ದಿನದ ಸುದ್ದಿ
ಕೋವಿಡ್ ನಂತರದ ಭಾರತ
- ಕೇಸರಿ ಹರವೂ
‘ಕೋರೋನಾದೊಂದಿಗೆ ಬದುಕುವುದನ್ನು ಕಲಿಯಿರಿ’ ಎನ್ನುವ ಸಂದೇಶ ನಮ್ಮ ಪ್ರಭುತ್ವದಿಂದ ರವಾನೆಯಾಗಿದೆ. ಇದರರ್ಥ ಕೋರೋನಾ ನಮ್ಮಲ್ಲಿ ಇನ್ನೂ ಒಂದಷ್ಟು ಕಾಲ ಕಾಡುತ್ತಲೇ ಇರುತ್ತದೆ ಎಂದು. ಇದು ಜಾಗತಿಕವಾಗಿಯೂ ನಿಜ. ಹಾಗಾಗಿ ನಮ್ಮಲ್ಲೂ ನಿಜ. ಆದರೆ ಅನೇಕ ರಾಷ್ಟ್ರಗಳು, ವಿಜ್ಞಾನಿಗಳು ಇದನ್ನು ಹೇಳಿ ಹಲವು ವಾರಗಳೇ ಆದವು. ನಮ್ಮ ದೇಶ ಈಗ ಹೇಳುವುದಕ್ಕೆ ಕೆಲವು ಕಾರಣಗಳಿವೆ.
ಈ ಸಂದೇಶ ನಾವು ಕೋರೋನಾವನ್ನು ಪೂರ್ತಿಯಾಗಿ ಹಿಮ್ಮೆಟ್ಟಿಸುವಲ್ಲಿ, ಸೋಂಕು ತಡೆಯುವಲ್ಲಿ ವಿಫಲರಾಗಿದ್ದೇವೆ ಎಂದೂ ಹೇಳುತ್ತದೆ. ನಮ್ಮಲ್ಲಿ ಸೋಂಕು ತೀರಾ ಕಡಿಮೆ ಪ್ರಮಾಣದಲ್ಲಿ ಇದ್ದಾಗಲೇ ಎಂಟು ವಾರಗಳ ಕಾಲ ಲಾಕ್ಡೌನ್ ಹೇರಿ ಕಾಲಹರಣ ಮಾಡಲಾಯಿತು. ಈಗ ಸೋಂಕು exponential ಆಗಿ ಹರಡುವುದಕ್ಕೆ ಆರಂಭವಾಗಿದೆ.
ನಿಜಕ್ಕೂ ಲಾಕ್ಡೌನ್ ಅವಶ್ಯ ಎಂದು ವೈಜ್ಞಾನಿಕವಾಗಿ ಎನಿಸಿದ್ದರೆ ಅದನ್ನು ಈಗ ಜಾರಿಗೊಳಿಸಬೇಕಿತ್ತು. ಈಗಲೂ ಅದು ದೇಶದಾದ್ಯಂತ ಬೇಕಿಲ್ಲ ಎಂದೇ ಹಲವು ತಜ್ಞರು ಹೇಳುತ್ತಾರೆ. ಆದರೆ ನಾವು ಇನ್ನಷ್ಟು ದಿನ ಆರ್ಥಿಕ ಚಟುವಟಿಕೆಗಳನ್ನು ಸ್ಥಗಿತಗೊಳಿಸುವುದು ಸಾಧ್ಯವೇ ಇಲ್ಲದಂತಾ ಪರಿಸ್ಥಿತಿಯಲ್ಲಿ ಸಮುದಾಯ ಹರಡುವಿಕೆಗೆ ತಯಾರಾಗಿ ಲಾಕ್ಡೌನ್ ಅನ್ನು ಕ್ರಮೇಣ ಸಡಿಲಿಸಲು ಆರಂಭಿಸಿದ್ದೇವೆ.
ಪ್ರಭುತ್ವ ಈಗ ಹೇಳಿರುವ ಈ ಹೇಳಿಕೆ ನಮ್ಮನ್ನು ಈ ಎಂಟು ವಾರಗಳ ಲಾಕ್ಡೌನಿನಲ್ಲಿ ದೇಶದಲ್ಲಿ ನಡೆದ ವಿದ್ಯಮಾನಗಳನ್ನು ಮತ್ತೊಮ್ಮೆ ನೋಡಲು ತೊಡಗಿಸುತ್ತದೆ. ಈ ನೋಟ ನಮ್ಮ ದೇಶ ಇನ್ನುಮುಂದೆ ಹೇಗೆ ಸಾಗುತ್ತದೆ ಎನ್ನುವುದಕ್ಕೆ ಕೆಲವು ಸುಳಿವುಗಳನ್ನೂ ಕೊಡುತ್ತದೆ.
