿ ಸುಮಾರು ಇನ್ನೂರಕ್ಕೂ ಅಧಿಕ ಗಿಳಿಗಳು ನಿಗೂಢವಾಗಿ ಸಾವನ್ನಪ್ಪಿದ್ದು ಆರಂಭದಲ್ಲಿ ಇದು ಹಕ್ಕಿ ಜ್ವರ ದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿತ್ತು ಆದರೆ ಪಶುವೈದ್ಯಕೀಯ ಅಧಿಕಾರಿ ಡಾ. ಸುರೇಶ್ ಬಫೇಲ್ ಅವರು ನೀಡಿದ ಮಾಹಿತಿ ಪ್ರಕಾರ ಹಕ್ಕಿಗಳ ಹೊಟ್ಟೆಯಲ್ಲಿ ಅಕ್ಕಿ ಕಾಳುಗಳು ಮತ್ತು ಸಣ್ಣ ಕಲ್ಲುಗಳು ಪತ್ತೆಯಾಗಿವೆ. ಅಲ್ಲದೆ ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ 200 ರಿಂದ 50 ಕ್ಕೂ ಅಧಿಕ ಮೃತಪಟ್ಟಿರುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಿದ್ದು ಇವರ ಮಾಹಿತಿಯನ್ನು ಆದರಿಸಿ ವಿಶೇಷ ತನಿಖೆ ಮಾಡಬೇಕು ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹಿಸಿದೆ.
ಖರ್ಗೋನ್ ಜಿಲ್ಲೆಯ ಬದ್ವಾ ಪ್ರದೇಶದ ನರ್ಮದಾ ನದಿ ತೀರದಲ್ಲಿರುವ ಅಕ್ವೆಡಕ್ಟ್ ಸೇತುವೆಯ ಸಮೀಪ ಈ ಘಟನೆ ಬೆಳಕಿಗೆ ಬಂದಿದ್ದು ಅರಣ್ಯ ಇಲಾಖೆಯು ಸೇತುವೆಯ ಸುತ್ತಮುತ್ತ ಹಕ್ಕಿಗಳಿಗೆ ಆಹಾರ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ. ಸದ್ಯ ಹಕ್ಕಿಗಳ ಸಾವಿಗೆ ನಿಖರ ಕರಣ ತಿಳಿಯಲು ಹಕ್ಕಿಗಳ ಅವಶೇಷಗಳನ್ನು ಜಬಲ್ಪುರಕ್ಕೆ ಕಳುಹಿಸಲಾಗಿದೆ. ಸದ್ಯ ಅರಣ್ಯ ಇಲಾಖೆ ಮತ್ತು ಪಶುವೈದ್ಯಕೀಯ ತಂಡಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ.
ಇನ್ನೊಂದು ಮುಖ್ಯ ವಿಚಾರ ಏನೆಂದರೆ ಪಕ್ಷಿಗಳಿಗೆ ಮನುಷ್ಯರು ಸೇವಿಸುವ ಎಣ್ಣೆ ಪದಾರ್ಥ ಅಥವಾ ಬೇಯಿಸಿದ ಆಹಾರ ನೀಡುವುದು ಅವುಗಳ ಜೀರ್ಣಾಂಗ ವ್ಯವಸ್ಥೆಯ ಮೇಲೆ ಮಾರಕ ಪರಿಣಾಮ ಬೀರುತ್ತದೆ ಎಂದು ಪಶುವೈದ್ಯಕೀಯ ಅಧಿಕಾರಿ ಡಾ. ಮನಿಷಾ ಚೌಹಾಣ್ ಹೇಳಿದ್ದಾರೆ. ಏನೇ ಆದರೂ ನೂರಾರು ಗಿಳಿಗಳು ಸಾವನ್ನಪಿರುವುದು ಮಾತ್ರ ದುರಂತ.
ಈ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ, ಹಿರಿಯ ಉಪಾಧ್ಯಕ್ಷರಾದ ಗುರುರಾಜ್ ಹೂಗಾರ್, ಉಪಾಧ್ಯಕ್ಷರಾದ ಯೋಗೀಶ್ ಕುಮಾರ್, ರುದ್ರಮುನಿ, ಡಾ.ಸಿದ್ದಲಿಂಗಪ್ಪ, ಮತ್ತು ಪದಾಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.





