Connect with us

ದಿನದ ಸುದ್ದಿ

ಪಿಯುಸಿ ಮುಗಿದ ನಂತರ ಮುಂದೇನು..? ವಿದ್ಯಾರ್ಥಿ ಪಾಲಕರೆ ಚಿಂತೆ ಬಿಡಿ..!

Published

on

ಭಾರತದ ಇಂಜಿನಿಯರಿಂಗ್ ಕ್ಷೇತ್ರದಲ್ಲಿ ಪ್ರಾತಃ ಸ್ಮರಣಿಯರಾದ ಸರ್ ಎಂ ವಿಶ್ವೇಶ್ವರಯ್ಯ ಅವರನ್ನು ಸೆಪ್ಟೆಂಬರ್ 15 ರಂದು ವಿಷೇಶವಾಗಿ ನೆನಪಿಸಿಕೊಳ್ಳಲಾಗುತ್ತಿದೆ. ಇವರ ಜನ್ಮ ದಿನವನ್ನು (ಸೆಪ್ಟೆಂಬರ್ 15) ಭಾರತದಲ್ಲಿ ಪ್ರತಿ ವರ್ಷ ಇಂಜಿನಿಯರ್ಸ ದಿನವಾಗಿ ಆಚರಿಸಲಾಗುತ್ತಿದೆ. ಎಲ್ಲ ಇಂಜಿನಿಯರ್ಸಗಳಿಗೆ ಹ್ಯಾಪಿ ಇಂಜಿನಿಯರ್ಸ ಡೇ.

ಈ ಒಂದು ಸಂದರ್ಭದಲ್ಲಿ ಭಾರತದ ಸಾಫ್ಟ್ ವೇರ್ ಇಂಜಿನಿಯರ್ಸಗಳು ದೇಶ-ವಿದೇಶಗಳಲ್ಲಿ ತಮ್ಮದೇ ಆದ ಚಾಪನ್ನು ಮುಡಿಸುತ್ತಿದ್ದಾರೆ. ಈ 21ನೇ ಶತಮಾನದಲ್ಲಿ ಸಾಫ್ಟ್ ವೇರ್ ಕ್ಷೇತ್ರವು ಅತ್ಯಂತ ಬೇಡಿಕೆಯುಳ್ಳ ಕ್ಷೇತ್ರವಾಗಿದೆ. ಈ ಸಂದರ್ಭದಲ್ಲಿ ಬಿ.ಸಿ.ಎ ಪದವಿ ವಿಭಾಗವು ತನ್ನದೇ ಆದ ಕೊಡುಗೆಯನ್ನು ಕೊಡುತ್ತಿದೆ.

ಇವತ್ತಿನ 21ನೇ ಶತಮಾನದ ಕಂಪ್ಯೂಟರ್ ಯುಗದಲ್ಲಿ ಎಲ್ಲವೂ ಗಣಕೀಕೃತವಾಗಿದೆ ಅದ್ದರಿಂದ ಯಂತ್ರಧಾರಿತ ತಿಳುವಳಿಕೆ ಬಹಳ ಪ್ರಮುಖ್ಯತೆ ಪಡೆದಿದೆ ಕಂಪ್ಯೂಟರ್ ಕಲಿತ ವ್ಯಕ್ತಿ ಇವತ್ತು ಸಂತೋಷದ ಜೀವನ ನಡೆಸಬಹುದಾಗಿದೆ. 1990 ಜಾಗತೀಕರಣದ ನಂತರ ಕಾಗದ ಬಳಕೆಯನ್ನು ಸಂಪೂರ್ಣವಾಗಿ ತೊಡೆದು ಎಲ್ಲವೂ ಗಣಕೀಕೃತವಾಗಿದೆ. ಕಂಪ್ಯೂಟರ್ ಜ್ಞಾನ ಪಡೆದುಕೊಳ್ಳಲುಅನೇಕ ಕೋರ್ಸುಗಳಿವೆ ಅದರಲ್ಲಿ ಬಿ.ಸಿ.ಎ ದಿನದಿಂದ ದಿನಕ್ಕೆ ಹೆಚ್ಚಿನ ಪ್ರಾಮುಖ್ಯತೆ ಪಡೆದುಕೊಳ್ಳುತ್ತಿದೆ.