ಲಾಕ್ಡೌನಿನ ಮೂಲ ಉದ್ದೇಶವನ್ನು ಸಾಕಷ್ಟು ವಿಫಲಗೊಳಿಸಿದ್ದರೂ, ಪ್ರಭುತ್ವ ತನ್ನ ಕೆಲವು ಉದ್ದೇಶಗಳನ್ನು ಈಡೇರಿಸಿಕೊಂಡಿದೆ.
ಪೌರತ್ವ ತಿದ್ದುಪಡಿ ಕಾಯ್ದೆಯ ವಿರೋಧೀ ಹೋರಾಟದ ಕಾವನ್ನು ಬಹುತೇಕ ತಣ್ಣಗಾಗಿಸುವಲ್ಲಿ ಅದು ಸಫಲವಾಗಿದೆ. ಹೋರಾಟ ತನ್ನ ಉಚ್ಛ್ರಾಯ ಸ್ಥಿತಿಯಲ್ಲಿದ್ದು, ಜಗತ್ತಿನಾದ್ಯಂತ ಪೌರತ್ವ ತಿದ್ದುಪಡಿಯ ವಿರುದ್ಧ ದನಿಯೆದ್ದಿದ್ದಾಗ, ಆ ಮುಜುಗರದಿಂದ ತಪ್ಪಿಸಿಕೊಳ್ಳಲು ಹೆಣಗುತ್ತಿದ್ದ ಪ್ರಭುತ್ವ ಪ್ರತಿಯೊಬ್ಬರಲ್ಲೂ ಮಹಾಮಾರಿಯ ಸಾಂಕ್ರಾಮಿಕದ ಆತಂಕದ ವಾತಾವರಣವನ್ನು ಹುಟ್ಟಿಹಾಕಿತು. ಲಾಕ್ಡೌನ್ ಒಂದೇ ಪರಿಹಾರ ಎಂದು ಅದನ್ನು ಹೇರಿ, ಪರ ಮತ್ತು ವಿರೋಧಿಗಳೆಲ್ಲರೂ ಸಹಕರಿಸುವಂತೆ ಮಾಡುವಲ್ಲಿ ಅದು ಯಶಸ್ವಿಯಾಯಿತು. ಮತ್ತೊಮ್ಮೆ ದೇಶದಲ್ಲಿ ಆ ಮಟ್ಟಕ್ಕೆ ಕಾವು ಏರಲು ದೊಡ್ಡ ಸಂಕಲ್ಪ ಮತ್ತು ಸಮಯ ಎರಡೂ ಬೇಕು.
ಸೋಂಕು ಹರಡುವಿಕೆಗೆ ಮುಸ್ಲಿಮರೇ ಮುಖ್ಯ ಕಾರಣ ಎಂದು ಜನರ ಮನಸ್ಸಿನಲ್ಲಿ ಯಶಸ್ವಿಯಾಗಿ ಬಿತ್ತಿ ತನ್ನ ಮುಸ್ಲಿಂ ವಿರೋಧೀ ನೀತಿಯನ್ನು ಅದು ಸಮರ್ಥಿಸಿಕೊಂಡಿದೆ. ಇದು ತನ್ನ ದೀರ್ಘಕಾಲದ ನೀತಿಗಳಲ್ಲಿ ಒಂದು. ಕೊರೋನಾ ಇದನ್ನು ಸುಲಭದಲ್ಲಿ ಸಾಧ್ಯವಾಗಿಸಿದ್ದು ಆ ನೀತಿಗೆ ಒದಗಿಬಂದ ದೊಡ್ಡ ಲಾಭ. ಇಂದು ಮಾವಿನ ಫಸಲು ಕೊಳ್ಳುವ ವರ್ತಕರಿಂದ ಹಿಡಿದು, ಬೇರೆಬೇರೇ ಕಸುಬುಗಳಿಗೆ ಹಳ್ಳಿಗಳಿಗೆ ಬರುತ್ತಿದ್ದ ಮುಸ್ಲಿಮರನ್ನು ಜನ ಕಾಣುತ್ತಿರುವ ರೀತಿಯೇ ಬೇರೆಯಾಗಿದೆ. ಸಾಮಾಜಿಕ ಅಂತರದ ಪರಾಕಾಷ್ಟೆ ಇದು.
ಪರಿಷ್ಕೃತ ಕರಡು ಕಾರ್ಮಿಕ ನೀತಿ ಲೋಕಸಭೆಯಲ್ಲಿ ಮಂಡನೆಯಾಗಿತ್ತು. ಬಲಪಂಥೀಯ ಬಿಎಮ್ಮೆಸ್’ನಿಂದ ಹಿಡಿದು ಎಲ್ಲ ಕಾರ್ಮಿಕ ಸಂಘಟನೆಗಳಿಂದ ಈ ನೀತಿಗೆ ದೊಡ್ಡ ವಿರೋಧವಿದ್ದು, ಅದು ಪಾಸ್ ಆಗುವುದು ಅತ್ಯಂತ ಕಠಿಣವಾಗಿತ್ತು. ಲಾಕ್ಡನ್ ಸಡಿಲಗೊಳಿಸುತ್ತಿರುವ ಈ ಸಂದರ್ಭದಲ್ಲಿ ಕಾರ್ಮಿಕರನ್ನು ಹೇಗೆ ನಡೆಸಿಕೊಳ್ಳುತ್ತಿವೆ ದೇಶದ ಮತ್ತು ರಾಜ್ಯಗಳ ಪ್ರಭುತ್ವಗಳು ಎನ್ನುವುದು ನಮ್ಮ ಕಣ್ಣಮುಂದೆಯೇ ಇದೆ.
ಇನ್ನೂ ಮೇಲಾಗಿ, ಆರು ರಾಜ್ಯಗಳು ಕಾರ್ಮಿಕ ಹಕ್ಕುಗಳನ್ನು ಮೂರು ವರ್ಷಗಳ ಕಾಲ ಅಮಾನತಿನಲ್ಲಿಟ್ಟಿವೆ. ಕಾರ್ಮಿಕರ ಎಲ್ಲ ಹಕ್ಕುಗಳನ್ನೂ, ಇದ್ದ ಅಲ್ಪ ಭದ್ರತೆಯನ್ನೂ ಒಂದೇ ಏಟಲ್ಲಿ ತೊಡೆದುಹಾಕುವಂತೆ ಮಾಡಿತು ಈ ಕೊರೋನಾ. ಆರ್ಥಿಕತೆಯ ಚೇತರಿಕೆಗಾಗಿ ಈ ಕ್ರಮ ಅತ್ಯಗತ್ಯ ಎಂದು ಬಿಂಬಿಸುವ ಪ್ರಯತ್ನ ನೇರವಾಗಿ ಕಾಣುತ್ತದೆ.
ಇದು ನಮ್ಮ ಕಾರ್ಪೊರೇಟ್ ಧಣಿಗಳಿಗೆ ಬಹುದೊಡ್ಡ ಕೊಡುಗೆಯಾಗಿ ಬರಲಿದೆ. ಬಹಳ ಹಿಂದಿನಿಂದಲೇ ಕೆಲವು ಅನುಕೂಲಕರ ವಾತಾರಣಗಳನ್ನು ಬಯಸಿದ್ದ ಕಾರ್ಪೋರೇಟುಗಳಿಗೆ ಈಗ ಲೀಲಾಜಾಲವಾಗಿ ತಮ್ಮ ಕಾರ್ಮಿಕ ನೀತಿಗಳನ್ನು ಬದಲಿಸಿಕೊಂಡು ಲಾಭ ಬಡಿಯುವ ಅವಕಾಶ ಒದಗಿ ಬಂದಿದೆ. ಈ ಲಾಭ ನಮ್ಮ ಪರಿಸರ, ಭೂಬಳಕೆ, ಕಾರ್ಮಿಕ ನೀತಿ, ಮಾನವ ಸಂಬಂಧಗಳ ಮೇಲೆ ದೊಡ್ಡ ವ್ಯತಿರಿಕ್ತ ಪರಿಣಾಮ ಬೀರಲಿದೆ. ಜನರ ಅನುಭವದಲ್ಲಿದ್ದ ಅಲ್ಪಸ್ವಲ್ಪ ಸಂಪನ್ಮೂಲಗಳೂ ಕಾರ್ಪೊರೇಟ್ಗಳ ಪಾಲಾಗಲಿದ್ದು, ನಾವು ಕಾರ್ಪೊರೇಟ್ಗಳ ಮುಂದೆ ಇನ್ನಷ್ಟು ಕೈಚಾಚಿ ಬದುಕುವ ಅನಿವಾರ್ಯತೆಯನ್ನು ಸೃಷ್ಟಿಸುತ್ತದೆ.