ಬಿಸಿಎ ಮಾಡಿದವರಿಗೆ ಬಿ.ಇ ಗೆ ಸಮಾನಾಂತರ ಅವಕಾಶಗಳು ಸಿಗುತ್ತಿವೆ. ಬಿಸಿಎ ಮಾಡಿದವರು ಕೇವಲ ಕಂಪ್ಯೂಟರ್ ಜ್ಞಾನ ಅಲ್ಲದೆ ಅನೇಕ ಕೌಶಲ್ಯಗಳ ಪ್ರಾಬ್ಲಮ್ ಸಾವ್ಲಿಂಗ್ ಟೆಕ್ನಿಕ್, ಕಮ್ಯುನೀಕೆಶನ್,ಮತ್ತು ತಂತ್ರಜ್ಞಾನ ಆಧಾರಿತ ಎಲ್ಲ ಜ್ಞಾನವನ್ನು ಪಡೆದುಕೊಳ್ಳಬಹುದಾಗಿದೆ. ಅದಲ್ಲದೆ ಹೊಸ ಶಿಕ್ಷಣ ನೀತಿಯಲ್ಲಿ ಕಂಪ್ಯೂಟರ್ ಗೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಆರನೆಯ ತರಗತಿಯಿಂದ ಕೋಡಿಂಗ್ ಹೇಳಿಕೊಡಲಾಗುತ್ತಿದೆ ಮುಂದಿನ ದಿನಗಳಲ್ಲಿ ಎಲ್ಲರೂ ಕಂಪ್ಯೂಟರ್ ಜ್ಞಾನವನ್ನು ಪಡೆದುಕೊಳ್ಳಲೇಬೇಕು.

ಕಂಪ್ಯೂಟರ್ ಜ್ಞಾನ ಇಲ್ಲದವನು ಬದುಕುವುದು ಕಷ್ಟಕರವಾಗಲಿದೆಬಿ.ಸಿ.ಎ ಮುಗಿಸಿದ ತಕ್ಷಣ ನೀವು ಉನ್ನತ ಶಿಕ್ಷಣದಲ್ಲಿ ಎಂಸಿಎ, ಎಂಎಸ್, ಎಂಎಸ್ಸಿ, ಎಂಬಿಎ ಮಾಡಬಹುದು. ಅಲ್ಲದೆ ತಕ್ಷಣ ಉದ್ಯೋಗವನ್ನು ಪಡೆಯುವುದಾಗಿದೆ ಬಿ.ಸಿ.ಎ ಮುಗಿದ ತಕ್ಷಣ ಯಾವುದಾದರೂ ಒಂದು ಆರು ತಿಂಗಳ ತರಬೇತಿ ಪಡೆದುಕೊಂಡು ನೀವು ತಿಂಗಳಿಗೆ 25 ರಿಂದ 30 ಸಾವಿರ ರೂಪಾಯಿ ಸಂಪಾದಿಸಬಹುದಾಗಿದೆ.

2-3 ವರ್ಷಗಳ ನಂತರ 70 ರಿಂದ 80 ಸಾವಿರ ಸಂಬಳ ಗಳಿಸಬಹುದಾಗಿದೆ. ಪಿಯುಸಿ 12ನೇ ತರಗತಿಯಲ್ಲಿ ವಾಣಿಜ್ಯಶಾಸ್ತ್ರ ಕಲಿತವರು ಮರಳಿ ವಿಜ್ಞಾನ ವಿಭಾಗಕ್ಕೆ ಬರಲು ಇದೊಂದು ಉತ್ತಮ ಅವಕಾಶ. ಬಿ.ಸಿ.ಎ ಕಲಿತ ವಿದ್ಯಾರ್ಥಿ ಸರ್ಕಾರಿ ಕೆಲಸಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ಉದಾಹರಣೆಗೆ : ಎಸ್‍ಡಿಸಿ, ಬ್ಯಾಂಕಿಂಗ್, ಡಿಫೆನ್ಸ್ ಸರ್ವಿಸ್, ಆರ್‍ಆರ್‍ಬಿ, ಪಿಡಿಒ ಇತ್ಯಾದಿ ಅಲ್ಲದೇ ಖಾಸಗಿ ಕಂಪನಗಳಲ್ಲೂ ಕೆಲಸ ಮಾಡಬಹುದಾಗಿದೆ.