‘ಕೋರೋನಾ ನಮಗೆ ಪಾಠ ಕಲಿಸಿದೆ. ಜಾಗತೀಕರಣ, ಬಂಡವಾಳಶಾಹೀ ಅರ್ಥವ್ಯವಸ್ಥೆ ಎಲ್ಲಕ್ಕೂ ಉತ್ತರವಲ್ಲ ಎನ್ನುವುದನ್ನು ಜಗತ್ತು ಕಲಿತಿದೆ. ನಮ್ಮ ಜಗತ್ತು ಸಮಾಜಸ್ನೇಹಿಯಾಗಿ, ಪರಿಸರ ಸ್ನೇಹಿಯಾಗಿ ಬದಲಾಗಲಿದೆ’ ಎನ್ನುವ ಆಶಾವಾದ ಕೆಲವರದು. ಆದರೆ, ಕಾರ್ಮಿಕರ ಹಕ್ಕುಗಳನ್ನು ಅಮಾನತಿನಲ್ಲಿಟ್ಟಿರುವ ಕ್ರಮವೊಂದೇ ಸಾಕು ಕೋವಿಡ್ ನಂತರದ ಆರ್ಥಿಕತೆ ಅದಕ್ಕೆ ತದ್ವಿರುದ್ಧವಾಗಿ ತಯಾರಾಗುವುದಕ್ಕೆ. ಕೊರೋನಾದಂಥಾ ಸಾಂಕ್ರಾಮಿಕವನ್ನು ಸಮರ್ಥವಾಗಿ ನಿಭಾಯಿಸಲು ಸರ್ಕಾರಗಳಿಗೆ ಶಕ್ತಿ ಸಾಲುವುದಿಲ್ಲ, ಖಾಸಗೀ ವ್ಯವಸ್ಥೆಯೂ ದೊಡ್ಡದಾಗಿ ಸಜ್ಜುಗೊಳ್ಳಬೇಕು ಎನ್ನುವ ಹೊಸ ವಾದ ಹುಟ್ಟಲಿದೆ.
ಆ ವಾದವನ್ನು ನಮ್ಮ ಪ್ರಭುತ್ವಗಳೂ ಒಪ್ಪಿಕೊಳ್ಳುತ್ತವೆ. ಅದೇ ಕಾರಣಕ್ಕಾಗಿ ಅಲ್ಲದಿದ್ದರೂ ತಮ್ಮ ಅನುಕೂಲಕ್ಕಾಗಿ ಶಕ್ತಿಕೇಂದ್ರಗಳು ಒಪ್ಪುತ್ತವೆ. ಅಲ್ಲಿಂದ ಮುಂದೆ ಖಾಸಗೀ ಶಿಕ್ಷಣ, ಆರೋಗ್ಯ ಸೇವೆ, ಸಂಪರ್ಕ, ಸಾಗಣೆ, ಆಹಾರ ಸರಬರಾಜು ಎಲ್ಲ ಕ್ಷೇತ್ರಗಳಿಗೂ ಇದು ವಿಸ್ತರಿಸುತ್ತದೆ. ಇವೆಲ್ಲವೂ ಇನ್ನಷ್ಟು ವಿಸ್ತರಣೆಯಾಗಲಿವೆ ಮತ್ತು ದುಬಾರಿಯಾಗಲಿವೆ. ಸಾವಿರ ಕಿಮೀ ಗಟ್ಟಲೆ ನಡೆಯುವವರು, ರೈಲಿನ ಕೆಳಗೆ ಸಾಯುವ ಗುಂಪುಗಳು ಸಾಮಾನ್ಯವಾಗಲಿವೆ.
ಇವೆಲ್ಲವನ್ನೂ ಪ್ರಭುತ್ವ ಜನತೆಗೆ ಒಪ್ಪಿಸಿ ಮುನ್ನಡೆಯುತ್ತಿರಬೇಕಾಗುತ್ತದೆ. ಹಾಗಾದರೆ ಏನು ಮಾಡಬೇಕು? ಸರ್ಜಿಕಲ್ ಸ್ಟ್ರೈಕ್, ಪುಲ್ವಾಮಾ, ಮುಂತಾದವು ಈಗ ಸಾಲುವುದಿಲ್ಲ. ದೇಶದ ಗಡಿಗಳನ್ನು ರಕ್ಷಿಸುವ ಜೊತೆಗೆ ಕಳಕೊಂಡ ಆಕ್ರಮಿತ ಪ್ರದೇಶಗಳನ್ನು ಮತ್ತೆ ವಶಮಾಡಿಕೊಳ್ಳಬೇಕು. ದೇಶಭಕ್ತರು ಯಾರೂ ಇದನ್ನು ಬೇಡ ಎನ್ನಲಾರರು. ಬದಲಿಗೆ ಒಕ್ಕೊರಳಿನಿಂದ ಜೈ ಎಂದೇ ಅಂದಾರು.
ಈಗಾಗಲೇ ಗೂಗಲ್ ತನ್ನ ಮ್ಯಾಪಿನಲ್ಲಿ LOC ಅಳಿಸಿಹಾಕಿದೆ. ಅದರ ಹಿಂದಿನ ಒತ್ತಡ ಏನಿರಬಹುದು ಲೆಕ್ಕ ಹಾಕಿ. ಭಾರತೀಯರಾದ ನಮಗೆ ಇದು ಅತ್ಯಂತ ಸ್ವಾಗತಾರ್ಹ ವಿಚಾರ. ನಮ್ಮ ಹವಾಮಾನ ಇಲಾಖೆ POKಯ ಪೂರ್ಣ ಹವಾಮಾನ ವರದಿಯನ್ನು ಕೊಡಲು ಶುರು ಮಾಡಿದೆ. ಯುದ್ಧ ಸಾಮಗ್ರಿಗಳ ಹೊಸ ಒಪ್ಪಂದಗಳು ನಮ್ಮಲ್ಲಿ ಆಗ್ತಿವೆ. ಯುದ್ಧೋನ್ಮಾದವನ್ನು ಉಣಬಡಿಸಲು ಪ್ರಯತ್ನ ನಡೆಯುತ್ತಿದೆಯೇ? ಅಥವಾ ಯುದ್ಧಕ್ಕೇ ತಯಾರಿ ನಡೆಯುತ್ತಿದೆಯೇ? ಯೋಚಿಸಿ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಇಂದಿನಿಂದ ಏ.3 ರವರೆಗೆ ಸೂಳೆಕೆರೆಗೆ ನೀರು ಬಿಡುಗಡೆ
ಸುದ್ದಿದಿನ,ದಾವಣಗೆರೆ: ಭದ್ರಾ ಜಲಾಶಯ ಯೋಜನೆ ವ್ಯಾಪ್ತಿಗೆ ಬರುವ ದೇವರಬೆಳಕೆರೆ ಪಿಕ್ಅಪ್ ಅಣೆಕಟ್ಟಿನ ಸ್ಕವರಿಂಗ್ ಸ್ಪೂಯೀಸ್ ಗೇಟ್ ಮುಖಾಂತರ ಜಲಾಶಯದ ಡೆಡ್ ಸ್ಟೋರೇಜ್ ನೀರನ್ನು ಸೂಳೆಕೆರೆ ಹಳ್ಳಕ್ಕೆ ಮಾರ್ಚ್ 28 ರಿಂದ ಏಪ್ರಿಲ್ 3 ರವರೆಗೆ ಪ್ರತಿದಿನ 20 ಕ್ಯೂಸೆಕ್ಸ್ಗಳಲ್ಲಿ ಜನ-ಜಾನುವಾರು ಪಕ್ಷಿಗಳಿಗೆ ಕುಡಿಯುವ ನೀರು ಒದಗಿಸಲು ಹಾಗೂ ಅಕ್ಕಪಕ್ಕದ ಗ್ರಾಮಗಳ ಕುಡಿಯುವ ನೀರಿನ ಉದ್ದೇಶಕ್ಕೆ ಬಿಡಲಾಗುತ್ತಿದೆ.
ಈ ವೇಳೆ ಹಳ್ಳಕ್ಕೆ ದನ ಕರಗಳನ್ನು ಇಳಿಸುವುದಾಗಲಿ, ಪಂಪ್ಸೆಟ್ಗಳಿಂದ ನೀರೆತ್ತುವುದುನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಕನೀನಿನಿ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ
ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.
ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಇದೇ 30 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಇದೇ ವೇಳೆ ಬಿಹಾರದಲ್ಲಿ ನಾಮಪತ್ರ ಸಲ್ಲಿಕೆಗೆ ನಾಳೆ ಕಡೆ ದಿನವಾಗಿದ್ದು, ಈ ತಿಂಗಳ 30 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 2ರಂದು ನಾಮತ್ರ ಹಿಂಪಡೆಯುವಿಕೆಗೆ ಕೊನೆಯ ದಿನವಾಗಿರುತ್ತದೆ.
ಏಪ್ರಿಲ್ 19 ರಂದು 17 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಅದರಂತೆ ತಮಿಳುನಾಡಿನಲ್ಲಿ 39, ರಾಜಸ್ಥಾನದಲ್ಲಿ 12, ಉತ್ತರ ಪ್ರದೇಶದಲ್ಲಿ 8, ಮಧ್ಯಪ್ರದೇಶದಲ್ಲಿ 6, ಉತ್ತರಾಖಂಡ, ಅಸ್ಸಾಂ ಮತ್ತು ಮಹಾರಾಷ್ಟ್ರದಲ್ಲಿ ತಲಾ 5 , ಬಿಹಾರದಲ್ಲಿ 4, ಪಶ್ಚಿಮ ಬಂಗಾಳದಲ್ಲಿ 3, ಅರುಣಾಚಲ ಪ್ರದೇಶ, ಮಣಿಪುರ, ಮೆಘಾಲಯದಲ್ಲಿ ತಲಾ 2 ಮತ್ತು ಛತ್ತೀಸ್ಗಢ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರ, ಅಂಡಮಾನ್-ನಿಕೋಬಾರ್ ದ್ವೀಪಗಳು, ಜಮ್ಮು-ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ತಲಾ ಒಂದು ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.
ಎರಡನೇ ಹಂತದಲ್ಲಿ 89 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ನಾಳೆ ಅಧಿಸೂಚನೆ ಹೊರಡಿಸಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ
ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆಗೆ ಸದಸ್ಯರನ್ನು ಆಯ್ಕೆ ಮಾಡಲು ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಭಾರತ ಚುನಾವಣಾ ಆಯೋಗ, ಸಕಲ ಸಿದ್ಧತೆಯೊಂದಿಗೆ ಸಜ್ಜಾಗಿದೆ.
ದೇಶದಲ್ಲಿ ಚುನಾವಣೆಗಳನ್ನು ಪಾರದರ್ಶಕವಾಗಿ ಹಾಗೂ ಅತ್ಯಂತ ವಿಶ್ವಾಸಾರ್ಹ ರೀತಿಯಲ್ಲಿ ನಡೆಸುವ ಸಂಕಲ್ಪದೊಂದಿಗೆ ಚುನಾವಣಾ ಆಯೋಗ, ಸಮಸ್ತ ಚುನಾವಣಾ ಪ್ರಕ್ರಿಯೆಗಳನ್ನು ಸುಗಮಗೊಳಿಸಲು ತಂತ್ರಜ್ಞಾನದ ನೆರವನ್ನು ಬಳಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಮತದಾರರು, ಚುನಾವಣಾ ಸಿಬ್ಬಂದಿ ಹಾಗೂ ಆಯೋಗಕ್ಕೆ ನೆರವಾಗುವ ಹಲವು ಆಪ್ಗಳನ್ನು ಚುನಾವಣಾ ಆಯೋಗ ಅಭಿವೃದ್ಧಿಪಡಿಸಿದೆ.
ಈ ಪೈಕಿ ಇಂದು ಸಿ-ವಿಜಿಲ್ ಆಪ್ ಬಗ್ಗೆ ಮಾಹಿತಿ.
ದೇಶದಲ್ಲಿ ಚುನಾವಣೆಗಳ ವೇಳೆ ನಡೆಯುವ ಅಕ್ರಮಗಳು, ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಪ್ರಕರಣಗಳ ಮೇಲೆ ಕಣ್ಣಿಡುವುದು ಕೇವಲ ಚುನಾವಣಾ ಸಿಬ್ಬಂದಿಯ ಕೆಲಸವಲ್ಲ. ಇದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಹೌದು. ಹಾಗಾಗಿ ಚುನಾವಣಾ ಅಕ್ರಮಗಳ ಬಗ್ಗೆ ಸಾರ್ವಜನಿಕರು ಆಯೋಗಕ್ಕೆ ದೂರು ತಲುಪಿಸಲು ಭಾರತ ಚುನಾವಣಾ ಆಯೋಗ ಸಿ-ವಿಜಿಲ್ ಆಪ್ ಅನ್ನು ಅಭಿವೃದ್ಧಿ ಪಡಿಸಿದೆ.
ದೂರುಗಳನ್ನು ಆನ್ಲೈನ್ ಮೂಲಕ ಆಯೋಗಕ್ಕೆ ರವಾನಿಸಲು ಈ ಆಪ್ ನೆರವಾಗುವುದು. ಯಾವುದೇ ಚುನಾವಣಾ ಅಕ್ರಮಗಳ ಬಗ್ಗೆ ಧ್ವನಿಮುದ್ರಣ, ವಿಡಿಯೋ ಚಿತ್ರದ ತುಣುಕುಗಳು ಮತ್ತು ಫೋಟೊ ಮೊದಲಾದ ದಾಖಲೆಗಳನ್ನು ಸಾರ್ವಜನಿಕರು ಇದರ ಮೂಲಕ ಕಳುಹಿಸಬಹುದು.
ಚುನಾವಣೆಗಳಲ್ಲಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಮಾಡುವ ಖರ್ಚು-ವೆಚ್ಚ, ಮತದಾರರ ಮನವೊಲಿಕೆಗೆ ಆಮಿಷಗಳ ಬಳಕೆ ಮೊದಲಾದ ಅಕ್ರಮಗಳ ಬಗ್ಗೆ ದೂರು ನೀಡಲು ಇದನ್ನು ಬಳಸಬಹುದು. ಒಂದುನೂರು ನಿಮಿಷಗಳಲ್ಲಿ ಚುನಾವಣಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುತ್ತಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.
ದೇಶದ ಯಾವ ಮೂಲೆಯಲ್ಲೇ ಆಗಲಿ ನಡೆಯುವ ಚುನಾವಣಾ ಅಕ್ರಮ ಅಥವಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ತಾವು ನೀಡಿದ ದೂರುಗಳನ್ನು ಆಯೋಗ ಪರಿಗಣಿಸಿದೆಯೇ ಎನ್ನುವ ವಿವರಗಳನ್ನು ಸಹ ಸಾರ್ವಜನಿಕರು ಸಿ-ವಿಜಿಲ್-ಆಪ್ ಮೂಲಕ ವೀಕ್ಷಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ನಾಯಕನ ಹಟ್ಟಿ | ಶ್ರೀಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ವಿಶೇಷ ಬಸ್ ಸೌಲಭ್ಯ
-
ದಿನದ ಸುದ್ದಿ6 days ago
ಲೋಕಸಭಾ ಚುನಾವಣೆ : ಚುನಾವಣಾ ಚಟುವಟಿಕೆಗಳ ಕುರಿತ ಜಿಲ್ಲಾವಾರು ಮಾಹಿತಿ
-
ದಿನದ ಸುದ್ದಿ6 days ago
ವಿಜಯಪುರ ಜಿಲ್ಲಾ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಮೈಬೂಬಸಾಹೇಬ.ವೈ.ಜೆ ಆಯ್ಕೆ
-
ದಿನದ ಸುದ್ದಿ6 days ago
ಬೆಂಗಳೂರಿನಲ್ಲಿ ಬಿಜೆಪಿ ನೂತನ ಮಾಧ್ಯಮಕೇಂದ್ರ ಆರಂಭ
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ | ಹೊಸ ಮತದಾರರೆಷ್ಟು ಗೊತ್ತಾ..?
-
ದಿನದ ಸುದ್ದಿ5 days ago
ಕವಿತೆ | ನೆನಪು
-
ದಿನದ ಸುದ್ದಿ3 days ago
ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ
-
ದಿನದ ಸುದ್ದಿ2 days ago
ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