ಅಲ್ಲದೆ ಸ್ವಂತ ಉದ್ಯೋಗವನ್ನು ಅಥವಾ ಉನ್ನತ ಶಿಕ್ಷಣವನ್ನು ಪಡೆಯಬಹುದಾಗಿದೆ ಕಮಪನಗಳು ಕೂಡ ಇತ್ತೀಚಿನ ದಿನಗಳಲ್ಲಿ ಬಿ.ಸಿ.ಎ ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶ ನೀಡುತ್ತಿವೆ. ಇವತ್ತಿನ ದಿನ ಕಂಪ್ಯೂಟರ್ ಜ್ಞಾನ ಇಲ್ಲದಿದ್ದರೆ ಎಲ್ಲರೂ ಕೂಡ ಅನಕ್ಷರಸ್ಥರೇ, ಯಾಕೆ ಬಿಸಿಎ ಮಾಡಬೇಕೆಂದರೆ ಅದು ಕೂಡ ಒಂದು ಪದವಿ ಕೋರ್ಸ್ ಸರ್ಟಿಫಿಕೇಟ್ ಕೋರ್ಸ್ ಅಲ್ಲ. ಇಂಜಿನಿಯರಿಂಗ್ ನಲ್ಲಿ ಕಲಿಸಿಕೊಡುವ ಎಲ್ಲ ವಿಷಯಗಳನ್ನು ಬಿಸಿಎ ನಲ್ಲಿಯೂ ಕೂಡ ಕಲಿಯಬಹುದು.

ಇದಕ್ಕೆ ತಗಲುವ ವೆಚ್ಚವೂ ಕೂಡ ಇತರೆ ಕೋರ್ಸ್‍ಗಳಿಗೆ ಹೋಲಿಸಿದರೆ ಕಡಿಮೆ. ಬಿಇಎ ಪದವಿ ಮುಗಿದ ತಕ್ಷಣ ಪದವಿ ಮೇಲಿನ ಎಲ್ಲ ಹುದ್ದೆಗಳಿಗೂ ಅರ್ಜಿ ಹಾಕಬಹುದು ಮತ್ತು ಇಂಜಿನಿಯರಿಂಗ್ ಪದವಿಗೆ ಹೋಲಿಸಿದರೆ ಇದಕ್ಕೆ ತಗಲುವ ಸಮಯ ಕೇವಲ ಮೂರು ವರ್ಷ. ಉದ್ಯೋಗ ನೀಡುವವರು ಉದ್ಯೋಗ ಬಯಸುವ ಅಭ್ಯರ್ಥಿಗಳಿಗೆ ಇವತ್ತಿನ ದಿನ ಕಂಪ್ಯೂಟರ್ ಜ್ಞಾನ ಬೇಕು ಅಂತ ಹೇಳುತ್ತಾರೆ ಏಕೆಂದರೆ ಅವರು ಮಾಡುವ ಕೆಲಸವು ಪ್ರತಿಯೊಂದು ಕಂಪ್ಯೂಟರ್ ಮೇಲೆ ಬಹಳ ಅವಲಂಬನೆಯಾಗಿರುತ್ತದೆ.

ಲೇಖಕರು:ಧರ್ಮರಾಜ ಕುಂಬಾರ
ವಿಭಾಗದ ಮುಖ್ಯಸ್ಥರು ಸಂಗಮೇಶ್ವರ ಬಿಸಿಎ ಪದವಿ ಮಹಾವಿದ್ಯಾಲಯ ಚಡಚಣ.
ಮೊ ಸಂಖ್ಯೆ:9742233578

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.

ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.

ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ

Published

on

ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.

ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.

ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್‍ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.

ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.

ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.

ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್‍ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.

ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್‍ಗೆ ರೂ.10 ಪಡೆದ ಶಾಪಿಂಗ್ ಮಾಲ್‍ಗೆ ದಂಡ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್‍ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್‍ಗೆ ಪಡೆಯಲಾಯಿತು.

ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.

ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್‍ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್‍ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending